Author: roovari

ಉಡುಪಿ : ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಮೇಳ ಇವರಿಂದ ಶ್ರೀ ರಾಮಕೃಷ್ಣ ಯಕ್ಷಗಾನ ಕಲಾ ಮಂಡಳಿ ಕುತ್ಪಾಡಿ ಇದರ ಸಹಾಯಾರ್ಥವಾಗಿ ದಿನಾಂಕ 13-08-2023 ರವಿವಾರದಂದು ಯಕ್ಷಗಾನ ಪ್ರದರ್ಶನ ನಡೆಯಲಿದೆ. ದೇವದಾಸ್ ಈಶ್ವರಮಂಗಲ ವಿರಚಿತ ಹಾಗೂ ಬೆಳ್ಳಿಹಬ್ಬದ ವರ್ಷಾಚರಣೆಯಲ್ಲಿರುವ ಅಪರೂಪದ ‘ಪವಿತ್ರ ಪದ್ಮಿನಿ’ ಎಂಬ ಪ್ರಸಂಗವು ಮಧ್ಯಾಹ್ನ 2.30ಕ್ಕೆ ಉಡುಪಿಯ ಅಜ್ಜರಕಾಡು ಪುರಭವನದ ವೇದಿಕೆಯಲ್ಲಿ ನಡೆಯಲಿದೆ. ರಂಗದ ವಿಶೇಷತೆ: 25 ವರ್ಷಗಳ ನಂತರ ಮತ್ತೊಮ್ಮೆ ಪೆರ್ಡೂರು ರಂಗದಲ್ಲಿ “ಪವಿತ್ರ ಪದ್ಮಿನಿ”. ಮರುಕಳಿಸಿದ ‘ಜನ್ಸಾಲೆ, ಕಡತೋಕ ಮತ್ತು ಮಲ್ಯ’ ಜೋಡಿಯ ಮೋಡಿ. ‘ಬಾಳ್ಕಲ್, ಬಿದ್ಕಲ್ ಕಟ್ಟೆ ಮತ್ತು ಮುಂಡಾಡಿ’ ಇವರ ಹಿಮ್ಮೇಳದ ರಸದೌತಣ. ಯಕ್ಷ ಸಿಂಹಸ್ವರ ಬಿರುದಾಂಕಿತ ಥಂಡಿಮನೆಯವರ ಗತ್ತುಗಾಂಭಿರ್ಯದ ಕಮಲತೇಜ. ಆದಿತ್ಯ ಮತ್ತು ಶಶಾಂಕ ಎಂಬ ಕಥಾನಾಯಕರಾಗಿ ರಂಗದ ರಂಗನ್ನು ಹೆಚ್ಚಿಸುವ ‘ಕಡಬಾಳ್ ಮತ್ತು ಕಾ‌.ಚಿಟ್ಟಾಣಿ’. ತೊಂಬಟ್ಟು ಮತ್ತು ಬೇರೊಳ್ಳಿ’ ‘ವೈಭವ ಮತ್ತು ಅಮೋಘ’ ಎಂಬ ಖಳನಾಯಕ ಜೋಡಿಯಾಗಿ ಮಿಂಚಿನ ಸಂಚಾರ.‌ ಪವಿತ್ರ ಪದ್ಮಿನಿಯಾಗಿ ಯಲಗುಪ್ಪ ಹಾಗೂ ಉಪ್ಪೂರು ಮೋಡಿ…

