Author: roovari

ಗದಗ : ಉತ್ತರ ಕರ್ನಾಟಕ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆಯಾದ ಕಲಾ ವಿಕಾಸ ಪರಿಷತ್ (ರಿ), ಗದಗ ಇವರ 24ನೆಯ ವಾರ್ಷಿಕೋತ್ಸವ, ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಸಮಾರಂಭವನ್ನು ಜನವರಿ ತಿಂಗಳ ಎರಡನೇ ವಾರ ಧಾರವಾಡದಲ್ಲಿ ಹಮ್ಮಿಕೊಂಡಿದೆ. ಈ ಸಮಾರಂಭದಲ್ಲಿ ಸಂಗೀತ, ನೃತ್ಯ ಕಲಾವಿದರಿಗೆ ಸೇರಿ 24 ಮತ್ತು ಕಲಾಪೋಷಕ, ಕಲಾಪೋಷಕ ಸಂಸ್ಥೆಗಳಿಗೆ ಸೇರಿ 26 ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ. ಆಸಕ್ತ ಸಂಗೀತ ನೃತ್ಯ ಕಲಾವಿದರು, ಕಲಾ ತಂಡಗಳು, ಕಲಾ ಪೋಷಕರು ಮತ್ತು ಕಲಾ ಪೋಷಕ ಸಂಸ್ಥೆಯ ಮುಖ್ಯಸ್ಥರು ಅರ್ಜಿ ಸಲ್ಲಿಸಬಹುದಾಗಿದೆ. ಕಲಾವಿದರು ಹಾಗೂ ಕಲಾ ತಂಡಗಳು ಕಲಾ ಪ್ರದರ್ಶನದ ವಿಡಿಯೋ ಕ್ಲಿಪ್ ಸಹಿತ ಸವಿವರದೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಕಲಾ ಪೋಷಕರು ಮತ್ತು ಕಲಾ ಪೋಷಕ ಸಂಸ್ಥೆಗಳು, ಕಲಾ ಪೋಷಿಸಿಕೊಂಡು ಬಂದ ವಿವರ ನೀಡಬೇಕು. ಈ ಸಮಾರಂಭದ ಉತ್ತಮ ತಂಡಗಳಿಗೆ ಗೌರವ ಸಂಭಾವನೆ ನೀಡಿ ಗದುಗಿನ ಇನ್ನೊಂದು ಕಾರ್ಯಕ್ರಮಕ್ಕೆ ಆಹ್ವಾನಿಸಿ ವೇದಿಕೆ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ದಿನಾಂಕ 28 ಡಿಸೆಂಬರ್…

Read More

ಉಡುಪಿ : ತೆಕ್ಕಟ್ಟೆ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ನೇತೃತ್ವದ ಅಭಿನಂದನೆ ಕಾರ್ಯಕ್ರಮ ದಿನಾಂಕ 13 ಡಿಸೆಂಬರ್ 2024ರಂದು ಗುರು ಬನ್ನಂಜೆ ಸಂಜೀವ ಸುವರ್ಣರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣರನ್ನು ಗೌರವಿಸಿದ ತೆಕ್ಕಟ್ಟೆ ಯಶಸ್ವೀ ಕಲಾವೃಂದದ ಗುರು ಲಂಬೋದರ ಹೆಗಡೆ ಮಾತನಾಡಿ “ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಸಲ್ಲಲೇಬೇಕಾದ ಪ್ರಶಸ್ತಿಗಳನೇಕವು ಅರ್ಜಿ ಸಲ್ಲಿಸದೇ ಗುರುಗಳನ್ನು ಹುಡುಕಿ ಬಂದಿದೆ. ಅದರಲ್ಲಿ ಬಹು ಪ್ರಾಮುಖ್ಯವಾದದ್ದು ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡಿದ ಪ್ರಶಸ್ತಿ. ಇಂತಹ ಗುರುಗಳನ್ನು ಅಭಿನಂದಿಸಬೇಕಾದದ್ದು ನಮ್ಮಂತಹ ಸಂಸ್ಥೆಯ ಕರ್ತವ್ಯ. ಪ್ರಶಸ್ತಿಗೆ ಭಾಜನರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನಾರೋಗ್ಯದ ಕಾರಣದಿಂದ ಗುರುಗಳಿಗೆ ಅಸಾಧ್ಯವಾಗಿತ್ತು. ಆದರೆ ಇಂದು ಗುರು ಸನ್ನಿಧಿಯಲ್ಲಿ ಗೌರವಿಸಿ, ಅಭವಂದಿಸಿದ ಭಾಗ್ಯ ನಮ್ಮ ಪಾಲಿಗೆ ಬಂದಿದೆ.”ಎಂದರು ಸಮಾರಂಭದಲ್ಲಿ ಸಂಜಿವ ಸುವರ್ಣ ದಂಪತಿಗಳು, ಉದ್ಯಮಿ ಗೋಪಾಲ ಪೂಜಾರಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.

