Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭವು ಸಂಸ್ಥೆಯ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ದಿನಾಂಕ 17 ನವೆಂಬರ್ 2024ರಂದು ಅತ್ಯಂತ ಯಶಸ್ವಿಯಾಗಿ ಜರಗಿತು. ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿದ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಇವರು ಆರ್.ಎಲ್. ಭಟ್- ವಾರಿಜಾಕ್ಷಿ ಆರ್. ಭಟ್ ಗೌರವಾರ್ಥ ಅವರ ಸುಪುತ್ರ ಹರಿಪ್ರಸಾದ್ ಭಟ್ ಪ್ರಾಯೋಜಿಸಿದ ಬಣ್ಣದ ಕೋಣೆಯನ್ನು ಉದ್ಘಾಟಿಸಿದರು. ಹಾಗೆಯೇ ಸಿ.ಸಿ.ಟಿ.ವಿ.ಯ ಉದ್ಘಾಟನೆಯನ್ನು ದಾನಿ ಎಂ.ಸಿ. ಕಲ್ಕೂರ ಇವರು ನೆರವೇರಿಸಿದರು. ಹರೀಶ್ ರಾಯಸ್ ಇವರು ತಮ್ಮ ತೀರ್ಥ ರೂಪರ ಹೆಸರಿನಲ್ಲಿ ಸ್ಥಾಪಿಸಿದ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯ ನಿಧಿಯನ್ನು ಹಸ್ತಾಂತರಿಸಿದರು. ಶಾಸಕ ಯಶ್ಪಾಸಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ದಾನಿ ಕೆ.…
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ವಿಂಶತಿ ಸಂಭ್ರಮ ಅಂಗವಾಗಿ 13ನೇ ಸರಣಿ ತಾಳಮದ್ದಳೆ ಪಾರ್ತಿಸುಬ್ಬ ವಿರಚಿತ ಶ್ರೀರಾಮ ಪಟ್ಟಾಭಿಷೇಕ ಎಂಬ ಆಖ್ಯಾನದೊಂದಿಗೆ ದಿನಾಂಕ 16 ನವೆಂಬರ್ 2024ರಂದು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಬೊಳುವಾರು ಇಲ್ಲಿ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಅಚ್ಯುತ ಪಾಂಗಣ್ಣಾಯ ಮತ್ತು ಮಾಸ್ಟರ್ ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ದಶರಥ), ಕಿಶೋರಿ ದುಗ್ಗಪ್ಪ ನಡುಗಲ್ಲು (ಕೈಕೇಯಿ), ಶಾರದಾ ಅರಸ್ (ಶ್ರೀರಾಮ), ಪ್ರೇಮಲತಾ ರಾವ್ (ಲಕ್ಷ್ಮಣ), ಮನೋರಮಾ ಜಿ .ಭಟ್ (ಮಂಥರೆ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶುಭಾ ಗಣೇಶ್ ಪ್ರಾಯೋಜಿಸಿದ್ದರು.
ಚಿಕ್ಕಮಗಳೂರು : ರಂಗಮಂಡಲ ಬೆಂಗಳೂರು ಮತ್ತು ಅವನಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಜನರೆಡೆಗೆ ಕಾವ್ಯ ಕಾರ್ಯಕ್ರಮದ ಐದನೇ ಕವಿಗೋಷ್ಠಿಯನ್ನು ದಿನಾಂಕ 18 ನವೆಂಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಕಾಫಿನಾಡು ಚಿಕ್ಕಮಗಳೂರಿನ ಕ.ಸಾ.ಪ. ಆವರಣ, ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಕವಿಯತ್ರಿ ಮತ್ತು ಕಥೆಗಾರ್ತಿ ಸವಿತಾ ನಾಗಭೂಷಣ ಇವರು ಚಿಕ್ಕಮಗಳೂರು ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 11-30 ಗಂಟೆಗೆ ಕವಿಗೋಷ್ಠಿ 1 ಕೊಪ್ಪದ ಸಾಹಿತಿ ಎಸ್.ಎನ್. ಚಂದ್ರಕಲಾ ಹಾಗೂ ಮಧ್ಯಾಹ್ನ 1-30 ಗಂಟೆಗೆ ಕವಿಗೋಷ್ಠಿ 2 ಅಂಕಣಕಾರರು ಮತ್ತು ವಿದ್ವಾಂಸರಾದ ಡಾ. ಎಚ್.ಎಸ್. ಸತ್ಯನಾರಾಯಣ ಇವರುಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಜೆ 4-00 ಗಂಟೆಗೆ ಸರ್ವಾಧ್ಯಕ್ಷರೊಂದಿಗೆ ಸಂವಾದ, ಭಕ್ತನಕಟ್ಟೆ ಲೋಕೇಶ್, ರಮೇಶ್ ಕರಡೀಪುರ, ರಂಗಪಯಣ ಕಲಾತಂಡ (ರಿ.) ಹಿರೇನಲ್ಲೂರು ಶ್ರೀನಿವಾಸ್ ಮತ್ತು ತಂಡದ ಹಾಡುಗಾರರಿಂದ ‘ಪದ-ಪಾದ’ ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.
