Subscribe to Updates
Get the latest creative news from FooBar about art, design and business.
Author: roovari
ಮೈಸೂರು : ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ದಿನಾಂಕ 02 ಅಕ್ಟೋಬರ್ 2025ರಂದು ನಡೆದ ಜಾಥಾ ಕಾರ್ಯಕ್ರಮದಲ್ಲಿ ಒತ್ತೋರ್ಮೇರ ಕೊಡವ ಕೂಟದ ಸದಸ್ಯರು ಕೊಡಗಿನ ಸಾಂಪ್ರದಾಯವನ್ನು ಪ್ರದರ್ಶಿಸುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾದರು. ಅರಮನೆ ಮೈದಾನದಿಂದ ಬನ್ನಿ ಮಂಟಪದವರೆಗೆ ನಡೆದ ಮೆರವಣಿಗೆಯಲ್ಲಿ ಕೊಡವರ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ತಳಿಯತಕ್ಕಿ ದೀಪ ಹಿಡಿದು, ದುಡಿ ಕೊಟ್ಸ್ ದಾಟ್ ಜೊತೆಗೆ ಕೊಡವ ಸಂಸ್ಕೃತಿಯ ಅಂಗವಾದ ಒಡಿಕತ್ತಿ, ಬಿಲ್ಲು ಬಾಣ, ಬರ್ಜಿ ಹಿಡಿದು ವಾಟಕಪಾಟ್ ನೃತ್ಯ ಮಾಡುವ ಮೂಲಕ ಜಾಥಾ ನಡೆಸಲಾಯಿತು. ಕೊಡಗಿನ ವಾಲಗ ತಂಡದ ಪ್ರಾಯೋಜಕತ್ವವನ್ನು ಮುಖ್ಯಮಂತ್ರಿಗಳ ಕಾನೂರು ಸಲಹೆಗಾರರು ಹಾಗು ವಿರಾಜಬೇಟೆ ಕ್ಷೇತ್ರದ ಶಾಸಕ ಅಜ್ಜಿಕುಟೀರ ಪೊನ್ನಣ್ಣ ಅವರು ನೀಡಿದರು. ಕಾರ್ಯಕ್ರಮದಲ್ಲಿ ಒತ್ತೋರ್ಮೆರ ಕೊಡವ ಕೂಟದ ಸ್ಥಾಪಕ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯಕ್ರಮ ಸಂಚಾಲಕ ಕಾಳಮಂಡ ಬಾಬಿನ್ ಅಚ್ಚಮ್ಮ,ಕಾರ್ಯಕ್ರಮ ಸಂಚಾಲಕ ಮಾಚಿಂಗ ಸಚಿನ್ ತಿಮ್ಮಯ್ಯ ಹಾಗೂ ಕಾಯಪಂಡ ಇಶಾನ್ ಪೂಣಚ್ಚ, ಪೊನ್ನೋಲತಂಡ ಶರಣು ತಮ್ಮಯ್ಯ, ಕೇಳಪ್ಪಂಡ ಲಿಂಕಿತ್ ತಿಮ್ಮಯ್ಯ, ಕಾಯಪಂದ…
Bangalore : Upasana Books, a publishing house, under the leadership of Asha Raghu, on 4th October 2025 published two upcoming poets from Bangalore, Jatin Sharma and Upasana Raghu and their collections ‘Flight’ and ‘On Duffy’s Wolf’ respectively. The event, taking place at Kerbside Bistro, Sadashiva Nagar was graced by the presence of K Srinath, writer and translator in Kannada and English. He spoke of the poets, likening them to Sylvia Plath and the notion of ‘suffering breeds art.’ In the wake of which, the poets spoke of their process and influences and this was followed by an open mic bringing…
ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 61ನೇ ವರ್ಷದಲ್ಲಿ, ಇದೇ ನವಂಬರ್ ತಿಂಗಳ 4ನೇ ವಾರದಲ್ಲಿ ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ. ಮಲ್ಪೆ ಮಧ್ವರಾಜ್ ಸ್ಮಾರಕ ರಾಜ್ಯ ಮಟ್ಟದ 46ನೇ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸಲಿದೆ. ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಟ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ.35,000/-, ರೂ.25,000/-, ರೂ.15.000/-ದ ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ,…
ಪುತ್ತೂರು : ಜಿಲ್ಲಾ ಮಟ್ಟದ ಗಮಕ ಸಮ್ಮೇಳನದ ಅಂಗವಾಗಿ ಪ್ರೌಢ ಮತ್ತು ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಗಮಕ ವಾಚನ ಸ್ಪರ್ಧೆಯನ್ನು ದಿನಾಂಕ 05 ಅಕ್ಟೋಬರ್ 2025ನೇ ಆದಿತ್ಯವಾರದಂದು ಪುತ್ತೂರಿನ ಅನುರಾಗ ವಠಾರದಲ್ಲಿ ಏರ್ಪಡಿಸಲಾಯಿತು. ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀಯುತ ಬಿ. ಪುರಂದರ ಭಟ್ಟರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಮಕ ಕಲಾ ಪರಿಷತ್ತು ಜಿಲ್ಲಾಧ್ಯಕ್ಷರಾದ ಪ್ರೊ. ಮಧೂರು ಮೋಹನ ಕಲ್ಲೂರಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪ್ರೊ. ವೇದವ್ಯಾಸ ರಾಮಕುಂಜ ಇವರು ಸ್ಪರ್ಧಾಳುಗಳಿಗೆ ಶುಭಾಶಯ ಕೋರಿದರು. ಪ್ರೌಢಶಾಲಾ ವಿಭಾಗದಿಂದ 12 ಮಂದಿ ಮತ್ತು ಪದವಿಪೂರ್ವ ಹಾಗೂ ಪದವಿ ವಿಭಾಗದಿಂದ ಎಂಟು ಮಂದಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತು ಗಮಕಿ ಡಾ. ಕಾರ್ತಿಕ್ ತಾಮಣ್ಕರ್ ತೀರ್ಪುಗಾರರಾಗಿ ಸಹಕರಿಸಿದರು. ಪ್ರೌಢಶಾಲಾ ವಿಭಾಗದಲ್ಲಿ ಸನ್ಮಯ್ 8ನೇ ತರಗತಿ ಅಂಬಿಕಾ ವಿದ್ಯಾಲಯ ಬಪ್ಪಳಿಗೆ ಮತ್ತು…
