Author: roovari

ಬೆಂಗಳೂರು : ಗಿರಿನಗರ ಸಂಗೀತಸಭಾ ಪ್ರಸ್ತುತಪಡಿಸುವ ಕರ್ನಾಟಿಕ್ ಶಾಸ್ತ್ರೀಯ ವೀಣಾ ಕಚೇರಿಯು ದಿನಾಂಕ 12-08-2023ರಂದು ಬೆಂಗಳೂರಿನ ಗಿರಿನಗರದ ಶ್ರೀ ಶಾರದ ದೇವಸ್ಥಾನದ ಮೇಲ್ಭಾಗದಲ್ಲಿರುವ ಶಂಕರ ಸೇವಾ ಟ್ರಸ್ಟಿನಲ್ಲಿ ನಡೆಯಲಿದೆ. ಪದ್ಮಭೂಷಣ ಟಿ.ವಿ ಗೋಪಾಲಕೃಷ್ಣ ಇವರ ಶಿಷ್ಯೆ ಹಾಗೂ ‘ಎ ಶ್ರೇಣಿ’ಯ ವೀಣಾವಾದನ ಕಲಾವಿದೆಯಾದ ಮೈಸೂರಿನ ವಿದುಷಿ ಡಾ.ಸಹನಾ ಎಸ್.ವಿ. ಇವರು ವೀಣಾವಾದನ ನಡೆಸಿ ಕೊಡಲಿದ್ದು, ಮೃದಂಗದಲ್ಲಿ ಗಾನ ಕಲಾಶ್ರೀ ವಿದ್ವಾನ್ ಅನೂರ್ ಅನಂತಕೃಷ್ಣ ಶರ್ಮ ಹಾಗೂ ಘಟಂನಲ್ಲಿ ವಿದ್ವಾನ್ ರಂಗನಾಥ್ ಚಕ್ರವರ್ತಿ ಸಹಕರಿಸಲಿದ್ದಾರೆ.

Read More

ಚೆಟ್ಟಂಗಡ ರವಿ ಸುಬ್ಬಯ್ಯ ಇವರು ಶ್ರೀಮಂಗಲ ನಾಡು ವೆಸ್ಟ್ ನೆಮ್ಮಲೆ ಗ್ರಾಮದ ಸಿ.ಎ. ಸುಬ್ಬಯ್ಯ,ಬೊಳ್ಳಮ್ಮ ದಂಪತಿಯ ಪುತ್ರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಟಿ.ಶೆಟ್ಟಿಗೇರಿ, ಪ್ರೌಢಶಾಲೆ ಹಾಗೂ ಪದವಿಪೂರ್ವ ಶಿಕ್ಷಣವನ್ನು ಶ್ರೀಮಂಗಲ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದಾರೆ. ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ಬಳಿಕ ಉತ್ತರ ಪ್ರದೇಶದ ಬಂದಲ್‌ಕಾಂಡ್ ವಿಶ್ವವಿದ್ಯಾಲಯದ ಮೂಲಕ ಪತ್ರಿಕೋದ್ಯಮ ಪದವಿಯನ್ನು ಪಡೆದವರು. 1994ರಿಂದ ಪೂರ್ಣಾವಧಿ ಪತ್ರಕರ್ತರಾಗಿ ವೃತ್ತಿ ಜೀವನ ಪ್ರಾರಂಭಿಸಿದವರು. ಕಳೆದ 15 ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾಗಿ ಶ್ರೀಮಂಗಲ ವಿಭಾಗದಲ್ಲಿ ಪತ್ರಿಕೆಯ ಬೇಡಿಕೆ ಹೆಚ್ಚಾಗುವರೆ ಕಾರಣಕರ್ತರಾಗಿದ್ದಾರೆ. ಇಪ್ಪತ್ತು ವರ್ಷಗಳಿಂದ ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಸಂದರ್ಶಕ,ಸುದ್ದಿ ಸಮಾಚಾರ ವಾಚಕ, ಕಲಾವಿದರಾಗಿದ್ದರು. ಈಗ್ಗೆ 5 ವರ್ಷಗಳಿಂದ ಉದ್ಘೋಷಕರಾಗಿ ದುಡಿಯುತ್ತಿದ್ದಾರೆ. ಕಾರ್ಯಕ್ರಮ ನಿರೂಪಣೆ, ಕ್ರೀಡಾ ವೀಕ್ಷಕ ವಿವರಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ ಸಂಯೋಜಕರಾಗಿ ಅಪಾರವಾದ ಅನುಭವವನ್ನು ಹೊಂದಿದ್ದಾರೆ. ಕೊಡವ ತಕ್ಕ್ ಎಳ್ತ್‌ಕಾರಡ ಕೂಟದ ಅಧ್ಯಕ್ಷರಾಗಿರುವ ಇವರು ಆ…

