Author: roovari

ಕೈಕಂಬ : ದ. ಕ. ಜಿ. ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಳಾಯಿಬೆಟ್ಟು ಗುರುಪುರ, ‘ಕಲಾಭಿ ಥಿಯೇಟರ್’ ಮಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ‘ರಂಗದಿನ’ ಸಮಾರಂಭ ಮತ್ತು ನಾಟಕ ಪ್ರದರ್ಶನವು ದಿನಾಂಕ 21 ಸೆಪ್ಟೆಂಬರ್ 2024ರ ಶನಿವಾರದಂದು ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ಇದರ ಫಲ್ಗುಣಿ ಸಭಾಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಕವಿ, ಸಾಹಿತಿ ಹಾಗೂ ಜಾನಪದ ವಿದ್ವಾಂಸರಾದ ವಾಮನ ನಂದಾವರ ಇವರ ‘ಸಾವಿರದ ಕ್ಷಣಗಳು’ ಪುಸ್ತಕವನ್ನು ರಾಜಮಾರ್ಯದೆಯೊಂದಿಗೆ ಪಲ್ಲಕಿಯಲ್ಲಿ ಹೊತ್ತು ವಿಶೇಷ ರೀತಿಯಲ್ಲಿ ವೇದಿಕೆಗೆ ತಂದು ಲೋಕಾರ್ಪಣೆಗೊಳಿಸಲಾಯಿತು. ಪುಸ್ತಕ ಲೋಕಾರ್ಪಣೆಗೊಳಿಸಿದ ಸಾಹಿತಿ ಮುದ್ದು ಮೂಡುಬೆಳ್ಳೆ ಮಾತನಾಡಿ “ಗ್ರಾಮದ ಜನರಿಗೆ ಒಟ್ಟಾಗಿ ಖುಷಿಕೊಡುವ ಕಾರ್ಯಕ್ರಮ ಇದಾಗಿದೆ. ನಾಟಕ ಶಿಕ್ಷಣದ ಒಂದು ಭಾಗ. ಆ ಮೂಲಕ ವ್ಯಕ್ತಿತ್ವ ಬೆಳೆಯುತ್ತದೆ. ರಂಗ ಮಾಧ್ಯಮ ಒಳ್ಳೆಯ ಅವಕಾಶ. ಇದರತ್ತ ಆಡಳಿತ, ಶಾಲಾ ಶಿಕ್ಷಕರು ಗಮನ ಹರಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಪ್ರೇರಣೆಯಾಗಲಿ.” ಎಂದರು. ನಿಟ್ಟೆ ವಿಶ್ವವಿದ್ಯಾನಿಲಯದ ತುಳು…

Read More

ಹರೇಕಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಪಾವೂರು-ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 19 ಸೆಪ್ಟೆಂಬರ್ 2024ರಂದು ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ‘ಪ್ರತಿಭಾ ಕಾರಂಜಿ, ಚಿಣ್ಣರ ಉತ್ಸವ’ ಸಮಾರಂಭ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಇವರು ಮಾತನಾಡಿ “ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಶಿಕ್ಷಣದ ಜೊತೆ ಬೆಳಕಿಗೆ ತರುವ ಪ್ರಯತ್ನ ಅಗತ್ಯ. ವಿದ್ಯಾರ್ಥಿಗಳಲ್ಲಿ ಅದೆಷ್ಟೋ ಪ್ರತಿಭೆಗಳು ಇರುತ್ತವೆ. ಅವುಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಪೂರಕವಾಗಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾದುದು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯಾವುದೇ ಹಿಂಜರಿಕೆ ಬೇಡ” ಎಂದು ಅಭಿಪ್ರಾಯಪಟ್ಟರು. ಗ್ಯಾರಂಟಿ ಯೋಜನೆ ಸಮಿತಿಯ ಮಂಗಳೂರು ತಾಲೂಕು ಅಧ್ಯಕ್ಷರಾದ ಸುರೇಂದ್ರ ಕಂಬಳಿ ಮಾತನಾಡಿ, “ಧಾರ್ಮಿಕ ಕೇಂದ್ರಗಳಿಗೆ ಆಯಾ ಧರ್ಮೀಯರು ಮಾತ್ರ ಹೋದರೆ ಶಾಲೆಗೆ ಎಲ್ಲಾ ಧರ್ಮೀಯರು ಬರುತ್ತಾರೆ.…

