Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ.) ಸುರತ್ಕಲ್ ಇವರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಚೇಳಾಯ್ರು ಇದರ ಸಹಯೋಗದಲ್ಲಿ ಆಯೋಜಿಸುವ ಎಸ್. ಆರ್. ಹೆಗ್ಡೆ ನೆಂಪು ಮತ್ತು ಎಸ್. ಆರ್. ಹೆಗ್ಡೆ -ವ್ಯಕ್ತಿ ಚಿತ್ರ ಹಾಗೂ ‘ಗುತ್ತಿನಿಂದ ಸೈನಿಕ ಜಗತ್ತಿಗೆ’ ಕೃತಿಗಳ ಅವಲೋಕನ, ಓದು-ಬರಹ-ಬಹುಮಾನ ವಿತರಣಾ ಸಮಾರಂಭವು 30 ಆಗಸ್ಟ್ 2024ರಂದು ಚೇಳಾಯ್ರು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ. ಸರಕಾರಿ ಪದವಿಪೂರ್ವ ಕಾಲೇಜು ಚೇಳಾಯ್ರು ಇಲ್ಲಿನ ಪ್ರಾಂಶುಪಾಲರಾದ ಡಾ. ಜ್ಯೋತಿ ಚೇಳಾಯ್ರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಂ. ಆರ್. ಪಿ. ಎಲ್. ಇದರ ವಿಶ್ರಾಂತ ಅಧಿಕಾರಿಯಾದ ಶ್ರೀಮತಿ ವೀಣಾ ಟಿ. ಶೆಟ್ಟಿ ಇವರು ಎಸ್. ಆರ್. ಹೆಗ್ಡೆ ನೆಂಪು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀಮತಿ ಉದಯ ಪ್ರಭಾ ಶೆಟ್ಟಿ ಚೇಳಾಯ್ರು ಗುತ್ತು ವಿಜೇತರಿಗೆ ಬಹುಮಾನ ವಿತರಿಸಲಿರುವರು.
ಕುಳಾಯಿ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಸರಯೂ ಬಾಲ ಯಕ್ಷವೃಂದ ಕೋಡಿಕಲ್, ಮಕ್ಕಳ ಮೇಳ ಮಂಗಳೂರು ಇದರ ವತಿಯಿಂದ ಯಕ್ಷಗಾನ ಬಯಲಾಟ ಹಾಗೂ ಸಭಾ ಕಾರ್ಯಕ್ರಮವು ಕುಳಾಯಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ 26 ಆಗಸ್ಟ್ 2024ರ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತಸರ ಕೆ. ಕೃಷ್ಣಹೆಬ್ಬಾರ್ ಮಾತನಾಡಿ “ಯಕ್ಷಗಾನ ಕಲೆಯನ್ನು ಮಕ್ಕಳಿಗೆ ಯಕ್ಷ ಶಿಕ್ಷಣದ ಮೂಲಕ ನೀಡಿ ಬೆಳೆಸುವಲ್ಲಿ ಸರಯೂ ಬಾಲ ಯಕ್ಷವೃಂದದ ರವಿ ಅಲೆವೂರಾಯ ಕೊಡುಗೆ ಅನನ್ಯ.” ಎಂದರು. ಯಕ್ಷಗಾನ ಸಂಘಟಕ ಹಾಗೂ ಕಲಾವಿದರಾದ ಮಧುಕರ ಭಾಗವತ್ ಮಾತನಾಡಿ “ಯಕ್ಷಗಾನ ಕಲೆ ನಿಧಾನವಾಗಿ ನಶಿಸುತ್ತಿದೆ ಎಂಬುದರಲ್ಲಿ ಅರ್ಥವಿಲ್ಲ. ಸರಯೂ, ಪಟ್ಲ ಟ್ರಸ್ಟ್ ಸೇರಿದಂತೆ ವಿವಿಧ ಸಂಸ್ಥೆಗಳು ಯಕ್ಷಗಾನ ಶಿಕ್ಷಣವನ್ನು ಮಕ್ಕಳಿಗೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರತಿಭಾವಂತರು ಈ ಕಲೆಗೆ ಆಕರ್ಷಿತರಾಗುತ್ತಿದ್ದಾರೆ.ಈ ಕಲೆ ಬೆಳೆಯುತ್ತಲೇ ಹೋಗುತ್ತದೆ.” ಎಂದರು. ಕುಳಾಯಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ಅಧ್ಯಕ್ಷರಾದ ಸದಾಶಿವ ಎಂ. ಮಾತನಾಡಿ “ಯಕ್ಷಗಾನವು ನೃತ್ಯ, ಸಂಭಾಷಣೆ,…