Read More

ಉಡುಪಿ : ಶ್ರೀ ಜಲವಳ್ಳಿ ವಿದ್ಯಾಧರ ರಾವ್‌ ಅಭಿಮಾನಿ ಬಳಗ ಉಡುಪಿ ವತಿಯಿಂದ ಅಜ್ಜರಕಾಡು ಪುರಭವನದಲ್ಲಿ ‘ಜಲವಳ್ಳಿ ಯಕ್ಷಯಾನ-30’ ಜಲವಳ್ಳಿಯವರ ಸಾರ್ಥಕ ಮೂರು ದಶಕಗಳ ಯಕ್ಷಗಾನ ಕಲಾಸೇವೆಯ ಸಂಭ್ರಮ, ಸಮ್ಮಾನ ಹಾಗೂ ಯಕ್ಷಗಾನ ಪ್ರದರ್ಶನಗಳ ಕಾರ್ಯಕ್ರಮವು ದಿನಾಂಕ 06-08-2023ರಂದು ನಡೆಯಿತು. ಇದೇ ಸಂದರ್ಭದಲ್ಲಿ ಜಲವಳ್ಳಿ ವಿದ್ಯಾಧರ ರಾವ್‌ ಅವರನ್ನು ಸಮ್ಮಾನಿಸಲಾಯಿತು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶ್ರೀ ಕೆ. ಜಯಪ್ರಕಾಶ ಹೆಗ್ಡೆ ಉದ್ಘಾಟನೆ ನೆರವೇರಿಸಿ “ಯಕ್ಷಗಾನ ಕಲೆ ಸ್ವಚ್ಛ ಕನ್ನಡ ಭಾಷೆ ಉಳಿವಿಗೆ ಪೂರಕವಾಗಿದ್ದು, ಕಲಾವಿದನಿಗೆ ಭಾಷೆಯ ಮೇಲಿದ್ದ ಹಿಡಿತ ಅಸಾಧಾರಣ. ಆಧುನಿಕ ಭರಾಟೆಯಲ್ಲಿ ಯಕ್ಷಗಾನ ಕಲೆ ನಶಿಸಿ ಹೋಗುತ್ತಿದೆ ಎನ್ನುವ ಭೀತಿಯ ಹೊತ್ತಿಗೆ ಯುವ ಸಮುದಾಯ ಹಿರಿಯ ಮಾರ್ಗದರ್ಶನದೊಂದಿಗೆ ಈ ಕಲೆಯನ್ನು ಉಳಿಸಿ, ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ” ಎಂದರು. ಜಲವಳ್ಳಿ ವಿದ್ಯಾಧರ ರಾವ್‌ ಕಲಾ ಸೇವೆಯನ್ನು ಕೊಂಡಾಡಿದರು. ಶಾಸಕರಾದ ಶ್ರೀ ಯಶಪಾಲ ಎ. ಸುವರ್ಣ ಜಲವಳ್ಳಿ ವಿದ್ಯಾಧರ ರಾವ್ ಅವರ ಯಕ್ಷಗಾನ ಕಲಾ ಸೇವೆಯನ್ನು ಶ್ಲಾಘಿಸಿ, ಅಭಿನಂದಿಸಿದರು. ವಿದ್ವಾನ್ ದತ್ತಮೂರ್ತಿ…