Read More

ಉಡುಪಿ: ಜಿ.ಪಂ ಉಡುಪಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿ, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ ಹಾಗೂ ಜಲಜೀವನ ಮಿಷನ್ ಯೋಜನೆಯಡಿ ಶಶಿಚಂದ್ರ ಯಕ್ಷಗಾನ ಬಳಗ ಉಡುಪಿ ಇವರ ಸಹಯೋಗದಲ್ಲಿ ‘ಮನೆ ಮನೆಗೆ ಗಂಗೆ’ ಎನ್ನುವ ಯಕ್ಷಗಾನ ಪ್ರದರ್ಶನ ದಿನಾಂಕ 20-07-2023 ರಿಂದ 07-08-2023ರ ವರಿಗೆ ಉಡುಪಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಯಿತು. ದಿನಾಂಕ 20-07-2023ರಂದು ಕೋಟದ ಕೋಟತಟ್ಟು ಗ್ರಾ.ಪಂ ವ್ಯಾಪ್ತಿಯ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡು ಈ ಜಾಗೃತಿ ಯಕ್ಷಗಾನ ಪ್ರದರ್ಶನವು ದಿನಾಂಕ 07-08-2023ರಂದು ಉಡುಪಿಯ 80 ಬಡಗಬೆಟ್ಟು ರಾಜೀವಿ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಸಮಾರೂಪ ಗೊಂಡಿತು. ಪ್ರೊ.ಪವನ್ ಕಿರಣ್ಕೆರೆ ವಿರಚಿತ ಈ ಪ್ರಸಂಗದ ಪ್ರದರ್ಶನದಲ್ಲಿ ವಸುಂಧರನಾಗಿ ಪಂಜು ಪೂಜಾರಿ ಕಮಲಶಿಲೆ, ಗಂಗೆಯಾಗಿ ಸುಧೀರ್ ಉಪ್ಪೂರು ಹಾಗೂ ರಂಗನಾಗಿ ಕಾರ್ತಿಕ್ ಪಾಂಡೇಶ್ವರ ಅಭಿನಯಿಸಿದ್ದು, ಹಿಮ್ಮೇಳದಲ್ಲಿ ಭಾಗವತರಾಗಿ ಚಂದ್ರಕಾಂತ ರಾವ್ ಮೂಡುಬೆಳ್ಳೆ ಹಾಗೂ ಸುದೀಪ್ ಚಂದ್ರ ಶೆಟ್ಟಿ ನೇಗದ್ದೆ, ಮದ್ದಳೆ ವಾದಕರಾಗಿ ಶಶಿಕುಮಾರ್ ಆಚಾರ್ಯ ತೆಂಕನಿಡಿಯೂರು…

Read More

ಮಂಗಳೂರು : ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತು ಮಂಗಳೂರು ಮತ್ತು ಶಾರದಾ ವಿದ್ಯಾ ಸಂಸ್ಥೆ ಮಂಗಳೂರು ಇದರ ಸಹಯೋಗದೊಂದಿಗೆ ‘ಬಾಲ ನೃತ್ಯ ಪ್ರತಿಭೋತ್ಸವ -2023’ ಕಾರ್ಯಕ್ರಮವು ದಿನಾಂಕ 13-08-2023 ಆದಿತ್ಯವಾರದಂದು ಸಂಜೆ ಘಂಟೆ 4ಕ್ಕೆ ಮಂಗಳೂರಿನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಶಾರದಾ ವಿದ್ಯಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ.ಪುರಾಣಿಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕಾರ್ಯಕ್ರಮವು ಪರಿಷತ್ತಿನ ಅಧ್ಯಕ್ಷರಾದ ವಿದ್ವಾನ್ ಶ್ರೀ ಯು.ಕೆ. ಪ್ರವೀಣ್ ಇವರ ಸಭಾಧ್ಯಕ್ಷತೆಯಲ್ಲಿ ನಡೆಯಲಿದ್ದು, ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿರುವರು. ಮಂಗಳೂರಿನ ಹದಿನೈದು ಬಾಲಪ್ರತಿಭೆಗಳು ನೃತ್ಯಪ್ರದರ್ಶನ ನೀಡಲಿರುವರು. ಈ ಕಾರ್ಯಕ್ರಮಕ್ಕೆ ನೃತ್ಯಕಲಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮೆಲ್ಲರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ತಿಂಗಳ ಸರಣಿ‌ ತಾಳಮದ್ದಳೆ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಡೆಯಿತು. ಕ್ಷೇತ್ರದ ರಾಜಗೋಪುರದಲ್ಲಿ ‘ಗಂಗಾ ಸಾರಥ್ಯ-ಅಂಬಾ ಶಪಥ’ ಎಂಬ ಪ್ರಸಂಗದ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 07-08-2023ರಂದು ಸಂಜೆ ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಆದಿತ್ಯ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ ಪರುಶುರಾಮ (ಪೂಕಳ ಲಕ್ಷ್ಮೀನಾರಾಯಣ ಭಟ್), ಭೀಷ್ಮ (ಪಕಳಕುಂಜ ಶ್ಯಾಮ್ ಭಟ್), ಗಂಗೆ (ಕುಂಬ್ಳೆ ಶ್ರೀಧರ್ ರಾವ್), ಅಕೃತವೃಣ (ಭಾಸ್ಕರ್ ಬಾರ್ಯ) ಮತ್ತು ಅಂಬೆ (ಶುಭಾ ಜೆ.ಸಿ. ಅಡಿಗ) ಸಹಕರಿಸಿದರು.

