Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಶ್ರೀ ರಾಮಕೃಷ್ಣ ಮಠ ಮಂಗಳೂರು ಮತ್ತು ವಿಭಿನ್ನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅರ್ಪಿಸುವ 14ನೇ ವರ್ಷದ ಯಕ್ಷ ಕಲಾ ಕಾಣಿಕೆ ‘ಯಕ್ಷ ಆಖ್ಯಾನಗಳ ಗುಚ್ಛ’ ದಿನಾಂಕ 08 ಡಿಸೆಂಬರ್ 2024ರಂದು ಮಧ್ಯಾಹ್ನ 2-00 ಗಂಟೆಗೆ ಮಂಗಳೂರಿನ ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ಪೂರ್ಣಚಂದ್ರ ಯಕ್ಷಗಾನ ಮಂಡಳಿ (ರಿ.) ಕುಂಭಾಶಿ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಸೀತಾ ಪರಿತ್ಯಾಗ’ ಮತ್ತು ‘ಅಕ್ರೂರ ಭಕ್ತಿ-ಗೋಕುಲ ನಿರ್ಗಮನ-ಕಂಸವಧೆ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ಪ್ರಸ್ತುತಗೊಳ್ಳಲಿದೆ.
ಧಾರವಾಡ : ವಂಶಿ ಪ್ರಕಾಶನ ಬೆಂಗಳೂರು ಮತ್ತು ಕೊಟಬಾಗಿ ಬಂಧುಗಳು ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ‘ಪುಸ್ತಕ ಬಿಡುಗಡೆ ಸಮಾರಂಭ’ವನ್ನು ದಿನಾಂಕ 08 ಡಿಸೆಂಬರ್ 2024ರಂದು ಸಂಜೆ 5-00 ಗಂಟೆಗೆ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತು ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಲೇಖಕ ಅನಂತ ಕೊಟಬಾಗಿ ಇವರ ‘ಸತ್ಯಂ ಶಿವಂ ಸೌಂದರ್ಯಂ’ ಎಂಬ ಕೃತಿ ಲೋಕಾರ್ಪಣೆಗೊಳ್ಳಲಿದ್ದು, ಶ್ರೀ ಶ್ರೀನಿವಾಸ ವಾಡಪ್ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ಕೃಷ್ಣ ಕಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದು, ಶ್ರೀಮತಿ ಮಾಲತೀ ಮುದಕವಿ ಮತ್ತು ಶ್ರೀ ಎಂ.ಎಸ್. ಕೃಷ್ಣಮೂರ್ತಿ ಇವರುಗಳು ಪುಸ್ತಕ ಪರಿಚಯ ಮಾಡಲಿರುವರು.
ಮಡಿಕೇರಿ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ. ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಪುರುಷ ಲೇಖಕರು 2019ರ ನಂತರ ತಾವು ರಚಿಸಿದ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸತಕ್ಕದ್ದು. ಕಳುಹಿಸುವ ಕೃತಿಗೆ eಈ ಮೊದಲು ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸಲು ಅವಕಾಶವಿದ್ದು, ಕೃತಿಗಳನ್ನು ದಿನಾಂಕ 25 ಡಿಸೆಂಬರ್ 2024ರ ಒಳಗಾಗಿ ಲಕೊಟೆಯ ಮೇಲೆ ಬಿ. ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಎಂದು ಉಲ್ಲೇಖಿಸಿ ಎಂದು ಕಳುಹಿಸತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಹೆಚ್ಚಿನ ಮಾಹಿತಿಗಾಗಿ : 94483 46276.
