Subscribe to Updates
Get the latest creative news from FooBar about art, design and business.
Author: roovari
ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇವರ ವತಿಯಿಂದ ‘ದತ್ತಿನಿಧಿ ಕಾರ್ಯಕ್ರಮ’ವನ್ನು ದಿನಾಂಕ 13, 14 ಮತ್ತು 16 ಮಾರ್ಚ್ 2025ರಂದು ಹಮ್ಮಿಕೊಳ್ಳಲಾಗಿದೆ. ದಿನಾಂಕ 13 ಮಾರ್ಚ್ 2025ರಂದು ಬೆಳಿಗ್ಗೆ 11-00 ಗಂಟೆಗೆ ವಿಶ್ವವಿದ್ಯಾನಿಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಜ್ಞಾನಸಹ್ಯಾದ್ರಿ ಶಂಕರಘಟ್ಟ ಇವರ ಸಂಯುಕ್ತಾಶ್ರಯದಲ್ಲಿ ಜ್ಞಾನಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆಯಲಿರುವ ದತ್ತಿನಿಧಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ಧರ್ಮೆಗೌಡ ಹೆಚ್.ಎಂ. ಇವರು ವಹಿಸಲಿರುವರು. ‘ಕುವೆಂಪು ಸಾಹಿತ್ಯ ವಿದ್ಯಾರ್ಥಿ ಪ್ರಜ್ಞೆ’ ಮತ್ತು ‘ವಚನ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ’ ಎಂಬ ವಿಷಯದ ಬಗ್ಗೆ ಸಾಹಿತಿ ಡಾ. ಹೆಚ್.ಟಿ. ಕೃಷ್ಣಮೂರ್ತಿ ಮತ್ತು ಕನ್ನಡ ಶಿಕ್ಷಕರಾದ ಡಾ. ಭಾಗ್ಯಲಕ್ಷ್ಮಿ ಬಿ.ಎಸ್. ಇವರು ಉಪನ್ಯಾಸ ನೀಡಲಿದ್ದಾರೆ. ದಿನಾಂಕ 14 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಶಿವಮೊಗ್ಗ ವಿದ್ಯಾನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ದತ್ತಿನಿಧಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿನ್ಸಿಪಾಲರಾದ ಡಾ. ಟಿ. ಅವಿನಾಶ್ ಇವರು…
ಬೆಂಗಳೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 11 ಮಾರ್ಚ್ 2025 ರಂದು ಮ. ರಾಮಮೂರ್ತಿಯವರ 108ನೆಯ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಯುತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಮಾತನಾಡಿ “ಬೆಂಗಳೂರು ಕನ್ನಡ ಸಮಾರಂಭಗಳಲ್ಲಿ ನಾವು ಉಪಯೋಗಿಸುವ ಕನ್ನಡ ಭಾವುಟವನ್ನು ಸೃಷ್ಟಿಸಿದ ಮಹನೀಯರು ಮ. ರಾಮಮೂರ್ತಿ. ಅವರು ಕನ್ನಡ ಬಾವುಟವನ್ನು ಮಾತ್ರ ರೂಪಿಸಲಿಲ್ಲ ಅದನ್ನು ಎತ್ತಿ ಹಿಡಿದು ಕನ್ನಡಿಗರು ಗೌರವದಿಂದ ಬಾಳುವ ಹಾಗೆ ತಮ್ಮ ಕೊನೆಯ ಉಸಿರಿರುವವರೆಗೂ ಕನ್ನಡ ನಾಡು ನುಡಿಗಾಗಿ ಶ್ರಮಿಸಿದರು. 