Subscribe to Updates
Get the latest creative news from FooBar about art, design and business.
Author: roovari
ಸಾಣೇಹಳ್ಳಿ : ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘವು ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಈ ಬಾರಿ ಇಳಕಲ್ಲಿನ ಹಿರಿಯ ರಂಗಕರ್ಮಿ ಮಹಾಂತೇಶ್ ಎಂ. ಗಜೇಂದ್ರಗಡ ಇವರನ್ನು ಆಯ್ಕೆ ಮಾಡಲಾಗಿದೆ. ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ತಿಳಿಸಿದ್ದಾರೆ. 2004 ರಿಂದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಹೆಸರಿನಲ್ಲಿ ರಂಗಭೂಮಿ, ರಂಗಚಟುವಟಿಕೆಗಳಲ್ಲಿ, ಮಹತ್ವದ ಸಾಧನೆ ಮಾಡಿದ ಹಿರಿಯ ಸಾಧಕರಿಗೆ ‘ಶ್ರೀ ಶಿವಕುಮಾರ ಪ್ರಶಸ್ತಿ’ಯನ್ನು ನಮ್ಮ ಕಲಾಸಂಘವು ಕೊಡುತ್ತಾ ಬಂದಿದೆ. ಇದುವರೆಗೆ ಪ್ರಸನ್ನ, ಸಿ. ಜಿ. ಕೆ., ಪಿ. ಜಿ. ಗಂಗಾಧರಸ್ವಾಮಿ, ಅಶೋಕ ಬಾದರದಿನ್ನಿ, ಮಾಲತಿಶ್ರೀ, ಸಿ. ಬಸವಲಿಂಗಯ್ಯ, ಬಿ. ಜಯಶ್ರೀ, ಡಾ. ಕೆ. ಮರುಳಸಿದ್ಧಪ್ಪ, ಚಿದಂಬರರಾವ್ ಜಂಬೆ, ಕೋಟಗಾನಹಳ್ಳಿ ರಾಮಯ್ಯ, ಡಾ. ಸುಭದ್ರಮ್ಮ ಮನ್ಸೂರು, ಲಕ್ಷ್ಮೀ ಚಂದ್ರಶೇಖರ್, ಶ್ರೀನಿವಾಸ ಜಿ. ಕಪ್ಪಣ್ಣ, ಬಸವರಾಜ ಬೆಂಗೇರಿ, ಟಿ. ಎಸ್. ನಾಗಾಭರಣ, ಕೆ. ವಿ. ನಾಗರಾಜಮೂರ್ತಿ, ಡಾ. ಎಂ. ಜಿ. ಈಶ್ವರಪ್ಪ ಹಾಗೂ ಶಶಿಧರ ಅಡಪ…
ಸಾಧನೆ ಎನ್ನುವುದು ಸಾಧಕನ ಸೊತ್ತು ಹೊರತು ಸೋಮಾರಿಯದ್ದಲ್ಲ ಎನ್ನುವುದು ಯುವ ಸಮುದಾಯಕ್ಕೆ ಸರಿ ತೋರಿದ ಅದರ್ಶನೀಯರು ಇವರು. 20.10.2004ರಲ್ಲಿ ಕುಂದಾಪುರದ ಬಿ ಚಂದ್ರಶೇಖರ ಮಯ್ಯ ಹಾಗೂ ಬಿ ನಿರ್ಮಲ ಮಯ್ಯ ದಂಪತಿಯ ಸುಪುತ್ರನಾಗಿ ಭುವಿಯ ಬೆಳಕನ್ನು ಕಂಡರು ಬಿ ಪನ್ನಗ ಮಯ್ಯ. ಪ್ರಸ್ತುತ ದ್ವಿತೀಯ ವರ್ಷದ ಇಂಜಿನಿಯರಿಂಗ್ ಅನ್ನು ಬೆಂಗಳೂರಿನ Dayanand Sagar Academy of Technology and Management ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೂ ಯಕ್ಷಗಾನ ನೋಡುವ ಅಭ್ಯಾಸ ಇತ್ತು. 8ನೇ ತರಗತಿಯಲ್ಲಿ ಶಾಲೆಯಲ್ಲೇ ನಡೆಯುತ್ತಿದ್ದ ಕ್ಲಾಸ್ ಅಲ್ಲಿ ಕಡ್ಲೆ ಗಣಪತಿ ಗುರುಗಳಲ್ಲಿ ತಾಳ ಮತ್ತು ಹೆಜ್ಜೆ ಕಲಿತು ನಂತರ ಕೋಟ ಶಿವಾನಂದರು ಮತ್ತು ಸುಜನ ಹಾಲಾಡಿ ಅವರ ಚಂಡೆಗಾರಿಕೆ ಕೇಳಿ ಇಷ್ಟಪಟ್ಟು ಚಂಡೆಯ ಕಡೆಗೆ ಹೋದೆ. ತೆಕ್ಕಟ್ಟೆ ಕೇಂದ್ರದಲ್ಲಿ ದೇವದಾಸ್ ರಾವ್ ಕೂಡ್ಲಿ ಇವರಲ್ಲಿ ಸ್ವಲ್ಪ ಕಾಲ ಅಭ್ಯಾಸ ಮಾಡಿ ಆಮೇಲೆ ಕೋಟ ಶಿವಾನಂದರಲ್ಲಿ ಅಭ್ಯಾಸ ಮುಂದುವರಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಮದ್ದಳೆ ಕಲಿಯಬೇಕೆಂದು ರಾಘವೇಂದ್ರ ಹೆಗಡೆ ಯಲ್ಲಾಪುರ…
ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ರಂಗ ಅಧ್ಯಯನ ಕೇಂದ್ರದ ವತಿಯಿಂದ ಮಾಸ್ಕರೇಡ್ -2 ರಂಗಶಿಬಿರದ ದಿಕ್ಸೂಚಿ ಉಪನ್ಯಾಸವನ್ನು ದಿನಾಂಕ 21 ಅಕ್ಟೋಬರ್ 2024ರಂದು ಸಂಜೆ 4-00 ಗಂಟೆಗೆ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಸಾನಿಧ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ‘ಇಂದಿನ ರಂಗಭೂಮಿ’ ಎಂಬ ವಿಷಯದ ಬಗ್ಗೆ ನೀನಾಸಂ ಮುಖ್ಯಸ್ಥರಾದ ಕೆ.ವಿ. ಅಕ್ಷರ ಇವರು ಉಪನ್ಯಾಸ ನೀಡಲಿದ್ದಾರೆ. ಆಸಕ್ತರಿಗೆ ಮುಕ್ತ ಪ್ರವೇಶವಿದ್ದು, ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಕನ್ನಡ ವಿಭಾಗ, ಅರೆಹೊಳೆ ಪ್ರತಿಷ್ಠಾನ, ಮಂಗಳೂರು ಮತ್ತು ಅಸ್ತಿತ್ವ (ರಿ.) ಮಂಗಳೂರು ಇವುಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು (ರಿ.) ಉಡುಪಿ ಜಿಲ್ಲೆ, ತಲ್ಲೂರ್ ಫ್ಯಾಮಿಲಿ ಟ್ರಸ್ಟ್ (ರಿ.) ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಡುಪಿ ಆಯೋಜಿಸುವ ‘ಜಾನಪದ ಹಬ್ಬ-2024’ ಕಾರ್ಯಕ್ರಮವು ದಿನಾಂಕ 27 ಅಕ್ಟೋಬರ್ 2024ರ ರವಿವಾರದಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಆದಾನಿ ಸಮೂಹದ ಅಧ್ಯಕ್ಷರು ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕರಾದ ಶ್ರೀ ಕಿಶೋರ್ ಆಳ್ವ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗುಜ್ಜಾಡಿ ಸ್ವರ್ಣ ಜುವೆಲ್ಲರ್ ಉಡುಪಿ ಇದರ ಮುಖ್ಯ ಹಣಕಾಸು ಅಧಿಕಾರಿಯಾದ ಶ್ರೀ ವರುಣ್ ರಾಮದಾಸ ನಾಯಕ್ ಗುಜ್ಜಾಡಿ ಹಾಗೂ ಉಡುಪಿಯ ಯಕ್ಷಗಾನ ಕಲಾರಂಗ (ರಿ.) ಇದರ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಮುರಳಿ ಕಡೆಕಾರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ…
ಕಾಂತಾವರ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ಮೂರು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ವಾಣಿ ಬಿ. ಆಚಾರ್ ಇವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಕಾಂತಾವರದ ನಿವೃತ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿಠಲ ಬೇಲಾಡಿಯವರಿಗೆ, ಕನ್ನಡ ಸಂಘದಲ್ಲಿ ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಸಾಹಿತ್ಯ ಪ್ರಶಸ್ತಿ’ಯನ್ನು ಸುಳ್ಯ ತಾಲೂಕಿನ ಅಜ್ಜಾವರದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರಿಗೆ ಮತ್ತು ಕನ್ನಡ ಸಂಘದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಧ್ಯಾಪಿಕೆ ಶ್ರೀಮತಿ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಇವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಅನುವಾದ ಸಾಹಿತ್ಯ ಪ್ರಶಸ್ತಿ’ಯನ್ನು ಕುಂದಾಪುರದ ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ನೀಡುವುದೆಂದು…
ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ದಿನಾಂಕ 17 ಅಕ್ಟೋಬರ್ 2024ರಂದು ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ “ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ” ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ. ಮಾತನಾಡಿ “ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಶ್ರೇಷ್ಠ ದಾರ್ಶನಿಕ ವಾಲ್ಮೀಕಿ ಮಹರ್ಷಿಯನ್ನು ನೆನಪಿಸುವ ಮಹತ್ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ” ಎಂದರು. ಮಹರ್ಷಿ ವಾಲ್ಮೀಕಿ ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮೀಜಿ ಚಿಕ್ಕಮಠ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಂಜನಿ…
ಮೈಸೂರು : ಸ್ಪಂದನ ಸಾಂಸ್ಕೃತಿಕ ಪರಿಷತ್ತು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ವತಿಯಿಂದ ‘ದಸರಾ ಕವಿ ಕಾವ್ಯ ಸಂಭ್ರಮ’ ರಾಜ್ಯ ಮಟ್ಟದ ಕಾವ್ಯೋತ್ಸವ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 20 ಅಕ್ಟೋಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಮೈಸೂರಿನ ವಿಜಯ ನಗರ ಮೊದಲ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಸಿದ್ಧ ಕವಯಿತ್ರಿ ಹಾಗೂ ಸ್ತ್ರೀವಾದಿ ಚಿಂತಕರಾದ ಪ್ರೊ. ಚ. ಸರ್ವಮಂಗಳಾ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡೀಕೆರೆ ಗೋಪಾಲ್ ಇವರು ಅಧ್ಯಕ್ಷತೆ ವಹಿಸಲಿರುವರು. ಪರಿಸರ ರಮೇಶ್, ಮಹಾದೇವ್ ಬನ್ನೂರು, ಅನ್ನ ಪರಮೇಶ್ ಇವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಡಲಿರುವರು. ಹಿರಿಯ ಸಾಹಿತಿ ಡಾ. ಎಚ್.ಎಸ್. ರುದ್ರೇಶ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ 1 ಮತ್ತು ಕವಯತ್ರಿ ಹಾಗೂ ಉಪನ್ಯಾಸಕಿಯಾದ ಡಾ. ಹೆಚ್.ಕೆ. ಹಸೀನಾ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ 2 ಪ್ರಸ್ತುತಗೊಳ್ಳಲಿದೆ. ಸಂಜೆ 4-00 ಗಂಟೆ…
ಧಾರವಾಡ : ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ (ರಿ.) ಧಾರವಾಡ ಮತ್ತು ಡಾ. ಜಿ.ಎಸ್. ಆಮೂರ ಜನ್ಮ ಶತಮಾನೋತ್ಸವ ಸಮಿತಿ ಇದರ ವತಿಯಿಂದ ಡಾ. ಜಿ.ಎಸ್. ಆಮೂರ ಜನ್ಮಶತಮಾನೋತ್ಸವ ಸಮಾರಂಭವನ್ನು ಧಾರವಾಡದ ಡಿ.ಸಿ. ಕಾಂಪೌಂಡ್, ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಡಾ. ಎಚ್.ಎನ್. ರಾಘವೇಂದ್ರ ರಾವ್ ಇವರು ಉದ್ಘಾಟನೆ ಮಾಡಲಿದ್ದು, ಪ್ರೊ. ಮಲ್ಲಿಕಾರ್ಜುನ ಹಿರೇಮಠ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಡಾ. ರಮಾಕಾಂತ ಜೋಶಿ ಇವರು ‘ಒಳಗಿರುವ ಬೆಳಕು’ ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಲಿರುವರು. 