Author: roovari

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಇದರ ವತಿಯಿಂದ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಆಯೋಜಿಸಿರುವ ‘ರಾಗ ಸುಧಾರಸ -2025’ ಸಂಗೀತ ಮತ್ತು ನೃತ್ಯ ಉತ್ಸವ ಕಾರ್ಯಕ್ರಮವು ದಿನಾಂಕ 07 ಡಿಸೆಂಬರ್ 2025ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶರವು ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಟ್ರಸ್ಟಿ ಶರವು ರಾಘವೇಂದ್ರ ಶಾಸ್ತ್ರಿಯವರು “ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಹಾಗೂ ಯುವ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ಲಭ್ಯವಾಗುತ್ತಿದೆ. ಸಂಗೀತ ಕಾರ್ಯಾಗಾರಗಳ ಸಂಘಟನೆ ಮತ್ತು ಸಾಮಾಜಿಕ ಮಾಧ್ಯಮದ ಸಮರ್ಥ ಹಾಗೂ ಪರಿಣಾಮಕಾರಿ ಬಳಕೆಯಿಂದ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.)ಯು ಕರ್ನಾಟಕ ಶಾಸ್ತ್ರೀಯ ಕಲಾವಿದರನ್ನು ವಿಶಿಷ್ಟ ರೀತಿಯಲ್ಲಿ ಬೆಂಬಲಿಸುತ್ತಾ ಬಂದಿದೆ” ಎಂದು ನುಡಿದರು. ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಕರ್ಮಯೋಗಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ಶಾಸ್ತ್ರೀಯ ಸಂಗೀತ ಕಲಾವಿದರನ್ನು ಹಾಗೂ ಕಲಾ ಸಂಸ್ಥೆ ಗಳನ್ನು ನಿರಂತರವಾಗಿ ಸಮಾಜ ಪ್ರೋತ್ಸಾಹಿಸಬೇಕು” ಎಂದರು. ಮಂಗಳೂರಿನ ಸನಾತನ ನಾಟ್ಯಾಲಯ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ…

Read More

ಸೂಡ : ಶ್ರೀ ಮಯೂರವಾಹನ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ದಶಮ ಸಂಭ್ರಮ, ಸಪ್ತಾಹ ಮತ್ತು 10ನೇ ವರ್ಷದ ತಿರುಗಾಟದ ಶುಭಾರಂಭ ಸಂದರ್ಭ ಸೂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ದಿನಾಂಕ 06 ಡಿಸೆಂಬರ್ 2025ರಂದು ಪ್ರಾರಂಭಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಮತ್ತು ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡಿ “ಯಕ್ಷಗಾನ ಕಲೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಂರಕ್ಷಣೆ, ಸಂವರ್ಧನೆ ಮತ್ತು ವಿಸ್ತರಣೆ ಮಾಡಿ ಮುಂದಿನ ಜನಾಂಗಕ್ಕೆ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಯಕ್ಷಗಾನದ ಗುಣಮಟ್ಟ ಮತ್ತು ಸೌಂದರ್ಯವನ್ನು ವರ್ಧಿಸುವ ಕೆಲಸವನ್ನು ತಿರುಗಾಟಕ್ಕೆ ಹೊರಟ ಸೂಡ ಮೇಳ ನಡೆಸುತ್ತಿದ್ದು, ಕಲಾವಿದರಿಗೆ ಉತ್ತಮ ವೇದಿಕೆ ಒದಗಿಸಿ, ಜನರಿಗೆ ಕಲಾಸಂಸ್ಕಾರ ನೀಡುವ ಪ್ರಯತ್ನ ಮಾಡಿದೆ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸೂಡ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ ಮೇಳದ ಸಂಚಾಲಕ ಮತ್ತು…

