Author: roovari

ಆಂಟನ್ ಚೆಕೋಫನ ಪ್ರಸಿದ್ಧ ಕಥೆ ‘ವಾರ್ಡ್ ನಂ.6’. ಅದರ ನಾಟಕ ರೂಪಾಂತರ ಎಂಬ ನೆಲೆಯಿಂದ ‘ಭ್ರಾಂತಾಲಯಂ’ ಎಂಬ ನಾಟಕ ಗಮನಾರ್ಹವಾಗುತ್ತದೆ. ಈ ಪ್ರಸಿದ್ಧವಾದ ಕಥೆಯನ್ನು ಕನ್ನಡದ ಹಿರಿಯ ಲೇಖಕ ಡಾ. ಡಿ.ಆರ್. ನಾಗರಾಜ್ ‘ಕತ್ತಲ ದಾರಿ ದೂರ’ ಎಂಬ ನಾಟಕವಾಗಿ ರೂಪಾಂತರಿಸಿದ್ದನ್ನು ಶ್ರೀಮತಿ ಪಾರ್ವತಿ ಐತಾಳ್ ಮಲೆಯಾಳಕ್ಕೆ ‘ಭ್ರಾಂತಾಲಯಂ’ ಎಂಬ ಹೆಸರು ಕೊಟ್ಟು ಅತ್ಯಂತ ಸುಂದರವಾದ ಒಂದು ಅನುಭವವಾಗಿ ಪರಿವರ್ತಿಸಿದ್ದಾರೆ. ಒಂದು ಪ್ರದೇಶದಲ್ಲಿ ಒಂದು ಆಸ್ಪತ್ರೆ ಬರುವುದು ಪ್ರಗತಿಯ ಪ್ರತೀಕವಾಗಿ. ಆಸ್ಪತ್ರೆ ಬರುವುದು ಆ ಊರಿನ ಅಗತ್ಯ. ಯಾವುದೇ ಊರಿನ ಅಗತ್ಯ ಕೂಡಾ. ಅಂಥ ಒಂದು ಊರಿನಲ್ಲಿ ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಆಡಳಿತ ವರ್ಗವು ಹುಚ್ಚಿಗೆ ಚಿಕಿತ್ಸೆ ನೀಡುವ ಒಂದು ವಾರ್ಡ್ ಬೇಕೆಂದು ನಿರ್ಧರಿಸುತ್ತದೆ. ಹುಚ್ಚರೆಂದು ಅವರಿಗೆ ಅನ್ನಿಸಿದ ಕೆಲವರನ್ನು ಅಲ್ಲಿ ಚಿಕಿತ್ಸೆ ನೀಡಲೆಂದು ಹಿಡಿದು ತರುತ್ತದೆ. ಅವರೆಲ್ಲರೂ ಹುಚ್ಚರೇನಲ್ಲ. ಹುಚ್ಚು ಅನ್ನುವುದು ಸಮಾಜದ ಸೃಷ್ಟಿ ಎಂಬ ದೃಷ್ಟಿಯಿಂದ ಇಲ್ಲಿನ ಕಥಾಪಾತ್ರಗಳನ್ನು ಪ್ರಸ್ತುತ ಪಡಿಸಲಾಗಿದೆ. ಅವರನ್ನು ಹುಚ್ಚರಾಗಿ ನಿಲ್ಲಿಸುವುದು ಆಡಳಿತ ವರ್ಗದ ಒಂದು…