ವಿಜಯಪುರ : ಶ್ರಾವಣ ಮಾಸದಲ್ಲಿ ವಿಜಯಪುರ ನಗರದ ಅನೇಕ ಕಡೆಗಳಲ್ಲಿ ಗಮಕ ಕಾರ್ಯಕ್ರಮವು ಅವ್ಯಾಹತವಾಗಿ ನಡೆಯುತ್ತಿದೆ. ಇದರ ಅಂಗವಾಗಿ ಗಮಕ ವಿದೂಷಿ ಶ್ರೀಮತಿ ಶಾಂತಾ ಕೌತಾಳ್ ಇವರುಗಳು 25 ಆಗಸ್ಟ್ 2024ರಶ್ರಾವಣ ಮಾಸದ ಕೃಷ್ಣಪಕ್ಷ ಸಪ್ತಮಿ ತಿಥಿಯಂದು ನಗರದ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಿಯಲ್ಲಿ ಭಕ್ತಮಂಡಳಿಯವರಿಗಾಗಿ ಗಮಕ ಕಾರ್ಯಕ್ರಮ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಗದುಗಿನ ಭಾರತದ ಉದ್ಯೋಗ ಪರ್ವದ `ವಿದುರನೀತಿ’ ಪ್ರಸಂಗದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ಜರುಗಿತು. ಗಮಕ ವಿದೂಷಿ ಶ್ರೀಮತಿ ಶಾಂತಾ ಕೌತಾಳ್, ಶ್ರೀಮತಿ ಪುಷ್ಪಾ ಕುಲಕರ್ಣಿ ಹಾಗೂ ಶ್ರೀಮತಿ ಭೂದೇವಿ ಕುಲಕರ್ಣಿ ಇವರುಗಳು ಕಾವ್ಯದ ವಾಚನವನ್ನು ಸುಶ್ರಾವ್ಯವಾಗಿ ಮಾಡಿದರು. ಶ್ರೀ ಕಲ್ಯಾಣರಾವ್ ದೇಶಪಾಂಡೆಯವರು ಇದರ ವ್ಯಾಖ್ಯಾನ ಮಾಡುತ್ತ ಧೃತರಾಷ್ಟ್ರನಿಗೆ ವಿದುರನು ಮನಸಿನ ಸಮಾಧಾನಕ್ಕಾಗಿ ಇಡೀ ರಾತ್ರಿ ಉಪದೇಶಿಸಿದ ವಿದುರ ನೀತಿಯ ಕೆಲಪದ್ಯಗಳ ಅರ್ಥವನ್ನು ವಿವರಿಸಿದರು. “ಧೃತರಾಷ್ಟ್ರ, ನೀನು ಹಾವು ಹಡೆದಂತೆ ನೂರು ಮಕ್ಕಳನ್ನು ಹಡೆದು ಲೋಕಕ್ಕೆ ಕಂಟಕನಾದೆ. ಇದರ ಬದಲು ಅರ್ಜುನನಂತಹ ಒಬ್ಬ ಮಗನನ್ನು…
ಮಂಗಳೂರು : ಸದಾನಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಇದರ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಇತರ ಸಂಘಟನೆಗಳ ಸಹಯೋಗದೊಂದಿಗೆ ‘ಸುವರ್ಣ ಸ್ಮರಣೆ’ ಕಾರ್ಯಕ್ರಮವನ್ನು ದಿನಾಂಕ 31 ಆಗಸ್ಟ್ 2024ರಂದು ಬೆಳಿಗ್ಗೆ 9-30 ಗಂಟೆಗೆ ಮಂಗಳೂರು ಉರ್ವಸ್ಟೋರಿನ ತುಳು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಸಿನೆಮಾಟೋಗ್ರಾಫರ್ ಶ್ರೀ ಜಿ. ಎಸ್. ಭಾಸ್ಕರ್, ಕಲಾ ಸಂಗಮ ಕುಡ್ಲ ಇದರ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಕೊಡಿಯಾಲ್ ಬೈಲ್ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಉದ್ಘಾಟನೆ ಮಾಡಲಿರುವರು. ‘ಸದಾನಂದ ಸುವರ್ಣರು ಮತ್ತು ಸಿನೆಮಾ’ ಎಂಬ ವಿಷಯದ ಬಗ್ಗೆ ಸಿನೆಮಾ ನಿರ್ದೇಶಕರಾದ ಶ್ರೀ ಗಿರೀಶ್ ಕಾಸರವಳ್ಳಿ, ‘ನಿರ್ದೇಶಕ ಸದಾನಂದ ಸುವರ್ಣರೊಂದಿಗಿನ ಸಮಯ’ ಎಂಬ ವಿಷಯದ ಬಗ್ಗೆ ರಂಗ ಭೂಮಿ ಕಲಾವಿದೆ ಶ್ರೀಮತಿ ಗೀತಾ ಸುರತ್ಕಲ್ ಮತ್ತು ಸಂಕಲನಕಾರರಾದ ಎಂ.ಎನ್. ಸ್ವಾಮಿ, ‘ನಾನು ಕಂಡಂತೆ ಶ್ರೀ ಸದಾನಂದ ಸುವರ್ಣರು’ ಎಂಬ ವಿಷಯದ ಬಗ್ಗೆ ಸಿನೆಮಾಟೋಗ್ರಾಫರ್ ಶ್ರೀ ಜಿ.…
ಮಂಗಳೂರು : ಮುಸ್ಲಿಂ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತೀ ವರ್ಷ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಿದ್ದು, 2023ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ. ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟವಾದ 2023ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು 10 ಸೆಪ್ಟೆಂಬರ್ 2024ರ ಒಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 ವಿಳಾಸಕ್ಕೆ ಕಳುಹಿಸುವಂತೆ ತಿಳಿಸಲಾಗಿದೆ. ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು. ಎಚ್. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 9845054191 ಅಥವಾ 0824-2410358 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಉಡುಪಿ : ಕಲಾಕ್ಷೇತ್ರ ಶೈಲಿಯ ಪ್ರತಿಭಾವಂತ ಯುವ ನೃತ್ಯ ಕಲಾವಿದೆ ದಿವ್ಯ ಸುರೇಶ್ ಇವರು ದಿನಾಂಕ 01 ಸೆಪ್ಟೆಂಬರ್ 2024ರಂದು ಸಂಜೆ 7-00 ಗಂಟೆಗೆ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಏಕವ್ಯಕ್ತಿ ನೃತ್ಯ ಮಾರ್ಗ ಪ್ರದರ್ಶನವನ್ನು ನೀಡಲಿದ್ದಾರೆ. ಹಾಡುಗಾರಿಕೆಯಲ್ಲಿ ಶ್ರೀ ವಿನೀತ್ ಪೂರವನ್ಕರ, ನಟುವಾಂಗದಲ್ಲಿ ಶ್ರೀ ಮಂಜುನಾಥ ಎನ್. ಪುತ್ತೂರು, ಮೃದಂಗದಲ್ಲಿ ಶ್ರೀ ಬಾಲಚಂದ್ರ ಭಾಗವತ್ ಹಾಗೂ ವಯಲಿನ್ ನಲ್ಲಿ ಶ್ರೀಮತಿ ಶರ್ಮಿಳಾ ರಾವ್ ಇವರು ಭಾಗವಹಿಸಲಿದ್ದಾರೆ.
