Author: roovari

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ವತಿಯಿಂದ ಪ್ರತಿ ವರ್ಷವೂ ಹಮ್ಮಿಕೊಳ್ಳುವ ವಾರ್ಷಿಕ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವದ ಕಾರ್ಯಕ್ರಮವು ದಿನಾಂಕ 05 ಸೆಪ್ಟೆಂಬರ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಂಗಳೂರು ಕೋಡಿಯಾಲ್ ಬೈಲ್ ಇಲ್ಲಿರುವ ಎಸ್‌.ಡಿ.ಎಂ. ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಧ್ಯಾನ ಸಂಗೀತ ಅಕಾಡೆಮಿಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಮತ್ತು ಲಘು ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು 2-00 ಗಂಟೆಗೆ ಪ್ರಾರಂಭವಾಗಲಿದ್ದು, ವಿಶ್ವಜೀತ್ ಕಿಣಿ ಉಪ್ಪುಂದ, ಸುರೇಶ್ ಪೈ, ಸಂದೀಪ್ ಪೂಜಾರಿ ಮತ್ತು ಕುಮಾರಿ ದಿವ್ಯ ನಿಧಿ ರೈ ಹಾರ್ಮೋನಿಯಂನಲ್ಲಿ ಹಾಗೂ ಸುಮನ್ ದೇವಾಡಿಗ, ಸಂತೋಷ್ ಸಾಲ್ಯಾನ್, ದರ್ಶನ್ ದೇವಾಡಿಗ ಮತ್ತು ಸ್ಮರಾಜ್ ಎಂ.ಎಸ್. ತಬಲಾದಲ್ಲಿ ಸಹಕರಿಸಲಿದ್ದಾರೆ. 3-00 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಖ್ಯಾತ ಗಾಯಕರಾದ ಡಾ. ಕೃಷ್ಣಮೂರ್ತಿ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ಕೃಷ್ಣಮೂರ್ತಿ ಭಟ್ ಇವರ ಹಿಂದೂಸ್ತಾನಿ ಸಂಗೀತ ಗಾಯನ ಕಛೇರಿಗೆ ತಬಲಾದಲ್ಲಿ ಉಡುಪಿಯ ಟಿ. ರಂಗ ಪೈ…

