Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸುರತ್ಕಲ್ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಯ್ಯಾರ ನೆನಪು 110ನೇ ಜನ್ಮದಿನಾಚರಣೆ ಕಾರ್ಯಕ್ರಮವು 08 ಜೂನ್ 2025ರಂದು ಸಾಹಿತಿ ಇಂದಿರಾ ಹೆಗ್ಗಡೆಯವರ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹಿರಿಯ ಸಾಹಿತ್ಯ ಸಂಘಟಕ ಭುವನ ಪ್ರಸಾದ್ ಹೆಗ್ಗಡೆ ಮಾತನಾಡಿ “ಕನ್ನಡ ನಾಡು ನುಡಿ ಸಂಸ್ಕೃತಿಗಳ ಕುರಿತು ಬದ್ಧತೆ, ತತ್ವ, ಆದರ್ಶಗಳೊಂದಿಗೆ ಕವಿಯಾಗಿ ಹೋರಾಟಗಾರರಾಗಿ ಕಯ್ಯಾರ ಕಿಞ್ಞಣ್ಣ ರೈಗಳು ತಮ್ಮನ್ನು ಅರ್ಪಿಸಿಕೊಂಡ ಶ್ರೇಷ್ಟ ಮಾನ್ಯರು. ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆನ್ನುವ ಬಯಕೆಯಿಂದ ವ್ರತದಂತೆ ಹೋರಾಡಿದvರು” ಎಂದು ನುಡಿದರು. ಕಯ್ಯಾರ ಕಿಞ್ಞಣ್ಣ ರೈಗಳ ಪುತ್ರಿ ದೇವಕೀದೇವಿ ಮಾತಾನಾಡಿ “ಕಯ್ಯಾರರ ಮನ ಸದಾ ನಾಡು ನುಡಿ ಮತ್ತು ತಮ್ಮ ವಿದ್ಯಾರ್ಥಿಗಳ ಅಭಿವೃದ್ದಿಗಾಗಿ ಮಿಡಿಯುತ್ತಿತ್ತು” ಎಂದರು. ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆ ಅವರು ಮಾತನಾಡಿ “ಶಿಕ್ಷಣ, ಸಾಹಿತ್ಯ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಸಮಾನ ಆಸಕ್ತರಾಗಿದ್ದ ಕಯ್ಯಾರರ ಕೊಡುಗೆ ಅಪಾರವಾದುದು” ಎಂದರು. ಹಿರಿಯ ಕಲಾವಿದೆ ಗೀತಾ ಸುರತ್ಕಲ್ ಕಯ್ಯಾರ…
ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ -1’ ಕಾರ್ಯಕ್ರಮವನ್ನು ದಿನಾಂಕ 14 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ದೇಲಂಪಾಡಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಯಕ್ಷಗಾನ ಗುರುಗಳಾದ ವಿಶ್ವವಿನೋದ ಬನಾರಿ ಇವರು ಉದ್ಘಾಟನೆ ಮಾಡಲಿದ್ದಾರೆ. ನಿವೃತ್ತ ಶಿಕ್ಷಕ ವಿ.ಬಿ. ಕುಳಮರ್ವ ಮತ್ತು ಸಾಹಿತಿ ವಿರಾಜ್ ಅಡೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಮೈಸೂರು : ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ https://uucms.karnataka.gov.in ಅಥವಾ https://www. cavamysore. karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು 10 ಜೂನ್ 2025 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ತಿಳಿಸಿದ್ದಾರೆ.