11-00 ಗಂಟೆಗೆ ನಡೆಯಲಿರುವ ಗೋಷ್ಠಿ 1ರಲ್ಲಿ ಪ್ರಬಂಧ ಮಂಡನೆ ಮತ್ತು ಗೋಷ್ಠಿ 2ರಲ್ಲಿ ಸಂವಾದ (ಇಂಗ್ಲೀಷ್ ಮತ್ತು ಕನ್ನಡ ವಿಮರ್ಶೆ) ಹಾಗೂ ಮಧ್ಯಾಹ್ನ 1-30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಡಾ. ಜಿ.ಎಸ್. ಆಮೂರ : ಗದಗ, ಕುಮಟಾದ ಪದವಿ ಕಾಲೇಜುಗಳಲ್ಲಿ ಮತ್ತು ನಂತರ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ನಾಲ್ಕು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಡಾ. ಜಿ.ಎಸ್.…
ಬೆಂಗಳೂರು : ‘ವಿಜಯನಗರ ಬಿಂಬ’ದ ಅನೇಕ ಹಿರಿಯ ವಿಧ್ಯಾರ್ಥಿಗಳು ಡಿಪ್ಲೊಮಾ ಪದವಿ ಪಡೆದ ನಂತರ, ‘ಥೇಮಾ’ ತಂಡದ ಅನೇಕ ಯಶಸ್ವಿ ನಾಟಕಗಳಲ್ಲಿ ಭಾಗವಹಿಸಿದ್ದಾರೆ. ರಂಗಭೂಮಿಯ ವಿವಿಧ ಆಯಾಮಗಳಲ್ಲಿ ರಂಗಶಿಕ್ಷಣ ಪಡೆದವರಿಗೆ ಆಯಾಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಲ್ಲಿ ಕಲಾವಿದರನ್ನು ರಂಗಭೂಮಿಗೆ ಪರಿಚಯಿಸುತ್ತಿದೆ ‘ಥೇಮಾ’. ವಿಜಯನಗರ ಬಿಂಬದ ಅನೇಕ ಹಿರಿಯ ವಿಧ್ಯಾರ್ಥಿಗಳು ನಾಟಕಕಾರರಾಗಿ, ರಂಗಸಜ್ಜಿಕೆ, ರಂಗಪರಿಕರ ವಿನ್ಯಾಸಕರಾಗಿ, ಬೆಳಕು ವಿನ್ಯಾಸಕರಾಗಿ ಹಾಗೂ ಯಶಸ್ವಿ ಕಲಾವಿದರಾಗಿ ರೂಪುಗೊಳ್ಳಲು, ಅಲ್ಲದೆ ಹಲವರು ಶಾಲೆಗಳಲ್ಲಿ ರಂಗಭೂಮಿಯ ಶಿಕ್ಷಕರಾಗಿ ಕೆಲಸ ಮಾಡುವ ಅವಕಾಶ ಕಲ್ಪಿಸುವ ಮೂಲಕ ‘ಥೇಮಾ’ ರಂಗಭೂಮಿಯಲ್ಲಿ ಸಕ್ರಿಯವಾಗಿದೆ. ‘ಥೇಮಾ’ ತಂಡದಿಂದ ಕಾರ್ಪೊರೇಟ್ ಕಂಪನಿಗಳಲ್ಲಿ, ಅನೇಕ ಎನ್.ಜಿ.ಒ. ಸಂಸ್ಥೆಗಳಿಗೆ ರಂಗಕಾರ್ಯಾಗಾರವನ್ನು ನಡೆಸುತ್ತಿದೆ. ಈ ಸಂಸ್ಥೆಯ ರೂವಾರಿ ಡಾ. ಎಸ್.ವಿ. ಸುಷ್ಮಾ ರಂಗ ಭೂಮಿಯ ಹೆಸರಾಂತ ನಿರ್ದೇಶಕಿ, ಕೊರಿಯೋಗ್ರಫಿ ವಿಜಯನಗರ ಬಿಂಬದ ರಂಗ ಶಿಕ್ಷಣ ಕೇಂದ್ರದ ಹಿರಿಯ ವಿಭಾಗದ ಪ್ರಿನ್ಸಿಪಾಲ್. ಪ್ರಸ್ತುತ ಪೆಸಿಟ್ ಯೂನಿವರ್ಸಿಟಿಯಲ್ಲಿ ಪ್ರದರ್ಶನ ಕಲೆಗಳ ವಿಭಾಗದಲ್ಲಿ ಮುಖ್ಯಸ್ಥರು ಹಾಗೂ ಪ್ರೊಫೆಸರ್ ಆಗಿದ್ದಾರೆ. ‘ಥೇಮಾ’ ತಂಡದಿಂದ ಕನ್ನಡ ರಂಗಭೂಮಿಯಲ್ಲಿ…
The Art of Living amphitheater in Bengaluru recently became the stage for an extraordinary artistic confluence of history, spirituality, and nature. With the blessings of Guru Sri Sri Ravi Shankar Ji, Sapta Sindhu—a grand dance production—unfolded as a vivid homage to the sacred rivers of India, drawing upon the ancient verses of the Rigveda and the deep spiritual reverence these rivers have inspired in the hearts of the people of Bharat. What made this production unique was not only its artistic grandeur but also its educational essence, as it brought to life the geographical and spiritual significance of rivers like…