Subscribe to Updates
Get the latest creative news from FooBar about art, design and business.
Author: roovari
ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಇದರ ‘ಸಿನ್ಸ್ 1999 ಶ್ವೇತಯಾನ-58’ ಕಾರ್ಯಕ್ರಮದಡಿಯಲ್ಲಿ ಆಯೋಜಿಸಿರುವ ಆರ್. ವಿ. ಮೆಲೋಡೀಸ್ ಕೋಟೇಶ್ವರ ತಂಡದ ಭಾವಗೀತೆ ಹಾಗೂ ಭಕ್ತಿ ರಸಮಂಜರಿ ಕಾರ್ಯಕ್ರಮವು ದಿನಾಂಕ 12 ಸೆಪ್ಟೆಂಬರ್ 2024ರಂದು ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ದ್ರಾವಿಡ ಬ್ರಾಹ್ಮಣ ಪರಿಷತ್ ಇದರ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ವೈದ್ಯ ಮಾತನಾಡಿ “ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರುತ್ತಿರುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ. ದೇಗುಲದ ಸೋಣೆ ಆರತಿ ಸಂದರ್ಭ ಭಕ್ತಿ ಸುಧೆಯನ್ನು ಹರಿಸಿ ಮನಸ್ಸನ್ನು ಹಗುರಾಗಿಸಿ, ಭಕ್ತಿ ಮಾರ್ಗಕ್ಕೆ ಕೊಂಡೊಯ್ಯುವ ಪರಿಪಾಟ ಆರೋಗ್ಯಕರ ಲಕ್ಷಣ. ಭಕ್ತಿ ಮಾರ್ಗವು ಮನಸ್ಸಿನ ತುಡಿತಗಳನ್ನು, ಜಂಜಾಟಗಳನ್ನು, ನೋವುಗಳನ್ನು ಮರೆಸುತ್ತದೆ. ಭಕ್ತಿ ಮಾರ್ಗದಲ್ಲಿ ಆನಂದವಿದೆ, ತನ್ಮಯತೆಯ ಭಕ್ತಿಯು ಸರ್ವವನ್ನೂ ಸಮತೋಲನದಲ್ಲಿರಿಸುತ್ತದೆ.” ಎಂದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗಣಪತಿ ಟಿ. ಶ್ರೀಯಾನ್ ಮಾತನ್ನಾಡಿ “ಸಂಸ್ಥೆಯ 25ನೇ ವರ್ಷದ ಕಾರ್ಯಕ್ರಮದ ಉದ್ಘಾಟನೆ ಅವಿಸ್ಮರಣೀಯ. ವರ್ಷಕ್ಕೆ 108 ಕಾರ್ಯಕ್ರಮವನ್ನು…
ಕೋಟ : ಕೋಟತಟ್ಟು ಗ್ರಾ. ಪಂ. ಇವರು ಡಾ. ಕಾರಂತ ಹುಟ್ಟೂರು ಪ್ರತಿಷ್ಠಾನ ಕೋಟ ಇದರ ಸಹಭಾಗಿತ್ವದಲ್ಲಿ ಕೊಡಮಾಡುವ 2024ನೇ ಸಾಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣ ಗೌಡ ಮೈಸೂರು ಅವರು ಅಯ್ಕೆಯಾಗಿದ್ದಾರೆ. “ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತ್ತು ಚೌಕಟ್ಟು ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ದಿನಾಂಕ 10 ಅಕ್ಟೋಬರ್ 2024ರ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಕೋಟ ಕಾರಂತ ಕಲಾಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.” ಎಂದು ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್ ತಿಳಿಸಿದ್ದಾರೆ. 19 ವರ್ಷಗಳಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಈ ಪುರಸ್ಕಾರ ನೀಡಲಾಗುತ್ತಿದೆ.
“ವಿ.ಸೀ. ವೃಷಭೇಂದ್ರ ಸ್ವಾಮಿ ಮುಂತಾಗಿ ಕನ್ನಡದ ಅನೇಕ ಪ್ರಥಮ ವಂದಿತರ ಒಡನಾಟವಿದ್ದು, ದುರ್ಗಾ ಹೈಸ್ಕೂಲು ಅಡೂರು ಮುಳ್ಳೇರಿಯ ದೇಲಂಪಾಡಿ ಬೆಳ್ಳೂರುಗಳಲ್ಲಿ ಮುಖ್ಯೋಪಾಧ್ಯಾಯರಾಗಿದ್ದು ಒಂದುವರೆ ವರ್ಷ ಎ.ಇ.ಓ. ಹುದ್ದೆಯನ್ನು ನಿರ್ವಹಿಸಿದವರು. ಹಳೆ ಕಡತಗಳಿಗೆ ಉತ್ತರ ಕೊಟ್ಟು ಶಾಲಾ ಕಾಂಪೌಂಡ್ ಸರಿಪಡಿಸಿ, ಕಸಕಡ್ಡಿ ಎತ್ತಲಿಕ್ಕೆ ಶ್ರಮದಾನ ಆಯೋಜಿಸಿ ಶಿಕ್ಷಕ ರಕ್ಷಕ ಸಂಘಗಳನ್ನು ಜನಪ್ರಿಯಗೊಳಿಸಿ, ಶಾಲೆಗಳಲ್ಲಿ ನಿಂತೇ ಹೋದಂತಿದ್ದ ವಾರ್ಷಿಕೋತ್ಸವಗಳಿಗೆ ಚಾಲನೆ ಕೊಡಿಸಿದವರು. ಯಕ್ಷಗಾನಾಸಕ್ತಿ ಬಹಳ ಇದ್ದು ತಾಳಮದ್ದಳೆಗಳಿಗೆ ಹಾಜರಾಗುತ್ತಿದ್ದರು. ಪೆರ್ಲ ಕೃಷ್ಣ ಭಟ್ಟ, ಶೇಣಿ ಗೋಪಾಲಕೃಷ್ಣ ಭಟ್ಟ ಮುಂತಾದವರಿಗೆ ಮಾರು ಹೋದವರು. ನಿವೃತ್ತನಾದ ಮೇಲೆ ನಾಲ್ಕನೇ ಬಾರಿಗೆ ಕ.ಸಾ.ಪ. ಕೃಳ ಘಟಕದ ಅಧ್ಯಕ್ಷರಾಗಿ ಒಂಬತ್ತು ಬಾರಿ ಜಿಲ್ಲಾ ಸಾಹಿತ್ಯ ಸಮ್ಮೇಳನಗಳಿಗೆ ಹೆಗಲು ಕೊಟ್ಟವರು. ‘ಯಕ್ಷಗಾನದ ಶಕ ಪುರುಷ ಶೇಣಿ’ ಎಂಬ ಅವರೇ ಬರೆದ ಕೃತಿ ಪ್ರಕಟ ಆಗಲಿದೆ. ಎರಡು ಮೂರು ಕವನ ಸಂಕಲನಗಳನ್ನೂ ಕೊಟ್ಟ ಈ ಸಾಹಿತ್ಯ ಪ್ರಿಯ, ತನ್ನ ಮಕ್ಕಳನ್ನು ಓದಿಸಿ ಉತ್ತಮ ಸ್ಥಿತಿಗೆ ತಂದು ಉದ್ಯೋಗಕ್ಕೆ ಹಚ್ಚಿದ್ದಾರೆ. ಎಸ್.ವಿ. ಎಂದಿಗೂ ಎಲ್ಲ…
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ವತಿಯಿಂದ ಶ್ರೀಮತಿ ಬಿ. ಸರೋಜಮ್ಮ ಪ್ರಾಯೋಜಿತ ಶ್ರೀ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮವು ದಿನಾಂಕ 15 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗಮಂಟಪದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷ ರಾದ ಶ್ರೀ ನೀಲಾವರ ಸುರೇಂದ್ರ ಅಡಿಗ ಇವರ ಅಧ್ಯಕ್ಷತೆಯಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇವರ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ಐರೋಡಿ ಗೋವಿಂದಪ್ಪ ಇವರಿಗೆ ‘ಪುಂಡಲೀಕ ಹಾಲಂಬಿ ಪ್ರಶಸ್ತಿ 2024’ಯನ್ನು ಹಿರಿಯ ಪತ್ರಕರ್ತರಾದ ಶ್ರೀ ಎಸ್. ಜನಾರ್ದನ್ ಮರವಂತೆ ಇವರು ಪ್ರದಾನ ಮಾಡಲಿರುವರು. ಸಭಾ ಕಾರ್ಯಕ್ರಮದ ಬಳಿಕ ವಿದ್ವಾನ್ ಶ್ರೀ ಅಶೋಕ ಆಚಾರ್ಯ ಸಾಯಿಬ್ರಕಟ್ಟೆ ಮತ್ತು ಬಳಗದವರಿಂದ ಭಾವಗಾನ ಕಾರ್ಯಕ್ರಮ ನಡೆಯಲಿದೆ.
ಮಂಜೇಶ್ವರ : ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು ಸಿರಿಗನ್ನಡ ವೇದಿಕೆ ಸಂಸ್ಥೆಗಳ ಕೇರಳ ಗಡಿನಾಡು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಶ್ರಾವಣ ಮಾಸದ ಗಮಕ ಶ್ರಾವಣ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ದಿನಾಂಕ 4 ಸೆಪ್ಟೆಂಬರ್ 2024ರಂದು ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಮಾತನಾಡಿ “ಕಲೆ ಮತ್ತು ಸಾಹಿತ್ಯಗಳು ಸರಸ್ವತೀ ದೇವಿಯು ಮನುಜರಿಗೆ ಕರುಣಿಸುವ ಮಹೋನ್ನತವಾದ ವರಗಳು. ಅವುಗಳು ಭಾರತೀಯ ಸಂಸ್ಕೃತಿಯ ಕಣ್ಣುಗಳು. ಗಮಕ ಕಲಾ ಪರಿಷತ್ ಮತ್ತು ಸಿರಿಗನ್ನಡ ವೇದಿಕೆಗಳು ಸಂಯುಕ್ತವಾಗಿ ನಡೆಸಿಕೊಂಡು ಬರುತ್ತಿರುವ ಸಾಹಿತ್ಯ ಸಮಾರಾಧನೆಗಳು ಸಂಪೂರ್ಣ ಯಶಸ್ವಿಯಾಗಿ ನೆರವೇರುತ್ತಿವೆ” ಎಂದು ಹೇಳಿದ್ದಾರೆ. ಗಮಕ ಕಲಾ ಪರಿಷತ್ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೇಕೆರೆ ಶಂಕರನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ, ಸಿರಿಗನ್ನಡ ವೇದಿಕೆಯ ಗಡಿನಾಡ ಘಟಕದ…
ಮಂಗಳೂರು : ಉಡುಪಿ, ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇದರ ವತಿಯಿಂದ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ಸಹಯೋಗದಲ್ಲಿ 31ನೇ ವರ್ಷದ ‘ಮಕ್ಕಳ ಧ್ವನಿ 2024’ – ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನವು ದಿನಾಂಕ 14 ಸೆಪ್ಟೆಂಬರ್ 2024ರಂದು ಸುರತ್ಕಲ್ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಇವರು ವಹಿಸಲಿದ್ದು, ಮಂಗಳೂರಿನ ವಾಗೀಶ್ವರೀ ಪ್ರಕಾಶನದ ಶ್ರೀ ವಾಗೀಶ್ವರೀ ಶಿವರಾಂ ಇವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್ನ ಅಧ್ಯಕ್ಷ ಜಯಚಂದ್ರ ಹತ್ವಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಈ ಕಾರ್ಯಕ್ರಮದಲ್ಲಿ ಅಭಿನಯ ಗೀತೆಗೋಷ್ಠಿ, ವಿವೇಕ ಬಾಲಕಿಯರ ಪ್ರೌಢ ಶಾಲೆಯ ಕುಮಾರಿ ಮಾನಸ ಜಿ. ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ…
ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ-ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ. ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ ಅಕಾಡೆಮಿಯ ಕಾರ್ಯಸೂಚಿಯನ್ವಯ ಅರ್ಹ-ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕಾರ್ಯನಿರ್ವಹಿಸಲು ಬಯಸಿದ್ದಲ್ಲಿ ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಪೌಂಡ್ ಹತ್ತಿರ ಮಡಿಕೇರಿ ಇವರಿಗೆ ಪತ್ರ ಬರೆಯುವಂತೆ ತಿಳಿಸಲಾಗಿದೆ ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಇವರು ತಿಳಿಸಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆ ಗೋಣಿಕೊಪ್ಪಲು ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 11 ಸೆಪ್ಟೆಂಬರ್ 2024ರಂದು ಜರುಗಿದ ಕಲಾವಿದ ದಿ. ಶ್ರೀನಿವಾಸ್ ನೆನಪು ನುಡಿ ಮತ್ತು ಗಾನ ನಮನ ಕಾರ್ಯಕ್ರಮವನ್ನು ‘ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನ್ನು’ ಎನ್ನುವ ಗಾಯನದೊಂದಿಗೆ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ನಿನಾದ ಸಂಗೀತ ನೃತ್ಯ ಸಂಸ್ಥೆಯ ಅಧ್ಯಕ್ಷೆ ಚೇಂದಿರ ನಿರ್ಮಲ ಬೋಪಣ್ಣ ಇವರು ಮಾತನಾಡಿ “ದಿ. ವಿ.ಟಿ. ಶ್ರೀನಿವಾಸ್ ಸಂಗೀತ ರಂಗದಲ್ಲಿ ಅತ್ಯದ್ಭುತ ಸಾಧನೆ ಮಾಡಿದಂತಹ ಕಲಾವಿದರಾಗಿದ್ದು, ತಬಲ ಕ್ಯಾಸಿಯೋ ವಾದನಗಳಲ್ಲಿ ಪರಿಣಿತರಾಗಿದ್ದರು. ಯಾವುದೇ ರಾಗವನ್ನು ನಿಮಿಷ ಮಾತ್ರದಲ್ಲಿ ಕ್ಯಾಸಿಯೋದಲ್ಲಿ ಅಳವಡಿಸುವ ಕಲೆ ಹೊಂದಿದ್ದರು. ಅಜಾತಶತ್ರುವಾಗಿದ್ದ ಅವರು ಸಾವಿರಾರು ಸಂಗೀತ ಮತ್ತು ನೃತ್ಯ ಶಿಷ್ಯರನ್ನು ಹೊಂದಿದ್ದು ಅವರ ನಿಧನವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು…
ಮೈಸೂರು : ಧ್ವನಿ ಫೌಂಡೇಷನ್ ಇದರ ವತಿಯಿಂದ ‘ಸ್ವರ ಕುಟೀರ’ ಸಂಗೀತ ನೃತ್ಯ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದಿನಾಂಕ 22 ಸೆಪ್ಟೆಂಬರ್ 2024ರಂದು ಸಂಜೆ 5-30 ಗಂಟೆಗೆ ಮೈಸೂರಿನ ದಟ್ಟಗಳ್ಳಿ, ಸೋಮನಾಥ ನಗರದಲ್ಲಿ ಆಯೋಜಿಸಲಾಗಿದೆ. ಮೈಸೂರಿನ ಹಿಂದೂಸ್ತಾನಿ ಗಾಯಕರಾದ ಶ್ರೀಮತಿ ಶಾರದಾ ಭಟ್ ಕಟ್ಟಿಗೆ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವನ್ನು ಸನ್ಮಾನ್ಯ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಇವರು ಉದ್ಘಾಟಿಸಲಿದ್ದು, ಚಲನಚಿತ್ರ ನಟರಾದ ಶ್ರೀ ಬಿ. ಸುರೇಶ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾದ ಖ್ಯಾತ ಹಿಂದೂಸ್ತಾನಿ ಗಾಯಕರಾದ ಉಸ್ತಾದ್ ಫಯಾಜ್ ಖಾನ್ ಇವರಿಂದ ಗಾಯನ ಪ್ರಸ್ತುತಿ ನಡೆಯಲಿದೆ. ಮಂಗಳೂರಿನ ಸಂದೇಶ ಲಲಿತ ಕಲಾ ಮಹಾವಿದ್ಯಾಲಯದಲ್ಲಿ ನಾನು ಪದವಿ ಓದಿದ್ದು, ಅಲ್ಲಿ ಭರತನಾಟ್ಯಮ್ ನನ್ನ ಪದವಿ ಅಧ್ಯಯನದ ಒಂದು ವಿಷಯವಾಗಿತ್ತು. ಸಂದೇಶದ ತರಗತಿ ಕೋಣೆಗಳಿಂದ ಏಕಕಾಲದಲ್ಲಿ ಸಂಗೀತದ ನಾದ, ನೃತ್ಯದ ಹೆಜ್ಜೆಯ ಸದ್ದು, ತಬಲದ ಲಯ, ವಯಲಿನ್ ನ ನಿನಾದ ಕೇಳುವಾಗ ಗಂಧರ್ವ ಲೋಕವೊಂದರಲ್ಲಿ ವಿಹರಿಸುವ ಹಾಗಿನ ಅನುಭೂತಿಯೊಂದು ನನ್ನೊಳಗೆ…
ಬೆಂಗಳೂರು : ಯಕ್ಷದೇಗುಲ (ರಿ.) ಬೆಂಗಳೂರು ಇವರ ಸಂಯೋಜನೆಯಲ್ಲಿ ಕೆ. ಮೋಹನ್ ನಿರ್ದೇಶನದ ‘ಯಕ್ಷಗಾನ ಉತ್ಸವ’ವನ್ನು ದಿನಾಂಕ 5 ಅಕ್ಟೋಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಗವಿಪುರಂ ಉದಯ ಭಾನು ಕಲಾ ಸಂಘ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ‘ಭರತಾಗಮನ’ ಯಕ್ಷಗಾನ ತಾಳಮದ್ದಳೆ ಮತ್ತು ‘ಕೃಷ್ಣಂ ವಂದೇ ಜಗದ್ಗುರುಂ’ ಮಕ್ಕಳಿಂದ ಯಕ್ಷಗಾನ ಪ್ರದರ್ಶನವಿದೆ. ಮಧ್ಯಾಹ್ನ ಯಕ್ಷಗಾನ ನೃತ್ಯ ಸ್ಪರ್ಧೆ ಹಾಗೂ ಹಿರಿಯ ಯಕ್ಷಗಾನ ಕಲಾವಿದರಾದ ಆರ್ಗೋಡು ಮೋಹನ್ ದಾಸ್ ಶೆಣೈ ಇವರಿಗೆ ಯಕ್ಷದೇಗುಲ ಸನ್ಮಾನ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ರಾವಣ ವದೆ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.