1960ರ ದಶಕದಲ್ಲಿ ಕನ್ನಡದ ವಾತಾವರಣವನ್ನು ಮೂಡಿಸಲು, ಕನ್ನಡಿಗರನ್ನು ಎಚ್ಚರಿಸಲು ಹುಟ್ಟಿಕೊಂಡದ್ದೇ ಕನ್ನಡ ಚಳವಳಿ. ಈ ಹೋರಾಟದ ಮುಂಚೂಣಿಯಲ್ಲಿದ್ದವರು ಮ. ರಾಮಮೂರ್ತಿ. ಬೆಂಗಳೂರಿನ ಗಾಂಧಿನಗರದಲ್ಲಿದ್ದ ಆರ್ಯ ವಿದ್ಯಾಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಮೇರು ಬರಹಗಾರ ದೇವುಡು ನರಸಿಂಹ ಶಾಸ್ತ್ರಿಗಳು ಬಾಲಕ ರಾಮಮೂರ್ತಿಯವರಲ್ಲಿ ಕನ್ನಡ ಪ್ರೇಮವನ್ನು ಬಿತ್ತಿದರು. ಇದರಿಂದ ಪ್ರೇರಿತರಾಗಿ ಮ. ರಾಮಮೂರ್ತಿಯವರು ಬರೆದ ಮೊದಲ ಕಥೆ ‘ಗುರುದಕ್ಷಿಣಿ’. ತಂದೆಯವರು ಪ್ರಕಟಿಸುತ್ತಿದ್ದ ‘ವೀರಕೇಸರಿ’…
ಧಾರವಾಡ : ಭಾರತೀಯ ಸಂಗೀತಲೋಕದ ನವೋನ್ವೇಷ, ಸ್ವರಯೋಗಿನಿ ಖ್ಯಾತಿಯ ಪದ್ಮವಿಭೂಷಣ ಡಾ. ಪ್ರಭಾ ಅತ್ರೆ ಸಂಸ್ಮರಣೆಯಲ್ಲಿ ಸಂಗೀತ ಹಾಗೂ ಭರತನಾಟ್ಯಗಳ ವಿಶೇಷ ಕಾರ್ಯಕ್ರಮವನ್ನು ಧಾರವಾಡದಲ್ಲಿ ದಿನಾಂಕ 15 ಮಾರ್ಚ್ 2025 ಶನಿವಾರದಂದು ಸಂಜೆ 5-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ (ರಿ.) ಹಾಗೂ ಪುಣೆಯ ‘ಸ್ವರಮಯಿ’ ಸಂಸ್ಥೆಗಳು ಜಂಟಿಯಾಗಿ ಹಮ್ಮಿಕೊಂಡಿವೆ. ಈ ಸಂಗೀತ-ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಪ್ರಭಾ ಅತ್ರೆಯವರಿಂದ ರಚಿತ ‘ಬಂದಿಶ್’ಗಳು ಪ್ರಸ್ತುತಗೊಳ್ಳಲಿವೆ. ಸುಮಾರು ಎಂಟು ದಶಕಗಳ ಕಾಲ ಡಾ. ಪ್ರಭಾ ಅತ್ರೆಯವರು ಕೇವಲ ಸಂಗೀತ ಕ್ಷೇತ್ರವಷ್ಟೇ ಅಲ್ಲ ಶಿಕ್ಷಣ, ಸಾಹಿತ್ಯ, ಸಮಾಜಸೇವೆ ಇನ್ನೂ ಅನೇಕ ಕ್ಷೇತ್ರಗಳಿಗೆ ಅಪೂರ್ವ ಕೊಡುಗೆಯನ್ನು ಸಲ್ಲಿಸಿದ ಬಹುಮುಖ ಪ್ರತಿಭೆ. ಸ್ವತಃ ವಿದ್ಯಾರ್ಥಿನಿಯಾಗಿ, ಚಿಂತಕಿಯಾಗಿ ಉಳಿದವರಿಗೆ ಮಾದರಿಯಾಗುವಂಥ ವ್ಯಕ್ತಿತ್ವ ಡಾ. ಪ್ರಭಾ ಅತ್ರೆಯವರದು. ಇಂಥ ದಿಗ್ಗಜೆಯ ಸಂಸ್ಮರಣೆಯಲ್ಲಿ ವಿಶೇಷ ಕಾರ್ಯಕ್ರಮವೊಂದು ಧಾರವಾಡದಲ್ಲಿ ನಡೀತಾ ಇದೆ. ಕೇಂದ್ರ ಸಂಗೀತ ನಾಟಕ ಅಕ್ಯಾಡೆಮಿ ಪುರಸ್ಕೃತ ಕಲಾವಿದೆ, ಹಿರಿಯ…
