Author: roovari

ಮಂಜೇಶ್ವರ: ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ ಸಾರಥ್ಯದಲ್ಲಿ ಹೊರ ಬರುತ್ತಿರುವ, ಗಡಿನಾಡು ಕಾಸರಗೋಡಿನ ವಿವಿಧ ಸಾಧಕರ ಪರಿಚಯ ಕೃತಿ ಸರಣಿಯಾದ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆಯ ಲೋಕಾರ್ಪಣೆ ಹಾಗೂ ಅವಲೋಕನ ಸಮಾರಂಭವು ದಿನಾಂಕ 07 ಜೂನ್ 2025ನೇ ಶನಿವಾರದಂದು ಮೀಯಪದವು ಶ್ರೀ ವಿದ್ಯವರ್ಧಕ ಉನ್ನತ ಪ್ರೌಢಶಾಲೆಯಲ್ಲಿ ನಡೆಯಿತು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ.ರಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಖ್ಯಾತ ಸಾಹಿತಿ ಹಾಗೂ ವಿಮರ್ಶಕರಾದ ಅರವಿಂದ ಚೊಕ್ಕಾಡಿ ಮಾತನಾಡಿ “’ಕನ್ನಡಿಯಲ್ಲಿ ಕನ್ನಡಿಗ’ ಮಾಲಿಕೆ ವಿಶಿಷ್ಟವಾದುದು. ಗಡಿಭಾಗದ ಅನೇಕ ಸಾಧಕರನ್ನು ಪರಿಚಯಿಸುವ ಪುಸ್ತಕಗಳ ಮಾಲಿಕೆಯನ್ನು ಹೊರತರುವ ಈ ಪರಿಕಲ್ಪನೆ ನಾವೀನ್ಯತೆಯಿಂದ ಕೂಡಿದ್ದು, ಗಡಿನಾಡು ಸಂಸ್ಕೃತಿ ಅನಾವರಣ ಸ್ತುತ್ಯರ್ಹ ಎಂದು ಖ್ಯಾತ ಸಾಹಿತಿ, ವಿಮರ್ಶಕ ಅರವಿಂದ ಚೊಕ್ಕಾಡಿ ಹೇಳಿದರು. ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಖ್ಯಾತ…

Read More

ಬದಿಯಡ್ಕ : ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಯಕ್ಷಗಾನ ತರಬೇತಿಯ ನೂತನ ವರ್ಗದ ಚಾಲನಾ ಸಮಾರಂಭವು ದಿನಾಂಕ 08 ಜೂನ್ 2025 ರಂದು ಬದಿಯಡ್ಕದ ನವಜೀವನ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿ ಉದ್ಘಾಟಿಸಿದ ಯಕ್ಷಗಾನ ಗುರುಗಳಾದ ಶ್ರೀ  ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಮಾತನಾಡಿ “ಯಕ್ಷಗಾನ ಕಲಿಕೆಯಿಂದ ನಮ್ಮಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ” ಎಂದು ಹೇಳಿದರು. ರಂಗಸಿರಿಯ ಸ್ಥಾಪಕ ಕಾರ್ಯದರ್ಶಿ ಡಾ. ಶ್ರೀಶ ಕುಮಾರ ಪಂಜಿತ್ತಡ್ಕ ಪ್ರಾಸ್ತಾವಿಕವಾಗಿ ಮಾತಾಡಿ “ಹದಿನೈದು ವರ್ಷಗಳ ಬೆಳವಣಿಗೆ ಕಂಡಿರುವ ರಂಗಸಿರಿಯು ಕಳೆದ ವರ್ಷ 45ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನ ನೀಡಿ ಸಾಧನೆಮಾಡಿದೆ. ಅಂತಹ ಸಾಧಕ ಸಂಸ್ಥೆಯ ಅಂಗವಾಗಿ ಯಕ್ಷಗಾನ ಕಲಿಯಲು ಮುಂದಾಗಿರುವ ಎಲ್ಲ ವಿದ್ಯಾರ್ಥಿಗಳೂ ಅಭಿನಂದನಾರ್ಹರು” ಎಂದು ಹೇಳಿದರು. ರಂಗಸಿರಿಯ ಸದಸ್ಯರಾದ ದಿನೇಶ ಮಾಸ್ಟರ್,   ಸಂಸ್ಥೆಯ ಕಲಾವಿದರಲ್ಲೊಬ್ಬರಾದ ಅಭಿಜ್ಞಾ ಭಟ್ ಶುಭಹಾರೈಸಿದರು. ವಿದ್ಯಾರ್ಥಿಗಳು  ಉತ್ಸಾಹದಿಂದ ಯಕ್ಷಗಾನಕ್ಕೆ ಆರಂಭಿಕ ಹೆಜ್ಜೆಗಳನ್ನಿಟ್ಟರು.

Read More

ಕಾಸರಗೋಡು : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಕನ್ನಡದ ಹಿರಿಯ ಕವಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈಯವರ ಜನ್ಮದಿನೋತ್ಸವವನ್ನು ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿರುವ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಸಭಾಂಗಣದಲ್ಲಿ ದಿನಾಂಕ 08 ಜೂನ್ 2025ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ. ವಾಮನರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ದಂಪತಿಗಳು ಕಯ್ಯಾರರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಕಯ್ಯಾರರಿಗೆ ನುಡಿ ನಮನ ಸಲ್ಲಿಸಿ “ಕವಿ ಕಯ್ಯಾರರು ಅಪ್ರತಿಮ ಹೋರಾಟಗಾರರು. ಪಂಪನ ಹಾಗೆ ಕವಿಯೂ ಹೌದು ಕಲಿಯೂ ಹೌದು. ಸದಾ ಕನ್ನಡಕ್ಕಾಗಿ ತುಡಿದ, ಮಿಡಿದ ಶತಾಯುಷಿ ಕಯ್ಯಾರರ ಬದುಕು, ಸಾಹಿತ್ಯ, ಆದರ್ಶಗಳು ಕಾಸರಗೋಡಿನ ಕನ್ನಡಿಗರಿಗೆ ಸದಾ…

Read More

ಕೋಲಾರ : ಆದಿಮ ಸಾಂಸ್ಕೃತಿಕ ಕೇಂದ್ರ ಇದರ ವತಿಯಿಂದ ‘ಹುಣ್ಣಿಮೆ ಹಾಡು 218’ ಕಾರ್ಯಕ್ರಮವನ್ನು ದಿನಾಂಕ 11 ಜೂನ್ 2025ರಂದು ಸಂಜೆ 7-00 ಗಂಟೆಗೆ ಆದಿಮದಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲಿ ಸಂಗೀತ ಮಾಂತ್ರಿಕ ಇಸ್ಮಾಯಿಲ್ ಗೊನಾಳ್ ಇವರ ಹೆಸರಿನಲ್ಲಿ ನೀಡುವ ‘ಇಸ್ಮಾಯಿಲ್ ಗೊನಾಳ್ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಎನ್. ಮುನಿಸ್ವಾಮಿ ಇವರು ವಹಿಸಲಿದ್ದು, ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಇವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಸಾಹಿತಿ ಶ್ರೀ ಲಕ್ಷ್ಮೀಪತಿ ಕೋಲಾರ ಇವರು ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಲಿದ್ದು, ಹೈದ್ರಾಬಾದ್ ಸುರಭಿ ನಾಟಕ ರಂಗಭೂಮಿ ಸಂಸ್ಥೆಯ ಜಯಾನಂದ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಮಹಾಭಾರತ ದೃಶ್ಯಾವಳಿ’ ಪೌರಾಣಿಕ ನಾಟಕ ಪ್ರಸ್ತುತಗೊಳ್ಳಲಿದೆ.

Read More

ಪೂಂಜಾಲಕಟ್ಟೆ : ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್‌ ದಿನಾಂಕ 08 ಜೂನ್ 2025ರಂದು ನಿಧನ ಹೊಂದಿದ್ದಾರೆ. ಇವರಿಗೆ 70 ವರ್ಷ ವಯಸ್ಸಾಗಿತ್ತು. ಶೆಟ್ಟಿಗಾರ್ ಅವರು ಕಟೀಲು 2ನೇ ಮೇಳದಲ್ಲಿ ಪ್ರಧಾನ ಹಾಸ್ಯಗಾರರಾಗಿ ಬಳಿಕ ನಿವೃತ್ತಿ ಹೊಂದಿದ್ದರು. ಅವರು ತೆಂಕುತಿಟ್ಟು ಯಕ್ಷಗಾನದಲ್ಲಿ ಆಗ್ರಗಣ್ಯ ಪಾರಂಪರಿಕ ಹಾಸ್ಯಗಾರರಾಗಿ ಪ್ರಸಿದ್ಧರಾಗಿದ್ದರು. ಸಂಗಬೆಟ್ಟುವಿನಲ್ಲಿ ದಿ. ರಾಮಣ್ಣ ಶೆಟ್ಟಿಗಾರ್ ಹಾಗೂ ಗಿರಿಜಾ ದಂಪತಿಯ ಪುತ್ರರಾಗಿ 1956ರ ಮಾರ್ಚ್ 01ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪಡೆದು ಯಕ್ಷಗಾನದ ಬಗ್ಗೆ ಆಕರ್ಷಿತರಾದರು. ಕೊರಗದಾಸ ಸಿದ್ದಕಟ್ಟೆ ಅವರಲ್ಲಿ ನಾಟ್ಯಾಭ್ಯಾಸ ಮಾಡಿ ತಮ್ಮ 22ನೇ ವರ್ಷದಲ್ಲಿ ರಂಗ ಪ್ರವೇಶಿಸಿ ವೇಣೂರು ಸುಂದರ ಆಚಾರ್ಯರ ಗರಡಿಯಲ್ಲಿ ಪಳಗಿದ ಅವರು ಒಬ್ಬ ಉತ್ತಮ ಹಾಸ್ಯ ಕಲಾವಿದರಾಗಿ ಮೂಡಿಬಂದರು. ತುಳು, ಕನ್ನಡ ಪೌರಾಣಿಕ ಪ್ರಸಂಗಗಳಲ್ಲಿ ಪ್ರೌಢಿಮೆಯನ್ನು ಸಾಧಿಸಿದ ಅವರು ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಪಾತ್ರ ನಿರ್ವಹಣೆ ಬಲ್ಲವರಾಗಿದ್ದರು. ತೆಂಕುತಿಟ್ಟಿನ ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದಕಟ್ಟೆ, ಸುರತ್ಕಲ್, ಕಟೀಲು ಮೇಳ ಹೀಗೆ…

Read More

ಮೈಸೂರು : ಧ್ವನಿ ಫೌಂಡೇಷನ್ ಹಾಗೂ ಭಿನ್ನಷಡ್ಜ ಎರಡೂ ಸಂಸ್ಥೆಗಳು ಜಂಟಿಯಾಗಿ ‘ಭಿನ್ನಧ್ವನಿ’ ಎಂಬ ವಾರಾಂತ್ಯ ರಂಗ ತರಗತಿಗಳನ್ನು ಮೈಸೂರಿನ ಸ್ವರಕುಟೀರದಲ್ಲಿ ನಡೆಸಲು ಯೋಜನೆಯನ್ನು ರೂಪಿಸಿವೆ. ದಿಗ್ವಿಜಯ ಹೆಗ್ಗೋಡು ಇವರ ನಿರ್ದೇಶನದಲ್ಲಿ ನಡೆಯುವ ಈ ರಂಗಕೂಟದಲ್ಲಿ 9ರಿಂದ 15 ವರ್ಷಗಳ ಮಕ್ಕಳು ಭಾಗವಹಿಸಬಹುದು. ರಂಗಭೂಮಿಯ ಮೂಲಕ ಮಕ್ಕಳ ಕ್ರಿಯಾಶೀಲತೆ, ಕಲ್ಪನೆ, ಏಕಾಗ್ರತೆ, ಭಾಷಾಸ್ಫುಟತೆ ಮುಂತಾದ ಹಲವಾರು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ತರಗತಿಗಳನ್ನು ನಡೆಸಲಿದ್ದು, ಕೇವಲ ಹದಿನೈದು ಮಕ್ಕಳಿಗೆ ಮಾತ್ರ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ 9632535749 ಮತ್ತು 9483918783 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ರಾಯಚೂರು: 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಸಾಹಿತಿ ಡಾ.ಜಯದೇವಿ ಗಾಯಕವಾಡ ಆಯ್ಕೆಯಾಗಿದ್ದಾರೆ. ರಾಯಚೂರಿನ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 2025ರ ಜೂನ್ 28 ಹಾಗೂ 29ರಂದು ಸಮ್ಮೇಳನ ಜರುಗಲಿದೆ. ಸಭಯನ್ನುದ್ದೇಶಿ ಮಾತನಾಡಿದ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ “ಡಾ. ಜಯದೇವಿ ಗಾಯಕವಾಡ ಅವರು ಕಲ್ಯಾಣ ಕರ್ನಾಟಕ ಭಾಗದ ಹೆಸರಾಂತ ಸಾಹಿತಿ. ಕಾದಂಬರಿ, ಕವನ, ಗಜಲ್,ಜೀವನ ಚರಿತ್ರೆ, ವೈಚಾರಿಕ ಸಾಹಿತ್ಯ, ವಿಮರ್ಶೆ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹೀಗಾಗಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಗಿದೆ,” ಎಂದು ತಿಳಿಸಿದರು. “ಸಮ್ಮೇಳನವನ್ನು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್. ಹನುಮಂತಯ್ಯ ಸಮ್ಮೇಳನದ ಆಶಯ ನುಡಿ ಆಡುವರು. ದಲಿತ ಸಾಹಿತ್ಯ ಪರಿಷತ್ತು ಹೊರತಂದಿರುವ 25 ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರಾದ ಡಾ. ಮನು ಬಳಿಗಾರ ಲೋಕಾರ್ಪಣೆಗೊಳಿಸುವರು. ದಲಿತ ಸಾಹಿತ್ಯ ಪರಿಷತ್ತು ನೀಡುವ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪ್ರಶಸ್ತಿ’…

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ದಿನಾಂಕ 06 ಜೂನ್ 2025ರಂದು ’ಕಾವ್ಯಾಂ ವ್ಹಾಳೊ-3’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಹಿರಿಯ ಸಾಹಿತಿ ಮತ್ತು ಕವಿಗಳಾದ ಶ್ರೀ ನವೀನ್ ಕುಲ್ಶೇಕರ್ ಇವರು ಮಾತಾನಾಡಿ ಎಲ್ಲರಿಗೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಸಾಹುಕಾರ್ ಕಿರಣ್ ಪೈಯವರು ಸನ್ಮಾನಿತರನ್ನು ಸನ್ಮಾನಿಸಿ, “ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೇ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಶ್ರೀ ಟೈಟಸ್ ನೊರೊನ್ಹಾರವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು…

Read More

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ನಾಡೋಜ ಕವಿ ಡಾ. ಸಿದ್ಧಲಿಂಗಯ್ಯ ಸ್ಮಾರಕ ಪ್ರತಿಷ್ಠಾನ (ರಿ.) ಇದರ ವತಿಯಿಂದ ‘ಜೀವಧ್ವನಿ’ ಕಾರ್ಯಕ್ರಮವನ್ನು ದಿನಾಂಕ 11 ಜೂನ್ 2025ರಂದು ಬೆಳಗ್ಗೆ 10-30 ಗಂಟೆಗೆ ಬೆಂಗಳೂರು ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜನ ಮಾನಸ ಕವಿ ಪದ್ಮಶ್ರೀ ನಾಡೋಜ ಡಾ. ಸಿದ್ಧಲಿಂಗಯ್ಯನವರ 4ನೇ ವರ್ಷದ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ ಹಾಗೂ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ಣಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ನಾಗರಾಜ ಮೂರ್ತಿ ಕೆ.ವಿ. ಇವರು ಉದ್ಘಾಟನೆ ಮಾಡಲಿದ್ದು, ನಾಡೋಜ ಕವಿ ಡಾ. ಸಿದ್ಧಲಿಂಗಯ್ಯ ಸ್ಮಾರಕ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಶ್ರೀಮತಿ ರಮಾಕುಮಾರಿ ಸಿದ್ಧಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಸಿದ್ಧ ಲೇಖಕರಾದ ಡಾ. ಬಿ.ಯು. ಸುಮಾ ಇವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರಗೋಷ್ಠಿಯಲ್ಲಿ ‘ದಲಿತ ಕವಿ ಸಿದ್ಧಲಿಂಗಯ್ಯನವರ ಕಾವ್ಯ’ ಎಂಬ ವಿಷಯದ ಬಗ್ಗೆ ಪ್ರಸಿದ್ಧ ಕವಿಗಳಾದ…

Read More

ಮಂಗಳೂರು : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ವರ್ಷ) ದಿನಾಂಕ 07 ಜೂನ್ 2025ರಂದು ಹೃದಯಾಘಾತದಿಂದ ನಿಧನರಾದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು. ‘ವಿದ್ಯುನ್ಮತಿ ಕಲ್ಯಾಣ’ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆಯವರ ಸ್ತ್ರೀ ವೇಷದ ಚಿತ್ರ ಮುಖಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಸದಾಶಿವ ಶೆಟ್ಟಿ ಕಟೀಲು ಮೇಳದಲ್ಲಿ ಕಳೆದ 23 ವರ್ಷಗಳಿಂದ ವೇಷಧಾರಿಯಾಗಿ ಹಾಗೂ 5ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 56 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದರು. ಕಟೀಲಿನ 5ನೇ ಮೇಳದಲ್ಲಿದ್ದ ಅವರು ಪ್ರಬಂಧಕರಾಗಿ, ಎಲ್ಲ ಕಲಾವಿದರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು, ತಿರುಗಾಟ ಆರಂಭವಾದರೆ ಮೇಳದ ಆರಂಭದಿಂದ ಕೊನೆಯವರೆಗೆ ಮನೆಗೂ ಬಾರದೆ ಸಮರ್ಪಣಾಭಾವದಿಂದ ಸದಾಶಿವ ಶೆಟ್ಟಿ ಅವರು ಮೇಳವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದರು. ಪುಂಡು, ರಾಜವೇಷ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದ ಮುಂಡಾಜೆ ಅವರಿಗೆ ಕಳೆದ ವರ್ಷವಷ್ಟೇ…

Read More