Read More

ಕಾಸರಗೋಡು : ಕಾಸರಗೋಡಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ (ರಿ.) ಇದರ ಸಹ ಸಂಸ್ಥೆಗಳಲ್ಲಿ ಒಂದಾದ ‘ಸ್ವರ ಚಿನ್ನಾರಿ’ಯ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಏರ್ಪಡಿಸುತ್ತಿರುವ ‘ರಾಗಾಲಾಪ’ ರಾಗಸಂಯೋಜನಾ ಶಿಬಿರವು ದಿನಾಂಕ 14 ಡಿಸೆಂಬರ್ 2024ರಂದು ಕಾಸರಗೋಡಿನ ಕರಂದೆಕ್ಕಾಡಿನಲ್ಲಿರುವ ‘ಪದ್ಮಗಿರಿ ಕಲಾ ಕುಟೀರ’ದಲ್ಲಿ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ವಿ. ಮನೋಹರ್ ಇವರು ಈ ಶಿಬಿರದ ನಿರ್ದೇಶಕರಾಗಿರುತ್ತಾರೆ. ಬೆಳಿಗ್ಗೆ 9-30 ಗಂಟೆಗೆ ಖ್ಯಾತ ನೇತ್ರ ತಜ್ಞರಾದ ಡಾ. ಅನಂತ್ ಕಾಮತ್ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ಖ್ಯಾತ ಕವಿ ಶ್ರೀಕೃಷ್ಣಯ್ಯ ಅನಂತಪುರ ಇವರು ಅಧ್ಯಕ್ಷತೆ ವಹಿಸಲಿರುವರು. ಖ್ಯಾತ ಅಂಕಣಕಾರರಾದ ಮೈಸೂರಿನ ಶ್ರೀ ರವೀಂದ್ರ ಜೋಶಿ ಇವರು ಸಮಾರೋಪ ಮಾತುಗಳನ್ನಾಡಲಿದ್ದಾರೆ.

Read More

ಕಾಸರಗೋಡು : ಪತ್ರಕರ್ತ, ಸಂಘಟಕ ಹಾಗೂ ಕಲ್ಪತರು ಕಲಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಚಿಟಗೇರಿ ಕೊಟ್ರೇಶಿ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ, ಕರ್ನಾಟಕ ರಾಜ್ಯ ವಿಜಯಪುರ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಕನ್ನಡ ಭವನದ ‘ರಜತ ಸಂಭ್ರಮ ಸಮಿತಿ’ ದಿನಾಂಕ 05 ಡಿಸೆಂಬರ್ 2024ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಪತ್ರಕರ್ತ ಸಿ. ವೈ. ಮೆಣಶಿನಕಾಯಿ ಇವರು ಕೊಟ್ರೇಶಿಯವರನ್ನು ನಾಮನಿರ್ದೇಶನ ಮಾಡಿ, ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ಅನುಮೋದಿಸಿದರು. ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸರ್ವಾನುಮತದಿಂದ ಆಯ್ಕೆಯಾದ ಚಿಟಗೇರಿ ಕೊಟ್ರೇಶಿ ಇವರು, ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ…

Read More

ಬಂಟ್ವಾಳ : ಯಕ್ಷಾವಾಸ್ಯಮ್ ಕಾರಿಂಜ ಇದರ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವಗ್ಗ , ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ದಿನಾಂಕ 08 ಡಿಸೆಂಬರ್ 2024ರಂದು ನಡೆಯಿತು. ಮಧ್ಯಾಹ್ನ ಪಚ್ಚಾಜೆಗುತ್ತು ಪಿ. ಜಿನರಾಜ ಆರಿಗ ಇವರಿಂದ ಕಾರ್ಯಕ್ರಮವು ಉದ್ಘಾಟನೆಗೊಂಡು ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ ಪ್ರಸ್ತುತಿಗೊಂಡಿತು. ಅಜಪುರದ ಸುಬ್ಬ ವಿರಚಿತ ‘ನರಕಾಸುರ’ ಮತ್ತು ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ಮೈಂದ ದ್ವಿವಿದ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಿತು. ಸಂಜೆ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ ಬಿ. ಉದಯ ಕುಮಾರ್ ಜೈನ್ ಇವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಯಕ್ಷಗಾನವು ಸರ್ವಾಂಗೀಣ ಶ್ರೇಷ್ಠ ಕಲೆಯಾಗಿದ್ದು, ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರಿಂದ ಭಾಷಾ ಶುದ್ಧಿಯ ಜತೆ ಜ್ಞಾನ ಭಂಡಾರ ಬೆಳೆಯುವುದು. ಯಕ್ಷಗಾನ ತರಬೇತಿ ನೀಡಿ ಮುಂದಿನ ಪೀಳಿಗೆಯ ಕಲಾವಿದರನ್ನು ರೂಪಿಸುವ ಯಕ್ಷವಾಸ್ಯಮ್ ಸಂಸ್ಥೆಯ ಕಾರ್ಯ ಪ್ರಶಂಸನೀಯ” ಎಂದು ಹೇಳಿದರು. ಈ…

