Subscribe to Updates
Get the latest creative news from FooBar about art, design and business.
Author: roovari
ಬದಿಯಡ್ಕ : ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಸಭಾಂಗಣದಲ್ಲಿ ದಿನಾಂಕ 15 ಸೆಪ್ಟೆಂಬರ್ 2024ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ, ಕೇಂದ್ರ ಕಚೇರಿ, ಹಾಸನ, ಕಾಸರಗೋಡು ಜಿಲ್ಲಾ ಘಟಕ, ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕಾಸರಗೋಡಿನ ವಿಸ್ಡಮ್ ಇನ್ಸ್ಟಿಟ್ಯೂಷನ್ಸ್ ನೆಟ್ವರ್ಕ್ ಸಂಯುಕ್ತ ಆಶ್ರಯದಲ್ಲಿ ಕೇರಳ-ಕರ್ನಾಟಕ ಸ್ಪಂದನ ಸಿರಿ ಕೃಷಿ, ಕನ್ನಡ ಶಿಕ್ಷಣ, ಸಂಸ್ಕೃತಿ ಸಮ್ಮೇಳನವು ನಡೆಯಿತು. ಈ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ‘ಯಾರು ಏನೇ ಹೇಳಿದರೂ ಕೃಷಿಕರು ದೇಶದ ಕಾಯಕ ಯೋಗಿಗಳು. ಕೃಷಿಕರು ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ಮಾಡುತ್ತಾರೆ. ದೇಶದ ಪ್ರಗತಿಯಲ್ಲಿ ಅವರ ಕೊಡುಗೆ ಮಹತ್ವ ಪಡೆದಿದೆ. ಸಾಹಿತ್ಯ, ಶಿಕ್ಷಣ, ಕೃಷಿ, ಸಂಸ್ಕೃತಿ ಎಂಬ ಪ್ರಧಾನ ಅಂಶಗಳನ್ನು ಸೇರಿಸಿಕೊಂಡು ನಡೆಯುವ ಈ ಸಮ್ಮೇಳನವು ಯಾವ ಅಖಿಲ ಭಾರತ ಮಟ್ಟದ ಸಮ್ಮೇಳನಕ್ಕೂ ಕಡಿಮೆಯಲ್ಲ’ ಎಂದು ಶ್ಲಾಘಿಸಿದರು. ಶಿಕ್ಷಣ ತಜ್ಞ ವಿ.ಬಿ.…
ಬೆಳ್ತಂಗಡಿ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಯಕ್ಷಗಾನ ಮಹೋಪಾಧ್ಯಾಯ ನೆಡ್ಲೆ ನರಸಿಂಹ ಭಟ್ ಅವರ ಸಂಸ್ಮರಣೆಗಾಗಿ ‘ಯಕ್ಷಾವತರಣ-5’ ಎಂಬ ಯಕ್ಷಸಾಂಗತ್ಯ ತಾಳಮದ್ದಳೆ ಸಪ್ತಾಹ ಹಾಗೂ ‘ಯಶೋ’ ಯಕ್ಷನಮನ – ಗಾನ ನೃತ್ಯ ಚಿತ್ರ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ದಿನಾಂಕ 23-09-2024ರಿಂದ 30-09-2024ರವರೆಗೆ ಬೆಳ್ತಂಗಡಿ ಲಯ್ಲಾದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ 23 ಸೆಪ್ಟೆಂಬರ್ 2024ರಂದು ‘ಭೀಷ್ಮಪರ್ವ’, ದಿನಾಂಕ 24 ಸೆಪ್ಟೆಂಬರ್ 2024ರಂದು ‘ಇಂದ್ರತಂತ್ರ – ಪ್ರಹ್ಲಾದಶಾಪ’, ದಿನಾಂಕ 25 ಸೆಪ್ಟೆಂಬರ್ 2024ರಂದು ‘ಶಲ್ಯ ಸಾರಥ್ಯ’, ದಿನಾಂಕ 26 ಸೆಪ್ಟೆಂಬರ್ 2024ರಂದು ‘ವಾಮನ ಚರಿತ್ರೆ’, ದಿನಾಂಕ 27 ಸೆಪ್ಟೆಂಬರ್ 2024ರಂದು ‘ಕರ್ಣಭೇದನ’, ದಿನಾಂಕ 28 ಸೆಪ್ಟೆಂಬರ್ 2024ರಂದು ‘ಅಗ್ನಿಪರೀಕ್ಷೆ – ನಿಜಪಟ್ಟಾಭಿಷೇಕ’, ದಿನಾಂಕ 29 ಸೆಪ್ಟೆಂಬರ್ 2024ರಂದು ‘ಗುರುದಕ್ಷಿಣೆ’, ದಿನಾಂಕ 30 ಸೆಪ್ಟೆಂಬರ್…
ಮೂಡುಬಿದಿರೆ : ಸಮಾಜಮಂದಿರ ಸಭಾ (ರಿ.) ಮೂಡುಬಿದಿರೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಹಿರಿಯ ಸಾಹಿತಿ ಡಾ. ನಾ. ಮೊಗಸಾಲೆ ಇವರಿಗೆ ಅಭಿನಂದನ ಸಮಾರಂಭವನ್ನು ದಿನಾಂಕ 21 ಸೆಪ್ಟೆಂಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಮೂಡುಬಿದಿರೆಯ ಸಮಾಜಮಂದಿರ ಸಭಾದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟನೆ ಮಾಡಲಿರುವರು. ಮಾಜಿ ಸಚಿವರಾದ ಶ್ರೀ ಕೆ. ಅಭಯಚಂದ್ರ ಜೈನ್ ಇವರು ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಕುಲಪತಿಗಳಾದ ಪ್ರೊ. ಬಿ.ಎ. ವಿವೇಕ ರೈ ಇವರು ಅಭಿನಂದನ ನುಡಿಗಳನ್ನಾಡಲಿರುವರು. ಇದೇ ಸಂದರ್ಭದಲ್ಲಿ ಮೊಗಸಾಲೆಯವರಿಗೆ ಗೌರವ ಸನ್ಮಾನ ನಡೆಯಲಿದ್ದು, ಅವರ ಏಳು ಕೃತಿಗಳನ್ನು ಕನ್ನಡ ಸಾಹಿತ್ಯ ನಾಡೋಜ ಡಾ. ಮಹೇಶ್ ಜೋಶಿ ಇವರು ಲೋಕಾರ್ಪಣೆಗೊಳಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಮೊಗಸಾಲೆಯವರ ಕೃತಿ ಸಮೀಕ್ಷೆ ಮತ್ತು ಕೃತಿಗಳನ್ನು ಸಂಪಾದಿಸಿದ ಲೇಖಕರಾದ ಡಾ.…
ಬೆಂಗಳೂರು : ಕಳೆದ 45 ವರ್ಷದಿಂದ ಸದಾ ಚಟುವಟಿಕೆಯಿಂದಿರುವ ಬೆಂಗಳೂರಿನ ಪ್ರತಿಷ್ಠಿತ ‘ಯಕ್ಷದೇಗುಲ’ ತಂಡ ಕೊಡಮಾಡುವ ‘ಯಕ್ಷದೇಗುಲ ಪ್ರಶಸ್ತಿ-2024’ ಕ್ಕೆ ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನ್ದಾಸ್ ಶೆಣೈ ಆಯ್ಕೆಯಾಗಿದ್ದಾರೆ. ಕಳೆದ 42 ವರ್ಷಗಳ ಪರ್ಯಂತ ಯಕ್ಷಗಾನ ರಂಗದಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿರುವ ಆರ್ಗೋಡು ಮೋಹನ್ದಾಸ್ ಶೆಣೈಯವರಿಗೆ ದಿನಾಂಕ 05 ಅಕ್ಟೋಬರ್ 2024ರಂದು ಬೆಂಗಳೂರಿನ ಗವಿಪುರಂ (ಚಾಮರಾಜ ಪೇಟೆ) ಇಲ್ಲಿನ ಉದಯಭಾನು ಕಲಾಸಂಘದ ಸಭಾಂಗಣದಲ್ಲಿ ನಡೆಯುವ ಯಕ್ಷದೇಗುಲದ ಯಕ್ಷಗಾನ ಉತ್ಸವದಲ್ಲಿ ಪ್ರಶಸ್ತಿ ನೀಡಲಾಗುವುದೆಂದು ಯಕ್ಷದೇಗುಲದ ನಿರ್ದೇಶಕರಾದ ಕೆ. ಮೋಹನ್ ಇವರು ತಿಳಿಸಿರುತ್ತಾರೆ.
