Author: roovari

ಮೂಡುಬಿದಿರೆ : ಶ್ರೀ ಯಕ್ಷದೇಗುಲ ಕಾಂತಾವರ (ರಿ.)ದ ಇಪ್ಪತ್ತೊಂದನೇ ವಾರ್ಷಿಕ ‘ಯಕ್ಷೋಲ್ಲಾಸ 2023’ ಕಾರ್ಯಕ್ರಮವು ಶ್ರೀ ಕ್ಷೇತ್ರ ಕಾಂತಾವರದಲ್ಲಿ ದಿನಾಂಕ 23-07-2023ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಂತಾವರ ಧರ್ಮದರ್ಶಿ ಡಾ. ಜೀವಂಧರ ಬಲ್ಲಾಳ್ ಮಾತನಾಡುತ್ತಾ “ಕಷ್ಟ ಕಾಲದಲ್ಲಿ ಜೀವನಕ್ಕಾಗಿ ಯಕ್ಷಗಾನವನ್ನು ನಂಬಿ ಬದುಕು ಸಾಗಿದ ಅದೆಷ್ಟೋ ಕಲಾವಿದರು ಈಗಿಲ್ಲ. ಆದರೂ ಅವರು ಉಳಿಸಿದ ಈ ಯಕ್ಷಗಾನ ಇಂದಿಗೂ ಶ್ರೀಮಂತವಾಗಿದೆ. ಪುತ್ತೂರು ಶ್ರೀಧರ ಭಂಡಾರಿ ತಂಬಾ ಕಷ್ಟದಿಂದ ನಮ್ಮೂರಿನ ಸ್ವಂತ ಮೇಳ ಮಾಡಿಕೊಂಡು ನಷ್ಟ ಹೊಂದಿದಾಗ ಮತ್ತೆ ಮಾತೃ ಸಂಸ್ಥೆ ಧರ್ಮಸ್ಥಳ ಮೇಳಕ್ಕೆ ಹೋಗು. ಅಲ್ಲಿ ನಿನ್ನ ಸ್ಥಾನ ಇನ್ನೂ ಖಾಲಿ ಇದೆ ಎಂದು ಹೇಳಿ ಕಳುಹಿಸಿದವನೇ ನಾನು. ಶ್ರೀಧರ ಭಂಡಾರಿಯಿಂದಾಗಿ ನಮ್ಮ ಕ್ಷೇತ್ರಕ್ಕೂ ತುಂಬಾ ಹೆಸರು ಬರುವಂತಾಯಿತು.” ಎಂದು ಹೇಳಿದರು. ವರ್ಕಾಡಿ ತಾರಾನಾಥ ಬಲ್ಯಾಯರಿಗೆ ‘ಪುತ್ತೂರು ಶ್ರೀ ಶ್ರೀಧರ ಭಂಡಾರಿ ಸಂಸ್ಕರಣಾ ಪ್ರಶಸ್ತಿ’ ಹಾಗೂ ವೇಣೂರು ಶ್ರೀ ಸದಾಶಿವ ಕುಲಾಲ್ ಅವರಿಗೆ ‘ಬಾಯಾರು ಪ್ರಕಾಶ್ಚಂದ್ರ ರಾವ್ ಸಂಸ್ಕರಣಾ ಪ್ರಶಸ್ತಿ’…

Read More

76ನೆಯ ಸ್ವಾತಂತ್ರೋತ್ಸವದ ಪ್ರಯುಕ್ತ ಸಾಹಿತ್ಯ ಗಂಗಾ ಧಾರವಾಡ ಮತ್ತು ಗೋಲ್ಡನ್ ಗ್ಲೋಬ್ ಟ್ರಸ್ಟ್ ದೆಹಲಿ ಇವರ ಸಹಯೋಗದಲ್ಲಿ ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ. ಮೊದಲ ಬಹುಮಾನ ರೂ.3000/-, ಎರಡನೆಯ ಬಹುಮಾನ ರೂ.2000/-, ಮೂರನೆಯ ಬಹುಮಾನ ರೂ.1000/- ಮತ್ತು ಎರಡು ಮೆಚ್ಚುಗೆ ಬಹುಮಾನ ರೂ.500/- ನಗದು ಮತ್ತು ಡಿಜಿಟಲ್ ಪ್ರಶಸ್ತಿ ಪತ್ರ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು, ಸ್ಪರ್ಧೆಯ ನಿಯಮಗಳು – * 18-45 ವರ್ಷದೊಳಗಿನ ಉದಯೋನ್ಮುಖ ಗಾಯಕ ಮತ್ತು ಗಾಯಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. * ಭಾವಗೀತೆ, ದೇಶಭಕ್ತಿಗೀತೆ ಮತ್ತು ಶಾಸ್ತ್ರೀಯ ಸಂಗೀತಕ್ಕೆ ಸಂಬಂಧಿಸಿದ ಗೀತೆಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. * ಗಾಯಕ ಮತ್ತು ಗಾಯಕಿಯರು ತಾವು ಹಾಡಿದ ಒಂದು ಹಾಡನ್ನು ವಿಡಿಯೋ ಮಾಡಿ ಕಳುಹಿಸಬೇಕು. * ಗಾಯಕ ಮತ್ತು ಗಾಯಕಿಯರು ತಮ್ಮ ಪರಿಚಯ, ಒಂದು ಫೋಟೋ, ವಯೋಮಿತಿ ತಿಳಿಸುವ ಒಂದು ದಾಖಲೆ ಮತ್ತು ಗೀತ ರಚನಾಕಾರರ ಪರಿಚಯವನ್ನು ಪ್ರತ್ಯೇಕವಾಗಿ ಕಳುಹಿಸಬೇಕು. * ಹಾಡು ಕಳುಹಿಸಲು…

Read More

ನವದೆಹಲಿ : ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ಶ್ರೇಯ ಕೆ.ಎಚ್.ಗೆ ನವದೆಹಲಿಯ ‘ನವಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ’ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್’ನಲ್ಲಿ ಪ್ರಥಮ ಸ್ಥಾನ ದೊರೆತಿದೆ. ಇವರು ಕೆ.ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಗಳ ಸುಪುತ್ರಿಯಾಗಿರುತ್ತಾರೆ. ‘ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲಕ್ಕೆ ಸಂಬಂಧಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಾಗಿದೆ. ಇದರಲ್ಲಿ ಭಾಗವಹಿಸುವವರು ತಮ್ಮ ಸೃಜನಶೀಲತೆ ಮತ್ತು ಕಲಾತ್ಮಕ ಕೌಶಲ್ಯಗಳನ್ನು ವಿವಿಧ ಸಾಂಪ್ರದಾಯಿಕ ಅಥವಾ ಸಮಕಾಲೀನ ಕಲಾಕೃತಿಗಳನ್ನು ತಯಾರಿಸಿ ಪ್ರದರ್ಶಿಸುತ್ತಾರೆ. ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ‘ಡ್ರಾಯಿಂಗ್, ಪೇಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಅವರ ಕರಕುಶಲ ವಸ್ತುಗಳನ್ನು ಪ್ರದರ್ಶಿಸಲಾಯಿತು. ಅರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ : 21-04-2023ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನವನ್ನು ವಿತರಿಸಲಾಗಿದೆ.