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ, ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ನಾಗರಿಕ ಸಲಹಾ ಸಮಿತಿ ಸುರತ್ಕಲ್ ಮತ್ತು ಸಪ್ತಕ ಬೆಂಗಳೂರು ಜೊತೆಯಾಗಿ ಸುರತ್ಕಲ್ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 04 ಅಕ್ಟೋಬರ್ 2025ರಂದು ಭೈರಪ್ಪ ನಮನ, ಗಾಯನ, ವಾದನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದ ಚಿಂತಕ ಡಾ. ಅಜಕ್ಕಳ ಗಿರೀಶ್ ಭಟ್ “ಬದುಕಿನಲ್ಲಿ ಎದುರಾದ ನೋವುಗಳನ್ನು ಎದುರಿಸಿ ಅನುಭವಗಳನ್ನು ಕಲಾ ಕೃತಿಯನ್ನಾಗಿಸಿ ಜನ ಮೆಚ್ಚುಗೆ ಪಡೆದ ಸಾಹಿತಿ ಡಾ. ಎಸ್.ಎಲ್. ಭೈರಪ್ಪರು ಜೀವನದ ಸತ್ಯ ಹಾಗೂ ಮೌಲ್ಯಗಳಿಗೆ ಮಹತ್ವವನ್ನು ನೀಡಿ ನುಡಿದಂತೆ ನಡೆದವರು. ನವ್ಯ ಸಾಹಿತ್ಯದ ಪ್ರಭಾವದ ಕಾಲದಲ್ಲಿ ವಿಭಿನ್ನವಾಗಿ ಕಲಾಕೃತಿಗಳನ್ನು ನೀಡಿದ ಭೈರಪ್ಪರು ನಮಗೆ ಹೆಚ್ಚು ಆಪ್ತರಾಗುತ್ತಾರೆ. ‘ಧರ್ಮಶ್ರೀ’ ಕಾದಂಬರಿಯಿಂದ ತೊಡಗಿ ‘ಉತ್ತರ ಕಾಂಡ’ದವರೆಗಿನ ಅವರ ಕೃತಿಗಳು ಅನನ್ಯ ಅನುಭವಗಳನ್ನು ನೀಡುತ್ತವೆ. ಹಿರಿದಾದ ಅನುಭವ, ವಸ್ತು ವೈವಿಧ್ಯ, ಕಲೆಗಾರಿಕೆ, ನಂಬಿದ ತತ್ವಗಳ ಕುರಿತು ಬದ್ಧತೆಗಳಿಂದ ವಿವಿಧ ನೆಲೆಗಳ ಕಾದಂಬರಿಗಳನ್ನು…
ಮಂಗಳೂರು : ಮಾಂಡ್ ಸೊಭಾಣ್ ಮತ್ತು ಸುಮೇಳ್ ಆಯೋಜಿಸಿದ ಅಂತರ ರಾಷ್ಟ್ರೀಯ ಸಂಗೀತ ದಿನ ಮತ್ತು ತಿಂಗಳ ವೇದಿಕೆ ಸರಣಿಯ 286ನೇ ಕಾರ್ಯಕ್ರಮವು ದಿನಾಂಕ 05 ಅಕ್ಟೋಬರ್ 2025ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಗೀತ ಶಿಕ್ಷಕಿ ಕಾರ್ಮೆಲಿಟಾ ಆಲ್ವಾರಿಸ್ “ಸಂಗೀತವು ಜೀವನವನ್ನು ಮಧುರಗೊಳಿಸುತ್ತದೆ. ಸಂಗೀತ ಶಿಕ್ಷಕಿಯಾಗುವ ದೊಡ್ಡ ಭಾಗ್ಯ ನನ್ನದು. ಕಳೆದ 40 ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತದ ಧಾರೆಯೆರೆದಿದ್ದೇನೆ. ಸಂಗೀತ ಕಲಿಸುವಾಗ ನನಗೆ ಆತ್ಮತೃಪ್ತಿ ಸಿಕ್ಕಿದೆ ಹಾಗೂ ಇಂದು ಬಯಸದೆ ಈ ಸನ್ಮಾನ ಲಭಿಸಿದೆ.