Subscribe to Updates
Get the latest creative news from FooBar about art, design and business.
Author: roovari
ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಇತಿಹಾಸ ಪ್ರಾಧ್ಯಾಪಕ, ಲೇಖಕ ಹಾಗೂ ಹಿರಿಯ ಪತ್ರಕರ್ತರಾದ ಪ್ರೊ. ಪಿ. ಕೆ. ಮೊಯ್ಲಿ ದಿನಾಂಕ 21 ನವೆಂಬರ್ 2024ರಂದು ಸ್ವಗೃಹದಲ್ಲಿ ನಿಧನರಾದರು. ಆರು ಮಂದಿ ಪುತ್ರಿಯರು, ಅಳಿಯಂದಿರು ಹಾಗೂ ಅಪಾರ ಶಿಷ್ಯ ವೃಂದವನ್ನು ಶ್ರೀಯುತರು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂಲತಃ ಪಣಂಬೂರಿನವರಾದ ಪ್ರೊ. ಪಿ. ಕೆ. ಮೊಯ್ಲಿ ಸುರತ್ಕಲ್ ವಿದ್ಯಾದಾಯಿನೀ ಪ್ರೌಢಶಾಲೆಯ ಮೊದಲ ತಂಡದ ವಿದ್ಯಾರ್ಥಿಯಾಗಿದ್ದರು. ಜಿಲ್ಲಾ ಬೋರ್ಡ್ ಇದರ ಆಡಳಿತಕ್ಕೊಳಪಟ್ಟ ಮೂಡಬಿದ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಸೇರಿ ಮುಂದೆ ಮಂಗಳೂರಿನಲ್ಲಿ ಶಿಕ್ಷಕ ತರಬೇತಿ, ದಕ್ಷಿಣ ಭಾರತ ಹಿಂದೀ ಪ್ರಚಾರ ಸಭೆಯ ರಾಷ್ಟ್ರಭಾಷಾ ಪ್ರವೀಣ ಪದವಿ, ಬಿ. ಎ. ಪದವಿ ಪಡೆದರು. ಪಂಜದಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆಗೆ ಸೇರಿ ಮುಂದೆ ಬೈಂದೂರು, ಮುಡಿಪು, ಕಾರ್ಕಳಗಳಲ್ಲಿ ಪ್ರೌಢಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಬನಾರಾಸ್ ವಿಶ್ವವಿದ್ಯಾನಿಲಯದಿಂದ ಇತಿಹಾಸ ವಿಷಯದಲ್ಲಿ ಎಂ. ಎ. ಪದವಿಯನ್ನು ಪಡೆದು ಪದವಿ ಪೂರ್ವ ಕಾಲೇಜಿನಲ್ಲಿ…
ಸಾಲಿಗ್ರಾಮ : ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ತನ್ನ ಐವತ್ತರ ಸಂಭ್ರಮಾಚರಣೆಯ ಸುವರ್ಣ ಪರ್ವದ ಮೂರನೆಯ ಕಾರ್ಯಕ್ರಮವನ್ನು ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ (ರಿ) ಪಾರಂಪಳ್ಳಿ, ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಾರ್ಕಡ ಗೆಳೆಯರ ಬಳಗದ ಜಂಟಿ ನೆರವಿನೊಂದಿಗೆ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ 23 ನವಂಬರ್ 2024ರ ಶನಿವಾರದಂದು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಅನುಪಮವಾದ ಕೃಷಿ ಮಾಡಿದ ನಿವೃತ್ತ ಅಧ್ಯಾಪಕ, ಯಕ್ಷ ಗುರು, ಲೇಖಕ, ಹವ್ಯಾಸಿ ಯಕ್ಷಗಾನ ಮತ್ತು ನಾಟಕ ಕಲಾವಿದರಾದ ಮಣೂರಿನ ಎಂ. ಎನ್. ಮಧ್ಯಸ್ಥರಿಗೆ ಮಕ್ಕಳ ಮೇಳದ ಸುವರ್ಣ ಪರ್ವ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಗುರುನರಸಿಂಹ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೆ. ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ನಿವೃತ್ತ ಅಂಚೆ ಪಾಲಕ ಹಾಗೂ ಪ್ರಗತಿಪರ ಕೃಷಿಕರಾದ ಪಾರಂಪಳ್ಳಿ ಪಿ. ಸದಾಶಿವ ಮಧ್ಯಸ್ಥ ಹಾಗೂ ಕೆನರಾಬ್ಯಾಂಕ್…