ಉಡುಪಿ : ಕಾವಿ ಆರ್ಟ್ ಫೌಂಡೇಷನ್ ಇದರ ವತಿಯಿಂದ ಭಾವನಾ ಫೌಂಡೇಶನ್ ಮತ್ತು ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇವುಗಳ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಕಾವಿ ವೈವಿಧ್ಯ’ ಚಿತ್ರಕಲಾ ಪ್ರದರ್ಶನವನ್ನು ದಿನಾಂಕ 31-08-2024ರಿಂದ 01-09-2024ರವರೆಗೆ ಉಡುಪಿಯ ಬಡಗುಪೇಟೆಯ ಹತ್ತು ಮೂರು ಇಪ್ಪತ್ತೆಂಟು ಇಲ್ಲಿ ಆಯೋಜಿಸಲಾಗಿದೆ. ಪುಷ್ಪಾಂಜಲಿ ರಾವ್, ಆಶ್ಲೇಶ್ ಆರ್. ಭಟ್, ವರ್ಷ ಎ.ಜೆ. ಮತ್ತು ರಾಜೇಶ್ ಡಿ. ಸಿರ್ಸಿಕರ್ ಇವರುಗಳ ಕಲಾಕೃತಿಗಳು ಪ್ರದರ್ಶನಗೊಳ್ಳಲಿದೆ.
ಬಂಟ್ವಾಳ : ಬೆಳ್ತಂಗಡಿ ಗೇರುಕಟ್ಟೆಯ ಶ್ರೀ ಮದವೂರ ವಿಘ್ನೇಶ್ವರ ಕಲಾಸಂಘ ಇದರ ಸದಸ್ಯರಿಂದ ‘ಕಂಸ ವಧೆ’ ಎಂಬ ಯಕ್ಷಗಾನ ತಾಳಮದ್ದಳೆಯು ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಶ್ರಾವಣ ಮಾಸದ ವಿಶೇಷ ಯಕ್ಷಗಾನ ತಾಳಮದ್ದಳೆಯ ಸರಣಿಯಲ್ಲಿ ದಿನಾಂಕ 24 ಆಗಸ್ಟ್ 2024ರಂದು ಮಧೂರು ಮೋಹನ ಕಲ್ಲೂರಾಯರ ನಿರ್ದೇಶನದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಸಚಿನ್ ಶೆಟ್ಟಿ ಕುದುರೆಪ್ಪಾಡಿ, ಮದ್ದಳೆಯಲ್ಲಿ ಮುರಳಿ ಕಟೀಲು, ಚೆಂಡೆಯಲ್ಲಿ ರಾಮಪ್ರಕಾಶ ಕಲ್ಲೂರಾಯ ಭಾಗವಹಿಸಿದ್ದರು. ಮುಮ್ಮೇಳದಲ್ಲಿ ಶ್ರೀ ಸುಂದರ ಕೃಷ್ಣ ಮಧೂರು, ಬಾಸಮೆ ನಾರಾಯಣ ಭಟ್, ರಾಮಕೃಷ್ಣ ಭಟ್ ಬಳಂಜ, ಮಧೂರು ಮೋಹನ ಕಲ್ಲೂರಾಯ, ಶ್ರೀಮತಿ ಜಯಂತಿ ಸುರೇಶ ಹೆಬ್ಬಾರ್, ಶ್ರೀಮತಿ ಕೆ.ಆರ್. ಸುವರ್ಣ ಕುಮಾರಿ ಭಾಗವಹಿಸಿದ್ದರು. ಶ್ರೀ ನಾಗೇಂದ್ರ ಪೈ ಸ್ವಾಗತಿಸಿ, ಸೀತಾರಾಮ ವಂದಿಸಿದರು.