ಮಂಗಳೂರು: ಮಂಗಳೂರಿನ ಸನಾತನ ನಾಟ್ಯಾಲಯದ ಗುರು ವಿದುಷಿ ಶಾರದಾಮಣಿ ಶೇಖರ್ ಅವರ 60ನೇ ವರ್ಷದ ಅಭಿನಂದನಾ ಸಮಾರಂಭ ದಿನಾಂಕ 01 ಡಿಸೆಂಬರ್ 2024ರ ಭಾನುವಾರದಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತಾಡಿ “ನೃತ್ಯ ಪ್ರಸ್ತುತಪಡಿಸುವಾಗ ಬಳಸುವ ಹಾಡುಗಳಿಗೆ ಸಾಮಾನ್ಯವಾಗಿ ತಮಿಳು ಕೃತಿಗಳನ್ನು ಬಳಸಲಾಗುತ್ತದೆ. ಅದರ ಸ್ಥಾನದಲ್ಲಿ ಕನ್ನಡ ಅಥವಾ ತುಳು ಕೃತಿಗಳನ್ನು ಅಳವಡಿಸುವ ಪ್ರಯತ್ನ ನಡೆಯಬೇಕು. ಸನಾತನ ನಾಟ್ಯಾಲಯದಂಥ ಕೇಂದ್ರಗಳು ಮತ್ತು ಇಲ್ಲಿನ ಗುರುಗಳು ಭಾರತೀಯ ಪರಂಪರೆ, ಸನಾತನ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬುವ ಕೆಲಸ ಮಾಡುತ್ತಿವೆ. ದೇಶದ ಅಕ್ಕ-ಪಕ್ಕದಲ್ಲಿ ನಡೆಯುತ್ತಿರುವ ಘಟನೆಗಳನ್ನು ಅವಲೋಕಿಸಿದರೆ ಮಕ್ಕಳು, ಮೊಮ್ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗುತ್ತದೆ. ನಾವು ಎಲ್ಲಿ ಎಡವಿದ್ದೇವೆ ಎಂಬುದನ್ನು ಅರಿತು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.” ಎಂದು ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮತ್ತು ನಾತನನ ನಾಟ್ಯಾಲಯ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಮಾತನಾಡಿದರು.…
ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರಮೋದ್ ಮುತಾಲಿಕ್ (68) ಅವರು ನಗರದಲ್ಲಿ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೋದ್ ಮುತಾಲಿಕ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ವಾಸಿಸುತ್ತಿದ್ದ ಅವರಿಗೆ ಒಬ್ಬ ಪುತ್ರ ಮತ್ತು ಪತ್ನಿ ಇದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿಯವರಾದ ಪ್ರಮೋದ್ ಮುತಾಲಿಕ್ ಅವರು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ 37 ವರ್ಷ ಆಂಗ್ಲ ಭಾಷೆಯ ಅಧ್ಯಾಪಕರಾಗಿ, ಕೆಲ ವರ್ಷಗಳ ಕಾಲ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದುಕೊಂಡಿದ್ದರು. ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಪ್ರಭುತ್ವ ಹೊಂದಿದ್ದ ಮುತಾಲಿಕ್ ಅವರು ಅನುವಾದ ಮತ್ತು ವಿಮರ್ಶೆಯಲ್ಲಿ ಸಾಕಷ್ಟು ಕೃಷಿ ಮಾಡಿದ್ದರು. ಜಗತ್ತಿನ ಶ್ರೇಷ್ಠ ಕೃತಿಗಳನ್ನು ಕನ್ನಡಕ್ಕೆ ಮತ್ತು ಕನ್ನಡದ ಶ್ರೇಷ್ಠ ಕೃತಿಗಳನ್ನು ಆಂಗ್ಲ ಭಾಷೆಗೆ ಅನುವಾದಿಸಿದ್ದಾರೆ. ಚಿನು ಅಂಬೆಯ Things fall apart, ಆರ್.ಕೆ. ನಾರಾಯಣ್ ಅವರ…
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವಿಂಶತಿ ಸರಣಿ ತಾಳಮದ್ದಳೆ 14 ಸಂಘದ ಸದಸ್ಯೆ ಜಯಂತಿ ಹೆಬ್ಬಾರ್ ಇವರ ಪ್ರಾಯೋಜಕತ್ವದಲ್ಲಿ ಬನ್ನೂರು ಭಾರತಿ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ಆಶ್ರಯದಲ್ಲಿ ದಿನಾಂಕ 25 ನವೆಂಬರ್ 2024ರಂದು ನಡೆಯಿತು. ಹಳೆಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧನ’ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ ಹಾಗೂ ಚೆಂಡೆ ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಮತ್ತು ಮಾಸ್ಟರ್ ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಹನೂಮಂತ (ಗುಂಡ್ಯಡ್ಕ ಈಶ್ವರ ಭಟ್), ಅರ್ಜುನ (ಭಾಸ್ಕರ್ ಬಾರ್ಯ ಮತ್ತು ಮಾಂಬಾಡಿ ವೇಣುಗೋಪಾಲ ಭಟ್), ವೃದ್ದ ವಿಪ್ರ (ಗುಡ್ಡಪ್ಪ ಬಲ್ಯ), ಶ್ರೀ ರಾಮ (ಬಡೆಕ್ಕಿಲ ಚಂದ್ರಶೇಖರ್ ಭಟ್) ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಚಂದ್ರಶೇಖರ್ ಭಟ್ ವಂದಿಸಿದರು.