Read More

ಮಂಗಳೂರು: ಶಾರದಾ ಮಹೋತ್ಸವದ ಪ್ರಯುಕ್ತ ನಗರದ ಕೊಡಿಯಾಲ್‌ ಬೈಲಿನ ಶಾರದಾ ವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಅಗಸ್ಟ್ 5ರಂದು ‘ಸಾಂಸ್ಕೃತಿಕ ಸ್ಪರ್ಧೆ’ಗಳನ್ನು ಏರ್ಪಡಿಸಲಾಗಿದೆ. ‘ಪುಟಾಣಿ’, ‘ಶಿಶು’, ‘ಬಾಲ’ ಮತ್ತು ‘ಕಿಶೋರ’ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯುತ್ತದೆ. ‘ಪುಟಾಣಿ’ ವಿಭಾಗ ಯು.ಕೆ.ಜಿ. ಮಕ್ಕಳಿಗೆ, ‘ಶಿಶು’ ವಿಭಾಗ 1ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ, ‘ಬಾಲ’ ವಿಭಾಗ 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ‘ಕಿಶೋರ’ ವಿಭಾಗ 8ರಿಂದ 10ನೇ ತರಗತಿಯವರಿಗೆ ಬೆಳಿಗ್ಗೆ 9ರಿಂದ ಸ್ಪರ್ಧೆಗಳು ನಡೆಯಲಿವೆ. ಕಥೆ ಹೇಳುವುದು, ಚಿತ್ರ ಬಿಡಿಸುವುದು, ರಂಗೋಲಿ ಹಾಕುವುದು, ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಭಜನೆ, ಕುಣಿತ ಭಜನೆ, ಕೊಟ್ಟಿಗೆ ಕಟ್ಟುವ ಸ್ಪರ್ಧೆ, ಏಕಪಾತ್ರಾಭಿನಯ, ಭಾವಗೀತೆ, ಜಾನಪದ ನೃತ್ಯ ಹಾಗೂ ಗೀತಾ ಕಂಠ ಪಾಠ ಸ್ಪರ್ಧೆಗಳು ಇರುತ್ತವೆ. ಗೂಗಲ್ ಪಾರ್ಮ್ ಲಿಂಕ್ ಹಾಗೂ ಸ್ಪರ್ಧೆಯ ನಿಯಮಗಳು ಶಾಲಾ ವೆಬ್ ಸೈಟ್ www.sharadavidyalaya.inನಲ್ಲಿ ಲಭ್ಯವಿದೆ. ಮಾಹಿತಿಗೆ (0824- 2492628/2493089/9019730479) ಸಂಪರ್ಕಿಸಬಹುದು.

Read More

ಮಂಗಳೂರು : ಡಾ. ವಾಮನ ನಂದಾವರ ಅವರ ಬಹುಮಾನಿತ ಕೃತಿಯ ಮೂರನೇ ಮುದ್ರಣ ‘ಸಿಂಗ ದನ’ ಬಿಡುಗಡೆ ಸಮಾರಂಭವು ದಿನಾಂಕ 05-08-2023 ಶನಿವಾರ ಮಧ್ಯಾಹ್ನ 3.30 ಗಂಟೆಗೆ ಬಳ್ಳಾಲ್‌ಬಾಗ್‌, ಪತ್ತು ಮುಡಿ ಸೌಧದಲ್ಲಿ ನಡೆಯಲಿದೆ. ಮೈಸೂರು ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಭಾರತೀಯ ಭಾಷಾ ಸಂಸ್ಥಾನದ ನಿಕಟ ಪೂರ್ವ ಯೋಜನಾ ನಿರ್ದೇಶಕರಾದ ಡಾ. ಬಿ. ಶಿವರಾಮ ಶೆಟ್ಟಿಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಪುಸ್ತಕ ಬಿಡುಗಡೆಯನ್ನು ಮಾಡಲಿದ್ದಾರೆ. ಡಾ. ವಾಮನ ನಂದಾವರ ಇವರ ಉಪಸ್ಥಿತಿಯಲ್ಲಿ ಶ್ರೀ ಮೌನೇಶ್ ಕುಮಾರ್ ಛಾವಣಿ ಮತ್ತು ಬಳಗದವರಿಂದ ವಚನ, ದಾಸ ಸಾಹಿತ್ಯ ಗಾಯನ ನಡೆಯಲಿದೆ. ಹೇಮಾಂಶು ಪ್ರಕಾಶನದ ಚಂದ್ರಕಲಾ ನಂದಾವರ ಮತ್ತು ಡಾ. ವಾಮನ ನಂದಾವರ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ಸ್ ಕಲ್ಲೂರು ನಾಗೇಶ ಎಲ್ಲರಿಗೂ ಪ್ರೀತಿಯ ಸ್ವಾಗತ ಕೋರಿದ್ದಾರೆ.