Read More

ಉಜಿರೆ : ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವುಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗಾಗಿ ‘ಸಂಸ್ಕೃತ ಭಾಷಾ ಪಠ್ಯ ಪ್ರಶಿಕ್ಷಣ ಕಾರ್ಯಾಗಾರ’ವು ದಿನಾಂಕ 20 ಸೆಪ್ಟೆಂಬರ್ 2024ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಇವರು ಮಾತನಾಡಿ “ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ, ಋಷಿ ಮುನಿಗಳು ಕವಿಗಳು ಬೆಳೆಸಿದ ಸಂಸ್ಕೃತ ಭಾಷೆಯು ಮುಂದಿನ ಜನಾಂಗಕ್ಕೂ ದಾಟಬೇಕು. ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ…

Read More

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇವರ ನೇತೃತ್ವದಲ್ಲಿ ಸುಮಾರು ಮೂರು ವರ್ಷಗಳಿಂದ ಉಡುಪಿಯ ಸಂತೆಕಟ್ಟೆ ಭಾಗದ ಜನರಿಗೆ ತಲೆನೋವಾಗಿರುವ ನಿತ್ಯ ಸಂಕಟ, ಅದೆಷ್ಟೋ ಜನರ ಪಾಲಿಗೆ ಪ್ರಾಣ ಸಂಕಟವಾಗಿರುವ ಈ ರಸ್ತೆ ನಿರ್ಮಾಣವನ್ನು ತಕ್ಷಣ ಮುಗಿಸುವಂತೆ… ಅಧಿಕಾರಿ ವರ್ಗವನ್ನು ಒತ್ತಾಯಿಸುವ ಒಂದು ವಿನೂತನ ಮಾದರಿಯ ಆಂದೋಲನಕ್ಕಾಗಿ ಹಮ್ಮಿಕೊಂಡ ಸ್ಪರ್ಧೆ ಇದಾಗಿದೆ. ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ವಿದ್ಯಾರ್ಥಿಗಳ, ಕೆಲಸಕ್ಕೆ ಹೋಗುವವವರ, ಗರ್ಭಿಣಿಯರ, ರೋಗಿಗಳ, ವೃದ್ಧರ ನಿತ್ಯ ಬವಣೆ ನಿಮ್ಮ ಬರವಣಿಗೆಯಲ್ಲಿ ಕತೆಯಾಗಿ ಮೂಡಿ ಬರಲಿ. ‘ಸಂತೆಕಟ್ಟೆ ರಸ್ತೆ ಬಿಚ್ಚಿಟ್ಟ ಕತೆಗಳು’ ಎನ್ನುವ ಹೆಸರಿನ ಮನ ಮುಟ್ಟುವ, ಮನ ಕಲಕುವ ಕಥೆಗಳಿಗಾಗಿ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದೆ. ಕತೆ ಸಣ್ಣ ಕತೆಯಾಗಿರಲಿ, ಕೊನೆಗೊಂದು ಸಂದೇಶವಿರಲಿ, ವ್ಯಕ್ತಿ ನಿಂದನೆ, ಪಕ್ಷ ನಿಂದನೆ, ಜಾತಿ ನಿಂದನೆ ಇರುವಂತಿಲ್ಲ, ಮನ ಮುಟ್ಟುವ ಮೂರು ಕಥೆಗಳಿಗೆ ತಲಾ ರೂ.1,000/- ದಂತೆ ನಗದು ಬಹುಮಾನಗಳಿವೆ. ಮನಸ್ಸಿಗೆ ನಾಟುವ 10 ಕಥೆಗಳಿಗೆ ಸಮಾಧಾನಕರ ಬಹುಮಾನವಾಗಿ ಪುಸ್ತಕವೊಂದು ಸಿಗಲಿದೆ. ಬೇರೆಯವರನ್ನು ದೂರದೆ,…

