Author: roovari

ಬೆಳ್ತಂಗಡಿ: ಬೆಳ್ತಂಗಡಿಯ ದುರ್ಗಾಪರಮೇಶ್ವರಿ ಯಕ್ಷಗಾನ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭವು ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದೊಂದಿಗೆ ದಿನಾಂಕ 17 ನವೆಂಬರ್ 2024ರ ಭಾನುವಾರದಂದು ಮುಂಡಾಜೆ ಶಾರದಾ ನಗರದಲ್ಲಿ ನಡೆಯಿತು. ಯಕ್ಷಗಾನ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದ ರಬ್ಬ‌ರ್ ಸೊಸೈಟಿಯ ಉಪಾಧ್ಯಕ್ಷರಾದ ಮಚ್ಚಿಮಲೆ ಅನಂತ ಭಟ್ ಮಾತನಾಡಿ “ಪುರಾಣವನ್ನು ಮುಂದಿನ ಪೀಳಿಗೆಗೆ ತಿಳಿಸುವ ಸುಲಭ ಕಲಾ ಮಾರ್ಗವೇ ಯಕ್ಷಗಾನ. ಈ ಕಲೆ ಉಳಿದು ಬೆಳೆದರೆ ಸಾಹಿತ್ಯ ಪರಂಪರೆಯೊಂದು ಜೀವಂತವಾಗಿರಲು ಸಾಧ್ಯ.” ಎಂದರು. ಅಧ್ಯಯನ ಕೇಂದ್ರದ ಮುಖ್ಯಸ್ಥ, ರವಿಕುಮಾ‌ರ್ ಮುಂಡಾಜೆ ಮಾತನಾಡಿ “ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕೂಡ ಕಾಣಿಸಿಕೊಳ್ಳಬೇಕು. ನಮ್ಮಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಈ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಲಾಗಿದೆ.” ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಣೇಶ್ ಬಂಗೇರ ಕೂಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು, ರಾಘವ ಎಚ್‌. ಗೇರುಕಟ್ಟೆ, ಯಕ್ಷಗಾನ ಗುರು…

Read More

ಬದಿಯಡ್ಕ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಬೆಂಗಳೂರು ಇದರ ವತಿಯಿಂದ ತುಳುರತ್ನ ಬಹುಭಾಷಾ ವಿದ್ವಾಂಸ ಡಾಕ್ಟರ್ ಪಿ. ವೆಂಕಟರಾಜು ಪುಣಿಂಚಿತ್ತಾಯರ ‘ಪುವೆಂಪು ನೆನಪು -2024’ ಕಾರ್ಯಕ್ರಮವನ್ನು ದಿನಾಂಕ 20 ನವೆಂಬರ್ 2024ರಂದು ಬೆಳಿಗ್ಗೆ 9-00 ಗಂಟೆಗೆ ಬದಿಯಡ್ಕದ ವಳಮಲೆ ಇರಾ ಸಭಾಭವನದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9-00 ಗಂಟೆಗೆ ಶ್ರೀಮತಿ ಸಂಧ್ಯಾಗೀತ ಬಾಯಾರು ಮತ್ತು ಬಳಗದವರಿಂದ ‘ಭಾವ ಗಾಯನ’ ನಡೆಯಲಿದೆ. ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ತ್ರ ಇವರ ದಿವ್ಯ ಸಾನಿಧ್ಯದಲ್ಲಿ ಹಿರಿಯ ಕವಿ ಸಾಹಿತಿ ಪ್ರೊ. ವಿ.ಬಿ. ಅರ್ತಿಕಜೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನ ಮರದ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಸ್. ಪ್ರದೀಪ ಕುಮಾರ ಕಲ್ಕೂರ ಇವರು ನುಡಿ ನಮನ, ಡಾ. ರಾಧಾಕೃಷ್ಣ ಬೆಳ್ಳೂರು ಇವರು ಕೃತಿ ಪರಿಚಯ ಹಾಗೂ ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು ಇವರು ಹಿರಿಯ…