ದಾವಣಗೆರೆ : ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ ಇದರ ವತಿಯಿಂದ ಕನ್ನಡ, ತೆಲುಗು ಮತ್ತು ತಮಿಳು ನಾಟಕಗಳ ಹಬ್ಬ ‘ರಾಷ್ಟ್ರೀಯ ವೃತ್ತಿ ರಂಗೋತ್ಸವ-2025’ವನ್ನು ದಿನಾಂಕ 15 ಮಾರ್ಚ್ 2025ರಿಂದ 17 ಮಾರ್ಚ್ 2025ರವರೆಗೆ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಚಾರ ಸಂಕಿರಣ, ರಂಗ ಸಂವಾದ, ರಂಗ ಗೌರವ, ರಂಗ ಗೀತೆಗಳ ಗಾಯನ, ನಾಟಕಗಳ ಪ್ರದರ್ಶನ, ರಂಗ ದಾಖಲೆಗಳ ಪ್ರದರ್ಶನ ಮತ್ತು ಚಿತ್ರಕಲಾ ಪ್ರದರ್ಶನ ನಡೆಯಲಿದೆ. ದಿನಾಂಕ 15 ಮಾರ್ಚ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಪದ್ಮಶ್ರೀ ಚಿಂದೋಡಿ ಲೀಲಾ ರಂಗವೇದಿಕೆಯಲ್ಲಿ ದಾವಣಗೆರೆಯ ಪ್ರತಿಮಾ ಸಭಾದ ಗೌರವಾಧ್ಯಕ್ಷರಾದ ಪ್ರೊ. ಎಸ್. ಹಾಲಪ್ಪ ಇವರು ವಿಚಾರ ಸಂಕಿರಣದ ಉದ್ಘಾಟನೆ ಮಾಡಲಿದ್ದು, ‘ಪರಂಪರೆಯ ಕಣ್ಮರೆ : ಬದಲಾಗುತ್ತಿರುವ ವ್ಯಕ್ತಿ ರಂಗ ಸ್ವರೂಪ’ ಎಂಬ ವಿಷಯದ ಬಗ್ಗೆ ಡಾ. ವಿಶ್ವನಾಥ ಹಾಗೂ ‘ವೃತ್ತಿಪರತೆ ಮತ್ತು ಆಧುನಿಕ ರಂಗಚಿಂತನೆಗಳು’ ಎಂಬ ವಿಷಯದ ಬಗ್ಗೆ ಮಹ್ಮದಲಿ ಆರ್. ಹೊಸೂರ ಇವರು ವಿಷಯ ಮಂಡನೆ ಮಾಡಲಿದ್ದಾರೆ. 11-30 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದ…
ಮುಂಬಯಿ : ಮೈಸೂರು ಅಸೋಸಿಯೇಷನ್ ಮುಂಬಯಿ ಇದರ ನೂರರ ನಲಿವು ಸಂಭ್ರಮಾಚರಣೆ ಪ್ರಯುಕ್ತ ‘ನೇಸರು ಜಾಗತಿಕ ಏಕಾಂಕ ನಾಟಕ ರಚನಾ ಸ್ಪರ್ಧೆ – 2025’ಯನ್ನು ಏರ್ಪಡಿಸಲಾಗಿದೆ. ಮೈಸೂರು ಅಸೋಸಿಯೇಷನ್ ಮುಂಬೈ ಒಂದು ಪ್ರತಿಷ್ಠಿತ ಕನ್ನಡ ಸಂಸ್ಥೆಯಾಗಿದ್ದು, ತನ್ನ ಶತಕವನ್ನು ಪೂರೈಸುವತ್ತ ಮುಂದುವರಿಯುತ್ತಿದೆ. ಈ ಮೊದಲೂ ಕೂಡಾ ಕನ್ನಡ ಕವನ, ಕಥೆ ಹಾಗೂ ಏಕಾಂಕ ನಾಟಕ ಸ್ಪರ್ಧೆಯನ್ನು ಆಯೋಜಿಸುತ್ತಲೇ ಬಂದಿದೆ. ಇದರ ಮುಂದುವರಿದ ಭಾಗವಾಗಿ ‘ಶತಮಾನೋತ್ಸವ ವಿಶೇಷ’ ಜಾಗತಿಕ ಏಕಾಂಕ ನಾಟಕ ರಚನಾ ಸ್ಪರ್ಧೆಯ ಘೋಷಣೆಯನ್ನು