Subscribe to Updates
Get the latest creative news from FooBar about art, design and business.
Author: roovari
ಶಿರ್ವ : ಪ್ರದರ್ಶನ ಸಂಘಟನಾ ಸಮಿತಿ ಶಿರ್ವ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 15 ಡಿಸೆಂಬರ್ 2024ರಂದು ಶಿರ್ವದ ಮಹಿಳಾ ಸೌಧದಲ್ಲಿ ಸಂಜೆ 5-00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಿವೃತ್ತ ಉಪನ್ಯಾಸಾಕಿ ಶ್ರೀಮತಿ ಶಾರದಾ ಎಂ. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದಿನಾಂಕ 15 ಡಿಸೆಂಬರ್ 2024ರಂದು ಇನ್ನಂಜೆಯ ಎಸ್.ವಿ.ಎಚ್. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಶಶಿಪ್ರಭಾ ಪರಿಣಯ’ ಮತ್ತು ಕುತ್ಯಾರು ಸೂರ್ಯಚೈತನ್ಯ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಸುದರ್ಶನ ವಿಜಯ’, ದಿನಾಂಕ 16 ಡಿಸೆಂಬರ್ 2024ರಂದು ಮಣಿಪುರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ವೀರವರ್ಮ ವಿಜಯ’ ಮತ್ತು ಕಟಪಾಡಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ‘ಅಭಿಮನ್ಯು ಕಾಳಗ’, ದಿನಾಂಕ 17 ಡಿಸೆಂಬರ್ 2024ರಂದು ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ…
ಕುಡುಪು : ಯಕ್ಷ ಮಿತ್ರರು ಕುಡುಪು ಇವರ ವತಿಯಿಂದ ಷಷ್ಠಿ ಮಹೋತ್ಸವದ ಪ್ರಯುಕ್ತ ದಿನಾಂಕ 07 ಡಿಸೆಂಬರ್ 2024ರಂದು ಕುಡುಪು ದೇವಸ್ಥಾನದಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೂಡಬಿದ್ರೆಯ ರಾಜಕೀಯ ನೇತಾರ, ಧಾರ್ಮಿಕ ಮುಂದಾಳು ಶ್ರೀ ಅಭಯಚಂದ್ರ ಜೈನ್ ಮಾತನಾಡಿ “ಯಕ್ಷಗಾನವು ಜೀವಂತ ಕಲೆ. ಕಲಾಶ್ರಯವನ್ನು ಬಯಸುವ ಅನೇಕ ಕಲಾವಿದರನ್ನು ರಂಗಸ್ಥಳಕ್ಕೆ ಪರಿಚಯಿಸುತ್ತದೆ. ಇದು ಕಲಾವಿದರಲ್ಲಿನ ಸಂಪೂರ್ಣ ಪ್ರತಿಭೆಯನ್ನು ಹೊರಹಾಕಬಲ್ಲ ಸ್ವತಂತ್ರ ಕಲೆ. ಇದರಲ್ಲೇ ಸಂತೃಪ್ತಿ ಪಡೆದ ಕಲಾವಿದರು ಅಸಂಖ್ಯಾತ. ಈ ಕಲೆಯ ಉಳಿವಿಗಾಗಿ ಯಕ್ಷ ಮಿತ್ರರು, ಕುಡುಪು ಒಂದೂವರೆ ದಶಕಕ್ಕೂ ಮೀರಿ ಇಲ್ಲಿನ ಷಷ್ಠಿ ಉತ್ಸವದಂದು ಯಕ್ಷಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ಸಂಪ್ರದಾಯದಂತೆ ಇಂದೂ ಒಬ್ಬ ಶ್ರೇಷ್ಠ ಕಲಾವಿದನನ್ನು ಗೌರವಿಸಿ-ಸನ್ಮಾನಿಸಿರುವುದು ಶ್ಲಾಘನೀಯ. ಇದು ಈ ಕ್ಷೇತ್ರದ ಪ್ರಸಾದ. ಸಂಸ್ಥೆಯ ಉನ್ನತಿಗೂ ಇದು ಕಾರಣವಾಗುತ್ತದೆ. ಉಭಯತ್ರರಿಗೂ ಶುಭವಾಗಲಿ” ಎಂದು ನುಡಿದರು. ಈ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ, ದೇವಿ ಭಟ್ರು ಎಂದೇ ಖ್ಯಾತಿಯನ್ನು ಪಡೆದ ಸರವು ರಮೇಶ ಭಟ್ರು…