Read More

ಮಂಗಳೂರು : ಅವಿನಾಶ್ ಫೋಕ್ ಡಾನ್ಸ್ ಮಂಗಳೂರು (ರಿ.) ಅರ್ಪಿಸುವ 3ನೇ ವರ್ಷದ ‘ಕಲಾಯನ’ ಜಾನಪದ ಜಾತ್ರೆ ನೃತ್ಯ ಸ್ಪರ್ಧೆಯನ್ನು ದಿನಾಂಕ 08 ಡಿಸೆಂಬರ್ 2024ರಂದು ಮಧ್ಯಾಹ್ನ 12-00 ಗಂಟೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9980358774. ಸ್ಪರ್ಧೆಯ ನಿಯಮಗಳು : * ಪ್ರತೀ ತಂಡವು ಜಾನಪದ ಜಾತ್ರೆಯ ವಿಷಯವನ್ನಾಧರಿಸಿ ಜಾತ್ರಾ ಮಹೋತ್ಸವದ ಪ್ರಾತ್ಯಕ್ಷತೆ ಹಾಗೂ ಸಹಬಾಳ್ವೆಗೆ ಒತ್ತು ನೀಡಬೇಕು. * ಪ್ರತಿಯೊಂದು ತಂಡಕ್ಕೂ 20 ನಿಮಿಷಗಳ ಕಾಲಾವಕಾಶ ನೀಡಲಾಗುವುದು. * ತಂಡದಲ್ಲಿ ಕನಿಷ್ಠ 15 ಮಂದಿ ಗರಿಷ್ಠ 25 ಮಂದಿ. * ಧ್ವನಿಸುರುಳಿಗೆ (ಸಿ.ಡಿ) ಗೆ ಅವಕಾಶವಿಲ್ಲ. * ತಂಡಗಳು ನಿಗದಿಪಡಿಸಿದ ಸಮಯದಲ್ಲೇ ಪ್ರದರ್ಶನ ನೀಡಬೇಕು. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶ ಇರುವುದಿಲ್ಲ. * ಸ್ಪರ್ಧೆಯಲ್ಲಿ ನೀರು, ಬೆಂಕಿ ಮತ್ತು ಸ್ಫೋಟಕ ಬಳಕೆ ನಿಷೇಧಿಸಲಾಗಿದೆ. * ಅಶ್ಲೀಲ ಅಸಂಬದ್ಧ ಅಥವಾ ಜಾತಿ ಧರ್ಮಗಳ ಅವಹೇಳನಕ್ಕೆ ಅವಕಾಶವಿರುವುದಿಲ್ಲ. * ಕಡ್ಡಾಯವಾಗಿ ದೈವಗಳ ಪಾತ್ರಕ್ಕೆ ಅವಕಾಶವಿಲ್ಲ. * ಮುಕ್ತ…

Read More

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ 17ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮನಾಮ ತಾರಕ ಹವನಪೂರ್ವಕ ಹನುಮ ಯಾಗದ ಅಂಗವಾಗಿ ದಿನಾಂಕ 15 ನವೆಂಬರ್ 2024ರಂದು ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವೀರಮಣಿ ಕಾಳಗ’ ಎಂಬ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರಂಕಿ, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್ ಮತ್ತು ಮಾಸ್ಟರ್ ಅಮೋಘ ಶಂಕರ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮ), ಶುಭಾ ಗಣೇಶ್ (ಶತ್ರುಘ್ನ), ಕಿಶೋರಿ ದುರ್ಗಪ್ಪ ನಡುಗಲ್ಲು (ಈಶ್ವರ), ಹರಿಣಾಕ್ಷಿ ಜೆ. ಶೆಟ್ಟಿ (ವೀರಮಣಿ), ಭಾರತಿ ರೈ (ಶ್ರೀರಾಮ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಹರಿಣಾಕ್ಷಿ ಜೆ. ಶೆಟ್ಟಿ ಪ್ರಾಯೋಜಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ…