Read More

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ 10 ಅಕ್ಟೋಬರ್ 2024 ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ‘ಕಾರಂತ ಹುಟ್ಟುಹಬ್ಬ ಸಮಾರಂಭ’ವು ಜರಗಲಿದ್ದು, ಇದರ ಸಲುವಾಗಿ ಕಾರಂತರ ಬಗ್ಗೆ ಪ್ರಬಂಧ ಸ್ಪರ್ದೆಯನ್ನು ಏರ್ಪಡಿಸಲಾಗಿದೆ. ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು 6 ಅಕ್ಟೋಬರ್ 2024ರೊಳಗಾಗಿ ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ. ಪ್ರಬಂಧದ ವಿಷಯ : ಕಾಲೇಜು ವಿಭಾಗ : ಕಾರಂತರ ವಿಜ್ಞಾನ ಸಾಹಿತ್ಯ – ಮಕ್ಕಳ ಸಾಹಿತ್ಯ ಅವಲೋಕನ, ಅನುಸಂಧಾನ ಮುಕ್ತ ವಿಭಾಗ : ಕಾರಂತರ ಸಾಹಿತ್ಯ (ಕಾದಂಬರಿಗಳು) ಅವಲೋಕನ, ಅನುಸಂಧಾನ

Read More

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ಇದರ 17ನೇ ವಾರ್ಷಿಕೋತ್ಸವ ಸಮಾರಂಭವನ್ನು ದಿನಾಂಕ 26 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ, ಸಾಧಕರಿಗೆ ಸನ್ಮಾನದೊಂದಿಗೆ ಈ ಕಾರ್ಯಕ್ರಮದಲ್ಲಿ ಸಂಜೆ 4-00 ಗಂಟೆಯಿಂದ ‘ಸ್ವರ ಕುಡ್ಲ ಸೀಸನ್ 6’ ಇದರ ಗ್ರಾಂಡ್ ಫಿನಾಲೆ ನಡೆಯಲಿದೆ. ಸಂಜೆ 7-00 ಗಂಟೆಗೆ ನಡೆಯಲಿರುವ ವಾರ್ಷಿಕೋತ್ಸವ ಸಭಾ ಕಲಾಪದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ಶ್ರೀ ದೀಪಕ್‌ ರಾಜ್ ಉಳ್ಳಾಲ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದ‌ರ್ ಮತ್ತಿತರರು ಭಾಗವಹಿಸುವರು. ಸಮಾರಂಭದಲ್ಲಿ ಖ್ಯಾತ ಸಂಗೀತ ಕಲಾವಿದ ಶ್ರೀ ರಾಜಾರಾಮ್ ಭಕ್ತ ಉಡುಪಿ, ಖ್ಯಾತ ಕೀಬೋರ್ಡ್ ವಾದಕರಾದ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿತಕ್ಕದ್ದು. 2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕಿ ಒಂದು ಪುಸ್ತಕವನ್ನು ಮಾತ್ರ ಕಳುಹಿಸತಕ್ಕದ್ದು. ಕೃತಿ ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ : 94483 46276. ಇಲ್ಲಿಗೆ ದಿನಾಂಕ 05 ಅಕ್ಟೋಬರ್ 2024ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಹಮ್ಮಿಕೊಂಡ 2022-23ನೇ , 2023-24ನೇ ಹಾಗೂ 2024-25ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 19 ಸೆಪ್ಟೆಂಬರ್ 2024ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸದ್ಯ ಪ್ರತಿ ತಿಂಗಳು ರೂ.2 ಸಾವಿರ ಮಾಸಾಶನ ನೀಡಲಾಗುತ್ತಿದೆ. 12 ಸಾವಿರಕ್ಕೂ ಅಧಿಕ ಕಲಾವಿದರು ಮಾಸಾಶನ ಪಡೆಯುತ್ತಿದ್ದಾರೆ. ಮುಂದಿನ ವರ್ಷದಿಂದ ಮಾಸಾಶನ ಹೆಚ್ಚಿಸಲಾಗುತ್ತದೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಆಕಾಡೆಮಿಗಳಿಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದವು. ಬಳಿಕ ಬಂದ ಸರ್ಕಾರಗಳು ಅನುದಾನ ಕಡಿತ ಮಾಡಿದವು. ನಾವು ಈಗ ಹೆಚ್ಚಿನ ಅನುದಾನ ನೀಡಿದ್ದೇವೆ. ಮುಂದಿನ ವರ್ಷ ಅಕಾಡೆಮಿಗಳಿಗೆ ನೀಡುವ ಅನುದಾನವನ್ನು ಇನ್ನಷ್ಟು ಹೆಚ್ಚಳ ಮಾಡುತ್ತೇವೆ’ ಎಂದು ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಮಾತನಾಡಿ “ಕನ್ನಡ ರಂಗಭೂಮಿಯು ಮೂರು ಮುಂದಿನ ವರ್ಷಗಳಿಂದ ಸ್ತಬ್ದವಾಗಿತ್ತು. ಕನ್ನಡ ಮತ್ತು ಸಂಸ್ಕೃತಿ…

