Author: roovari

ಹಂಗಾರಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಗುಂಡ್ಮಿ ಸಹಯೋಗದೊಂದಿಗೆ ಆಯೋಜಿಸಿದ ಯಕ್ಷಗಾನ ಬಣ್ಣಗಾರಿಕೆ ಮತ್ತು ವೇಷಗಾರಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ದಿನಾಂಕ 14 ಸೆಪ್ಟೆಂಬರ್ 2024ರಂದು ಸಾಲಿಗ್ರಾಮದಲ್ಲಿರುವ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ “ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಪೂರಕ ಕಾರ್ಯಕ್ರಮಗಳು ಪ್ರಶಂಸನೀಯ.” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಮಕ್ಕಳಿಗೆ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಮೂಡಿಸಿ ಭವಿಷ್ಯದ ಕಲಾವಿದರು ಹಾಗೂ ಕಲಾಪ್ರೇಮಿಗಳನ್ನು ರೂಪುಗೊಳಿಸಬೇಕು ಎನ್ನುವುದು ಅಕಾಡಮಿಯ ಆಶಯ. ಈ ನಿಟ್ಟಿನಲ್ಲಿ ಯಕ್ಷಗಾನದ ವೇಷಭೂಷಣಗಳು ಹಾಗೂ ಬಣ್ಣಗಾರಿಕೆ ಬಗ್ಗೆ ಮಕ್ಕಳಿಗೆ ಮತ್ತು ಕಲಾಸಕ್ತರಿಗೆ ಅರಿವು ಮೂಡಿಸಲು ಇಂಥ ಕಾಯಾಗಾರ ಆಯೋಜಿಸಲಾಗುತ್ತಿದೆ.” ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read More

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅದ್ವಯ ಸಾಹಿತ್ಯ ಸಂಘ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ‘ಸಾಹಿತ್ಯ ಚಿಲುಮೆ -2024’ ಶೀರ್ಷಿಕೆಯಡಿ ಭಾಷಾ ವಿಭಾಗದ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ದಿನಾಂಕ 19 ಸೆಪ್ಟೆಂಬರ್ 2024ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಂತ ಫಿಲೋಮಿನ ಕಾಲೇಜ್‌ನ ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಅಭಿರುಚಿಗೆ ಹೊಂದಿಕೊಂಡು ತಮ್ಮನ್ನು ತಾವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.” ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ದಯಾನಂದ ಸುವರ್ಣ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು. ದ್ವಿತೀಯ ಪದವಿ ಫ್ಯಾಷನ್ ಡಿಸೈನ್ ವಿಭಾಗದ ಪ್ರಕೃತಿ ಪ್ರಾರ್ಥನೆ ಹಾಡಿ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಹರಿಶ್ಚಂದ್ರ…