Read More

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರಕ್ಕೆ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಇವರ ‘ಕೋವಿಡ್ ಕಥೆಗಳು’ ಕೃತಿ ಆಯ್ಕೆಯಾಗಿದೆ. ಕೊರೊನಾ ಕಾಲಘಟ್ಟದಲ್ಲಿ ಆಗಿರುವ ಸಾವು-ನೋವು ಕಥೆಗಳನ್ನೊಳಗೊಂಡ ಈ ಕೃತಿ ಪತ್ರಿಕಾ ವಲಯದಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡಿದೆ. ಪ್ರಸ್ತುತ ವರ್ಷದಿಂದ ಪ್ರತಿ ವರ್ಷವೂ ಮಾಧ್ಯಮದವರು ಬರೆದ ಒಂದು ಪುಸ್ತಕಕ್ಕೆ ವಿಶೇಷ ಪುರಸ್ಕಾರ ನೀಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂ‌ರ್ ತಿಳಿಸಿದ್ದಾರೆ. ದಿನಾಂಕ 26 ನವೆಂಬರ್ 2024ರಂದು ಸೇಡಂನಲ್ಲಿ ನಡೆಯಲಿರುವ ಸಮಾರಂಭದಲ್ಲಿ ‘ಅಮ್ಮ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

Read More

ಚನ್ನರಾಯಪಟ್ಟಣ : ಪ್ರತಿಮಾ ಟ್ರಸ್ಟ್ ಇವರು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಇದರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ ತೊಗಲುಗೊಂಬೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ದಿನಾಂಕ 14 ನವೆಂಬರ್ 2024ರ ಗುರುವಾರದಂದು ಚನ್ನರಾಯಪಟ್ಟಣದ ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಸಿ. ಎನ್. ಬಾಲಕೃಷ್ಣ ಮಾತನಾಡಿ ನಾಡಿನ ಕಲೆ, ಸಂಸ್ಕೃತಿ ಹಾಗೂ ಪುರಾತನ ಕಾಲದ ತೊಗಲುಗೊಂಬೆ ನಾಟಕದ ಪ್ರದರ್ಶನದಿಂದ ದೇಸಿ ಸಂಸ್ಕೃತಿಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಉಂಟು ಮಾಡಬಹುದು. ಗ್ರಾಮೀಣ ಭಾಗದಲ್ಲಿ ಕಲೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಗ್ರಾಮೀಣ ಭಾಗದಲ್ಲಿ ಅಂದಿನ ಕಾಲದಲ್ಲಿ ಜನರಿಗೆ ಮನರಂಜನೆ ನೀಡುವ ಕಾರ್ಯಕ್ರಮ ಇದಾಗಿತ್ತು. ಕಲಾವಿದರ ಕೈಚಳಕದಿಂದ ತೊಗಲು ಗೊಂಬೆ ನಾಟಕ ಉತ್ತಮವಾಗಿ ಮೂಡಿಬರುತ್ತಿತ್ತು. ಇದೊಂದು 3500 ವರ್ಷಗಳ ಇತಿಹಾಸ ಹೊಂದಿದ ಪ್ರಾಚೀನ ಕಲೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಮಾ ಟ್ರಸ್ಟ್ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ನಮ್ಮ ದೇಸೀಕಲೆಗಳಿಗೆ ವಿಶೇಷ ಸ್ಥಾನವಿದ್ದು, ಎಲ್ಲಾ ಕಲೆಗಳ ತಪೋಭೂಮಿ ನಮ್ಮದಾಗಿದೆ. ಸದ್ಭಾವನೆಗಳನ್ನು ರೂಪಿಸಿ ಸಾಕಾರಗೊಳಿಸಲು…

