Author: roovari

ಬೆಂಗಳೂರು : ‘ನೃತ್ಯ ಕುಟೀರ’ ಬೆಂಗಳೂರು ಪ್ರಸ್ತುತ ಪಡಿಸುವ 19ನೇ ವಾರ್ಷಿಕ ದಿನಾಚರಣೆಯ ಅಂಗವಾಗಿ ‘ನೃತ್ಯ ಮಿಲನ’ ಕಾರ್ಯಕ್ರಮವು ದಿನಾಂಕ 30-07-2023ರ ಭಾನುವಾರ ಸಂಜೆ 4:30ಕ್ಕೆ ಬೆಂಗಳೂರಿನ ಜೆ.ಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಖ್ಯಾತ ನೃತ್ಯಗಾರ್ತಿ, ದೂರದರ್ಶನ ಕಲಾವಿದೆ ಮತ್ತು ನಿರೂಪಕಿಯಾದ ಶ್ರೀಮತಿ.ಸುಷ್ಮಾ ಕೆ.ರಾವ್ ಹಾಗೂ ಭರತನಾಟ್ಯ ಕಲಾವಿದರು ಮತ್ತು ‘ತಾಳಾವಧಾನ ಭರತನಾಟ್ಯ’ ಶೋಧಕರಾದ ವಿದ್ವಾನ್ ಶ್ರೀ ಮಂಜುನಾಥ ಎನ್.ಪುತ್ತೂರು ಈ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ನೃತ್ಯ ಕುಟೀರದ ನಿರ್ದೇಶಕಿ, ವಿದುಷಿ ದೀಪಾ ಭಟ್ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

Read More

ಮೂಡುಬಿದಿರೆ : ಬೆಳುವಾಯಿ ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿ ವತಿಯಿಂದ 26ನೇ ವರ್ಷದ ಯಕ್ಷಗಾನದ ಸರ್ವ ಆಯಾಮಗಳ ಬೃಹತ್ ಸಂಕಲನವಾದ ಒಳಗೊಂಡ ‘ಯಕ್ಷ ಸಂಭ್ರಮ-2023’ರ ಕಾರ್ಯಕ್ರಮವು ದಿನಾಂಕ 30-07-2023 ಆದಿತ್ಯವಾರ ಬೆಳಿಗೆ ಗಂಟೆ 8.30ರಿಂದ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಲಿದೆ. ಈ ಯಕ್ಷಸಂಭ್ರಮ ಸಮಾರಂಭವನ್ನು ಬೆಳಗ್ಗೆ 8.30ಕ್ಕೆ ಮೂಡುಬಿದಿರೆಯ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ, ವಹಿಸಲಿದ್ದು, ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಅರ್ಚಕರಾದ ಶ್ರೀ ಕೃಷ್ಣ ತಂತ್ರಿ ಆಶೀರ್ವಚನ ನೀಡುವರು. ವಿ.ಟಿ.ಎಸ್. ಕ್ಯಾಶ್ಯು ಇಂಡಸ್ಟ್ರೀಸ್ ಮಾಲಕರಾದ ಶ್ರೀ ಅಶೋಕ್ ಕಾಮತ್, ಶ್ರೀ ವಿಜಯಲಕ್ಷ್ಮಿ ಕ್ಯಾಶ್ಯು ಇಂಡಸ್ಟ್ರೀಸ್ ಮಾಲಕರಾದ ಶ್ರೀ ಎ.ಕೆ. ರಾವ್, ಬೆಳುವಾಯಿ ಬ್ಲೋಸಂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಶ್ರೀ ಸೈಮನ್ ಮಸ್ಕರೇನಸ್, ಕರ್ನಾಟಕ ಬ್ಯಾಂಕಿನ ನಿವೃತ್ತ ಜಿ.ಎಂ. ಶ್ರೀ ಚಂದ್ರಶೇಖರ್ ರಾವ್ ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀ ರಾಜೇಶ್ ಜಿ.…