Read More

ಬೆಳ್ಳಾರೆ : ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 23 ನವೆಂಬರ್ 2025ರಂದು ನಡೆಯಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈರವರು “ಯಕ್ಷಗಾನ ನನಗೆ ಸರ್ವಸ್ವವನ್ನು ನೀಡಿದೆ. ಆದರೆ ಯಕ್ಷಗಾನಕ್ಕೆ ನನ್ನ ಕೊಡುಗೆ ಅತ್ಯಲ್ಪ. ಯಕ್ಷಗಾನದಿಂದ ಸಂತೋಷವನ್ನು ಕಂಡಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿ ನಾಟ್ಯ ಕಲಿತ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪಗೊಳ್ಳಲಿ” ಎಂದು ಶುಭ ಹಾರೈಸಿದರು. ಆಶೀರ್ವಚನ ನೀಡಿದ ಶ್ರೀ ಬ್ರಹ್ಮ ಶ್ರೀ ತಂತ್ರಿ ಗಣಾಧಿರಾಜ ಉಪಾಧ್ಯಾಯರು “ಜೀವಂತ ಕಲೆಯಾದ ಯಕ್ಷಗಾನವನ್ನು ಎಲ್ಲರೂ ಪ್ರೋತ್ಸಾಹಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಯಕ್ಷಗಾನ ಸಂಘಟಕರಾಗಿ ಕಲೆಯನ್ನು ಬೆಂಬಲಿಸಬೇಕು” ಎಂದು ತಿಳಿಸಿದರು. ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ಗೌರವಾಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ರೈ ಪನ್ನೆ ಇವರು ಮಾತನಾಡಿ “ಯಕ್ಷಗಾನ ನಾಟ್ಯ ಕಲಿವ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಅಭ್ಯಾಸ ಮಾಡಿದಾಗ ಯಶಸ್ಸು ದೊರೆಯುತ್ತದೆ” ಎಂದು ಶುಭ…

Read More

ಬೆಂಗಳೂರು : ವಿಜಯನಗರ ಬಿಂಬ (ರಿ.) ಇದರ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ ‘ಅನೂಹ್ಯ’ ಹೊಚ್ಚ ಹೊಸ ನಾಟಕ ಪ್ರದರ್ಶನವನ್ನು ದಿನಾಂಕ 09 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಈ ನಾಟಕವನ್ನು ಡಾ. ಎಸ್.ವಿ. ಕಶ್ಯಪ್ ಇವರು ರಚನೆ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9845265967, 9844152967, 9845734967, 9880033018 ಮತ್ತು 9844017881 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಕುಂದಾಪುರ : ಯಕ್ಷಗಾನ ಕಲಾವಿದ ಕಂದಾವರ ರಘುರಾಮ ಶೆಟ್ಟಿ ಇವರಿಗೆ ಶ್ರದ್ಧಾಂಜಲಿ ಸಭೆ ಪುಷ್ಪ ಗಾನ ನುಡಿ ನಮನ ಕಾರ್ಯಕ್ರಮವನ್ನು ದಿನಾಂಕ 09 ಡಿಸೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಪ್ರೆಸ್ಟಿಜ್ ಪ್ಯಾಲೇಸ್ ತ್ರಾಸಿಯಲ್ಲಿ ಹಮ್ಮಿಕೊಳ್ಳಲಾಗಿದೆ. ರಘು ಮಾಸ್ಟರ್ ಶಿಷ್ಯ ವೃಂದದ ಕಲಾವಿದರಿಂದ ‘ಗಾನ ನಮನ’, ರಘು ಮಾಸ್ಟರ್ ಆತ್ಮೀಯರು, ಶಿಷ್ಯರು ಮತ್ತು ಹಿತೈಸಿಗಳಿಂದ ‘ನುಡಿ ನಮನ’ ಮತ್ತು ಅಭಿಮಾನಿಗಳು ಕುಟುಂಬಸ್ಥರು ಹಾಗೂ ಸರ್ವರಿಂದ ‘ಪುಷ್ಪ ನಮನ’ ನಡೆಯಲಿದೆ.