ಪುತ್ತೂರು : ಬೊಳುವಾರಿನ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ 56ನೇ ವಾರ್ಷಿಕೋತ್ಸವ ಮತ್ತು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ವರ್ಷಾಚರಣೆಯನ್ನು ವಿಶಿಷ್ಟವಾಗಿ ದಿನಾಂಕ 25 ಡಿಸೆಂಬರ್ 2024ರಂದು ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ಇದರ ಪೂರ್ವ ಸಿದ್ಧತಾ ಸಭೆಯು ಪರ್ಲಡ್ಕ ಅಗಸ್ತ್ಯ ನಿವಾಸದಲ್ಲಿ ದಿನಾಂಕ 14 ನವೆಂಬರ್ 2024ರಂದು ಜರಗಿತು. ಯಕ್ಷಗಾನ ಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದರು. ತಾಳಮದ್ದಳೆಯಾಗಿ ಉಭಯಸಂಘದ ಸದಸ್ಯರಿಂದ ಋಷಿ ಪತ್ನಿಯರ ಸಂವಾದ ಸರಣಿ, ಹಿರಿಯ ಕಲಾವಿದರ ತಾಳಮದ್ದಳೆ, ಸಭಾ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಸಾಧಕರಿಗೆ ‘ಯಕ್ಷಾಆಂಜನೇಯ ಪ್ರಶಸ್ತಿ’, ಮಹಿಳಾ ಭಾಗವತರಿಗೆ’ ವಿಂಶತಿ ಪ್ರಶಸ್ತಿ’ ಮತ್ತು ವಿಶೇಷ ಸಾಧಕ ಕಲಾವಿದರೊಬ್ಬರಿಗೆ ಬೆಂಗಳೂರಿನ ‘ಜಸ್ಟಿಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಪ್ರಶಸ್ತಿ’ ಪ್ರದಾನ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯದರ್ಶಿ ಆನಂದ ಸವಣೂರು, ಸಹಕಾರ್ಯದರ್ಶಿ ಅಚ್ಯುತ್ತ ಪಾಂಗಣ್ಣಾಯ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ದುಗ್ಗಪ್ಪ ಎನ್., ಬಟ್ಯಮೂಲೆ…
ಶಂಭೂರು : ಮಕ್ಕಳ ಕಲಾ ಲೋಕ, ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ ಹಾಗೂ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇದರ ಆಶ್ರಯದಲ್ಲಿ 18ನೇ ವರ್ಷದ ಬಂಟ್ವಾಳ ತಾಲೂಕು ‘ಮಕ್ಕಳ ಸಾಹಿತ್ಯ ಸಮ್ಮೇಳನ’ವನ್ನು ದಿನಾಂಕ 19 ನವೆಂಬರ್ 2024ರಂದು ಪೂರ್ವಾಹ್ನ 9-00 ಗಂಟೆಗೆ ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9-05 ಗಂಟೆಗೆ ಶೇಡಿಗುರಿಯಿಂದ ಹೊರಡುವ ಮೆರವಣಿಗೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಚಾಲನೆ ನೀಡುವರು. ಇಲ್ಲಿನ ಏಳನೇ ತರಗತಿ ವಿದ್ಯಾರ್ಥಿನಿ ಪ್ರೇಕ್ಷಾ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, 17ನೇ ಸಮ್ಮೇಳನಾಧ್ಯಕ್ಷೆ ಕಡೇಶಿವಾಲಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸಾನ್ವಿ ಸುವರ್ಣ ಸಮ್ಮೇಳನ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಕನ್ನಡ ಧ್ವಜಾರೋಹಣ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 9-50 ಗಂಟೆಗೆ ಸ್ವರಚನೆ ವಿಷಯ ಪ್ರಕಟಣೆ. ಉದ್ಘಟನಾ ಸಮಾರಂಭದಲ್ಲಿ ಮಕ್ಕಳ ಸ್ವರಚಿತ ಕೃತಿಗಳನ್ನು ಸಾಹಿತಿ ನಿವೃತ್ತ ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಇವರು ಬಿಡುಗಡೆಗೊಳಿಸುವರು. ಸಭಾ…