Read More

ಮುಂಬೈ : ಮುಂಬೈ ವಿಶ್ವವಿದ್ಯಾನಿಲಯ, ಕಲೀನಾ ಕ್ಯಾಂಪಸ್ ನ ಜೆ.ಪಿ, ನಾಯಕ್‌ ಸಭಾ ಭವನದಲ್ಲಿ ಕನ್ನಡ ವಿಭಾಗದ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳೊಂದಿಗೆ ‘ಸಾಹಿತ್ಯ ಸಂವಾದ’ ಕಾರ್ಯಕ್ರಮವು ದಿನಾಂಕ 21-07-2023ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಾದಂಬರಿಕಾರ, ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪ ಇವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಾ “ಯಾವುದೇ ಪದಬಳಕೆಯನ್ನು ವಿವಿಧ ಸನ್ನಿವೇಶಗಳಲ್ಲಿ, ಬೇರೆ ಬೇರೆ ಸಂದರ್ಭಗಳಲ್ಲಿ ಮಾಡುವಾಗ ಯೋಚಿಸಿ ಮಾಡಬೇಕು. ಕತೆ, ಕಾದಂಬರಿ, ಪ್ರಬಂಧ ಅಥವಾ ಇತರ ಯಾವುದೇ ಲೇಖನಗಳನ್ನು ಬರೆದಾಗ ಅದನ್ನು ಪುನಃ ಪುನಃ ಪರಿಷ್ಕರಿಸಬೇಕಾದ ಅವಶ್ಯಕತೆ ಇರುತ್ತದೆ. ಅದಕ್ಕಾಗಿ ನಾವು ಭಾಷೆಯ ಸರಿಯಾದ ಅಧ್ಯಯನವನ್ನು ಮಾಡಿರಬೇಕು. ಬರಹಗಾರರು ಕಲ್ಪನಾಶೀಲರಾಗಿರಬೇಕು ಮತ್ತು ತತ್ವಶಾಸ್ತ್ರವನ್ನು ತಿಳಿದಿರಬೇಕು. ಕಥೆಯ ಮೂಲಕ ತತ್ವಶಾಸ್ತ್ರದ ಬಗ್ಗೆ ಹೇಳಲು, ತಿಳಿಯಲು ಸಾಧ್ಯ. ವೇದೋಪನಿಷತ್ತುಗಳ ಕಾಲದಿಂದಲೂ ತತ್ವಜ್ಞಾನವನ್ನು ಋಷಿಮುನಿಗಳು ಕಥೆಗಳ ಮೂಲಕವೇ ಹೇಳುತ್ತಾ ಬಂದರು. ಕಥೆ ಇಲ್ಲದೆ ಹೋದರೆ ಗಂಭೀರ ತತ್ವಗಳನ್ನು ಹೇಳುವುದಕ್ಕೆ ಆಗಲಾರದು. ಕಾದಂಬರಿಗಳಲ್ಲಿ ವಾಸ್ತವಾಂಶಗಳ ಜೊತೆಗೆ ಕಲ್ಪನಾಶಕ್ತಿಯೂ ಮುಖ್ಯ, ಆಳವಾದ ಚಿಂತನೆ, ಕಲ್ಪನೆ…

