Author: roovari

ಮುಂಡ್ಕೂರು : ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ (83) ಇವರು ದಿನಾಂಕ 21 ಸೆಪ್ಟೆಂಬರ್ 2024ರಂದು ನಿಧನ ಹೊಂದಿದರು. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು. ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಂಡ ಇವರ ಯಕ್ಷಪಯಣ ಮುಂದೆ ಹವ್ಯಾಸಿ ಸಂಘಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.

Read More

ಜುಲೈ 15, 1932ರಂದು ಜನಿಸಿದ ಮನೋರಮ ಇವರು ಪರಮೇಶ್ವರ ಶಾಸ್ತ್ರಿ ಹಾಗೂ ಸತ್ಯಭಾಮ ದಂಪತಿಯ ಪ್ರೀತಿಯ ಮಗಳು. ಮುಳಿಯ ಮಹಾಬಲ ಭಟ್ಟರ ಪತ್ನಿಯಾಗಿ, ಪಂಡಿತ ಪರಂಪರೆಯ ಮುಳಿಯ ತಿಮ್ಮಪ್ಪಯ್ಯನವರ ಹಿರಿಯ ಸೊಸೆಯಾಗಿ ಸಾಹಿತ್ಯದ ಮೇಲಿನ ಒಲವನ್ನು ಜೀವನ ಪ್ರೀತಿಯನ್ನು ನಿರಂತರವಾಗಿ ಕಾಯ್ದುಕೊಂಡವರು. ಅಮೇರಿಕಾದಲ್ಲಿ ನೆಲೆಗೊಂಡ ಜಯರಾಮ್ ಭಟ್ ಮತ್ತು ಬೆಂಗಳೂರಲ್ಲಿರುವ ಖ್ಯಾತ ಛಾಯಾಚಿತ್ರ ತಂತ್ರಜ್ಞ ಮಹೇಶ್ ಎಂ. ಭಟ್‌ ಇವರ ಮಕ್ಕಳು. ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಇವರ ಮನೆಯ ಓರ್ವ ಸೊಸೆ. ಹಿಂದೆ ‘ನವಭಾರತ’ ಪತ್ರಿಕೆಯಲ್ಲಿ ಮತ್ತು ‘ಉದಯವಾಣಿ’ಯಲ್ಲಿ ‘ಶಿಂಗಣ್ಣ’ ಕಾಲಂ ಬರೆಯುತ್ತಿದ್ದ ಕೆ. ರಾಮಕೃಷ್ಣ ಇವರ ಅಣ್ಣ. ಹೆಣ್ಣು ಮಕ್ಕಳು ಶಾಲೆ ಕಲಿಯುವುದು ಅಪರೂಪವಾಗಿದ್ದ ಕಾಲದಲ್ಲಿ ಮನೋರಮಾ ಶಿಕ್ಷಣವನ್ನು ಪಡೆದು ಸ್ವಂತ ವಿಚಾರವಂತಿಕೆಯನ್ನು ಬೆಳೆಸಿಕೊಂಡು ಹೆಣ್ಣು ಮಕ್ಕಳ ಬಗೆಗಿನ ಚಿಂತನೆಯನ್ನು, ಅವರ ಆಯ್ಕೆಯ ಬಗೆಗಿನ ಮಹತ್ವವನ್ನು ಅನುಸರಿಸಿದವರು. ಆಕಾಶವಾಣಿ ಕಲಾವಿದೆಯಾಗಿ ಬಾನುಲಿ ನಾಟಕಗಳಲ್ಲಿ ಪಾತ್ರ ವಹಿಸಿ ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯಿಂದ ನಟಿಯಾಗುವ ಆಯ್ಕೆಯನ್ನು ಬೆಳೆಸಿಕೊಂಡವರು. 90ರ…

Read More

ಸೋಮವಾರಪೇಟೆ : ಅಕ್ಷರ ಸ್ನೇಹಿ ಬಳಗ ಸೋಮವಾರಪೇಟೆ ಇವರ ವತಿಯಿಂದ ಹೇಮಂತ್ ಪಾರೇರಾರವರ ಕಥಾಸಂಕಲನ ‘ಒಲವಿನ ಸವಾರಿ’ ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 24 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಸೋಮವಾರಪೇಟೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಲೇಖಕರಾದ ಶ್ರೀಮತಿ ಪವಿತ್ರಾ ಹೆಚ್.ಆರ್. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿಗಳಾದ ಶ್ರೀಯುತ ಹಾ. ಟಿ. ಜಯ ಪ್ರಕಾಶ್ ಇವರು ಉದ್ಘಾಟನೆ ಮಾಡಲಿರುವರು. ಕೊಡಗು ಜಿಲ್ಲೆ ಕ. ಸಾ. ಪ.ದ ನಿಕಟ ಪೂರ್ವ ಅಧ್ಯಕ್ಷ ರಾದ ಶ್ರೀಯುತ ಲೋಕೇಶ್ ಸಾಗರ್ ಇವರು ಕೃತಿ ಬಿಡುಗಡೆ ಮಾಡಲಿದ್ದು, ಹಿರಿಯ ಸಾಹಿತಿ ಶ್ರೀಮತಿ ಜಲಾ ಕಾಳಪ್ಪ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ.