Read More

ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (INTAC) ಇದರ ವತಿಯಿಂದ ಕಾರ್ಯಕ್ರಮವನ್ನು ದಿನಾಂಕ 19 ನವೆಂಬರ್ 2024ರಿಂದ 25 ನವೆಂಬರ್ 2024 ರವರೆಗೆ ಪ್ರತಿ ದಿನ ಸಂಜೆ 5-30 ಗಂಟೆಗೆ ಮಂಗಳೂರಿನ ಬಲ್ಲಾಳ್ ಭಾಗ್, ಜಿ. ಜಿ. ರೋಡ್, ಕೊಡಿಯಾಲ್ ಗುತ್ತು (ಪಶ್ಚಿಮ), ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 19 ನವೆಂಬರ್ 2024ರಂದು ಹರಿದಾಸ ಶೇಣಿ ಮುರಳಿ ಇವರಿಂದ ‘ವಾಲಿ ಸುಗ್ರೀವರ ಕಾಳಗ’ ಹರಿಕಥೆ ನಡೆಯಲಿದ್ದು, ಇವರಿಗೆ ಶ್ರೀಪತಿ ಭಟ್ ಬೆಳ್ಳೇರಿ ಹಾರ್ಮೋನಿಯಂನಲ್ಲಿ ಮತ್ತು ಕೌಶಿಕ್ ಮಂಜನಾಡಿ ತಬಲಾದಲ್ಲಿ ಸಹಕರಿಸಲಿದ್ದಾರೆ. ದಿನಾಂಕ 20 ನವೆಂಬರ್ 2024ರಂದು “ಮೌಖಿಕ ಮಹಾಕಾವ್ಯಗಳ ತಯಾರಿಕೆಯಲ್ಲಿ ಸ್ಥಳೀಯ ಜ್ಞಾನದ ಪಾತ್ರ” ಎಂಬ ವಿಷಯದಲ್ಲಿ ಡಾ. ಕೆ. ಚಿನ್ನಪ್ಪ ಗೌಡ ಉಪನ್ಯಾಸ ನೀಡಲಿದ್ದಾರೆ. ದಿನಾಂಕ 21 ನವೆಂಬರ್ 2024ರಂದು ಯು. ಶ್ರೀನಿವಾಸ್ ಮಲ್ಯ ಇವರ “ಮಲ್ಯ ನಿವಾಸದ ಪ್ರದರ್ಶನದೊಂದಿಗೆ ಯು. ಶ್ರೀನಿವಾಸ್ ಮಲ್ಯ ಇವರ ಜನ್ಮ ವಾರ್ಷಿಕೋತ್ಸವದ…

Read More

ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿರುವ 12ನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ ದಿನಾಂಕ 12 ನವೆಂಬರ್ 2024ರಂದು ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣಾ ಸಮಾರಂಭ ಜರಗಿತು. ಈ ಸಮಾರಂಭದಲ್ಲಿ ‘ಬಾಳಪ್ಪ ಶೆಟ್ಟಿ ಪ್ರಶಸ್ತಿ’ ಸ್ವೀಕರಿಸಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಇವರು ಮಾತನಾಡಿ “ಯಕ್ಷಗಾನ ಕ್ಷೇತ್ರದ ಸುಧೀರ್ಘವಾದ ತನ್ನ ಯಾತ್ರೆಯಲ್ಲಿ ಸಾವಿರಾರು ಮಾನ – ಸಮ್ಮಾನಗಳು ಲಭಿಸಿವೆ; ಇದು 1023ನೇ ಸನ್ಮಾನ. ದೇಹದ ಕಸುವು ಕಡಿಮೆಯಾದರೂ ರಂಗಸ್ಥಳದಲ್ಲಿ ಅದು ಅರಿವಿಗೆ ಬರುವುದಿಲ್ಲ; ಕಾರಣ ರಂಗದ ಒಳಗೂ ಹೊರಗೂ ನಮಗೆ ಅಭಿಮಾನಿಗಳ ರಕ್ಷೆ ಇದೆ. ಕುಂಡಾವು ಮೇಳದಲ್ಲಿ ಬಾಳಪ್ಪ ಶೆಟ್ಟರು ಜೊತೆಗಿದ್ದಾಗ ಅವರ ಪ್ರಬುದ್ಧ ಹಾಸ್ಯವನ್ನು ಹತ್ತಿರದಿಂದ…