Read More

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಪ್ರೊ. ಕೆ.ಪಿ. ರಾವ್ ಅಭಿನಂದನಾ ಸಮಿತಿ ವತಿಯಿಂದ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 06-08-2023ರಂದು ನಡೆದ ವಿದ್ವಾಂಸ ಪ್ರೊ. ಕೆ.ಪಿ. ರಾವ್ ಇವರಿಗೆ ಅಭಿನಂದನ ಕಾರ್ಯಕ್ರಮದಲ್ಲಿ ಅವರನ್ನು ವಾದ್ಯ ಘೋಷದೊಂದಿಗೆ ಹೂ ಹಾರ, ಅಭಿನಂದನೆ ಪತ್ರ, ಬಾಳೆಗೊನೆ, ಎಳನೀರು, ಹೂವು-ಹಣ್ಣು, ಅಕ್ಕಿಮುಡಿ ಸೇರಿದಂತೆ ವಿವಿಧ ಸುವಸ್ತುಗಳನ್ನು ನೀಡಿ ವಿಶಿಷ್ಟ ರೀತಿಯಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಅವರು ಮಾತನಾಡುತ್ತಾ “ದೇವರು ಮತ್ತು ಭಾಷೆ ಕಣ್ಣಿಗೆ ಕಾಣುವುದಿಲ್ಲ. ಹಿಡಿತಕ್ಕೆ ಸಿಗುವುದಿಲ್ಲ. ಆದರೆ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಶಕ್ತಿ ಭಾಷೆ ಮತ್ತು ದೇವರಿಗಿದೆ. ಪ್ರಾಣಿ ಸಂಕುಲ ಭಾಷೆ ಕಲಿಯುವುದು ಮೊದಲಿಗೆ ತಾಯಿಯಿಂದ ಪರಸ್ಪರ ಅರ್ಥಮಾಡಿಕೊಳ್ಳಲು ಇರುವ ಮಾಧ್ಯಮ ಭಾಷೆ. ಎಲ್ಲರನ್ನು ಒಳಗೊಳ್ಳುವಂತಹ ಶಕ್ತಿ ಭಾಷೆಗಿದೆ” ಎಂದು ಹೇಳಿದರು. ಸಾಹಿತಿ ಜಯಂತ ಕಾಯ್ಕಿಣಿ ಮಾತನಾಡಿ, “ತನ್ಮಯತೆ ಇಲ್ಲದ ಚಿಂತನಶೀಲತೆಯಿಂದಲೂ ಏನೂ ಪ್ರಯೋಜನವಿಲ್ಲ. ಅದೇ ರೀತಿ ಚಿಂತನಶೀಲತೆ…

Read More

ಮಂಗಳೂರು : ಅಂತರಾಷ್ಟ್ರೀಯ ಖ್ಯಾತಿಯ ಭರತನಾಟ್ಯ ಕಲಾವಿದರಾದ ಬೆಂಗಳೂರಿನ ಪಾರ್ಶ್ವನಾಥ ಉಪಾಧ್ಯೆ, ಶೃತಿ ಗೋಪಾಲ್ ಮತ್ತು ಆದಿತ್ಯ ಪಿ.ವಿ. ಇವರಿಂದ ‘ನಾಗಮಂಡಲ’ ವಿಶೇಷ ನೃತ್ಯ ರೂಪಕ ಪ್ರಸ್ತುತಿ ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ದಿನಾಂಕ 06-08-2023ರಂದು ನಡೆಯಿತು. ಮಂಗಳೂರಿನ ಸನಾತನ ನಾಟ್ಯಾಲಯ ಮತ್ತು ನೃತ್ಯಾಂಗನ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಎನ್.ಎಂ.ಪಿ.ಎ.ನ ಡೆಪ್ಯುಟಿ ಚೇರ್ಮನ್ ಕೆ.ಜಿ.ನಾಥನ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡಿಜಿಎಂ ಮಹೇಶ್ ಕುಮಾರ್, ಕಲಾ ಪೋಷಕರಾದ ಸತೀಶ್ ಚಂದ್ರ ಭಂಡಾರಿಯವರು ಉದ್ಘಾಟಿಸಿದರು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಶೆಟ್ಟಿ, ಗುರುಗಳಾದ ವಿದುಷಿ ಶಾರದಾಮಣಿ ಶೇಖರ್, ಶ್ರೀಲತಾ ನಾಗರಾಜ್, ನೃತ್ಯಾಂಗನ್ ಸಂಸ್ಥೆಯ ನಿರ್ದೇಶಕಿ ರಾಧಿಕಾ ಶೆಟ್ಟಿ ಉಪಸ್ಥಿತರಿದ್ದರು. ಗಿರೀಶ ಕಾರ್ನಾಡ್ ರಚಿಸಿದ ‘ನಾಗಮಂಡಲ’ ಜಾನಪದ ಕಥೆಯ ತಿರುಳಿನ ಈ ಕತೆಯನ್ನು ಪುಣ್ಯ ಡ್ಯಾನ್ಸ್ ಕಂಪೆನಿ ಕಲಾವಿದರು  ಶಾಸ್ತ್ರೀಯ ನೃತ್ಯಕ್ಕೇ ಅಳವಡಿಸಿ ಪ್ರಸ್ತುತಗೊಳಿಸಿರುವುದು ವಿಭಿನ್ನವಾಗಿತ್ತು. ಇಲ್ಲಿ ಗೀಗಿ ಪದ ಹಾಡುವ ಜನಪದರೇ‌ ನಿರೂಪಕರಾಗಿ, ಕತೆಯನ್ನು ಹೇಳುತ್ತಾ, ಹೊಸದಾಗಿ ಮದುವೆಯಾದ…