ಮಳವಳ್ಳಿ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ರಂಗಬಂಡಿ ಮಳವಳ್ಳಿ (ರಿ.) ಆಯೋಜಿಸುವ ಒಂದು ತಿಂಗಳ ಮಕ್ಕಳ ರಂಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ದಿನಾಂಕ 16 ಡಿಸೆಂಬರ್ 2024ರಂದು ಬೆಳಿಗ್ಗೆ 11-30 ಗಂಟೆಗೆ ಮಳವಳ್ಳಿಯ ಅಮೃತೇಶ್ವರನ ಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು ದಿನಾಂಕ 16 ಡಿಸೆಂಬರ್ 2024ರಿಂದ 24 ಜನವರಿ 2025ರವೆರೆಗೆ ನಡೆಯಲಿದೆ. ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಶ್ರೀ ಚಂದ್ರಶೇಖರ್ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ರಂಗ ಸಂಘಟಕರು ಶ್ರೀ ಧನುಷ್ ಎನ್., ಶಾಲಾ ಮುಖ್ಯೋಪಾಧ್ಯರು ಶ್ರೀ ಮಹೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸ್ವಾಮಿ ಎ.ಸಿ., ಕಂದೇಗಾಲ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಲತಾ, ಗ್ರಾಮ ಪಂಚಾಯತಿ ಸದಸ್ಯ ಶ್ರೀ ಪುಟ್ಟರಾಜು, ಸಮಾಜ ಸೇವಕ ಶ್ರೀ ಲಿಂಗರಾಜು, ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಮತಿ ಜಯಮ್ಮ ಮತ್ತು ಶ್ರೀಮತಿ ಭಾಗ್ಯಮ್ಮ ಇವರುಗಳು ಭಾಗವಹಿಸಲಿದ್ದಾರೆ.
ಮಂಜೇಶ್ವರ: ಮಂಜೇಶ್ವರದ ಯುವ ಸಾಹಿತಿ ಗಣೇಶ್ ಪ್ರಸಾದ್ ಮಂಜೇಶ್ವರ ಇವರ ‘ಚಿಲ್ಲಾ’ ಕಥಾ ಸಂಕಲನವು 22 ಡಿಸೆಂಬರ್ 2024ರಂದು ಅಪರಾಹ್ನ ಘಂಟೆ 2.30ಕ್ಕೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಭವನ ಗಿಳಿವಿಂಡುವಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಹಿರಿಯ ಕವಿ ಹಾಗೂ ಪತ್ರಕರ್ತರಾದ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಲ್ಲಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕರಾದ ಕಾಸರಗೋಡು ಚಿನ್ನಾ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ. ಪತ್ರಕರ್ತ ಹಾಗೂ ಲೇಖಕರಾದ ವಿಕ್ರಂ ಕಾಂತಿಕೆರೆ ಪುಸ್ತಕ ಪರಿಚಯ ಮಾಡಲಿದ್ದು, ಲೇಖಕರಾದ ಪ್ರೊ .ಪಿ. ಎನ್. ಮೂಡಿತ್ತಾಯ, ಕಲ್ಲಚ್ಚು ಪ್ರಕಾಶನದ ಪ್ರಕಾಶಕ ಹಾಗೂ ಸಾಹಿತಿಗಳಾದ ಮಹೇಶ ಆರ್. ನಾಯಕ್, ಖ್ಯಾತ ಲೇಖಕಿ ಡಾ. ಮಹೇಶ್ವರಿ ಯು., ನಿವೃತ್ತ ಶಿಕ್ಷಕಿ ಗಾಯಕಿ ಪ್ರಭಾ ನಾಯಕ್, ಲೇಖಕ, ಅಧ್ಯಾಪಕ ಹಾಗೂ ರಂಗಕರ್ಮಿಗಳಾದ ದಿವಾಕರ ಬಲ್ಲಾಳ್ ಮೊದಲಾದವರು ಉಪಸ್ಥಿತರಿರುವರು.