Read More

ಬೆಂಗಳೂರು: ಬೆಂಗಳೂರಿನ ಮಹಿಳಾ ಅಧ್ಯಯನಕೇಂದ್ರ, ವಿಶ್ವವಿದ್ಯಾಲಯ ಮತ್ತು ಕ್ರಿಯಾ ಮಾಧ್ಯಮ ಪ್ರಸ್ತುತಪಡಿಸುವ ವೀಣಾ ಮಜುಂದಾರ್ ಅವರ ’ಉರುಳುವ ಕಲ್ಲಿನ ನೆನಪಿನ ಸುರುಳಿ’ ಕೃತಿಯ ಬಿಡುಗಡೆ ಮತ್ತು ರಾಷ್ಟ್ರೀಯ ವಿಚಾರಸಂಕಿರಣ ಕಾರ್ಯಕ್ರಮವು ದಿನಾಂಕ 31-07-2023ರ ಸೋಮವಾರ ಮಧ್ಯಾಹ್ನ 2 ಗಂಟೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ. ನವದೆಹಲಿಯ ಮಹಿಳಾ ಅಭಿವೃದ್ಧಿ ಅಧ್ಯಯನ ಕೇಂದ್ರದ ಇಂದ್ರಾಣಿ ಮಂಜುದಾರ್ ಕೃತಿಯ ಆನಾವರಣ ಮಾಡಲಿದ್ದಾರೆ. ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಡಾ.ಕೆ.ಎಸ್.ವೈಶಾಲಿ ಕೃತಿಯ ಕುರಿತು ಮಾತುಗಳನ್ನಾಡಲಿರುವರು. ಕ್ರಿಯಾ ಮಾಧ್ಯಮದ ನಿರ್ದೇಶಕಿಯಾದ ಕೆ.ಎಸ್.ವಿಮಲ ಹಾಗೂ ಅನುವಾದಕರಾದ ಲೇಖಕಿ ಡಾ.ಎನ್.ಗಾಯತ್ರಿ ತಮ್ಮ ಅಭಿಪ್ರಾಯಗಳನ್ನು ಹಂಚಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ‘ಸಮಾನತೆಯೆಡೆಗೆ’ ವರದಿಯ ಅಪೂರ್ಣವಾಗುಳಿದ ಕಾರ್ಯಸೂಚಿಗಳು ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರಿನ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಆರ್.ಇಂದಿರಾ ವಹಿಸಲಿದ್ದಾರೆ ಮತ್ತು ಇಂದ್ರಾಣಿ ಮಂಜುದಾರ್ ಹಾಗೂ ಲೇಖಕಿಯಾದ ಡಾ.ದು.ಸರಸ್ವತಿ ವಿಚಾರ ಮಂಡಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಂಗಳೂರು…

Read More

ಮಂಗಳೂರು : ‘55 ನಿಮಿಷದ ಒಂದು ಪ್ರೇಮ ಕಥೆ’ ನಾಟಕವನ್ನು 2015ರಲ್ಲಿ 9 ಕಲಾವಿದರು ಒಂದೇ ಸಮಯಕ್ಕೆ ಬೆಂಗಳೂರಿನ 9 ರಂಗಮಂದಿರಗಳಲ್ಲಿ ಪ್ರಾರಂಭಿಸಿ ಒಂದೇ ಸಮಯಕ್ಕೆ ಮುಗಿಸಿ ಲಿಮ್ಕಾ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿತ್ತು. ಈಗ ಇಡೀ ಕರ್ನಾಟಕದ ಮೂವತ್ತೊಂದು ಜಿಲ್ಲೆಗಳಲ್ಲೂ ಒಂದೇ ದಿನ ಪ್ರಯೋಗಗೊಳ್ಳುವ ಮುಖೇನ ಮತ್ತೊಮ್ಮೆ ರಂಗಭೂಮಿಯಲ್ಲಿ ಎರಡನೇ ಬಾರಿ ಲಿಮ್ಕಾ ದಾಖಲೆ ಬರೆಯುವ ಪ್ರಯತ್ನಕ್ಕೆ ದಾಪುಗಾಲಿಡಲು ಸಿದ್ಧವಾಗಿದೆ. 31 ಜುಲೈ, 31 ಜಿಲ್ಲೆ, 31 ಕಲಾವಿದರು, 31 ರಂಗಮಂದಿರ ಏಕಕಾಲಕ್ಕೆ ಇಡೀ ಕರ್ನಾಟಕದಾದ್ಯಂತ ಒಂದೇ ದಿನ ಒಂದೇ ಸಮಯಕ್ಕೆ ಪ್ರದರ್ಶನಗೊಳ್ಳುತ್ತಿರುವ ನಾಟಕ. ಕನ್ನಡ ರಂಗಭೂಮಿಯಲ್ಲಿ ವಿಶಿಷ್ಟವಾಗಿ ದಾಖಲೆ ಮಾಡಲು, 2023ರ ಲಿಮ್ಕಾ ದಾಖಲೆಗೆ ಸಿದ್ಧವಾಗುತ್ತಿರುವ ನಾಟಕವೇ ‘55 ನಿಮಿಷದ ಒಂದು ಪ್ರೇಮಕಥೆ’. ಇದಕ್ಕಾಗಿ 3 ತಿಂಗಳಿಂದ ತಂಡ ಶ್ರಮವಹಿಸುತ್ತಿದ್ದು 220ಕ್ಕೂ ಹೆಚ್ಚು ತಂತ್ರಜ್ಞರು 31 ಕಲಾವಿದರು ಇತಿಹಾಸ ಸೃಷ್ಟಿಸುವಲ್ಲಿ ನಿರತರಾಗಿದ್ದಾರೆ. ಕಲಾವಿದರ ಹೆಸರು, ಪ್ರದರ್ಶಿಸುತ್ತಿರುವ ಸ್ಥಳ ಹಾಗೂ ರಂಗಮಂದಿರದ ಹೆಸರು 1) ರಾಜಗುರು ಹೊಸಕೋಟೆ – ರವೀಂದ್ರ ಕಲಾಕ್ಷೇತ್ರ,…

Read More

ಸಾಹಿತ್ಯ ಮತ್ತು ಸಂಸ್ಕೃತಿ ಇಂದಿನ ಸಮಾಜಕ್ಕೆ ಬಹು ಮುಖ್ಯವಾಗಿವೆ. ‘ಯುವಪಡೆ ಸಾಹಿತ್ಯದ ಕಡೆ’ ಎನ್ನುವುದು ಖಿದ್ಮಾ ಫೌಂಡೇಷನ್ ಧ್ಯೇಯವಾಗಿದೆ. ಪವಿತ್ರ ಸ್ವಾತಂತ್ರ ಭಾರತದ 75 ನೇ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ವಿದ್ಯಾರ್ಥಿಗಳ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಕವಿತೆಗಳನ್ನು ವೇದಿಕೆಯಲ್ಲಿ ವಾಚಿಸಲು ಅವಕಾಶ ನೀಡುವುದರ ಜೊತೆಗೆ, ಪುಸ್ತಕದ ರೂಪದಲ್ಲಿ ಸ್ಮರಣ ಸಂಚಿಕೆ ಹೊರತರುವ ತಯಾರಿಯಲ್ಲಿದ್ದೇವೆ. ಆಸಕ್ತರು 30/07/ 2023 ಭಾನುವಾರಕ್ಕೆ ಮುಂಚಿತವಾಗಿ ನಿಮ್ಮ ಹೆಸರನ್ನು 73491 97313 ಈ ನಂಬರಿಗೆ ವಾಟ್ಸಾಪ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು ತಿಳಿಸಿದ್ದಾರೆ

Read More

ಬೆಂಗಳೂರು : ಕಳೆದ 55 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದು, ತನ್ನದೇ ಆದ ಮಹತ್ವದ ಸ್ಥಾನವನ್ನು ಪಡೆದಿರುವ ಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ಕಾಲೇಜು ಹೊಸ ಶೈಕ್ಷಣಿಕ ವರ್ಷದ ಪತ್ರಿಕೋದ್ಯಮದ ತರಗತಿಗಳನ್ನು ಆರಂಭಿಸುತ್ತಿದೆ. ಆಗಸ್ಟ್‌ 2023ರಿಂದ ಆರಂಭವಾಗಲಿರುವ ಒಂದು ವರ್ಷದ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮದ ಪ್ರವೇಶಕ್ಕೆ ಅರ್ಹರಿಂದ ಅರ್ಜಿಆಹ್ವಾನಿಸಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಮಾಡಿರುವ ಹಲವು ಸಾಧಕರು ಇಲ್ಲಿ ವಿಶೇಷ ತರಬೇತಿ ನೀಡಲಿದ್ದಾರೆ. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕಾರ್ಪೊರೇಟ್ ಜರ್ನಲಿಸಂ ಈ ಮೂರೂ ಕ್ಷೇತ್ರದಲ್ಲಿ ಇಲ್ಲಿ ವಿಶೇಷ ತರಬೇತಿ ನಡೆಯಲಿದ್ದು, ಕಾಲಕ್ಕೆ ತಕ್ಕಂತೆ ಪಠ್ಯಕ್ರಮದಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲಾಗಿದೆ. ಆನ್‌ಲೈನ್‌ ಪತ್ರಿಕೋದ್ಯಮ, ಸಾಮಾಜಿಕ ಜಾಲ ತಾಣಗಳ ನಿಯಂತ್ರಣ ಹಾಗೂ ನಿರ್ವಹಣೆಯಂತಹ ನೂತನ ಬೆಳವಣಿಗೆಗಳನ್ನು ಕಲಿಸಲಾಗುವುದು. ಯಾವುದೇ ಪದವಿ ಪಡೆದವರು ಅರ್ಜಿಸಲ್ಲಿಸಬಹುದಾಗಿದೆ. ತರಗತಿಗಳು ಆಗಸ್ಟ್‌ ತಿಂಗಳ ಮೊದಲ ವಾರದಿಂದ ಆರಂಭವಾಗಲಿದೆ. ಪ್ರವೇಶಕ್ಕೆ ಮತ್ತು ಇತರ ವಿವರಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6ಗಂಟೆಯವರೆಗೂ ಭಾರತೀಯ ವಿದ್ಯಾ ಭವನದ ಕಚೇರಿಯನ್ನು ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ…