ಏನಿದೆ ಏನಿಲ್ಲ..ಈ ಸುಂದರ ಸೃಷ್ಟಿಯಲಿ ಅಡಗಿದೆ ಚೆಲುವೆಲ್ಲ ..ಆ ಕಾಣುವ ದೃಷ್ಟಿಯಲಿ |ಪ.| ಭಾವಕೆ ತೋರಣವು.. ಬದುಕಿಗೆ ಹೂರಣವು ಸಗ್ಗ- ನಿಸರ್ಗವಿದು.. ಚಂದದ ಚಾರಣವು ||ಅ.ಪ.|| ಚಾದರದಂತೆ ಹಾಸಿದ ಆಗಸ ಚೆಲ್ಲುವ ಬಣ್ಣಗಳು ನೇಸರ-ಚಂದಿರ ಹಗಲಲಿ-ಇರುಳಲಿ ಅರಳುವ ಕಣ್ಣುಗಳು ಅಲೆಯುವ ಮುಗಿಲುಗಳು…ತೇಲುವ ಮಳೆಬಿಲ್ಲು ಮೋಡದ ಮುಗುಳುಗಳು..ಕಾಡುವ ಪಿಸು ಸೊಲ್ಲು ||೧|| ಹಸಿರನು ಹೊದ್ದ ಶ್ಯಾಮಲೆ ಭೂರಮೆ ಮನವನು ತಣಿಸುವಳು ಜಲ-ಫಲ ತರುಲತೆ ಆಸರೆ-ನೆರಳಲಿ ಉಸಿರನು ಉಣಿಸುವಳು ಮೋಹಕ ಸಲಿಲಗಳು..ಚುಂಬಕ ಗಿರಿ ಕಡಲು ಝರಿ-ತೊರೆ ಅಲೆಅಲೆಯು, ಖಗ-ಮಿಗ ನಲಿಯುಲಿಯು ||೨|| ತಿಂಗಳು ತುಂಬಿದ ಬಸುರಿಯ ತೆರದಿ ಪ್ರೀತಿಸು ಇಳೆಯನ್ನು ಮೇಯದೆ, ಸವೆಸದೆ ಒಡಲ ನೋಯಿಸದೆ ಹೆಚ್ಚಿಸು ಕಳೆಯನ್ನು ಬೆಳೆಸುವ ಬಸಿರನ್ನು…ಉಳಿಸುವ ಉಸಿರನ್ನು ಶಾಶ್ವತ ಸವಿಯೋಣ..ಭೂ ದೇವಿಯ ಸಿರಿಯನ್ನು ||೩|| ರೂಪಕಲಾ ಆಳ್ವ ಕನ್ನಡ, ತುಳು ಬರಹಗಾರ್ತಿ
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ದಿನಾಂಕ 09 ಜೂನ್ 2025ರಂದು ಸಾಹಿತ್ಯ ಪ್ರಪಂಚದ ಅಂತರಾಷ್ಟ್ರೀಯ ಮಟ್ಟದ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ದೀಪಾ ಭಾಸ್ತಿ ಇವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಇವರು ಹೋಟೆಲ್ ರೆಡ್ಬ್ರಿಕ್ಸ್ ನ ‘ಸತ್ಕಾರ’ ಸಭಾಂಗಣದಲ್ಲಿ ಈ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದಾರೆ. ಸಾಹಿತಿಗಳು ಮತ್ತು ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರನ್ನು ಕವಿ ಮತ್ತು ಅನುವಾದಕಿ ಹಾಸನದ ಜ.ನಾ. ತೇಜಶ್ರೀ ಸನ್ಮಾನಿಸಲಿದ್ದು, ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಮಾಜಿ…
ಬೆಂಗಳೂರು : ಕನ್ನಡ ನಾಡು, ನುಡಿ, ಸಂಸ್ಕೃತಿ ,ಇತಿಹಾಸ, ಮಾನವಿಕ ವಿಷಯಗಳಿಗೆ ಕುರಿತು ನಡೆಸುವ ಸಂಶೋಧನ ಕ್ಷೇತ್ರದ ಅನನ್ಯ ಸಾಧನೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಯ 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಆಯ್ಕೆಯಾಗಿದ್ದು, ಪ್ರಶಸ್ತಿಯನ್ನು 4 ಜೂನ್ 2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಂದ ಸ್ವೀಕರಿಸಿದರು. ಹಿರಿಯ ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮತ್ತಿತರರು ಉಪಸ್ಥತರಿದ್ದರು. ಕನ್ನಡ ಮತ್ತು ತುಳು ನಾಡು, ನುಡಿ, ಸಂಸ್ಕೃತಿ, ಇತಿಹಾಸ, ಜನಪದ, ಲೋಕಕ್ಕೆ ತಮ್ಮ ಮೌಲಿಕ ಸಂಶೋಧನಾ ಮತ್ತು ಸೃಜನಶೀಲ ಕೃತಿಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ. ಎಸ್. ಆರ್. ಹೆಗ್ಡೆ ಚಾರಿಟಬಲ್…