Read More

ಹಾವಂಜೆ : ಕಾವಿ ಆರ್ಟ್ ಫೌಂಡೇಶನ್ ಹಾಗೂ ಭಾವನಾ ಪ್ರತಿಷ್ಠಾನ ಆಯೋಜಿಸುತ್ತಿರುವ ‘ಕನ್ನಡ ಶಾಲೆಯಲಿ ಕಾವಿಕಲೆಯ ಕಿಶೋರ ಕಾರ್ಯಾಗಾರ’ವು (ಕ.ಕಾ.ಕಿ. – 01) ಹಾವಂಜೆ ಕೀಳಂಜೆಯ ಬಿ.ವಿ. ಹೆಗ್ಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 10 ಡಿಸೆಂಬರ್ 2024ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಫೌಂಡೇಶನ್‌ನ ಅಧ್ಯಕ್ಷರಾದ ಹಾವಂಜೆ ಮಂಜುನಾಥ ರಾವ್ ಇವರು ಮಾತನಾಡಿ “ಕರಾವಳಿಯ ದೇಶೀಯ ಕಲೆಯಾದ ಅಳಿವಿನಂಚಿನಲ್ಲಿರುವ ಕಾವಿ ಕಲೆಯನ್ನು ಉಳಿಸಿ ಬೆಳೆಸುವುದಕ್ಕಾಗಿ ಶಾಲೆಗಳಲ್ಲಿ ಈ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಮ್ಮಲ್ಲಿನ ಪುರಾತನ ಜ್ಞಾನವನ್ನು ಮತ್ತೆ ಪುನರ್ ಮನನ ಮಾಡಿಕೊಳ್ಳುವ ಸಂದರ್ಭ ಇದು. ಸುಮಾರು ನೂರು ಶಾಲೆಗಳನ್ನಾದರೂ ಇದು ತಲಪುವಂತಾಗಲಿ” ಎಂಬುದಾಗಿ ಆಶಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಜನಾರ್ದನ ಹಾವಂಜೆ “ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರಮುಖವಾಗಿ ಹೈಸ್ಕೂಲು ಶಾಲಾ ಮಕ್ಕಳಿಗೆ ಕೇಂದ್ರೀಕರಿಸಿ ನಮ್ಮ ಸಾಂಪ್ರದಾಯಿಕ ಕಲೆಯ ತಿಳಿವಳಿಕೆ ನೀಡುವುದರ ಜೊತೆಗೆ ಇದನ್ನು ಚಿತ್ರ ಪದ್ಧತಿಯಾಗಿ ಬೆಳೆಸುವ ಪ್ರಯತ್ನ ಇದಾಗಿದ್ದು, ಆಯಾ…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 10 ಡಿಸೆಂಬರ್ 2024 ರಿಂದ 15 ಡಿಸೆಂಬರ್ 2024ರ ವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ಅಳ್ವಾಸ್ ವಿರಾಸತ್’ ಅಂಗವಾಗಿ ಹಮ್ಮಿಕೊಂಡ ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳ ಉದ್ಘಾಟನಾ ಸಮಾರಂಭವು ದಿನಾಂಕ 10 ಡಿಸೆಂಬರ್ 2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್ “ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ. ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ…