Read More

ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಪ್ರಸ್ತುತಪಡಿಸುವ ‘ರಾಮಾಯಣ ಮಾಸಾಚರಣೆ’ ಕಾರ್ಯಕ್ರಮವು ದಿನಾಂಕ 11-08-2023 ರಿಂದ 17-08-2023ರವರೆಗೆ ಕಾಸರಗೋಡಿನ ಸಿರಿಬಾಗಿಲಿನಲ್ಲಿರುವ ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಅಗೋಸ್ತು ತಿಂಗಳ 11ನೇ ತಾರೀಕಿನಿಂದ 17ರವರೆಗೆ ಪ್ರತೀದಿನ ಸಂಜೆ ಘಂಟೆ 7.00ರಿಂದ ಯೋಗಾಚಾರ್ಯ ಶ್ರೀ ಪುಂಡರೀಕಾಕ್ಷ ಬೆಳ್ಳೂರು ಇವರಿಂದ ‘ರಾಮನಾಮ ಜಪಯಜ್ಞ’ ಪ್ರವಚನ ಕಾರ್ಯಕ್ರಮವು ನಡೆಯಲಿರುವುದು. ದಿನಾಂಕ 11-08-2023ರ ಶುಕ್ರವಾರ ಮಧ್ಯಾಹ್ನ ಘಂಟೆ 2.30ರಿಂದ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ‘ಪಟ್ಟಾಭಿಷೇಕ’ ನಡೆಯಲಿದ್ದು, ಸಂಜೆ ಘಂಟೆ 6.00ರಿಂದ ಬೆದ್ರಡ್ಕದ ಶ್ರೀ ಅಯ್ಯಪ್ಪ ಮಹಿಳಾ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದು. 12-08-2023ರ ಶನಿವಾರ ಮಧ್ಯಾಹ್ನ ಘಂಟೆ 2.30ರಿಂದ ಮಂಗಳೂರಿನ ಶ್ರೀಹರಿ ಯಕ್ಷ ಬಳಗ ಇವರಿಂದ ‘ಭರತಾಗಮನ’ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಘಂಟೆ 6.00ರಿಂದ ಬೆದ್ರಡ್ಕದ ಸನಾತನ ಬಾಲಗೋಕುಲ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದು. 13-08-2023ರ ಭಾನುವಾರ ಮಧ್ಯಾಹ್ನ ಘಂಟೆ 2.30ರಿಂದ ಮಂಗಳೂರಿನ ಸರಯೂ ಯಕ್ಷ ಬಾಲ ವೃಂದ ಕೋಡಿಕಲ್ ಇವರಿಂದ ‘ಪಂಚವಟಿ’…

Read More

ಮುಡಿಪು : ಮಂಗಳೂರು ವಿ.ವಿ.ಯ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ  ‘ಯಕ್ಷಗಾನ ಹಿಮ್ಮೇಳ ತರಗತಿ’ಯ ಉದ್ಘಾಟನೆಯು ದಿನಾಂಕ 03-08-2023ರಂದು ನಡೆಯಿತು. ಎಸ್‌.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ  ಡಾ.ಧನಂಜಯ ಕುಂಬ್ಳೆಯವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ “ಯಕ್ಷಗಾನ ಜಗತ್ತಿನ ಸರ್ವಶ್ರೇಷ್ಠ ಕಲೆಯಾಗಿದೆ. ಸಂಪ್ರದಾಯಬದ್ಧವಾಗಿ ಯಕ್ಷಗಾನವನ್ನು ಕಲಿಸಿ ಬೆಳೆಸುವುದರೊಂದಿಗೆ ಯಕ್ಷಗಾನದ ಬೇರುಗಳನ್ನು ಗಟ್ಟಿಗೊಳಿಸುವ ಕಾರ್ಯ ಸಂಘ ಸಂಸ್ಥೆಗಳ ಮೂಲಕ ನಿರಂತರವಾಗಿ ನಡೆಯ ಬೇಕಿದೆ. ಯಕ್ಷಗಾನ ಸಂಗೀತ ಪರಂಪರೆಗೆ ಬಹಳ ದೊಡ್ಡ ಇತಿಹಾಸವಿರುವುದನ್ನು ಶಿವರಾಮ ಕಾರಂತರು ಗುರುತಿಸಿದ್ದಾರೆ. ಯಕ್ಷಗಾನಕ್ಕೆ ಇಂದು ಯುವ ಸಮುದಾಯವೂ ಆಕರ್ಷಿತವಾಗುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ಯಕ್ಷಗಾನಕ್ಕೆ ಸಂಬಂದಿಸಿದ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿದ್ದು, ಇದರೊಂದಿಗೆ ಯಕ್ಷಗಾನ ಹಿಮ್ಮೇಳ ತರಬೇತಿಯನ್ನು ಆರಂಭಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.” ಎಂದು ಹೇಳಿದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಶ್ರೀಪತಿ ಕಲ್ಲೂರಾಯ ಅವರು ಮಾತನಾಡಿ, “ಯಕ್ಷಗಾನವು ನಮ್ಮ ನಾಡಿನ ಹೆಮ್ಮೆಯ ಕಲೆಯಾಗಿದ್ದು, ಈ ಕಲೆಯು ಇಂದು ಸಾವಿರಾರು…

Read More

ಪಣಂಬೂರು : ಮುಂಬಯಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ದ.ಕ ಮತ್ತು ಉಡುಪಿ ಜಿಲ್ಲಾ ಶಾಖೆ ಸುರತ್ಕಲ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ದಿನಾಂಕ 29-07-2023ರಂದು ಸಮಾಜದ ವಿದ್ಯಾರ್ಥಿಗಳಿಗೆ ಇಂದಿನ ವೃತ್ತಿ ಜೀವನದ ಈ ಸ್ಪರ್ಧಾತ್ಮಕ ಹಾಗೂ ತಾಂತ್ರಿಕ ಯುಗದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಜರಗಿಸಲಾಯಿತು. ಮಂಡಳಿ ಸದಸ್ಯರಾದ ಬಾಲಕೃಷ್ಣ ಎನ್‌.ಸುವರ್ಣ ಅವರು ಮಾತನಾಡಿ, “ಇಂದಿನ ಬದುಕಿನಲ್ಲಿ ಯುವ ಪೀಳಿಗೆ ಕಠಿನ ಪರಿಶ್ರಮ ಹಾಗೂ ಆತ್ಮವಿಶ್ವಾಸವನ್ನು ಹೊಂದಿ ಮುನ್ನಡೆಯಬೇಕು. ಅಂತೆಯೇ ಹೆತ್ತವರನ್ನು ಮತ್ತು ಗುರುಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಯತೀಶ್ ಬೈಕಂಪಾಡಿಯವರು ಈ ಶಿಬಿರವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳಿಯ ದ.ಕ ಮತ್ತು ಉಡುಪಿ ಜಿಲ್ಲಾ ಶಾಖಾ ಉಪಾಧ್ಯಕ್ಷರಾದ ಸದಾಶಿವ ಕೋಟ್ಯಾನ್ ಹೆಜಮಾಡಿಯವರು ವಹಿಸಿದ್ದರು. ಎಸ್.ಎಸ್.ಎಲ್.ಸಿ.ಹಾಗೂ ಪಿ.ಯು.ಸಿ.ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ‘ಮೊಗವೀರ’ ಕನ್ನಡ ಮಾಸಿಕದ ಸಂಪಾದಕರಾದ ಅಶೋಕ್…

