Author: roovari

ಶ್ರೀಮತಿ ಚಂದ್ರಕಲಾ ಇಟಗಿಮಠ ಇವರ ಸಾರಥ್ಯದ ಕಪ್ಪತ್ತಗಿರಿ ಫೌಂಡೇಶನ್ (ರಿ.) ಕಳಸಾಪುರ ಗದಗ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ದಿನಾಂಕ 09 ಮಾರ್ಚ್ 2025ರಂದು ಬಂಜಾರ ಭವನದಲ್ಲಿ ಆಯೋಜಿಸಿದ್ದ ಅದ್ದೂರಿ ಮಹಿಳಾ ಸಮ್ಮೇಳನದಲ್ಲಿ ಆಹ್ವಾನಿತನಾಗಿ ಪಾಲ್ಗೊಂಡಿದ್ದು, ಸಾಹಿತ್ಯಕ್ಷೇತ್ರದ ಸಾಧನೆಗಾಗಿ ವಿಶೇಷ ಗೌರವ ಸ್ವೀಕರಿಸಿ, ಪುರಸ್ಕೃತನಾಗಿದ್ದು, ಮರೆಯಲಾಗದ ಅಪೂರ್ವ ಅನುಭವ. ಅವರ್ಣನೀಯ ಆನಂದಾನುಭೂತಿಯ ಅನುಭಾವ. ದಿವ್ಯಶ್ರೀಗಳ ಸಾನಿಧ್ಯ, ಅತ್ಯಂತ ಗಣ್ಯ-ಮಾನ್ಯರ ಉಪಸ್ಥಿತಿ, ನೂರಾರು ವಿವಿಧ ಕ್ಷೇತ್ರದ ಅಪರೂಪದ ಸಾಧಕರ ಸಮಾಗಮ, ನಾಡಿನ ಮೂಲೆ-ಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ಸಾಧಕ-ಸಾಧಕಿಯರು, ಕವಿ-ಕವಯತ್ರಿಯರು, ಲೇಖಕಿಯರು, ಕಲಾವಿದರು, ಸಾಹಿತ್ಯಾಸಕ್ತರ ಭವ್ಯ ಸಮ್ಮಿಲನ. ಅತಿಥಿ ಮಹೋದಯರ ಅರ್ಥಪೂರ್ಣ ಭಾಷಣ, ಶ್ರೀಗಳ ದಿವ್ಯಾಶೀರ್ವಚನ, ಸಮ್ಮೇಳನಾಧ್ಯಕ್ಷೆ ಶ್ರೀಮತಿ ರತ್ನಾ ಗಿ. ಬದಿ ಇವರ ಭಾವಪೂರ್ಣ ಮಾತುಗಳು, ವೇದಿಕೆಯ ಅಧ್ಯಕ್ಷತೆ ವಹಿಸಿದ್ದ ಸಮಾರಂಭದ ಮುಖ್ಯ ರೂವಾರಿ ಶ್ರೀಮತಿ ಚಂದ್ರಕಲಾ ಇಟಗಿಮಠ ಇವರ ಸ್ಪೂರ್ತಿದಾಯಕ ನುಡಿಗಳು ಸಮಾರಂಭದ ಮೆರುಗನ್ನು ನೂರ್ಮಡಿಗೊಳಿಸಿತು. 140 ಕವಯಿತ್ರಿಯರ ’ಭೂಮಿ ತೂಕದಾಕೆ’ ಕೃತಿ ಬಿಡುಗಡೆ, ಕವಯತ್ರಿಯರಿಗೆ ಗೌರವ ಸಮ್ಮಾನ, ವಿವಿಧ…