ʼʼ ಎಂದು ಸಂತಸ ವ್ಯಕ್ತ ಪಡಿಸಿದರು. ಮಾಂಡ್ ಸೊಭಾಣ್ ಅಧ್ಯಕ್ಷರಾದ ಲುವಿ ಪಿಂಟೊ ಸನ್ಮಾನ ನೆರವೇರಿಸಿದರು. ಸುಮೇಳ್ ಸಂಯೋಜಕಿ ರೈನಾ ಸಿಕ್ವೇರಾ ಪ್ರಸ್ತಾವಿಕ ನುಡಿಗಳನ್ನಾಡಿದರು. ಪ್ರೇಮಿ ಲೋಬೊ ಸನ್ಮಾನ ಪತ್ರ ವಾಚಿಸಿದರು. ಪದಾಧಿಕಾರಿಗಳಾದ ರೊನಿ ಕ್ರಾಸ್ತಾ, ಸುನಿಲ್ ಮೊಂತೇರೊ, ಕ್ಲಾರಾ ಪಿಂಟೊ ಮತ್ತು ಸನ್ಮಾನಿತರ ಪತಿ ವಿಲ್ಫ್ರೆಡ್ ಆಲ್ವಾರಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಶ್ಲಿನ್ ವಿಸ್ಮಯಾ ಲೋಬೊ ಕಾರ್ಯಕ್ರಮ ನಿರೂಪಣೆ ಮಾಡಿದರು. ಕೇರನ್…
ಬೆಂಗಳೂರು : ಕನ್ನಡದ ವಿಶಿಷ್ಟ ಬರಹಗಾರ ಮೊಗಳ್ಳಿ ಗಣೇಶ್ (62) ಇವರು ದಿನಾಂಕ 04 ಅಕ್ಟೋಬರ್ 2025ರಂದು ನಿಧನ ಹೊಂದಿದ್ದಾರೆ. ಈಗ ತಾನೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ನಿವೃತ್ತರಾಗಿ ಹೊಸ ಚಿಂತನೆಗಳಲ್ಲಿ ತೊಡಗಿಸಿಕೊಂಡಿದ್ದ ಇವರಿಂದ ಕನ್ನಡ ಸಾಹಿತ್ಯ ಇನ್ನೂ ಮಹತ್ವದ್ದನ್ನು ನಿರೀಕ್ಷಿಸುತ್ತಿತ್ತು. ಅವರ ಅಕಾಲಿಕ ಮರಣ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲಿಯೂ ದಲಿತ ಸಾಹಿತ್ಯದಲ್ಲಿ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ ಎಂದು ನಾಡೋಜ ಡಾ. ಮಹೇಶ ಜೋಶಿಯವರು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ. ‘ಬುಗುರಿ’ ಕಥೆಯ ಮೂಲಕ ಸಂಚಲನವನ್ನು ಉಂಟು ಮಾಡಿದ್ದ ಮೊಗಳ್ಳಿ ಕನ್ನಡಕ್ಕ ದಕ್ಕಿದ ಬಹಳ ಶಕ್ತಿಶಾಲಿ ಲೇಖಕ. ತಮ್ಮ ಆಳವಾದ ಚಿಂತನೆ ಮತ್ತು ಸೋಪಜ್ಞ ಭಾಷೆಯ ಮೂಲಕ ಕನ್ನಡಕ್ಕೆ ಹೊಸ ಕಸುವನ್ನು ತುಂಬಿದ್ದರು. ಅವರ ಕಥೆಗಳು ಇಂಗ್ಲೀಷ್ಗೆ ಅನುವಾದವಾಗಿದ್ದರೆ ಜಾಗತಿಕ ಪುರಸ್ಕಾರಗಳನ್ನು ಖಂಡಿತವಾಗಿಯೂ ಪಡೆಯುತ್ತಿದ್ದವು. ಆದಿಮ ಸಂವೇದನೆಯನ್ನು, ದಲಿತರ ನೋವುಗಳನ್ನು ಅವರಂತೆ ಹಿಡಿದಿಟ್ಟ ಇನ್ನೊಬ್ಬ ಲೇಖಕರಿಲ್ಲ. ಅವರು ಬಳಸುತ್ತಿದ್ದ ನುಡಿಗಟ್ಟು ಕೂಡ ನೋವಿನಲ್ಲಿ ಎದ್ದಿ ಬಂದಂತಿತ್ತು. ಬುಗುರಿ, ಅತ್ತೆ,…
ಉಡುಪಿ : ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಇವರನ್ನು 2025ನೇ ಸಾಲಿನ ‘ಕೇಶವ ಪ್ರಶಸ್ತಿ’ಗೆ ಆಯ್ಕೆ ಮಾಡಿರುವುದಾಗಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಪ್ರಶಸ್ತಿಯನ್ನು ದಿನಾಂಕ 18 ಅಕ್ಟೋಬರ್ 2025ರಂದು ನೂತನ ರವೀಂದ್ರ ಮಂಟಪದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಇಪ್ಪತ್ತೈದು ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಡಾ. ರಮಾನಂದ ಬನಾರಿಯವರು ಖ್ಯಾತ ಪ್ರಸಂಗಕರ್ತ ಕೀರಿಕ್ಕಾಡು ವಿಷ್ಣು ಭಟ್ಟ ಹಾಗೂ ಜಾನಪದ ಹಾಡುಗಾರ್ತಿ ಪರಮೇಶ್ವರಿ ಅಮ್ಮನವರ ಪುತ್ರನಾಗಿ 1940 ಜೂನ್ 4ರಂದು ಕಾಸರಗೋಡಿನ ಕೀರಿಕ್ಕಾಡಿನಲ್ಲಿ ಜನಿಸಿದರು. ಬನಾರಿಯವರು ವೃತ್ತಿಯಿಂದ ವೈದ್ಯರಾಗಿದ್ದು, ಪ್ರವೃತ್ತಿಯಿಂದ ಬರಹಗಾರರು ಮತ್ತು ತಾಳಮದ್ದಳೆ ಅರ್ಥಧಾರಿಗಳು. ಕಲ್ಲಿಕೋಟೆ ವೈದ್ಯಕೀಯ ಮಹಾವಿದ್ಯಾಲಯದಿಂದ ಎಂ.ಬಿ.ಬಿ.ಎಸ್. ಪದವೀಧರರು. ವೃತ್ತಿಯೊಂದಿಗೆ ಸುಮಾರು 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. 10ಕ್ಕೂ ಹೆಚ್ಚು ಸಂಪಾದಿತ ಕೃತಿಗಳು ಪ್ರಕಟವಾಗಿವೆ. ಅವುಗಳಲ್ಲಿ ಎಳೆಯರ ಗೆಳೆಯ (ಮಕ್ಕಳ ಕವನ ಸಂಕಲನ), ಕೊಳಲು, ನಮ್ಮಿಬ್ಬರ ನಡುವೆ, ನೆನಪುಗಳ ನೆರಳಿನಲ್ಲಿ,…
ಧರ್ಮಸ್ಥಳ : ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಹೂವಿನಕೋಲು ಅಭಿಯಾನವು ದಿನಾಂಕ 04 ಅಕ್ಟೋಬರ್ 2025ರಂದು ಧರ್ಮಸ್ಥಳದ ದೇಗುಲದಲ್ಲಿ ನಡೆಯಿತು. ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಧರ್ಮಸ್ಥಳ ದೇಗುಲದ ಶ್ರೀಮತಿ ಹೇಮಾವತಿ ವೀರೇಂದ್ರ ಹೆಗ್ಗಡೆಯವರು “ನವರಾತ್ರಿಯ ಆಚರಣೆಯನ್ನು ವಿವಿಧ ಪ್ರದೇಶಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಯಶಸ್ವಿ ಕಲಾವೃಂದ ಹಳೆಯ ಯಕ್ಷ ಕಲಾ ಪ್ರಕಾರವಾದ ಹೂವಿನಕೋಲನ್ನು ನವರಾತ್ರಿಯ ಸಂದರ್ಭದಲ್ಲಿ ಕರಾವಳಿಯುದ್ದಕ್ಕೂ ಮನೆ ಮನೆಗಳಿಗೆ ತಂಡವನ್ನು ಕೊಂಡಯ್ದು ಮನೆಯ ಮನಗಳಿಗೆ ಹರಸಿ, ಪ್ರದರ್ಶಿಸುವ ಕಲೆ ಚಿತ್ತಾಕರ್ಷಕವಾದದ್ದು. ಕಲಿಕೆಯ ಜೊತೆಗೆ ಪೌರಾಣಿಕ ಕಥೆಯ ಸ್ತುತಿ ಎನ್ನುವುದು ಮನೆಗಳಲ್ಲಿ ಪಸರಿಸುವ ಕಾರ್ಯ ಹೆಚ್ಚು ಆಪ್ತವಾಗಿದೆ. ಮಕ್ಕಳ ನಿರರ್ಗಳ ಮಾತುಗಾರಿಕೆ ಹೂವಿನಕೋಲಿನಂತಹ ಕಲಾ ಪ್ರಕಾರದಲ್ಲಿ ಬೆಳೆದಿದೆ ಎನ್ನಬಹುದು. ಈ ತಂಡದಲ್ಲಿ ಭಾಗವಹಿಸಿದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ” ಎಂದು ಅಭಿಪ್ರಾಯಪಟ್ಟರು. “ಪ್ರದರ್ಶನದ ಜೊತೆ ಜೊತೆಗೆ ಕಲಿಕೆಯನ್ನು ಒಳಗೊಂಡ ಈ ಪ್ರಕಾರ ಮಕ್ಕಳು ಸಾಂಸ್ಕೃತಿಕ ಕ್ಷೇತದಲ್ಲಿ ಬೆಳೆಯುವುದಕ್ಕೆ ಹೆಚ್ಚು ಪೂರಕ. ಮೊಬೈಲ್ ಯುಗದಲ್ಲಿಯೂ ಗಮನ ಸೆಳೆಯುವ ಈ ಕಲೆಯನ್ನು ಸಮಾಜದ ಗಣ್ಯರು ಪೋಷಿಸಬೇಕು”…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-7’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ದಿನಾಂಕ 04 ಅಕ್ಟೋಬರ್ 2025ರಂದು ಅಕಾಡೆಮಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ಪ್ರಾಸ್ತಾವಿಕವಾಗಿ ಮಾತಾನಾಡಿ “ಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಕಾಡೆಮಿಯು ಪ್ರತಿ ತಿಂಗಳು ಕವಿಗೋಷ್ಟಿಯನ್ನು ಹಮ್ಮಿಕೊಳ್ಳುತ್ತದೆ. ಇದು ಎಲ್ಲಾ ಯುವ ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶವಾಗಲಿʼ ಎಂದು ಹೇಳಿದರು. ಖ್ಯಾತ ಹಿರಿಯ ಸಂಗೀತಗಾರರಾದ ಶ್ರೀ ಮುರಳೀಧರ್ ಕಾಮತ್ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇವರು ಮಾತನಾಡಿ, “ತುಂಬಾ ಜನರಿಗೆ ಸಂಗೀತದಲ್ಲಿ ಆಸಕ್ತಿ ಇದೆ. ಸಂಗೀತಕ್ಕೆ ತುಂಬಾ ಪ್ರೋತ್ಸಾಹ ಸಿಗುತ್ತಿದೆ. ಕೊಂಕಣಿಯಲ್ಲೂ ಸಂಗೀತ ಹಾಡುತ್ತೇನೆ ಎಂಬುದು ನನಗೆ ಹೆಮ್ಮೆಯ ವಿಷಯ” ಎಂದರು. ಪ್ರಮುಖ ಉಪಾನ್ಯಾಸಕರಾಗಿ ಆಗಮಿಸಿದ, ಸಾಹಿತಿ ಹಾಗೂ ನಾಟಕ ಬರಹಗಾರರಾದ ಫಾ. ಆಲ್ವಿನ್ ಸೆರಾವೊರವರು ಸಾಹಿತ್ಯದ ಬಗ್ಗೆ ಮಾತಾನಾಡಿ “ಸಾಹಿತ್ಯವು ಕೇವಲ ಕಾಲ್ಪನಿಕವಲ್ಲದೇ ಅನುಭವದಿಂದ ಬರುತ್ತದೆ. ಪ್ರತಿ ಕೆಲಸವು ಚಿಂತನೆಯಿಂದ ಪ್ರಾರಂಭವಾಗುತ್ತದೆ. ಶೃಂಗಾರ, ನವರಸವಿದ್ದಲ್ಲಿ ಮಾತ್ರ ಅದನ್ನು…