Author: roovari

ಧಾರವಾಡ : ಪಂಡಿತ್ ವಸಂತ ಕನಕಾಪುರ ಧಾರವಾಡ ಇವರ ವತಿಯಿಂದ ‘ಗುರು ಸ್ಮರಣೆ’ – ‘ನಾದಾರ್ಪಣೆ’ ರಾಗಮಿತ್ರಾ ಪ್ರತಿಷ್ಠಾನ (ರಿ.) ಶಿರಸಿ ಅರ್ಪಿಸುವ ಸನ್ಮಾನ ಮತ್ತು ಸಂಗೀತ ಕಾರ್ಯಕ್ರಮವು ದಿನಾಂಕ 17 ನವೆಂಬರ್ 2024ರಂದು ಸಂಜೆ 5-30 ಗಂಟೆಗೆ ಧಾರವಾಡದ ಸೃಜನ ಶಿರೂರು ರಂಗ ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗುರು ಮಾತೆ ಬನುತಾಯಿ ಕನಕಾಪುರ ಇವರಿಗೆ ಗೌರವ ಸನ್ಮಾನ ಹಾಗೂ ಬೆಂಗಳೂರಿನ ಪಂಡಿತ್ ವ್ಯಾಸಮೂರ್ತಿ ಕಟ್ಟಿ ಇವರಿಗೆ ಪಂಡಿತ ವಸಂತ ಕನಕಾಪುರ ಸ್ಮರಣಾರ್ಥ ‘ಕನಕಶ್ರೀ’ ಬಿರುದು ಪ್ರದಾನ ಮಾಡಲಾಗುವುದು. ಹುಬ್ಬಳ್ಳಿಯ ಪಂಡಿತ್ ಜಯತೀರ್ಥ ಮೇವುಂಡಿ ಮತ್ತು ಬೆಂಗಳೂರಿನ ವಿದುಷಿ ಪೂರ್ಣಿಮಾ ಕುಲಕರ್ಣಿ ಇವರ ಗಾಯನ ಹಾಗೂ ಬೆಂಗಳೂರಿನ ಪಂಡಿತ್ ವ್ಯಾಸಮೂರ್ತಿ ಕಟ್ಟಿ ಹಾರ್ಮೋನಿಯಂ ಸೋಲೋ ನಡೆಯಲಿದ್ದು, ಮಂಗಳೂರಿನ ವಿದ್ವಾನ್ ನರೇಂದ್ರ ಎಲ್. ನಾಯಕ ಮತ್ತು ಶಿರಸಿಯ ವಿದ್ವಾನ್ ಪ್ರಕಾಶ ಹೆಗಡೆ ಇವರು ಹಾರ್ಮೋನಿಯಂನಲ್ಲಿ, ಬೆಂಗಳೂರಿನ ವಿದ್ವಾನ್ ಗುರುಮೂರ್ತಿ ವೈದ್ಯ ಮತ್ತು ಧಾರವಾಡದ ವಿದ್ವಾನ್ ಶ್ರೀಧರ ಮಾಂಡ್ರೆ ಇವರು ತಬಲದಲ್ಲಿ ಸಹಕರಿಸಲಿದ್ದಾರೆ.