Read More

ಬದಿಯಡ್ಕ : ರಾಮಾಯಣ ವಾರಾಚರಣೆ ಸಮಿತಿ ಬದಿಯಡ್ಕ ಇದರ ನೇತೃತ್ವದಲ್ಲಿ ಬದಿಯಡ್ಕ ಶ್ರೀ ರಾಮಲೀಲಾ ಯೋಗ ಶಿಕ್ಷಣ ಕೇಂದ್ರದಲ್ಲಿ ಜರಗುತ್ತಿರುವ ರಾಮಾಯಣ ವಾರಾಚರಣೆಯ ಮೂರನೇ ಕಾರ್ಯಕ್ರಮದ ಅಂಗವಾಗಿ ಯಕ್ಷವಿಹಾರಿ ಬದಿಯಡ್ಕ ಇದರ ಆಶ್ರಯದಲ್ಲಿ ‘ತರಣಿಸೇನ ಕಾಳಗ’ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 23-07-2023ರಂದು ನಡೆಯಿತು. ಹಿಮ್ಮೇಳದಲ್ಲಿ ಉದಯಶಂಕರ ಭಟ್ ಪಟ್ಟಾಜೆ, ತಲ್ಲಣಾಜೆ ವೆಂಕಟ್ರಮಣ ಭಟ್, ಬೇಂದ್ರೋಡು ಗೋವಿಂದ ಭಟ್, ಅಂಬೆಮೂಲೆ ಶಿವಶಂಕರ ಭಟ್, ವೇಣುಗೋಪಾಲ ಬರೆಕರೆ ಮತ್ತು ಅರ್ಥಧಾರಿಗಳಾಗಿ ಬಾಲಕೃಷ್ಣ ಆಚಾರ್ಯ ನೀರ್ಚಾಲು, ಡಾ. ಬೇ.ಸೀ. ಗೋಪಾಲಕೃಷ್ಣ ಶ್ಯಾಮ ಆಳ್ವ ಕಡಾರು, ವಿಷ್ಣುಪ್ರಕಾಶ ಪೆರ್ವ, ಗಣೇಶಪ್ರಸಾದ್‌ ಕಡಪ್ಪು, ಡಾ. ಶ್ರೀಶಕುಮಾರ ಪಂಜಿತ್ತಡ್ಕ ಭಾಗವಹಿಸಿದ್ದರು. ಕರಿಂಬಿಲ ಲಕ್ಷ್ಮಣ ಪ್ರಭು ಕಾರ್ಯಕ್ರಮ ನಿರೂಪಿಸಿದರು.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ‘ಕೃತಿ ಅನಾವರಣ’ ಹಾಗೂ ‘ಕವಿಗೋಷ್ಠಿ’ ಕಾರ್ಯಕ್ರಮ ಕೊಡಿಯಾಲ್ ಬೈಲಿನ ಶಾರದಾ ವಿದ್ಯಾಲಯ ಧ್ಯಾನ ಮಂದಿರದಲ್ಲಿ ದಿನಾಂಕ 29-07-2023ರಂದು ಸಂಜೆ ಗಂಟೆ 4ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣಕರ್ ಇವರು ವಹಿಸಲಿದ್ದು, ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರು ವಿದ್ವಾನ್ ರಘುಪತಿ ಭಟ್ ರಚಿಸಿರುವ ಕೃತಿ ‘ನಾನು ಮತ್ತು ನಾನು’ ಎಂಬ ಭಾವ ಸಂಕಲನವನ್ನು ಅನಾವರಣಗೊಳಿಸಲಿದ್ದಾರೆ. ಹಿರಿಯ ಸಾಹಿತಿ ಹಾಗೂ ಬರಹಗಾರರಾದ ಡಾ. ವಸಂತ ಕುಮಾರ್ ಪೆರ್ಲ ಮತ್ತು ಖ್ಯಾತ ಸಾಹಿತಿ, ನ್ಯಾಯವಾದಿಗಳಾದ ಶ್ರೀ ಶಶಿರಾಜ ರಾವ್ ಕಾವೂರು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಂತರ ನಡೆಯುವ ಕವಿಗೋಷ್ಠಿಯಲ್ಲಿ ಕವಿಗಳಾದ ಡಾ. ಸುರೇಶ ನೆಗಳಗುಳಿ, ಶ್ರೀ ಸುಬ್ರಾಯ ಭಟ್‌, ಶ್ರೀ ಗಣೇಶ್ ಪ್ರಸಾದ್ ಜೀ, ಡಾ. ಮೀನಾಕ್ಷಿ ರಾಮಚಂದ್ರ, ಶ್ರೀ…