Read More

ಬೆಂಗಳೂರು : ಬೆಂಗಳೂರಿನ ಕರ್ನಾಟಕ ಗಮಕ ಕಲಾ ಪರಿಷತ್ತು ಮತ್ತು ಶಂಪಾ ಪ್ರತಿಷ್ಠಾನ (ರಿ)ದ ವತಿಯಿಂದ ಬೆಂಗಳೂರಿನ ವಿಠ್ಠಲ್ ನಗರ, ಇಸ್ರೋ ಲೇ ಔಟ್ ಸಮೀಪ, 1ನೇ ಮುಖ್ಯ ರಸ್ತೆ, 88/ಎ, ಶ್ರೀ ಸದನದಲ್ಲಿ ದಿನಾಂಕ 16-08-2023ರಂದು ‘ದಾನ ಶೂರ ಕರ್ಣ’ ಎಂಬ ವಿಷಯದಲ್ಲಿ ‘ಗಮಕ ವಾಚನ ಮತ್ತು ವ್ಯಾಖ್ಯಾನ’ ನಡೆಯಲಿದೆ. ನಿವೃತ್ತ ಪ್ರಾಂಶುಪಾಲರಾದ ಪ್ರೊ.ಪಿ.ಎನ್.ಮೂಡಿತ್ತಾಯ, ಚಿತ್ರ ಕಲಾವಿದರಾದ ಶ್ರೀ ಟಿ.ಎನ್.ಶ್ರೀನಿವಾಸಮೂರ್ತಿ ಮತ್ತು ವೈದ್ಯರಾದ ಡಾ.ಸುರೇಶ್ ಎಚ್.ಎಸ್. ಹಾಗೂ ಡಾ.ಶರತ್ ಬಿ.ಎನ್. ಇವರ ಗೌರವ ಉಪಸ್ಥಿತಿಯಲ್ಲಿ ಸುಪ್ರಸಿದ್ಧ ಗಮಕ ಕಲಾವಿದರಾದ ಶ್ರೀಮತಿ ಸಂಧ್ಯಾ ರಮೇಶ್ ವಾಚನ ಹಾಗೂ ಕರ್ನಾಟಕ ಕಲಾಶ್ರೀ ಶ್ರೀಮತಿ ಗಂಗಮ್ಮ ಕೇಶವಮೂರ್ತಿಯವರ ವ್ಯಾಖ್ಯಾನದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಶಂಪಾ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸದಸ್ಯರು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

Read More

ಮಂಗಳೂರು : ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಕನ್ನಡ ಮತ್ತು ಸಂಸ್ಕತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ 77ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಅತಿಥಿ ಕಲಾವಿದರಿಂದ ‘ದೇಶಭಕ್ತಿ ಗೀತೆ ನೃತ್ಯ – ಗಾಯನ’ ಕಾರ್ಯಕ್ರಮವು ದಿನಾಂಕ 15-08-2023ರಂದು ಸಂಜೆ 3-30ರಿಂದ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸೌತ್‌ ಕೆನರಾ ದ್ರಾವಿಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ ಸುಧಾಕರ ರಾವ್‌ ಪೇಜಾವರ ಇವರು ನಡೆಸಲಿದ್ದು, ವಿಂಗ್ ಕಮಾಂಡರ್ ಆಗಿದ್ದ ಶ್ರೀ ದೇವ ರಾವ್ ಬೆಳ್ಳೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ತಮ್ಮ ಆಗಮನವನ್ನು ಬಯಸುವ ನೃತ್ಯ ಗುರುಗಳಾದ ವಿದ್ವಾನ್ ಯು.ಕೆ. ಪ್ರವೀಣ್, ಸಂಗೀತ ಗುರುಗಳಾದ ವಿದುಷಿ ಉಷಾ ಪ್ರವೀಣ್ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಪೋಷಕರು.

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ʻನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿʼ, ʻಪಂಕಜಶ್ರೀ ಸಾಹಿತ್ಯ ದತ್ತಿʼ, ʻಸತ್ಯವತಿ ವಿಜಯರಾಘವ ಚಾರಿಟೇಬಲ್‌ ಟ್ರಸ್ಟ್‌ ಧರ್ಮದರ್ಶಿಗಳ ದತ್ತಿʼ ಹಾಗೂ ʻಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ದತ್ತಿʼ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 06-08-2023ರಂದು ಪರಿಷತ್ತಿನ ಶ್ರೀ ಕೃಷ್ಣರಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ನಿರಂಜನ ವಾನಳ್ಳಿ ಅವರು “ದೇಶ ಕಟ್ಟುವಲ್ಲಿ ನಾಯಕರ ಪಾತ್ರ ಮುಖ್ಯವಲ್ಲ, ಬದಲಿಗೆ ನೆಲ ಮೂಲ ಸಂಸ್ಕೃತಿಯನ್ನು ಕಾಯುವ ಸಾಮಾನ್ಯ ಜನರ ಪಾತ್ರ ಮುಖ್ಯವಾದದು. ಆದರೆ ಸಾಮಾನ್ಯ ಜನರ ಕೊಡುಗೆಗಳನ್ನು ದಾಖಲಿಸುವವರು ಮರೆತು ಬಿಟ್ಟಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸದ್ದಿಲ್ಲದೇ ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವವರನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕ್ರಾಂತಿಕಾರಕ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಮಾಡುತ್ತದೆ.” ಎಂದು ಹೆಮ್ಮೆ ವ್ಯಕ್ತ ಪಡಿಸಿದರು. ಪ್ರಶಸ್ತಿ ಪ್ರದಾನ ಮಾಡಿ…

Read More

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಸ್ಕ್ರತಿ ಪ್ರತಿಷ್ಠಾನ ಬೆಂಗಳೂರು ಆರ್ಟ್ ಪೌಂಡೇಶನ್ ಮತ್ತು ಮಿಂಚುಳ್ಳಿ ಸಾಹಿತ್ಯ ಪತ್ರಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಕಾಡುವ ಕಿರಂ ಕಾರ್ಯಕ್ರಮವು ದಿನಾಂಕ 07-08-2023ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಅಗ್ರಹಾರ ಕೃಷ್ಣಮೂರ್ತಿಯವರು “ಕೀ.ರಂ ನಿಜವಾದ ನಾಡೋಜರಾಗಿದ್ದರು. ಅವರು ಸಾಹಿತ್ಯದ ಜೊತೆ ಇತರ ಶಿಸ್ತುಗಳನ್ನು ಮೇಳೈಸಿ ಆನಂದಿಸುವುದನ್ನು ವಿದ್ಯಾರ್ಥಿಗಳಿಗೆ ಹೇಳಿ ಕೊಡುತ್ತಿದ್ದರು” ಎಂದರು. ಹಿರಿಯ ಸಾಹಿತಿ ಪ್ರೋ.ಎಚ್.ಎಸ್.ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. 2023ನೇ ಸಾಲಿನ ಕಿರಂ ನಾಗರಾಜ ಪ್ರಶಸ್ತಿಯನ್ನು ಹಿರಿಯ ವಿಚಾರವಾದಿಗಳಾದ ಪ್ರೊ. ನರೇಂದ್ರ ನಾಯಕ್, ಹಿರಿಯ ಚಿತ್ರಕಲಾವಿದರಾದ ಸಿ.ಎಸ್‌.ನಿರ್ಮಲಕುಮಾರಿ, ಹಿರಿಯ ಸಾಹಿತಿಗಳಾದ ಸುಬ್ಬು ಹೊಲೆಯಾರ್, ಆರ್‍.ಜಿ.ಹಳ್ಳಿ ನಾಗರಾಜ, ನಾಗತಿಹಳ್ಳಿ ರಮೇಶ್ ಮತ್ತು ಸಾಹಿತ್ಯ ಪರಿಚಾರಕರಾದ ಡಾ.ನಾಗೇಶ್ ದಸೂಡಿ ಇವರುಗಳಿಗೆ ಪ್ರದಾನ ಮಾಡಲಾಯಿತು. ಶಂಕರ ಸಿಹಿಮೊಗೆ ಮತ್ತು ಸೂರ್ಯಕೀರ್ತಿ ಸಂಪಾದಕತ್ವದ ‘ಕಿ.ರಂ. ಹೊಸ ಕವಿತೆ-2023’ ಮತ್ತು ಇಂಗ್ಲಿಷ್ ಕೃತಿಯೊಂದನ್ನು ಹಿರಿಯ ಚಿತ್ರ ಕಲಾವಿದರಾದ  ಎಂ.ಎಸ್.ಮೂರ್ತಿ ಬಿಡುಗಡೆಗೊಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್,…

Read More

ಬೆಂಗಳೂರು :  ವಲಸಿಗರ ಸ್ವರ್ಗದಂತಿರುವ  ಬೆಂಗಳೂರು ಮಹಾನಗರಕ್ಕೆ ಕರಾವಳಿ ಹಾಗೂ ಮಲೆನಾಡಿನಿಂದ ಬಂದ ತರುಣ ಜನಾಂಗದವರು ಯಕ್ಷಗಾನ ಕಲೆಯ ಮೇಲೆ ತಮಗಿರುವ ಅತೀವ ಪ್ರೀತಿಯನ್ನು ಬಿಡಲಾರದೆ, ಹವ್ಯಾಸಿ ಸಂಘಗಳನ್ನು ಕಟ್ಟಿಕೊಂಡು, ಯಕ್ಷಗಾನವನ್ನು ಗುರುಮುಖೇನ ಕಲಿತು ಪ್ರದರ್ಶನ ಮಾಡುತ್ತಿರುವುದು ಇತ್ತೀಚಿನ ಆಶಾದಾಯಕ ಬೆಳವಣಿಗೆಯಾಗಿದೆ.  ಹೀಗೆ  ಕೆಲವು ಉತ್ಸಾಹಿ ತರುಣರು  ಹದಿನಾಲ್ಕು ವರ್ಷಗಳ ಹಿಂದೆ ಯಕ್ಷ ಸಿಂಚನ ಟ್ರಸ್ಟ್ ಎಂಬ  ಸಂಸ್ಥೆಯನ್ನು ಕಟ್ಟಿ, ಯಕ್ಷಗಾನಕ್ಕೆ ಸಂಬಂಧಿಸಿದಂತೆ  ಅನೇಕ  ಕಾರ್ಯಕ್ರಮಗಳನ್ನು ಹಾಕಿಕೊಂಡು,  ತಮ್ಮ ವಿಶೇಷತೆಯನ್ನು ಮೆರೆಯುತ್ತಿದ್ದಾರೆ.  ಕೇವಲ ಪ್ರಶಸ್ತಿ ಪ್ರದಾನ , ಯಕ್ಷಗಾನ ಪ್ರದರ್ಶನಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ,  ಪ್ರಸಂಗ ರಚನಾ ಸ್ಪರ್ಧೆ, ಪ್ರಸಂಗ ರಚನಾ ತರಬೇತಿ ಕಮ್ಮಟ, ಯಕ್ಷ ರಸಪ್ರಶ್ನೆ ಕಾರ್ಯಕ್ರಮ, ಸಾರ್ಥಕ ಸಾಧಕ ಪ್ರಶಸ್ತಿ ವಿತರಣೆ ಮುಂತಾದ ವಿನೂತನ ಕಾರ್ಯಕ್ರಮಗಳನ್ನು ನಡೆಸುವ ಮೂಲ ತಮ್ಮ ಅಸ್ತಿತ್ವವನ್ನು ಬೆಂಗಳೂರಿನಲ್ಲಿ ಯಶಸ್ವಿಯಾಗಿ  ಮೂಡಿಸಿದ್ದಾರೆ. ಇತ್ತೀಚೆಗೆ ಅವರ 14ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಸಾರ್ಥಕ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ಸಂಪನ್ನವಾಗಿತ್ತು. ದಿನಾಂಕ 6-8-2023ರಂದು ಬೆಂಗಳೂರಿನ ಉದಯಭಾನು…

Read More

ಅಂಗವಿಕಲತೆಯಿದ್ದರೂ ಕೂಡ ಸ್ವಾಭಿಮಾನದ ಬದುಕಿಗಾಗಿ ಕಲೆಯನ್ನೇ ಜೀವನೋಪಾಯವಾಗಿಸಿಕೊಂಡು ನಡೆಯಲು ಅಸಾಧ್ಯವಾದ ಕಾಲುಗಳ ಮೇಲೆ ಮದ್ದಳೆಯನ್ನು ಇಟ್ಟು ಬದುಕು ಕಟ್ಟಿಕೊಂಡ ವಿಜಯ ನಾಯ್ಕರ ಬದುಕಿನ ಹೋರಾಟ ಬಹು ರೋಚಕ. ಉಡುಪಿಯ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಆನಂದ ನಾಯ್ಕ ಹಾಗೂ ಬೇಬಿ ಇವರ ಮಗನಾಗಿ 12.04.1985ರಂದು ಜನನ. ಪ್ರಸ್ತುತ ಹೆಗ್ಗುಂಜೆ ಗ್ರಾಮದ ನೀರ್ಜೆಡ್ಡುನಲ್ಲಿ ವಾಸ. 10ನೇ ತರಗತಿವರೆಗೆ ವಿದ್ಯಾಭ್ಯಾಸ. ಯಕ್ಷಗಾನದಲ್ಲಿ ಇರುವ ಆಸಕ್ತಿಯೇ ಇವರು ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆ. ಎನ್.ಜಿ ಹೆಗಡೆ ಇವರ ಯಕ್ಷಗಾನ ಗುರುಗಳು. ಕೆ.ಪಿ ಹೆಗಡೆ, ಗೋಪಾಲ ಗಾಣಿಗ ಹೆರಂಜಾಲು, ನಾಗೇಶ್ ಕುಲಾಲ್, ರಾಘವೇಂದ್ರ ಮುದ್ದುಮನೆ ನೆಚ್ಚಿನ ಭಾಗವತರು. ರಾಮಕೃಷ್ಣ ಮಂದಾರ್ತಿ, ಶಿವಾನಂದ ಕೋಟ ಇವರ ನೆಚ್ಚಿನ ಚೆಂಡೆ ವಾದಕರು. ಎನ್.ಜಿ ಹೆಗಡೆ, ಪರಮೇಶ್ವರ ಭಂಡಾರಿ, ಸುನೀಲ್ ಭಂಡಾರಿ ನೆಚ್ಚಿನ ಮದ್ದಲೆ ವಾದಕರು. ದೇವಿ ಮಹಾತ್ಮೆ, ಚಂದ್ರಹಾಸ ಚರಿತ್ರೆ, ಶನೀಶ್ವರ ಮಹಾತ್ಮೆ ಹಾಗೂ ಎಲ್ಲಾ ಪೌರಾಣಿಕ ಪ್ರಸಂಗಗಳು ಇವರ ನೆಚ್ಚಿನ ಪ್ರಸಂಗಗಳು. ಯಕ್ಷಗಾನದ ಇಂದಿನ ಸ್ಥಿತಿಗತಿ ಹಾಗೂ ಪ್ರೇಕ್ಷಕರ ಬಗ್ಗೆ…

Read More