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘ ಹಾಗೂ ಆಂಗ್ಲ ಭಾಷಾ ವಿಭಾಗದ ವತಿಯಿಂದ ಆರ್. ಕೆ. ನಾರಾಯಣ್ ಅವರ ಕಥೆ ಆಧಾರಿತ ‘ದ ವಾಚ್ ಮ್ಯಾನ್ ಆಫ್ ದ ಲೇಕ್ʼ ಎಂಬ ನಾಟಕವನ್ನು ದಿನಾಂಕ 07 ನವೆಂಬರ್ 2024ರಂದು ಪ್ರದರ್ಶಿಸಲಾಯಿತು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಶ್ರೀದೇವಿ ಎಮ್. ನಾಟಕವನ್ನು ನಿರ್ದೇಶಿಸಿದ್ದರು. ವಿದ್ಯಾರ್ಥಿಗಳಾದ ಬಿಂದು ಕೆ. ಜೆ., ವರ್ಷ, ಗೀತಾಂಜಲಿ ಕೆ. ಎನ್., ನಂದಿತ, ಶಿಲ್ಪಶ್ರೀ, ಚಂದನ್ ಪಿ., ಚಿನ್ಮಯ್ ಎಸ್., ಶೋಭಿತಾ ಸಿ. ಎಚ್., ರಕ್ಷ, ಪ್ರಥ್ವಿ, ಸಮೀಕ್ಷಾ ಎಚ್. ಎಮ್., ಆಕಾಶ್ ರೈ, ತೇಜಸ್, ಮೈತ್ರೇಯಿ ಹಾಗೂ ಅನ್ವಿತಾ ನಾಟಕದಲ್ಲಿ ಅಭಿನಯಿಸಿದರು. ವಿದ್ಯಾರ್ಥಿನಿ ಬಿಂದು ಕೆ.ಜೆ. ಸ್ವಾಗತಿಸಿ, ಸಾಹಿತ್ಯ ಸಂಘದ ಸಂಯೋಜಕರಾದ ವಿದ್ಯಾಪಾರ್ವತಿ ಪಿ. ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಶಿರ್ವ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ತಿಂಗಳ ಸಡಗರ -2024’ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮ ದಿನಾಂಕ 19 ನವೆಂಬರ್ 2024ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಕೋಡು ಪಾಲಮೆ ತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಇವರನ್ನು ಸನ್ಮಾನಿಸಲಾಯಿತು. ಅಭ್ಯಾಗತರನ್ನು ಸನ್ಮಾನಿಸಿ ಮಾತನಾಡಿದ ಶ್ರೀಕ್ಷೇತ್ರ ಬಂಟಕಲ್ಲು ದೇವಳದ ನಿಕಟಪೂರ್ವ ಆಡಳಿತ ಮೊಕ್ತೇಸರ ಹಾಗೂ ಬೆಳ್ಳೆ ಗ್ರಾ.ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ “ಯಕ್ಷಗಾನ ಕಲೆಯನ್ನು ಸಂಪ್ರದಾಯ ಬದ್ಧವಾಗಿ ಅರಗಿಸಿ ಕೊಂಡವರು ಕೋಡು ಪಾಲಮೆ ತೋಟದ ಮನೆ ಶ್ಯಾಮರಾಯ ರಾವ್. ಶನಿಕಥೆ ಎನ್ನುವುದು ಕಥೆಯೂ ಹೌದು, ಪೂಜಾ ಭಾಗವೂ ಹೌದು. ಭಾಗವತಿಕೆಯನ್ನು ವೃತ್ತಿಯಾಗಿ ತೆಗೆದುಕೊಳ್ಳದೆ ಭಾವನಾತ್ಮಕವಾಗಿ ಭಕ್ತಿಪ್ರಧಾನವಾಗಿ ಕಳೆದ 40 ವರ್ಷಗಳಿಂದ ಸೇವಾ ರೂಪದಲ್ಲಿ ಸಮರ್ಪಿಸಿ ಸಂತೃಪ್ತಿ ಕಂಡಿದ್ದಾರೆ. ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆಯೇ ಯಕ್ಷಗಾನ” ಎಂದರು. ಜಿಲ್ಲಾ ಕ. ಸಾ. ಪ. ಗೌರವ ಕೋಶಾಧ್ಯಕ್ಷ ಮನೋಹರ್…