Read More

ಮಂಗಳೂರು : ಕಲಾಸೂರ್ಯ ನೃತ್ಯಾಲಯ ಮಂಗಳೂರು ಇದರ 2ನೇ ವರ್ಷದ ವಾರ್ಷಿಕ ನೃತ್ಯ ಸಂಭ್ರಮ ‘ಪರಿಭ್ರಮಣ -2025’ ದಿನಾಂಕ 06 ಡಿಸೆಂಬರ್ 2025ರಂದು ಮಂಗಳೂರಿನ ಸುಬ್ರಹ್ಮಣ್ಯ ಸಭಾದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಯುತ ಡಾ. ಎ.ಪಿ. ಕೃಷ್ಣ ಇವರು ಇಂದಿನ ಸಮಾಜಕ್ಕೆ ಇಂತಹ ಸಂಸ್ಕಾರಯುತ ಶಿಕ್ಷಣ ಎಷ್ಟು ಮುಖ್ಯ ಎಂದು ತಿಳಿಸಿದರು. ಅಭ್ಯಾಗತರಾಗಿ ಆಗಮಿಸಿದ ಮಂಗಳೂರಿನ ಹಿರಿಯ ನೃತ್ಯಗುರು, ನಾಟ್ಯನಿಕೇತನ ಕೊಲ್ಯ ಇದರ ನೃತ್ಯ ನಿರ್ದೇಶಕರೂ ಆಗಿರುವ ಕರ್ನಾಟಕ ಕಲಾಶ್ರೀ ವಿದುಷಿ ರಾಜಶ್ರೀ ಶೆಣೈ ಇವರು ಮಕ್ಕಳಲ್ಲಿ ಇಂತಹ ಆಸಕ್ತಿಯನ್ನು ಹುಟ್ಟಿಸಿ ಬೆಳೆಸುವಲ್ಲಿ ಪೋಷಕರ ಜೊತೆಗೆ ಇಂತಹ ಕಲಾ ಸಂಸ್ಥೆಗಳ ಪರಿಶ್ರಮ ಎಷ್ಟು ಇರುತ್ತದೆ ಎಂದು ತಿಳಿಸುತ್ತಾ ಅದೇ ಮಾರ್ಗದಲ್ಲಿ ಸಾಗುತ್ತಿರುವ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಹಾಗೂ ಅದರ ಅಂಗಸಂಸ್ಥೆ ಕಲಾಸೂರ್ಯ ಮಂಗಳೂರು ಇವರಿಗೆ ಶುಭ ಹಾರೈಸಿದರು. ಕಾರ್ಯಕ್ರಮವು ಕಲಾಸೂರ್ಯ ನೃತ್ಯಾಲಯದ ನೃತ್ಯ ಶಿಕ್ಷಕಿ ವಿದುಷಿ ಶ್ರೀಮತಿ ಸೌಜನ್ಯ ಪಡುವೆಟ್ನಾಯ ಇವರ ಶಂಖನಾದ, ವಿದುಷಿ ಶ್ರೀಮತಿ ಪ್ರೀತಿಕಲಾ ಇವರ…

Read More

ತುಮಕೂರು : ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ಇರವಿನ ಅರಿವು’ ವಿಮರ್ಶಾ ಕೃತಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ 2023 ದೊರಕಿದ್ದು, ದಿನಾಂಕ 05 ಡಿಸೆಂಬರ್ 2025ರಂದು ತುಮಕೂರಿನ ಗುಬ್ಬಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರು ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಮತ್ತಿತರರು ಉಪಸ್ಥಿತರಿದ್ದರು.

Read More

ಬೆಂಗಳೂರು : ಕರ್ನಾಟಕ ಬೀದಿನಾಟಕ ಅಕಾಡೆಮಿ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ವತಿಯಿಂದ ಸಿಜಿಕೆ 75 ಸಿಜಿಕೆ ಬೀದಿರಂಗ ದಿನ ಆಚರಣೆ ಪ್ರಯುಕ್ತ ‘ರಂಗಭೂಮಿಯ ಒಡಲಾಳ ನಾಟಕೋತ್ಸವ’ವನ್ನು ದಿನಾಂಕ 08ರಿಂದ 10 ಡಿಸೆಂಬರ್ 2025ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮತ್ತು ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 08 ಡಿಸೆಂಬರ್ 2025ರಂದು ಸಂಜೆ ಗಂಟೆ 6-45ಕ್ಕೆ ರಂಗಕರ್ಮಿ ಎನ್. ಮಂಗಳಾ ಇವರು ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದು, ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ. ಕಪ್ಪಣ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ರಂಗಕರ್ಮಿ ಜನ್ನಿ ಇವರಿಗೆ ರಂಗ ಗೌರವ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನವರಸಂ ರಂಗತಂಡ ಅಭಿನಯಿಸುವ ‘ಬೆರಳ್ಗೆ ಕೊರಳ್’ ನಾಟಕವು ರಾಘವೇಂದ್ರ ಎಸ್. ಇವರ ನಿರ್ದೇಶನದಲ್ಲಿ ಪ್ರಸ್ತುತಗೊಳ್ಳಲಿದೆ. ದಿನಾಂಕ 09 ಡಿಸೆಂಬರ್ 2025ರಂದು ಸಂಜೆ ಗಂಟೆ 7-15ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ರಂಗಕರ್ಮಿ ಸಿ.ಕೆ. ಗುಂಡಣ್ಣ ಇವರು ವಹಿಸಲಿದ್ದು, ಕರ್ಣಾಟಕ ಜಾನಪದ ಅಕಾಡೆಮಿ…

