Author: roovari

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮಹಿಳಾ ವಿಂಶತಿ ಸಂಭ್ರಮದ ಅಂಗವಾಗಿ 20ನೇ ಸರಣಿ ತಾಳಮದ್ದಳೆ ‘ಮೇಘನಾದ’ ಎಂಬ ಆಖ್ಯಾನದೊಂದಿಗೆ ದಿನಾಂಕ 17 ಡಿಸೆಂಬರ್ 2024ರಂದು ಬಲಮುರಿ ಶ್ರೀ ವಿದ್ಯಾ ಗಣಪತಿ ದೇವಸ್ಥಾನ ಭಾರತೀ ನಗರ ಬನ್ನೂರಿನಲ್ಲಿ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್, ಪಿ.ಟಿ. ಜಯರಾಮ್ ಭಟ್ ಸಹಕರಿಸಿದರು. ಮುಮ್ಮೇಳದಲ್ಲಿ ಮಾಂಬಾಡಿ ವೇಣುಗೋಪಾಲ್ ಭಟ್ (ಶ್ರೀರಾಮ), ಗುಂಡ್ಯಡ್ಕ ಈಶ್ವರ ಭಟ್ (ಇಂದ್ರಜಿತು), ಗುಡ್ಡಪ್ಪ ಬಲ್ಯ (ಲಕ್ಷ್ಮಣ), ದುಗ್ಗಪ್ಪ ನಡುಗಲ್ಲು (ರಾವಣ), ಚಂದ್ರಶೇಖರ ಭಟ್ ಬಡೆಕ್ಕಿಲ (ಜಾಂಬವ), ವಿ.ಕೆ. ಶರ್ಮ ಅಳಿಕೆ (ಹನೂಮಂತ), ಶುಭಾ ಜೆ.ಸಿ. ಅಡಿಗ (ವಿಭೀಷಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಮಾಯಾ ಸೀತೆ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಗಾಯತ್ರಿ ಹೆಬ್ಬಾರ್ ಪ್ರಾಯೋಜಿಸಿದರು.

Read More

ಕಾಸರಗೋಡು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ-2024 ಇದರ ಅಂಗವಾಗಿ ಕನ್ನಡ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ,ಸ್ಮರಣಿಕೆ ಹಾಗೂ ಪುಸ್ತಕಗಳೊಂದಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿನಾಂಕ 15 ಡಿಸೆಂಬರ್ 2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಸಣ್ಣ ಕಥೆ ಹೇಳುವ ಸ್ಪರ್ಧೆ, ಚಿತ್ರ ರಚನೆ, ರಸಪ್ರಶ್ನೆ, ಛದ್ಮವೇಷ, ಏಕಪಾತ್ರಾಭಿನಯ, ಕನ್ನಡ ವಾರ್ತಾ ಪತ್ರಿಕೆ ವಾಚನ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ಸುಮಾರು 150ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ…