ಈ ಮೂಲಕ ಮಾಡಲಾಗುತ್ತಿದೆ. ಈ ಸ್ಪರ್ಧೆಯಲ್ಲಿ ಭಾರತದಾದ್ಯಂತ ಆಸಕ್ತರೆಲ್ಲರೂ ಭಾಗವಹಿಸಬಹುದು. ಇಲ್ಲಿ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಆಸಕ್ತರು ಯಾವುದೇ ವಿಷಯದ ಕುರಿತು ಏಕಾಂಕ ನಾಟಕವನ್ನು ರಚಿಸಬಹುದು. ಏಕಾಂಕ ನಾಟಕ ರಚನಾ ಸ್ಪರ್ಧೆಯ ಪ್ರಥಮ ಬಹುಮಾನ – 50,000/-, ದ್ವಿತೀಯ ಬಹುಮಾನ – ರೂ. 30,000/- ಮತ್ತು ತೃತೀಯ ಬಹುಮಾನ – ರೂ. 20,000/- ಆಗಿರುತ್ತದೆ. ಸ್ಪರ್ಧೆಯ ನಿಯಮಾವಳಿಗಳು: > ಏಕಾಂಕ ನಾಟಕ ಕನ್ನಡದಲ್ಲಿದ್ದು ಸ್ವರಚಿತವಾಗಿರಬೇಕು, ಅನುವಾದ…
ಕಾಸರಗೋಡು : ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಮಂದಿರದ ಕೀರಿಕ್ಕಾಡು ಸ್ಮಾರಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ ದಿನಾಂಕ 08 ಮಾರ್ಚ್ 2025 ಶನಿವಾರ ವಿಶೇಷ ಕಲಾರಾಧನಾ ಕಾರ್ಯಕ್ರಮಗಳು ನೆರವೇರಿತು. ನವನೀತ ಭಟ್ ಕೊಡಪಾಲ ಮತ್ತು ಮನೆಯವರ ವತಿಯಿಂದ ಸೇವಾರೂಪವಾಗಿ ನಡೆಸಲ್ಪಟ್ಟ ಈ ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಗೋಪಾಲಯ್ಯ ಕೋಟಿಗದ್ದೆ, ಶಾಂತಾಕುಮಾರಿ ದೇಲಂಪಾಡಿ, ಪೂರ್ಣಿಮ ಬನಾರಿ ಇವರ ಸಂಯೋಜನೆಯಲ್ಲಿ ‘ಭಗವದ್ಗೀತೆ’ ಪಾರಾಯಣ ಸಂಪನ್ನಗೊಂಡಿತು. ಅನಂತರ ಸಂಘದ ಹಿರಿಯ ಭಾಗವತ ವಿಶ್ವವಿನೋದ ಬನಾರಿಯವರ ಮಾರ್ಗದರ್ಶನದಲ್ಲಿ ‘ಧರ್ಮ ಜಿಜ್ಞಾಸೆ’ ಮತ್ತು ‘ಸಮರ ಸಂಘರ್ಷ’ ಯಕ್ಷಗಾನ ತಾಳಮದ್ದಳೆ ನೆರವೇರಿತು. ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿಯವರ ಪ್ರಸಂಗ ಸಾಹಿತ್ಯವನ್ನೊಳಗೊಂಡ ಈ ಅಧ್ಯಯನ ಶೀಲ ಕಥಾ ಭಾಗದ ಪ್ರಸ್ತುತಿಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು ಉದಯೋನ್ಮುಖ ಪ್ರತಿಭೆ ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಇವರು ಕಾಣಿಸಿಕೊಂಡರು. ಚೆಂಡೆಮದ್ದಳೆಯಲ್ಲಿ ಶ್ರೀಧರ ಆಚಾರ್ಯ ಈಶ್ವರಮಂಗಲ, ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಬಿ.ಎಚ್. ಕೃಷ್ಣಪ್ರಸಾದ…
ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ, ಕನ್ನಡ ವೀರ ಸೇನಾನಿ ಮ. ರಾಮಮೂರ್ತಿಯವರು 1918 ಮಾರ್ಚ್ 11ರಂದು ನಂಜನಗೂಡಿನಲ್ಲಿ ಜನಿಸಿದರು. ತಂದೆ ವೀರಕೇಸರಿ ಸೀತಾರಾಮ ಶಾಸ್ತ್ರಿ ಮತ್ತು ತಾಯಿ ಸುಬ್ಬಮ್ಮ. ಶಾಲಾ ವಿದ್ಯಾರ್ಥಿಯಾಗಿರುವಾಗ ಇವರಿಗೆ ಕಾವ್ಯಗಳ ಬಗ್ಗೆ ಆಸಕ್ತಿ ಹುಟ್ಟಿಸಿದವರು ಆ ಶಾಲೆಯ ಅಧ್ಯಾಪಕರಾಗಿದ್ದ ಸುಬ್ರಹ್ಮಣ್ಯ ಅಯ್ಯರ್. ಮಾಧ್ಯಮಿಕ ಶಾಲೆಯ ನಂತರ ಮುಂದಿನ ವಿದ್ಯಾಭ್ಯಾಸ ಬೆಂಗಳೂರಿನ ಗಾಂಧಿನಗರದ ಆರ್ಯ ವಿದ್ಯಾಶಾಲೆಯಲ್ಲಿ. ಇಲ್ಲಿ ಇವರ ಸಾಹಿತ್ಯಾಸಕ್ತಿಯನ್ನು ಪೋಷಿಸಿದವರು ಮುಖ್ಯೋಪಾಧ್ಯಾಯರಾದ ಮಹಾನ್ ಸಾಹಿತಿ ದೇವುಡು. ಉತ್ತಮ ಸಾಹಿತ್ಯದ ವಾತಾವರಣ ದೊರೆತ ಕಾರಣದಿಂದಾಗಿ ಅವರಿಂದ ರಚನೆಗೊಂಡ ಮೊದಲ ಕಥೆ ‘ಗುರುದಕ್ಷಿಣೆ’. ಈ ಕಥೆಯನ್ನು ಅಶ್ವತ್ಥನಾರಾಯಣರು ತಾವು ಮಕ್ಕಳಿಗಾಗಿ ಪ್ರಕಟಿಸುತ್ತಿದ್ದ ‘ಮಕ್ಕಳ ಪುಸ್ತಕ’ದಲ್ಲಿ ಪ್ರಕಟಿಸಿದರು. ಸಾಹಿತ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆರಂಭಿಸಿದ್ದ ರಾಮಮೂರ್ತಿಯವರು ಈ ಸಂದರ್ಭದಲ್ಲಿ ಅಶ್ವತ್ಥನಾರಾಯಣರ ಅನೇಕ ಪುಸ್ತಕಗಳನ್ನು ಪಡೆದುಕೊಂಡು ಓದಿದ್ದರು. ಇಲ್ಲಿಂದ ಮುಂದೆ ಇವರ ಸಾಹಿತ್ಯ ರಚನೆಗೆ ಮುನ್ನಡೆ ದೊರೆಯಿತು. ಸ್ವಾತಂತ್ರ್ಯ ದೊರೆತ ಆರಂಭದಲ್ಲಿ ಜನರಲ್ಲಿ ಕನ್ನಡದ ಅರಿವನ್ನು ಮೂಡಿಸುವುದಕ್ಕಾಗಿ ಕನ್ನಡವನ್ನು ಎಲ್ಲರೂ ಓದಬೇಕೆಂಬು ಉದ್ದೇಶದಿಂದ ಕುತೂಹಲಭರಿತ ಪತ್ತೇದಾರಿ…
ಮಂಗಳೂರು : ಬಳ್ಕೂರು ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮವು ದಿನಾಂಕ 09 ಮಾರ್ಚ್ 2025ರಂದು ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಸ್ವೀಕರಿಸಿದ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಮಾತನಾಡಿ “ಯಕ್ಷರಂಗವು ನನ್ನ ಬದುಕಿಗೆ ಅಭಿಮಾನಿಗಳ ಪ್ರೀತಿ ಮತ್ತು ಹೊಸತನದ ಸ್ಪೂರ್ತಿಯನ್ನು ನೀಡಿದೆ ಅದು ಮರೆಯಲಾದ ಅವಿಸ್ಮರಣೀ ಕ್ಷಣಗಳು. ನನ್ನ ತಂದೆವರು