Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ ಕಾರ್ಯಕ್ರಮವು ದಿನಾಂಕ 06 ಜನವರಿ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕುಮಾರಿ ಪ್ರಜ್ಞಾ ಪಿ. ಶರ್ಮ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ಅರ್ಚನಾ ಪುಣ್ಯೇಶ್ ಇವರ ಶಿಷ್ಯೆಯಾಗಿರುವ ಪ್ರಜ್ಞಾ ಭರತನಾಟ್ಯ ಮತ್ತು ಕೂಚಿಪುಡಿ ಎರಡೂ ಪ್ರಕಾರಗಳನ್ನೂ ಅಭ್ಯಾಸ ಮಾಡಿರುವ ಕಲಾವಿದೆ. 2023ರಲ್ಲಿ ಭರತನಾಟ್ಯ ರಂಗಪ್ರವೇಶವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಇವಳು ಕೆ.ಎಸ್.ಇ.ಇ.ಬಿ. ನಡೆಸುವ ಭರತನಾಟ್ಯ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳನ್ನು ಉನ್ನತ ಶ್ರೇಣಿಯಲ್ಲಿ ಮತ್ತು ಕೂಚಿಪುಡಿ ಜೂನಿಯರ್ ಪರೀಕ್ಷೆಯಲ್ಲಿ 4ನೇ ಸ್ಥಾನ ಪಡೆದು ಯಶಸ್ವಿಯಾಗಿ ಪೂರ್ಣಗೊಳಿಸಿರುತ್ತಾರೆ ಮತ್ತು ಈ ವರ್ಷ ಕೂಚಿಪುಡಿ ಸೀನಿಯರ್ ಪರೀಕ್ಷೆಯನ್ನು ಮುಗಿಸಿರುತ್ತಾಳೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕೊಡಲ್ಪಡುವ ಶಿಷ್ಯ ವೇತನ…
ಕನ್ನಡ ನೆಲ, ಸಂಸ್ಕೃತಿಯ ಕುರಿತಂತೆ ಆಳವಾಗಿ ಅಧ್ಯಯನ ಮಾಡಿದ ಶ್ರೇಷ್ಠ ಕನ್ನಡದ ಸಂಶೋಧಕರಲ್ಲಿ ಶಂ.ಬಾ. ಜೋಶಿಯವರು ಒಬ್ಬರು. ಕನ್ನಡ, ಇಂಗ್ಲೀಷ್, ಸಂಸ್ಕೃತ, ಮರಾಠಿ ಭಾಷೆಗಳ ಮೇಲೆ ಪ್ರಭುತ್ವ ಹೊಂದಿದ್ದ ಶಂ.ಬಾ. ಜೋಶಿಯವರ ಅರಿವಿನ ಹರವು ವಿಶಾಲವಾದುದ್ದು. ಕನ್ನಡ ಸಂಶೋಧನಾ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆ ವಿಶಿಷ್ಟವಾದುದು. ಗೋವಿಂದ ಪೈಯವರ ಸಮಕಾಲೀನರಾಗಿದ್ದ ಶಂ.ಬಾ. ಜೋಶಿಯವರು ಕನ್ನಡ ಸಾಂಸ್ಕೃತಿಕ ಶೋಧದಲ್ಲಿ ತಾವು ಬಳಸಿದ ವಿಶ್ಲೇಷಣಾ ವಿಧಾನ ಮತ್ತು ಅಧ್ಯಯನ ಕ್ರಮಗಳಿಂದ ವಿಶಿಷ್ಟರಾಗಿದ್ದಾರೆ. ಸಂಸ್ಕೃತಿಯ ಬಹುಶಿಸ್ತೀಯ ಅಧ್ಯಯನ ವಿಧಾನ, ಪರಿಕಲ್ಪನಾತ್ಮಕವಾಗಿ ಸಂಸ್ಕೃತಿಯ ವ್ಯಾಖ್ಯಾನದ ಪ್ರಯತ್ನ, ಗತಕಾಲದ ವೈಚಾರಿಕ ಆಕೃತಿಗಳು, ವರ್ತಮಾನವನ್ನು ಪ್ರಭಾವಿಸುವ ಬಗೆಯನ್ನು ಅರಿಯುವ ಹಂಬಲ ಮತ್ತು ನೈತಿಕ ಆಯ್ಕೆಯನ್ನು ಮಾಡುವ ಸ್ಥೈರ್ಯ ಇವುಗಳಿಂದಾಗಿ ಶಂ.ಬಾ.