Read More

ಕಾಸರಗೋಡು : ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ವತಿಯಿಂದ ಶ್ರೀ ಎಡನೀರು ಕ್ಷೇತ್ರದ ಭಾರತೀ ಕಲಾ ಸದನದ ಸಭಾ ಮಂದಿರದಲ್ಲಿ ಡಾ. ರಮಾನಂದ ಬನಾರಿ ಮತ್ತು ಡಾ. ವಸಂತ ಕುಮಾರ ಪೆರ್ಲ ಇವರ ಸಂಪಾದಿತ ಕೃತಿಗಳಾದ ‘ಕನ್ನಡಿಯಲ್ಲಿ ಕನ್ನಡಿಗರು’ ಸರಣಿಯ ಎರಡು ಸಂಚಿಕೆಗಳ ಬಿಡುಗಡೆ ಕಾರ್ಯಕ್ರಮವು ದಿನಾಂಕ 15 ಮಾರ್ಚ್ 2025ರಂದು ನಡೆಯಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಪರಮಪೂಜ್ಯ ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು “ಕಾಸರಗೋಡಿನ ಸಾಧಕರನ್ನು ಪರಿಚಯಿಸುವ ‘ಕನ್ನಡಿಯಲ್ಲಿ ಕನ್ನಡಿಗರು’ ಕೃತಿ ಸರಣಿಯ ಸಂಚಿಕೆಗಳು ಅರ್ಥಪೂರ್ಣವಾಗಿ ಮೂಡಿ ಬಂದಿವೆ. ಈ ಕಾರ್ಯ ಇಂದಿನ ಮತ್ತು ಮುಂದಿನ ತಲೆಮಾರಿಗೆ ಪ್ರೇರಣೆಯಾಗಬೇಕು. ಕನ್ನಡದ ಬಂಧುಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಕಾಸರಗೋಡಿನ ಸಾಹಿತ್ಯಕ ಸಾಂಸ್ಕೃತಿಕ ವಾತಾವರಣವನ್ನು ಕಟ್ಟಿಕೊಡುವ ಪ್ರಯತ್ನ ಇಲ್ಲಿ ನಡೆದಿದೆ. ಇಂಥ ಅಪರೂಪದ ಕೃತಿಗಳನ್ನು ನೀಡಿದ ಡಾ. ರಮಾನಂದ ಬನಾರಿ ಮತ್ತು ಡಾ. ವಸಂತ ಕುಮಾರ ಪೆರ್ಲ…