Read More

ಸಾಣೇಹಳ್ಳಿ : ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ನಾಟಕೋತ್ಸವ’ದ ಸಮಾರೋಪ ಮತ್ತು ಶ್ರೀ ಶಿವಕುಮಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 09 ನವೆಂಬರ್ 2024ರಂದು ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ಜರಗಿತು. ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ “ಬಸವಾದಿ ಶಿವಶರಣರ ಆಶಯದಂತೆ ಪ್ರತಿಯೊಬ್ಬರೂ ಅರಿವು-ಆಚಾರವನ್ನು ಒಂದಾಗಿಸಿಕೊಂಡರೆ ಶರಣರಾಗಬಹುದು. ಸಂಕಮ್ಮ, ಕಕ್ಕಯ್ಯ, ಚೌಡಯ್ಯ, ಚೆನ್ನಯ್ಯ ಮೊದಲಾದ ಸಾಮಾನ್ಯರೂ ಕೂಡ ಶರಣರಾಗಿರುವುದು ನಮಗೆ ಪ್ರೇರಣೆ ನೀಡಬೇಕು. ಸಜ್ಜನರ ಸಂಗ ಹೆಚ್ಚಾದಂತೆ ನಾವೂ ಸಜ್ಜನರಾಗುತ್ತೇವೆ. ಬಸವಣ್ಣನವರ ಆಶಯಗಳನ್ನು ಜನಮನಕ್ಕೆ ಮುಟ್ಟಿಸುವ ಕೆಲಸ ಮಾಡಬೇಕು. ಶಿವಕುಮಾರ ಪ್ರಶಸ್ತಿ ಪಡೆದ ಮಹಂತೇಶ್ ಗಜೇಂದ್ರಗಡ ಇವರ ರಂಗಕಾರ್ಯ ಅನನ್ಯವಾದುದು. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಅನೇಕರ ಸಹಾಯ, ಸಹಕಾರವಿದೆ. ಅವರಿಗೆಲ್ಲರಿಗೂ ಕೃತಜ್ಞತೆಗಳು” ಎಂದರು. ಪ್ರಾಸ್ತಾವಿಕವಾಗಿ ಮತ್ತು ಶಿವಕುಮಾರ ಪ್ರಶಸ್ತಿ ಪುರಸ್ಕೃತರ ಕುರಿತು ಬೆಂಗಳೂರಿನ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಮಾತನಾಡಿ “ಕಳೆದ ಹದಿನೈದು ದಿನಗಳ ಹಿಂದೆ ಬೆನ್ನುಹುರಿಯ ಮೇಜರ್…

Read More

ಬೆಂಗಳೂರು : ಎಸ್.ವಿ.ಎನ್. ಮ್ಯೂಜಿಕ್ ಅಕಾಡೆಮಿ ಮತ್ತು ಭಗವಾನ್ ಶ್ರೀ ರಮಣ ಮಹರ್ಷಿ ರಿಸರ್ಚ್ ಸೆಂಟರ್ ಪ್ರಸ್ತುತ ಪಡಿಸುವ ‘ಉದಯೋನ್ಮುಖಿ ಎಸ್.ವಿ.ಎನ್.- ರಮಣ ಮ್ಯೂಜಿಕ್ ಯೂತ್ ಫೆಸ್ಟಿವಲ್ 2024’ ರಾಷ್ಟ್ರೀಯ ಮಟ್ಟದ ಸಂಗೀತ ಕಛೇರಿ ಸ್ಪರ್ಧೆಯನ್ನು ದಿನಾಂಕ 17 ನವೆಂಬರ್ 2024 ಮತ್ತು 24 ನವೆಂಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ಸಂಜಯ್ ನಗರದ ರಮಣ ಮಹರ್ಷಿ ಹೆರಿಟೇಜ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 14 ಯುವ ಕಲಾವಿದರಿಂದ ಸಂಗೀತ ಕಛೇರಿಗಳು ನಡೆಯಲಿದ್ದು, 24 ನವೆಂಬರ್ 2024ರಂದು ಸಮಾರೋಪ ಸಮಾರಂಭ, ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9482965659 ಮತ್ತು 9844339611.

