Author: roovari

ಮಂಗಳೂರು : ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ವತಿಯಿಂದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇದರ ಆಶ್ರಯದಲ್ಲಿ ‘ವಿಶ್ವಕರ್ಮ ಕಲಾ ಸಿಂಚನ 2024’ ಭಕ್ತಿ ಸಿಂಚನ, ಜ್ಞಾನ ಸಿಂಚನ, ಚಿತ್ರ ಸಿಂಚನ ಮತ್ತು ಪ್ರತಿಭಾ ಸಿಂಚನ, ಕೃತಿ ಬಿಡುಗಡೆ ಮತ್ತು ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವನ್ನು ದಿನಾಂಕ 15 ಡಿಸೆಂಬರ್ 2024ರಂದು ಪೂರ್ವಾಹ್ನ 9-00 ಗಂಟೆಗೆ ಮಂಗಳೂರು ರಥಬೀದಿಯ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಸ್.ಪಿ. ಗುರುದಾಸ್ ಇವರ ಅಧ್ಯಕ್ಷತೆಯಲ್ಲಿ ಸ್ಪೂರ್ತಿ ಮೆಡಿಕಲ್ ಅಕಾಡೆಮಿಯ ನಿರ್ದೇಶಕರಾದ ಡಾ. ಜ್ಯೋತಿ ಜಗದೀಶ್ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಲೇಖಕಿ ಕಲಾವಿದೆ ಶ್ರೀಮತಿ ಲಲಿತಾ ಕೆ. ಆಚಾರ್ ಇವರ ‘ಸುಲಲಿತ ಕಾವ್ಯ ಚಿತ್ತಾರ’ ಎಂಬ ಕೃತಿಯು ಲೋಕಾರ್ಪಣೆಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ಭಕ್ತಿಗೀತೆ ಗಾಯನ, ಚಿನ್ನದ ಆಭರಣ ವಿನ್ಯಾಸ, ರಸಪ್ರಶ್ನೆ ಮತ್ತು…

Read More

ಮೂಡುಬಿದಿರೆ : ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಮೂರನೇ ದಿನವಾದ ದಿನಾಂಕ 12-12-2024ರಂದು ಗೋಧೂಳಿಯಲ್ಲಿ ಗಜಲ್-ಭಜನ್ ಸುಧೆ ಹರಿಸಿದ ಒಸ್ಮಾನ್ ಮೀರ್  ಮೀರ್ ಹಾಗೂ ಅಮೀರ್ ಮೀರ್, ಸಾಥ್ ನೀಡಿದ ಪಾರತಿ ವ್ಯಾಸ್ ಪ್ರೀತಿ, ಭಕ್ತಿ, ದೇಶಪ್ರೇಮ ಹೊನಲಾಗಿಸಿದ ‘ಸೌಹಾರ್ದತೆಯ ಗಾನ ಸಂತ’ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಕಾರ್ಯಕ್ರಮದ ಗೋಧೂಳಿ ಸೊಬಗು ಸೌಹಾರ್ದತೆಯ ಮೆರುಗು ನೀಡಿತ್ತು. ಬಿದಿರೆಯ ಆಗಸದಲ್ಲಿ ಹೊಂಗಿರಣ ಮೂಡಿದ್ದರೆ, ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ‘ಸಬ್ ಕಾ ಶುಕ್ರಿಯಾ’ ಎಂದು ವಿನಮ್ರತೆ ವ್ಯಕ್ತಪಡಿಸಿ ಒಸ್ಮಾನ್ ಮೀರ್ ಧನ್ಯರಾದರು, ‘ತುಜ್ ಸೇ ಮೇರಾ ಜೀನಾ ಮರ್ನಾ… ಮೈ ಮುಸಾಫಿರ್ ತು ಮುಸಾಫಿರ್’ ಎಂದು ಅವರ ಪುತ್ರ ಅಮೀರ್ ಮೀರ್ ವೈರಲ್ ಆದ ತಮ್ಮ ಆಲ್ಬಂನ ಗಾನದ ಹೊನಲು ಹರಿಸಿದರು. ‘ತೇರೆ ಬಿನಾ ಸೋ ನಹೀ ಸಕ್ತೇ….’ ಎಂದಾಗ ಸಭಾಂಗಣ ಕಿಕ್ಕಿರಿದ ವಿದ್ಯಾರ್ಥಿಗಳ ಉದ್ಘಾರ ನಿದ್ದೆಗೆಡಿಸಿತು. ಬಳಿಕ ಅಮೀರ್ ಮೀರ್…