ಬಾರ್ಕೂರು : ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಬಾರಕೂರು ಇದರ ಜಂಟಿ ಆಶ್ರಯದಲ್ಲಿ ‘ಕನಕ ಜಯಂತಿ’ ಕಾರ್ಯಕ್ರಮವು ದಿನಾಂಕ 18 ನವೆಂಬರ್ 2024ರ ಸೋಮವಾರದಂದು ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಂಗಳೂರು ಬಿ. ಬಿ. ಎಂ. ಪಿ. ಇದರ ಹೆಚ್ಚುವರಿ ಆಯುಕ್ತರಾದ ಶ್ರೀ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಮಾತನಾಡಿ “500 ವರ್ಷಗಳಿಗೂ ಹಿಂದೆ ಜೀವಿಸಿದ್ದ ಕನಕದಾಸರು ಇಂದೂ ನಮಗೆ ಪ್ರಸ್ತುತ. ಎಲ್ಲಾ ದಾಸರು ಕೀರ್ತನೆಗಳನ್ನು ಬರೆದಿದ್ದರೂ ಕನಕದಾಸರು ಅವರಲ್ಲಿ ಶ್ರೇಷ್ಠರಾಗಿ ಕಂಡುಬರುತ್ತಾರೆ. ಅದಕ್ಕೆ ಕಾರಣ ಕನಕದಾಸರು ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವುದಕ್ಕೆ ಮಾಡಿದ ಪ್ರಯತ್ನ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ರತ್ನಗಳಾದ ನಳಚರಿತ್ರೆ, ರಾಮಧಾನ್ಯಚರಿತ್ರೆ, ಮೋಹನ ತರಂಗಿಣಿ ಹಾಗೂ ಹರಿಭಕ್ತಿಸಾರ. ಅವರ ಹರಿಭಕ್ತಿ ಸಾರದ 108 ಭಾಮಿನಿ ಷಟ್ಪದಿ ಪದ್ಯಗಳಿಗೆ ಇತ್ತೀಚೆಗೆ ವಿದ್ವಾಂಸರೊಬ್ಬರು 2000…
ಉಡುಪಿ : ತುಳುಕೂಟ ಉಡುಪಿ (ರಿ.) ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ದಿ. ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ‘ತುಳು ಭಾವಗೀತೆ ಸ್ಪರ್ಧೆ -2024’ಯನ್ನು ದಿನಾಂಕ 24 ನವೆಂಬರ್ 2024ರಂದು ಅಪರಾಹ್ನ 2-00 ಗಂಟೆಗೆ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಯು 1ರಿಂದ 5ನೇ ತರಗತಿ – ಬಾಲ ವಿಭಾಗ, 6ರಿಂದ 10ನೇ ತರಗತಿ – ಕಿರಿಯ ವಿಭಾಗ, ಕಾಲೇಜು ವಿದ್ಯಾರ್ಥಿಗಳು – ಹಿರಿಯ ವಿಭಾಗ ಮತ್ತು 25 ವರ್ಷ ಮೇಲಿನವರು – ಸಾರ್ವಜನಿಕ ವಿಭಾಗ ಹೀಗೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಗೂಗಲ್ ನಲ್ಲಿ ಐಲೇಸಾ ಮ್ಯೂಸಿಕ್ ಚಾನೆಲ್ ಎಂದು ಹುಡುಕಿದರೆ ಖ್ಯಾತ ಹಿನ್ನೆಲೆ ಗಾಯಕರು ರಮೇಶ್ಚಂದ್ರರವರು ಹಾಡಿರುವ ಅನೇಕ ತುಳು ಭಾವಗೀತೆಗಳು ಸಿಗುತ್ತದೆ. ತುಳು ಭಾಂದವರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಭಾಗವಹಿಸಿ ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಕೈ ಜೋಡಿಸಬೇಕಾಗಿ ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾದ ಜಯರಾಂ ಮಣಿಪಾಲ್…
