Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ದಿನಾಂಕ 17 ಡಿಸೆಂಬರ್ 2024ರಂದು ನಡೆಯಲಿದೆ ಎಂದು ಮೂರು ನಾಡಿನ ತಕ್ಕಮುಖ್ಯಸ್ಥ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈಚೂರುವಿನ ದವಸ ಭಂಡಾರದ ಸಭಾಂಗಣದಲ್ಲಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳಿಗೆ ಸೇರಿದ ಇತಿಹಾಸ ಪ್ರಸಿದ್ಧದ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಕೈಮುಡಿಕೆ ಕೋಲ್ ಮಂದ್ ನಡೆಸಲು ಒಮ್ಮತದ ತೀರ್ಮಾನ ಕೈಕೊಳ್ಳಲಾಯಿತು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿಯೂ ಕೈಮುಡಿಕೆ ಪುತ್ತರಿ ಕೋಲ್ ಮಂದನ್ನು ವಿಜೃಂಭಣೆಯಿಂದ ಸಾರ್ವಜನಿಕವಾಗಿ ಆಚರಿಸುವಂತೆ ಹಾಗೂ ವಿವಿಧ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲು ಸಭೆ ನಡೆಸುತ್ತಿರುವುದಾಗಿ ಹೇಳಿದರು. ಅಂದು ಬೆಳಿಗ್ಗೆ 10-00 ಗಂಟೆಗೆ ಮೂರು ನಾಡಿನವರು ಮೂರು ಕಡೆಯಿಂದ ಓಡಿಬಂದು ಮಂದ್ ಮಧ್ಯೆದಲ್ಲಿರುವ ಅರಳಿ ಮರಕ್ಕೆ ಕೋಲು ಹೊಡೆಯುವ ಮೂಲಕ ಮಂದ್ ಹಿಡಿಯುವ…
ಸೊರಬ : ಹಳೇಸೊರಬದ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 28 ನವೆಂಬರ್ 2024ರಂದು ‘ಸಾಹಿತ್ಯ ರಚನಾ ಕಮ್ಮಟ’ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ.ಸಾ.ಪ. ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಇವರು ಮಾತನಾಡಿ “ಮಕ್ಕಳಿಗೆ ಶಾಲಾ ಕಲಿಕೆ ಹಂತದಲ್ಲಿಯೇ ಸಾಹಿತ್ಯಾಸಕ್ತಿ ಮೂಡಿಸಬೇಕು ಹಾಗೂ ಸ್ಪಷ್ಟವಾಗಿ ಓದುವ ಬರೆಯುವ ಮತ್ತು ಮಾತನಾಡುವುದನ್ನು ರೂಢಿಸಬೇಕು. ಇಲ್ಲಿ ಕಳೆದ ಹತ್ತೊಂಬತ್ತು ವರ್ಷಗಳಿಂದ ಸತತ ಪ್ರಯತ್ನದ ಭಾಗವಾಗಿ ಸಾಹಿತ್ಯ ಕಮ್ಮಟ ನಡೆಸಲಾಗುತ್ತಿದೆ. ಕನ್ನಡವೇ ಪರಿಸರದ ಭಾಷೆಯಾಗಿದ್ದು, ಮಕ್ಕಳಿಗಾಗಿ ಶಾಲೆಗಳಲ್ಲಿ ಕಮ್ಮಟವನ್ನು ಏರ್ಪಡಿಸಲಾಗುತ್ತಿದೆ. ಬರೆಯುವ ಕಲೆ ಉತ್ತಮವಾಗಬೇಕೆಂದರೆ ಹೆಚ್ಚು ಓದುವ ಹವ್ಯಾಸವನ್ನು ಮಕ್ಕಳು ಬೆಳೆಸಿಕೊಳ್ಳಬೇಕು. ಕನ್ನಡಕ್ಕೆ ಸುಮಾರು 2500 ವರ್ಷಗಳ ಇತಿಹಾಸ ಇರುವ ಹಿನ್ನೆಲೆಯಲ್ಲಿಯೇ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತಿದೆ. ಭಾಷಾ ಕಲಿಕೆ ಅತ್ಯಂತ ಜವಾಬ್ದಾರಿಯುತವಾಗಿದ್ದು,…
ಮಂಗಳೂರು : ಮಂಗಳೂರಿನ ಸನಾತನ ನಾಟ್ಯಾಲಯ ಹಾಗೂ ನೃತ್ಯಾಂಗನ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ ವೈಭವ್ ಆರೆಕಾರ್ ಹಾಗೂ ಸಂಖ್ಯಾ ಡಾನ್ಸ್ ಕಂಪೆನಿ ಇವರಿಂದ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 08 ಡಿಸೆಂಬರ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವೈಭವ್ ಆರೆಕಾರ್, ಈಶಾ ಪಿಂಗಳೆ, ಪೂರ್ವಾ ಸಾರಸ್ವತ್, ರಾಧಿಕಾ ಕರಂಡಿಕಾರ್, ಮೃಣಾಲ್ ಜೋಶಿ, ಅದಿತಿ ಪಾರಂಜಪೆ, ಶ್ರುತಿ ರಾನಡೆ ಹಾಗೂ ಅನು ಕ್ರಿಸ್ಟಿ ಪಿಳ್ಳೈ ಇವರುಗಳು ಭರತನಾಟ್ಯ ನೃತ್ಯ ಪ್ರದರ್ಶನ ನೀಡಲಿದ್ದು, ಇವರಿಗೆ ಹಾಡುಗಾರಿಕೆಯಲ್ಲಿ ಕಾರ್ತಿಕ್ ಹೆಬ್ಬಾರ್, ನಟುವಾಂಗದಲ್ಲಿ ಕಳೀಸ್ವರಂ ಪಿಳ್ಳೈ, ಮೃದಂಗದಲ್ಲಿ ದಕ್ಷಿಣಾಮೂರ್ತಿ ಪಿಳ್ಳೈ ಹಾಗೂ ಕೊಳಲಿನಲ್ಲಿ ಜಯರಾಂ ಕಿಕ್ಕೇರಿ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಬೆಳಕಿನ ವಿನ್ಯಾಸ ಸುಶಾಂತ್ ಜಾದವ್ ಇವರದ್ದು. ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮದ ಟಿಕೆಟ್ ಗಳಿಗಾಗಿ 98451 69506 ಅಥವಾ 98450 91838 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಕಾರ್ಕಳ: ಕಾರ್ಕಳ ತಾಲೂಕು ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 06 ಡಿಸೆಂಬರ್ 2024ರ ಶುಕ್ರವಾರದಂದು ಶಿರ್ಲಾಲು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಜಾನಪದ ವಿದ್ವಾಂಸ ಪ್ರೊ. ಕೆ. ಗುಣಪಾಲ ಕಡಂಬ “ಕನ್ನಡ ಸಾಹಿತ್ಯದ ಬೆಳವಣಿಗೆ ಮತ್ತು ಪರಂಪರೆಯಲ್ಲಿ ಜನಪದರ ಕೊಡುಗೆ ಬಹಳ ಮುಖ್ಯವಾದುದು. ಬದುಕು ಮೌಲ್ಯದಿಂದ ಕೂಡಿದ್ದರೆ ಅದೇ ದೊಡ್ಡ ಸಾಹಿತ್ಯ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಮತ್ತು ಮುಂದಿನ ಪೀಳಿಗೆಗೆ ಕಟ್ಟಿ ಕೊಡುವುದೇ ಸಾಹಿತ್ಯದ ಆಶಯವಾಗಿದೆ. ನೊಂದವರಿಗೆ ನೆನಪಾಗುವ, ನೆರವಾಗುವ ಹಾಗೂ ಪ್ರೀತಿಸುವ ಹೃದಯಕ್ಕೆ ಉಸಿರಾಗುವ ವಿಚಾರಗಳು ಸಾಹಿತ್ಯದಲ್ಲಿ ಬರಬೇಕು.” ಎಂದು ಅಭಿಪ್ರಾಯಪಟ್ಟರು. ಸಮ್ಮೇಳನವನ್ನು ಉದ್ಘಾಟಿಸಿದ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಮಾತನಾಡಿ “ಕನ್ನಡದ ಮನಸ್ಸುಗಳನ್ನು ಕಟ್ಟುವ ಕೆಲಸ ಸಾಹಿತ್ಯ ಸಮ್ಮೇಳನದ ಮೂಲಕ ನಡೆಯುತ್ತಿದೆ.” ಎಂದರು. ಈಸಂದರ್ಭದಲ್ಲಿ ಆರ್. ರಮೇಶ್ ಪ್ರಭು ಇವರ ‘ಹೊಂಗನಸು’, ಎಚ್. ವಿಧಾತ್ರಿ ರವಿಶಂಕರ್ ಇವರ ‘ನಕ್ಷತ್ರ ಪಟಲ’ ಹಾಗೂ ಶೈಲಜಾ…
ಉಜಿರೆ : ಕನ್ನಡ ಸಾಹಿತ್ಯ ಪರಿಷತ್ ಸುವರ್ಣ ವರ್ಷಾಚರಣೆ ಪ್ರಯುಕ್ತ ದ.ಕ. ಜಿಲ್ಲಾ ಕ. ಸಾ. ಪ. ಆಶ್ರಯದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ‘ವಿದ್ಯಾರ್ಥಿಗಳೆಡೆಗೆ ಸಾಹಿತ್ಯದ ನಡಿಗೆ’ ವಿಶೇಷ ಕಾರ್ಯಕ್ರಮವು ದಿನಾಂಕ 04 ಡಿಸೆಂಬರ್ 2024ರಂದು ಉಜಿರೆಯ ಹಳೆಪೇಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕ. ಸಾ. ಪ. ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಮಾತನಾಡಿ “ಪ್ರೌಢ ಶಾಲಾ ವಿದ್ಯಾರ್ಥಿಗಳ ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಪಾಠದ ಜತೆಗೆ ಸಾಹಿತ್ಯ, ಕ್ರೀಡೆ ಹಾಗೂ ಪತ್ಯೇತರ ಚಟುವಟಿಕೆಗಳು ಪೂರಕವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ, ಅಭಿರುಚಿ ಬೆಳೆಸಿ ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಿ ಪ್ರೇರೇಪಿಸುವಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಪತ್ರಿಕೆ, ಪುಸ್ತಕ, ಸಾಹಿತ್ಯಕ ಕೃತಿಗಳನ್ನು ಓದುವ ಹವ್ಯಾಸ ಬೆಳೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಕಾಲೇಜಿನ ವಿಸ್ತರಣಾ ಚಟುವಟಿಕೆಯನ್ವಯ ತಾಲೂಕಿನ ವಿವಿಧ ಪ್ರೌಢ ಶಾಲೆಗಳಲ್ಲಿ…
ಕಾಸರಗೋಡು :ಕರ್ನಾಟಕದ ಬಾಗಲಕೋಟ ಜಿಲ್ಲೆಯ ಹಿರಿಯ ಕನ್ನಡ ಹೋರಾಟಗಾರ ಹಾಗೂ ಸಂಘಟಕರಾದ ಡಾ. ಸಿದ್ದಣ್ಣ ಭಾಡಗಿ ಮುದೋಳ ಬಾಗಲಕೋಟ ಇವರನ್ನು ಕೇರಳ ರಾಜ್ಯ, ಕಾಸರಗೋಡು ಕನ್ನಡ ಭವನದ ಬಾಗಲಕೋಟ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಕನ್ನಡ ಭವನದ “ರಜತ ಸಂಭ್ರಮ ಸಮಿತಿ” ದಿನಾಂಕ 05 ಡಿಸೆಂಬರ್ 2024ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮ ನಿರ್ದೇಶನ ಮಾಡಿ, ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಡಾ. ಸಿದ್ದಣ್ಣ ಭಾಡಗಿ, ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, (ಕರ್ನಾಟಕದಿಂದ ಕಾಸರಗೋಡಿಗೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ, ನಿಬಂದನೆಗಳೊಂದಿಗೆ ). ಕನ್ನಡ ಭವನದ “ರಜತ ಸಂಭ್ರಮ..2025” ಕಾರ್ಯಕ್ರಮ ಸಂಘಟನೆ, ಸಂಯೋಜನೆಗೆ ಹಾಗೂ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಸ್ಥೆಯ…
ಬೆಳ್ತಂಗಡಿ: ಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವ ‘ಯಕ್ಷ ಸಂಭ್ರಮ -2024’ ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಇವರ ನೇತೃತ್ವದಲ್ಲಿ 14 ಡಿಸೆಂಬರ್ 2024ರಂದು ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರ ಶರತ್ ಕೃಷ್ಣ ಪಡುವೆಟ್ನಾಯ ದಿನಾಂಕ 04 ಡಿಸೆಂಬರ್ 2024ರಂದು ಲೋಕಾರ್ಪಣೆ ಗೊಳಿಸಿದರು. ಯಕ್ಷ ಧ್ರುವ ಪಟ್ಲ ಫೌಂಡೇಷನ್ ಹಲವಾರು ಅಶಕ್ತ ಕಲಾವಿದರ ಬಾಳಿಗೆ ಬೆಳಕಾಗಿ ಸಮಾಜದ ಮೆಚ್ಚುಗೆಗೆ ಪಾತ್ರವಾಗಿದೆ. 2 ವರ್ಷಗಳಿಂದ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಶಿಧರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಉಜಿರೆ ಜನಾರ್ದನ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮ ನಡೆದಿದೆ. ತಾಲ್ಲೂಕಿನ ವಿವಿಧೆಡೆ ಕಾರ್ಯಕ್ರಮ ಆಯೋಜಿಸುವ ಅವರ ಯೋಚನೆಯಂತೆ, ಈ ಬಾರಿಯ 3ನೇ ವರ್ಷದ ಕಾರ್ಯಕ್ರಮ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೆಟ್ನಾಯ ಇವರನ್ನು ಗೌರವಿಸಲಾಯಿತು. ಘಟಕದ ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ ಲಾಯಿಲ, ಶಿತಿಕಂಠ ಭಟ್,…
ಮಂಗಳೂರು : ಕರಾವಳಿ ಲೇಖಕಿಯರ-ವಾಚಕಿಯರ ಸಂಘದಲ್ಲಿ ಲಕ್ಷ್ಮೀ ರಾವ್ ಆರೂರು, ರಾಧಾಬಾಯಿ, ನಾರಾಯಣ ಬಾಬು ಮತ್ತು ಶಾರದಾ ಭಟ್ ದತ್ತಿ ನಿಧಿ ಕಾರ್ಯಕ್ರಮ ಮತ್ತು ಸಾಧಕರಿಗೆ ಸಮ್ಮಾನಕಾರ್ಯಕ್ರಮ ದಿನಾಂಕ 01 ಡಿಸೆಂಬರ್ 2024 ರಂದು ನಡೆಯಿತು. ಸಂಘದ ಅಧ್ಯಕ್ಷೆ ಶಕುಂತಳಾ ಟಿ. ಶೆಟ್ಟಿ ಇವರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಮತ್ತು ಇತ್ತೀಚೆಗೆ 93ನೇ ಹುಟ್ಟುಹಬ್ಬವನ್ನಾಚರಿಸಿದ ದತ್ತಿನಿಧಿಯ ರೂವಾರಿಗಳಲ್ಲೊಬ್ಬರಾದ ಸಮಾಜ ಸೇವಕಿ ಲಕ್ಷ್ಮೀ ರಾವ್ ಆರೂರು ಮತ್ತು ಕಳೆದ ಜುಲೈ ತಿಂಗಳಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿ ರಸ್ತೆಯ ಮನೆಯೊಂದರಲ್ಲಿ ನಡೆದ ಕಳ್ಳತನವನ್ನು ಕೆಲವೇ ಗಂಟೆಗಳಲ್ಲಿ ಬೇಧಿಸಿದ ತಂಡದ ನಾಯಕಿ, ಊರ್ವ ಠಾಣೆಯ ಇನ್ಸ್ಪೆಕ್ಟರ್ ಭಾರತಿ ಜಿ. ಇವರನ್ನು ಸಮ್ಮಾನಿಸಲಾಯಿತು. ದ.ಕ. ಜಿ. ಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆನಂದ್ ಇವರು ಸಮ್ಮಾನಿತರನ್ನು ಅಭಿನಂದಿಸಿದರು. ಸಮ್ಮಾನಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ರಾವ್ ಆರೂರು “ಈ ಭೂಮಿ ನಮ್ಮದಲ್ಲ. ಭೂಮಿಗೆ ಬಂದ ಮೇಲೆ ನಾವು…
ಕಾಸರಗೋಡು: ಗಡಿನಾಡಿನ ತುಳು, ಕನ್ನಡ ರಂಗ ಭೂಮಿಗೆ ಮಹತ್ವದ ಕೊಡುಗೆ ನೀಡಿದ ರಂಗನಿರ್ದೇಶಕ, ನಟ, ನಾಟಕಕಾರ ಚಟ್ಲ ರಾಮಯ್ಯ ಶೆಟ್ಟಿ ಇವರಿಗೆ ಅಭಿನಂದನಾ ಸಮಾರಂಭ ರಾಮಯ್ಯ ಶೆಟ್ಟಿ ಅವರ ನಿವಾಸದಲ್ಲಿ ದಿನಾಂಕ 04 ಡಿಸೆಂಬರ್ 2024ರಂದು ನಡೆಯಿತು. ಕಾಸರಗೋಡಿನ ಸಾಂಸ್ಕಂತಿಕ, ಸಾಹಿತ್ಯಿಕ ಸಂಸ್ಥೆಯಾದ ರಂಗ ಚಿನ್ನಾರಿ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡದ ರಂಗ ಚಿನ್ನಾರಿ ಇದರ ನಿರ್ದೇಶಕ ಹಾಗೂ ಚಿತ್ರನಟ ಕಾಸರಗೋಡು ಚಿನ್ನಾ “ಚಟ್ಲ ರಾಮಯ್ಯ ಶೆಟ್ಟಿ ಇವರು 1970-80ರ ದಶಕದಲ್ಲಿ ಕಾಸರಗೋಡಿನ ರಂಗ ಭೂಮಿಯಲ್ಲಿ ನಾಟಕ ಕಲಾವಿದನಾಗಿ, ನಿರ್ದೇಶಕನಾಗಿ, ನಾಟಕ ರಚನಾಕಾರನಾಗಿ ಖ್ಯಾತಿ ಗಳಿಸಿದವರು.” ಜತೆಗೆ ಸಾಮಾಜಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿರುವವರು.” ರಾಮಯ್ಯ ಶೆಟ್ಟಿ ಇವರನ್ನು ಶಾಲು ಹೊದಿಸಿ, ಸ್ಮರಣಿಕ, ಫಲಪುಷ್ಪ ನೀಡಿ ಕಾಸರಗೋಡು ಚಿನ್ನಾ ಗೌರವಿಸಿದರು. ರಂಗಚಿನ್ನಾರಿ ನಿರ್ದೇಶಕರಾದ ಸತೀಶ್ಚಂದ್ರ ಭಂಡಾರಿ ಕೋಳಾರು, ರಂಗ ನಟ ದೂಮಣ್ಣ ರೈ, ಮಹಾಬಲ ರೈ, ಲೋಕೇಶ್, ಸಂಜು ಕಾಸರಗೋಡು, ಕೆ. ಸತ್ಯನಾರಾಯಣ, ಸಂಕಪ್ಪ…
ಮಂಗಳೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮಂಗಳೂರು ಅವರ ವತಿಯಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಬ್ರಹ್ಮ ಬೈದರ್ಕಳ ಗರಡಿ ಸಭಾಭವನದಲ್ಲಿ ದಿನಾಂಕ 01 ಡಿಸೆಂಬರ್ 2024ರಂದು ನಡೆಯಿತು. ಗುಡ್ಡೆಗುತ್ತು ಸೂರ್ಯ ನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಣೇಶ್ ಗಟ್ಟಿಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ತಾಲೂಕಿನ ಯೋಜನಾಧಿಕಾರಿ ಮಮತಾ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಗೀತಾ ಪ್ರವೀಣ್, ಬ್ರಹ್ಮ ಬೈದ್ರಕಳ ಗರಡಿ ಕ್ಷೇತ್ರದ ಅರ್ಚಕ ಗುರುಪ್ರಸಾದ್, ಮಂಗಳೂರು ವಲಯಧ್ಯಕ್ಷ ಸರಳ ಉಪಸ್ಥಿತರಿದ್ದರು. ಉಪನ್ಯಾಸಕಿ ಪಲ್ಲವಿ ಹಾಗೂ ಸುರೇಶ್ ನೆಗಳಗುಳಿ ಉಪನ್ಯಾಸ ನೀಡಿದರು. ಮಂಗಳೂರು ವಲಯ ಮೇಲ್ವಿಚಾರಕಿ ಶೋಭಾ ಐ. ಸ್ವಾಗತಿಸಿ, ಸಮನ್ವಯ ಅಧಿಕಾರಿ ಆಶಾಚಂದ್ರ ನಿರೂಪಿಸಿದರು.