ಮೈಸೂರು : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಮೈಸೂರು ಇದರ ವತಿಯಿಂದ ದಿನಾಂಕ 08 ಜೂನ್ 2025ರಂದು ಬೆಳಗ್ಗೆ 9-30 ಗಂಟೆಗೆ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ ಮೈಸೂರು ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ಹಾಗೂ ಖ್ಯಾತ ವೈದ್ಯರಾದ ಡಾ. ಸಿ. ಶರತ್ ಕುಮಾರ್ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ವಿಶೇಷ ಉಪನ್ಯಾಸ, ಕವಿಗೋಷ್ಠಿ, ವಿಚಾರಗೋಷ್ಠಿ, ದತ್ತಿ ಪ್ರಶಸ್ತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಇವರು ಉದ್ಘಾಟನೆ ಮಾಡಲಿದ್ದಾರೆ. ಹಡವನಹಳ್ಳಿ ವೀರಣ್ಣ ಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು…
ಸಿರಿಬಾಗಿಲು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಟಾನ, ಕಾಸರಗೋಡು ಇವರು ಆಯೋಜಿಸುವ ವಿಶೇಷವಾದ ಯಕ್ಷಗಾನ ಪ್ರಸಂಗ ರಚನಾ ಶಿಬಿರವು ದಿನಾಂಕ 06 ಜುಲೈ 2025ನೇ ಆದಿತ್ಯವಾರದಂದು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಉಚಿತವಾಗಿ ನಡೆಯಲಿದೆ. ಯುವ ಪ್ರಸಂಗ ಕವಿಗಳು ಛoದೋಬದ್ಧವಾಗಿ ಯಕ್ಷಗಾನ ಪದಗಳ ರಚನೆ, ಕಾಲಗಳ ಗಣತಿಗೆ ಅನುಗುಣವಾಗಿ ಯಾವ ಪದಗಳನ್ನು ರಚಿಸಬೇಕು, ಯಾವ ಪಾತ್ರಗಳಿಗೆ ಯಾವ ರಚನೆಗಳು ಸರಿಹೊಂದುತ್ತವೆ, ನವ ರಸಗಳಲ್ಲಿ ಯಾವ್ಯಾವ ರಸಗಳಿಗೆ ಯಾವ್ಯಾವ ರಾಗ, ತಾಳಗಳ ಬಳಕೆ ಮಾಡಬೇಕು, ಕಥಾ ಸನ್ನಿವೇಶಗಳನ್ನು ಹೇಗೆ ಹೆಣೆಯಬೇಕು… ಇತ್ಯಾದಿಗಳ ಕುರಿತು ಮಾರ್ಗದರ್ಶನವನ್ನು ಈ ಶಿಬಿರದಲ್ಲಿ ಪಡೆಯಬಹುದು. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷ ಕವಿಗಳಾದ ಶ್ರೀ ಶ್ರೀಧರ ಡಿ. ಎಸ್. ಕಿನ್ನಿಗೋಳಿ ಹಾಗೂ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಮೈಸೂರು ಇವರ ಮಾರ್ಗದರ್ಶನದಲ್ಲಿ ಈ ಶಿಬಿರ ನಡೆಯಲಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ಅಪರೂಪವಾದ ಇದರ ಪ್ರಯೋಜನವನ್ನು ಆಸಕ್ತರೆಲ್ಲಾ ಪಡೆದುಕೊಳ್ಳಬೇಕೆಂದು ಪ್ರತಿಷ್ಟಾನದ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ತಿಳಿಸಿದ್ದಾರೆ.…