Read More

ಎಡನೀರು: ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಸಂಸ್ಥಾನ ಎಡನೀರು ಮಠ, ಇಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ ದಿನಾಂಕ 26-07-2023ರಂದು ‘ಭೀಷ್ಮ ಪ್ರತಿಜ್ಞೆ’ ಎಂಬ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ರಮೇಶ್ ಭಟ್ ಪುತ್ತೂರು, ಚೆಂಡೆ ಮದ್ದಳೆಗಳಲ್ಲಿ ಶ್ರೀ ಲವ ಕುಮಾರ್ ಐಲ, ಶ್ರೀ ಮುರಳೀಧರ ಕಲ್ಲೂರಾಯ ಕುಂಜೂರು ಪಂಜ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಭಾಸ್ಕರ್ ಬಾರ್ಯ (ಶಂತನು), ಶ್ರೀ ಗುಂಡ್ಯಡ್ಕ ಈಶ್ವರ ಭಟ್ (ದೇವವ್ರತ), ಶ್ರೀ ಕುಂಬ್ಳೆ ಶ್ರೀಧರ್ ರಾವ್ (ದಾಶರಾಜ), ಶ್ರೀ ಭಾಸ್ಕರ ಶೆಟ್ಟಿ ಸಾಲ್ಮರ (ಸತ್ಯವತಿ) ಸಹಕರಿಸಿದರು. ಮಠದ ವತಿಯಿಂದ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ಶ್ರೀ ರಾಜೇಂದ್ರ ಕಲ್ಲೂರಾಯ ವಂದಿಸಿದರು.