ರವರು ಮುಖ್ಯರಾಗುತ್ತಾರೆ. ಕನ್ನಡ ಸಾರಸ್ವತ ಲೋಕದಲ್ಲಿ ‘ಶಂ.ಬಾ.’ ಎಂದೇ ಪ್ರಖ್ಯಾತರಾದ ಶಂಕರ ಬಾಳದೀಕ್ಷಿತ ಜೋಶಿಯವರು, ಬಾಳದೀಕ್ಷಿತ ಜೋಶಿ ಮತ್ತು ಉಮಾಬಾಯಿ ದಂಪತಿಗಳ ಮಗನಾಗಿ 1896ರ ಜನವರಿ 4ರಂದು ಗುರ್ಲಹೊಸೂರಿನಲ್ಲಿ ಜನಿಸಿದರು. ತಮ್ಮ ವಿದ್ಯಾಭ್ಯಾಸವನ್ನು ಗುರ್ಲಹೊಸೂರು, ಬೊಮ್ಮನಹಳ್ಳಿ, ಪುಣೆ ಮತ್ತು ಧಾರವಾಡಗಳಲ್ಲಿ…
ಉಡುಪಿ : ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15 ಮಾರ್ಚ್ 2025. ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂ. ಜಿ. ಎಂ. ಕಾಲೇಜು ಆವರಣ, ಉಡುಪಿ 576102. ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ ರೂಪಾಯಿ 10,000 ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ ಹಾಗೂ 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವನಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್: https://govindapairesearch.blogspot.com ದೂರವಾಣಿ ಸಂಖ್ಯೆ ಕಛೇರಿ : 0820-2521159 ಅಥವಾ ಮೊಬೈಲ್ ಸಂಖ್ಯೆ 9449471449 / 9480575783 ಬಹುಮಾನದ ಉಳಿದ…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ) ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಜಂಟಿ ಆಶ್ರಯದಲ್ಲಿ ಡಾ. ಎನ್. ಟಿ. ಭಟ್ ವಿರಚಿತ ‘ಪಂಪ ಭಾರತ ರೀಟೋಲ್ಡ್ ಆ್ಯಸ್ ಇಂಗ್ಲೀಷ್ ನರೇಟಿವ್’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 06 ಜನವರಿ 2025ರಂದು ಸಂಜೆ ಘಂಟೆ 4.00 ರಿಂದ ಉಡುಪಿಯ ಎಂ. ಜಿ. ಎಂ. ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಉಡುಪಿಯ ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಉಡುಪಿಯ ರಾ. ಗೋ. ಪೈ. ಸಂ. ಕೇಂದ್ರ ಇದರ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ವಿಮರ್ಶಕ ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ರಮೇಶ್ ಭಟ್ ಬೆಳಗೋಡು ಕೃತಿ ಪರಿಚಯ ಮಾಡಲಿದ್ದಾರೆ.
ಕುಂದಾಪುರ : ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ಆರು ಪ್ರೌಢಶಾಲೆಗಳ ‘ಕಿಶೋರ ಯಕ್ಷಗಾನ ಸಂಭ್ರಮ’ವನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ದಿನಾಂಕ 01 ಜನವರಿ 2025ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು. ಕುಂದಾಪುರ ಶಾಸಕರಾದ ಶ್ರೀ ಕಿರಣ್ಕುಲಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಕುಂದಾಪುರ ಉಪವಿಭಾಗ ಅಧಿಕಾರಿಗಳಾದ ಮಹೇಶ್ಚಂದ್ರ ಕೆ., ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನ್ದಾರಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಆದರ್ಶ ಹೆಬ್ಬಾರ್, ಕಾವ್ರಡಿ ಸಿಎ ಬ್ಯಾಂಕ್ನದ ಅಧ್ಯಕ್ಷರಾದ ಸದಾನಂದ ಬಳ್ಕೂರು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಗಣೇಶ್ ಬ್ರಹ್ಮಾವರ ಸಹಕರಿಸಿ, ನಾರಾಯಣ…
ಮಂಡ್ಯ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಕರ್ನಾಟಕ ಸಂಘ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ‘ಕೆ.ವಿ. ಶಂಕರಗೌಡ ನೆನಪಿನ ನಾಟಕೋತ್ಸವ’ವನ್ನು ದಿನಾಂಕ 09 ಜನವರಿ 2025ರಿಂದ 11 ಜನವರಿ 2025ರವರೆಗೆ ಮಂಡ್ಯದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರಂಗಮಂದಿರದಲ್ಲಿ ಆಯೋಜಿಸಿದೆ. ದಿನಾಂಕ 09 ಜನವರಿ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಸಮುದಾಯ ತಂಡದವರಿಂದ ಶ್ರೀ ನಟರಾಜ್ ಹೊನ್ನವಳ್ಳಿ ಇವರ ನಿರ್ದೇಶನದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ ‘ಜುಗಾರಿ ಕ್ರಾಸ್’ ನಾಟಕ ಪ್ರಸ್ತುತಗೊಳ್ಳಲಿದೆ. ದಿನಾಂಕ 10 ಜನವರಿ 2025ರಂದು ಸಂಜೆ 5-00 ಗಂಟೆಗೆ ಶ್ರೀಮತಿ ಬಿ.ಎನ್. ಶಶಿಕಲಾ ಇವರ ನಿರ್ದೇಶನದಲ್ಲಿ ಮೈಸೂರಿನ ಶಶಿ ಥಿಯೇಟರ್ (ರಿ.) ಪ್ರಸ್ತುತ ಪಡಿಸುವ ನಾಟಕ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಉರಿಯ ಉಯ್ಯಾಲೆ’. ದಿನಾಂಕ 11 ಜನವರಿ 2025ರಂದು ಸಂಜೆ 4-00 ಗಂಟೆಗೆ ಮಂಡ್ಯದ ಮಾಂಡವ್ವ ಕಲಾ ಟ್ರಸ್ಟ್ ತಂಡದವರು ಶ್ರೀ ಕಾರಸವಾಡಿ ಸುರೇಶ್ ಇವರ ನಿರ್ದೇಶನದಲ್ಲಿ ‘ಗದಾಯುದ್ಧ’ ಪೌರಾಣಿಕ ನಾಟಕದ ಪ್ರದರ್ಶನ…
ಮಂಗಳೂರು : ತನ್ನ ಮೂರೂವರೆ ವರ್ಷ ವಯಸ್ಸಿನಿಂದಲೇ ತಂದೆಯ ಪ್ರೇರಣೆಯಿಂದ ತಬಲಾದತ್ತ ಆಕರ್ಷಿತಳಾದವಳು ಆದ್ಯಾ ಯು. ಉಡುಪಿಯ ಖ್ಯಾತ ತಬಲಾ ವಾದಕರಾದ ಎನ್. ಮಾಧವ ಆಚಾರ್ಯ ಇವರ ಪ್ರೋತ್ಸಾಹದೊಂದಿಗೆ ತಬಲಾ ಶಿಕ್ಷಣವನ್ನು ಪ್ರಾರಂಭಿಸಿದ ಆದ್ಯಾ, 2024-25ನೇ ಸಾಲಿನ ಕರ್ನಾಟಕ ಸರಕಾರದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಕಲಾ ವಿಶ್ವ ವಿದ್ಯಾಲಯ ಮೈಸೂರು ಇವರು ನಡೆಸಿದ ಹಿಂದೂಸ್ತಾನಿ ತಾಳವಾದ್ಯ, ತಬಲಾ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಶೇ.91 ಅಂಕಗಳನ್ನು ಪಡೆದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಸ್ತುತ ತಬಲಾದಲ್ಲಿ ಸೀನಿಯರ್ ಗ್ರೇಡ್ ಪಾಠಗಳನ್ನು ಅಭ್ಯಾಸ ಮಾಡುತ್ತಿರುವ ಇವರು ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಎಂ.ಆರ್.ಪಿ.ಎಲ್.ನ ಡೆಲ್ಲಿ ಪಬ್ಲಿಕ್ ಸ್ಕೂಲ್ ಇಲ್ಲಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ. ತಬಲಾ ಶಿಕ್ಷಣದ ಜೊತೆಗೆ ‘ಥಂಡರ್ ಕಿಡ್ಸ್’ ಎಂಬ ವಾದ್ಯಗೋಷ್ಠಿ ತಂಡದಲ್ಲಿ ಖಾಯಂ ತಬಲಾ ಸದಸ್ಯರಾಗಿ ಜಿಲ್ಲೆಯ ಹಲವೆಡೆ ಕಾರ್ಯಕ್ರಮಗಳನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಇವರು ‘ರಾಗ…
ಬೆಂಗಳೂರು : ಶ್ರೀ ಅಖಿಲ ಹವ್ಯಕ ಮಹಾಸಭಾ (ರಿ.) ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನಿನಲ್ಲಿ ದಿನಾಂಕ 27 ಡಿಸೆಂಬರ್ 2024ರಿಂದ 29 ಡಿಸೆಂಬರ್ 2024ರಂದು ಜರಗಿದ ‘ತೃತೀಯ ವಿಶ್ವ ಹವ್ಯಕ ಸಮ್ಮೇಳನ’ದ ಉದ್ಘಾಟನಾ ಸಮಾರಂಭದಲ್ಲಿ ‘ಹವಿ-ಸವಿ ಕೋಶ’ ಎಂಬ ಪ್ರಪ್ರಥಮ ಬೃಹತ್ ಹವ್ಯಕ-ಕನ್ನಡ ನಿಘಂಟನ್ನು ರಚಿಸಿದ ಕಾಸರಗೋಡಿನ ಹಿರಿಯ ಸಾಹಿತಿ, ಶಿಕ್ಷಣ ತಜ್ಞ ಶ್ರೀ ವಿ.ಬಿ. ಕುಳಮರ್ವ ಕುಂಬ್ಳೆ ಇವರನ್ನು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಗಳ ಸಾಧನೆಗಾಗಿ ‘ಹವ್ಯಕ ಸಾಧಕ ರತ್ನ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.
ಮೈಸೂರು : ನಟನ ರಂಗಶಾಲೆ ಇದರ ವತಿಯಿಂದ ಹೊಸ ವರ್ಷದ ಮೊದಲ ಕಾರ್ಯಕ್ರಮವಾಗಿ ಪ್ರಖ್ಯಾತ ವಾಗ್ಮಿಗಳಾದ ಶ್ರೀ ಲಕ್ಷ್ಮೀಶ ತೋಳ್ಪಾಡಿಯವರಿಂದ ‘ನಟನೆಯ ಅಧ್ಯಾತ್ಮ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 05 ಜನವರಿ 2025ರಂದು ಭಾನುವಾರ ಬೆಳಗ್ಗೆ 11-00 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರದ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಜೆ ಎಂದಿನಂತೆ ವಾರಾಂತ್ಯದ ನಾಟಕ ಇದೆ. ನಟ ಸುಂದರ್, ಪಿ.ಡಿ. ಸತೀಶ ಮುಂತಾದ ಘಟಾನುಗಟಿಗಳು ರಂಗದ ಮೇಲೆ ಬರುತ್ತಾರೆ. ನಟ, ನಿರ್ದೇಶಕ, ನಾಟಕಕಾರ ಸಂಘಟಕ ಎಲ್ಲವೂ ಆಗಿರುವ ರಾಜೇಂದ್ರ ಕಾರಂತರೂ ರಂಗದ ಮೇಲೆ ಇರುತ್ತಾರೆ. ರಂಗ ವಿದ್ಯಾರ್ಥಿಗಳಿಗೆ, ಕಲಾವಿದರಿಗೆ ಮತ್ತು ಆಸಕ್ತರಿಗೆ ಮುಕ್ತ ಪ್ರವೇಶವಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 7259537777, 9480468327 ಮತ್ತು 9845595505. ಶ್ರೀ ಲಕ್ಷ್ಮೀಶ ತೋಳ್ಳಾಡಿ : ಕುಮಾರಧಾರೆ ನದಿಯ ಪಕ್ಕದ ಶಾಂತಿಗೋಡಿನಲ್ಲಿ ನಮ್ಮ ಬಿಂಬವನ್ನು ಪ್ರತಿಬಿಂಬಿಸುವ ಆ ನದಿಯ ಹಾಗೆ ಅನುಭಾವದಲ್ಲಿ ತನ್ನ ಬದುಕನ್ನು ಬಿಂಬಿಸಿಕೊಂಡು ಅದರ ಆನನ್ಯತೆಯಲ್ಲಿ ಸಾರ್ಥಕ್ಯವನ್ನು ಕಂಡುಕೊಂಡ ಲಕ್ಷ್ಮೀಶ ತೋಳ್ತಾಡಿಯವರು ಹುಟ್ಟಿದ್ದು 1947ರಲ್ಲಿ,…
ಸಿದ್ದಾಪುರ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಯಕ್ಷಗಾನ ಕಲಾರಂಗ (ರಿ.) ಉಡುಪಿ, ಯಕ್ಷ ನುಡಿಸಿರಿ ಬಳಗ (ರಿ.) ಸಿದ್ದಾಪುರ ಮತ್ತು ಯಕ್ಷ ಗುರುಕುಲ ಬೈಂದೂರು ಇವರ ಸಹಭಾಗಿತ್ವದಲ್ಲಿ ವಿಧಾನಸಭಾ ಕ್ಷೇತ್ರದ ನಾಲ್ಕು ಪ್ರೌಢಶಾಲೆಗಳ ‘ಕಿಶೋರ ಯಕ್ಷ ಸಂಭ್ರಮ -2024’ವನ್ನು ದಿನಾಂಕ 28 ಡಿಸೆಂಬರ್ 2024ರಂದು ಸಿದ್ದಾಪುರದ ಸರಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಕಮಲಶಿಲೆ ದೇವಳದ ಆಡಳಿತ ಮುಕ್ತೇಸರರಾದ ಸಚ್ಚಿದಾನಂದ ಚಾತ್ರಾ ಉದ್ಘಾಟಿಸಿದರು. ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಪ್ರದರ್ಶನ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಜಗದೀಶ್ ಶೆಟ್ಟಿ, ಕಾರ್ಯದರ್ಶಿ ಗೋಪಾಲ್ ಕಾಂಚನ್, ಶ್ರೀಕಾಂತ್ ನಾಯಕ್, ಚಂದ್ರ ಕುಲಾಲ್, ಸುನೀಲ್ ಹೊಲಾಡು, ಮಧುಸೂಧನ ಕಾಮತ್, ಕೆ. ಬೋಜ ಶೆಟ್ಟಿ, ರಾಜೇಂದ್ರ ಬೆಚ್ಚಳ್ಳಿ, ಶೀಲತಾ ಶೆಟ್ಟಿ, ಗಣೇಶ್ ಶೇಟ್, ನರಸಿಂಹ ಕುಲಾಲ್ ಭಾಗವಹಿಸಿದರು. ಭಾಗವತರಾದ ಜನ್ಸಾಲೆ ರಾಘವೇಂದ್ರ ಆಚಾರ್ಯ ಶುಭಾಶಂಸನೆಗೈದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಕೋಶಾಧಿಕಾರಿ ಎಚ್.ಎನ್. ಶೃಂಗೇಶ್ವರ್ ಮತ್ತು ಗಣೇಶ್ ಬ್ರಹ್ಮಾವರ…