Read More

ಉಡುಪಿ : ಮಾಹೆ ವಿಶ್ವವಿದ್ಯಾನಿಲಯದ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಸಂಯುಕ್ತ ಆಶ್ರಯದಲ್ಲಿ 2022 ನೇ ಸಾಲಿನ ಸಾಹಿತಿ ತಾಳ್ತಜೆ ಕೇಶವ ಭಟ್ಟ ಅವರ ಹೆಸರಿನಲ್ಲಿ ನೀಡುವ ‘’ಕೇಶವ ಭಟ್ಟ ಪ್ರಶಸ್ತಿ’ಯನ್ನು ಡಾ.ಹರಿಕೃಷ್ಣ ಭರಣ್ಯ ಮತ್ತು 2023ನೇ ಸಾಲಿನ ಪ್ರಶಸ್ತಿಯನ್ನು ಡಾ.ಎನ್.ಆರ್.ನಾಯಕ್ ಹಾಗೂ ಕವಿ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಿನಲ್ಲಿ ನೀಡುವ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಯನ್ನು ಶಂಕರ ಸಿಹಿಮೊಗ್ಗೆಯವರಿಗೆ ದಿನಾಂಕ 05-08-2023ರಂದು ಎಂ.ಜಿ.ಎಂ.ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಎಂ.ಜಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಡಾ.ತಾಳ್ತಜೆ ವಸಂತ ಕುಮಾರ್ ಪ್ರಸ್ತಾವನೆಗೈದರು. ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ರವಿರಾಜ್ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿ ವಿಜೇತ ಕವನ ಸಂಕಲನ ‘‘ಇರುವೆ ಮತ್ತು ಗೋಡೆ’ ಕೃತಿ ಪರಿಚಯ ಮಾಡಿದರು. ಮಣಿಪಾಲ ಕೆ.ಎಂ.ಸಿ.ಡೀನ್ ಡಾ.ಪದ್ಮರಾಜ ಹೆಗ್ಡೆಯವರು ಕಡೆಂಗೋಡ್ಲು ಕವನ ಸಂಕಲನವನ್ನು…

Read More

ಬೆಂಗಳೂರು : ಸಂಸ್ಕಾರ ಭಾರತೀ ಕರ್ನಾಟಕ (ರಿ.) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ವತಿಯಿಂದ ‘ರಂಗ ಶ್ರಾವಣ’ ನಾಟಕೋತ್ಸವ 2023 ಶ್ರೀ ಶೋಭಕೃನ್ನಾಮ ಸಂವತ್ಸರ ಅಧಿಕ ಶ್ರಾವಣ ದಶಮಿ, ಏಕಾದಶಿ, ದ್ವಾದಶಿಯ ದಿನಾಂಕ 11-08-2023, 12-08-2023 ಮತ್ತು 13-08-2023ರಂದು ಬೆಂಗಳೂರಿನ ಬಸವನ ಗುಡಿಯ ಹನುಮಂತ ನಗರದ ರಾಮಾಂಜನೇಯ ಗುಡ್ಡದ ಬಳಿ ಇರುವ ಪ್ರಭಾತ್ ಕೆ.ಎಚ್. ಕಲಾಸೌಧದಲ್ಲಿ ನಡೆಯಲಿದೆ. ದಿನಾಂಕ 11-08-2023ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, 11.00 ಗಂಟೆಗೆ ಡಾ.ಎಸ್.ಆರ್.ಲೀಲಾ ಇವರಿಂದ ‘ಭಾರತೀಯ ರಂಗ ಪರಂಪರೆಯಲ್ಲಿ ಭರತಮುನಿ ನಾಟ್ಯಶಾಸ್ತ್ರದ ಪ್ರಸ್ತುತತೆ’ ಎಂಬ ವಿಷಯದ ಬಗ್ಗೆ ಉಪನ್ಯಾಸ, ಮಧ್ಯಾಹ್ನ 12.30ರಿಂದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಥಣಿಸಂದ್ರ ಕಾಲೇಜು ವಿದ್ಯಾರ್ಥಿಗಳಿಂದ ನಾಟಕ ‘ಸ್ವದೇಶಿ’, ಘಂಟೆ 2.00ರಿಂದ ‘ವಿಷಯದ ಸುಧಾರಣೆ ಹಾಗೂ ಪ್ರಸ್ತುತಿಯಲ್ಲಿ ಅಳವಡಿಕೆ’ ವಿಷಯದ ಬಗ್ಗೆ ಶ್ರೀ ರಾಜೇಂದ್ರ ಕಾರಂತ ಇವರಿಂದ ಉಪನ್ಯಾಸ, ಘಂಟೆ 3.00ರಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ವಿದ್ಯಾರ್ಥಿಗಳಿಂದ ನಾಟಕ ‘ಸಾಮರಸ್ಯ’, ಘಂಟೆ 4.15ಕ್ಕೆ ‘ಭಾರತೀಯ ರಂಗ ಭೂಮಿ ಬೆಳೆದು…

Read More