ಕೊಪ್ಪಳ : ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ, ತಳಮಳ ಪ್ರಕಾಶನ, ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯ ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ.) ಕೊಪ್ಪಳ ಇವುಗಳ ಆಶ್ರಯದಲ್ಲಿ ‘ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ -2024’ನ್ನು ದಿನಾಂಕ 24 ನವೆಂಬರ್ 2024ರಂದು ಮುಂಜಾನೆ 10 ಗಂಟೆ 15 ನಿಮಿಷಕ್ಕೆ ಕೊಪ್ಪಳದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕೃತಿಗಳ ಲೋಕಾರ್ಪಣೆ, ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪ್ರದಾನ, ಸಾಹಿತ್ಯಿಕ ಚರ್ಚೆ, ಸಾಧಕರಿಗೆ ಸಮಾಜಮುಖಿ ಗೌರವ ಪ್ರದಾನ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನಾ ಗೌರವ ನಡೆಯಲಿದೆ. ಮೊದಲಿಗೆ ಮಹೆಬೂಬ ಕಿಲ್ಲೇದಾರ ಮತ್ತು ಮರಿಯಪ್ಪ ಚಾಮಲಾಪುರ ಇವರಿಂದ ಗೀತ ಗಾಯನ ಪ್ರಸ್ತುತಗೊಳ್ಳಲಿದೆ. ಕೊಪ್ಪಳ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಡಾ. ಬಿ.ಕೆ. ರವಿ ಇವರು ಉದ್ಘಾಟನೆ ಮಾಡಲಿದ್ದು, ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ…
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕ ಇದರ ವತಿಯಿಂದ ಕಾಪು ತಾಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ದಿನಾಂಕ 16 ನವೆಂಬರ್ 2024ರಂದು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ನೆಲದುಲಿಯ ಪರಿಕಲ್ಪನೆಯೇ ಅದ್ಭುತ. ಸಾಹಿತ್ಯದ ಮೂಲಕ ಪ್ರತಿಸ್ಪಂದಿಸುವ ಗುಣ ಹಿಂದಿನಿಂದಲೂ ನಡೆದು ಬಂದಿದೆ. ತಲ್ಲಣಗಳಿಗೆ ಸಮ್ಮೇಳನಗಳು ಪ್ರತಿಸ್ಪಂದಿಸುತ್ತಿತ್ತು. ಇದು ಸೃಜನಶೀಲ ಸಾಹಿತ್ಯಗಳ ಪರಂಪರೆಯಾಗಿ ಬಂದಿದೆ. ಈ ಸಮ್ಮೇಳನವೂ ಅದನ್ನೇ ಮಾಡಿದೆ ಎಂದು ಮೂಲ್ಕಿ ಸ.ಪ.ಪೂ. ಕಾಲೇಜು ಪ್ರಾಂಶುಪಾಲ ಹಿರಿಯ ಸಾಹಿತಿ ಡಾ. ವಾಸುದೇವ ಬೆಳ್ಳೆ ಹೇಳಿದರು. ಕಾಪು ತಾಲೂಕು ಕ.ಸಾ.ಪ. ಅಧ್ಯಕ್ಷ ಬಂಟಕಲ್ಲು ಪುಂಡಲೀಕ ಮರಾಠೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಾಂಗಾಳ ಬಾಬು ಕೊರಗ ಸರ್ವಾಧ್ಯಕ್ಷತೆ ವಹಿಸಿದ್ದರು. ಕಾಪು ತಹಶೀಲ್ದಾರ್ ಪ್ರತಿಭಾ ಆರ್., ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅದಾನಿ ಅಧ್ಯಕ್ಷ ಕಿಶೋರ್ ಆಳ್ವ ವೈ. ಸುಧೀರ್ ಕುಮಾರ್ ಪಡುಬಿದ್ರಿ. ಗಾಯತ್ರಿ ಪ್ರಭು, ಪ್ರಕಾಶ್ ಶೆಟ್ಟಿ…