Read More

ಕಾಸರಗೋಡು : “ರಾಗಾಲಾಪ ಎಂಬ ಕಾರ್ಯಕ್ರಮವೇ ವಿಶಿಷ್ಟವಾಗಿದೆ. ಕರ್ನಾಟಕದಲ್ಲಿಯೇ ಇಂಥ ಪ್ರಯೋಗಗಳು ನಡೆದಿಲ್ಲ. ಅಂಥದ್ರಲ್ಲಿ ಕಾಸರಗೋಡಿನ ‘ಸ್ವರ ಚಿನ್ನಾರಿ’ಯ ಈ ಪ್ರಯತ್ನ ಶ್ಲಾಘನೀಯ. ಇಂಥಹ ಕಾರ್ಯಕ್ರಮಗಳ ಮೂಲಕ ಒಬ್ಬ ಅದ್ಭುತ ಕವಿ ಹುಟ್ಟಿಕೊಳ್ಳಬಹುದು. ಒಬ್ಬ ರಾಗ ಸಂಯೋಜಕ ಸೃಷ್ಟಿ ಆಗಬಹುದು. ಹಲವು ಪ್ರತಿಭೆಗಳಿಗೆ ವೇದಿಕೆ ಆಗುವ ಸಾಧ್ಯತೆ ಇದೆ. ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರರವರ ನಿರ್ದೇಶನದಲ್ಲಿ ಇಂಥಹ ವಿಶಿಷ್ಟವಾದ ಕಾರ್ಯಕ್ರಮ ಜರಗುವುದು ಖುಷಿ ನೀಡಿದೆ” ಎಂದು ಖ್ಯಾತ ಪತ್ರಕರ್ತ, ಅಂಕಣಗಾರ ರವೀಂದ್ರ ಜೋಶಿ ಮೈಸೂರು ನುಡಿದರು. ಅವರು ಕಾಸರಗೋಡಿನ ಪದ್ಮಗಿರಿ ಕಲಾ ಕುಟೀರದಲ್ಲಿ ಸಾಹಿತ್ಯಿಕ ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿಯ ಸಂಗೀತ ಘಟಕ ಸ್ವರ ಚಿನ್ನಾರಿಯ ನೇತೃತ್ವದಲ್ಲಿ ಜರಗಿದ ರಾಗಸಂಯೋಜನಾ ಶಿಬಿರ ‘ರಾಗಾಲಾಪ’ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಕಮ್ಮಟದ ನಿರ್ದೇಶಕ ವಿ. ಮನೋಹರರವರು ಮಾತನಾಡಿ “ನಾವು ಸ್ವರ ಸಂಯೋಜಕರಲ್ಲ, ನಿಜ ಅರ್ಥದಲ್ಲಿ ಗಾನ ಸಂಯೋಜಕರು ಅಂತ ಹೇಳಬೇಕು. ನಾವು ಪದಗಳನ್ನು ಜೋಡಿಸಿ ಗಾಯನ ಮಾಡುತ್ತೇವೆ. ಸಿನೇಮಾದಲ್ಲಿ ಇದಕ್ಕೆ ವಿರುದ್ಧ ಸಂಪ್ರದಾಯವಿದೆ.…

Read More

ವಿರಾಜಪೇಟೆ : ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಹಾಗೂ ಕಲಾ ಉತ್ಸವ ಕೊಡಗು 2024 ಇವರ ಸಹಯೋಗದಲ್ಲಿ ಕಲೋತ್ಸವ ಬಹುಭಾಷಾ ಕವಿಗೋಷ್ಠಿ ಮತ್ತು ಗೀತ ಗಾಯನ ಕಾರ್ಯಕ್ರಮವು ದಿನಾಂಕ 15 ಡಿಸೆಂಬರ್ 2024ರಂದು ವಿರಾಜಪೇಟೆಯ ಶಾನುಭೋಗ್‌ ಸೆಂಟರ್‌ನಲ್ಲಿ ನಡೆಯಿತು. ಮೈಸೂರಿನ ಕಾದಂಬರಿಕಾರರಾದ ಎಂ.ಬಿ. ಸಂತೋಷ್ ಇವರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಮತ್ತು ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಬಿ.ಎಸ್. ಲೋಕೇಶ್ ಸಾಗರ್ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹಾಸನದಿಂದ ಎನ್.ಎಲ್. ಚನ್ನೇಗೌಡ ಹಾಗೂ ಕುಮಾರ್ ಚಲವಾದಿ ಹಾಸನ ಇವರು ಭಾಗವಹಿಸಿದ್ದರು. ವಿರಾಜಪೇಟೆಯ ಹಿರಿಯ ವಕೀಲರು ಎಸ್.ಆರ್. ಜಗದೀಶ್, ವಿರಾಜಪೇಟೆ ರೋಟರಿ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಜೆ. ವಿಶಾಲಾಕ್ಷಿ, ಕೊಡಗು ಜಿಲ್ಲೆ ಹಿರಿಯ ಕವಿಗಳು ಗಿರೀಶ್ ಕಿಗ್ಗಾಲು ಇವರು ಉಪಸ್ಥಿತರಿದ್ದರು. ವೈಲೇಶ್ ಪಿ.ಎಸ್. ಕೊಡಗು ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚಿತ್ರಕಲಾಕಾರ ಸಾಧಿಕ್ ಹಂಸ ಕಾರ್ಯಕ್ರಮದ ಕುರಿತು ನಲ್ಮೆಯ ಮಾತುಗಳನ್ನಾಡಿದರು. ಸುಮಾರು 50 ಜನ ಭಾಗವಹಿಸಿದ ಈ…

