Subscribe to Updates
Get the latest creative news from FooBar about art, design and business.
Author: roovari
ರಾಮನಗರ : ವಿಶ್ವ ಕನ್ನಡ ವಾಗ್ವಿಲಾಸ ಸಾಹಿತ್ಯ ಬಳಗ ಇದರ ವತಿಯಿಂದ ಮಹಮದ್ ರಫಿ ಇವರ ಸಾರಥ್ಯದಲ್ಲಿ ‘ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಕವಿಗೋಷ್ಠಿ’ಯನ್ನು ದಿನಾಂಕ 06 ಅಕ್ಟೋಬರ್ 2024ರಂದು ಬೆಳಿಗ್ಗೆ 4-00 ಗಂಟೆಗೆ ರಾಮನಗರ ಜಿಲ್ಲೆ ಚನ್ನಪಟ್ಟಣ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಿಂಭಾಗದಲ್ಲಿರುವ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ. ಆದರ್ಶ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ಪ್ರದಾನ, ವಿಶ್ವ ಕನ್ನಡ ವಾಗ್ವಿಲಾಸ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ, ಆದರ್ಶ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿ ಪ್ರದಾನ, ಉಪನ್ಯಾಸ, ಕೃತಿ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಸಾಹಿತಿಗಳಾದ ಶ್ರೀಮತಿ ಎಂ.ಎಸ್. ಆಶಾಲತ (ಶಿವೆಸುತೆ) ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನವರಾತ್ರಿ ಪ್ರಯುಕ್ತ ಪ್ರಸ್ತುತ ಪಡಿಸುವ ‘ವಿಶೇಷ ಸಂಗೀತ ಕಛೇರಿ’ಯನ್ನು ದಿನಾಂಕ 6 ಅಕ್ಟೋಬರ್ 2024ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರ ಶಿಷ್ಯೆ ಚೆನ್ನೈಯ ನಮೃತಾ ಎಸ್. ಇವರ ಹಾಡುಗಾರಿಕೆಗೆ ಪುತ್ತೂರಿನ ಅನನ್ಯ ಪಿ.ಎಸ್. ಮಯಲಿನ್ ಮತ್ತು ಆಚಿಂತ್ಯ ಕೃಷ್ಣ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾಲಯದ ಮಾನವಿಕ ವಿಭಾಗ ಪ್ರಭಾರ ಮುಖ್ಯಸ್ಥರಾದ ಡಾ. ಸಾಯಿಗೀತಾ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ .(ಸ್ವಾಯತ್ತ) ಕಾಲೇಜಿನ ಸುವರ್ಣ ಮಹೋತ್ಸವ ಸಭಾಭನದಲ್ಲಿ ಹಿಂದಿ ದಿವಸ್ ಸಮಾರೋಹ್ ಹಾಗೂ ಡಾ. ಶ್ರೀಧರ ಎಚ್.ಜಿ. ಇವರ ‘ಶಿಖಂಡಿ’ ಪುಸ್ತಕವನ್ನು ಡಾ. ದುರ್ಗಾರತ್ನ ಸಿ. ಅವರು ಹಿಂದಿಯಲ್ಲಿ ಅನುವಾದಿಸಿದ ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 25 ಸೆಪ್ಟೆಂಬರ್ 2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಇದರ ಹಿಂದಿ ವಿಭಾಗ ಮುಖ್ಯಸ್ಥರಾದ ಡಾ. ಮುಕುಂದ ಪ್ರಭು ಮಾತನಾಡಿ “ಯಾವುದೇ ರಾಜ್ಯ, ರಾಷ್ಟ್ರ ಭಾಷೆಯ ಹೊರತಾಗಿ ಹಿಂದಿಗೆ ಸಮಸ್ತ ರಾಷ್ಟ್ರವನ್ನು ಒಗ್ಗೂಡಿಸುವ ಶಕ್ತಿ ಇದೆ. ಎಂದರು. ಕಾರ್ಯಕ್ರಮದ ಅಧ್ಯಕತೆ ವಹಿಸಿದ್ದ ಕಾಲೇಜಿನ ಶ್ರೀಪತಿ ಕಲ್ಲೂರಾಯ ಮಾತನಾಡಿ “ಸಮಯ ಬದಲಾಗುತ್ತಾ ಹೋದಂತೆ ಹಿಂದಿ ಭಾಷೆಯ ಜ್ಞಾನವನ್ನು ಜನರು ಮರೆಯುತ್ತಿದ್ದಾರೆ. ಮಾತನಾಡಲು ಮಾತ್ರ ಭಾಷೆಯನ್ನು ಬಳಕೆ ಮಾಡದೆ, ಶೈಕ್ಷಣಿಕ ತಳಹದಿಯಲ್ಲಿ ಬಳಕೆ ಮಾಡಿದಾಗ ಅದು ಅದರ ಹೊಳಪು ಕಳೆದುಕೊಳ್ಳುವುದಿಲ್ಲ.” ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ…
