Subscribe to Updates
Get the latest creative news from FooBar about art, design and business.
Author: roovari
ತೆಕ್ಕಟ್ಟೆ: ಯಶಸ್ವೀ ಕಲಾವೃಂದ(ರಿ.)ಕೊಮೆ, ತೆಕ್ಕಟ್ಟೆ ಇವರ ಆಶ್ರಯದಲ್ಲಿ ತೆಕ್ಕಟ್ಟೆ ಹಯಗ್ರೀವದಲ್ಲಿ ‘ಕುಂದಾಪುರ ಕನ್ನಡ ದಿನಾಚರಣೆ’ಯು ದಿನಾಂಕ 16-07-2023ರಂದು ನಡೆಯಿತು. ಈ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ ‘ಗ್ವಲ್ ಗ್ವಲ್ಲಿ’ ಯಕ್ಷಗಾನದ ಸಂದರ್ಭದಲ್ಲಿ ಹೊಸ ವೇಷಭೂಷಣ ಹೊಂದಿದ ಬಾಲಗೋಪಾಲರಿಗೆ ತುರಾಯಿ ಸಿಕ್ಕಿಸುವುದರ ಮೂಲಕ ‘ಪ್ರಸಾಧನ’ ನೂತನ ಯಕ್ಷಾಭರಣವನ್ನು ಆನಂದ ಸಿ.ಕುಂದರ್ ಉದ್ಘಾಟಿಸಿ ಮಾತನಾಡುತ್ತಾ, “ಕಣ್ಣಂಗೆ ಕಾಂಬುಕೇ ಸಿಗ್ದಿದ್ ಅಟ್ಟಣಿಗೆ ಆಟ, ದೊಂದಿ ಬೆಳಕಿನ ಆಟ, ಹವ್ಯಾಸಿ ಜೋಡಾಟ ಹೀಗೆ ಹಲವ್ ಬಗಿ ಆಟ ಮಾಡಿ, ದಶಮ ಸಂಭ್ರಮದಲ್ ದೂಳ್ ಎಬ್ಸಿ ಬಿಟ್ ಸಂಘ ಯಶಸ್ವಿ. ಹೂವಿನ್ಕೋಲ್ ಅಲ್ಲಲ್ ಮನಿ ಮನಿಗ್ ಹೋಯ್ ಮತ್ ಆ ಸಾಂಪ್ರದಾಯಿಕ ಕಲಿಗ್ ಜೀವ ಕೊಟ್ ಸಂಸ್ಥೆ ಯಶಸ್ವಿ. ಕರಾವಳಿ ಭಾಗದಲ್ ಬಾಳ ವರ್ಷದಿಂದ ಒಳ್ಳೆ ಗುರುಗಳನ್ ಸರ್ಸಕಂಡ್ ವರ್ಷದಲ್ ಆರ್ ತಿಂಗಳೂ ತರಗತಿ ಮಾಡಿ ಮೇಲ್ಪಂಕ್ತಿಯಲ್ ಇಪ್ ಸಂಘ ಯಶಸ್ವಿ. ಯಶಸ್ವಿ ಸಂಘಕ್ ಕೊಟ್ ಕೊಡುಗೆ ಹಾಳಾತಿಲ್ಲೆ. ಕೊಟ್ಟದ್ದ್ಕ್ಕೂ ಮೂರ್ ಪಟ್ ಜಾಸ್ತಿ ಆಯ್ ಸಮಾಜಕ್ ಪ್ರಯೋಜನಕ್ ಬತ್ತತ್”…
ಮಂಗಳೂರು : ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ವತಿಯಿಂದ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದೇಶದ ಉದ್ದಗಲಕ್ಕೂ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ನಾಡಿನ ಹೆಸರಾಂತ ಕಂಚಿನ ಕಂಠದ ಗಾಯಕ, ಪ್ರತಿಷ್ಠಿತ ಶಾರದಾ ಪುರಸ್ಕಾರ ಪುರಸ್ಕೃತ ಶಿರಸಿಯ ಶ್ರೀ ವಿನಾಯಕ ಹೆಗ್ಡೆಯವರು ಹರಿದಾಸರ ಕೃತಿ ಕೀರ್ತನೆಗಳ ಗಾಯನ ಕಾರ್ಯಕ್ರಮ ನೀಡಲಿದ್ದಾರೆ. ತಬಲಾದಲ್ಲಿ ರಾಜೇಶ್ ಭಾಗ್ವತ್ ಹಾಗೂ ಹಾರ್ಮೋನಿಯಂನಲ್ಲಿ ಹೇಮಂತ್ ಭಾಗ್ವತ್ ಸಾಥ್ ನೀಡಲಿದ್ದಾರೆ. ಈ ಕಾರ್ಯಕ್ರಮವು ದಿನಾಂಕ : 29-07-2023ರಂದು ಶನಿವಾರ ಸಂಜೆ ಗಂಟೆ 5.15ರಿಂದ 7.30ರವರಿಗೆ ರಾಮಕೃಷ್ಣ ಆಶ್ರಮದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಎಂ.ಎಸ್. ಗುರುರಾಜ್ ತಮ್ಮೆಲ್ಲರಿಗೂ ಪ್ರೀತಿ ಪೂರ್ವಕವಾದ ಆಹ್ವಾನ ನೀಡಿದ್ದಾರೆ.
ಮಂಗಳೂರು : ಭರತಾಂಜಲಿ ಕೊಟ್ಟಾರ ಮಂಗಳೂರು ಇದರ ವತಿಯಿಂದ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ‘ಗುರು ನಮನ ಮತ್ತು ಮಾತಾಪಿತರ ಚರಣ ಪೂಜನ’ ಕಾರ್ಯಕ್ರಮ ದಿನಾಂಕ 23-07-2023ರಂದು ನಡೆಯಿತು. ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಇಲ್ಲಿನ ಪ್ರಾಂಶುಪಾಲರಾದ ವಿದ್ವಾನ್ ರವಿಶಂಕರ್ ಹೆಗಡೆಯವರು ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಾ “ಭಾರತದ ಎಲ್ಲಾ ಕಲಾಪ್ರಕಾರಗಳಲ್ಲಿಯೂ ಗುರು ಪರಂಪರೆ ನಡೆದುಕೊಂಡು ಬಂದಿರುವುದರಿಂದ ಇಲ್ಲಿನ ಸಂಸ್ಕೃತಿ ಭದ್ರವಾಗಿದೆ. ನಮ್ಮ ದೇಶದ ಪರಂಪರೆ ಅತ್ಯಂತ ಶ್ರೇಷ್ಠವಾದದ್ದು ಎಂದು ಅಭಿಪ್ರಾಯಪಟ್ಟರು. ಆಚಾರ್ಯ ಎಂದರೆ ವಿದ್ಯೆಯನ್ನು ತಾನು ಆಳವಾಗಿ ಅಭ್ಯಾಸ ಮಾಡಿ ಅದನ್ನು ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಪಾಠ ಮಾಡುವುದಷ್ಟೇ ಅಲ್ಲ ಅದನ್ನು ತಾನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡವನಾಗಿರಬೇಕು. ಆಗ ಮಾತ್ರ ಆತ ಆಚಾರ್ಯ ಅಥವಾ ಗುರು ಎಂದು ಕರೆಸಿಕೊಳ್ಳುತ್ತಾನೆ. ಒಬ್ಬ ಶಿಕ್ಷಕ ಕೇವಲ ಜ್ಞಾನವನ್ನು ನೀಡುತ್ತಾನೆ, ಆದರೆ ಗುರುವು ನಮ್ಮ ಆಧ್ಯಾತ್ಮಿಕ ಬೆಳವಣಿಗೆಗೆ ಜವಾಬ್ದಾರನಾಗಿರುತ್ತಾನೆ. ನಮ್ಮೊಳಗಿನ ಬುದ್ಧಿವಂತಿಕೆಯನ್ನು ಜಾಗೃತಗೊಳಿಸಿ ನಮ್ಮನ್ನು ಒಳಕ್ಕೆ ತಿರುಗಿಸಲು ಪ್ರೋತ್ಸಾಹಿಸುತ್ತಾನೆ. ಕರೋನ ನಂತರದ…
ಮಂಗಳೂರು : ದ.ಕ. ಜಿಲ್ಲಾ ಕ.ಸಾ.ಪ.ದ ವತಿಯಿಂದ ಮನೆ-ಮನಗಳಲ್ಲಿ ಸಾಹಿತ್ಯ ಕಾರ್ಯಕ್ರಮದಡಿಯಲ್ಲಿ ಶ್ರೀ ಕೇಶವ ಕುಡ್ಲ ಇವರ ‘ಸಾಹಿತ್ಯ ಮತ್ತು ಸಂವಾದ’ ಕಾರ್ಯಕ್ರಮವು ದಿನಾಂಕ 30-07-2023ರಂದು ಆದಿತ್ಯವಾರ ಸಂಜೆ ಗಂಟೆ ನಾಲ್ಕಕ್ಕೆ ನಡೆಯಲಿದೆ. ಕೋಡಿಕಲ್ ನ ಜೆ.ಬಿ.ಲೋಬೋ ರಸ್ತೆಯಲ್ಲಿರುವ ಕೇಶವ ಕುಡ್ಲ ಇವರ ಮನೆ ‘ನೆಲೆ’ಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ದ.ಕ. ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಿರಿಯ ಕವಿ ಮತ್ತು ಸಾಹಿತಿಯಾದ ಡಾ. ವಸಂತ ಕುಮಾರ್ ಪೆರ್ಲ ಇವರು ಸಂವಾದ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಎಸ್. ರೇವಣ್ಕರ್ ಉಪಸ್ಥಿತರಿರುವರು. ಶ್ರೀ ಕೇಶವ ಕುಡ್ಲ ನಿವೃತ್ತ ವಿಮಾ ಅಭಿವೃದ್ಧಿ ಅಧಿಕಾರಿ ಹಾಗೂ ಕ.ಸಾ.ಪ.ದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಮ್ಮೆಲ್ಲರಿಗೂ ಈ ಕಾರ್ಯಕ್ರಮಕ್ಕೆ ಆದರದ ಸ್ವಾಗತ ಕೋರಿದ್ದಾರೆ.
ಮಂಗಳೂರು : ತುಳು ಕೂಟ ಕುಡ್ಲ ಇದರ ‘ಬಂಗಾರ ಪರ್ಬ’ ಸರಣಿ ಕಾರ್ಯಕ್ರಮವು ಶ್ರೀ ಕ್ಷೇತ್ರ ಶರವು ದೇವಾಲಯದ ಸಭಾಂಗಣದಲ್ಲಿ ದಿನಾಂಕ 29-07-2023ನೇ ಶುಕ್ರವಾರ ಸಂಜೆ 4 ಗಂಟೆಗೆ ನಡೆಯಲಿದೆ. ಶ್ರೀ ಕ್ಷೇತ್ರ ಶರವು ದೇವಾಲಯದ ಶಿಲೆ ಶಿಲೆ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತುಳು ಕೂಟದ ಅಧ್ಯಕ್ಷರಾದ ಶ್ರೀ ಬಿ.ದಾಮೋದರ ನಿಸರ್ಗ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರು, ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರು ಹಾಗೂ ಒಡಿಯೂರು ಸೇವಾ ಬಳಗದ ಕಾರ್ಯಾಧ್ಯಕ್ಷರಾದ ಶ್ರೀ ತಾರಾನಾಥ ಶೆಟ್ಟಿ ಬೋಳಾರ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ(ನಿ.)ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ ಮತ್ತು ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಹರಿಕೃಷ್ಣ ಪುನರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ‘ದೇವಕೀ ತನಯ’, ಹಿರಿಯ ನ್ಯಾಯವಾದಿಗಳು ಮತ್ತು ಹರಿಕಥಾ ಪರಿಷತ್ತಿನ ಅಧ್ಯಕ್ಷರೂ ಆದ ಶ್ರೀ ಮಹಾಬಲ ಶೆಟ್ಟಿ ಕೂಡ್ಲು ‘ತುಳು ಹರಿಕಥೆ ಸಾಹಿತ್ಯ’ದ ಪರಿಚಯ ಮಾಡಿಕೊಡಲಿದ್ದು,…
ಉಡುಪಿ : ದಿನಾಂಕ 20.07.2023 ಗುರುವಾರದಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ಕನ್ನಡ ಡಿಂಡಿಮ ಸರಣಿಯ ಎರಡನೇ ಕಾರ್ಯಕ್ರಮವು ಪಿ.ಆರ್.ಎನ್. ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಸಹಯೋಗದಲ್ಲಿ ಅಮೃತ ಭಾರತಿಯಲ್ಲಿ ನಡೆಯಿತು. ಕ.ಸಾ.ಪ ಹೆಬ್ರಿ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರವನ್ನು ಅವಿಭಜಿತ ದ.ಕ.ಜಿಲ್ಲಾ ಜವಳಿ ವರ್ತಕರ ಸಂಘದ ಅಧ್ಯಕ್ಷರಾದ ಹೆಬ್ರಿ ಯೋಗೀಶ್ ಭಟ್ ಉದ್ಘಾಟಿಸಿ ಮಾತನಾಡುತ್ತಾ “ಗಿಡವನ್ನು ಪೋಷಿಸಿದಾಗ ಅದು ಉತ್ತಮವಾಗಿ ಬೆಳೆಯುತ್ತದೆ. ಅಂತೆಯೇ ಬೆಳೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಹಿತ್ಯ ಸಂಸ್ಕೃತಿಯ ಪೋಷಣೆ ನೀಡಿದಾಗ ಅದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಕ.ಸಾ.ಪ ಹೆಬ್ರಿ ಘಟಕದ ಕಾರ್ಯ ಶ್ಲಾಘನೀಯ” ಎಂದರು. ರಾಜ್ಯ ಎನ್.ಎಸ್.ಎಸ್ ನಿಕಟ ಪೂರ್ವ ಅಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರ್ ಅವರು ಮಾತನಾಡಿ “ಎರಡುವರೆ ಸಾವಿರ ವರ್ಷಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಕನ್ನಡ…
ಕಾಸರಗೋಡು : ಭಜನಾ ಸಂಕೀರ್ತನಾ ಗುರುಗಳಾದ ಹರಿದಾಸ ಶ್ರೀ ಜಯಾನಂದ ಕುಮಾರ್ ಹೊಸದುರ್ಗ ಇವರ ನೇತೃತ್ವದಲ್ಲಿ ಪ್ರತೀ ವರ್ಷ ಕರ್ಕಾಟಕ ಮಾಸದ ಮನೆ ಮನೆ ಭಜನಾ ಅಭಿಯಾನಕ್ಕೆ ದಿನಾಂಕ 17-07-2023 ರಂದು ಮಧೂರಿನ ಪ್ರಣವ ಮಹಿಳಾ ಭಕ್ತವೃಂದದ ಸಹಕಾರದಲ್ಲಿ ಚಾಲನೆ ನೀಡಲಾಯಿತು. ಭಜನಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಹರಿದಾಸ ಶ್ರೀ ಜಯಾನಂದ ಕುಮಾರ್ “ಕರ್ಕಾಟಕ ಮಾಸದ ಸಂಕಷ್ಟಗಳನ್ನು ದೂರ ಮಾಡಿ ಎಲ್ಲರಲ್ಲೂ ಚಿಂತನೆಗಳನ್ನು ಹುಟ್ಟು ಹಾಕಬೇಕು ಎಂಬ ಉದಾತ್ತ ಧ್ಯೇಯದೊಂದಿಗೆ ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಜನಾ ಸೇವೆ ಮಾಡಲಾಗುತ್ತಿದೆ. ದೈವ ಕೃಪೆಯಿಂದ ಮನಸ್ಸಿನ ಸಂಕಲ್ಪಗಳು ಈಡೇರುವ ಆಶಾಭಾವನೆಯನ್ನು ಒಳಗೊಂಡು ಮಾಡುವ ಈ ಭಜನಾ ಸೇವೆಯು ರಾಮಾಯಣ ಮಾಸವನ್ನು ಪುಣ್ಯ ಪ್ರದವಾಗಿಸಿ ದೈವಿಕ ಚೈತನ್ಯವನ್ನು ಮೂಡಿಸುವುದು. ಮಕ್ಕಳು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳುವುದರೊಂದಿಗೆ ದೇಶಕ್ಕೆ ಜ್ಞಾನ ದೀವಿಗೆಯಾಗಿ, ಭಾರತ ಮಾತೆಯ ನಂದಾದೀಪವಾಗಿ ಬೆಳಗಬೇಕು.” ಎಂದು ಹೇಳಿದರು. ಹರಿದಾಸ ಶ್ರೀ ಜಯಾನಂದ ಕುಮಾರ್ ತಮ್ಮ ಬಳಿ ತರಬೇತಿ ಪಡೆಯುತ್ತಿರುವ ಭಜನಾ…
ಮಂಗಳೂರು : ಮಂಗಳೂರು ಎಚ್.ಎಂ.ಎಸ್. ಸಂಘಟನೆಯ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ವತಿಯಿಂದ ‘ಬಾಂಡಿಂಗ್ ತ್ರೂ ಬೀಡಿ’ ಕೃತಿಯ ಅನಾವರಣ ದಿನಾಂಕ : 18-07-2023ರಂದು ನಡೆಯಿತು. ನಾನಾ ಸಾಹಿತಿಗಳು ಬರೆದ ಬೀಡಿ ಉದ್ಯಮದ ಕಾರ್ಮಿಕರ ಬಗೆಗಿನ ನೋವು ನಲಿವಿನ ಲೇಖನಗಳುಳ್ಳ ‘’ಬೀಡಿ ಬದುಕು’ ಕನ್ನಡ ಪುಸ್ತಕದ ಇಂಗ್ಲೀಷ್ ಅವತರಣಿಕೆ ‘ಬಾಂಡಿಂಗ್ ತ್ರೂ ಬೀಡಿ’ ಕೃತಿಯನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಅವರು ಮಾತನಾಡುತ್ತಾ “ಕರಾವಳಿ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ಬೀಡಿಯನ್ನೇ ನಂಬಿಕೊಂಡು ಲಕ್ಷಾಂತರ ಮಂದಿ ಜೀವನ ನಡೆಸುತ್ತಿದ್ದಾರೆ. ಬೀಡಿ ಉದ್ಯೋಗದಿಂದಲೇ ಮಕ್ಕಳಿಗೆ ಶಿಕ್ಷಣ ನೀಡಿ ಉದ್ಯೋಗ ಕಲ್ಪಿಸಿಕೊಟ್ಟ ಅದೆಷ್ಟೋ ಕುಟುಂಬಗಳನ್ನು ನಾವು ಕಂಡಿದ್ದೇವೆ. ಪ್ರಸಕ್ತ ದಿನಗಳಲ್ಲಿ ಬೀಡಿ ಉದ್ಯಮವೂ ವಿವಿಧ ರೀತಿಯ ಸವಾಲುಗಳನ್ನು ಎದುರಿಸುತ್ತಿದೆ. ಬೀಡಿ ಕಾರ್ಮಿಕರು ಹಲವಾರು ಸಮಸ್ಯೆಗಳಿಗೆ ಒಳಗಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಅವರ ಸಮಸ್ಯೆ- ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ…
ಪುತ್ತೂರು : ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಪುತ್ತೂರು, ಇದರ ಆಶ್ರಯದಲ್ಲಿ ಅಧಿಕ ಶ್ರಾವಣ ಮಾಸ ಪ್ರಯುಕ್ತ ‘ವಿಶೇಷ ತಾಳಮದ್ದಳೆ ಚತುರ್ಥಿ’ಯಲ್ಲಿ ದಿನಾಂಕ 22/07/2023ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಸುದರ್ಶನ ವಿಜಯ’ ಎಂಬ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಜಯಪ್ರಕಾಶ್ ನಾಕೂರು, ಶ್ರೀ ನಿತೀಶ್ ಎಂಕಣ್ಣಮೂಲೆ, ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಶ್ರೀ ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಮತಿ ಶುಭಾ ಜೆ.ಸಿ. ಅಡಿಗ (ಶ್ರೀ ಮಹಾವಿಷ್ಣು), ಶ್ರೀಮತಿ ಕಿಶೋರಿ ದುಗ್ಗಪ್ಪ ನಡುಗಲ್ಲು (ಮಹಾಲಕ್ಷ್ಮೀ), ಶ್ರೀಮತಿ ಶುಭಾ ಗಣೇಶ್ (ಸುದರ್ಶನ) , ಶ್ರೀಮತಿ ಹರಿಣಾಕ್ಷಿ ಜೆ.ಶೆಟ್ಟಿ (ಶತ್ರುಪ್ರಸೂದನ) ಸಹಕರಿಸಿದರು. ಶ್ರೀ ದೇವಳದ ಆಡಳಿತ ಮೊಕ್ತೇಸರ ಅಶೋಕ್ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ, ರಂಗನಾಥ ರಾವ್ ವಂದಿಸಿದರು. ದೇವಳದ ಆಡಳಿತ ಸಮಿತಿಯ ಸದಸ್ಯರು, ಅರ್ಚಕರು ಕಲಾವಿದರಿಗೆ ಪ್ರಸಾದ ನೀಡಿ ಗೌರವಿಸಿದರು.
ಮಂಗಳೂರು : ಅದ್ಯಪಾಡಿ ಶ್ರೀ ಕ್ಷೇತ್ರ ಬೀಬೀಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ‘ಪುಣ್ಯಕ್ಷೇತ್ರ ಬೀಬೀಲಚ್ಚಿಲ್’ ಐದು ಭಕ್ತಿಗೀತೆಗಳ ಲೋಕಾರ್ಪಣೆ ಸಮಾರಂಭ ದಿನಾಂಕ : 16-07-2023 ರವಿವಾರದಂದು ನಡೆಯಿತು. ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಆರ್ಚಕ ವೇದಮೂರ್ತಿ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಶ್ರೀ ಅಶ್ವಿನ್ ಬಳ್ಳಾಲ ಬೈಲುಬೀಡು, ಶ್ರೀ ಸುಧಾಕರ ರಾವ್ ಪೇಜಾವರ, ಬಂಟ್ವಾಳ ಗಾಣಿಗ ಸಂಘ ಅಧ್ಯಕ್ಷ ಶ್ರೀ ರಘು ಸಫಲ್ಯ, ಬಜರಂಗದಳ ವಿಭಾಗ ಸಂಚಾಲಕ ಶ್ರೀ ಭುಜಂಗ ಕುಲಾಲ್, ಶ್ರೀ ಬಾಲಕೃಷ್ಣ ಕಾವ, ಶ್ರೀ ಯಶೋಧರ ಕಾವ ಪಾದೆ ಅದ್ಯಪಾಡಿ, ಶ್ರೀ ರವೀಂದ್ರ ಕೌಡೂರ, ಶ್ರೀ ಪುರುಷೋತ್ತಮ ಪೂಜಾರಿ, ಶ್ರೀ ಪ್ರಶಾಂತ್ ಪೂಜಾರಿ, ಶ್ರೀ ಪ್ರವೀಣ್ ಶೆಟ್ಟಿ ಮರಕಡ, ಶ್ರೀ ಯೋಗೀಶ್ ಶೆಟ್ಟಿ ಥೆಂಜಾ, ಶ್ರೀ ಪ್ರಭಾಕರ ಆಚಾರ್ಯ ಕಂದಾವರ, ಶ್ರೀ ಗೋಪಾಲಕೃಷ್ಣ ಭಟ್, ಶ್ರೀ ಆದಿತ್ಯ ಭಟ್ ಬೀಬಿಲಚ್ಚಿಲ್, ಸೌಮ್ಯಾ ಭಟ್ ಕಟೀಲು, ಬೀಬೀಲಚ್ಚಿಲ್ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಮೋನಪ್ಪ ಮೇಸ್ತ್ರಿ ಬೀಬಿಲಚ್ಚಿಲ್ ಹಾಗೂ ಮೊದಲಾದವರು…