Read More

ಬೆಂಗಳೂರು : ಹವ್ಯಾಸಿ ಯಕ್ಷಗಾನ ರಂಗಭೂಮಿಯಲ್ಲಿ ತನ್ನದೇ ಆದ ಸಾಧನೆಯನ್ನು ಮಾಡಿರುವ ಯಕ್ಷಸಿಂಚನ ಟ್ರಸ್ಟ್ (ರಿ), ಬೆಂಗಳೂರು ಇವರು 15ನೇ ವರುಷದ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 17ನೇ ನವೆಂಬರ್ 2024ನೇ ಭಾನುವಾರ ‘ಬಡಗುತಿಟ್ಟು ಪೌರಾಣಿಕ ಯಕ್ಷೋತ್ಸವ’ವನ್ನು ಬೆಂಗಳೂರಿನ ಕೆಂಪೇಗೌಡನಗರ,ರಾಮಕೃಷ್ಣ ಮಠ ಬಡಾವಣೆ, ಗವಿಪುರ ಸಾಲು ಛತ್ರಗಳ ಎದುರು, ಉದಯಭಾನು ಕಲಾಸಂಘದಲ್ಲಿ ಆಯೋಜಿಸಿದ್ದಾರೆ. ಮಧ್ಯಾಹ್ನ 3-00 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಯಕ್ಷಕಲಾ ಅಕಾಡೆಮಿ ಬೆಂಗಳೂರು ಇದರ ಬಾಲ ಕಲಾವಿದರುಗಳು ಹಟ್ಟಿಯಂಗಡಿ ರಾಮಭಟ್ಟ ರಚಿತ ‘ಸುಭದ್ರಾ ಕಲ್ಯಾಣ’ ಪ್ರಸಂಗದ ಪ್ರದರ್ಶನಗೈಯುತ್ತಿದ್ದಾರೆ. ನಂತರ ಸಂಜೆ 5-00 ಗಂಟೆಗೆ ಯಕ್ಷಸಿಂಚನ ತಂಡದ ಕಲಾವಿದರುಗಳು ಬೊಟ್ಟಿಕೆರೆ ಪುರುಷೋತ್ತಮ ಪೂಂಜ ರಚಿತ ‘ಮಾನಿಷಾದ’ ಪ್ರಸಂಗವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗುರುಗಳು ಹಾಗೂ ಭಾಗವತರಾದ ಶ್ರೀ ಉಮೇಶ್ ಭಟ್ ಬಾಡ ಇವರ ನಾಲ್ಕು ದಶಕಗಳ ಯಕ್ಷಗಾನ ಕೈಂಕರ್ಯಕ್ಕಾಗಿ 2024ನೇ ಸಾಲಿನ ‘ಸಾರ್ಥಕ ಸಾಧಕ ಗೌರವ ಪ್ರಶಸ್ತಿ’ ಪ್ರದಾನವಾಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಅರ್ಥಧಾರಿಗಳಾದ ಶ್ರೀ ಮೋಹನ್…

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಕಾರ್ಯಕ್ರಮವು ದಿನಾಂಕ 14 ನವೆಂಬರ್ 2024ರ ಗುರುವಾರ ಉಡುಪಿಯ ಕಿದಿಯೂರು ಹೋಟೆಲಿನ ಶೇಷಶಯನ ಬಾಲ್ಕನಿ ಸಭಾಂಗಣದಲ್ಲಿ ನಡೆಯಿತು.. ರಾಜ್ಯದ ಮೂವರು ಹಿರಿಯ ಸಾಹಿತಿಗಳಾದ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಂಗಳೂರಿನ ಡಾ. ಎಚ್.ಎಸ್. ಸತ್ಯನಾರಾಯಣ (ವಿಮರ್ಶೆ), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಗಣಕ ಪಿತಾಮಹ ನಾಡೋಜ ಡಾ. ಕೆ.ಪಿ. ರಾವ್ ವಹಿಸಿ ಮಾತನಾಡುತ್ತಾ “ಎಲ್ಲ ಪ್ರಶಸ್ತಿ ಪುರಸ್ಕೃತರು ಅಭಿನಂದನಾರ್ಹರು. ಸಾಹಿತ್ಯ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಕಾಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ತರಲಿದ್ದು, ಇದರ ಕುರಿತು ನಾವು ಎಚ್ಚರದಿಂದ ಇರಬೇಕು…

Read More

ಬಂಟ್ವಾಳ : ಮಡಂತ್ಯಾರ್, ಬಸವನಗುಡಿ ಇಲ್ಲಿರುವ ವಿಶ್ವಕರ್ಮ ಸಭಾಭವನದಲ್ಲಿ ದಿನಾಂಕ 19 ನವೆಂಬರ್ 2024ರಂದು ಚಿತ್ರಕಲಾ ತರಗತಿ ಶುಭಾರಂಭಗೊಳ್ಳಲಿದೆ. ತರಗತಿಯು ಪ್ರತಿ ಮಂಗಳವಾರ ಸಂಜೆ 5-00ರಿಂದ 6-00 ಗಂಟೆ ತನಕ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9611004700 ಮತ್ತು 9008819157 ಚಿತ್ರಕಲಾ ಶಿಕ್ಷಕರಾದ ಹರೀಶ್ ಯಂ. ಆಚಾರ್ಯ ಇವರನ್ನು ಸಂಪರ್ಕಿಸಿರಿ.