ಬೆಂಗಳೂರು : ನಮ್ಮ ಜ್ಞಾನದ ಪರಿಧಿಯನ್ನು ವಿಸ್ತರಿಸಿ ನಮ್ಮಲ್ಲಿ ಅರಿವಿನ ಆತ್ಮ ಶಕ್ತಿಯನ್ನು ಹೆಚ್ಚಿಸುವ ಪುಸ್ತಕದ ಓದು ಸಮಾಜದ ಸರ್ವರೂ ರೂಢಿಸಿಕೊಳ್ಳಲೇಬೇಕಾದ ಉತ್ತಮ ಹವ್ಯಾಸ. ಸಾಮಾಜಿಕ ಮಾಧ್ಯಮದ ಹಾವಳಿಯಲ್ಲಿ ಯುವಜನತೆಯಲ್ಲಿ ಓದು ಕ್ಷೀಣಿಸಿದೆ ಎಂಬ ಅಪವಾದವನ್ನು ತಗ್ಗಿಸಿ ಮನೆ ಮನಗಳಲ್ಲಿ ಪುಸ್ತಕ ಓದಿನ ರುಚಿ ಹತ್ತಿಸಬೇಕು, ಈ ಕಾರ್ಯಕ್ಕಾಗಿ ಪುಸ್ತಕ ಓದುವ, ಬರೆಯುವ ಹಾಗೂ ತಲುಪಿಸುವ ವಿಧಾನಕ್ಕೆ ಇನ್ನಷ್ಟು ನಾವಿನ್ಯತೆಯನ್ನು ನೀಡಿ, ಆಧುನಿಕ ತಂತ್ರಜ್ಞಾನದ ಸ್ಪರ್ಶವಿಟ್ಟು ಕನ್ನಡ ಸಾಹಿತ್ಯದ ಔನ್ನತ್ಯಕ್ಕೆ ಶ್ರಮಿಸಬೇಕೆಂಬ ಮಹಾದಾಸೆಯಿಂದ ಪ್ರಾರಂಭವಾದ ಸಂಸ್ಥೆ ‘ಕ್ರಿಯೇಟಿವ್ ಪುಸ್ತಕ ಮನೆ’. ಪ್ರತಿಭಾವಂತ ಯುವ ಬರಹಗಾರರಿಗೆ ಒಂದೊಳ್ಳೆ ವೇದಿಕೆಯನ್ನು ಒದಗಿಸುವ ಜೊತೆಗೆ ಖ್ಯಾತ ಬರಹಗಾರರ ವಿವಿಧ ಸಾಹಿತ್ಯ ಪ್ರಕಾರದ ಕೃತಿಗಳನ್ನು ಪ್ರಕಟಿಸುವ ಮೂಲಕ ಅಕ್ಷರ ಅಭಿಮಾನಿಗಳಿಗೆ ಜ್ಞಾನದ ಹೂರಣ ನೀಡಬೇಕೆನ್ನುವ ಕಲ್ಪನೆಯೊಂದಿಗೆ ವಿಧವಿಧವಾದ ಪುಸ್ತಕಗಳನ್ನು ಪ್ರಕಟಿಸುತ್ತಿದೆ. 1 ಜುಲೈ 2024ರಂದು ಏಕಕಾಲದಲ್ಲಿ ನಾಡಿನ ಹೆಸರಾಂತ ಸಾಹಿತಿಗಳ 15 ಪುಸ್ತಕಗಳನ್ನು ಖ್ಯಾತ ಬರಹಗಾರ ಜೋಗಿ ನಾಮಂಕಿತ ಗಿರೀಶ್ ರಾವ್ ಹತ್ವಾರ್ ಬಿಡುಗಡೆಗೊಳಿಸಿದ್ದರು. 15 ಡಿಸೆಂಬರ್…
ಮಡಿಕೇರಿ : ವಿಕೆ3 ಪಿಕ್ಚರ್ಸ್ನಡಿ ಸಿನಿಮಾ ನಿರ್ಮಾಪಕಿ, ಸಹ ನಿರ್ದೇಶಕಿ, ನಟಿ ಹಾಗೂ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಇವರ ಮೂರನೇ ಪುಸ್ತಕ ‘ವಾಸ್ತವ'(ಮನಗಳ ಮಂಥನ) ಕಥಾ ಪುಂಜದ ಲೋಕಾರ್ಪಣಾ ಸಮಾರಂಭವು ದಿನಾಂಕ 11 ಡಿಸೆಂಬರ್ 2024ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಈರಮಂಡ ಹರಿಣಿ ವಿಜಯ್ “ಅಕ್ಷರಗಳಿಗೆ ಮತ್ತು ಓದುವ ಹವ್ಯಾಸಕ್ಕೆ ತನ್ನದೇ ಆದ ಶಕ್ತಿ ಇದ್ದು, ಸಾಹಿತ್ಯದಿಂದಲೂ ಸಾಮಾಜಿಕ ಬದಲಾವಣೆ ಸಾಧ್ಯ. ಇತ್ತೀಚೆಗೆ ಅಕ್ಷರಗಳಿಗಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ಮೊರೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಕೈಬರಹಗಳನ್ನು ಮರೆಯುವ ಪರಿಸ್ಥಿತಿ ಎದುರಾಗಿದೆ, ಈ ಬೆಳವಣಿಗೆ ಒಳ್ಳೆಯದಲ್ಲ. ಕೈಬರಹಕ್ಕೆ ತನ್ನದೇ ಆದ ಶಕ್ತಿ ಇದೆ, ಅಕ್ಷರಗಳನ್ನು ಯಾರೂ ಮರೆಯಬಾರದು. ಬರೆಯುವ ಮತ್ತು ಓದುವ ಹವ್ಯಾಸವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.” ಎಂದು ಕರೆ ನೀಡಿದರು. ‘ವಾಸ್ತವ’ ಪುಸ್ತಕವನ್ನು ಲೋಕರ್ಪಣೆಗೈದ ಕನ್ನಡ ಸಾಹಿತ್ಯ ಪರಿಷತ್ ಇದರ ಜಿಲ್ಲಾ ಕೋಶಾಧಿಕಾರಿ ಎಸ್. ಎಸ್. ಸಂಪತ್ ಕುಮಾರ್ ಮಾತನಾಡಿ “ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು…
ದಾವಣಗೆರೆ : ದಾವಣಗೆರೆ ಲಿಟರರಿ ಫೋರಂ ವತಿಯಿಂದ ಆಯೋಜಿಸಲಾಗಿರುವ ರಾಜ್ಯಮಟ್ಟದ ಕಥಾ ಸ್ಪರ್ಧೆಗೆ ಕಥೆಗಳನ್ನು ಆಹ್ವಾನಿಸಲಾಗಿದೆ. ಕತೆಯು 3,000 ಪದಗಳ ಮಿತಿಯಲ್ಲಿರಬೇಕು. ಕತೆ ಸ್ವಂತದ್ದಾಗಿದ್ದು, ಕಳುಹಿಸುವವರ ಪರಿಚಯ, ಭಾವಚಿತ್ರ ಹಾಗೂ ವಿಳಾಸ ಪ್ರತ್ಯೇಕ ಪುಟದಲ್ಲಿರಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಒಟ್ಟು 3 ಬಹುಮಾನಿತ ಕತೆಗಳಿಗೆ ತಲಾ ರೂಪಾಯಿ 5,000 ನಗದು ಬಹುಮಾನ ನೀಡಲಾಗುವುದು. ಬಹುಮಾನಿತ 3 ಕತೆಗಳು ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗುವ 10 ಕತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುತ್ತದೆ. ಕಥೆ ಕಳುಹಿಸಲು 31 ಡಿಸೆಂಬರ್ 2024 ಕೊನೆಯ ದಿನವಾಗಿದೆ. ಕತೆ ಕಳುಹಿಸಲು ವಯೋಮಿತಿ ಇಲ್ಲ. ಒಬ್ಬರು ಒಂದೇ ಕತೆಯನ್ನು ಇ-ಮೇಲ್ ಮೂಲಕ ಮಾತ್ರ ಕಳುಹಿಸಬೇಕು. ಇ-ಮೇಲ್: [email protected]
ಮೂಡುಬಿದಿರೆ : ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ದಿನಾಂಕ 12 ಡಿಸೆಂಬರ್ 2024ರಂದು 30ನೇ ವರ್ಷದ ಆಳ್ವಾಸ್ ವಿರಾಸತ್ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವದಲ್ಲಿ ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ‘ವರ್ಷಧಾರೆ’ಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು. ಉತ್ತರದ ಕಥಕ್ ಬಳಿಕ ನೃತ್ಯ ಲೋಕವು ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸ್ಕೃತಿಗೆ ಹೆಜ್ಜೆ ಇಟ್ಟಿತು. ಅಖಿಲ ಪರಿಮಳನ್ ನಿರ್ದೇಶನದ ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ‘ಭೂಮಿ’ ದ್ವೀಪ ದೇಶದ ಚಮತ್ಕಾರದ ಶಕ್ತಿಯೆಡೆಗೆ ಕೊಂಡೊಯ್ಯಿತು. ತಿರುಗುವ ಚಕ್ರ, ಹಾರುವ ಬೆಂಕಿ ಉಂಡೆ ಇತ್ಯಾದಿಗಳು ಸೊಬಗೇರಿಸಿದವು. ವಿಷ್ಣು, ಸಮನ್, ಕಾತರಂಗಂ, ಪಟ್ಟಿನಿ, ಕಾಳಿ ಮತ್ತು ಸುನಿಯಂ ಶ್ರೀಲಂಕಾದ ಪ್ರಮುಖ ದೇವ-ದೈವಗಳಾಗಿವೆ. ಅವರ ಆರಾಧನಾ ವಿಧಾನವಾಗಿ ನೃತ್ಯ ಬೆಳೆದು ಬಂದಿದೆ. ಶ್ರೀಲಂಕಾದ ಪ್ರಮುಖ ಪಟ್ಟಣವಾಗಿದ್ದ ‘ಕ್ಯಾಂಡಿ’ಯಲ್ಲಿ ಬೆಳೆದು ಬಂದ ನೃತ್ಯ…
ಮೈಸೂರಿನಲ್ಲಿ ‘ಸಂಚಲನ ಮೈಸೂರು’ ಇವರ ವತಿಯಿಂದ ನಡೆದ ‘ಮಹಿಳಾ ನಾಟಕೋತ್ಸವ’ದಲ್ಲಿ ದಿನಾಂಕ 05 ಡಿಸೆಂಬರ್ 2024ರಂದು ರಂಗಬಂಡಿ ಮಳವಳ್ಳಿ (ರಿ.) ತಂಡದವರಿಂದ ಏಕವ್ಯಕ್ತಿ ಪ್ರಯೋಗದ ‘ಮಧುರ ಮಂಡೋದರಿ’ ನಾಟಕವನ್ನು ಕಲಾಮಂದಿರ ಆವರಣ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. ತುಂಬಾ ದಿನಗಳಿಂದ ಕೆಲಸ, ಒತ್ತಡಗಳಿಂದ ತುಂಬಿಕೊಂಡಿದ್ದ ಬದುಕಿಗೆ ವಿರಾಮದ ಅಗತ್ಯ ಅನ್ನಿಸಿತ್ತು. ಅಂದುಕೊಂಡಂತೆ ನಾಟಕ ಪ್ರದರ್ಶನಕ್ಕೆ ಕೊಂಚ ಬಿಡುವು ಮಾಡಿಕೊಂಡು ಹೋದೆ ತುಂಬಾ ಕುತೂಹಲದಿಂದ ಕಾದ ಘಳಿಗೆ ಅಂದರೆ ತಪ್ಪಾಗಲಾರದು, ಏಕವ್ಯಕ್ತಿ ಪ್ರಯೋಗ ಅಂದ್ರೆ ಒಂದು ರೀತಿಯ ಸವಾಲ್ ಆಗಿರುತ್ತೆ ಯಾಕೆಂದರೆ ಮುಖ್ಯವಾಗಿ ರಂಗದ ಮೇಲೆ ಒಬ್ಬರೇ ಇದ್ದು ಪ್ರೇಕ್ಷಕರನ್ನು