Read More

ಯಕ್ಷಗಾನ ಕಲಾವಿದೆ, ನೃತ್ಯಗಾತಿ, ಶಿಕ್ಷಕಿ, ಕವಯಿತ್ರಿ, ಲೇಖಕಿ… ಹೀಗೆ ಬಹುಮುಖ ಪ್ರತಿಭೆಯ ಶ್ರೀಮತಿ ಡಿ. ಸುಕನ್ಯ ಟೀಚರ್ (65 ವ) ದಿನಾಂಕ 30 ಆಗಸ್ಟ್ 2025 ಶನಿವಾರದಂದು ನಮ್ಮನ್ನು ಅಗಲಿದ್ದಾರೆ. ಇವರು 60ರ ದಶಕದಲ್ಲಿ ನಮ್ಮ ಪರಿಸರದ ಹೆಸರುವಾಸಿ ಆಧುನಿಕ ಶೈಲಿಯ ನೃತ್ಯ ಗುರುಗಳೂ, ಯಕ್ಷಗಾನ ಕಲಾವಿದರೂ ಆಗಿದ್ದ ಗಾಣದಕೊಟ್ಯ ಕೇಶವ ‘ಮಾಸ್ಟರ್’ ಪಾಟಾಳಿ (ಮಾಸ್ಟರ್ ಕೇಶವ ಕನ್ಯಾನ) ಅವರ ಮಗಳು. ಇವರು ಪುತ್ತೂರು ತಾಲೂಕಿನ ಪೆರ್ನಾಜೆ ಪ್ರೌಢಶಾಲೆಯ ಶಿಕ್ಷಕಿಯಾಗಿ ಎರಡು ವರ್ಷಗಳ ಹಿಂದೆ ನಿವೃತ್ತರಾದವರು. ತನ್ನ ಸುತ್ತಮುತ್ತಲಿನ ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸದಾ ಪ್ರೇರೇಪಿಸಿ ತಂದೆಯವರ ಕಲಾ ಸೇವೆಯನ್ನು ಮುಂದುವರಿಸುತ್ತಿದ್ದರು. ಒಳ್ಳೆಯ ನೃತ್ಯಗಾತಿಯೂ ಆದ ಅವರು, 70 – 80ರ ದಶಕಗಳಲ್ಲಿ ಹಲವಾರು ಕಡೆ ಯಕ್ಷಗಾನಗಳಲ್ಲೂ ಪಾತ್ರವಹಿಸಿ ಮಿಂಚಿದ್ದರು. ಚಂದದ ಹೆಜ್ಜೆಗಾರಿಕೆ ಅವರದು. ದೇಲಂತಬೆಟ್ಟಿನ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಮಾತೃಮಂಡಳಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು ಇತ್ತೀಚಿಗೆ ಆರಂಭಗೊಂಡ ನೃತ್ಯಭಜನಾ ಮಂಡಳಿಯ ಉಗಮಕ್ಕೆ ಸಂಪೂರ್ಣ ಸಹಕಾರವನ್ನು ನೀಡಿದವರು. ದಶಕಗಳ ಕಾಲ ನಡೆದ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ದಿನಾಂಕ 01 ಸೆಪ್ಟೆಂಬರ್ 2025ರಂದು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ‘ಮಾಗಧ ವಧೆ’ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ಮಾಗಧ (ಗುಡ್ಡಪ್ಪ ಬಲ್ಯ), ಮಾಂಬಾಡಿ ವೇಣುಗೋಪಾಲ ಭಟ್ (ಭೀಮ), ಅಚ್ಯುತ ಪಾಂಗಣ್ಣಾಯ (ಅರ್ಜುನ) ಸಹಕರಿಸಿದರು. ಗೌರವ ಕಾರ್ಯದರ್ಶಿ ರಂಗನಾಥ ರಾವ್ ವಂದಿಸಿದರು.

Read More

ಮಂಗಳೂರು : ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ ಸಂತೋಷಕುಮಾರ ಮೆಹಂದಳೆ “ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ. ಇಂತಹ ಸಂದರ್ಭದಲ್ಲಿ ಬರಹಗಾರರು ಗುಣಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕು. ಸೂಕ್ತ ಅನುಭವ ಮತ್ತು ಓದಿನ ಹಿನ್ನೆಲೆಯಿಲ್ಲದೆ, ಕೇವಲ ಗ್ರಂಥಾಲಯ ಸರಬರಾಜಿನ ಉದ್ದೇಶದಿಂದ ಮಾತ್ರ ಕೃತಿ ರಚನೆ ಉತ್ತಮವಲ್ಲ. ಎಂದು ಅಭಿಪ್ರಾಯಪಟ್ಟರು. ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್.ಎಮ್. ಶಿವಪ್ರಕಾಶ್, ಡಾ. ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ. ಅಸದ್,…