Read More

ಮಂಗಳೂರು : ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಹಾಗೂ ನರ್ಸಿಂಗ್ ವಿಭಾಗದ ವತಿಯಿಂದ ದಿನಾಂಕ 14 ನವೆಂಬರ್ 2024ರಂದು ಮಕ್ಕಳ ದಿನಾಚರಣೆಯನ್ನು ಆಸ್ಪತ್ರೆಯ ಸಭಾಂಗಣದಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಅನಿಲ್ ಶೆಟ್ಟಿಯವರ ಮೂಲಕ‌ ಹಾಗೂ ನರ್ಸಿಂಗ್ ವಿಭಾಗ ಮುಖ್ಯಸ್ಥರ ಸಮ್ಮುಖದಲ್ಲಿ ಜಾದೂವಿನ‌ ಮುಖಾಂತರವೇ ಉದ್ಘಾಟನೆ ಮಾಡಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಸಣ್ಣ ಮಕ್ಕಳ ಮನಸೆಳೆಯಲು ಕಲಾಸೃಷ್ಟಿ ಬಳಗದ ಇನೊಳಿಯ ಬ್ಯಾರೀಸ್ ತಾಂತ್ರಿಕ ಸಂಸ್ಥೆಯ ಪ್ರೊ‌ಫೆಸರ್ ಹಾಗೂ ಜಾದೂ ಪ್ರಶಸ್ತಿ ವಿಜೇತೆ ಮುಬೀನಾ ಪರವೀನ್ ತಾಜ್ ಮತ್ತು ಕಲಾಸೃಷ್ಟಿ ಬಳಗದ ನಿರ್ದೇಶಕಿ ಅಂತಾರಾಷ್ಟ್ರೀಯ ಜಾದೂ ಪ್ರಶಸ್ತಿ ವಿಜೇತೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಸಾಧಾರಣ ಪ್ರತಿಭೆ ಪ್ರಶಸ್ತಿ ವಿಜೇತೆ ಶಮಾ ಪರವೀನ್ ಮತ್ತಿತರ ಕಲಾವಿದರು ಅನೇಕ ವಿಸ್ಮಯಕಾರೀ ಜಾದೂ ಪ್ರದರ್ಶನ ನೀಡಿದರು. ಬಳಿಕ ಮುಬೀನಾರವರು ಚಿಕ್ಕ ಮಕ್ಕಳನ್ನೇ ವೇದಿಕೆಗೆ ಕರೆದು ಕೈ ಚಳಕ ತೋರಿಸಿದರು. ಈ ಪ್ರದರ್ಶನದ ಇನ್ನಿತರ ಮುಖ್ಯ ಕಲಾವಿದರಾಗಿ…

Read More

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಈ ಬಾರಿ ವಿನೂತನವಾಗಿ ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಇವರು ದಿನಾಂಕ 16 ನವೆಂಬರ್ 2024ರಂದು ಕೆ.ಆರ್.ಎಸ್.ನ ರಾಯಲ್ ಆರ್ಕಿಡ್ ನಲ್ಲಿ ಚಾಲನೆ ನೀಡಿದರು. ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗಿ ಭಾಗವಹಿಸಲು ರೂ.600/- ನಿಗದಿಯಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ ಸೈಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ನೊಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ‌ ಪಾವತಿ ಕೂಡ ಆನ್‌ಲೈನ್ ಮೂಲಕ‌ ಮಾಡಬೇಕಿರುತ್ತದೆ. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ನೊಂದಣಿಯಾಗುವವರಿಗೆ ಆನ್ ಲೈನ್ ಮೂಲಕ ವಸತಿ ಒದಗಿಸುವ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಹಾಗೂ ಆನ್ ಲೈನ್ ನಲ್ಲೇ ಫೋಟೋ ಸಹಿತ ಗುರುತಿನ…

Read More