ಉಡುಪಿ : ಉಡುಪಿಯ ರಾಗ ಧನ ಸಂಸ್ಥೆಯು ಹಮ್ಮಿಕೊಂಡಿರುವ ‘ರಾಗರತ್ನ ಮಾಲಿಕೆ -28’ನೇ ಕಾರ್ಯಕ್ರಮ ದಿನಾಂಕ 14 ಸೆಪ್ಟೆಂಬರ್ 2024ರಂದು ಮಣಿಪಾಲದ ಮಣಿಪಾಲ್ ಡಾಟ್ ನೆಟ್ ಸಭಾಂಗಣದಲ್ಲಿ ನಡೆಯಿತು. ಒಂದು ಹೃದ್ಯವಾದ ಕೊಳಲಿನ ತುತ್ತುಕಾರದೊಂದಿಗೆ ಮೃದುವಾದ ಚಿತ್ರವೀಣೆಯ ಉಲಿತ, ಉಡುಪಿ ಮಣಿಪಾಲದ ಸಂಗೀತಾಸಕ್ತರಿಗೆ ತುಂಬು ಸಂತಸವನ್ನು ನೀಡಿದವರು ಚಿತ್ರವೀಣಾ ಗಣೇಶ್ ಚೆನ್ನೈ ಮತ್ತು ಕೊಳಲಿನಲ್ಲಿ ಡಾ. ವಿಜಯ ಗೋಪಾಲ್ ಚೆನ್ನೈ. ಎರಡು ಬೇರೆ ಬೇರೆ ವಾದ್ಯಗಳ ಮಾಧುರ್ಯದ ಅಂಶಗಳನ್ನು ಹದವಾಗಿ ಬೆರೆಸಿ ನೀಡಿದ ಈ ಜೋಡಿ ಸಭಿಕರನ್ನು ಅಕ್ಷರಶಃ ಸಂಮೋಹನಗೊಳಿಸುವಲ್ಲಿ ಯಶಸ್ವಿಯಾಯಿತು. ನವರಾಗರ ಮಾಲಿಕಾ ವರ್ಣ, ಗಾನಮೂರ್ತಿ (ಗಾನಮೂರ್ತೇ) ಆರಭಿ (ಪಂಚ ರತ್ನ) ಆನಂದ ಭೈರವಿ (ಮರಿವೇರೆ) ಕೃತಿಗಳಲ್ಲದೆ ಪ್ರಧಾನವಾಗಿ ಹಂಸಾನಂದಿಯನ್ನು (ಪಾವನಗುರು ಪವನಪುರ) ಆಯ್ದುಕೊಳ್ಳಲಾಯಿತು. ಒಮ್ಮೆ ಪಕ್ಕವಾದ್ಯದವರಾಗಿ ಮತ್ತೊಮ್ಮೆ ಸಹವಾದಕರಾಗಿ ಪರಸ್ಪರ ಅರಿತುಕೊಂಡು ಒಬ್ಬರಿಗೊಬ್ಬರು ಪೂರಕವಾಗಿ, ಈ ಕಲಾವಿದರು ಪರ್ಯಾಯವಾಗಿ ನೀಡಿದ ಆಲಾಪನೆಯ ಶ್ರಾವ್ಯತೆ, ಸ್ವರ ಕಲ್ಪನೆಗಳ ನಡೆ ಬೇಧಗಳು, ಎಲ್ಲೂ ಅಪಸ್ವರವಿಲ್ಲದ ನುಡಿತಗಳು ಶ್ರೋತೃಗಳ ಮುಕ್ತ ಪ್ರಶಂಸೆಗೆ ಪಾತ್ರವಾದವು.…
ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟಕ್ಕೆ ದಿನಾಂಕ 13 ಸೆಪ್ಟೆಂಬರ್ 2024ರ ಶುಕ್ರವಾರದಂದು ವಾಣಿ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಿಲ್ಲಾ ಅಧ್ಯಕ್ಷ ತಾರಾನಾಥ ಗಟ್ಟಿ ಮಾತನಾಡಿ “ದ್ರಾವಿಡ ಭಾಷಾ ವರ್ಗದಲ್ಲಿ ತುಳುವಿಗೆ ವಿಶಿಷ್ಟವಾದ ಸ್ಥಾನ, ಸತ್ವ ಹಾಗೂ ಭಾಷಾ ಸಂಪತ್ತಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನ ಪ್ರಯತ್ನಕ್ಕೆ ಈಗ ಹೆಚ್ಚಿನ ಮಹತ್ವ ಬಂದಿದೆ. ಈಗಾಗಲೇ ಪಾಲ್ತಾಡಿ ರಾಮಕೃಷ್ಣ ಅಚಾರ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪ್ರೌಢ ಶಾಲಾ ಮಟ್ಟದಲ್ಲಿ ಒಂದು ಪಾಠವಾಗಿ ತುಳು ಬಂತು. ಕಳೆದ ಶೈಕ್ಷಣಿಕ ಅವಧಿಯಲ್ಲಿ ಜಿಲ್ಲೆಯಲ್ಲಿ 333 ಮಕ್ಕಳು ತುಳು ಪಾಠದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ಅವರೆಲ್ಲರನ್ನು ಅಕಾಡೆಮಿ ಪುರಸ್ಕರಿಸಿದೆ.” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ…
ಬೆಂಗಳೂರು: ದ್ರಾವಿಡ ಭಾಷಾ ಅನುವಾದಕರ ಸಂಘ ನೀಡುವ ಪ್ರಶಸ್ತಿಗೆ ಈ ಬಾರಿ ಅನುವಾದಕಿ ಗೌರಿ ಕಿರುಬನಂದನ್ ಆಯ್ಕೆಯಾಗಿದ್ದಾರೆ. ದ್ರಾವಿಡ ಭಾಷಾ ಅನುವಾದಕರ ಸಂಘ (ಡಿ. ಬಿ. ಟಿ. ಎ.) ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತಿದೆ. ಗೌರಿ ಕಿರುಬನಂದನ್ ಅವರು ತೆಲುಗು ಭಾಷೆಯ ‘ಇರು ಕೋಡುಗಳ್’ ಕೃತಿಯನ್ನು ತಮಿಳು ಭಾಷೆಗೆ ಅನುವಾದ ಮಾಡಿದ್ದರು. ಈ ಕೃತಿಗೆ ಡಿ. ಬಿ. ಟಿ. ಎ. -2024ರ ಪ್ರಶಸ್ತಿ ಸಂದಿದೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಪಾರ್ವತಿ ಐತಾಳ್, ಕೆ. ಕೆ. ರಂಗಾಧರನ್ ಹಾಗೂ ಕೆ. ಪ್ರಭಾಕರನ್ ಇದ್ದರು. ಪ್ರಶಸ್ತಿ 11,111 ನಗದು ಹಾಗೂ ಪಾರಿತೋಷಕ ಹೊಂದಿದೆ. ದಿನಾಂಕ 26 ಸೆಪ್ಟೆಂಬರ್ 2024ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಂಗಕಲಾವಿದೆ ಲಕ್ಷ್ಮೀಚಂದ್ರಶೇಖರ್ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಿ. ಬಿ. ಟಿ. ಎ. ಅಧ್ಯಕ್ಷೆ ಡಾ. ಸುಷ್ಮಾ ಶಂಕರ್ ತಿಳಿಸಿದ್ದಾರೆ.
ಮಂಗಳೂರು : ಕುಮಾರಿ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್, ಯುವ ಲೇಖಕಿ ಮತ್ತು ವಾಗ್ಮಿ, ತನ್ನ ಬಾಲ್ಯದಿಂದಲೂ ಬರವಣಿಗೆಯ ಉತ್ಸಾಹದಿಂದ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ಇತರ ಹಂತಗಳಲ್ಲಿ ಸಾಧನೆ ಮಾಡಿದ ಇವರು ಎರಡನೇ ಪುಸ್ತಕವನ್ನು ಪ್ರಕಟಿಸಿದ್ದಾರೆ. ಭಾರತ್ @2047 – ಯುವಜನತೆಯ ಪಾತ್ರದಲ್ಲಿ ಅವರು ಮೊದಲ ಯುವ ಲೇಖಕಿಯಾಗಿದ್ದಾರೆ. ಭಾರತ ಸ್ವಾತಂತ್ರ್ಯದ 100ನೇ ವರ್ಷದತ್ತ ಹೆಜ್ಜೆ ಹಾಕುತ್ತಿರುವ ಈ ಅಮೃತ ಕಾಲದಲ್ಲಿ ಯುವಕರ ಪಾತ್ರ ಎಷ್ಟು ಮುಖ್ಯ ಎಂಬ ವಿಚಾರಗಳನ್ನು ಒಳಗೊಂಡ ತನೀಶಾ ಪ್ರಕಾಶನಗಳು ಪ್ರಕಟಿಸಿರುವ ಇಂತಹ ಭವ್ಯವಾದ ವಿಷಯದ ಕುರಿತು ಬರೆಯಲು, ಅಲ್ಲಿ ನಾವು ವೈಭವಯುತವಾಗಿ ಆಚರಿಸಬೇಕು. ಯುವ ಶಕ್ತಿಯ ಆಲೋಚನೆಗಳು, ಯುವಕರು ಹಿಂದೆ ಯಾವ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ ಮತ್ತು ಪ್ರಸ್ತುತ ವಿಷಯಗಳಲ್ಲಿ ಅವರ ಪ್ರಭಾವವು ಗುರಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಭವಿಷ್ಯವನ್ನು ರೂಪಿಸುತ್ತದೆ. ಈ ಪುಸ್ತಕವನ್ನು ಇವರ ಅಜ್ಜ ಮೂಡುಬಿದಿರೆಯ ಎಸ್. ಜಿ. ಟಿ. ಅಲೆಕ್ಸ್ ಮೋನಿಸ್ ಇವರಿಗೆ ಅರ್ಪಿಸಲಾಗಿದೆ. ಇವರು 36 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ…
ಬಂಟ್ವಾಳ : ರಾಜ್ಯಮಟ್ಟದ 7ನೇ ಶಿಕ್ಷಕ ಸಾಹಿತ್ಯ ಸಮ್ಮೇಳನ ದಿನಾಂಕ 05 ಸೆಪ್ಟೆಂಬರ್ 2024 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ, ಕಾಸರಗೋಡಿನ ಶಿಕ್ಷಕ ಹಾಗೂ ಕವಿ ವಿ. ಬಿ. ಕುಳಮರ್ವ, ಡಾ. ಸುರೇಶ ನೆಗಳಗುಳಿ, ಮುನಿರಾಜ ರೆಂಜಾಳ ಮೂಡುಬಿದಿರೆ, ಶಾಂತಾ ಪುತ್ತೂರು, ಬಾಣಸವಾಡಿಯ ಶ್ರೀಮತಿ ಸುಮಲತಾ ಬಿ. ಎಸ್, ಹಂಸಭಾವಿಯ ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ, ಹಾನಗಲ್ ಇಲ್ಲಿನ ಶ್ರೀ ರವಿರಾಜ ತಿರುಮಲೆ ಹಾಗೂ ಬಳಂಜ ಇಲ್ಲಿನ ಶ್ರೀ ರವೀಂದ್ರ ಶೆಟ್ಟಿ ಇವರಿಗೆ ‘ಚುಟುಕು ಚಿನ್ಮಯಿ’ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಸಭಾಂಗಣದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾದ ಈ ಸಮ್ಮೇಳನದಲ್ಲಿ ದ. ಕ. ಜಿಲ್ಲೆಯ ಶಿಕ್ಷಕ ಸಾಹಿತಿಗಳಾದ ಅಶ್ವಥ್ ಎಸ್. ಎಲ್. ಕಾರ್ಕಳ, ಉಡುಪಿಯ ವಿದ್ವಾನ್ ರಘುಪತಿ ಭಟ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ…
ಕಾಸರಗೋಡು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.), ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 10 ನವಂಬರ್ 2024 ಆದಿತ್ಯವಾರದಂದು ಒಂದು ದಿನದ ಕೇರಳ ರಾಜ್ಯ ಮಕ್ಕಳ ಪ್ರಥಮ ಸಾಹಿತ್ಯ ಸಮ್ಮೇಳನ-2024ವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. ಈ ಸಮ್ಮೇಳನದಲ್ಲಿ ಶಾಲಾ ಮಕ್ಕಳ ಕವಿಗೋಷ್ಠಿ, ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಬಹು ಭಾಷಾ ವಿದ್ಯಾರ್ಥಿಗಳ ಕವಿಗೋಷ್ಠಿ ಮತ್ತು ಮಕ್ಕಳ ಸಾಹಿತ್ಯ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಗೋಷ್ಠಿಯ ಅಧ್ಯಕ್ಷತೆಯನ್ನು ಕನ್ನಡ ವಿದ್ಯಾರ್ಥಿಗಳೇ ವಹಿಸಲಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಹುಮುಖ ಪ್ರತಿಭೆಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ, ಪ್ರಾಥಮಿಕ ತರಗತಿಯಿಂದ ಹೈಸ್ಕೂಲು ತನಕ, ಪ್ಲಸ್ ಟು ಅಥವಾ ಪದವಿ ಪೂರ್ವ ತನಕ, ಕಾಲೇಜು ಪದವಿ-ಸ್ನಾತಕೋತ್ತರ ತರಗತಿಗಳವರೆಗಿನ ವಿದ್ಯಾರ್ಥಿಗಳಿಗಾಗಿ ಸ್ವರಚಿತ ಕಥೆ ಮತ್ತು ಕವನಗಳನ್ನು ಆಹ್ವಾನಿಸಲಾಗಿದೆ.…