Read More

ಮೂಡುಬಿದಿರೆ : ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ದಿನಾಂಕ 13 ಡಿಸೆಂಬರ್ 2024ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು. ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕವು ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು. ‘ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ ಸೃಷ್ಟಿಸಿತು. ಚೆಂಡು, ನೀರಾಟ, ಉಯ್ಯಾಲೆ, ಕೋಲಾಟವನ್ನುಬಯಕ್ಷ ರೂಪಕದಲ್ಲಿ ಬಿಂಬಿಸಿದರು. ಕೃಷ್ಣನ ಬಾಲ ಲೀಲೆ ಸಾರುವ ಕಾಳಿಂಗ ಮರ್ಧನ, ಕಂಸ ವಧೆ, ರಾಧೆಯರು, ವಸುದೇವ, ಪೂತನಿ ಸಂಹಾರದ ದೃಶ್ಯಾವಳಿಗಳನ್ನು ಅಂತಿಮವಾಗಿ ಮೂಡಿಸಿದ್ದು, ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿತು. ನಂತರ ವೇದಿಕೆಯಲ್ಲಿ ಮೊಳಗಿದ್ದು ಡೊಳ್ಳಿನ ಸದ್ದು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನೆಲದ ದೇಸಿ ಕಲೆಯನ್ನು ಉಳಿಸುವ…

Read More

ಕಾಸರಗೋಡು : ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೇಖಾ ಸುದೇಶ್ ರಾವ್ ಇವರು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲೆಯ  ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ‘ರಜತ ಸಂಭ್ರಮ’ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮ ಹಾಗೂ ‘ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ ಪುಸ್ತಕ ನಿತ್ಯ’ ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು, ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತದಿಂದ  ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ…

Read More

ಮೂಡುಬಿದಿರೆ : ವೈಭವದಿಂದ ಅಲಂಕೃತಗೊಂಡ ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ದಿನಾಂಕ 13 ಡಿಸೆಂಬರ್ 2024ರಂದು ಕೋಲ್ಕತ್ತಾದಿಂದ ಬಂದ ನೀಲಾದ್ರಿ ಕುಮಾರ್ ಸಿತಾರ್- ಝಿತಾರ್ ತರಂಗಗಳ ಕಂಪನದ ಅಲೆ ಸೃಷ್ಟಿಸಿದರು. ನೀಲಾದ್ರಿಯ ಬೆರಳುಗಳ ಸಂಚಲನದ ಕಂಪನ-ತರಾಂಗಂತರಂಗಕ್ಕೆ ಆಳ್ವಾಸ್ ವಿರಾಸತ್‌ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರವೇ ನಿನಾದದಲ್ಲಿ ತುಂಬಿತ್ತು. ತಾವೇ ಅಭಿವೃದ್ಧಿ ಪಡಿಸಿದ ಎಲೆಕ್ಟ್ರಿಕ್ ಸಿತಾರ್ ಕೆಂಪು ವರ್ಣದ ‘ಝಿತಾರ್’ ಮೂಲಕ ಕಛೇರಿ ಆರಂಭಿಸಿದ ನೀಲಾದ್ರಿ, ತಮ್ಮದೇ ಸಂಯೋಜನೆಯ ‘ಸಮ್ಮಿಲನ’ (ಫ್ಯೂಜನ್) ಮೂಲಕ ಕಛೇರಿಗೆ ನಾಂದಿ ಹಾಡಿದರು. ಇದು ‘ಸೌಂಡ್ ಚೆಕ್’ ಎಂದು ಹಾಸ್ಯವಾಡಿದ ನೀಲಾದ್ರಿ, ‘ರಾಗಗಳು ಇನ್ನಷ್ಟೇ ಶುರುವಾಗ ಬೇಕು’ ಎಂದು ಪ್ರೇಕ್ಷಕರಿಗೆ ಪಂಚ್ ನೀಡಿದರು. ‘ಗ್ರೇಟ್ ಗ್ಯಾಂಬ್ಲರ್’ ಸಿನಿಮಾದ ‘ದೋ ಲಬ್ಜೋ ಕೀ ಹೇ’ ನಾದದ ಮೂಲಕ ಮತ್ತೆ ಚಾಲನೆ ನೀಡಿದ ಅವರು, ಬಳಿಕ ‘ಕರ್ಜ್’ ಸಿನಿಮಾದ ‘ಏಕ್ ದಿವಾನಾ ಥಾ..’ ಸ್ವರ ನುಡಿಸಿದರು. ಮಹಾತ್ಮ ಗಾಂಧೀಜಿಯ ನೆಚ್ಚಿನ ‘ವೈಷ್ಣವ ಜನತೋ..’ ನುಡಿಸಿದರು. ಇದರ ಕನ್ನಡ ಅವತರಣಿಕೆ,…

