Author: roovari

ಶಿರ್ವ : ಯಕ್ಷಶಿಕ್ಷಣ ಟ್ರಸ್ಟ್( ರಿ.) ಉಡುಪಿ ಆಯೋಜಿಸುತ್ತಿರುವ ‘ಕಿಶೋರ ಯಕ್ಷಗಾನ ಸಂಭ್ರಮ-2024’ರ ಕಾಪು ವಿಧಾನ ಸಭಾ ವ್ಯಾಪ್ತಿಯಲ್ಲಿ ನಡೆಯುವ ಹದಿನೇಳು ಶಾಲೆಗಳ ಪ್ರದರ್ಶನಗಳ ಉದ್ಫಾಟನೆಯು ದಿನಾಂಕ 15 ಡಿಸೆಂಬರ್ 2024ರಂದು ಶಿರ್ವಾದ ಮಹಿಳಾ ಸೌಧದಲ್ಲಿ ಸಂಪನ್ನಗೊಂಡಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ವಿದ್ಯುಕ್ತ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿಯವರು ಮಾತನಾಡಿ “ಯಕ್ಷಗಾನ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಶಾಲೆಗಳು ಯಕ್ಷಶಿಕ್ಷಣಕ್ಕೆ ಆಸಕ್ತಿ ತೋರಿಸಬೇಕಾಗಿದೆ” ಎಂದು ನುಡಿದರು. ವೇದಿಕೆಯಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್.ವಿ. ಭಟ್, ವಿ.ಜಿ. ಶೆಟ್ಟಿ, ವಿಠಲ್ ಬಿ. ಅಂಚನ್, ಕೆ. ಶ್ರೀಧರ್ ಕಾಮತ್, ನಾರಾಯಣ ಎಂ. ಹೆಗಡೆ, ನಟರಾಜ ಉಪಾಧ್ಯಾಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದರ್ಶನ ಸಂಘಟನಾ ಸಮಿತಿಯ ಸಂಚಾಲಕರಾದ ಕೆ. ಶ್ರೀಪತಿ ಕಾಮತ್ ಸ್ವಾಗತಿಸಿ, ಅನಂತ ಮೂಡಿತ್ತಾಯರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಭಾ…

Read More

ಬೆಂಗಳೂರು: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ‘ಕ್ರಿಯೇಟಿವ್ ಪುಸ್ತಕ ಮನೆ’ ವತಿಯಿಂದ 6 ಪುಸ್ತಕಗಳ ಲೋಕಾರ್ಪಣೆ ಹಾಗೂ ‘ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024’ ಪ್ರದಾನ ಸಮಾರಂಭವು ದಿನಾಂಕ 15 ಡಿಸೆಂಬರ್ 2024ರಂದು ಬೆಂಗಳೂರಿನ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ ರಾವ್ ಹಾಗೂ ಡಾ. ನಾ. ಸೋಮೇಶ್ವರ ಇವರುಗಳು ಈ ವೇದಿಕೆಯಲ್ಲಿ ಕೃತಿಕಾರರಾದ ಕೆ. ಸತ್ಯನಾರಾಯಣ್, ಡಿ. ಎಸ್. ಚೌಗಲೆ, ನರೇಂದ್ರ ರೈ ದೇರ್ಲ,  ಡಾ. ಲಕ್ಷ್ಮಣ ವಿ. ಎ. ಈ ಕೃತಿಕಾರರ ಆರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಪ್ರಾಸ್ತವಿಕ ಮಾತನಾಡಿದ  ಕ್ರಿಯೇಟಿವ್ ಕಾಲೇಜು ಹಾಗೂ ಪುಸ್ತಕ ಮನೆ ಸಂಸ್ಥಾಪಕರಲ್ಲಿ ಒಬ್ಬರಾದ ಅಶ್ವಥ್ ಎಸ್. ಎಲ್. “ಕರಾವಳಿಯಿಂದ ರಾಜಧಾನಿಯವರೆ ನಮ್ಮ ಪುಸ್ತಕ ಪಯಣಕ್ಕೆ ಇದು ಸಂಭ್ರಮದ ಕ್ಷಣ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜತೆ…

Read More

ಕುಂದಾಪುರ: ಬನ್ನೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ನೀಡುವ ‘ಬನ್ನೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ’ಗೆ ನಿವೃತ್ತ ಕುಲಪತಿ ಪ್ರೊ. ಬಿ. ಎ. ವಿವೇಕ ರೈ ಆಯ್ಕೆಯಾಗಿದ್ದಾರೆ. ದಿನಾಂಕ 24 ಡಿಸೆಂಬರ್ 2024ರಂದು ಸಂಜೆ ಘಂಟೆ 6.00 ರಿಂದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆಯುವ ‘ಬಿ.ಅಪ್ಪಣ್ಣ ಹೆಗ್ಡೆ-90’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ, ಬನ್ನೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಅಧ್ಯಕ್ಷ ರಾಮ್‌ಕಿಶನ್ ಹೆಗ್ಡೆ  ತಿಳಿಸಿದ್ದಾರೆ. ಪ್ರಶಸ್ತಿಯು ಬೆಳ್ಳಿಫಲಕ, ಸನ್ಮಾನ ಪತ್ರ ಒಳಗೊಂಡಿದೆ. ಡಾ. ಬಿ. ಎ. ವಿವೇಕ ರೈ ಇವರು ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ, ಅನುವಾದಕ, ಜಾನಪದ ವಿದ್ವಾಂಸ, ನಿವೃತ್ತ ಕನ್ನಡ ಪ್ರಾಧ್ಯಾಪಕರು ಮತ್ತು ವಿಶ್ರಾಂತ ಕುಲಪತಿಗಳು. ಇವರು ಕಳೆದ 54 ವರ್ಷಗಳಿಂದ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಮತ್ತು ತುಳುವಿನ ಕುರಿತು ಹೆಚ್ಚಿನ ಕೆಲಸ ಮಾಡಿದ್ದಾರೆ. ಇವರ ತಾಯ್ನುಡಿ ತುಳು. ಇವರಿಗೆ ಚಿಕ್ಕ ವಯಸ್ಸಿಗೆ ತಮ್ಮ ತಂದೆ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.)ಕೊಮೆ ತೆಕ್ಕಟ್ಟೆ ಸಹಯೋಗದೊಂದಿಗೆ ಡಾ. ಜಗದೀಶ್ ಶೆಟ್ಟಿ ಸಂಯೋಜನೆಯಲ್ಲಿ ‘ಸಿನ್ಸ್ 1999 ಶ್ವೇತಯಾನ-84’ ಹಾಗೂ ದಿನಾಂಕ 15 ಡಿಸೆಂಬರ್ 2024ರ ಭಾನುವಾರದಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಲೀಲಾವತಿ ಬೈಪಡಿತ್ತಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹಿರಿಯ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಮಾತನಾಡಿ “ವಿವಾಹ ನಂತರ ಪತಿಯೇ ಗುರುವಾಗಿ ಸಂಗೀತಗಾರರಾಗಿದ್ದ ಲೀಲಾವತಿಯಮ್ಮನನ್ನು ತೆಂಕು ತಿಟ್ಟಿನ ಯಶಸ್ವೀ ಭಾಗವತರನ್ನಾಗಿ ಮಾಡಿದ ಖ್ಯಾತಿ ಅವರ ಪತಿ ಹರಿ ನಾರಾಯಣ ಬೈಪಡಿತ್ತಾಯರಿಗೆ ಸಲ್ಲುತ್ತದೆ. ಗುರುವಾಗಿ ಅನೇಕ ಶಿಷ್ಯರನ್ನು ಭಾಗವತಿಕೆ ಕ್ಷೇತ್ರಕ್ಕೆ ನೀಡಿದ ಹಿರಿಮೆ ಲೀಲಾವತಿ ಬೈಪಡಿತ್ತಾಯರದು.  ಕಷ್ಟದ ಬದುಕಿನ ನಿವಾರಣೆಗಾಗಿ ಮೇಳದ ತಿರುಗಾಟ ನಡೆಸಿದ ಏಕೈಕ ಮಹಿಳಾ ಪ್ರಥಮ ಭಾಗವತರಾಗಿ ನಿಂತವರು ಲೀಲಾವತಿ ಬೈಪಡಿತ್ತಾಯರು. ಯಕ್ಷಲೋಕಕ್ಕೆ, ಯಕ್ಷಗಾನ ಕಲಾವಿದರಿಗೆ ಎಂದೆಂದಿಗೂ ಮಾತೆಯಾಗಿ ಉಳಿದು ಅಜರಾಮರರಾದರು.” ಎಂದರು. ಶಿರಸಿ ಮೇಳವನ್ನು ಮೆರೆಸಿ ಯಕ್ಷಗಾನವನ್ನು ಶ್ರೀಮಂತಗೊಳಿಸಿದ್ದ ಯಜಮಾನರಾದ ಶ್ರೀ ಕೃಷ್ಣ ನಾಯ್ಕ್, ಡಾ. ಗಣೇಶ್ ಯು., ಉದ್ಯಮಿ ಗೋಪಾಲ ಪೂಜಾರಿ, ಭಾಗವತ…

Read More

ಮಂಗಳೂರು : ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ವೇದಿಕೆ ಹಾಗೂ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ದಿನಾಂಕ 14 ಡಿಸೆಂಬರ್ 2024ರಂದು ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿತು. ಯಕ್ಷಗಾನ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ಈ ವೇಳೆ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅರುವ ಕೊರಗಪ್ಪ ಶೆಟ್ಟಿ ಮಾತನಾಡಿ “ಕುಂಬ್ಳೆ ಸುಂದರ ರಾವ್ ಜೊತೆ ಅನ್ಯೋನ್ಯ ಸಂಬಂಧ ಹೊಂದಿದ್ದೆ. ಅವರಿಂದಾಗಿ ನನಗೆ ಸಂಘದ ಸಂಪರ್ಕ ಸಿಕ್ಕಿತು. ನನ್ನ ಯಕ್ಷಗುರು ಪಡ್ರೆ ಚಂದು. ಆದರೆ, ಯಕ್ಷಗಾನ ರಂಗದಲ್ಲಿ ನನಗೆ ವ್ಯಕ್ತಿತ್ವ ಕರುಣಿಸಿದ್ದು ಕುಂಬ್ಳೆ” ಎಂದರು. ಸಂಸ್ಮರಣಾ ಭಾಷಣ ಮಾಡಿದ ಯಕ್ಷಗಾನ ಅರ್ಥಧಾರಿ ಭಾಸ್ಕರ ರೈ ಕುಕ್ಕುವಳ್ಳಿ, “ಕುಂಬ್ಳೆ ಸುಂದರ ರಾವ್ ಅವರು ಯಕ್ಷಗಾನ ರಂಗದ ಪ್ರಾತಃಸ್ಮರಣೀಯರು. ಯಕ್ಷಗಾನದಲ್ಲಿ ಅರ್ಥಗಾರಿಕೆಗೆ ಹೊಸ ಆಯಾಮ ನೀಡಿದ ಇವರು…

Read More

ಪುತ್ತೂರು : ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಬೊಳುವಾರು ಇಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮಹಿಳಾ ವಿಂಶತಿ ಸಂಭ್ರಮ ಅಂಗವಾಗಿ 19ನೇ ಸರಣಿ ತಾಳಮದ್ದಳೆ ‘ಸುಧನ್ವ ಮೋಕ್ಷ’ ಎಂಬ ಆಖ್ಯಾನದೊಂದಿಗೆ ದಿನಾಂಕ 14 ಡಿಸೆಂಬರ್ 2024ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ (ಸುಧನ್ವ), ಭಾಸ್ಕರ ಬಾರ್ಯ (ಶ್ರೀ ಕೃಷ್ಣ), ವಿ.ಕೆ. ಶರ್ಮ ಅಳಿಕೆ (ಅರ್ಜುನ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More

ಬೆಂಗಳೂರು : ಸಂಸ್ಕಾರ ಭಾರತಿ ಕರ್ನಾಟಕ (ರಿ.) ಇದರ ವತಿಯಿಂದ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಮತ್ತು ಕಾವಿ ಆರ್ಟ್ ಫೌಂಡೇಶನ್ ಇವುಗಳ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಡಿವೈನ್ ಡೈಮೆನ್ಷನ್ಸ್’ ಜನಾರ್ದನ ರಾವ್ ಹವಾಂಜೆಯವರ ಕಾವಿ ಭಿತ್ತಿಚಿತ್ರಗಳ ಕಲಾ ಪ್ರದರ್ಶನವನ್ನು ದಿನಾಂಕ 18 ಡಿಸೆಂಬರ್ 2024ರಿಂದ 29 ಡಿಸೆಂಬರ್ 2024ರವರೆಗೆ ಬೆಂಗಳೂರಿನ ಬಸವನಗುಡಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ಆಯೋಜಿಸಲಾಗಿದೆ. ಈ ಕಲಾ ಪ್ರದರ್ಶನವು ದಿನಾಂಕ 18 ಡಿಸೆಂಬರ್ 2024ರಂದು ಉದ್ಘಾಟನೆಗೊಳ್ಳಲಿದೆ.

Read More

ಮಂಗಳೂರು : ಯಕ್ಷಗಾನದ ಪ್ರಥಮ ಮಹಿಳಾ ವೃತ್ತಿ ಭಾಗವತರಾಗಿದ್ದ ಲೀಲಾವತಿ ಬೈಪಡಿತ್ತಾಯ ದಿನಾಂಕ 14 ಡಿಸೆಂಬರ್ 2024 ರಂದು ನಿಧನರಾದರು. ಅವರಿಗೆ 78ವರ್ಷ ವಯಸ್ಸಾಗಿತ್ತು. ಕಾಸರಗೋಡಿನ ಮಧೂರಿನಲ್ಲಿ 1947ರ ಮೇ 23ರಂದು ಜನಿಸಿದ್ದ ಲೀಲಾವತಿ ಸಣ್ಣ ಪ್ರಾಯದಲ್ಲೇ ತಂದೆಯನ್ನು ಕಳೆದು ಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್, ಮಧೂರು ದೇವಾಲಯದಲ್ಲಿ ದೇವ ನೃತ್ಯ ಕಲಾವಿದರಾಗಿದ್ದರು. ಬಡತನದಿಂದಾಗಿ ಲೀಲಾವತಿಗೆ ವಿದ್ಯೆ ಕಲಿಯಲಾಗಲಿಲ್ಲ. ಸುಮಧುರವಾಗಿ ಹಾಡುತ್ತಿದ್ದ ಅವರು ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತರು. 23ನೇ ವರ್ಷ ಪ್ರಾಯದಲ್ಲಿ ತೆಂಕುತಿಟ್ಟಿನ ಚೆಂಡೆ-ಮದ್ದಳೆಯ ಕಲಾವಿದ ಹರಿನಾರಾಯಣ ಬೈಪಾಡಿತ್ತಾಯ ಅವರನ್ನು ಮದುವೆಯಾಗಿ ಕಡಬಕ್ಕೆ ಸ್ಥಳಾಂತರಗೊಂಡರು.  ಲೀಲಾವತಿ ಅವರ ಶಾಸ್ತ್ರೀಯ ಸಂಗೀತ ಗಾಯನ ಪ್ರತಿಭೆಯನ್ನು ಅರಿತ ಪತಿ ಹರಿನಾರಾಯಣರು ಯಕ್ಷಗಾನ ಹಾಡುಗಾರಿಕೆಗೆ ಪ್ರೋತ್ಸಾಹ ನೀಡಿದರು. ಆರಂಭದಲ್ಲಿ ಕಡಬದ ಸುತ್ತಲಿನ ಶಾಲಾ ವಾರ್ಷಿಕೋತ್ಸವ, ಮದುವೆ, ಉಪನಯನ ಮತ್ತಿತರ ಕಾರ್ಯಕ್ರಮಗಳಲ್ಲಿ ಆಯೋಜಿಸುವ ತಾಳಮದ್ದಲೆಯ ಪ್ರಸಂಗಗಳಲ್ಲಿ…

Read More

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ (ರಿ.) ಆಯೋಜಿಸುವ 2024-25ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ : ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಇವರ ಹೆಸರಿನಲ್ಲಿ ಪ್ರತಿ ವರ್ಷ ಕೊಡಮಾಡುವ ಸಾಹಿತ್ಯ ಪ್ರಶಸ್ತಿಗೆ ಈ ಬಾರಿ ‘ಲೇಖಕಿಯರಿಂದ ಅನುವಾದಿತ ಕಾದಂಬರಿ’ಗಳನ್ನು ಆಹ್ವಾನಿಸಲಾಗಿದೆ. 2022, 2023, 2024ರ ಸಾಲಿನಲ್ಲಿ ಪ್ರಕಟವಾದ ಯಾವುದೇ ಭಾಷೆಯಿಂದ ಕನ್ನಡಕ್ಕೆ ಲೇಖಕಿಯರು ಅನುವಾದಿಸಿ ಪ್ರಕಟಿಸಿದ ಕಾದಂಬರಿಯ ಮೂರು ಪ್ರತಿಗಳನ್ನು ದಿನಾಂಕ 10 ಜನವರಿ 2024ರ ಒಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜೊತೆಗೆ ವೈಯಕ್ತಿಕ ಮಾಹಿತಿ ಮತ್ತು ಸಂಪರ್ಕ ಸಂಖ್ಯೆಯಿರುವ ಪ್ರವೇಶ ಪತ್ರವನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ 97425 38833 ಈ ಸಂಖ್ಯೆಯನ್ನು ಸಂಪರ್ಕಿಸಬಹುದು. ಚಂದ್ರಭಾಗಿ ರೈ ದತ್ತಿ ಬಹುಮಾನ…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿದ್ದ 15 ದಿನಗಳ ‘ಕಿಶೋರ ಯಕ್ಷಗಾನ ಸಂಭ್ರಮ – 2024’ ಇದರ ಸಮಾರೋಪ ಸಮಾರಂಭವು ದಿನಾಂಕ 14 ಡಿಸೆಂಬರ್ 2024ರಂದು ನಡೆಯಿತು. ಈ ಸಮಾರಂಭದಲ್ಲಿ ಸಾನಿಧ್ಯ ವಹಿಸಿದ್ದ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ “ಕಲೆ ಸಾಹಿತ್ಯದಿಂದ ಜೀವನದಲ್ಲಿ ಲವಲವಿಕೆ ಇರುತ್ತದೆ. ಯಕ್ಷಗಾನ ಪರಿಪೂರ್ಣ ಕಲಾಪ್ರಕಾರ. ಇದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿ ಜೀವನ ಮೌಲ್ಯ ಕಲಿಸುತ್ತದೆ” ಎಂದು ನುಡಿದರು. ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು “ಮಕ್ಕಳಿಗೆ ಪುರಾಣ ಕಥೆಗಳನ್ನು ತಿಳಿಯುವುದಕ್ಕೆ ಇದು ಅತ್ಯುತ್ತಮ ಮಾರ್ಗವಾಗಿದೆ” ಎಂದರು. ಯಕ್ಷಶಿಕ್ಷಣ ಟ್ರಸ್ಟಿನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶ್ಪಾಲ್ ಸುವರ್ಣರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಶಿಕ್ಷಣ…

Read More