Read More

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಕೃಪಾಶ್ರಯದಲ್ಲಿ ಯಕ್ಷರಂಗ ಪುತ್ತೂರು ದ.ಕ. ಇದರ ವತಿಯಿಂದ ಬಡಗುತಿಟ್ಟಿನ ಯಕ್ಷಗಾನ ಬಯಲಾಟವನ್ನು ದಿನಾಂಕ 16 ನವೆಂಬರ್ 2024ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ‘ಸುಧನ್ವಾರ್ಜುನ – ಗದಾಯುದ್ ಪೌರಾಣಿಕ ಕಥಾನಕಗಳ ಪ್ರಸಂಗದ ಯಕ್ಷಗಾನ ಬಯಲಾಟದಲ್ಲಿ ಹಿಮ್ಮೇಳದಲ್ಲಿ ಶ್ರೀ ರಾಮಕೃಷ್ಣ ಹಿಲ್ಲೂರು ಮತ್ತು ಶ್ರೀ ಸರ್ವೇಶ್ವರ ಹೆಗಡೆ ಭಾಗವತರಾಗಿ, ಶ್ರೀ ರಾಘವೇಂದ್ರ ಯಲ್ಲಾಪುರ ಮತ್ತು ಶ್ರೀ ಪ್ರಜ್ವಲ ಮುಂಡಾಡಿ ಮೃದಂಗ ಮತ್ತು ಚೆಂಡೆಯಲ್ಲಿ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಶ್ರೀ ಉದಯ ಹೆಗಡೆ ಕಡಬಾಳ – ಸುಧನ್ವ, ಶ್ರೀ ವಿದ್ಯಾಧರ ಜಲವಳ್ಳಿ – ಕೌರವ, ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ – ಅರ್ಜುನ, ಶ್ರೀ ಆನಂದ ಕೆಕ್ಕಾರು – ಸಂಜಯ, ಶ್ರೀ ಕೆ.ಜಿ. ಕಾರ್ತಿಕ – ಪ್ರದ್ಯುಮ್ನ, ಶ್ರೀ ಮೂರೂರು ನಾಗೇಂದ್ರ – ಧರ್ಮರಾಯ, ಶ್ರೀ ಶಂಕರ ಹೆಗಡೆ ನೀಲ್ಕೋಡು – ಪ್ರಭಾವತಿ, ಶ್ರೀ ಶಂಕರ…

Read More

ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 17 ನವೆಂಬರ್ 2024ರಂದು ಅಪರಾಹ್ನ 2-00 ಗಂಟೆಗೆ ಉಡುಪಿಯ ಕಲಾರಂಗ ಐ.ವೈ.ಸಿ. ಸಭಾಭವನದಲ್ಲಿ ಆಯೋಜಿಸಲಾಗಿದೆ. ಅಪರಾಹ್ನ 1-45 ಗಂಟೆಗೆ ‘ನವರಸಾಯನ : ಯಕ್ಷಗಾಯನ’ ದೇವಿ ಪ್ರಸಾದ್ ಆಳ್ವ ತಾಳಪಡಿ ಮತ್ತು ಶಾಲಿನಿ ಹೆಬ್ಬಾರ್ ಇವರಿಗೆ ಮದ್ದಳೆಯಲ್ಲಿ ಚೈತನ್ಯ ಕೃಷ್ಣ ಪದ್ಯಾಣ ಚೆಂಡೆಯಲ್ಲಿ ಸೂರಜ್ ಪುನರೂರು ಸಹಕರಿಸಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಪೇಜಾವರ ಮಠಾಧೀಶರಾದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಇವರು ಆರ್.ಎಲ್. ಭಟ್ – ವಾರಿಜಾಕ್ಷಿ ಆರ್. ಭಟ್ ಗೌರವಾರ್ಥ ಪ್ರಸಾಧನ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ‘ಯಕ್ಷಚೇತನ ಪ್ರಶಸ್ತಿ’, ಶ್ರೀವಿಶ್ವೇಶ ತೀರ್ಥ ಪ್ರಶಸ್ತಿ’ ಮತ್ತು ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಬಡಗುತಿಟ್ಟಿನ ಕಲಾವಿದರಿಂದ ‘ಬಭ್ರುವಾಹನ…

Read More

ಉಡುಪಿ : ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನಾ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ 46ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 06, 07 ಮತ್ತು 08 ಡಿಸೆಂಬರ್ 2024ರಂದು ಉಡುಪಿಯ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗಾಗಿ  ವಾದಿರಾಜ-ಕನಕ ಗಾಯನ ಸ್ಪರ್ಧೆಯನ್ನು ದಿನಾಂಕ 07 ಡಿಸೆಂಬರ್ 2024ರಂದು ಮಧ್ಯಾಹ್ನ ಘಂಟೆ 2.00ರಿಂದ ಎಂ. ಜಿ. ಎಂ ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿಯಲ್ಲಿ ಆಯೋಜಿಸಲಾಗಿದೆ, ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿ, ತೀರ್ಪುಗಾರರು ಕೇಳುವ ನಾಲ್ಕು ಕೀರ್ತನೆಗಳಲ್ಲಿ ಯಾವುದಾದರು ಒಂದು ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ವಿಳಾಸವನ್ನು 01 ಡಿಸೆಂಬರ್…

Read More

ಕಾಸರಗೋಡು :  ಬರಹಗಾರ್ತಿ ಪ್ರಸನ್ನಾ ವಿ. ಚೆಕ್ಕೆಮನೆ ಇವರ ಎರಡು ಹೊಸ ಕೃತಿಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 11 ನವೆಂಬರ್ 2024ರ ಸೋಮವಾರ ಸಂಜೆ ಎದುರ್ತೋಡಿನ ‘ಸೀ ಕ್ಯೂಬ್’ ಇಲ್ಲಿ  ನಡೆಯಿತು. ಪ್ರಸನ್ನಾ ಅವರ ಹನ್ನೊಂದನೇ ಕೃತಿ ‘ಬಾನಂಚಿನ ಹೊಸಗಾನ’ ಪುಸ್ತಕವನ್ನು ಭಾರತೀಯ ಭೂ ಸೇನೆಯ ನಿವೃತ್ತ ಕಮಾಂಡೋ ಶ್ಯಾಮರಾಜ್ ಇ. ವಿ. ಹಾಗೂ ಹನ್ನೆರಡನೇ ಕೃತಿ ‘ಪೋಗದೆ ಇರೆಲೋ ರಂಗ…’ ಪುಸ್ತಕವನ್ನು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷರಾದ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ ಲೋಕಾರ್ಪಣೆಗೊಳಿಸಿದರು. ಸರಳ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಕನ್ನಡ ಸಾಹಿತ ಪರಿಷತ್ ಗಡಿನಾಡ ಘಟಕದ ಅಧ್ಯಕ್ಷರಾದ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ “ಕಾಸರಗೋಡು ಎಂದಿಗೂ ಕನ್ನಡದ ಕಂಪನ್ನು ಹೊಂದಿರುವ ಪ್ರದೇಶವಾಗಿದೆ. ಇಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿದ ಅನೇಕ ಘಟಾನುಘಟಿಗಳು ಕನ್ನಡಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದಾರೆ.  ಯಾವತ್ತೂ ಕಾರ್ಯಕ್ರಮಗಳು ಹೃದಯಕ್ಕೆ ಹತ್ತಿರವಾಗಿ, ಮನಸ್ಸಿಗೆ ಸಂತೋಷ ನೀಡುವಂತಿರಬೇಕು. ಇಂತಹ ಸನ್ನಿವೇಶದಲ್ಲಿ ಈ ಕೃತಿ ಲೋಕಾರ್ಪಣೆಗೊಳ್ಳುತಿರುವುದು…

Read More