Read More

ಮುಂಡ್ಕೂರು : ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ (83) ಇವರು ದಿನಾಂಕ 21 ಸೆಪ್ಟೆಂಬರ್ 2024ರಂದು ನಿಧನ ಹೊಂದಿದರು. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು. ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಂಡ ಇವರ ಯಕ್ಷಪಯಣ ಮುಂದೆ ಹವ್ಯಾಸಿ ಸಂಘಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.

Read More

ಜುಲೈ 15, 1932ರಂದು ಜನಿಸಿದ ಮನೋರಮ ಇವರು ಪರಮೇಶ್ವರ ಶಾಸ್ತ್ರಿ ಹಾಗೂ ಸತ್ಯಭಾಮ ದಂಪತಿಯ ಪ್ರೀತಿಯ ಮಗಳು. ಮುಳಿಯ ಮಹಾಬಲ ಭಟ್ಟರ ಪತ್ನಿಯಾಗಿ, ಪಂಡಿತ ಪರಂಪರೆಯ ಮುಳಿಯ ತಿಮ್ಮಪ್ಪಯ್ಯನವರ ಹಿರಿಯ ಸೊಸೆಯಾಗಿ ಸಾಹಿತ್ಯದ ಮೇಲಿನ ಒಲವನ್ನು ಜೀವನ ಪ್ರೀತಿಯನ್ನು ನಿರಂತರವಾಗಿ ಕಾಯ್ದುಕೊಂಡವರು. ಅಮೇರಿಕಾದಲ್ಲಿ ನೆಲೆಗೊಂಡ ಜಯರಾಮ್ ಭಟ್ ಮತ್ತು ಬೆಂಗಳೂರಲ್ಲಿರುವ ಖ್ಯಾತ ಛಾಯಾಚಿತ್ರ ತಂತ್ರಜ್ಞ ಮಹೇಶ್ ಎಂ. ಭಟ್‌ ಇವರ ಮಕ್ಕಳು. ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಇವರ ಮನೆಯ ಓರ್ವ ಸೊಸೆ. ಹಿಂದೆ ‘ನವಭಾರತ’ ಪತ್ರಿಕೆಯಲ್ಲಿ ಮತ್ತು ‘ಉದಯವಾಣಿ’ಯಲ್ಲಿ ‘ಶಿಂಗಣ್ಣ’ ಕಾಲಂ ಬರೆಯುತ್ತಿದ್ದ ಕೆ. ರಾಮಕೃಷ್ಣ ಇವರ ಅಣ್ಣ. ಹೆಣ್ಣು ಮಕ್ಕಳು ಶಾಲೆ ಕಲಿಯುವುದು ಅಪರೂಪವಾಗಿದ್ದ ಕಾಲದಲ್ಲಿ ಮನೋರಮಾ ಶಿಕ್ಷಣವನ್ನು ಪಡೆದು ಸ್ವಂತ ವಿಚಾರವಂತಿಕೆಯನ್ನು ಬೆಳೆಸಿಕೊಂಡು ಹೆಣ್ಣು ಮಕ್ಕಳ ಬಗೆಗಿನ ಚಿಂತನೆಯನ್ನು, ಅವರ ಆಯ್ಕೆಯ ಬಗೆಗಿನ ಮಹತ್ವವನ್ನು ಅನುಸರಿಸಿದವರು. ಆಕಾಶವಾಣಿ ಕಲಾವಿದೆಯಾಗಿ ಬಾನುಲಿ ನಾಟಕಗಳಲ್ಲಿ ಪಾತ್ರ ವಹಿಸಿ ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯಿಂದ ನಟಿಯಾಗುವ ಆಯ್ಕೆಯನ್ನು ಬೆಳೆಸಿಕೊಂಡವರು. 90ರ…

Read More