Read More

ಬೆಂಗಳೂರು : ಕುವೆಂಪು ಕರ್ನಾಟಕ ಜನಪರ ವೇದಿಕೆ (ನೋಂ) ಇದರ ವತಿಯಿಂದ ದಿನಾಂಕ 28 ಡಿಸೆಂಬರ್ 2024ರ ಶನಿವಾರದಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಶ್ರೀ ಸಂದೇಶ್ ಕುಂಬಾರ್ ಇವರ ಸಾರಥ್ಯದಲ್ಲಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ವಿಚಾರ ಸಂಕೀರಣ, ಮುಖ್ಯ ಅತಿಥಿಗಳ ಹಿತನುಡಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಹಾಗೂ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಮಾರಂಭದ ಕವಿಗೋಷ್ಠಿಯಲ್ಲಿ ತಾವು ಭಾಗವಹಿಸಲು ಇಚ್ಛಿಸಿದಲ್ಲಿ ಡಾ. ಸುನೀಲ್ ಕುಮಾರ್, ಇವರ ದೂರವಾಣಿ 9740369046 ಗೆ ತಮ್ಮ ಹೆಸರು, ಊರು, ದೂರವಾಣಿ ಸಂಖ್ಯೆಯನ್ನು ನಮೂದಿಸಿ ವಾಟ್ಸ ಅಪ್ ಮಾಡಿ ನೋಂದಾಯಿಸಲು ಸೂಚಿಸಲಾಗಿದೆ.

Read More

ಸಾಲಿಗ್ರಾಮ : ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಇದರ ಉದ್ಘಾಟನಾ ಸಮಾರಂಭವನ್ನು ದಿನಾಂಕ 15 ಡಿಸೆಂಬರ್ 2024ರಂದು ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ವಠಾರದಲ್ಲಿ ಸಂಜೆ 6-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಡಾ. ಕೆ.ಎಸ್. ಕಾರಂತ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ದಿನಾಂಕ 15 ಡಿಸೆಂಬರ್ 2024ರಂದು ಹಂಗಾರಕಟ್ಟೆ ಚೇತನ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ವನವಿಲಾಸ’ ಮತ್ತು ಕೋಟ ವಿವೇಕ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ದ್ರೌಪದಿ ಪ್ರತಾಪ’, ದಿನಾಂಕ 16 ಡಿಸೆಂಬರ್ 2024ರಂದು ಕುಂದಾಪುರ ಬೀಜಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ರಾಮಾಶ್ವಮೇಧ’ ಮತ್ತು ಕೋಟ ಗಿಳಿಯಾರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಅಭಿಮನ್ಯು ಕಾಳಗ’, ದಿನಾಂಕ 17 ಡಿಸೆಂಬರ್ 2024ರಂದು ಕೋಟ ಮಣೂರು ಸರಕಾರಿ…