ವಾಮಂಜೂರು : ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ.) ಮತ್ತು ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇದರ ಆಶ್ರಯದಲ್ಲಿ ದಿನಾಂಕ 23 ನವೆಂಬರ್ 2024ರಂದು ಪೂರ್ವಾಹ್ನ 10-00 ಗಂಟೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ ‘ಕಲೋತ್ಸವ’ವನ್ನು ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ) ಉಜಿರೆ ಇದರ ಆಡಳಿತಕ್ಕೆ ಒಳಪಟ್ಟ ರಜತ ಮಹೋತ್ಸವದ ಸಂದರ್ಭದಲ್ಲಿ ದಿವಂಗತ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಸ್ಮರಣಾರ್ಥ ಈ ಸ್ಪರ್ಧೆಯನ್ನು ನಡೆಸಲಾಗುವುದು. ಇದರ ಉದ್ಘಾಟನೆಯನ್ನು ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ (ರಿ) ಇದರ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಇವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಂಗಳೂರಿನ ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ) ಇದರ ಕಾರ್ಯದರ್ಶಿಗಳಾದ ಪ್ರೊಫೆಸರ್ ಎ. ರಾಜೇಂದ್ರ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮಂಗಳೂರು ಪದವು ವಾರ್ಡ್ ಕಾರ್ಪೊರೇಟರ್ ಶ್ರೀ ಭಾಸ್ಕರ್ ಕೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ…
ಕುಂಬಳೆ : ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಿನಾಂಕ 20 ನವೆಂಬರ್ 2024ರಂದು ಸಂಜೆ ಕುಂಬಳೆ ಉಪಜಿಲ್ಲಾ ಮಟ್ಟದ 63ನೇ ಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಇವರು ಮಾತನಾಡಿ “ತುಳುನಾಡು ಸಾಂಸ್ಕೃತಿಕ ಪರಂಪರೆಯ ನೆಲೆಬೀಡು. ಕಾಸರಗೋಡು ಅನೇಕ ಕವಿಗಳು, ಕಲಾವಿದರನ್ನು ನಾಡಿಗೆ ನೀಡಿದೆ. ಕಲೋತ್ಸವವು ಅನೇಕ ಕಲಾವಿದರನ್ನು ನಾಡಿಗೆ ಸಮರ್ಪಿಸುವ ಉತ್ತಮ ವೇದಿಕೆಯಾಗಿದೆ. ಕಲೋತ್ಸವವು ಬದುಕಿನಲ್ಲಿ ಆದರ್ಶ, ಸಂಸ್ಕಾರ, ಗುಣ ನಡತೆ, ಸೇವಾತತ್ಪರ ತಲೆಮಾರನ್ನು ರೂಪಿಸಲು ಸಹಾಯ ಮಾಡುತ್ತದೆ. ಕಲೋತ್ಸವದ ಸ್ಪರ್ಧೆಗಳಲ್ಲಿ ಯಾರೂ ಸೋಲುವುದಿಲ್ಲ. ಗೆಲ್ಲುವುದೂ ಇಲ್ಲ. ಕಲೋತ್ಸವವು ಮಕ್ಕಳ ನಡುವಿನ ಸ್ಪರ್ಧೆಯಾಗಬೇಕೇ ಹೊರತು ಪೋಷಕರ ನಡುವಿನ ಸ್ಪರ್ಧೆಯಾಗಬಾರದು” ಎಂದು ಹೇಳಿದರು. ಕಾಸರಗೋಡಿನ ಶಾಸಕರಾದ ಎನ್.ಎ. ನೆಲ್ಲಿಕ್ಕುನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೋಮಶೇಖರ ಜೆ.ಎಸ್. ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂಬ್ದಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸಳಿಗೆ, ಎಣ್ಮಕಜೆ ಗ್ರಾಮ…