Read More

ನವಿಮುಂಬಯಿ : ಜೂಹಿನಗರ, ಪ್ಲಾಟ್ ನಂಬರ್ 42 ಸೆಕ್ಟರ್ 24 ಇಲ್ಲಿನ ಬಂಟ್ಸ್ ಸೆಂಟರ್ ನ ದಿ. ಮನೋಹರ್ ಹೆಗ್ಡೆ ಸಂಸ್ಮರಣ ವೇದಿಕೆಯಲ್ಲಿ ದಿನಾಂಕ 22 ಸೆಪ್ಟೆಂಬರ್ 2024ರಂದು ತುಳು ನಾಟಕ ರಂಗೋತ್ಸವದ ಸಮಾರೋಪ ಸಮಾರಂಭ ಜರಗಿತು. ಈ ಸಮಾರಂಭದಲ್ಲಿ ನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಪಾಲ್ಗೊಂಡ ಕಾಂತಾರ ಚಿತ್ರ ಕಲಾವಿದ, ಸಿನಿಮಾ, ನಾಟಕ ನಿರ್ದೇಶಕ ಬಾಸುಮ ಕೊಡಗು ಎಲ್ಲಾ ಕಲಾವಿದರನ್ನು ಉದ್ದೇಶಿಸಿ ಮಾತನಾಡಿ “ರಂಗಭೂಮಿ ಫೈನ್ ಆರ್ಟ್ಸ್ ಸಂಸ್ಥೆಯು ತುಂಬಾ ಅಚ್ಚುಕಟ್ಟಾಗಿ ನಾಟಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅನೇಕ ಯುವ ಪ್ರತಿಭೆಗಳಿಗೆ ರಂಗವೇದಿಕೆಯಲ್ಲಿ ಅಭಿನಯಿಸುವ ಅವಕಾಶ ಒದಗಿದೆ. ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ನಾಟಕಗಳು ಸ್ಪರ್ಧೆಯಲ್ಲಿ ಪ್ರದರ್ಶನಗೊಂಡಿದ್ದು, ಅನೇಕ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸುವ ಅವಕಾಶ ಕೂಡಾ ಇದರಿಂದ ಸಿಕ್ಕಿದೆ. ಅನೇಕ ಪ್ರತಿಭಾವಂತ ಕಲಾವಿದರು ಈ ಸ್ಪರ್ಧೆಯಿಂದ ಬೆಳಕಿಗೆ ಬಂದಿದ್ದಾರೆ. ಭವಿಷ್ಯದಲ್ಲಿ ಈ ಕಲಾವಿದರು ಕಲಾ ಕ್ಷೇತ್ರಕ್ಕೆ ದೊಡ್ಡ ಆಸ್ತಿಯಾಗಬಲ್ಲರು. ಮುಂಬಯಿ ಮಹಾನಗರದಲ್ಲಿ ನೀವೆಲ್ಲರೂ ಸೇರಿ ರಂಗಭೂಮಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿದ್ದೀರಿ.…

Read More

ಉಡುಪಿ, ಕಟಪಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯಲ್ಲಿ ದಿನಾಂಕ 08 ಸೆಪ್ಟೆಂಬರ್ 2024ರಂದು ಎಂ.ಕೆ. ಬಾಲರಾಜ್ ಸಾರಥ್ಯದ ಎಂಕಲ್ನ ಕಲಾವಿದೆರ್ ಮಟ್ಟು ಕಟಪಾಡಿ ತಂಡದವರಿಂದ ‘ಮಾಯೊದ ಮಹಾಶಕ್ತಿಲು’ ಎಂಬ ಅದ್ದೂರಿಯ ತುಳು ಪೌರಾಣಿಕ ನಾಟಕ ಪ್ರದರ್ಶನಗೊಂಡಿತ್ತು. ದಾರಿಕಾಸುರನು ಬ್ರಹ್ಮ ದೇವರನ್ನು ಕುರಿತು ದೀರ್ಘಕಾಲ ತಪಸ್ಸನ್ನಾಚರಿಸಿ ವರವನ್ನು ಪಡೆಯುವ ಸುಂದರ ದೃಶ್ಯದೊಂದಿಗೆ ಆರಂಭವಾಗುವ ಈ ನಾಟಕವು, ಅರೆಕ್ಷಣವೂ ಪ್ರೇಕ್ಷಕ ಕಣ್ಣ ರೆಪ್ಪೆಯನ್ನು ಮುಚ್ಚದೆ ನೋಡುವಂತೆ ಮಾಡುವ ಕುತೂಹಲ ಭರಿತವಾದ ಕಥಾ ಹಂದರವನ್ನೊಳಗೊಂಡಿರುವ ನಾಟಕ ಇದಾಗಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ಬರವುದ ತುಡರ್’ ನವೀನ್ ಪಡ್ರೆ ಇವರು ಈ ನಾಟಕವನ್ನು ರಚಿಸಿದ್ದು, ಅಪ್ಪಟ ತುಳುವಿನ ಅದ್ಭುತವಾದ ಶಬ್ದ ಭಂಡಾರಗಳನ್ನೊಳಗೊಂಡ ಇವರ ಸಂಭಾಷಣೆ ಕಲಾಭಿಮಾನಿಗಳ ಮನ ಮುಟ್ಟುವಂತಿದೆ. ದಿವಾಕರ್ ಕಟೀಲು ಹಾಗೂ ನಾಗರಾಜ್ ವರ್ಕಾಡಿ ಇವರ ಜಂಟಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ನಾಟಕ ಯಶಸ್ಸನ್ನು ಕಂಡಿದೆ. ಶರತ್ ಉಚ್ಚಿಲ ಇವರ ಸಂಗೀತ ನಿರ್ದೇಶನದ, ರವೀಂದ್ರ ಪ್ರಭು ಹಾಡಿರುವ ನವೀನ್ ಪಡ್ರೆ ಇವರ ಸಾಹಿತ್ಯದ ‘ಮಾಯೊದ…

Read More

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಕಳೆದ ಒಂಭತ್ತು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. 2024ರ ದತ್ತಿ ಪ್ರಶಸ್ತಿಗೆ 2023ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಅವುಗಳಲ್ಲಿ ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ., ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಇವರನ್ನೊಳಗೊಂಡ ಆಯ್ಕೆ ಸಮಿತಿಯು ನಾಟಕ ವಿಭಾಗದ “ಪ್ರಭಾವತಿ ಶೆಡ್ತಿ ದತ್ತಿ – ನಾಟಕ ಮಾಣಿಕ್ಯ ಪ್ರಶಸ್ತಿ”ಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾವಿತ್ರಿ ಮನೋಹರ್ ಇವರ “ನಮ್ಮ ಸಂಸಾರ ಆನ್ ಲೈನ್ ಅವಾಂತರ” ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಜೊತೆಗೆ 2,500/- ನಗದು ಪುರಸ್ಕಾರ ಹೊಂದಿದೆ. ಕಾದಂಬರಿ ವಿಭಾಗದ ತುಮಕೂರಿನ ಮೋಹನ್ ಎಂ.ಕೆ. ತುರುವೇಕೆರೆ ಪ್ರಾಯೋಜಕತ್ವದ “ದಿ. ಮಹಾದೇವಮ್ಮ ಈ. ಕೃಷ್ಣಯ್ಯ ಸ್ಮಾರಕ ದತ್ತಿ…

Read More

ರಾಮನಗರ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ವತಿಯಿಂದ ‘ಮೇಘಮೈತ್ರಿ ಶಿಕ್ಷಕರ ಸಾಹಿತ್ಯ ಸಮ್ಮೇಳನ 2024’ವನ್ನು ದಿನಾಂಕ 28 ಸೆಪ್ಟೆಂಬರ್ 2024ರಂದು ರಾಮನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಿಂಭಾಗ, ನ್ಯೂ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ, ಪುಸ್ತಕ ಬಿಡುಗಡೆ, ವಿಶೇಷ ಉಪನ್ಯಾಸ, ಕನ್ನಡ ಧ್ವಜ ಮೆರವಣಿಗೆ, ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕನಕಪುರದ ಹಿರಿಯ ಸಾಹಿತಿಗಳು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಡಾ. ಕೂ.ಗಿ. ಗಿರಿಯಪ್ಪ ಇವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಹಿರೇಮಠ ಕಮತಗಿ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಸಮ್ಮೇಳನದ ಉದ್ಘಾಟನೆಯನ್ನು ಖ್ಯಾತ ವಿಮರ್ಶಕರಾದ ಡಾ. ಬೈರಮಂಗಲ ರಾಮೇಗೌಡ ಇವರು ನೆರವೇರಿಸಲಿದ್ದಾರೆ. ಡಾ. ಕೂ.ಗಿ. ಗಿರಿಯಪ್ಪ ಇವರ ‘ರಾಣಿ ಕಿತ್ತೂರು ಚೆನ್ನಮ್ಮ’ ಎಂಬ ಕೃತಿಯನ್ನು ಭಾರತೀಯ ಸ್ತ್ರೀ ಶಕ್ತಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಭಾಗ್ಯ ಸರವನ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಭಾರತೀ ನಗರದಲ್ಲಿರುವ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನ ಇದರ ಆಶ್ರಯದಲ್ಲಿ ದಿನಾಂಕ 25 ಸೆಪ್ಟೆಂಬರ್ 2024ರಂದು ‘ಜಾಂಬವತಿ ಕಲ್ಯಾಣ’ ಆಖ್ಯಾನ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್.ಭಟ್, ಆನಂದ ಸವಣೂರು, ನಿತೀಶ್ ಕುಮಾರ್ ಎಂಕಣ್ಣಮೂಲೆ, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಮುಮ್ಮೇಳದಲ್ಲಿ ಬಲರಾಮ (ಗುಂಡ್ಯಡ್ಕ ಈಶ್ವರ ಭಟ್), ಶ್ರೀಕೃಷ್ಣ (ಭಾಸ್ಕರ್ ಬಾರ್ಯ), ಜಾಂಬವ (ಗುಡ್ಡಪ್ಪ ಬಲ್ಯ), ನಾರದ (ಶುಭಾ ಜೆ.ಸಿ. ಅಡಿಗ) ಸಹಕರಿಸಿದರು. ಬಡೆಕ್ಕಿಲ ಚಂದ್ರಶೇಖರ್ ಭಟ್ ಪ್ರಾಯೋಜಿಸಿದ್ದರು. ವೇಣುಗೋಪಾಲ ಭಟ್ ಮಾಂಬಾಡಿ ಸಹಕರಿಸಿದರು.

Read More

ಉಡುಪಿ : ಬೆಂಗಳೂರಿನ ವಿಹಾ ಪ್ರಕಾಶನದಿಂದ ಪ್ರಕಟವಾಗಿದ್ದ ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ಏಕತಾರಿ ಸಂಚಾರಿ’ ಎಂಬ ಕವನ ಸಂಕಲನವನ್ನು ಹಿರಿಯ ವಿದ್ವಾಂಸರಾದ ಪ್ರೊ. ಎನ್. ತಿರುಮಲೇಶ್ವರ ಭಟ್ ಇವರು “Tunes of a Single String – Renaissance Poems of Modernist Tradition’ ಎಂಬ ಹೆಸರಲ್ಲಿ ಇಂಗ್ಲೀಷ್ ಭಾಷೆಗೆ ಅನುವಾದಿಸಿದ್ದಾರೆ. ಈ ಕೃತಿಯನ್ನು ಮಣಿಪಾಲ್ ಯುನಿವರ್ಸಲ್ ಪ್ರೆಸ್ ಬಹಳ ಸುಂದರವಾಗಿ ಪ್ರಕಟಿಸಿದ್ದು, ದಿನಾಂಕ 30 ಸೆಪ್ಟೆಂಬರ್ 2024 ಸೋಮವಾರ ಸಂಜೆ 4-00 ಗಂಟೆಗೆ ‘ವಿಶ್ವ ಅನುವಾದ ದಿನ’ದಂದು ಮಣಿಪಾಲ್ ಯುನಿವರ್ಸಲ್ ಪ್ರೆಸ್ ಇವರು ಉಡುಪಿ ಮಹಾತ್ಮಾ ಗಾಂಧಿ ಕಾಲೇಜಿನ ಸಹಯೋಗದೊಂದಿಗೆ, ಈ ಕೃತಿಯ ಅನಾವರಣ ಕಾರ್ಯಕ್ರಮವನ್ನು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡಿದೆ. ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಗೆ ಪಾತ್ರರಾಗಿರುವ ಪ್ರಸಿದ್ಧ ಸಾಹಿತಿಗಳಾದ ಶ್ರೀ ಲಕ್ಷ್ಮೀಶ ತೋಳ್ಪಾಡಿಯವರು ಕೃತಿ ಅನಾವರಣಗೊಳಿಸಲಿದ್ದಾರೆ. ಪ್ರತಿಷ್ಠಿತ ಮಾಹೆಯ ಉಪಕುಲಪತಿಗಳಾಗಿರುವ ಡಾ. ಶರತ್ ಕೆ. ರಾವ್ ಇವರು ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಿದ್ದು, ಎಂ.ಜಿ.ಎಂ. ಕಾಲೇಜಿನ ಪ್ರಾಚಾರ್ಯರಾದ…

Read More

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ‘ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಶಿಬಿರ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ‘ಬಂಜಾರ ಸಮುದಾಯದ 20 ರಿಂದ 40 ವರ್ಷದಳೊಗಿನ ಆಸಕ್ತರು 10 ಅಕ್ಟೋಬರ್ 2024ರ ಒಳಗೆ ಅರ್ಜಿ ಸಲ್ಲಿಸಬಹುದು. ಬಂದ ಅರ್ಜಿಗಳಿಂದ ಈ ಶಿಬಿರಕ್ಕೆ 50 ಶಿಬಿರಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಕ್ಟೋಬರ್‌ನಲ್ಲಿ ರಾಮನಗರ ಜಿಲ್ಲೆಯಲ್ಲಿ ಈ ಶಿಬಿರ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಎ. ಆರ್. ಗೋವಿಂದಸ್ವಾಮಿ ತಿಳಿಸಿದ್ದಾರೆ. ಅರ್ಜಿಗಳನ್ನು ಅಧ್ಯಕ್ಷರು, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಜೆ. ಸಿ. ರಸ್ತೆ, ಬೆಂಗಳೂರು. ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕು. ಹೆಚ್ಚಿನ ಮಾಹಿತಿಗಾಗಿ 080-29917745 ಈ ಸಂಖ್ಯೆಯನ್ನು ಸಂಪರ್ಕಿಸಿ.

Read More

ಮಂಗಳೂರು : ಯಕ್ಷರಂಗದ ಸವ್ಯಸಾಚಿ ಕಲಾವಿದರೆನಿಸಿದ್ದ ದಿ. ಬಾಬು ಕುಡ್ತಡ್ಕರ ಹೆಸರಿನಲ್ಲಿ ವರ್ಷಂಪ್ರತಿ ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾಕೇಂದ್ರವು ದಿ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಸಹಕಾರದಲ್ಲಿ ನೀಡಲಾಗುತ್ತಿರುವ 2024-25ರ ಸಾಲಿನ ‘ಬಾಬು ಕುಡ್ತಡ್ಕ ಪ್ರಶಸ್ತಿ’ಗಾಗಿ ತೆಂಕು ಬಡಗು ತಿಟ್ಟು ಎರಡು ಪ್ರಕಾರಗಳಲ್ಲೂ ಖ್ಯಾತನಾಮರೆನಿಸಿದ ಯಕ್ಷಗಾನದ ಸ್ತ್ರೀ ವೇಷಧಾರಿ, ಪ್ರಸಂಗ ಕರ್ತೃ ಎಂ.ಕೆ. ರಮೇಶ್ ಆಚಾರ್ಯ ಇವರನ್ನು ಸ್ವಸ್ತಿಕ್ ಆಯ್ಕೆ ಸಮಿತಿಯ ಮೂಲಕ ಪ್ರಶಸ್ತಿಗಾಗಿ ಆಯ್ಕೆಗೊಳಿಸಲಾಗಿದೆ. ಪರಿಚಯ : ಮಲೆನಾಡು ಕಂಡ ಪ್ರತಿಭಾಶಾಲಿ ಹಾಗೂ ಹಿರಿಯ ಯಕ್ಷಗಾನ ಕಲಾವಿದರು ಎಂ.ಕೆ. ರಮೇಶ್ ಆಚಾರ್ಯರು. ಇವರು ಉಭಯ ತಿಟ್ಟುಗಳ ಸಮರ್ಥ ಸ್ತ್ರೀ ವೇಷ ದಾರಿ. ಐದನೇ ತರಗತಿಯಲ್ಲಿರುವಾಗಲೇ ಯಕ್ಷರಂಗ ಪ್ರವೇಶಿಸಿ, ವೃತ್ತಿ ಕಲಾವಿದರಾಗಿ ಐವತ್ತು ವರ್ಷಗಳ ಸಾರ್ಥಕ ಸೇವೆ ಗೈದು ಹತ್ತಾರು ಯಕ್ಷಗಾನ ಪ್ರಸಂಗಗಳಿಗೆ ಕಲಾ ನಿರ್ದೇಶನ, ಮೂವತ್ತೈದಕ್ಕೂ ಹೆಚ್ಚು ಕಾಲ್ಪನಿಕ ಪ್ರಸಂಗಗಳಿಗೆ ಪದ್ಯ ರಚನೆ, ಅನೇಕ ಪುರಾಣ ಪ್ರಸಂಗಗಳನ್ನು ಯಕ್ಷರಂಗಕ್ಕೆ ನೀಡಿರುವ ವೇಧಾವಿ. ಶೇಣಿ- ಸಾಮಗರಂತಹ ಯಕ್ಷ ದಿಗ್ಗಜರೊಂದಿಗೆ, ದ್ರೌಪದಿ, ಚಂದ್ರಮತಿ, ಶಾಂತಲೆ, ಮೇನಕ,…

Read More