Read More

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷ ರಂಗಾಯಣ ಕಾರ್ಕಳ ಮತ್ತು ರಂಗಸಂಸ್ಕೃತಿ (ರಿ.) ಕಾರ್ಕಳ ಇವರ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ 11ನೇ ವರ್ಷದ ಬಿ. ಗಣಪತಿ ಪೈ ರಂಗೋತ್ಸವ ‘ಮಾಗಿ-ಸುಗ್ಗಿ ನಾಟಕ ಹಬ್ಬ’ ದಿನಾಂಕ 20 ಮಾರ್ಚ್ 2025ರಿಂದ 25 ಮಾರ್ಚ್ 2025ರವರೆಗೆ ಪ್ರತಿದಿನ ಸಂಜೆ 6-30 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 20 ಮಾರ್ಚ್ 2025ರಂದು ಹುಲುಗಪ್ಪ ಕಟ್ಟೆಮನಿ ಇವರ ನಿರ್ದೇಶನದಲ್ಲಿ ಧಾರವಾಡ ರಂಗಾಯಣ ಪ್ರಸ್ತುತ ಪಡಿಸುವ ನಾಟಕ ‘ಸತ್ತವರ ನೆರಳು’, ದಿನಾಂಕ 21 ಮಾರ್ಚ್ 2025ರಂದು ಶಕೀಲ್ ಅಹ್ಮದ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ವಿಜಯಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ಕಂಪನಿ (ರಿ.) ಪ್ರಸ್ತುತ ಪಡಿಸುವ ‘ಅನಾಮಿಕನ ಸಾವು’, ದಿನಾಂಕ 22 ಮಾರ್ಚ್ 2025ರಂದು ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ಇವರ ನಿರ್ದೇಶನದಲ್ಲಿ ಹಾರಾಡಿಯ ಭೂಮಿಕಾ (ರಿ.) ತಂಡ ಅಭಿನಯಿಸುವ ‘ಬರ್ಬರೀಕ’, ದಿನಾಂಕ 23 ಮಾರ್ಚ್ 2025ರಂದು…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ 2024-2025ರ ವಾರ್ಷಿಕ ಮಹಾ ಸಭೆಯು ದಿನಾಂಕ 15 ಮಾರ್ಚ್ 2025ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಭಾಸ್ಕರ್ ಬಾರ್ಯರ ಅಧ್ಯಕ್ಷತೆ ನಡೆಯಿತು. ಭಾರತೀ ರೈಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಗೆ ಸತೀಶ್ ಇರ್ದೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಆನಂದ ಸವಣೂರುರವರು ಹಾಗೂ ಕೋಶಾಧಿಕಾರಿ ದುಗ್ಗಪ್ಪ ನಡುಗಲ್ಲುರವರು ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಸಭೆ ಮುಂದಿಟ್ಟರು. ಉಪಾಧ್ಯಕ್ಷರುಗಳಾದ ಗುಂಡ್ಯಡ್ಕ ಈಶ್ವರ ಭಟ್ ಹಾಗೂ ಗುಡ್ಡಪ್ಪ ಬಲ್ಯರು ಸಂಘ ಚಟುವಟಿಕೆಗಳ ಕುರಿತು ಶ್ಲಾಘನೀಯ ಮಾತುಗಳನ್ನಾಡಿದರು. ಉಭಯ ಸಂಘದ ಅಧ್ಯಕ್ಷರುಗಳಾದ ಭಾಸ್ಕರ್ ಬಾರ್ಯ ಹಾಗು ಪ್ರೇಮಲತಾ ಟಿ. ರಾವ್ ತಮ್ಮ ಸಹಕಾರವನ್ನು ಮುಂದೆಯೂ ನೀಡಿ ಸಂಘದ ಬೆಳವಣಿಗೆಗೆ ಪಾತ್ರರಾಗೋಣ ಎಂದು ತಿಳಿಸಿದರು. ಮಹಿಳಾ ಯಕ್ಷಗಾನ ಸಂಘದ ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ ವಂದಿಸಿದರು. ಸಭೆಯಲ್ಲಿ ಸತೀಶ್ ಕುಮಾರ್ ಎಂಕಣ್ಣಮೂಲೆ, ವಸಂತ ಆಚಾರ್ಯ, ಶರಣ್ಯ ನೇತ್ರಕೆರೆ,…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ 2025ನೆಯ ಸಾಲಿನ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಪಿ.ಸಿ. ಅಂಥೋನಿ ಸ್ವಾಮಿ ಮತ್ತು ಬಿ.ಎಸ್. ತಲ್ವಾಡಿಯವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಫಾದರ್ ಚೌರಪ್ಪ ಸೆಲ್ವರಾಜ್ ಸಾಹಿತ್ಯಕ, ಸಾಂಸ್ಕೃತಿಕ ಬಳಗದಲ್ಲಿ ಚಸರಾ ಎಂದೇ ಪರಿಚಿತರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಚಸರಾ ಚರ್ಚ್ಗಳಲ್ಲಿ ಕನ್ನಡ ಬಳಕೆ ಮತ್ತು ಕನ್ನಡಿಗರಿಗೆ ದೊರಕಬೇಕಾದ ಸವಲತ್ತುಗಳ ಕುರಿತಾಗಿ ಸುದೀರ್ಘ ಹೋರಾಟ ಮಾಡಿದರು. ಪ್ರಗತಿಪರ ಚಳುವಳಿಗೆ ಜೊತೆಗೆ ಸದಾ ಇರುತ್ತಿದ್ದ ಚಸರಾ ಸ್ವತ: ಉತ್ತಮ ಬರಹಗಾರರು, ಕ್ರೈಸ್ತ ಸಾಹಿತ್ಯ ಮತ್ತು ಸಂಗೀತಕ್ಕೆ ಘನತೆಯನ್ನು ತಂದು ಕೊಟ್ಟರು. 16 ಕನ್ನಡ ಕ್ರೈಸ್ತ ಭಕ್ತಿಗೀತೆಗಳ ಜೊತೆಗೆ 200ಕ್ಕೂ ಹೆಚ್ಚು ಕ್ರೈಸ್ತ ಗೀತೆಗಳಿಗೆ ಸಾಹಿತ್ಯ ರಚನೆ ಮಾಡಿದ್ದಾರೆ. ಅವರ ನೆನಪಿನಲ್ಲಿ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಚಲನ ಬಳಗದವರು ಸ್ಥಾಪಿಸಿದ್ದು, ಪ್ರತಿ ವರ್ಷ ಒಬ್ಬ ಪ್ರತಿಭಾವಂತ ಕ್ರೈಸ್ತ ಸಾಹಿತಿ…