Read More

ಮಂಗಳೂರು : ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಇದರ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಕಾರ್ಯಕ್ರಮ ದಿನಾಂಕ 26 ನವೆಂಬರ್ 2024ರಂದು ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ನಾಟ್ಯರಂಗ ನೃತ್ಯ ಸಂಸ್ಥೆಯ ನಿರ್ದೇಶಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರಿಗೆ ‘ಕರಾವಳಿ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಸಾಂಪ್ರದಾಯಿಕ ಶಾಸ್ತ್ರೀಯ ನೃತ್ಯ ಹಾಗೂ ಆಧುನಿಕ ಸಂವೇದನೆಯ ರಂಗಭೂಮಿ ಕ್ಷೇತ್ರಗಳಲ್ಲಿ ಅನುಸಂಧಾನ ನಡೆಸಿ ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿ ವೈಯುಕ್ತಿಕ ಹಾಗೂ ತಮ್ಮ ತಂಡದೊಂದಿಗೆ ನೃತ್ಯ, ನೃತ್ಯ ರೂಪಕ, ದೃಶ್ಯ ರೂಪಕ, ನಾಟಕ ಪ್ರದರ್ಶನಗಳನ್ನು ನೀಡುತ್ತಾ ತಮ್ಮ ಸೃಜನಶೀಲತೆಯಿಂದ ರಂಗಭೂಮಿ ಹಾಗೂ ನಾಟ್ಯ ಕ್ಷೇತ್ರವನ್ನು ಬೆಸುಗೆ ಹಾಕುವ ಹತ್ತಾರು ಪ್ರಯೋಗಗಳಿಗೆ ಇವರು ಭಾಷ್ಯ ಬರೆದಿದ್ದಾರೆ. ಕೇರಳದ ಸಮರ ಕಲೆ ಕಳರಿ ಪಯ್ಯಟ್ಟುವನ್ನು ತಿರುವನಂತಪುರದ ಗೋಪಿನಾಥ್ ಇವರಲ್ಲಿ ಕಲಿತಿರುತ್ತಾರೆ. ಇವರ ಸಂಶೋಧನಾ ಪ್ರವೃತ್ತಿಯನ್ನು ಗುರುತಿಸಿ ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಸಚಿವಾಲಯವು ಜೂನಿಯರ್ ಫೆಲೋಶಿಪ್ ನೀಡಿ ಪ್ರೋತ್ಸಾಹಿಸಿದೆ. ಇವರು ದೂರದರ್ಶನದಲ್ಲಿ ಭರತನಾಟ್ಯದ ‘ಬಿ’ ಗ್ರೇಡ್ ಕಲಾವಿದೆ ಹಾಗೂ…

Read More

ಬೆಂಗಳೂರು : ‘ಥೇಮಾ’ ತಂಡ ಮತ್ತು ನಾಟಕ ಬೆಂಗಳೂರು 25 ರಂಗಭೂಮಿ ಸಂಭ್ರಮದ ಪ್ರಯುಕ್ತ ಕೌಶಿಕ್ ಹೆಚ್.ಏ. ಇವರ ರಚನೆ ಮತ್ತು ನಿರ್ದೇಶನದಲ್ಲಿ 2ನೇ ವಿಶ್ವ ಯುದ್ಧ ಆಧಾರಿತ ನಾಟಕ ‘ಡಖವ್’ ಇದರ ಪ್ರದರ್ಶನವು ದಿನಾಂಕ 13 ಡಿಸೆಂಬರ್ 2024ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಲಿದೆ.