ಜಲವಳ್ಳಿ ವೆಂಕಟೇಶ್ ರಾವ್ ಯಕ್ಷಗಾನ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ. ಪ್ರತಿಯೊಬ್ಬ ಕಲಾವಿದರು ಕೂಡ ಹಿರಿಯವರು ಹಾಕಿಕೊಟ್ಟ ಯಕ್ಷಪರಂಪರೆಯನ್ನು ಮುಂದುವರಿಸುವ ಮೂಲಕ ತನ್ನ ತನವನ್ನು ಕಾಯ್ದುಕೊಳ್ಳಬೇಕೇ ಹೊರತು ನಕಲಿಸಬಾರದು. ಯಕ್ಷಗಾನದಲ್ಲಿ ಅಪಾರವಾದು ಓದು, ಕಲಿಕೆ ಅಭ್ಯಾಸದ ಮೂಲಕ ಇಲ್ಲಿ ಕಲಾವಿದ ಬೆಳೆಯಬಹುದು. ಬದುಕಿಗಾಗಿ ಯಕ್ಷಗಾನವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಆದರೆ ಬಹಳಷ್ಟು ಪ್ರೇಕ್ಷಕರನ್ನು ನಾವು ಗಳಿಸಿದ್ದೇವೆ ಅಂದರೆ…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ, ಸುಲೋಚನಾ ಡಾ.ಎಂ.ಜಿ.ನಾಗರಾಜ್ ದಂಪತಿಗಳ ದತ್ತಿಯ ಸಹಕಾರದಿಂದ ‘ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ದಿನಾಂಕ 11 ಮಾರ್ಚ್ 2025ರಂದು ಮಡಿಕೇರಿಯ ಎಫ್. ಎಂ. ಕೆ. ಎಂ. ಸಿ. ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಖ್ಯಾತ ಸಂಶೋಧಕರು ಹಾಗೂ ಸಾಹಿತಿಗಳಾದ ಡಾ. ಎಂ. ಜಿ. ನಾಗರಾಜ್ ಮಾತನಾಡಿ “ಇತಿಹಾಸದ ಊರುಗೋಲನ್ನು ಇರಿಸಿಕೊಂಡು ಇಂದಿನ ಪರಿಸ್ಥಿತಿಗಳ ಅವಲೋಕನ ನಡೆಯಬೇಕಾಗಿದೆ” ಎಂದರು. ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಮಾಜಿ ಮುಖ್ಯಸ್ಥರಾದ ಡಾ.ಕೋಡಿರ ಲೋಕೇಶ್ ಮಾತನಾಡಿ “ಜೀವನವೆನ್ನುವುದು ಉಣ್ಣುವುದು ಹಾಗೂ ತಿನ್ನುವುದನ್ನು ಮೀರಿದ ವಿಚಾರವೇ ಆಗಿದೆ. ಬದುಕನ್ನು ಉತ್ತಮಿಕೆಯತ್ತ ಕೊಂಡೊಯ್ಯಲು ಸಾಹಿತ್ಯ ಮತ್ತು ಸಾಂಸ್ಕಂತಿಕ ವಲಯಗಳತ್ತ ವಾಲಿದಾಗಲೆ ಕಥೆ, ಕವನಗಳನ್ನು ಒಳಗೊಂಡ ಸಾಹಿತ್ಯ, ಕಲೆ…
ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಸಕರು / ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು 29 ಮಾರ್ಚ್ 2025ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ. ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ…