Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ವತಿಯಿಂದ ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ‘ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ’ಯು (ಕೊಡಗು ಜಿಲ್ಲೆಯವರಿಗೆ ಮಾತ್ರ) ದಿನಾಂಕ 27-08-2023ರಂದು ನಡೆಯಲಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು 25-08-2023 ಕೊನೆಯ ದಿನಾಂಕವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ‘ಚೇತನ ಚಿಲುಮೆ’ (ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಹತ್ತಿರ) ದೂ.ಸಂ.9880985939, 9480745776ನ್ನು ಸಂಪರ್ಕಿಸಬಹುದು.
ಉಡುಪಿ : ಆದಿಉಡುಪಿ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟನೆ ದಿನಾಂಕ 10-08-2023 ಗುರುವಾರದಂದು ಶಾಲಾ ಸಭಾಭವನದಲ್ಲಿ ನೆರವೇರಿತು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ “ಈ ಬಾರಿ ಎಪ್ಪತ್ತು ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಕೆ ಆರಂಭಗೊಂಡಿದೆ. ಇನ್ನಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದ್ದು, ಗುರುಗಳ ಕೊರತೆಯಿಂದಾಗಿ ಕೋರಿಕೆ ಈಡೇರಿಸಲಾಗುತ್ತಿಲ್ಲ. ಇದು ಯಕ್ಷಶಿಕ್ಷಣದ ಬಗೆಗಿರುವ ಆಸಕ್ತಿಯ ದ್ಯೋತಕವಾಗಿದೆ” ಎಂಬುದಾಗಿ ನುಡಿದರು. ಮುಖ್ಯ ಶಿಕ್ಷಕ ಶ್ರೀ ರವೀಂದ್ರರು ಸ್ವಾಗತಿಸಿದರು. ಶಾಲಾ ಸಂಚಾಲಕ ಶ್ರೀ ಟಿ.ಕೆ.ಗಣೇಶ್ ರಾವ್, ಉಡುಪಿ ಮೆಸ್ಕಾಂ ಅಧಿಕಾರಿ ಶ್ರೀ ಎಸ್.ಗಣರಾಜ ಭಟ್, ಯಕ್ಷಗಾನ ಗುರುಗಳಾದ ಶ್ರೀ ಶಾಂತಾರಾಮ ಆಚಾರ್ಯ ಶುಭಹಾರೈಸಿದರು. ಶಿಕ್ಷಕರಾದ ಶ್ರೀ ಡೇವಿಡ್ ಅಲ್ಬರ್ಟ್. ಶ್ರೀ ಸುರೇಶ ನಾಯ್ಕ, ಶ್ರೀ ಅಶೋಕ್ ಹಾಗೂ ಶ್ರೀ ಸುಧಾಕರ ಉಪಸ್ಥಿತರಿದ್ದರು. ಶಿಕ್ಷಕ ಶ್ರೀ ಉಮೇಶ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಶಾಲೆಯ ಆಸಕ್ತ 40 ವಿದ್ಯಾರ್ಥಿಗಳು ಯಕ್ಷಗಾನ ಕಲಿಯುತ್ತಿದ್ದಾರೆ.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಲೆ ಮತ್ತು ಸಾಹಿತ್ಯ ಪ್ರಬಲವಾದ ಸಾಧನವಾಗಿತ್ತು. ಅಮಾಯಕ ಜನ ಮನದ ಭಾವನೆಗಳಿಗೆ ಸ್ಪಂದನೆಯನ್ನು ನೀಡುತ್ತಾ ಸ್ವತಂತ್ರ ಭಾರತದ ಕಲ್ಪನೆಗಳನ್ನು ಹುಟ್ಟುಹಾಕುವಲ್ಲಿ ಕಲೆ ಮತ್ತು ಸಾಹಿತ್ಯ ಪ್ರಧಾನ ಪಾತ್ರ ವಹಿಸಿತ್ತು. ಭಾರತೀಯ ನೋವಿನ ಚಿತ್ರಣ, ಬ್ರಿಟಿಷ್ ರ ಕ್ರೂರತೆಯ ಕಲ್ಪನೆ, ಸಾಂಸ್ಕೃತಿಕ ಅಧಃಪತನ, ಧಾರ್ಮಿಕತೆಯ ಕ್ಷೀಣಿಸುವಿಕೆ .. .. ಹೀಗೆ ಹಲವು ಸೋಲುಗಳನ್ನು ಜನರಿಗೆ ಪರಿಚಯಿಸುವ ಪ್ರಭಾವಿ ಮಾಧ್ಯಮವಾಗಿ ಕಲೆ ಮತ್ತು ಸಾಹಿತ್ಯ ಕಾರ್ಯ ನಿರ್ವಹಿಸುತ್ತು. ಸಂವೇದನಾಶೀಲತೆಯನ್ನು ಹುಟ್ಟುಹಾಕುವ ಮೂಲಕ ರಾಷ್ಟ್ರೀಯ ಭಾವನೆಗಳನ್ನು ಹೆಚ್ಚಿಸಿ, ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಶ್ರಮಿಸಿದ ಕಲಾವಿದರು, ಲೇಖಕರು ಹಲವರು. ತಮ್ಮ ಕವನ, ಲೇಖನ, ನಾಟಕ, ಚಿತ್ರಕಲೆ, ಹಾಡು, ನೃತ್ಯ, ಜಾನಪದ ಕಲೆಗಳ ಮೂಲಕ ದೇಶಭಕ್ತಿಯ ಭಾವನೆಗಳನ್ನು ಉದ್ದೀಪಿಸಿದ ಮಹಾನ್ ಕಲಾವಿದರು ಸಾಹಿತಿಗಳು ನಿತ್ಯ ಸ್ಮರಣೀಯರು. ಸರೋಜಿನಿ ನಾಯ್ಡು : (13-02-1879 – 02-03-1949) ‘ತೊಟ್ಟಿಲು ತೂಗುವ ಕೈ ಜಗವನ್ನೇ ಆಳಬಲ್ಲುದು’ ಎಂಬುದನ್ನು ತಮ್ಮ ಜೀವನಕ್ರಮದ ಮೂಲಕ ಜಗತ್ತಿಗೆ ತೋರಿಕೊಟ್ಟ ಮಹಾನ್ ಮಹಿಳಾ…
ಭರತನಾಟ್ಯ, ಯಕ್ಷಗಾನ ಕೇವಲ ಮನೋರಂಜನೆ ಆಯ್ಕೆಯಲ್ಲ. ಈ ಭಾರತೀಯ ಕಲೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಶಸ್ತ ಸ್ಥಾನವಿದೆ. ಈ ನೃತ್ಯ ಕ್ಷೇತ್ರದಲ್ಲಿ ಚಿರಪರಿಚಿತ ಹಾಗೂ ಬಹುಮುಖ ಪ್ರತಿಭೆ, ಯಕ್ಷಗಾನ ಕಲಾವಿದೆ ಶ್ವೇತಾ ಅರೆಹೊಳೆ. ಅರೆಹೊಳೆ ಪ್ರತಿಷ್ಠಾನದ ಅಧಕ್ಷ ಅರೆಹೊಳೆ ಸದಾಶಿವ ರಾವ್ ಹಾಗೂ ಗೀತಾ ಅರೆಹೊಳೆ ಇವರ ಮಗಳಾಗಿ 16.12.2000 ರಂದು ಕೇರಳದ ತ್ರಿಶೂರಿನಲ್ಲಿ ಜನನ. ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿರುತ್ತಾರೆ. 6ನೇ ವಯಸ್ಸಿನಲ್ಲಿಯೇ ನೃತ್ಯಾಭ್ಯಾಸ ಆರಂಭಿಸಿ, ಪೂರ್ಣ ಪ್ರಮಾಣದ ನೃತ್ಯಾಭ್ಯಾಸವನ್ನು ಗುರುಗಳಾದ ಯು.ಕೆ ಪ್ರವೀಣ್ ಅವರಲ್ಲಿ ಪೂರೈಸಿದ್ದಾರೆ. ಭರತನಾಟ್ಯ ಜೂನಿಯರ್, ಸೀನಿಯರ್ ಮುಗಿಸಿದ್ದಾರೆ. ನೃತ್ಯದ ಜೊತೆಗೆ ಸಂಗೀತದಲ್ಲೂ ಆಸಕ್ತಿ ಹೊಂದಿರುವ ಶ್ವೇತಾ, ಉಷಾ ಪ್ರವೀಣ್ ಅವರಲ್ಲಿ ಸಂಗಿತ ಜೂನಿಯರ್ ಮುಗಿಸಿದ್ದಾರೆ, ಜೊತೆಗೆ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅವರಲ್ಲಿ ಭರತನಾಟ್ಯ ಪ್ರಿ ವಿದ್ವತ್ ಪೂರೈಸಿದ್ದಾರೆ. ಕಲಗದ್ದೆ, ನಾಟ್ಯ ವಿನಾಯಕ ದೇವರ ಆಶೀರ್ವಾದ ಮತ್ತು ಇವರ ಹೆತ್ತವರ ಪ್ರೋತ್ಸಾಹದಿಂದ ಯಕ್ಷಗಾನ ರಂಗದಲ್ಲಿ ಕೂಡ ತಮ್ಮ ಪ್ರತಿಭೆಯನ್ನು ಯಕ್ಷಗುರು ಮಂಜುನಾಥ್ ಕುಲಾಲ್ ಐರೋಡಿ ಅವರ…
ತುಮಕೂರು : ಡಮರುಗ ರಂಗ ಸಂಪನ್ಮೂಲ ಕೇಂದ್ರ (ರಿ.) ತುಮಕೂರು ಅಭಿನಯಿಸುವ, ಮೆಳೇಹಳ್ಳಿ ದೇವರಾಜ್ ರಚಿಸಿ ನಿರ್ದೇಶಿಸಿದ ‘ಮುಟ್ಟಾದಳೇ ಪುಟ್ಟಿ’ ನಾಟಕದ ಪ್ರದರ್ಶನವು ದಿನಾಂಕ 13-08-2023ರ ಸಂಜೆ 6.30ಕ್ಕೆ ತುಮಕೂರಿನ ಬೆಳ್ಳಾವಿ ಹೊಬಳಿಯ ವಕ್ಕೋಡಿ ಗೊಲ್ಲರಹಟ್ಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವಕ್ಕೋಡಿ ಗೊಲ್ಲರಹಟ್ಟಿಯ ಪ್ರಧಾನ ಅರ್ಚಕರಾದ ಪೂಜಾರ್ ಶ್ರೀ ಚಿಕ್ಕಣ್ಣ, ಮಹಿಳಾಪರ ಚಿಂತಕಿ ಹಾಗೂ ಸಾಹಿತಿಗಳಾದ ಶ್ರೀಮತಿ ಬಿ.ಸಿ.ಶೈಲಾ ನಾಗರಾಜ್, ವಕ್ಕೋಡಿ ಗೊಲ್ಲರಹಟ್ಟಿಯ ಕಾಡುಗೊಲ್ಲ ಮುಖಂಡರಾದ ಶ್ರೀ ಚಿನ್ನಪ್ಪ ಹಾಗೂ ಹೆಗ್ಗರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರೇವಣ್ಣ ಭಾಗವಹಿಸಲಿದ್ದಾರೆ.
ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀಸಂಸ್ಥಾನ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ‘ನೃತ್ಯಾರ್ಪಣಂ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 14-08-2023ರಂದು ಕಾಸರಗೋಡಿನ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ. ಸನಾತನ ನಾಟ್ಯಾಲಯದ ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ವಿದ್ಯಾರ್ಥಿಗಳಾದ ನಾಟ್ಯವಿದುಷಿ ವಾಣಿಶ್ರೀ ವಿ., ಕುಮಾರಿ ದೀಪಶ್ರೀ ವಿ. ಹಾಗೂ ಕುಮಾರಿ ನಿಧಿಶ್ರೀ ನಿ. ಇವರು ಕಾರ್ಯಕ್ರಮ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಸಹಕರಿಸುವ ಕಲಾವಿದರು ನಟುವಾಂಗದಲ್ಲಿ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್, ಹಾಡುಗಾರಿಕೆಯಲ್ಲಿ ಕುಮಾರಿ ವಸುಧಾಶ್ರೀ ಕೋಳಿಕ್ಕಜೆ, ಮೃದಂಗ ವಾದನದಲ್ಲಿ ವಿದ್ವಾನ್ ರಾಜನ್ ಕಣ್ಣೂರು, ಕೊಳಲುವಾದನದಲ್ಲಿ ಮಾಸ್ಟರ್ ಅಭಿಷೇಕ್ ಮತ್ತು ನೃತ್ಯ ನಿರೂಪಣೆ ನಾಟ್ಯವಿದುಷಿ, ಶ್ರೀಲತಾ ನಾಗರಾಜ್ ಇವರಿಂದ.
ಬೆಂಗಳೂರು : ಲೇಖಕ ಆಂಟನ್ ಚೇಖೋವ್ ಇವರ ‘ವಾರ್ಡ್ ನಂ.06’ ನಾಟಕದ ಕನ್ನಡ ಅನುವಾದ ‘ಕತ್ತಲೆ ದಾರಿ ದೂರ’ ನಾಟಕವನ್ನು ಬ್ಯಾಂಗ್ಲೋರ್ ಪ್ಲೇಯರ್ಸ್ ದಿನಾಂಕ 19-08-2023ರಂದು ಬೆಂಗಳೂರಿನ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ಪ್ರಸ್ತುತಪಡಿಸಲಿದ್ದಾರೆ. ಡಿ.ಆರ್.ನಾಗರಾಜ್ ಕನ್ನಡಕ್ಕೆ ಅನುವಾದಿಸಿರುವ ಈ ನಾಟಕ ನಿರ್ದೇಶನ ಶ್ರೀ ನಿಧಿ ಬಿ.ಎಸ್ ಅವರದ್ದು. ನಾಟಕದ ಬಗ್ಗೆ : ಕತ್ತೆಲೆ ದಾರಿ ದೂರ ಕನ್ನಡ ನಾಟಕರಂಗದಲ್ಲಿ ಅದರದ್ದೆ ಆದ ದೂರದ ದಾರಿಯನ್ನು ಹುಡುಕಿಕೊಂಡು ತನ್ನದೇ ಛಾಪನ್ನು ಮೂಡಿಸಿದೆ. ಈ ಕೃತಿಯು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮನಸುಗಳ ನಡುವೆ ನಡೆಯುವ ಒಂದು ಕಥೆ. ಭ್ರಷ್ಟ ಅಧಿಕಾರಿಯು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವುದು ಈ ನಾಟಕದಲ್ಲಿ ಸ್ಪಷ್ಟವಾಗುತ್ತದೆ. ಆಂಟನ್ ಚೇಖೋವ್ ಪ್ರಕಾರ ‘ಒಬ್ಬ ಪಾತ್ರಧಾರಿಯ ಕರ್ತವ್ಯ ಪ್ರಶ್ನೆಗಳನ್ನು ಹುಡುಕುವುದೇ ಹೊರತು ಉತ್ತರಗಳನ್ನು ಹುಡುಕುವುದಲ್ಲ. ಡಿ.ಆರ್.ನಾಗರಾಜ್ರವರು ಓದುಗರನ್ನು ಕತ್ತಲೆ ದಾರಿ ದೂರ ಮೂಲಕ ಸಂಕೀರ್ಣ ಪ್ರಶ್ನೆಗಳ ಬಳಿ ಕರೆದೊಯ್ಯುತ್ತಾರೆ. ಇದರಲ್ಲಿ ಬರುವ ಮುಖ್ಯ ಪಾತ್ರಧಾರಿಗಳು ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಾಂಕೇತಿಕ ಪ್ರತಿನಿಧಿಗಳಾಗಿ ಅವ್ಯವಸ್ಥೆಯ ವಿರುದ್ಧ ದನಿ…
ಉಡುಪಿ : ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಅಧಿಕೃತವಾಗಿ ದಿನಾಂಕ 09-08-2023ರಂದು ಉದ್ಘಾಟನೆಗೊಂಡಿತು. ಸಂಸ್ಥೆಯ ಅಧ್ಯಕ್ಷರಾದ ಅತೀ ವಂದನೀಯ ವೆಲೇರಿಯನ್ ಮೆಂಡೋನ್ಸ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಡಿಸೋಜಾ ಮತ್ತು ನಿವೃತ್ತ ಶಿಕ್ಷಕಿ ಮಾರ್ಸಲೀನ್ ಶೆರಾ ಉಪಸ್ಥಿತರಿದ್ದರು. ಟ್ರಸ್ಟಿನ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟಿನ ವಿಶ್ವಸ್ಥರಾದ ಶ್ರೀಮತಿ ಮೀನಾ ಲಕ್ಷಣೀ ಅಡ್ಯಂತಾಯ ಅಭ್ಯಾಗತರಾಗಿ ಪಾಲುಗೊಂಡರು. ಗುರುಗಳಾಗಿ ಕುಮಾರಿ ಪ್ರಣಮ್ಯ ತಂತ್ರಿ ವಿದ್ಯಾರ್ಥಿಗಳನ್ನು ತರಬೇತಿಗೊಳಿಸುತ್ತಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟಿನಲ್ಲಿ ಮೂವರು ಹುಡುಗಿಯರು ತಲಾ ಎರಡು ಶಾಲೆಗಳಲ್ಲಿ ಗುರುಗಳಾಗಿ ಕಾರ್ಯನಿರ್ವಹಿಸುತ್ತಿರುವುದು ನಾವೆಲ್ಲ ಅಭಿಮಾನ ಪಡುವ ಸಂಗತಿಯಾಗಿದೆ.
ಮಂಗಳೂರು : ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಮೈಸೂರಿನ ಅಂಬಾರಿ ಪ್ರಕಾಶನ ‘ಯಕ್ಷ ದೀವಟಿಗೆ’ ಕೃತಿಯ ಲೋಕಾರ್ಪಣೆಯು ದಿನಾಂಕ 14-08-2023ರ ಸಂಜೆ 5.30ಕ್ಕೆ ನಡೆಯಲಿದೆ. ಹೆಚ್. ಸುಜಯೀಂದ್ರ ಹಂದೆಯವರ ಯಕ್ಷ ಪ್ರಬಂಧಗಳ ಸಂಕಲನದ ಅನಾವರಣ ಕಾರ್ಯಕ್ರಮವು ಮಂಗಳೂರಿನ ಎಂ.ಜಿ. ರಸ್ತೆ ಯಲ್ಲಿರುವ ಕಲ್ಕೂರ ಪ್ರತಿಷ್ಠಾನದ ಕಚೇರಿಯಲ್ಲಿ ನಡೆಯಲಿದೆ. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಕ್ಷಗಾನ ವಿದ್ವಾಂಸರಾದ ಡಾ.ಎಂ.ಪ್ರಭಾಕರ್ ಜೋಶಿಯವರು ಕೃತಿಯನ್ನು ಬಿಡುಗಡೆ ಗೊಳಿಸಲಿದ್ದಾರೆ.
ವಿಟ್ಲ : ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗದವರ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಟ್ಲ ಬಸವನಗುಡಿ, ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ಸಭಾಂಗಣದಲ್ಲಿ ದಿನಾಂಕ 13-08-2023ರಂದು ಮಧ್ಯಾಹ್ನ ಗಂಟೆ 1.30ರಿಂದ ‘ವಿಟ್ಲ ಯಕ್ಷೋತ್ಸವ’ ನಡೆಯಲಿದೆ. ಮಧ್ಯಾಹ್ನ ಗಂಟೆ 1.30ಕ್ಕೆ ತೆಂಕು ಬಡಗು ತಿಟ್ಟಿನ ದ್ವಂದ್ವ ಭಾಗವತಿಕೆಯೊಂದಿಗೆ ವಾಚಿಕೋತ್ಸವ, ಸಂಜೆ ಸಭಾ ಕಾರ್ಯಕ್ರಮದಲ್ಲಿ ಉತ್ಸವ ಗೌರವಾರ್ಪಣೆ, ಸಂಜೆ ಗಂಟೆ 7.30ರಿಂದ ತುಳು ಕಲೋತ್ಸವದಲ್ಲಿ ಯಕ್ಷಲೋಕದಲ್ಲಿ ಐತಿಹಾಸಿಕ ದಾಖಲೆ ಮಾಡಿದ ಅನಂತ ರಾಮ ಬಂಗಾಡಿ ವಿರಚಿತ ‘ಕಾಡಮಲ್ಲಿಗೆ’ ಯಕ್ಷಗಾನ ಬಯಲಾಟ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣದಾಸ ಅಸ್ರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್ ಯು., ಅಶೋಕ್ ಕುಮಾರ್ ರೈ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆ ಮುಖ್ಯಸ್ಥ ಡಾ.ಎಂ. ಮೋಹನ ಆಳ್ವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರಾದ…