Author: roovari

ಮುಡಿಪು : ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಆಶ್ರಯದಲ್ಲಿ ‘ಸಂಭ್ರಮ-2023’ ಸಾಂಸ್ಕೃತಿಕ ಸ್ಪರ್ಧೆಯು ದಿನಾಂಕ 17-07-2023 ಸೋಮವಾರ ಉದ್ಘಾಟನೆಗೊಂಡು 18 ಮತ್ತು 19-07-2023ರಂದು ಮೂರು ದಿನಗಳ ಕಾಲ ನಡೆಯಿತು. ಈ ಕಾರ್ಯಕ್ರಮವನ್ನು ಮಂಗಳಾ ಸಭಾಂಗಣದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಅವರು ಉದ್ಘಾಟಿಸಿ ಮಾತನಾಡುತ್ತಾ “ಕಾಲ ಬದಲಾದರೂ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆಯದೆ ಸಂಸ್ಕಾರದ ಮೌಲ್ಯವನ್ನು ಅರಿತುಕೊಂಡು ನಾವು ಮುನ್ನಡೆಯಬೇಕು. ನಾವು ಯಾವುದೇ ಸಾಧನೆ ಮಾಡಿದರೂ ನಮ್ಮ ತಂದೆ ತಾಯಿಗೆ ಕೊಡುವ ಗೌರವದ ಮೌಲ್ಯ ನಮಗೆ ತಿಳಿದಿರಬೇಕು. ಇಂದಿನ ಆಧುನಿಕ ಯುಗದಲ್ಲಿ ಸಾಧನೆಗೆ ಬಹಳಷ್ಟು ಮಾರ್ಗಗಳಿದ್ದು ಅದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಬದುಕನ್ನು ಕಂಡುಕೊಳ್ಳಬೇಕು” ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕುಲಪತಿ ಪ್ರೊ. ಜಯರಾಜ್ ಅಮೀನ್‌ ಅವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು” ಎಂದರು. ರಾಷ್ಟ್ರಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಜಯಗಳಿಸಿದ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಗೋವಿಂದ ದಾಸ…

Read More

ಮುಂಬೈ: ಶ್ರೀ ಶನೀಶ್ವರ ಮಹಾತ್ಮೆ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆಯ ಪ್ರಸಿದ್ಧ ಅರ್ಥಧಾರಿ ಶ್ರೀ ವಿಜಯ ಕುಮಾರ್ ಶೆಟ್ಟಿ ಮೊಯ್ಲೊಟ್ಟು ಅವರಿಗೆ ಮುಂಬೈ ಕಲ್ಯಾಣದ ಹೋಟೆಲ್ ಗುರುದೇವ್ ಗ್ರ್ಯಾಂಡ್ ನಲ್ಲಿ ದಿನಾಂಕ 17-07-2023ರಂದು ‘ಗುರುದೇವ ಕಲಾ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು. ನಂದಯ್ಯ ಗಾಣದ ರಾಮಣ್ಣ ಪಾತ್ರ ನಿರ್ವಹಣೆಯಲ್ಲಿ ಸಿದ್ಧಿ ಪ್ರಸಿದ್ಧಿ ಪಡೆದ ಮೊಯ್ಲೊಟ್ಟು ಅವರ ಸಾಧನೆಯನ್ನು ಗುರುತಿಸಿ, ಎಕ್ಕಾರು ನಡ್ಯೋಡಿ ಗುತ್ತು ಭಾಸ್ಕರ ಶೆಟ್ಟಿ ಮತ್ತು ಶಾರದಾ ಭಾಸ್ಕರ ಶೆಟ್ಟಿ ಹಾಗೂ ಶ್ರೀಕಾಂತ್ ಶೆಟ್ಟಿ ಅವರು ಚಾರಿಟೇಬಲ್ ಟ್ರಸ್ಟ್ ಮೂಲಕ ಈ ಪ್ರಶಸ್ತಿ ನೀಡಿ ಅಭಿನಂದಿಸಿ ಗೌರವಿಸಿದರು. ಕಲ್ಯಾಣದ ಪ್ರತಿಷ್ಟಿತ ಉದ್ಯಮಿಗಳ ಉಪಸ್ಥಿತಿಯಲ್ಲಿ, ಶ್ರೀ ಶನೀಶ್ವರ ಭಕ್ತವೃಂದ ಪಕ್ಷಿಕೆರೆ ತಂಡದ ಮುಂಬೈ ಯಕ್ಷಯಾನದ ಕಲ್ಯಾಣದಲ್ಲಿ ನಡೆದ ‘ಶ್ರೀ ಸತ್ಯನಾರಾಯಣ ವೃತ ಮಹಾತ್ಮೆ’ ಪೂಜಾ ಸಹಿತ ತಾಳಮದ್ದಳೆಯ ಕಾರ್ಯಕ್ರಮವನ್ನು ಕದ್ರಿ ಶ್ರೀ ನವನೀತ ಶೆಟ್ಟಿ ನಿರ್ವಹಿಸಿದರು. ಹಿಮ್ಮೇಳನದಲ್ಲಿ ಹೆಬ್ರಿ ಗಣೇಶ್, ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ, ದಯಾನಂದ ಶೆಟ್ಟಿಗಾರ್ ಮಿಜಾರ್ ಹಾಗೂ ಅರ್ಥದಾರಿಗಳು ಕದ್ರಿ…

Read More

ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದ.ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ದಯಾನಂದ ರಾಮಚಂದ್ರ ನಾಯ್ಕ್ ರನ್ನು ದಿನಾಂಕ 21-07-2023 ರಂದು ಭೇಟಿಯಾಗಿ ದ.ಕ.ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾಹಿತ್ಯ ಪ್ರೇರಣಾ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತಾಗಿ ಶಿಕ್ಷಣ ಇಲಾಖೆಯ ಮೂಲಕ ಮಾರ್ಗದರ್ಶನ ನೀಡಲು ಮನವಿ ಪತ್ರವನ್ನು ನೀಡಲಾಯಿತು. ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವಲ್ಲಿ ಕನ್ನಡ ಭಾಷೆಯೇ ಆಧಾರ. ಈ ನಿಟ್ಟಿನಲ್ಲಿ ಭಾಷೆಯ ಸಬಲೀಕರಣಕ್ಕೆ ದ.ಕ.ಜಿಲ್ಲೆಯಾದ್ಯಂತ ಪ್ರತೀ ಶಾಲೆಗಳಲ್ಲಿ ವರ್ಷದಲ್ಲಿ ಕನಿಷ್ಠ ಒಂದಾದರೂ ಕನ್ನಡ ಪರ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಮನವಿ ಮಾಡಿಕೊಳ್ಳಲಾಯಿತು. ಸಾಹಿತಿಗಳ ಪರಿಚಯ, ಸಾಹಿತ್ಯಿಕ ಉಪನ್ಯಾಸ, ವಾಚನಾಲಯ ಬಳಕೆ, ಕತೆ ಮತ್ತು ಕವನ ಬರವಣಿಗೆ ಕಮ್ಮಟ, ಕನ್ನಡ ಗೀತೆಗಳ ಗಾಯನ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳಲು ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲೆ ಶಾಲೆಗಳಿಗೆ ಸೂಕ್ತ…

Read More

ಕಿನ್ನಿಗೋಳಿ: ಯಕ್ಷಲಹರಿ(ರಿ.) ಮತ್ತು ಯುಗಪುರುಷ ಕಿನ್ನಿಗೋಳಿ ಪ್ರಸ್ತುತಪಡಿಸುವ ಯಕ್ಷಲಹರಿಯ 33ನೇ ವಾರ್ಷಿಕ ಸಂಭ್ರಮ-2023 ‘ಚರಿತಂ ಮಹಾತ್ಮನಃ’ ಯಕ್ಷಗಾನ ವಾಗ್ವೈಭವದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 31-07-2023ರಂದು ನಡೆಯಲಿದೆ. 31-07-2023ರಿಂದ 08-08-2023ರ ವರೆಗೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಸಂಜೆ ಗಂಟೆ 5-00 ರಿಂದ 8.30ರ ವರೆಗೆ ‘ಯಕ್ಷಗಾನ ವಾಗ್ವೈಭವ’ ತಾಳಮದ್ದಳೆ ಕಾರ್ಯಕ್ರಮವು ನಡೆಯಲಿದೆ. ದಿನಾಂಕ 31-07-2023ನೇ ಸೋಮವಾರ ಪ್ರಸಂಗ ‘ಧ್ರುವ ಚರಿತ್ರೆ’. ಭಾಗವತರಾಗಿ ಪ್ರದೀಪ್ ಗಟ್ಟಿ ಹಾಗೂ ದೇವರಾಜ ಆಚಾರ್ಯ. ಚಂಡೆ ಮತ್ತು ಮದ್ದಳೆಯಲ್ಲಿ ರಾಮಪ್ರಕಾಶ ಕಲ್ಲೂರಾಯ ಹಾಗೂ ಸವಿನಯ ನೆಲ್ಲಿತೀರ್ಥ. ಅರ್ಥಧಾರಿಗಳಾಗಿ ವಿಷ್ಣು ಶರ್ಮ ವಾಟೆಪಡ್ಪು, ಎಂ.ಕೆ.ರಮೇಶ ಆಚಾರ್ಯ, ನಾ.ಕಾರಂತ ಪೆರಾಜೆ, ಶೇಣಿ ವೇಣುಗೋಪಾಲ, ವೆಂಕಟರಮಣ ಕೆರೆಗದ್ದೆ ಮತ್ತು ಪಶುಪತಿ ಶಾಸ್ತ್ರಿ ಭಾಗವಹಿಸಲಿದ್ದಾರೆ. ದಿನಾಂಕ 1-08-2023ನೇ ಮಂಗಳವಾರ ಪ್ರಸಂಗ ‘ನಳ ಚರಿತ್ರೆ’. ಭಾಗವತರಾಗಿ ರಾಮಕೃಷ್ಣ ಮಯ್ಯ, ಸಿರಿಬಾಗಿಲು. ಚಂಡೆ ಮತ್ತು ಮದ್ದಳೆಯಲ್ಲಿ ಸಕ್ಕರೆಮೂಲೆ ಗಣೇಶ ಭಟ್ ಹಾಗೂ ವೇದವ್ಯಾಸ ರಾವ್‌ ಕುತ್ತೆತ್ತೂರು. ಅರ್ಥಧಾರಿಗಳಾಗಿ ಸರ್ಪಂಗಳ ಈಶ್ವರ ಭಟ್, ರವಿರಾಜ ಪನೆಯಾಲ, ಸಂಜಯ ಕುಮಾರ್…

Read More

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಕರಣೆ ಮತ್ತು ತುಳುವ ಮೌಖಿಕ ಪರಂಪರೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 08-07-2023ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಭಾಗವಹಿಸಿ ಮಾತನಾಡುತ್ತಾ “ಗೋಪಾಲ ನಾಯ್ಕ ಅವರು ಪ್ರತಿಭಾವಂತ ಕವಿಯಾಗಿದ್ದರು. ತುಳುವ ಮೌಖಿಕ ಪರಂಪರೆಯ ಸಮರ್ಥ ಕೊಂಡಿಯಾಗಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಂತಾರಾಷ್ಟ್ರೀಯ ಕವಿಯಾಗಿ ಹೊರಹೊಮ್ಮಿದ್ದಾರೆ, ತುಳುನಾಡಿನ ಜಾನಪದ ಅಷ್ಟೊಂದು ಶ್ರೀಮಂತವಾದುದು” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ವಹಿಸಿದ್ದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ ಹಾಗೂ ಗೋಪಾಲ ನಾಯ್ಕ ಅವರ ಪುತ್ರರಾದ ಸಿದ್ಧವನ ಗುರುಕುಲದ ಪ್ರಧಾನ ಪಾಲಕ ಕೇಶವ ನಾಯ್ಕ…

Read More

ಮೂಲ್ಕಿ: ಪಾವಂಜೆಯ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಇವರು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಸುವ ‘ರಜತ ಪರ್ವ ಸರಣಿ ಯಕ್ಷಗಾನ ತಾಳಮದ್ದಳೆ ಸಂಧಾನ ಸಪ್ತಕ’ದ ಉದ್ಘಾಟನಾ ಸಮಾರಂಭ ದಿನಾಂಕ 19-07-2023ರಂದು ನಡೆಯಿತು. ಶ್ರೀಯುತ ಪ.ರಾ.ಶಾಸ್ತ್ರಿಗಳು ಭಾಗವತ ಬಲಿಪ ಶಿವಶಂಕರ ಭಟ್ಟರಿಗೆ ವೀಳ್ಯವನ್ನು ಕೊಡುವ ಮೂಲಕ ಈ ಸಪ್ತಕವನ್ನು ಉದ್ಘಾಟಿಸಿದರು. ಬಹುಶ್ರುತ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿಯವರು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇದರ ರಜತಪರ್ವ ಸರಣಿ ಅಭಿಯಾನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಟ್ರಸ್ಟಿ ನಕ್ರೆ ಬಾಲಕೃಷ್ಣ ರಾವ್ ಕಲಾವಿದರನ್ನು ಗೌರವಿಸಿದರು. ಪ್ರತಿಷ್ಠಾನದ ಸರಣಿ ರಜತ ಪರ್ವದ 98ನೇ ಯಕ್ಷಗಾನ ತಾಳಮದ್ದಳೆ ‘ಸುಗ್ರೀವ ಕೌಶಿಕೆ’ ಪ್ರಸ್ತುತಗೊಂಡಿತು. ಹಿಮ್ಮೇಳದಲ್ಲಿ ಬಲಿಪ ಶಿವಶಂಕರ ಭಟ್, ನೆಕ್ಕರೆಮೂಲೆ ಗಣೇಶ್ ಭಟ್ ಹಾಗೂ ಕೌಶಿಕ್…

Read More

ಬಂಟ್ವಾಳ: ಬಂಟ್ವಾಳದ ತುಂಬೆ ಕಡೆಗೋಳಿ ‘ನಿರತ ಸಾಹಿತ್ಯ ಸಂಪದ’ ಮತ್ತು ಗಲ್ಫ್ ಕನ್ನಡಿಗ ವತಿಯಿಂದ ಮೂರನೇ ವರ್ಷದ ಅತ್ಯುತ್ತಮ ವೆಬ್‌ಸೈಟ್ (ಅಂತರ್ಜಾಲ) ವರದಿಗೆ ನೀಡುವ ರಾಜ್ಯ ಮಟ್ಟದ ‘ಬಿ.ಜಿ.ಮೋಹನದಾಸ್ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಜೊತೆಗೆ ವರದಿಯ ಮೂರು ಪ್ರತಿಯನ್ನು ದಿನೇಶ್ ಎನ್. ತುಂಬೆ ಕಾರ್ಯದರ್ಶಿ, ನಿರತ ಸಾಹಿತ್ಯ ಸಂಪದ, ಪ್ರಗತಿ ಪ್ರಿಂಟರ್ಸ್, ತುಂಬೆ – 574 143, ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಆಗಸ್ಟ್ 10 ರೊಳಗೆ ಕಳುಹಿಸಿಕೊಡಬೇಕು. ವರದಿಯ ಲಿಂಕ್ ಅನ್ನು ಕಡ್ಡಾಯವಾಗಿ 9844619763 ಈ ನಂಬರ್‌ಗೆ ವಾಟ್ಸ್ಆ್ಯಪ್ ಮಾಡಬೇಕು.

Read More

ಯಲ್ಲಾಪುರ: ಹಿರಿಯ ಪತ್ರಕರ್ತ, ಅಂಕಣಕಾರ, ಅನಂತ ವೈದ್ಯ ಅನಾರೋಗ್ಯದಿಂದಾಗಿ ದಿನಾಂಕ 24-07-2023ರ   ಸೋಮವಾರ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಪಟ್ಟಣದ ಹುಲ್ಲೂರ ಮನೆಯಲ್ಲಿರುವ ಸ್ವಗೃಹದಲ್ಲಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ಸಲ್ಲಿಸಲಾಯಿತು. ಮೃತರು ಮೂಲತ: ಅಂಕೋಲಾ ತಾಲೂಕಿನ ವೈದ್ಯ ಹೆಗ್ಗಾರಿನವರಾಗಿದ್ದು, ಮಡದಿ ಶ್ರೀಮತಿ ವಿಜಯಶ್ರೀ, ಇಬ್ಬರು ಪುತ್ರಿಯರಾದ ಕವಿತಾ, ಸಂಗೀತಾ ಹಾಗೂ ಓರ್ವ ಪುತ್ರ ಕಿರಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಶ್ರೀಯುತರು ರಾಜ್ಯ ಮಟ್ಟದ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಹಲವು ವರ್ಷ ಕೆಲಸ ಮಾಡಿದ್ದಾರೆ. ಯಕ್ಷಗಾನದ ಶ್ರೇಷ್ಠ ಕಲಾವಿದರೂ ಅರ್ಥಧಾರಿಗಳೂ ಆಗಿದ್ದ ಶೇಣಿ ಗೋಪಾಲಕೃಷ್ಣ ಭಟ್ಟರ ಚಿಂತನೆಗಳನ್ನು ಸಂಗ್ರಹಿಸಿ ‘ಜ್ಞಾನಯಜ್ಞ’ ಎಂಬ ಪುಸ್ತಕವನ್ನು ಸಂಪಾದಿಸಿ ಪ್ರಕಟಿಸಿದ್ದರು. ಇವರು ಬರೆದ ‘ಪಾದುಕಾ ಪ್ರಧಾನ’ ಗ್ರಂಥ ಕೆಲವು ವರ್ಷಗಳ ಹಿಂದೆ ಪ್ರಕಟಗೊಂಡಿದೆ. ಪುರಾಣ ಮತ್ತು ಭಾರತಗಳಲ್ಲಿನ ವಿಶಿಷ್ಟ ಸಂಗತಿಗಳನ್ನಾಧರಿಸಿದ ಅಂಕಣವನ್ನು ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಬರೆದಿದ್ದಾರೆ. ಕನ್ನಡ ಮತ್ತು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವಿದ್ದ ಜ್ಞಾನಸಾಗರ ಅನಂತ ವೈದ್ಯರು. ಯಕ್ಷಗಾನದ ಮೊಟ್ಟಮೊದಲ…

Read More

ಪುತ್ತೂರು: ಡಿಸೆಂಬರ್ -2023ರಲ್ಲಿ ನಡೆಯಲಿರುವ ‘ಶ್ರೀ ಆಂಜನೇಯ 55’ರ ಸಂಭ್ರಮಕ್ಕೆ ಪೂರಕವಾಗಿ ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ರೂಪುಗೊಂಡು ಪ್ರಾರಂಭವಾದ ‘ಯಕ್ಷ ಬಾನುಲಿ ಸರಣಿ ತಾಳಮದ್ದಳೆ’ಎಂಬ ಕಾರ್ಯಕ್ರಮದಡಿಯಲ್ಲಿ ದಿನಾಂಕ 21-07-2023 ರಂದು ವಿವೇಕಾನಂದ ಕಾಲೇಜಿನ ಆಡಳಿತಕ್ಕೊಳಪಟ್ಟ ರೇಡಿಯೋ ಪಾಂಚಜನ್ಯದಲ್ಲಿ ‘ಯಕ್ಷ ದಾಂಪತ್ಯ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀಪತಿ ನಾಯಕ್ ಆಜೇರು, ಕುಸುಮಾಕರ ಆಚಾರ್ಯ ಹಳೇನೇರಂಕಿ, ಚೆಂಡೆ ಮದ್ದಳೆಗಳಲ್ಲಿ ಮುರಳೀಧರ ಕಲ್ಲೂರಾಯ, ಆದಿತ್ಯ ನಾರಾಯಣ ಸಹಕರಿಸಿದರು. ಮುಮ್ಮೇಳದಲ್ಲಿ “ಪೂಕಳ ಲಕ್ಷ್ಮೀ ನಾರಾಯಣ ಭಟ್ (ಭೀಮ), ಹರಿಣಾಕ್ಷಿ.ಜೆ.ಶೆಟ್ಟಿ( ದ್ರೌಪದಿ), ದಿವಾಕರ ಆಚಾರ್ಯ ಗೇರುಕಟ್ಟೆ ( ಲಕ್ಷ್ಮಣ), ಶುಭಾ ಗಣೇಶ್ (ಊರ್ಮಿಳೆ) ಸಹಕರಿಸಿ, ತೇಜಸ್ವಿನಿ ಕೆಮ್ಮಿಂಜೆ ಹಾಗೂ ಪ್ರಶಾಂತ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Read More

ಬೆಂಗಳೂರು: ಜಯಚಾಮರಾಜೇಂದ್ರ ಒಡೆಯರ್ ಅವರ 104ನೇ ಜನ್ಮ ದಿನೋತ್ಸವವನ್ನು ದಿನಾಂಕ 18-07-2023ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಶಿಯವರು “ಜಯಚಾಮರಾಜ ಒಡೆಯರ್ ಅವರು ಮೊದಲಿನಿಂದಲೂ ಅಖಂಡ ಕರ್ನಾಟಕದ ಪ್ರತಿಪಾದಕರಾಗಿದ್ದರು. ಅಖಂಡ ಕರ್ನಾಟಕ ಅವರ ಕನಸಾಗಿತ್ತು. ಅದನ್ನು ನನಸಾಗಿಸಲು ರಾಜಪದವಿಯನ್ನು ತ್ಯಜಿಸಲೂ ಸಿದ್ಧರಾಗಿದ್ದರು. ಶ್ರೀ ಜಯಚಾಮರಾಜ ಒಡೆಯರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೂಡ ಆಗಿದ್ದರು. ಅವರ ಕಾಳಜಿಯಿಂದಲೇ ಬಿ.ಎಂ. ಶ್ರೀ ಅಚ್ಚಕೂಟ ಕನ್ನಡ ಮತ್ತು ಮಹಿಳಾ ಘಟಕದ ಯೋಜನೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪನೆಯಾಯಿತು. ಮಹಾರಾಜರು ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿದ್ದರು. ತಾವೇ ಕುವೆಂಪು ಅವರ ಮನೆಗೆ ಹೋಗಿ ಕನ್ನಡ ಕಲಿತಿದ್ದು ಅವರ ಹಿರಿಮೆ. ಹೀಗಾಗಿಯೇ ಕನ್ನಡ ಪ್ರೇಮ ಅವರಲ್ಲಿ ಮೂಡಿತ್ತು. ಜಯಚಾಮರಾಜೇಂದ್ರ ಗ್ರಂಥರತ್ನಮಾಲೆಯ ಮೂಲಕ ವೇದ, ಪುರಾಣ ಮತ್ತು ಇತಿಹಾಸಗಳ ಗ್ರಂಥಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಪಂಡಿತರಿಂದ ಅನುವಾದ ಮಾಡಿಸಿ…

Read More