ಧಾರವಾಡ : ಪಂ. ನಾರಾಯಣರಾವ ಮುಜುಂದಾರ ಸ್ಮೃತಿ ಸಂಗೀತ ಸಭಾ ಧಾರವಾಡ ಸಂಸ್ಥೆಯು ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಧಾರವಾಡ ಇವರ ಸಹಯೋಗದಲ್ಲಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ. ಪಂ. ನಾರಾಯಣರಾವ ಮುಜುಂದಾರ ಅವರ 25ನೆಯ ಮತ್ತು ಅವರ ಮಗ ಪಂ. ಸುಧೀಂದ್ರ ಮುಜುಂದಾರ ಅವರ 18ನೆಯ ಪುಣ್ಯಸ್ಮರಣೆಯೊಂದಿಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು 17 ನವೆಂಬರ್ 2024ರಂದು ಧಾರವಾಡದ ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಬಳಿ ಇರುವ ಕನ್ನಡ ಸಾಹಿತ್ಯ ಸಭಾ ಭವನದಲ್ಲಿ ನಡೆಯಲಿದೆ. ಪಂ. ನಾರಾಯಣ ರಾವ ಮುಜುಂದಾರ ಪಂ.ಗುರುರಾವ ದೇಶಪಾಂಡೆ ಯವರ ಶಿಷ್ಯ. ಶುದ್ಧ ಶಾಸ್ತ್ರೀಯ ಸಂಗೀತವನ್ನು ಕಲಿತು, ಅದನ್ನೇ ತಮ್ಮ ಶಿಷ್ಯಂದಿರಿಗೆ ಹೇಳಿಕೊಟ್ಟ ಧೀಮಂತ. ಅವರ ಮಗ ಪಂ. ಸುಧೀಂದ್ರ ಮುಜುಂದಾರ ಇವರು ಒಬ್ಬ ಅತ್ಯುತ್ತಮ ತಬಲಾಪಟು ಆಗಿದ್ದು, ಪಂ.ಗಿರೀಶ ಆವಟೆ ಮತ್ತು ಪಂ.ಬಸವರಾಜ ಬೆಂಡಿಗೇರಿ ಅವರಲ್ಲಿ ತಬಲಾ ಕಲಿತು ಅನೇಕ ಕಲಾವಿದರಿಗೆ ಸಾಥ್ ಸಂಗತ್ ಮಾಡಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ವಿಭಾಗದಲ್ಲಿ…
ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಪರಂಪರಾ ಕಲ್ಚರಲ್ ಫೌಂಡೇಷನ್ (ರಿ.) ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ಐದನೇ ಕವಿಗೋಷ್ಠಿ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಹೀಗೆ ಜನರೆಡೆಗೆ ಕಾವ್ಯ ಕೊಂಡುಹೋಗುವ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನಿಂದ ಕಾಫಿನಾಡು ಚಿಕ್ಕಮಗಳೂರಿನ ಕಡೆಗೆ ‘ಕಾವ್ಯ ದೀವಟಿಗೆಯ ಪಯಣ’ವು ದಿನಾಂಕ 17 ನವೆಂಬರ್ 2024ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರಿನ ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ ಲಲಿತಕಲಾ ಅಕಾಡೆಮಿ ವರ್ಣ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ. ಬೆಂಗಳೂರು ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮಹಾಬಲ ಮೂರ್ತಿ ಕೊಡ್ಲೆಕೆರೆ ಇವರು ವಹಿಸಲಿದ್ದು, ಉದ್ಘಾಟಕರಾಗಿ ಪ್ರಗತಿಪರ ಹೋರಾಟಗಾರರು ಮತ್ತು ಸಂಸ್ಕೃತಿ ಚಿಂತಕರಾದ ಡಾ. ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ನಾಡಿನ ಖ್ಯಾತ ಕವಿಗಳಿಂದ ‘ಕವಿತಾ ವಾಚನ’ ಮತ್ತು ‘ಪದ ಪಾದ’ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು : ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆಸುತ್ತಿರುವ ‘ನೃತ್ಯಾಮೃತ 12’ ಸರಣಿ ಕಾರ್ಯಕ್ರಮದ ಅಂಗವಾಗಿ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ ಎಂಬ ಪ್ರಾತ್ಯಕ್ಷಿಕೆ ಸಹಿತ ವಿಚಾರ ಸಂಕಿರಣ – ಸಂವಾದವನ್ನು ಆಯೋಜಿಸಿದೆ. ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ದಿನಾಂಕ 18 ನವಂಬರ್ 2024ರ ಸೋಮವಾರದಂದು ಬೆಳಗ್ಗೆ 9-30 ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಈ ಕಾರ್ಯಾಗಾರವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಉದ್ಘಾಟಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾದ ರೆ. ಡಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಸಂಘದ ನಿರ್ದೇಶಕಿಯಾಗಿರುವ ಶ್ರೀಮತಿ ಸುಭದ್ರಾ ರಾವ್, ನೃತ್ಯ ಸೌರಭ ನಾಟ್ಯಾಲಯ ಉಳ್ಳಾಲದ ನಿರ್ದೇಶಕರಾದ ವಿದ್ವಾನ್ ಪ್ರಮೋದ್ ಉಳ್ಳಾಲ್ ಭಾಗವಹಿಸಲಿದ್ದು, ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 18-11-2024ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಶ್ರೀಮತಿ ಸುಧಾ ಆಡುಕಳ ಇವರು ರಚಿಸಿರುವ ಡಾ. ಶ್ರೀಪಾದ ಭಟ್ ನಿರ್ದೇಶನ ಹಾಗೂ ವಿದುಷಿ ಮಾನಸಿ ಸುಧೀರ್ ನೃತ್ಯಸಾಂಗತ್ಯದಲ್ಲಿ ವಿದುಷಿ ಅನಘಶ್ರೀ ಇವರು ‘ನೃತ್ಯಗಾಥ’ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಡಾ. ವೀರಕುಮಾರ್ ಹಾಗೂ ಡಾ. ಉಷಾ ಪಾರ್ವತಿ ದಂಪತಿಗಳ ಪುತ್ರಿಯಾದ ವಿದುಷಿ ಅನಘಶ್ರೀ ನೃತ್ಯನಿಕೇತನ ಕೊಡವೂರು ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ಸುಧೀರ್ ರಾವ್ ಕೊಡವೂರು ಮತ್ತು ವಿದುಷಿ ಶ್ರೀಮತಿ ಮಾನಸಿ ಸುಧೀರ್ ಇವರ ಶಿಷ್ಯೆಯಾಗಿ ಕಳೆದ 18 ವರುಷಗಳಿಂದ ಭರತನಾಟ್ಯ ಅಭ್ಯಾಸಿಸುತ್ತಿದ್ದಾಳೆ. ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿ ಉಡುಪಿ ಜಿಲ್ಲೆಗೆ…
ಕಾಸರಗೋಡು: ಕಾಸರಗೋಡು ಪಾರೆಕಟ್ಟೆ ಕನ್ನಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ದಿನಾಂಕ 10 ನವೆಂಬರ್ 2024ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಸಿ. ಎನ್. ಅಶೋಕ್ ಮಾತನಾಡಿ “ಗಡಿನಾಡು ಕಾಸರಗೋಡಿನಲ್ಲಿ ನಡೆಯುತ್ತಿರುವ ಕನ್ನಡ ಚಟುವಟಿಕೆಗಳು ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಗಡಿನಾಡಿನ ಕನ್ನಡಿಗರು ನಡೆಸುತ್ತಿರುವ ಹೋರಾಟ ಶ್ಲಾಘನೀಯವಾದುದು.” ಎಂದರು. ಹರ್ಷಿತಾ ಪಿ. ಪೆರ್ಲ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರವಣ ಬೆಳಗೊಳದ ಶಾಸಕರಾದ ಸಿ. ಎನ್. ಬಾಲಕೃಷ್ಣ ಹಾಗೂ ಕುಸುಮಾ ದಂಪತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಹ ಅಧ್ಯಕ್ಷೆ…