Read More

ಮುಂಬೈ : ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05 ಸೆಪ್ಟೆಂಬರ್ 2025 ಶುಕ್ರವಾರದಂದು ಬೆಳಿಗ್ಗೆ 11-30 ಗಂಟೆಗೆ ಕನ್ನಡದ ಖ್ಯಾತ ವಿಮರ್ಶಕ, ಚಿಂತಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯರವರ ಕನ್ನಡ ಸಾಹಿತ್ಯ, ಪರಂಪರೆ ಮತ್ತು ವರ್ತಮಾನ ಕೃತಿ ಕುರಿತ ಸಹೃದಯ ಗೋಷ್ಠಿಯು ನಡೆಯಲಿದೆ. ಗೂಗಲ್ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಡಾ. ಅನುಷ ಎಚ್.ಸಿ. ಹಾಗೂ ಡಾ. ರಾಜಶೇಖರ ಹಳೆಮನೆ ಉಜಿರೆ ಇವರು ಪಾಲ್ಗೊಳ್ಳಲಿರುವರು. ಕನ್ನಡ ವಿಭಾಗದ ಸಂಶೋಧನ ವಿದ್ಯಾರ್ಥಿಗಳಾದ ಕಲಾ ಭಾಗ್ವತ್ ಮತ್ತು ನಳಿನಾ ಪ್ರಸಾದ್ ಕೃತಿಯ ಆಯ್ದ ಭಾಗಗಳ ವಾಚನ ಮಾಡಲಿರುವರು. ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಲಿರುವರು. ವಿದ್ಯಾ ರಾಮಕೃಷ್ಣ ತಾಂತ್ರಿಕವಾಗಿ ಸಹಕರಿಸುವರು. http://meet. google.com/sjq-bpxm-zbt ಲಿಂಕ್ ಮೂಲಕ ಈ ಕಾರ್ಯಕ್ರಮಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಜಿ.ಎನ್. ಉಪಾಧ್ಯ ಹಾಗೂ ನ. ರವಿಕುಮಾರ ಅಭಿನವ ಬೆಂಗಳೂರು ಇವರು ತಿಳಿಸಿದ್ದಾರೆ. ಡಾ.…

Read More

ಧಾರವಾಡ : ಅಭಿನಯ ಭಾರತಿ (ರಿ.) ಧಾರವಾಡ ಇದರ 45ನೇ ವಾರ್ಷಿಕೋತ್ಸವವನ್ನು ದಿನಾಂಕ 05 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಧಾರವಾಡದ ಕರ್ಣಾಟಕ ಕಾಲೇಜಿನ ಆವರಣ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಅದ್ವೈತ ಪ್ರಭೋಧಕ ಸಂಘದ ಅಧ್ಯಕ್ಷರಾದ ರವಿ ದೇಶಪಾಂಡೆ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿದುಷಿ ರೋಹಿಣಿ ಇಮಾರತಿ ಮತ್ತು ರೋಟರಿ ಕ್ಲಬ್ ಧಾರವಾಡ ಸೆಂಟ್ರಲ್ ಇದರ ಅಧ್ಯಕ್ಷರಾದ ನಾಗರಾಜ ತಾಯಣ್ಣವರ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ವಾನ್ ಸುಜಯ್ ಶಾನಭೋಗ್ ನೃತ್ಯ ಸಂಯೋಜನೆ ಮತ್ತು ಅದ್ವೈತ ಪ್ರಬೋಧಕ ಸಂಘದ ಪ್ರಾಯೋಜಕತ್ವದಲ್ಲಿ ‘ಸನಾತನಿ’ ಎಂಬ ನೃತ್ಯ ರೂಪಕ ಹುಬ್ಬಳ್ಳಿಯ ಕಲಾ ಸುಜಯ ತಂಡದಿಂದ ಪ್ರದರ್ಶನಗೊಳ್ಳಲಿದೆ.