Read More

ಕಾಸರಗೋಡು: ಕಾಸರಗೋಡಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು(ರಿ.) ಇದರ ಮಹಿಳಾ ಘಟಕ ನಾರಿ ಚಿನ್ನಾರಿಯು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಶ್ರಾವಣ ಧಾರಾ’ ಸರಣಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ದಿನಾಂಕ 30-07-2023ರಂದು ಅಪರಾಹ್ನ 2.30ರಿಂದ ಕಾಸರಗೋಡಿನ ಬ್ಯಾಂಕ್ ರಸ್ತೆಯ ಜಿ.ಯು.ಪಿ ಶಾಲೆಯ ಮುಂಭಾಗದ ಟೌನ್ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾಸರಗೋಡಿನ ಮಾನವ ಹಕ್ಕು ಸಂಘಟನೆಯ ರಾಜ್ಯಾಧ್ಯಕ್ಷೆಯಾದ ಜುಲೇಖಾ ಮಾಹಿನ್ ಉದ್ಘಾಟಿಸಲಿದ್ದು, ಖ್ಯಾತ ಲೆಕ್ಕ ಪರಿಶೋಧಕರೂ ಹಾಗೂ ನಾರಿಚಿನ್ನಾರಿಯ ಗೌರವಾಧ್ಯಕ್ಷೆಯೂ ಆದ ಶ್ರೀಮತಿ ತಾರಾ ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆರೋಗ್ಯ ತಜ್ಞೆ ಡಾ. ಸಂಗೀತ ಸಚ್ಚಿದಾನಂದ್, ಬಿ.ಎ.ಎಂ.ಎಸ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕಿಯಾದ ಮಂಜುಳಾ ರಾವ್‌ ಹಾಗೂ ಸಮಾಜ ಸೇವಕಿ ಚಂದ್ರಾವತಿ ಇವರಿಗೆ ಗೌರವಾರ್ಪಣೆ ನಡೆಯಲಿರುವುದು. ಸಭಾಕಾರ್ಯಕ್ರಮದ ಬಳಿಕ ನಡೆಯಲಿರುವ ವಿಚಾರ ಸಂಕಿರಣದಲ್ಲಿ ಆರೋಗ್ಯ ತಜ್ಞೆಯಾದ ಡಾ.ಸಂಗೀತ ಸಚ್ಚಿದಾನಂದ್ ಎಮ್.ಬಿ.ಬಿ.ಎಸ್ ಇವರು ‘ಮಳೆಗಾಲದ ಆಹಾರ ಮತ್ತು…