Read More

ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ದಿನಾಂಕ 09 ಡಿಸೆಂಬರ್ 2024ರ ಸೋಮವಾರದಂದು ಕರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಇದರ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ. ಎಸ್. ಮಾತನಾಡಿ “ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ.” ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕೋತ್ಸವ ಪ್ರಯುಕ್ತ ‘ಶ್ರೀ ಆಂಜನೇಯ 56’ ದಿನಾಂಕ 25 ಡಿಸೆಂಬರ್ 2024ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಬೆಳಗ್ಗೆ 9-00 ಗಂಟೆಗೆ ಈ ಕಾರ್ಯಕ್ರಮವು ಉದ್ಘಾಟನೆಗೊಳ್ಳಲಿದ್ದು, ಬಳಿಕ ಸಂಘದ ಸದಸ್ಯರಿಂದ ‘ಯಕ್ಷ ತಾಪಸಿಯರು – ಸಂವಾದ’ ಮತ್ತು ಭೀಷ್ಮ ಸೇನಾಧಿಪತ್ಯ – ಕರ್ಮಬಂಧ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಆತ್ಮಾಲಯ ಕಲೆ ಮತ್ತು ಸಂಸ್ಕೃತಿ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಭಾಗವತಹಂಸ ಶ್ರೀ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ‘ಶ್ರೀಮತಿ ಶಾಂತಾ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಂಜೆ 4-30 ಗಂಟೆಗೆ ನಡೆಯಲಿರುವ ಸಭಾ ಕಲಾಪದ ಅಧ್ಯಕ್ಷತೆಯನ್ನು ಪುತ್ತೂರಿನ ಸ್ವರ್ಣೋದ್ಯಮಿ ರೊ. ಬಲರಾಮ ಆಚಾರ್ಯ ಇವರು ವಹಿಸಲಿದ್ದು, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಹರಿನಾರಾಯಣದಾಸ ಆಸ್ರಣ್ಣ ಇವರು…

Read More

ಬೆಂಗಳೂರು : ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ವತಿಯಿಂದ ಕೊಡವ ಕಥೆ ಜೊಪ್ಪೆಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಲಾಗಿದೆ. ಕಥೆ ಜೊಪ್ಪೆಯಲ್ಲಿ ಸುಮಾರು 25 ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳನ್ನು ಎ4 ಅಳತೆಯ ಕಾಗದದಲ್ಲಿ ಸ್ಪುಟವಾಗಿ 5-6 ಪುಟ ಮೀರದಂತೆ ಬರೆಯಬೇಕು. ಕಥೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ, ಪದ್ಧತಿ ಹಾಗೂ ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ.  ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತುಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು 4-5 ವಾಕ್ಯಗಳಿಗೆ ವೀರದಂತೆ ಸ್ವಪರಿಚಯ, ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಲಗತ್ತಿಸಿ 05 ಡಿಸೆಂಬರ್ 2025ರ ಒಳಗಾಗಿ ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದು.

Read More

ಕೋಟ : ಶ್ರೀ ಶಾಂತಿಮತೀ ಪ್ರತಿಷ್ಠಾನ ದ ‘ಸಾಧಕರೆಡೆ ನಮ್ಮ ನಡೆ ‘ ತಿಂಗಳ ಕಾರ್ಯಕ್ರಮವು 29 ನವೆಂಬರ್ 2024 ರಂದು ಕೋಟದ ಗೋವಿಂದ ಉರಾಳರ ಮನೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಗೋವಿಂದ ಉರಾಳರನ್ನು ಗೌರವಿಸಲಾಯಿತು.. ಕಾರ್ಯಕ್ರಮದಲ್ಲಿ ಕೋಟ ಸುಜಯೀಂದ್ರ ಹಂದೆ, ಆನಂದರಾಮ ಉರಾಳ,ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷರಾದ ಸಚ್ಚಿದಾನಂದ ಅಡಿಗರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚಂದ್ರಶೇಖರ ಅಡಿಗ ಬಾರ್ಕೂರು ಸ್ವಾಗತಿಸಿ, ಪಾಂಡೇಶ್ವರದ ಡಾ. ವಿಜಯ್ ಮಂಜರ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿ, ಸಚ್ಚಿದಾನಂದ ಅಡಿಗ ಧನ್ಯವಾದಗೈದರು. ಗೋವಿಂದ ಉರಾಳರ ಕುಟುಂಬಸ್ಥರು, ಶಿಷ್ಯ ವೃಂದ ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೊಂದನೇ ಉಪನ್ಯಾಸ ಕಾರ್ಯಕ್ರಮವು ದಿನಾಂಕ 12 ಡಿಸೆಂಬರ್ 2024ರಂದು ಮಂಗಳೂರಿನ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ “ಯುವಕರಲ್ಲಿ ಸಂಯಮ ಮತ್ತು ಪರಿಶ್ರಮ – ಸ್ವಾಮಿ ವಿವೇಕಾನಂದರ ಸಂದೇಶ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದ ಪುತ್ತೂರಿನ ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ “ಸ್ವಾಮಿ ವಿವೇಕಾನಂದರು ತಮ್ಮ ಜೀವನದ ಮತ್ತು ಸಂದೇಶಗಳ ಮೂಲಕ ಯುವಕರಿಗೆ ಪ್ರೇರಣೆಯ ರೂಪವಾಗಿದ್ದಾರೆ. ಅವರು ಸಂಯಮವನ್ನು ಜೀವನದ ಪ್ರಮುಖ ಗುಣವೆಂದು ಬೋಧಿಸುತ್ತಾ, ಅದು ಯಶಸ್ಸಿನ ಮೂಲಾಧಾರವೆಂದು ವಿವರಿಸಿದ್ದಾರೆ. ಯುವಕರಿಗೆ ಶ್ರದ್ಧೆ, ತಾಳ್ಮೆ ಮತ್ತು ಪರಿಶ್ರಮದ ಮಹತ್ವವನ್ನು ತಿಳಿಸುವಲ್ಲಿ ಅವರು ಅನನ್ಯವಾದ ಪಾತ್ರವನ್ನು ನಿರ್ವಹಿಸಿದರು. ನಂಬಿಕೆ ಮತ್ತು ಪರಿಶ್ರಮದಿಂದ ಯಾವುದರನ್ನಾದರೂ ಸಾಧಿಸಬಹುದು ಎಂಬ ವಿವೇಕಾನಂದರ ಮಾತು ಯುವಕರಿಗೆ ಆಧ್ಯಾತ್ಮಿಕ ಪ್ರೇರಣೆಯೊಂದಿಗೆ ಆಳವಾದ ಜೀವನದ ಪಾಠವನ್ನು ನೀಡುತ್ತದೆ. ಅವರು ಆತ್ಮವಿಶ್ವಾಸವನ್ನು ಉಕ್ಕಿಸುವ ಮೂಲಕ, ಜೀವನದ ಬದ್ಧತೆ ಮತ್ತು ಗುರಿಯ…

Read More

ವಿದ್ಯಾಗಿರಿ, ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಡಿಸೆಂಬರ್ 2024ನೇ  ಬುಧವಾರ ಸಂಜೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಿತು. ಪ್ರಶಸ್ತಿಯನ್ನು ಸ್ವೀಕರಿಸಿದ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಮಾತನಾಡಿ “ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ. ಎಂ. ಮೋಹನ ಆಳ್ವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ. ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು.” ಎಂದು ಕಿವಿಮಾತು ಹೇಳಿದರು. ಅದಕ್ಕೂ ಮೊದಲು, ಕಲೆ-ಸಂಸ್ಕೃತಿಯ ಸಮ್ಮಿಲನದ ಸ್ವರೂಪದಂತೆ ಅಲಂಕೃತ ಗೊಂಡ ವಿರಾಸತ್‌ ಬಯಲು…

Read More

ಕಾಸರಗೋಡು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಮತ್ತು ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಒಂದು ದಿನದ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ 2024 ‘ಕೇರಳ – ಕರ್ನಾಟಕ ಮಕ್ಕಳ ಉತ್ಸವ’ ದಿನಾಂಕ 10 ನವೆಂಬರ್ 2024ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಕನ್ನಡ ಗ್ರಾಮದ ಪರಿಸರ, ವೇದಿಕೆ ಮತ್ತು ಮನೆಯಂಗಳದಲ್ಲಿ ಕಾಸರಗೋಡು ಜಿಲ್ಲೆಯ ಶಾಲಾ ಮಕ್ಕಳಿಗಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಸುಮಾರು 100ಕ್ಕೂ ಅಧಿಕ  ಸ್ಪರ್ಧಾಳುಗಳು ಭಾಗವಹಿಸಿದ್ದರು. ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 15 ದಶಂಬರ್ 2024 ಆದಿತ್ಯವಾರದಂದು ಅಪರಾಹ್ನ 3-00 ಗಂಟೆಗೆ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಹೆತ್ತವರು, ಪೋಷಕರು, ಅಧ್ಯಾಪಕರು ಸ್ಪರ್ಧಾ ತೀರ್ಪುಗಾರರ ಸಮ್ಮುಖದಲ್ಲಿ ಸಮ್ಮೇಳನದ ಸ್ಪರ್ಧೆಯ ವಿಜೇತರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸ್ಪರ್ಧಾ…

Read More

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ ಇದರ ಮೊದಲ ದಿನವಾದ ದಿನಾಂಕ 10 ಡಿಸೆಂಬರ್ 2024ರ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧಾಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ.  ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತ ತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳೂ ಮಾತ್ರವಲ್ಲ, ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯವಿದ್ದ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಯೋಗಾನಂದ ಸ್ವಾಮೀಜಿ ಕೊಂಡೆವೂರು, ಮಾಣಿಲ ಮೋಹನದಾಸ ಸ್ವಾಮೀಜಿ ಹಾಗೂ ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಅವರು ವೇದಿಕೆಯ ಬಲಭಾಗದಲ್ಲಿದ್ದ ರಥದಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ನಿಗದಿಯಂತೆ ಕ್ಲಪ್ತ ಸಮಯಕ್ಕೆ ಆರಂಭಗೊಂಡ ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯು…

Read More