Read More

ಧಾರವಾಡ : 2024ನೇ ಸಾಲಿನ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಶ್ರೀ ಎಂ. ಆರ್. ದತ್ತಾತ್ರಿ ಇವರ ‘ಸರ್ಪಭ್ರಮೆ’ ಕಾದಂಬರಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ಒಂದು ಸಾಂಕೇತಿಕ ಮೊತ್ತ, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ. ಈ ಸ್ಪರ್ಧೆಗೆ ಯುವ ವಿಮರ್ಶಕ ಡಾ. ಸುಭಾಷ್ ಪಟ್ಟಾಜೆ ಮತ್ತು ಪ್ರಬುದ್ಧ ಓದುಗ ಡಾ. ಪ್ರಶಾಂತ್ ಮಾಡಳ್ಳಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ವರ್ಷ 30ಕ್ಕೂ ಅಧಿಕ ಕಾದಂಬರಿಗಳು ಬಂದಿದ್ದು, ಕಳೆದ ವರ್ಷದಂತೆ ಈ ವರ್ಷವೂ ಪ್ರಶಸ್ತಿ ವಿಜೇತ ಕಾದಂಬರಿಯಾದ ‘ಸರ್ಪಭ್ರಮೆ’ಯನ್ನು ಓದುಗರೇ ಕಳಿಸಿದ್ದು ವಿಶೇಷ. ಪ್ರಶಸ್ತಿ ಪ್ರದಾನ ಸಮಾರಂಭವು 19 ಎಪ್ರಿಲ್ 2025ರ ಶನಿವಾರದಂದು ಧಾರವಾಡದಲ್ಲಿ ಜರುಗಲಿದೆ.

Read More

ಉಡುಪಿ : ಕೊಡವೂರಿನ ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನ ಮತ್ತು ನೃತ್ಯ ನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯ ಸರಣಿ ‘ನೃತ್ಯ ಶಂಕರ’ ಇದರ 88ನೇ ಕಾರ್ಯಕ್ರಮ ದಿನಾಂಕ 17 ಮಾರ್ಚ್ 2025ರಂದು ಸಂಜೆ ಘಂಟೆ 6.30 ರಿಂದ ಶ್ರೀ ಕ್ಷೇತ್ರದ ವಸಂತ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದುಷಿ ಯುಕ್ತಿ ಉಡುಪ ಬಳ್ಕೂರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಯುಕ್ತಿ ಉಡುಪ : ಶ್ರೀ ಬಿ. ರಾಘವ ಉಡುಪ ಹಾಗೂ ಶ್ರೀಮತಿ ಶ್ರೀ ಕಾಂತಿ ಉಡುಪ ಇವರ ಪುತ್ರಿಯಾದ ಯುಕ್ತಿ ಉಡುಪ ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಗುರು ವಿದುಷಿ ಶ್ರೀಮತಿ ಪ್ರವಿತ ಅಶೋಕ್ ಇವರ ಬಳಿ ಕಳೆದ 12 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ. 2022ರಲ್ಲಿ ವಿದ್ವತ್ ಅಂತಿಮವನ್ನು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಇವರು ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂ. ಬಿ. ಎ. ಪದವಿಯನ್ನು ಪೂರೈಸಿದ್ದಾರೆ. ಕಳೆದ ವರ್ಷ ತನ್ನ ಸಹೋದರಿಯಾದ ಸುನಿಧಿ ಉಡುಪ ಇವರೊಂದಿಗೆ ಭರತನಾಟ್ಯ ರಂಗಪ್ರವೇಶವನ್ನು…