Read More

ಕರ್ಕಿ : ಅಭಿನೇತ್ರಿ ಆರ್ಟ್ ಟ್ರಸ್ಟ್ (ರಿ) ನೀಲ್ಲೋಡ್ ಅರ್ಪಿಸುವ ‘ಅಭಿನೇತ್ರಿ ಯಕ್ಷೋತ್ಸವ ’ ಯಕ್ಷಗಾನ, ತಾಳಮದ್ದಳೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21 ಹಾಗೂ 22 ಡಿಸೆಂಬರ್ 2024ರಂದು ಕವಲಕ್ಕಿ ಇಲ್ಲಿನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿಯಾದ ಶ್ರೀ ಶ್ರೀಧರ ಷಡಕ್ಷರಿ ಇವರಿಗೆ ‘ಅಭಿನೇತ್ರಿ’ ಪ್ರಶಸ್ತಿ, ಯಕ್ಷಗಾನದ ಹಿರಿಯ ಹಾಸ್ಯಗಾರರಾದ ಶ್ರೀ ಹಳ್ಳಾಡಿ ಜಯರಾಮ ಶೆಟ್ಟಿ ಇವರಿಗೆ ‘ಬೆಳೆಯೂರು ಕೃಷ್ಣಮೂರ್ತಿ’ ಪ್ರಶಸ್ತಿ ಮತ್ತು ಶ್ರೀ ಅಮೃತೇಶ್ವರಿ ಮೇಳದ ಪ್ರಧಾನ ಭಾಗವತರಾದ ಶ್ರೀ ರಾಘವೇಂದ್ರ ಮಯ್ಯ ಹಾಲಾಡಿ ಇವರಗೆ ‘ಕಣ್ಣಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಾಗೂ ಅಶಕ್ತ ಅರ್ಹ ಕಲಾವಿದರಿಬ್ಬರಿಗೆ ರೂಪಾಯಿ 50ಸಾವಿರ ಸಹಾಯಧನ ನೀಡಲಾಗುವುದು.

Read More

ಬೆಂಗಳೂರು : ಸುಸ್ಥಿರ ಪ್ರತಿಷ್ಠಾನ ಬೆಂಗಳೂರು ಕಳೆದ ಮೂರು ವರ್ಷಗಳಿಂದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಂಗ ತರಬೇತಿ, ವಿಚಾರ ಸಂಕಿರಣ, ನಾಟಕ ನಿರ್ಮಾಣ, ನಿರ್ದೇಶನ ಹಾಗೂ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದೆ. ಇದರ ಭಾಗವಾಗಿ ಪ್ರಸ್ತುತ ಭಾವ, ಸಂಚಾರಿ ಭಾವ ಹಾಗೂ ನವರಸಗಳ ಬಗೆಗಿನ ಒಂದು ವಾರದ ಭಾವ-ರಸ ವಿಶೇ಼ಷ ಶಿಬಿರವನ್ನು ಆಯೋಜಿಸುತ್ತಿದೆ. ನಾಡಿನ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಿರ್ದೇಶಕರು ಹಾಗೂ ನಟನಾ ತರಬೇತುದಾರರಾಗಿರುವ ಜೋಸೆಫ್ ಜಾನ್ ಈ ಶಿಬಿರದ ನಿರ್ದೇಶಕರಾಗಿದ್ದು, ಭಾವ, ರಸಾಧಾರಿತ ವಿವಿಧ ಕೌಶಲ್ಯಗಳನ್ನು ಕಲಿಸಲಿದ್ದಾರೆ. ಈ ಶಿಬಿರವು ದಿನಾಂಕ 22 ಡಿಸೆಂಬರ್ 2024ರಿಂದ 28 ಡಿಸೆಂಬರ್ 2024ರವರೆಗೆ ಸಂಜೆ ಘಂಟೆ 7.00ರಿಂದ 9.00ರ ವರೆಗೆ ‘ಶೃಂಗ’ ನಂ. 816, 3ನೇ ಮುಖ್ಯ ರಸ್ತೆ, (ತೆರಿಗೆ ಭವನದ ಎದುರು) 11 ನೇ ಬ್ಲಾಕ್ , ನಾಗರಭಾವಿ , ಬೆಂಗಳೂರು ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9148250972, 9035553123, 9449074898 ಸಂಖ್ಯೆಗಳನ್ನು ಸಂಪರ್ಕಿಸಬಹುದು.…

Read More