Read More

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ದತ್ತಿ ಉಪನ್ಯಾಸ ಮತ್ತು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 22-07-2023ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ಪುರುಷೋತ್ತಮ ಪೂಂಜ ವಿರಚಿತ ಪ್ರಸಂಗ ‘ಉಲೂಪಿ ವಿವಾಹ’ ಯಕ್ಷಗಾನ ತಾಳಮದ್ದಳೆಯು ನಡೆಯಿತು. ಸರ್ವಶ್ರೀಗಳಾದ ಗೋಪಾಲಕೃಷ್ಣ ಭಟ್ ಪುಂಡಿಕಾಯಿ, ಟಿ.ಡಿ. ಗೋಪಾಲಕೃಷ್ಣ ಭಟ್ ಪುತ್ತೂರು ಮತ್ತು ಮಾ.ಅದ್ವೈತ್ ಕನ್ಯಾನ ಇವರು ಹಿಮ್ಮೇಳದಲ್ಲಿ ಹಾಗೂ ಸರ್ವಶ್ರೀಗಳಾದ ಶಂಭು ಶರ್ಮ ವಿಟ್ಲ, ಜಯರಾಮ್ ಭಟ್ ದೇವಸ್ಯ, ರಾಜಗೋಪಾಲ ಕನ್ಯಾನ ಅರ್ಥದಾರಿಗಳಾಗಿ ಸಹಕರಿಸಿದರು. ಡಾ. ಜಾನಕಿ ಸುಂದರೇಶ್ ಸ್ಥಾಪಿತ ಕಳಸ ಪುಟ್ಟದೇವರಯ್ಯ ನಾಗಮ್ಮ ದತ್ತಿ ಉಪನ್ಯಾಸದಲ್ಲಿ ಕವಯತ್ರಿ ಮತ್ತು ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಕೊಂಕೋಡಿಯವರು ದತ್ತಿ ಉಪನ್ಯಾಸ ನೀಡುತ್ತಾ “ಕಾದಂಬರಿಗಾರ್ತಿ ಗಂಗಾ ಪಾದೆಕಲ್ಲು ಅವರ ‘ಮೌನ ರಾಗಗಳು’ ಎಂಬ ಕಾದಂಬರಿ ಸ್ತ್ರೀಯ ಬದುಕಿನ ನೈಜ ಚಿತ್ರಣವನ್ನು ಪ್ರದರ್ಶಿಸಿ, ರೋಗ ರುಜಿನಗಳನ್ನು…

Read More

ಮಂಗಳೂರು : ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಕರ್ನಾಟಕ ನಾರ್ತ್ ವಿಭಾಗದ ಪುಟ್ಟಪರ್ತಿ ಯಾತ್ರೆ ಕಾರ್ಯಕ್ರಮದ ಅಂಗವಾಗಿ ಆಂಧ್ರ ಪ್ರದೇಶದ ಪುಟ್ಟಪರ್ತಿಯ ಪ್ರಶಾಂತಿ ನಿಲಯಂನ ಸಾಯಿ ಕುಲವಂತ್ ಹಾಲ್‌ನಲ್ಲಿ ದಿನಾಂಕ 22-07-2023 ಶನಿವಾರ ಬೆಳಗ್ಗೆ ಮಂಗಳೂರಿನ ಯುವ ಸಿತಾರ್ ವಾದಕ ಅಂಕುಶ್‌ ಎನ್. ನಾಯಕ್ ಅವರಿಂದ ‘ಸಿತಾರ್ ವಾದನ’ ಕಾರ್ಯಕ್ರಮ ನಡೆಯಿತು. ತಬ್ಲಾದಲ್ಲಿ ಪಂಡಿತ್ ರಾಜೇಂದ್ರ ನಾಕೋಡ್ ಸಾಥ್ ನೀಡಿದರು. ಕರ್ನಾಟಕ ನಾರ್ತ್ ವ್ಯಾಪ್ತಿಗೊಳಪಟ್ಟ ರಾಜ್ಯದ 19 ಜಿಲ್ಲೆಗಳ 4 ಸಾವಿರಕ್ಕೂ ಅಧಿಕ ಸಾಯಿ ಭಕ್ತರು ಈ ಪರ್ತಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಕರ್ನಾಟಕ ನಾರ್ತ್ ರಾಜ್ಯಾಧ್ಯಕ್ಷ ಶ್ರೀ ಪದ್ಮನಾಭ ಪೈ ಅವರು ಸಂಸ್ಥೆ ಕೈಗೊಂಡ ವಿವಿಧ ಸೇವಾ ಚಟುವಟಿಕೆಗಳನ್ನು ತಿಳಿಸಿದರು. ಸಂಸ್ಥೆಯ ರಾಜ್ಯ ಸೇವಾ ಕೋ-ಆರ್ಡಿನೇಟರ್ ಶ್ರೀ ಪ್ರಭಾಕರ ಬೀರಯ್ಯ ಸೇವಾ ಅವಕಾಶದ ಹಲವು ವಿಷಯಗಳನ್ನು ಉದಾಹರಣೆಯೊಂದಿಗೆ ತಿಳಿಸಿದರು.

Read More