Read More

ಬೆಳಗಾವಿ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಕೊಡಮಾಡುವ ‘ಕನ್ನಡ ಗಡಿತಿಲಕ’ ಪ್ರಶಸ್ತಿಗೆ ಹಿರಿಯ ಸಾಹಿತಿ ಮತ್ತು ರಂಗಕರ್ಮಿ ಶಿರೀಷ ಜೋಶಿ ಆಯ್ಕೆಯಾಗಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿರೀಷ ಜೋಶಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. ಅವರ ‘ಹಾರಿಹೋದ ಹಂಸ ಏಕಾಂಗಿ’, ‘ಗುಜರಿ ತೋಡಿ’ ಮತ್ತು ‘ತಾನಸೇನ’ ಕೃತಿಗಳು ಜನಪ್ರಿಯವಾಗಿವೆ. ‘ಮಿಂಚು’ ನಾಟಕವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಠ್ಯವಾಗಿಯೂ ಸೇರ್ಪಡೆಯಾಗಿದೆ. ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ರಾಷ್ಟ್ರೀಯ ಸಿರಿಗನ್ನಡ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ. ಉದಯೋನ್ಮುಖ ಬರಹಗಾರರಿಗೆ ನೀಡುವ ರಾಜ್ಯಮಟ್ಟದ ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ಗೆ ಶಶಿ ತರೀಕೆರೆ ಇವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ. ಚಿಕ್ಕಮಗಳೂರಿನ ತರೀಕೆರೆಯವರಾದ ಶಶಿ ಇವರು ಬೆಂಗಳೂರಿನ ಇಸ್ರೋದಲ್ಲಿ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇವರ ಛಂದ ಪುಸ್ತಕ ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ, ಟೋಟೋ ಪ್ರಶಸ್ತಿ ಮುಂತಾದ…

Read More

ಮಂಗಳೂರು : ತುಳುಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ತಂಡ ಜಂಟಿಯಾಗಿ ಆಯೋಜಿಸಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹವು ದಿನಾಂಕ 07 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಉದ್ಘಾಟನೆಗೊಂಡಿತು. ಈ ಸಪ್ತಾಹವನ್ನು ಉದ್ಘಾಟಿಸಿದ ಕಂಕನಾಡಿಯ ಶ್ರೀ ಬ್ರಹ್ಮ ಬೈದ್ಯರ್ಕಳ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ಕೆ. “ಐವತ್ತೈದು ವರ್ಷಗಳಿಂದ ಈ ತುಳು ಕೂಟವು ತುಳು ಭಾಷೆ, ಸಾಹಿತ್ಯ, ನಾಟಕ ಕೃತಿಗಳಿಗೆ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ಸರಿ ಸುಮಾರು ಮೂವತ್ತು ವರ್ಷಗಳ ಕಾಲ ತುಳುಕೂಟವನ್ನು ಮುನ್ನಡೆಸಿ ಕೂಟಕ್ಕೆ ಮೆರುಗನ್ನು ತಂದುಕೊಟ್ಟವರು ಮರೋಳಿ ಬಿ. ದಾಮೋದರ ನಿಸರ್ಗ. ಗರೋಡಿಯಲ್ಲೂ ಉಪಾಧ್ಯಕ್ಷರಾಗಿ ಧಾರ್ಮಿಕ ಕಾರ್ಯಕ್ರಮಗಳಲೆಲ್ಲಾ ಸಕ್ರಿಯವಾಗಿ ಭಾಗವಹಿಸಿ ಮುನ್ನಡೆದವರು. ಅವರ ನೆನಪಲ್ಲಿ ಇಲ್ಲಿ ತುಳು ತಾಳಮದ್ದಳೆ ನಡೆಸುತ್ತಿರುವುದು ಸಂತಸದ ವಿಷಯ” ಎಂದು ಶುಭ ಹಾರೈಸಿದರು. ಖಚಾಂಚಿ ನಾರಾಯಣ ಬಿ.ಡಿ.ಯವರು ಅಗಲಿದ ದಿವ್ಯ ಚೇತನವಾದ ಮರೋಳಿ ಬಿ. ದಾಮೋದರ ನಿಸರ್ಗರ ಸಂಸ್ಮರಣೆ ಮಾಡಿದರು. ತುಳು ಕೂಟದ ಅಧ್ಯಕ್ಷೆ ಶ್ರೀಮತಿ…

Read More