ಉಡುಪಿ : ಯಕ್ಷಗಾನ ಕಲಾರಂಗ ವೃತ್ತಿ ಮೇಳದಲ್ಲಿ ಪ್ರವೃತ್ತರಾಗಿರುವ 35 ವರ್ಷದೊಳಗಿನ ಕಲಾವಿದರಿಗಾಗಿ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರವನ್ನು ಆಯೋಜಿಸುತ್ತಿದ್ದು, ಶಿಬಿರವು 01 ಜುಲೈ 2025 ರಿಂದ 04 ಜುಲೈ2025ರ ವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಕಟ್ಟಡದಲ್ಲಿ ನಡೆಯಲಿದೆ. ಶಿಬಿರಾರ್ಥಿಗಳು ನಾಲ್ಕು ದಿನ ಕಡ್ಡಾಯವಾಗಿ ಇಲ್ಲಿಯೇ ವಾಸ್ತವ್ಯವಿರಬೇಕು. ಶಿಬಿರಾರ್ಥಿಗಳಿಗೆ ಸಂಭಾವನೆ ನೀಡಲಾಗುವುದು. ಹಿರಿಯ, ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಅಭಿನಯ, ಮಾತುಗಾರಿಕೆ, ವೇಷಭೂಷಣ, ಪಾತ್ರ ಪ್ರಸ್ತುತಿ, ಪಾತ್ರೌಚಿತ್ಯ ಇತ್ಯಾದಿ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುವುದು, ಹಿಂದಿನ ಹಿರಿಯ ಕಲಾವಿದರ ಪ್ರದರ್ಶನದ ವೀಡಿಯೋಗಳನ್ನು ತೋರಿಸಲಾಗುವುದು. ಬೆಳಿಗ್ಗೆ ಯೋಗ, ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಮಾಹಿತಿ ನೀಡಲಾಗುವುದು. ಆಸಕ್ತ ಕಲಾವಿದರು ನಿಮ್ಮ ಹೆಸರು, ವಯಸ್ಸು ಈಗ ವೃತ್ತಿಯಲ್ಲಿರುವ ಮೇಳದ ಮಾಹಿತಿಯೊಂದಿಗೆ ದಿನಾಂಕ 10 ಜೂನ್ 2025ರ ಒಳಗೆ ಈ ಕೆಳಗೆ ನಮೂದಿಸಿದ ನಂಬರಿಗೆ ವಾಟ್ಸಪ್ ಸಂದೇಶದ ಮೂಲಕ ತಿಳಿಸಬೇಕು. 4೦ ಜನರಿಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಮೆಸೇಜ್ ಕಳುಹಿಸಬೇಕಾದ ದೂರವಾಣಿ ಸಂಖ್ಯೆ…
ಮೈಸೂರು : ಕರ್ಣಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ‘ಆರ್.ಟಿ.ಎಂ. ಪ್ರದರ್ಶನ ಕಲೆಗಳ ಅಧ್ಯಯನ ಕೇಂದ್ರ’ ಮೈಸೂರು ಇದರ ವತಿಯಿಂದ ರಂಗಭೂಮಿ (ನಾಟಕ) ಡಿಪ್ಲೋಮಾ 2025-26 ರಂಗಶಿಕ್ಷಣಕ್ಕೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯ ಘಟಕವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಅಭಿನಯ, ಯಕ್ಷಗಾನ, ರಂಗಗೀತೆ, ಮೇಕಪ್, ಪ್ರಾಪರ್ಟಿ, ಕಾಸ್ಟೋಮ್ ಹಾಗೂ ಮುಂತಾದ ತರಗತಿಗಳು. ರಂಗಭೂಮಿ ಪಠ್ಯದ ಜೊತೆಗೆ ಪ್ರಾಯೋಗಿಕ ತರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಒಂದು ವರ್ಷದ ತರಬೇತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಿತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಯ ಪ್ರತಿದಿನ ಸಂಜೆ ಗಂಟೆ 5-30ರಿಂದ ರಾತ್ರಿ 8-30ರವರೆಗೆ ಮತ್ತು ರಜಾದಿನಗಳಂದು ಪೂರ್ಣದಿನ ತರಬೇತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಾಗೂ ಹೆಚ್ಚಿನ ಮಾಹಿತಿಗಾಗಿ…