Read More

ಮಂಗಳೂರು: ಸಂಗೀತ ಪರಿಷತ್ ಮಂಗಳೂರು ಮತ್ತು ಭಾರತೀಯ ವಿದ್ಯಾಭವನ ಮಂಗಳೂರು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಂಗೀತಾಭ್ಯಾಸಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹದಿನೈದು ವರ್ಷಗಳಿಗಿಂತ ಕೆಳಗಿನವರು ಜೂನಿಯ‌ರ್ ವಿಭಾಗದಲ್ಲಿ ಹಾಗೂ ಇಪ್ಪತ್ತು ವರ್ಷಗಳಿಗಿಂತ ಕೆಳಗಿನವರು ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಬಹುದು. ಎರಡೂ ಸ್ಪರ್ಧೆಗಳು 20 ಅಕ್ಟೋಬರ್ 2024ರಂದು ಪಾಂಡೇಶ್ವರದಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲು 15 ಅಕ್ಟೋಬರ್ 2024 ಕೊನೆಯ ದಿನವಾಗಿದ್ದು, ವಿಜೇತರನ್ನು ನಗದು ಒಳಗೊಂಡಿರುವ ಬಹುಮಾನದೊಂದಿಗೆ ಮಂಗಳೂರು ಸಂಗೀತೋತ್ಸವದಲ್ಲಿ ಗೌರವಿಸಲಾಗುವುದು. ಅರ್ಜಿಗಳನ್ನು ಸಂಗೀತ ಪರಿಷತ್ ಮಂಗಳೂರು, 12-1-33, ಸಿಂಧೂರ, ನ್ಯೂಫೀಲ್ಡ್ ರಸ್ತೆ, ಮಹಾಮಾಯ ದೇವಸ್ಥಾನದ ಹತ್ತಿರ, ರಥಬೀದಿ, ಮಂಗಳೂರು-575001 ಅಥವಾ ಇ-ಮೈಲ್ ವಿಳಾಸ [email protected] ಗೆ ಕಳುಹಿಸಿಕೊಡಬೇಕು. ಅರ್ಜಿ ನಮೂನೆ ಸಂಗೀತ ಪರಿಷತ್ ನ ಫೇಸ್ಟುಕ್ ಖಾತೆಯಲ್ಲಿ ಲಭ್ಯವಿದೆ.

Read More

ಕೊಣಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಮಂಜನಾಡಿ ಇವರ ಆಶಯದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 16 ಸೆಪ್ಟೆಂಬರ್ 2024 ರಂದು ಮಂಜನಾಡಿಯ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಂ ಹರೇಕಳ ಮಾತನಾಡಿ “ಯಕ್ಷಗಾನವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಇದರಿಂದ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಾಗುವುದು ಮಾತ್ರವಲ್ಲದೆ, ಮನರಂಜನೆಯೊಂದಿಗೆ ಸಂಸ್ಕಾರವನ್ನು ನೀಡುವ ಶ್ರೀಮಂತ ಕಲೆಯಾಗಿದೆ. ಈ ಕಲೆಯನ್ನು ವಿದ್ಯಾರ್ಥಿಗಳು ಎಳವೆಯಲ್ಲಿಯೇ ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯ.” ಎಂದು ಅಭಿಪ್ರಾಯ ಪಟ್ಟರು. ನಾಟ್ಯ ತರಗತಿಯನ್ನು ಉದ್ಘಾಟಿಸಿದ ಕ್ಷೇತ್ರದ ಅರ್ಚಕರಾದ ರಾಘವೇಂದ್ರ ರಾವ್ ಮಂಜನಾಡಿ ಮಾತನಾಡಿ “ಕರಾವಳಿಯ ಗಂಡು ಕಲೆಯಾದ ಯಕ್ಷಗಾನದ ನಾಟ್ಯ ತರಬೇತಿಯನ್ನು ಹಮ್ಮಿಕೊಳ್ಳಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರು ಸಹಕರಿಸುತ್ತಿರುವುದು ಶ್ಲಾಘನೀಯ, ಇದನ್ನು ಈ ಪರಿಸರದ…

Read More

ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 17ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಜ್ಯೋತಿಷಿ ಗಾಯಕ ಶ್ರೀ ಉದಯಕುಮಾರ್ ಮಾತನಾಡಿ “ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು” ಎಂದು ಅಭಿಪ್ರಾಯಪಟ್ಟರು. ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮ.ನ.ಪಾ. ಮಾಜಿ ಮಹಾ ಪೌರರಾದ ದಿವಾಕರ್ ಪಾಂಡೇಶ್ವರ್, ಮ.ನ.ಪಾ. ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ. ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್,…

Read More

ಮಂಗಳೂರು : ಹಿಂದೂ ವಿದ್ಯಾದಾಯಿನೀ ಸಂಘ (ರಿ) ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು ಸುರತ್ಕಲ್‌ನ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘವು ದಿನಾಂಕ 20 ಸೆಪ್ಟೆಂಬರ್ 2024ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೋಟರಾಕ್ಟ್ ಸಮಿತಿ ಅಧ್ಯಕ್ಷೆ ರೋ. ಯಶೋಮತಿ ಮಾತನಾಡಿ “ದೇಶದ ಭವಿಷ್ಯದ ನಾಯಕರು ರೂಪುಗೊಳ್ಳುವುದರಲ್ಲಿ ವಿದ್ಯಾ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಕೆಗಳಲ್ಲಿ ಶ್ರದ್ಧೆ ಉತ್ಸಾಹಗಳಿಂದ ಭಾಗವಹಿಸುವ ಮೂಲಕ ತಮ್ಮೊಳಗಿನ ಸುಪ್ತ ಪ್ರತಿಭೆಗಳನ್ನು ಅನಾವರಣಗಳಿಸಬೇಕು. ಕಲಾ ಲೋಕದಲ್ಲಿ ಮಿನುಗುತ್ತಿರುವ ಅನೇಕ ಪ್ರತಿಭೆಗಳಿಗೆ ಕಾಲೇಜಿನ ವೇದಿಕೆ ಅವರ ಕಲಾ ಪ್ರಯಾಣಕ್ಕೆ ಮೊದಲ ವೇದಿಕೆಯಾಗಿದ್ದು ಗೋವಿಂದ ದಾಸ ಕಾಲೇಜಿನ ಲಲಿತಕಲಾ ಸಂಘವು ಅನೇಕ ಪ್ರತಿಭಾವಂತ ಕಲಾವಿದರನ್ನು ಕಲಾರಂಗಕ್ಕೆ ನೀಡುತ್ತಿರುವುದು ಶ್ಲಾಘನೀಯ” ಎಂದು ನುಡಿದರು. “ಯುವ ಜೀವನದ ಪ್ರತಿಯೊಂದು ಹೆಜ್ಚೆಯು ಮುಂದಿನ ಬದುಕಿಗೆ ಮಹತ್ವದ್ದಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಎಲ್ಲಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ” ಎಂದು ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.…

Read More

ಮಂಗಳೂರು : ಗಾಂಧಿ ವಿಚಾರ ವೇದಿಕೆ ನೇತೃತ್ವದಲ್ಲಿ ಆರ್. ಜಿ. ಫೌಂಡೇಶನ್ ಮತ್ತು ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಇವರ ಸಹಯೋಗದಲ್ಲಿ ದಿನಾಂಕ 22 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆ ಇವರ ಆತ್ಮಕಥೆ ‘ಚಿಮಣಿ ಬೆಳಕಿನಿಂದ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪುಸ್ತಕ ಬಿಡುಗಡೆಯನ್ನು ಮಾಡಲಿರುವರು. ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ ಜಿ. ಭಿಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಲೇಖಕಿ ಶ್ರೀಮತಿ ಭುವನೇಶ್ವರಿ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಚಿಂತಕ ಅರವಿಂದ ಚೊಕ್ಕಾಡಿಯವರು ಪುಸ್ತಕ ಪರಿಚಯವನ್ನು ಮಾಡಲಿದ್ದಾರೆ. ಸಭಾ ಕಾರ್ಯಕ್ರಮಕ್ಕಿಂತ ಮೊದಲು ಭಾನುಮತಿ ಹೆಗಡೆ, ಸಹನಾ ಭಟ್, ಹುಸೇನ್ ಕಾಟಿಪಳ್ಳ ಇವರಿಂದ ಎಂ.ಜಿ. ಹೆಗಡೆಯವರು ರಚಿಸಿದ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಬ್ಯಾರಿ…

Read More

ಮಂಗಳೂರು : ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಭಾವಗೀತೆಗಳ ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ನಡೆಯಿತು. ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಎಂ. ಇವರು ಸ್ಪರ್ಧೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಇವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ದೇವಿ ಪ್ರಸಾದ್ ಹಾಗೂ ಲಲಿತಕಲಾ ಸಂಘದ ಹಾಗೂ ಸ್ಪರ್ಧೆಗಳ ಸಂಯೋಜಕ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು. ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು. ಜಯಲಕ್ಷ್ಮೀ ಹಾಗೂ…

Read More

ಗೋಣಿಕೊಪ್ಪಲು : ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕ.ಸಾ.ಪ. ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ದಿನಾಂಕ 11 ಅಕ್ಟೋಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಗೋಣಿಕೊಪ್ಪಲು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿಯ ಅಧ್ಯಕ್ಷರಾಗಿರುವ ಕೋಳೆರ ದಯಾ ಚಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ದಿನಾಂಕ 28 ಸೆಪ್ಟೆಂಬರ್ 2024ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು. ಈ ಬಾರಿ ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ…

Read More