ಸಾಹಿತ್ಯದಲ್ಲಿ ಪತ್ತೇದಾರಿ ಕಥೆ-ಕಾದಂಬರಿಗಳ ಪ್ರಸ್ತುತತೆ ಏನು ? ಓದುಗರ ಕುತೂಹಲ ಹೆಚ್ಚಿಸುತ್ತ ಅವರಿಗೆ ಮನೋರಂಜನೆ ನೀಡುವುದೆ ? ಸಮಾಜದಲ್ಲಿ ನಡೆಯುವ ಅಪರಾಧಗಳ ಕುರಿತು ಮಾಹಿತಿ ನೀಡುವುದೆ ? ಪತ್ತೇದಾರರ ಜಾಣ್ಮೆಯ ಬಹುಸಾಧ್ಯತೆಗಳ ಪ್ರದರ್ಶನಕ್ಕೊಂದು ವೇದಿಕೆ ಕಲ್ಪಿಸುವುದೆ ? ಅಥವಾ ಜನಪ್ರಿಯ ಸಾಹಿತ್ಯ ಜಗತ್ತಿನಲ್ಲಿ ಒಪ್ಪಿತ ರೂಢಿಗತ ಸಂಪ್ರದಾಯವಾಗಿ ಬೆಳೆದು ಬಂದಿರುವ ಬರೇ ಒಂದು ಕಥಾ ಕಾಲಕ್ಷೇಪವೆ ? ಈ ಬಗ್ಗೆ ಚಿಂತನೆ ನಡೆಸುತ್ತಿದ್ದಂತೆ ನನಗನ್ನಿಸಿದ್ದು ಸಾಹಿತ್ಯದ ಈ ಒಂದು ಪ್ರಕಾರ ದಿನೇ ದಿನೇ ಅಪರಾಧಗಳು ಹೆಚ್ಚುತ್ತಿರುವ ನಮ್ಮ ಇಂದಿನ ಸಂದರ್ಭದಲ್ಲಿ ಅತ್ಯಗತ್ಯ ಎಂದು. ಅಪರಾಧಿಗಳನ್ನು ಪತ್ತೆ ಹಚ್ಚುವುದರ ಕುರಿತಾದ ಕಥೆಗಳು ನಮ್ಮ ಪಾರಂಪರಿಕ ಸಾಹಿತ್ಯದಲ್ಲೂ ಇದ್ದವು. ಆದರೆ ಅದು ಒಂದು ಪ್ರಕಾರವಾಗಿ ಬೆಳೆದಿರಲಿಲ್ಲ. 19ನೆಯ ಶತಮಾನದ ಪಾಶ್ಚಾತ್ಯ ಸಾಹಿತ್ಯದಲ್ಲಿ ಎಡ್ಗರ್ ಅಲನ್ ಪೋ, ಜಿ.ಕೆ. ಚೆಸ್ಟರ್ ಟನ್, ಆರ್ಥರ್ ಕಾನನ್ ಡಾಯ್ಲ್ ಮೊದಲಾದವರ ಮೂಲಕ ಅದು ಒಂದು ಶಿಸ್ತಾಗಿ ಬೆಳೆಯಿತು. ಅವರ ಎಲ್ಲರ ಕಥೆಗಳಲ್ಲಿ ಡಿಟೆಕ್ಟಿವ್ ಅನ್ನುವವನು ಬಹಳ ಮುಖ್ಯವಾದ ಒಂದು…
ಬೆಂಗಳೂರು : ಮುಳಿಯ ಜ್ಯುವೆಲ್ಸ್ ಬೆಂಗಳೂರಿನ ಮಳಿಗೆಯಲ್ಲಿ ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 24 ನವೆಂಬರ್ 2024ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ. ಕೆ. ಶೆಟ್ಟಿ ಮಾತನಾಡಿ “ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು.” ಎಂದರು. ಇನ್ನೋರ್ವ ಅತಿಥಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ ಮಾತನಾಡಿ “ಮುಳಿಯದ ವಿಶೇಷ ಡಿಸೈನ್ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ.” ಎಂದರು. ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಇವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಟೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಶ್ರೀ ಸುರೇಶ್ ಯನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು. ಮುಳಿಯ…