ಸೀತಾಂಗೋಳಿ : ಕೈರಳಿ ಪ್ರಕಾಶನ ಹಾಗೂ ಸಂತೋಷ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಸೀತಾಂಗೋಳಿ ಸಹಯೋಗದಲ್ಲಿ ಲೇಖಕ ಎಂ.ಎಸ್. ಥೋಮಸ್ ಡಿ’ಸೋಜ ರಚಿಸಿರುವ ‘ಸೀತಾಂಗೋಳಿಯ ಗತವೈಭವ’ ಕೃತಿ ಪರಿಚಯ ಹಾಗೂ ವಿಮರ್ಶೆ ಕಾರ್ಯಕ್ರಮವು ದಿನಾಂಕ 01 ಸೆಪ್ಟೆಂಬರ್ 2024ರಂದು ಅಪರಾಹ್ನ 3-00 ಗಂಟೆಗೆ ಸಂತೋಷ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಕಾರ್ಯಾಲಯದಲ್ಲಿ ನಡೆಯಲಿದೆ. ಕನ್ನಡ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಾಶಕರು ಹಾಗೂ ಸದಸ್ಯರಾದ ಎ.ಆರ್. ಸುಬ್ಬಯ್ಯಕಟ್ಟೆ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪತ್ರಕರ್ತರಾದ ರವಿ ನಾಯ್ಕಾಪು ಇವರು ಕೃತಿ ಪರಿಚಯ ಮಾಡಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕೆ. ಕಮಲಾಕ್ಷ ಇವರ ಕೃತಿ ವಿಮರ್ಶೆಗೆ ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೈರಳಿ ಪ್ರಕಾಶನದ ನಿರ್ದೇಶಕರಾದ ಅರಿಬೈಲು ಗೋಪಾಲ ಶೆಟ್ಟಿ ಮತ್ತು ಯಕ್ಷಗಾನ ಕಲಾವಿದ ವೀಜಿ ಕಾಸರಗೋಡು ಇವರುಗಳು ಸ್ಪಂದನೆ ನೀಡಲಿರುವರು.
ಧಾರವಾಡ : ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಮೂರು ದಿನಗಳ ‘ಅನಂತ ಸ್ವರ ನಮನ’ ಸಂಗೀತೋತ್ಸವದ ಸಮಾರೋಪ ಸಮಾರಂಭವು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ದಿನಾಂಕ 25 ಆಗಸ್ಟ್ 2024ರಂದು ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಇವರು ಮಾತನಾಡಿ “ಅನಂತ ಹರಿಹರರು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದರು. ಹೀಗಾಗಿ ಧಾರವಾಡ ಸಂಗೀತ ಕ್ಷೇತ್ರದ ಬೆಳೆವಣಿಗೆಗೆ ಅನಂತ ಹರಿಹರ ಅವರ ಕೊಡುಗೆ ಅಪಾರ. ಅನಂತ ಹರಿಹರ ಅವರನ್ನು ಕಳೆದುಕೊಂಡಿದ್ದು ಸಂಗೀತದ ರತ್ನ ಕಳಿಚಿದಂತಾಗಿದೆ. ಅನಾಮಿಕ ಸಂಗೀತ ಸೇವಕರಾಗಿದ್ದ ಅವರು ಪ್ರತಿ ಸಂಗೀತ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಲ್ಲಿ ಪ್ರಸಿದ್ಧರಾಗಿದ್ದರು. ಈ ಮೂಲಕ ಆರು ದಶಕಗಳ ಕಾಲ ಸಂಗೀತ-ನೃತ್ಯ-ಸಾಂಸ್ಕೃತಿಕ ಲೋಕದಲ್ಲಿ ಕಲಾವಿದರು ಹಾಗೂ ಶ್ರೋತೃವರ್ಗದ ಕೊಂಡಿಯಾಗಿದ್ದರು ಎಂದು ಹೇಳಿದರು. ಪಂಡಿತ್ ಬಿ.ಎಸ್. ಮಠ ಮಾತನಾಡಿ “ಅನಂತ ಹರಿಹರರು ಎಲ್ಲಾ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರ ಸಹಕಾರವನ್ನು ಮರೆಯುವಂತಿಲ್ಲ. ಆದ್ದರಿಂದ ಕಲಾವಿದರ ಸ್ಮರಣೆಯಲ್ಲಿ…