Read More

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕಾರ್ಕಳ ತಾಲೂಕು ಘಟಕದ ಸಹಯೋಗದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ನಗರದ ಪ್ರಕಾಶ್ ಹೊಟೇಲ್‌ನಲ್ಲಿ ದಿನಾಂಕ 17-07-2023ರಂದು ‘ಕಾರ್ಕಳ ಕುಂದಾಪ್ರ ಕನ್ನಡ ಹಬ್ಬ 2023’ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಕೆ. ಜಯಪ್ರಕಾಶ್ ಹೆಗ್ಡೆಯವರು ಮಾತನಾಡುತ್ತಾ “ಭಾಷೆ ಯಾವುದೇ ಇರಲಿ ಒಟ್ಟಾಗಿ ಭಾಷೆಯ ಬೆಳವಣಿಗೆಗೆ ನಾವೆಲ್ಲ ಶ್ರಮಿಸಬೇಕು. ಭಾಷೆಗಳ ಅಧ್ಯಯನ ಇಂದಿನ ಅಗತ್ಯ. ಕುಂದಾಪ್ರ ಕನ್ನಡ ಭಾಷೆಯ ಇನ್ನು ಹೆಚ್ಚಿನ ಅಧ್ಯಯನಕ್ಕಾಗಿ ಅಧ್ಯಯನ ಪೀಠ ಹಾಗೂ ಆಕಾಡೆಮಿ ಸ್ಥಾಪನೆ ಸಂಬಂಧ ಸರಕಾರ ಮಟ್ಟದಲ್ಲಿ ಶ್ರಮಿಸಲಾಗುವುದು. ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಬಹುದು. ಆದರೆ ಮಗುವಿಗೆ ಸಂಸ್ಕಾರ ಕೊಡುವವರೇ ತಾಯಿ. ಆದ್ದರಿಂದ ಮಾತೃಭಾಷೆ ಮೊದಲು ಕಲಿಯುವ ಭಾಷೆಯಾಗಬೇಕು. ಭಾಷೆಯ ಆಚರಣೆ ಒಂದು ದಿನಕ್ಕೆ ಸೀಮಿತವಾಗದಿರಲಿ” ಎಂದು ಹೇಳಿದರು. ಸಾಹಿತಿ ಶ್ರೀ ಓಂ ಗಣೇಶ್‌ ಉಪ್ಪುಂದ ‘ಭಾಷಿ ಅಲ್ಲ ಬದ್ಕ್’ ಕುರಿತ ಉಪನ್ಯಾಸ…

Read More

ಉಡುಪಿ : ಕೇರಳದ ಗ್ರಂಥಾಲಯ ಚಳವಳಿಯ ಪಿತಾಮಹ ಪಿ.ಎನ್. ಪಣಿಕ್ಕರ್ ಪುಣ್ಯತಿಥಿ ಅಂಗವಾಗಿ ಹಮ್ಮಿಕೊಳ್ಳಲಾದ ‘ಓದುವ, ಡಿಜಿಟಲ್ ಓದುವ ದಿನ ಮತ್ತು ಓದುವ ತಿಂಗಳು’ ಆಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನ ಮತ್ತು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ದಿನಾಂಕ 18-07-2023ರಂದು ನಡೆಯಿತು. ಮಕ್ಕಳು ಹಾಗೂ ಸಾರ್ವಜನಿಕರನ್ನು ಗ್ರಂಥಾಲಯದತ್ತ ಆಕರ್ಷಿಸಿ, ಅವರಲ್ಲಿ ಪುಸ್ತಕ ಓದುವ ಹವ್ಯಾಸ ಮತ್ತು ಗ್ರಂಥಾಲಯಗಳ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಓದುವ ತಿಂಗಳು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡುತ್ತಾ “ಪುಸ್ತಕಗಳಲ್ಲಿ ಆಗಾಧ ಮಾಹಿತಿ ಸಿಗುವುದರಿಂದ ಮಕ್ಕಳು ಬಾಲ್ಯದಿಂದಲೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದು ನಮ್ಮ ಹವ್ಯಾಸವಾದಾಗ ಮುಂದೆ ಓದುವ ಪ್ರವೃತ್ತಿ ಬೆಳೆಯುತ್ತದೆ. ಗ್ರಂಥಾಲಯಗಳು ವಿವಿಧ ತರಹದ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಓದುವ ಪ್ರವೃತ್ತಿಯನ್ನು ಉತ್ತೇಜಿಸಬೇಕು. ಇದು ಹೈಟೆಕ್ ಗ್ರಂಥಾಲಯವಾಗಿದ್ದು, ಎಲ್ಲಾ ತರಹದ ಪುಸ್ತಕಗಳು ಲಭ್ಯವಿದೆ.…

Read More