Read More

ಹೊಸನಗರ : ಹೊಂಬುಜ ಜೈನ ಮಠದ ಪ್ರಸಕ್ತ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ಕರ್ನಾಟಕ ಸಂಸ್ಕೃತ ವಿ. ವಿ. ಇದರ ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಮೈಸೂರಿನ ಪ್ರೊ. ಪದ್ಮಾ ಶೇಖರ್ ಇವರಿಗೆ ನೀಡಲಾಗುವುದು ಎಂದು ಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಘೋಷಿಸಿದ್ದಾರೆ. ಈ ಪ್ರಶಸ್ತಿಯು 51 ಸಾವಿರ ರೂ. ನಗದು ಪುರಸ್ಕಾರ ಹೊಂದಿದ್ದು, 21 ಮಾರ್ಚ್ 2025ರಂದು ಜರುಗುವ ಹೊಂಬುಜ ಮಠದ ವಾರ್ಷಿಕ ಮಹಾರಥ ಯಾತ್ರಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಕನ್ನಡ, ಸಂಸ್ಕೃತ, ಇಂಗ್ಲಿಷ್, ಪ್ರಾಕೃತ ಭಾಷೆ ಮತ್ತು ಜೈನ ಸಾಹಿತ್ಯ ಕುರಿತಂತೆ ವಿಶೇಷ ಅಧ್ಯಯನ ಮತ್ತು ಅಧ್ಯಾಪನಾ ನಡೆಸಿ ಸಾಹಿತ್ಯ ವಿಮರ್ಶೆ, ಸಂಶೋಧನೆ, ಕಾವ್ಯ, ಜೀವನ ಚರಿತ್ರೆ ಸೇರಿದಂತೆ ಬಹು ಸಾಹಿತ್ಯಿಕ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ಮುಂದಾಳತ್ವದಲ್ಲಿ 6,000ಕ್ಕೂ ಹೆಚ್ಚು ಪ್ರಾಚೀನ ತಾಳಪತ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಪಿ. ಎಚ್‌. ಡಿ. ಸಂಶೋಧಕರಿಗೆ ಮಾರ್ಗದರ್ಶಕರಾಗಿ ಜೈನ ಸಾಹಿತ್ಯ, ಕನ್ನಡ ಸಾಹಿತ್ಯ,…

Read More

ಧಾರವಾಡ : ಕನ್ನಡದ ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ,ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ. ಡಾ.ಪಂಚಾಕ್ಷರಿ ಹಿರೇಮಠ ಇವರು ದಿನಾಂಕ 14 ಮಾರ್ಚ್ 2025 ರಂದು ಧಾರವಾಡದ ಜಯನಗರದಲ್ಲಿನ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ.ಪಂಚಾಕ್ಷರಿ ಹಿರೇಮಠ ಅವರು ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 6 ಜನವರಿ 1933ರಂದು ಜನಿಸಿದ್ದಾರೆ. ನಿಜವಾದ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಕವಿ, ಬಹುಭಾಷಾ ವಾಗ್ಮಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ ಎಂದು ಹೆಸರುವಾಸಿಯಾಗಿದ್ದಾರೆ. ವಿದ್ಯಾವಾಚಸ್ಪತಿ ಬಿರುದಾಂಕಿತರಾದ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ…

Read More

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಕನ್ನಡ ಚುಟುಕು ರಚನಾ ಸ್ಪರ್ಧೆ -2025 ನಡೆಯಲಿದೆ. ಸ್ಪರ್ಧೆಗೆ ವಿಷಯ ನಿರ್ಬಂಧ ಇಲ್ಲ. ಒಬ್ಬರು 4 ಸಾಲಿನ ಉತ್ತಮ ಎನಿಸುವ ಐದು ಚುಟುಕವನ್ನು ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ಕಾಸರಗೋಡು ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಂಘಟಕರ ತೀರ್ಮಾನವೇ ಅಂತಿಮ. ಆಸಕ್ತರು 15 ಏಪ್ರಿಲ್ 2025ರ ಮೊದಲು 9746093552 ಅಥವಾ 9633073400 ಸಂಖ್ಯೆಗೆ ವಾಟ್ಸಪ್ ಮೂಲಕ ಚುಟುಕಗಳನ್ನು ಕಳುಹಿಸಬಹುದು. ಚುಟುಕಗಳ ಜತೆಗೆ ಸ್ಪಷ್ಟ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು. ಎಂದು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ತಿಳಿಸಿದ್ದಾರೆ.

Read More