ಒಂದು ಗಂಟೆ ಇಲ್ಲವೇ ಅದಕ್ಕು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವುದು ಸುಲಭವಾಗಿರುವುದಿಲ್ಲ. ಆದರೆ ಮಧುರ ಮತ್ತು ಮಂಡೋದರಿ ಎರಡು ಪಾತ್ರಗಳನ್ನು ಪ್ರಸ್ತುತ ಪಡಿಸಿದ ವನಿತಾ ರಾಜೇಶ್ ರವರು ತುಂಬಾ ಅಚ್ಚುಕಟ್ಟಾಗಿ ಆ ಪಾತ್ರದಲ್ಲಿ ಜೀವಿಸಿದ ರೀತಿ ಎಲ್ಲರನ್ನೂ ಸೆಳೆಯುವಂತೆ ಮಾಡಿತ್ತು. ನಾಟಕಗಳಲ್ಲಿ ಸ್ತ್ರೀ ಪಾತ್ರಗಳಿಗೆ ಮಹತ್ವ ಸ್ವಲ್ಪ ಕಡಿಮೆ ಎನ್ನುತ್ತಾರೆ. ಆದರೆ ಹೆಣ್ಣಿನ ಪಾತ್ರಗಳಿಗೆ…
ಉಡುಪಿ: ರಂಗಭೂಮಿ ಕ್ಷೇತ್ರದ ಖ್ಯಾತ ಗಾಯಕ, ನಟ ಬಿ. ಕೃಷ್ಣ ಕಾರಂತ ಇವರು ದಿನಾಂಕ 12 ಡಿಸೆಂಬರ್ 2024ರ ಗುರುವಾರದಂದು ನಿಧನ ಹೊಂದಿದರು. ಇವರಿಗೆ 76 ವರ್ಷ ವಯಸ್ಸಾಗಿತ್ತು. ಉಡುಪಿಯ ಎಂ. ಜಿ. ಎಂ. ಕಾಲೇಜಿನ ಪ್ರಾದೇಶಿಕ ಸಂಶೋಧನಾ ಕೇಂದ್ರ (ಆರ್.ಆರ್.ಸಿ.) ಇದರ ನಿವೃತ್ತ ಉದ್ಯೋಗಿಯಾಗಿರುವ ಬಿ. ಕೃಷ್ಣ ಕಾರಂತ್ ಖ್ಯಾತ ಗಾಯಕರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು ಮತ್ತು ಧ್ವನಿ ಸುರುಳಿ ಬಹಳ ಜನಪ್ರಿಯವಾಗಿದ್ದವು. ಇವರು ತಮ್ಮ ನಾಟಕಗಳಿಗೆ ಹಿನ್ನೆಲೆ ಗಾಯನ ನೀಡುತಿದ್ದುದು ಮಾತ್ರವಲ್ಲದೆ ಅನೇಕ ರಂಗಭೂಮಿ ನಿರ್ಮಾಣದ ನಾಟಕಗಳಿಗೂ ಹಿನ್ನೆಲೆ ಗಾಯಕರಾಗಿ ಸಹಕರಿಸಿದ್ದಾರೆ. ಇತ್ತೀಚೆಗಷ್ಟೇ ಉಡುಪಿಯ ರಂಗಭೂಮಿಯವರು ಸಾಂಸ್ಕೃತಿಕ ಮತ್ತು ರಂಗ ಕಲೆಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಬಿ.ಕೃಷ್ಣ ಕಾರಂತರನ್ನು ಸನ್ಮಾನಿಸಿದ್ದರು . ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಅಚಲ ಬೆಂಬಲ ಮತ್ತು ಪ್ರೋತ್ಸಾಹವು ಸಮುದಾಯದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದೆ. ಅವರ ಅಗಲಿಕೆಯಿಂದ ಸಂಗೀತ ಮತ್ತು ರಂಗಭೂಮಿಗೆ ಅಪಾರ ನಷ್ಟವುಂಟಾಗಿದೆ. ಬಿ.ಕೃಷ್ಣ ಕಾರಂತರು ಪತ್ನಿ, ಇಬ್ಬರು ಪುತ್ರರು, ಸಂಬಂಧಿಕರು…