Author: roovari

ಉಡುಪಿ : ಹಿರಿಯ ಸಾಹಿತಿ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಮೊದಲ ‘ಡಾ. ಶಿವರಾಮ ಕಾರಂತ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ದಿನಾಂಕ 11 ಅಕ್ಟೋಬರ್ 2025ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ಕಾರಂತ ಜನ್ಮದಿನೋತ್ಸವ-ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ತಿಳಿಸಿದ್ದಾರೆ ಕನ್ನಡ ಸಾಹಿತ್ಯ ಮತ್ತು ವಿಮರ್ಶೆ, ಜಾನಪದ ಸಂಶೋಧನೆ, ಕಾರಂತರ ಬದುಕಿನ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರೊ. ರೈ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಮಂಗಳೂರು ವಿ.ವಿ.ಯಲ್ಲಿ ಕಾರಂತ ಪೀಠ ಸ್ಥಾಪಿಸಿ ಅದರ ಮೂಲಕ ಕಾರಂತರ ಬದುಕು-ಬರಹಗಳ ಹಲವು ಆಯಾಮಗಳನ್ನು ಇವರು ದಾಖಲಿಸಿದ್ದಾರೆ.

Read More

ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಸಂಸ್ಥೆಯ ಅಮೃತ ವರ್ಷ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ‘ಅಮೃತ ಭಕ್ತಿ ಸುಧಾ’ ಎಂಬ ಭಕ್ತಿ ಗಾಯನ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಖ್ಯಾತ ಗಾಯಕಿ ಕುಮಾರಿ ಮೇಧಾ ವಿದ್ಯಾಭೂಷಣ ಇವರು ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಸಂಗೀತ ಕಾರ್ಯಕ್ರಮದ ಮೊದಲು ಸಂಜೆ 5-00ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ (ಸರ್ಕಲ್ ಹೆಡ್) ಶ್ರೀ ಮಂಜುನಾಥ್ ಬಿ. ಸಿಂಗಾಯಿ ಇವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮಂಗಳೂರು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಇವರು ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಇವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆಯ ಮುಖ್ಯ ಆಕರ್ಷಣೆಯಾಗಿರುವ ಕುಮಾರಿ ಮೇಧಾ ವಿದ್ಯಾಭೂಷಣ ಇವರ ಭಕ್ತಿಗೀತೆಗಳು ಕಾರ್ಯಕ್ರಮದ ಅಧ್ಯಾತ್ಮಿಕ ವಾತಾವರಣವನ್ನು ಮತ್ತಷ್ಟು…

Read More

ಸಾಗರ : ಸಾಂಸ್ಕೃತಿಕ ಒಡನಾಡಕ್ಕೊಂದು ಸ್ಪಂದನ (ರಿ.) ಸಾಗರ ಇವರ ವತಿಯಿಂದ ‘ಪ್ರಾಣ ಪದ್ಮಿನಿ’ ನಾಟಕ ಪ್ರದರ್ಶನವನ್ನು ದಿನಾಂಕ 10 ಮತ್ತು 11 ಅಕ್ಟೋಬರ್ 2025ರಂದು ಸಂಜೆ 7-00 ಗಂಟೆಗೆ ಸಾಗರದ ಕಾಗೋಡು ತಿಮ್ಮಕ್ಕ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಲ್ಜಿಯಂ ದೇಶದ ಮಾರಿಸ್ ಮ್ಯಾಟರ್ ಲಿಂಕ್ ಎಂಬ ಕವಿ 1902ರಲ್ಲಿ ಬರೆದ ‘ಮೊನ್ನವನ್ನ’ ಎಂಬ ನಾಟಕವನ್ನು ಎಸ್.ಜಿ. ಶಾಸ್ತ್ರಿಯವರು ಕನ್ನಡಕ್ಕೆ ಅನುವಾದಿಸಿದ್ದರು. ವಿಜಯನಗರ ಮತ್ತು ಮೊಘಲರ ಸಂಘರ್ಷದ ಹಿನ್ನೆಲೆಯಲ್ಲಿ ಈ ನಾಟಕವನ್ನು ರೂಪಾಂತರಿಸಿ ನಿರ್ದೇಶಿಸಲಾಗಿದೆ. ಮಂಜುನಾಥ ಎಲ್. ಬಡಿಗೇರ ಇವರ ರೂಪಾಂತರ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಪ್ರಸ್ತುತಗೊಳ್ಳುವ ಈ ನಾಟಕಕ್ಕೆ ಸಂಗೀತವನ್ನು ಭಾರ್ಗವ ಹೆಗ್ಗೋಡು ಮತ್ತು ಅರುಣಕುಮಾರ್ ನೀಡಿದ್ದಾರೆ. ಗುರುಮೂರ್ತಿ ವರದಾಮೂಲ ಅವರ ರಂಗಸಜ್ಜಿಕೆ, ವಸ್ತ್ರ ವಿನ್ಯಾಸ, ಪ್ರಸಾದನ ಹಾಗೂ ಜೀವನಕುಮಾರ್ ಹೆಗ್ಗೋಡು ಬೆಳಕಿನ ವಿನ್ಯಾಸ ಮಾಡಿರುತ್ತಾರೆ. ಎಂ.ವಿ. ಪ್ರತಿಭಾ, ರಿಯಾಜ್ ಮತ್ತು ಶಿವಕುಮಾರ್ ಉಳವಿ ಇವರು ನಿರ್ವಹಣೆ ಮಾಡಿದ್ದು, ಹೆಚ್ಚಿನ ಮಾಹಿತಿಗಾಗಿ 99451 78792 ಮತ್ತು 99802 47048 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ ‘ನೃತ್ಯ ಭಾನು’ 94ನೇ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವನ್ನು ದಿನಾಂಕ 10 ಅಕ್ಟೋಬರ್ 2025ರಂದು ಸಂಜೆ 06-30 ಗಂಟೆಗೆ ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ. ಇದು ಶಾಂತಲಾ ನಾಟ್ಯ ಸಿರಿ ಪುರಸ್ಕೃತ ಗುರು ಬಿ. ಭಾನುಮತಿ ಇವರಿಗೆ ಸಮರ್ಪಿತ ಉತ್ಸವವಾಗಿದ್ದು, ಗುರು ಸುಮಾ ರಾಜೇಶ್ ಇವರ ಶಿಷ್ಯೆ ಸಂಪದ ಗುರುಪ್ರಸಾದ್ ಮತ್ತು ಗುರು ರೇವತಿ ನರಸಿಂಹನ್ ಇವರ ಶಿಷ್ಯೆ ದೇವಿಕಾ ಪರಮೇಶ್ವರ ಇವರಿಂದ ‘ಭರತನಾಟ್ಯ’ ಪ್ರದರ್ಶನ ನಡೆಯಲಿದೆ.

Read More

ಮೈಸೂರು : ರಂಗಾಯಣ ಮೈಸೂರು ಇದರ ಭಾರತೀಯ ರಂಗಶಿಕ್ಷಣ ಕೇಂದ್ರದ 2025-26ನೇ ಸಾಲಿನ ವಿದ್ಯಾರ್ಥಿಗಳು ಅಭಿನಯಿಸುವ ದೃಶ್ಯಾನುಸಂಧಾನವನ್ನು ದಿನಾಂಕ 10 ಅಕ್ಟೋಬರ್ 2025ರಂದು ಸಂಜೆ 7-00 ಗಂಟೆಗೆ ಮೈಸೂರು ರಂಗಾಯಣದ ವನರಂಗದಲ್ಲಿ ಆಯೋಜಿಸಲಾಗಿದೆ. ವಿಜಯಾ ಗುತ್ತಲ ಇವರು ಕನ್ನಡಕ್ಕೆ ಅನುವಾದಿಸಿರುವ ‘ಒರೆಸ್ತಿಯಾ’ ನಾಟಕವು ಸಾಲಿಯಾನ್ ಉಮೇಶ್ ನಾರಾಯಣ ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

Read More

ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ ಇದರ ಸಹಯೋಗದಲ್ಲಿ ಡಾ. ಕೆ. ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ ಮತ್ತು ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 10 ಅಕ್ಟೋಬರ್ 2025 ಶುಕ್ರವಾರದಂದು ಮಧ್ಯಾಹ್ನ 4-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆಯ ಸಹಕುಲಾಧಿಪತಿಗಳಾದ ಡಾ. ಹೆಚ್.ಎಸ್. ಬಲ್ಲಾಳ್ ವಹಿಸಲಿದ್ದು, ಮಾಹೆಯ ಸಹಕುಲಪತಿಗಳಾದ ಡಾ. ನಾರಾಯಣ ಸಭಾಹಿತ್, ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿಕಿಶನ್ ಹೆಗ್ಡೆ ಉಪಸ್ಥಿತರಿರುವರು. ಕಾಪು ಸ.ಪ.ಪೂ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ರವಿರಾಜ್ ಶೆಟ್ಟಿ ಕಾರಂತ ಸಂಸ್ಮರಣೆಯನ್ನು ನಡೆಸಿಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಶಿವಕುಮಾರ್ ಅಳಗೋಡು ಇವರ ‘ಯಕ್ಷಗಾನ ಪೂರ್ವರಂಗ’ ಕೃತಿ ಬಿಡುಗಡೆಗೊಳ್ಳಲಿದೆ. ಸಭಾ ಕಾರ್ಯಕ್ರಮದ ನಂತರ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ‘ಭೀಷ್ಮೋತ್ಪತ್ತಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ – ಭಾಗವತರು- ಶ್ರೀ…

Read More

ಪುತ್ತೂರು : ಭಾರತವು ಪಾಶ್ಚಾತ್ಯರ ಆಳ್ವಿಕೆಯಲ್ಲಿದ್ದ ಕಾಲಘಟ್ಟದಲ್ಲಿ ಅಮೇರಿಕಾದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವಕ್ಕೆ ಸಾರಿದವರು ರಾಷ್ಟ್ರಭಕ್ತ ಸಂತ ಸ್ವಾಮಿ ವಿವೇಕಾನಂದರು. 1893ನೇ ಇಸವಿಯ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರು ಮಾಡಿದ ಐತಿಹಾಸಿಕ ಭಾಷಣದ 132ನೇ ವರ್ಷಾಚರಣೆಯ ಸುಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯವು ‘ವಿವೇಕ ವಿಜಯ’ ಎಂಬ ಶೀರ್ಷಿಕೆಯೊಂದಿಗೆ ವಿಶೇಷ ಉಪನ್ಯಾಸಗಳನ್ನು ಮೂರು ಅವಧಿಗಳಲ್ಲಿ ದಿನಾಂಕ 11 ಅಕ್ಟೋಬರ್ 2025 ಶನಿವಾರದಂದು ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದೆ. ಬೆಳಗ್ಗೆ ಗಂಟೆ 9-30ಕ್ಕೆ ಸರಿಯಾಗಿ ವಿವೇಕಾನಂದ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ‘ವಿವೇಕ ವಿಜಯ’ ವಿಶೇಷ ಉಪನ್ಯಾಸಗಳ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್ ಇವರು ನೆರವೇರಿಸಲಿದ್ದಾರೆ. ಉದ್ಘಾಟನೆಯ ನಂತರ ನಡೆಯುವ ಮೊದಲ ಅವಧಿಯಲ್ಲಿ ಚಿಂತಕರು ಹಾಗೂ ಖ್ಯಾತ ವಾಗ್ಮಿಗಳಾದ ಶ್ರೀ ಚಕ್ರವರ್ತಿ ಸೂಲಿಬೆಲೆಯವರು ವಿದ್ಯಾರ್ಥಿಗಳನ್ನುದ್ದೇಶಿಸಿ ‘ಭಾರತ ವಂದನಾ – ವಿವೇಕ ಚಿಂತನ’ ಎಂಬ ವಿಷಯದ…

Read More

ಕಾಸರಗೋಡು : ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡಿನಲ್ಲಿ ನಿರಂತರವಾಗಿ ಕನ್ನಡ ಭಾಷೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಎರಡು ಅಂತಸ್ತಿನ ‘ಕೇರಳ-ಕರ್ನಾಟಕ ಭವನ’ ಸಾಂಸ್ಕೃತಿಕ ಸಮುಚ್ಚಯದ ನಿರ್ಮಾಣ ಯೋಜನೆಯನ್ನು ಕೈಗೊಳ್ಳಲಾಗಿದೆ. ಕಾಸರಗೋಡು ಕನ್ನಡ ಗ್ರಾಮದಲ್ಲಿ 300 ಆಸನವುಳ್ಳ ಸಾಂಸ್ಕೃತಿಕ ಭವನ ನಿರ್ಮಾಣವಾಗಲಿದೆ. ಹೋಂ ಸ್ಟೇ ಮಾದರಿಯ 4 ಅತಿಥಿಗೃಹ, ಪ್ರಾದೇಶಿಕ ಜಾನಪದ ವಸ್ತು ಸಂಗ್ರಹಾಲಯ, ಆರ್ಟ್ ಗ್ಯಾಲರಿ, ಸಾಂಸ್ಕೃತಿಕ, ಯಕ್ಷಗಾನ, ಸಾಹಿತ್ಯ ಕುಟೀರ ಹಾಗೂ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ, ಯಕ್ಷಗಾನ, ನಾಟಕ, ಶಿಕ್ಷಣ ಅಧ್ಯಯನ ಕೇಂದ್ರ ನಿರ್ಮಾಣದ ಕಾರ್ಯ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗಲಿರುವ ‘ಕೇರಳ-ಕರ್ನಾಟಕ ಭವನ’ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿ ಕಾಸರಗೋಡು ಸ್ವ-ಉದ್ಯೋಗ ತರಬೇತಿ ಕೇಂದ್ರ, ಕೇರಳ ರಾಜ್ಯ ಕನ್ನಡ ಮಾಧ್ಯಮ ಕಂಪ್ಯೂಟರ್ – ಡಿಜಿಟಲ್…

Read More

ಉಡುಪಿ : ನಾಡೋಜ ಡಾ. ಜಿ. ಶಂಕರರ ಸಪ್ತತಿಯ ಶುಭಾವಸರದಲ್ಲಿ ಉಡುಪಿಯ ತಾಲೂಕಿನ ಸಾಮಾಜಿಕ – ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ ವತಿಯಿಂದ ದಿನಾಂಕ 07 ಅಕ್ಟೋಬರ್ 2025ರಂದು ಅಭಿನಂದಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪುಷ್ಪಗುಚ್ಛ, ಅಭಿನಂದನಾ ಪತ್ರ ನೀಡಿ ಶುಭ ಹಾರೖಸಿದರು. ನಿರಂತರ ಕಲೆ, ಶಿಕ್ಷಣ, ಆರೋಗ್ಯವೂ ಸೇರಿದಂತೆ ಸಮಾಜದಲ್ಲಿ ಕಷ್ಟದಲ್ಲಿರುವವರ ಕಾಮಧೇನುವಾಗಿರುವ ಡಾ. ಜಿ. ಶಂಕರರು ತಮ್ಮ ಸಪ್ತತಿಯನ್ನು ಈ ಎಲ್ಲಾ ಸೇವಾಕಾರ್ಯಗಳನ್ನು ಅತಿಶಯವಾಗಿ ನಡೆಸಿ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ಅಧ್ಯಕ್ಷರಾದ ಆನಂದ ಸಿ. ಕುಂದರ್ ಜೊತೆಗಿದ್ದರು. ಸಂಸ್ಥೆಯ ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ನಾರಾಯಣ ಎಂ. ಹೆಗಡೆ, ವಿಷ್ಣುಮೂರ್ತಿ ಆಚಾರ್ಯ, ಎಚ್. ಸುಜಯೀಂದ್ರ ಹಂದೆ, ಗಣೇಶ ಬ್ರಹ್ಮಾವರ, ಡಾ. ರಾಜೇಶ ನಾವಡ, ಶ್ರೀಪತಿ ಕಾಮತ್, ಪ್ರಭಾಕರ ಭಂಡಿ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.

Read More

ಬೆಂಗಳೂರು : ಕರ್ನಾಟಕ ಸುಗಮ ಸಂಗೀತ ಪರಿಷತ್ತು (ರಿ.) ಬೆಂಗಳೂರು ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅರ್ಪಿಸುವ ‘ಕವಿಯ ನೋಡಿ ಕವಿತೆ ಕೇಳಿ’ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಖ್ಯಾತ ಸಾಹಿತ್ಯ ಡಾ. ನಾ. ದಾಮೋದರ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಖ್ಯಾತ ಸಾಹಿತಿ ಡಾ. ನಾಗತಿಹಳ್ಳಿ ಚಂದ್ರಶೇಖರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ನಗರ ಶ್ರೀನಿವಾಸ ಉಡುಪಿ, ಡಾ. ಕಿಕ್ಕೇರಿ ಕೃಷ್ಣಮೂರ್ತಿ, ಪ್ರವೀಣ್ ಬಿ.ವಿ., ಪ್ರದೀಪ್ ಬಿ.ವಿ., ಅಮಿತ್ ಶೇಕರ್, ಕೆ.ಎಸ್. ಸುರೇಖಾ, ನಾಗಚಂದ್ರಿಕಾ ಭಟ್, ಸುನೀತಾ ಮುರಳಿ, ಮಂಗಳ ರವಿ, ಸುರೇಖಾ ಹೆಗಡೆ, ಅಪರ್ಣ ನರೇಂದ್ರ ಇವರುಗಳು ಗಾಯನದಲ್ಲಿ ಭಾಗವಹಿಸಲಿದ್ದು, ನಂತರ ಪ್ರಸ್ತುತಗೊಳ್ಳಲಿರುವ ‘ಗೀತ ಸಂಭ್ರಮ’ಕ್ಕೆ ಅಭಿಷೇಕ್ ಕೀಬೋರ್ಡ್, ರಮೇಶ್ ಕುಮಾರ್ ಕೊಳಲು, ಅಮಿತ್ ರಾಜ್ ತಬಲಾ ಮತ್ತು ಅನಂತಪದ್ಮನಾಭ ರಿದಂಪ್ಯಾಡ್ ನಲ್ಲಿ ಸಹಕರಿಸಲಿದ್ದಾರೆ.

Read More