ಸುಳ್ಯ : ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಹಳೆಗೇಟು ಸುಳ್ಯ ಮತ್ತು ಮಹಾಬಲ ಲಲಿತ ಕಲಾ ಸಭಾ (ರಿ.) ಪುತ್ತೂರು ಇದರ ಸಹಯೋಗದಲ್ಲಿ ‘ಶಾಸ್ತ್ರೀಯ ಸಂಗೀತ ಸಂಭ್ರಮ’ ಕಾರ್ಯಕ್ರಮವನ್ನು ದಿನಾಂಕ 08 ಡಿಸೆಂಬರ್ 2024ರಂದು ಸಂಜೆ ಗಂಟೆ 5-45ಕ್ಕೆ ಸುಳ್ಯ ರಂಗಮನೆ ಹಳೆಗೇಟು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಪದ್ಮ ಭೂಷಣ ವಿಶ್ವ ಮೋಹನ ಭಟ್ ಇವರ ಪುತ್ರ ತಂತಿ ಸಾಮ್ರಾಟ್ ಪಂಡಿತ್ ಸಲಿಲ್ ವಿ. ಭಟ್ ಇವರ ಸಾತ್ವಿಕ ವೀಣಾ ವಾದನಕ್ಕೆ ಶ್ರೀ ಹಿಮಾಂಶು ಮಹಂತ್ ವಡೋದರ ತಬಲ ಸಾಥ್ ನೀಡಲಿದ್ದಾರೆ ಮತ್ತು ಸುರಮಣಿ ಮಹಾಲಕ್ಷ್ಮೀ ಶೆಣೈ ಕಾರ್ಕಳ ಇವರ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಕ್ಕೆ ಶ್ರೀ ವಿಶ್ವನಾಥ್ ಭಟ್ ಎಣ್ಣೆಹೊಳೆ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಮಂಗಳೂರು : ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣ ವೇದಿಕೆ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇವರು ಜಂಟಿಯಾಗಿ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣೆ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 14 ಡಿಸೆಂಬರ್ 2024ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಇವರು ವಹಿಸಲಿದ್ದು, ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕರಾದ ಶ್ರೀ ಭಾಸ್ಕರ ರೈ ಕುಕ್ಕುವಳ್ಳಿ ಇವರು ಸಂಸ್ಮರಣೆ ಭಾಷಣ ಮಾಡಲಿದ್ದಾರೆ. ಇದೇ ವೇದಿಕೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಅರುವ ಕೊರಗಪ್ಪ ಶೆಟ್ಟಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಸುಧನ್ವ ಮೋಕ್ಷ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.