Read More

ಈಶ್ವರಮಂಗಲ : ಶ್ರೀ ಅಯ್ಯಪ್ಪ ಸೇವಾ ಸಮಿತಿ ಬೆಳ್ಳಿಚೆಡವು ಈಶ್ವರಮಂಗಲ ಇದರ ದ್ವಿತೀಯ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಯ್ಯಪ್ಪ ದೀಪೋತ್ಸವದ ಪ್ರಯುಕ್ತ ದಿನಾಂಕ 12 ಡಿಸೆಂಬರ್ 2024ರಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯರಿಂದ ‘ಸಮರ ಸನ್ನಾಹ – ಭೀಷ್ಮ ಸೇನಾಧಿಪಥ್ಯ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಯಕ್ಷಗುರು ವಿಶ್ವವಿನೋದ ಬನಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಈ ತಾಳಮದ್ದಳೆಯ ಹಿಮ್ಮೇಳದಲ್ಲಿ ಮೋಹನ ಮೆಣಸಿನಕಾನ, ಮತ್ತು ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಭಾಗವತರಾಗಿ ಕಾಣಿಸಿಕೊಂಡರು. ಚಂಡೆ ಮದ್ದಳೆ ವಾದನದಲ್ಲಿ ವಿಷ್ಣುಶರಣ ಬನಾರಿ ಹಾಗೂ ಶ್ರೀಧರ ಆಚಾರ್ಯ ಈಶ್ವರಮಂಗಲ ಸಹಕರಿಸಿದರು. ಅರ್ಥಧಾರಿಗಳಾಗಿ ಸರಿತಾ ರಮಾನಂದ ರೈ ದೇಲಂಪಾಡಿ, ಶಾಂತಕುಮಾರಿ ದೇಲಂಪಾಡಿ, ಜಲಜಾಕ್ಷಿ ಸತೀಶ್ ರೈ ಬೆಳ್ಳಿಪ್ಪಾಡಿ, ನಳಿನಾಕ್ಷಿ ಹರೀಶ್ ಗೌಡ ಮುದಿಯಾರು, ಸುಜಾತ ಮೋಹನ್ ದಾಸ ರೈ ದೇಲಂಪಾಡಿ, ಶೀಲಾವತಿ ಹೇಮನಾಥ್ ಕೇದಗಡಿ, ಸುಮಲತಾ ಉದಯ್ ಕುಮಾರ್ ದೇಲಂಪಾಡಿ, ಪವಿತ್ರ ದಿವಾಕರ ಮುದಿಯಾರು, ಕುಸುಮಾವತಿ ಜಯಪ್ರಕಾಶ್ ಕುತ್ತಿ ಮುಂಡ…

Read More

ಕಾಸರಗೋಡು : ಸಂಘಟಕ, ಲೇಖಕ ಬಹುಮುಖ ಪ್ರತಿಭೆ ಡಾ. ಹೇಮಂತ ಕುಮಾರ್ ಬಿ. ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ, ಕರ್ನಾಟಕ ರಾಜ್ಯ ಹಾಸನ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿದರು. ಕನ್ನಡ ಭವನ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಡಾ. ಹೇಮಂತ್ ಚಿನ್ನು ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ, ಕಾಸರಗೋಡು ಪ್ರದೇಶಕ್ಕೆ ಕರ್ನಾಟಕದಿಂದ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ ‘ಉಚಿತ ವಸತಿ ಸೌಕರ್ಯ’ ಹಾಗೂ ಕನ್ನಡ ಭವನ ರಜತ ಸಂಭ್ರಮ ವಿಶೇಷ…

Read More

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ದಿನಾಂಕ 15 ಡಿಸೆಂಬರ್ 2024ಕ್ಕೆ ಹದಿನಾಲ್ಕು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ. ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಪಟ್ಟಣ ಮತ್ತು ಐಗೂರು ಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹಾಗೂ ಬೆಳ್ತಂಗಡಿ ಹಾಗೆಯೇ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ನಡೆಯಲಿದೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಔನ್ನತ್ಯಕ್ಕೆ ಕೊಂಡೊಯ್ಯುವಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ ಅರೆಭಾಷೆಯಲ್ಲಿ ಪುಸ್ತಕ ಪ್ರಕಟಣೆ, ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮ ಹಾಗೂ ಅರೆಭಾಷೆ ಬರವಣಿಗೆಗೆ ಹೆಚ್ಚು ಒತ್ತು ನೀಡುವುದು. ಜೊತೆಗೆ ಸಂಶೋಧನೆಗೆ ಗಮನಹರಿಸುವಲ್ಲಿ ಅಕಾಡೆಮಿ ಕಾರ್ಯಪ್ರವೃತ್ತವಾಗಿದೆ. ಅರೆಭಾಷೆ ಗಡಿ ಉತ್ಸವ ಕಾರ್ಯಕ್ರಮವನ್ನು ಈಗಾಗಲೇ ಕಾಸರಗೋಡಿನ ಬಂದ್ಯಡ್ಕ, ಸುಳ್ಯ ತಾಲೂಕಿನ ಮಂಡೆಕೋಲು ಹಾಗೂ ಕೊಡಗು ಜಿಲ್ಲೆಯ ಚೆಯ್ಯಂಡಾಣೆ ಗ್ರಾಮದಲ್ಲಿ ಆಯೋಜಿಸಿ, ಗ್ರಾಮೀಣ…

Read More