Read More

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಬಹಳ ಮುಖ್ಯವಾದದ್ದು. ಇದುವರೆಗೂ 1,800ಕ್ಕೂ ಹೆಚ್ಚು ಪುಸ್ತಕಗಳನ್ನು ಪರಿಷತ್ತು ಪ್ರಕಟಿಸಿದ್ದು, ಅದು ಒಂದು ರೀತಿಯಲ್ಲಿ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯನ್ನೇ ಬಿಂಬಿಸುತ್ತದೆ ಎಂದರೆ ತಪ್ಪಾಗಲಾರದು. ಪರಿಷತ್ತು ಪ್ರಕಟಿಸುವ ಪುಸ್ತಕಗಳು ಎಂದರೆ ಹೂರಣ ಮತ್ತು ಮುದ್ರಣಗಳೆರಡರೆಲ್ಲಿಯೂ ಶ್ರೇಷ್ಠ ಗುಣಮಟ್ಟವನ್ನು ಹೊಂದಿರುತ್ತದೆ. ಪುಸ್ತಕಗಳ ಬಗ್ಗೆ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ “ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳಲ್ಲಿ ಬಹಳ ವಿಶೇಷವಾದದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಗುವ ಪ್ರಕಟಣೆಗಳು. ಎಷ್ಟನೆಯ ಸಮ್ಮೇಳನ ನಡೆಯತ್ತದೆಯೋ ಅಷ್ಟು ಪುಸ್ತಕಗಳನ್ನು ಪ್ರಕಟಿಸುವ ಉನ್ನತ ಪರಂಪರೆಯೊಂದು ಪರಿಷತ್ತಿನಲ್ಲಿತ್ತು. ಕಾರಣಾಂತರಗಳಿಂದ ಅದು ನಿರಂತರವಾಗಿರಲಿಲ್ಲ. ನನ್ನ ಅವಧಿಯಲ್ಲಿ ಅದನ್ನು ಮುಂದುವರೆಸಲು ಸಂಕಲ್ಪಿಸಿದ್ದೇನೆ. ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 86 ಪುಸ್ತಕಗಳು ಪ್ರಕಟವಾಗಿ ನಾಡಿನ ಸಾಹಿತ್ಯಾಸಕ್ತರ ಮೆಚ್ಚುಗೆಯನ್ನು ಪಡೆದಿದ್ದವು. ಪ್ರಸ್ತುತ ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ…

Read More

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಿನಾಂಕ 21 ಡಿಸೆಂಬರ್ 2024ರಂದು ಮಧ್ಯಾಹ್ನ 1-00 ಗಂಟೆಗೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮುರಳಿ ಶೃಂಗೇರಿ ರಚಿಸಿ, ಸಂಗೀತ ನೀಡಿರುವ ರಮೇಶ ಬೆಣಕಲ್ ಇವರ ನಿರ್ದೇಶನದಲ್ಲಿ ಶ್ರೀರಂಗಪಟ್ಟಣದ ಗಮ್ಯ (ರಿ.) ಇವರು ಪ್ರಸ್ತುತ ಪಡಿಸುವ ‘ಪರಿಣಯ ಪ್ರಸಂಗ’ ನಾಟಕ ಪ್ರದರ್ಶನಗೊಳ್ಳಲಿದೆ. ತಂಡದ ಬಗ್ಗೆ : ಸಾಂಸ್ಕೃತಿಕವಾಗಿ ಮತ್ತು ಐತಿಹಾಸಿಕ ಹಲವು ಕುರುಹುಗಳ ಬಾಹುಳ್ಯದಿಂದಾಗಿ ಶ್ರೀರಂಗಪಟ್ಟಣ ಎಂದಿಗೂ ಗಮನೀಯವೇ ಆಗಿದೆ. ಮಂಡ್ಯ ಜಿಲ್ಲೆಯ ಕಲಾಪರಂಪರೆಗೆ ಇಲ್ಲಿನ ಮಣ್ಣಿನ ಕೊಡುಗೆಯೂ ಅಪಾರವೇ ಸರಿ. ಹೀಗಿದ್ದೂ ಹೊಸತನಕ್ಕೆ ತೆರೆದುಕೊಳ್ಳುವ, ರೂಢಿಸಿಕೊಳ್ಳುವ ತುರ್ತು ಇದ್ದೇ ಇತ್ತು ಎನ್ನುವುದೂ ಅಷ್ಟೇ ಸಮೀಚೀನ. ಹಾಗೇ ಚಿಂತನಾಶೀಲರಾದವರ ಮನದಲ್ಲಿ ಗುರಿಯೊಂದನ್ನು ಇರಿಸಿಕೊಂಡು ಮುನ್ನಡೆಯುವ ಮಾರ್ಗವನ್ನು ಹುಡುಕುತ್ತಿದ್ದಾಗ ಹೊಳೆದದ್ದೇ ‘ಗಮ್ಯ’. ಗ್ರಾಮೀಣ ಭಾಗದ ಆಸಕ್ತರಿಂದ ಮೊದಲ್ಗೊಂಡು, ಪಟ್ಟಣವಾಸಿಗಳನ್ನೂ ಒಳಗೊಂಡು ಒಂದು ಶಿಷ್ಟ ತಂಡವಾಗಿ ರೂಪುಗೊಳ್ಳುತ್ತಾ ರಂಗಾಭ್ಯಾಸದ ಹಿನ್ನೆಲೆಯೊಂದಿಗೆ ಒಂದಿಷ್ಟು ಕಲಾಕೈಂಕರ್ಯವನ್ನು ಕೈಗೆತ್ತಿಕೊಳ್ಳುವ ಹುಮ್ಮಸ್ಸಿನಲ್ಲಿ ‘ಗಮ್ಯ’ ರೂಪುಗೊಳ್ಳುತ್ತಿದೆ. ನಿರಂತರ ಕಲಿಕೆಯ…

Read More

ಬಾರ್ಕೂರು : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಎಂ. ಜಿ. ಎಂ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ದಿವಂಗತ ಸುಬ್ರಾಯ ಶಾಸ್ತ್ರಿಗಳ ತಾಯಿ ತಂದೆಯರ ಸ್ಮರಣಾರ್ಥವಾಗಿ ಆಯೋಜಿಸಲಾದ ಬಾರ್ಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಚಿತ್ರಕಲಾ ಸ್ಪರ್ಧೆಯು ದಿನಾಂಕ 14 ಡಿಸೆಂಬರ್ 2024ರ ಶನಿವಾರದಂದು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ, ಪ. ಪೂ., ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶ್ರೀಮತಿ ಪುಷ್ಪಾಂಜಲಿ ಮಂಗಳೂರು, ಚಿತ್ರಕಲಾ ಶಿಕ್ಷಕ ಶ್ರೀ ರಮೇಶ್ ಅಂಬಾಡಿ, ಡಾ. ಜನಾರ್ದನ ಹಾವಂಜೆ ತೀರ್ಪುಗಾರರಾಗಿದ್ದರು. ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಡಾ. ಜನಾರ್ದನ ಹಾವಂಜೆ ಕಾರ್ಯಕ್ರಮ ಸಂಘಟಕರಾಗಿ  ಸ್ಪರ್ಧೆಯನ್ನು ಆಯೋಜಿಸುವಲ್ಲಿ ಸಹಕರಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಆರ್. ಆರ್. ಸಿ. ಇದರ ಸಹ ಸಂಶೋಧಕ ಡಾ. ಅರುಣ್…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವು ದಿನಾಂಕ 21 ಡಿಸೆಂಬರ್ 2024ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಡೆಯಲಿದೆ. ಈ ಸಂಭ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷರಾದ ಜೆ. ಲೋಕೇಶ್ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿರುವರು. ಪ್ರಮೋದ್ ಶಿಗ್ಗಾಂವ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಡ್ಯದ ಕರ್ನಾಟಕ ಸಂಘ (ರಿ.) ಅಭಿನಯಿಸುವ ಕೆ.ವಿ. ಶಂಕರೇಗೌಡರ ಜೀವನಾಧಾರಿತ ನಾಟಕ ‘ನಿತ್ಯಸಚಿವ’ ಪ್ರದರ್ಶನಗೊಳ್ಳಲಿದೆ.

Read More

ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಆಯೋಜಿಸುವ ‘ಸುನಂದಾ ಬೆಳಗಾಂವಕರ [ವ್ಯಕ್ತಿತ್ವ-ಸಾಹಿತ್ಯ]’ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರ ರವಿವಾರದಂದು ಸಂಜೆ ಐದು ಘಂಟೆಯಿಂದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿರುವ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ಸಾಹಿತಿಗಳಾದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಪ್ರೊ. ರಾಘವೇಂದ್ರ ಪಾಟೀಲ ಕೃತಿ ಲೋಕಾರ್ಪಣೆಗೊಳಿಸಲಿರುವರು. ಯುವ ಸಾಹಿತಿಗಳಾದ ಶ್ರೀ ವಿಕಾಸ ಹೊಸಮನಿ ಕೃತಿಯ ಕುರಿತು ಮಾತನಾದಲಿದ್ದು, ಕೃತಿಯ ಲೇಖಕರಾದ ಡಾ. ಸುಭಾಷ ಪಟ್ಟಾಜೆ ಉಪಸ್ಥಿತರಿರುವರು. ಅತಿಥಿಗಳಾಗಿ ಪ್ರಕಾಶಕರಾದ ಡಾ. ವೈಜಯಂತಿ ಸೂರ್ಯನಾರಾಯಣ ಹಾಗೂ ಶ್ರೀಮತಿ ಸೀಮಾ ಕುಲಕರ್ಣಿ ಭಾಗವಹಿಸಲಿದ್ದಾರೆ. ಡಾ. ಸುಭಾಷ್ ಪಟ್ಟಾಜೆ : ಡಾ. ಸುಭಾಷ್ ಪಟ್ಟಾಜೆಯವರು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಡಾ. ಯು. ಮಹೇಶ್ವರಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ಮತ್ತು ಮಲಯಾಳಂ ಸಣ್ಣ ಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ…

Read More

ಕುಂದಾಪುರ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಚಿಣ್ಣರ ತಾಳಮದ್ದಳೆ ‘ಸಿನ್ಸ್ 1999 ಶ್ವೇತಯಾನ-85’ ಕಾರ್ಯಕ್ರಮ ದಿನಾಂಕ 16 ಡಿಸೆಂಬರ್ 2024ರಂದು ಕುಂದಾಪುರದ ಕುಂದೇಶ್ವರ ದೇಗುಲದಲ್ಲಿ ನಡೆಯಿತು. ಶ್ರೀಮತಿ ಶ್ಯಾಮಲ ಶ್ರೀ ಲಕ್ಷ್ಮೀಶ ವರ್ಣ ಪ್ರಾಯೋಜಕತ್ವದಲ್ಲಿ ಬೀಜಾಡಿ ರಾಮಚಂದ್ರ ತೌಳ ಸಂಸ್ಮರಣೆ ಪ್ರಯುಕ್ತ ನಡೆದ ಈ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುಂದಾಪುರ ಕುಂದೇಶ್ವರ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ ಮಾತನಾಡಿ “ಯಕ್ಷಗಾನ ಕಲೆಯನ್ನು ಮಕ್ಕಳ ಮೂಲಕ ಬೆಳೆಸುವುದು ಅತ್ಯಂತ ಸೂಕ್ತ. ಪರಿಶುದ್ಧ ಕನ್ನಡ ಭಾಷೆಯ ಸಾಂಸ್ಕೃತಿಕವಾದ ಈ ಕಲೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಯಶಸ್ವೀ ಕಲಾವೃಂದದ ಕಾರ್ಯ ಶ್ಲಾಘನೀಯವಾದದ್ದು. ಅವಿರತ ಪ್ರಯತ್ನದಿಂದ ಸದಾ ಸಾಗಿ ಬಂದು ಬೆಳ್ಳಿ ಹಬ್ಬವನ್ನು ಆಚರಿಸುವುದು ಸಣ್ಣ ವಿಷಯವಲ್ಲ. ಸಂಸ್ಥೆ ಮಕ್ಕಳ ತಂಡದಿಂದ ಬೆಳವಣಿಗೆ ಸಾಧಿಸಿದೆ. ಸಾಧನೆಗೈದ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರುವಲ್ಲಿ ಸಮಾಜದ ಹೊಣೆಗಾರಿಕೆ ಬಹಳಷ್ಟು ಇದೆ. ಬೀಳದಂತೆ ಪೋಷಿಸಬೇಕಾದದ್ದು ಕಲಾಭಿಮಾನಿಗಳ ಕರ್ತವ್ಯ.” ಎಂದರು. ಆಡಳಿತ ಮಂಡಳಿಯ ಸದಸ್ಯ ಜಿ. ಎಸ್.…

Read More