Read More

ಮೂಡುಬಿದಿರೆ : ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30 ಆಗಸ್ಟ್ 2025 ಶನಿವಾರ ಆಳ್ವಾಸ್ ಕಾಲೇಜಿನಲ್ಲಿ ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ ನಡೆಯಿತು. ಈ ಕಮ್ಮಟವನ್ನು ಉದ್ಘಾಟಿಸಿದ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಮಾತನಾಡಿ “ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ವಿದ್ಯಾರ್ಥಿ ಸಮ್ಮೇಳನ, ತುಳು ಐಸಿರ, ಒಂಜಿ ದಿನ ಬಲೆ ಓದುಗ ಕೂಟ, ಮಕ್ಕಳ ರಂಗತರಬೇತಿ ಶಿಬಿರ, ತುಳುನಾಡ ಸಿರಿ ಮದಿಪು, ತುಳುಭಾಷೆ ಬದ್ಕ್ ಗೇನದ ಪೊಲಬು ಮುಂತಾದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತುಳುವಿನ ಕುರಿತು ಆಸಕ್ತಿ ಮೂಡಿಸಲು ಸಹಕಾರಿಯಾಗಿವೆ. ತುಳು ಭಾಷೆಯ ಸಮೃದ್ಧತೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಬೇಕು. ತುಳು ಸಾಹಿತ್ಯ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಹಲವು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಒಡನಾಟ ಹೊಂದಿದ, ಸಾಮಾಜಿಕ ಹೋರಾಟಗಳಲ್ಲಿ ನಿರತರಾದ ಕನ್ನಡ ಸಾಹಿತ್ಯ, ಸಂಸ್ಕೃತಿಯ ಕುರಿತು ಅಪಾರ ಆಸಕ್ತಿಯನ್ನು ಹೊಂದಿದ ಯಾದಗಿರಿಯವರಾದ ಡಾ. ಶಿವಶರಣ ಗೋಡ್ರಾಳ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಡಾ. ಶಿವಶರಣ ಗೋಡ್ರಾಳ ಇವರು ಬಿ.ಇ.ಎಂ.ಎಸ್. ಪದವೀಧರರಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದು, ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಜಾಗೃತಿಯನ್ನು ಉಂಟು ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದು, ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು…

Read More

ಉಡುಪಿ : ಉಡುಪಿಯ ಮುಕುಂದ ಕೃಪ ಸಂಗೀತ ಶಾಲೆಯ ವಿದ್ವಾನ್ ಮಹಾಬಲೇಶ್ವರ ಭಾಗವತ್ ಇವರ ಶಿಷ್ಯ ಜೀ ಸರಿಗಮಪ ಕನ್ನಡ ಸೀಸನ್ 9ರ ಮತ್ತು ರಾಷ್ಟ್ರೀಯ ಹಿಂದಿ ಸರಿಗಮಪ ಸೀಸನ್ 5 ವಿಜೇತ ಗಗನ್ ಜಿ. ಗಾಂವ್ಕರ್ ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಕಳೆದ ಸಾಲಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ನಡೆಸಿದ ರಾಜ್ಯಮಟ್ಟದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸುವ ಮೂಲಕ ವಿದ್ವತ್ ಪದವಿಯನ್ನು ಪಡೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರಸಿದ್ಧ ಎಂ.ಎನ್.ಸಿ.ಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ಚಲನಚಿತ್ರ ಹಾಗೂ ತಾವೇ ಸಂಯೋಜಿಸಿದ ಭಾವ, ಭಕ್ತಿ, ಗೀತೆಗಳಿಗೆ ಧ್ವನಿಯಾಗಿದ್ದು, ಭವಿಷ್ಯದಲ್ಲಿ ಉತ್ತಮ ಗಾಯಕ ಹಾಗೂ ಸಂಗೀತ ಸಂಯೋಜಕನಾಗಬೇಕು ಎಂದು ಕನಸು ಕಂಡಿರುವ ಗಗನ್ ಜಿ. ಗಾಂವ್ಕರ್ ಇವರಿಗೆ ದಿನಾಂಕ 30 ಆಗಸ್ಟ್ 2025ರಂದು ಮೈಸೂರಿನಲ್ಲಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಮಾನ್ಯ ಕುಲಪತಿಗಳು,…

Read More

ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 31 ಆಗಸ್ಟ್ 2025 ಭಾನುವಾರದಂದು ‘ಕರ್ಣ ಭೇಧ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಳೆಯಲ್ಲಿ ಶ್ರೀ ಗೋಪಾಲ ಕೃಷ್ಣ ನಾವಡ ಮಧೂರು ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ : ಶ್ರೀ ನರಸಿಂಹ ಬಲ್ಲಾಳ್, ಕರ್ಣ : ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಕುಂತಿ : ಶ್ರೀ ಮಯೂರ ಆಸ್ರ ಉಳಿಯ ಇವರುಗಳು ಭಾಗವಹಿಸಿದ್ದರು.

Read More