ಧರ್ಮಸ್ಥಳ : ‘ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ’ ಇದರ ವತಿಯಿಂದ ಐವತ್ತರ ವರುಷ – ನವೋಲ್ಲಾಸದ ಹರುಷ ಪ್ರಯುಕ್ತ ದಿನಾಂಕ 10 ಅಕ್ಟೋಬರ್ 2024ರ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಗ್ಗಡೆಯವರ ಬೀಡಿನಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ‘ಸುವರ್ಣ ಪರ್ವ’ವನ್ನು ಉದ್ಘಾಟಿಸಲಿದ್ದಾರೆ. ಮಕ್ಕಳ ಮೇಳದ ಬಾಲ ಕಲಾವಿದರಿಂದ ‘ಹೂವಿನ ಕೋಲು’ ಪ್ರದರ್ಶನ ನಡೆಯಲಿದೆ. ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಎಚ್. ಶ್ರೀಧರ ಹಂದೆಯವರ ಕನಸಿನ ಕೂಸು ‘ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ’. ಈ ಇಬ್ಬರೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು. 1975ರ ಅಕ್ಟೋಬರ್ 10ರಂದು ಸಾಂಕೇತಿಕ ಉದ್ಘಾಟನೆ ಕಂಡ ಮಕ್ಕಳ ಮೇಳವು ಮಂಗಳೂರಿನಲ್ಲಿ ಮೊದಲ ದಾಖಲೆಯ ಪ್ರದರ್ಶನ ನೀಡಿದ್ದು ಇದೀಗ ಇತಿಹಾಸ. 1978ರಲ್ಲಿ ಯಕ್ಷಗಾನವನ್ನು ಪ್ರಪ್ರಥಮ ಸೀಮೋಲ್ಲಂಘನಗೈದ ಜಾಗತಿಕ ದಾಖಲೆಯ ಮಕ್ಕಳ ಮೇಳವು ಮತ್ತೆ ಎರಡು ಬಾರಿ ವಿದೇಶದ ಮಣ್ಣಿನಲ್ಲಿ ಕಾಲಿಟ್ಟಿತು. ಇದುವರೆಗೂ ದೇಶದ ನಾನಾ ರಾಜ್ಯಗಳಲ್ಲಿ, ರಾಜ್ಯದ ಬೇರೆ ಬೇರೆ…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಂಗಳೂರಿನ ಎಚ್.ಎಸ್. ಸತ್ಯನಾರಾಯಣ (ವಿಮರ್ಶೆ), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರುಗಳಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ದಿನಾಂಕ 01 ನವೆಂಬರ್ 2024ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಿತಿಯ ಸಂಚಾಲಕಿಯಾದ ಉಡುಪಿ ಸಂಧ್ಯಾ ಶೆಣೈ ತಿಳಿಸಿರುತ್ತಾರೆ. ಅಂಬ್ರಯ್ಯ ಮಠ ಎಚ್.ಎಸ್. ಸತ್ಯನಾರಾಯಣ ಡಾ. ಉಮೇಶ್ ಪುತ್ರನ್
ಮಂಗಳೂರು : ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಸಹಯೋಗದಲ್ಲಿ ದಿ. ಪ್ರೊ. ಅಮೃತ ಸೋಮೇಶ್ವರ ಸವಿ ನೆನಪಿನಲ್ಲಿ ‘ಬಹುಭಾಷಾ ಕವಿಗೋಷ್ಠಿ ಮತ್ತು ತುಳು ಕವಿಗೋಷ್ಠಿ’ಯನ್ನು ದಿನಾಂಕ 4 ಅಕ್ಟೋಬರ್ 2024ರಂದು ಸಂಜೆ 4-00 ಗಂಟೆಗೆ ಕುದ್ರೋಳಿ ಸಂತೋಷಿ ಕಲಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಸಂಗಾತಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಶೆಟ್ಟಿ ಇವರು ಉಪಸ್ಥಿತಿಯಲ್ಲಿ ಹಿರಿಯ ವಕೀಲರಾದ ಶ್ರೀ ಪದ್ಮರಾಜ್ ಆರ್. ಪೂಜಾರಿ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಡಾ. ಮೀನಾಕ್ಷಿ ರಾಮಚಂದ್ರ ಇವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ಮತ್ತು ಡಾ. ವಸಂತ ಕುಮಾರ್ ಪೆರ್ಲ ಇವರ ಅಧ್ಯಕ್ಷತೆಯಲ್ಲಿ ತುಳು ಕವಿಗೋಷ್ಠಿ ನಡೆಯಲಿದೆ.
ಮಡಿಕೇರಿ : ಕನ್ನಡಸಿರಿ ಸ್ನೇಹ ಬಳಗ ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ‘ಶರದೃವಿನ ಐಸಿರಿ’ ಕವಿಗೋಷ್ಠಿ ಮತ್ತು ಸಮೂಹ ಜಾನಪದ ನೃತ್ಯ ಮತ್ತು ಘಟಕ ಉದ್ಘಾಟನೆ ಕಾರ್ಯಕ್ರಮವನ್ನು ದಿನಾಂಕ 04 ಅಕ್ಟೋಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಸೋಮವಾರಪೇಟೆಯ ಮಹಿಳಾ ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಶ್ರೀ ಲೋಕೇಶ್ ಸಾಗರ್ ಬಿ.ಎಸ್. ಇವರ ಅಧ್ಯಕ್ಷತೆಯಲ್ಲಿ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿಗಳು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಶಿಕ್ಷಕರು ಮತ್ತು ಸಾಹಿತಿ ಶ್ರೀ ಕಾಜೂರು ಸತೀಶ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.
ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲಿರುವ 12ನೇ ವರ್ಷದ ನುಡಿಹಬ್ಬ, ಯಕ್ಷಗಾನ ತಾಳಮದ್ದಳೆ ಸಪ್ತಾಹ ‘ದ್ವಾದಶ ಸರಣಿ’ಯು ದಿನಾಂಕ 11 ನವೆಂಬರ್ 2024ರಿಂದ ನವಂಬರ್ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ವಿವಿಧ ತಂಡಗಳ ಸಂಯೋಜನೆಯಲ್ಲಿ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಇತ್ತೀಚೆಗೆ ಕದ್ರಿ ದೇವಳದ ವಠಾರದಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿ ಮಾತನಾಡಿದರು. ‘ನವಂಬರ 11 ರ ಸೋಮವಾರ ಸಂಜೆ ಘಂಟೆ 4.00ಕ್ಕೆ ಉದ್ಘಾಟನೆಯೊಂದಿಗೆ ಆರಂಭವಾಗುವ ಸಪ್ತಾಹದಲ್ಲಿ ಜಿಲ್ಲೆಯ ಹೆಸರಾಂತ ಏಳು ಯಕ್ಷಗಾನ ಕಲಾಸಂಘಗಳು ಭಾಗವಹಿಸಲಿದ್ದು, ಈಗಾಗಲೇ ತಾಳಮದ್ದಳೆ ಕ್ಷೇತ್ರದಲ್ಲಿ ಖ್ಯಾತರಾದ ಹಿರಿಯ ಯಕ್ಷಗಾನ ಕಲಾವಿದರನ್ನು ಬಳಸಿಕೊಂಡು ವಿವಿಧ ಪ್ರಸಂಗಗಳನ್ನು ಪ್ರಸ್ತುತಪಡಿಸಲಿವೆ’ ಎಂದವರು ತಿಳಿಸಿದರು. ‘ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಮೂಡಿ ಬರಲಿರುವ ದ್ವಾದಶ…
ಬೆಳ್ತಂಗಡಿ : ಉಜಿರೆಯ ಕುರಿಯ ವಿಠಲ ಶಾಸ್ತ್ರೀ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ದಿನಾಂಕ 23 ಸೆಪ್ಟೆಂಬರ್ 2024ರಂದು ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ಯಕ್ಷಗಾನ ಮಹೋಪಾಧ್ಯಾಯ ನೆಡ್ಲೆ ನರಸಿಂಹ ಭಟ್ ಸಂಸ್ಮರಣೆಯ ಯಕ್ಷಸಾಂಗತ್ಯ ತಾಳಮದ್ದಳೆ ಸಪ್ತಾಹ ‘ಯಕ್ಷಾವತರಣ -5’ ಮತ್ತು ‘ಯಶೋ’ ಯಕ್ಷ ನಮನ ಗಾನ-ನೃತ್ಯ-ಚಿತ್ರ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಹಿರಿಯ ಯಕ್ಷಗಾನ ಅರ್ಥಧಾರಿ, ವಿಮರ್ಶಕ ಡಾ. ಪ್ರಭಾಕರ ಜೋಶಿ ಇವರು ಮಾತನಾಡಿ “ತೆಂಕು-ಬಡಗುತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಚೆಂಡೆ-ಮದ್ದಳೆ ವಾದನವನ್ನು ಅಳವಡಿಸಿಕೊಂಡು, ಸರಳ ಬದುಕು ವ್ಯಕ್ತಿತ್ವ, ತ್ಯಾಗಶೀಲತೆಯಿಂದ ಶ್ರೇಷ್ಠ ಕಲಾವಿದರಾಗಿ ನೆಡ್ಲೆನರಸಿಂಹ ಭಟ್ ಪರಿಪೂರ್ಣ ಅಧ್ಯಾಪಕರಾಗಿ ಪ್ರಾತಃಸ್ಮರಣೀಯರು. ರಸಭಾವಪೂರ್ಣವಾಗಿ ಚೆಂಡೆ ನುಡಿಸಿ ಎಲ್ಲರಿಗೂ ಗುರುಗಳಾಗಿ ಕುಲಪತಿಯಂತೆ ಮಾರ್ಗದರ್ಶನ ನೀಡಿ ಶಿಷ್ಯಗಡಣವನ್ನೇ ಸೃಷ್ಟಿಸಿದವರು. ಯಕ್ಷಾವತರಣ ಮೂಲಕ ಅವರನ್ನು ಕುರಿಯ ಪ್ರತಿಷ್ಟಾನ ಸಂಸ್ಮರಿಸುತ್ತಿರುವುದು ಔಚಿತ್ಯಪೂರ್ಣ” ಎಂದು ನುಡಿದರು. ಸಪ್ತಾಹವನ್ನು ದೀಪ ಪ್ರಜ್ವಲಿಸಿ…
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 16 ನವೆಂಬರ್ 2024ರಂದು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜರುಗಲಿದ್ದು, ಆ ಪ್ರಯುಕ್ತ ಸಮ್ಮೇಳನದ ಸಿದ್ಧತಾ ಪೂರ್ವಭಾವಿ ಸಭೆಯು ದಿನಾಂಕ 27 ಸೆಪ್ಟೆಂಬರ್ 2024ರಂದು ಕ.ಸಾ.ಪ. ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆಯವರ ಅಧ್ಯಕ್ಷತೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ “ಕಾಪು ತಾಲೂಕು ಕಲೆ, ಸಾಹಿತ್ಯ, ಜಾನಪದ, ಧಾರ್ಮಿಕ, ಸಾಂಸ್ಕೃತಿಕ, ಐತಿಹಾಸಿಕ ವಿಶಿಷ್ಠ ಪರಂಪರೆಯನ್ನು ಹೊಂದಿದ ತಾಲೂಕು ಆಗಿದೆ. ಕಾಪು ನೂತನ ತಾಲೂಕು ಆಗಿ ರಚನೆಯಾದಂದಿನಿಂದ ನಿರಂತರ ಐದು ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ರಾಜ್ಯದ ಏಕೈಕ ತಾಲೂಕು ಎಂಬ ಹೆಗ್ಗಳಿಕೆ ಈ ತಾಲೂಕು ಹೊಂದಿದ್ದು 6ನೇ ಸಮ್ಮೇಳನಕ್ಕೆ ಸಿದ್ಧತೆಯಲ್ಲಿರುವುದು ಅಭಿನಂದನೀಯ” ಎಂದರು. ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಮಾತನಾಡಿ ಸಾಹಿತ್ಯ ಸಮ್ಮೇಳನ ಎಂಬುದು ತಾಲೂಕಿನ…