Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 15-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ಕುಮಾರಿ ಗೌತಮಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ರಾಘವೇಂದ್ರ ಸೋಮಯಾಜಿ ಮತ್ತು ಅನುರಾಧಾ ಸೋಮಯಾಜಿ ಇವರ ಸುಪುತ್ರಿಯಾಗಿರುವ ಗೌತಮಿ ಎಂ. ಸೋಮಯಾಜಿ ಇವರು 2013ರಿಂದ ವಿದುಷಿ ಮಾನಸಿ ಸುಧೀರ್ ಇವರಲ್ಲಿ ನೃತ್ಯಾಭ್ಯಾಸ ಆರಂಭಿಸಿದ್ದು, ಭರತನಾಟ್ಯ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳನ್ನು ವಿದ್ವಾನ್ ಶ್ರೀ ಸುಧೀರ್ ರಾವ್ ಕೊಡವೂರು ಇವರ ಮಾರ್ಗದರ್ಶನದಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಪ್ರಸ್ತುತ ವಿದ್ವತ್ ಪಾಠಗಳನ್ನು ಕಲಿಯುತ್ತಿದ್ದಾರೆ. ಗುರು ಶ್ರೀ ನಾಗರಾಜ ಉಪಾಧ್ಯಾಯ ಇವರ ಮಾರ್ಗದರ್ಶನದಲ್ಲಿ ಸಂಗೀತ ತರಗತಿಯ ಜೂನಿಯರ್ ಮುಗಿಸಿ, ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿದ್ದು, ಯಕ್ಷಗಾನ ಕಲೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಕಾಸರಗೋಡು : ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನಡೆಯುತ್ತಿರುವ ಈ ವರ್ಷದ ನಾಟ್ಯ ತರಗತಿ ಮತ್ತು ಹೊಸದಾಗಿ ಯಕ್ಷಗಾನ ಹಿಮ್ಮೇಳ ತರಗತಿಯನ್ನು ಯಕ್ಷರಂಗದ ಖ್ಯಾತ ಕಲಾವಿದ ರಾಧಾಕೃಷ್ಣ ನಾವಡ ಮಧೂರು ಇವರು ದಿನಾಂಕ 06-07-2024ರಂದು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನದ ಮಹತ್ವದ ಕುರಿತು ವಿಸ್ತಾರವಾಗಿ ನುಡಿದರು. ತರಬೇತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಕೆ.ಎನ್. ರಾಮಕೃಷ್ಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಹಿಮ್ಮೇಳ ಗುರುಗಳಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಘವ ಬಲ್ಲಾಳ್ ಕಾರಡ್ಕ, ನಾಟ್ಯ ಗುರುಗಳಾದ ರಾಕೇಶ್ ರೈ ಅಡ್ಕ, ಶ್ರೀ ವೆಂಕಟರಮಣ ಸ್ವಾಮಿ ಕೃಪಾಶ್ರಿತ ಕಲಾ ಸಂಘದ ಅಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು. ನಾಟ್ಯ ತರಬೇತಿ ಉಚಿತವಾಗಿ ನೀಡುತ್ತಿದ್ದು, ಹಿಮ್ಮೇಳ ತರಗತಿಗೆ ಸಣ್ಣ ಶುಲ್ಕವನ್ನಿರಿಸಿ ತರಬೇತಿ ನೀಡಲಾಗುವುದು. ರಾಮಕೃಷ್ಣ ಹೊಳ್ಳ ಸ್ವಾಗತಿಸಿ, ಕಿಶೋರ್ ಕುಮಾರ್ ವಂದಿಸಿದರು.
ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು, ಗುರುಕುಲ ಕಲಾ ಪ್ರತಿಷ್ಠಾನ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಸಹಕಾರದೊಂದಿಗೆ, ಪುತ್ತೂರಿನ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ಮುಂಗಾರು ಕವಿಗೋಷ್ಠಿ (ಕವಿತೆಯೊಂದಿಗೆ ಪುಷ್ಪವೃಷ್ಠಿ) ಕಾರ್ಯಕ್ರಮವು ದಿನಾಂಕ 17-07-2024ರಂದು ಪುತ್ತೂರಿನ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಹೋಟೆಲ್ ಸ್ವಾಗತ್ ಒಂದನೇ ಮಹಡಿಯಲ್ಲಿ ನಡೆಯಲಿದೆ. ಪುತ್ತೂರು ತಾಲೂಕು ಕ.ಸಾ.ಪ.ದ ಡಾ. ಹರ್ಷ ಕುಮಾರ್ ರೈ ಮಾಡಾವು ಇವರ ಅಧ್ಯಕ್ಷತೆಯಲ್ಲಿ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಪ್ರಪುಲ್ಲ ಗಣೇಶ್ ಇವರು ಉದ್ಘಾಟನೆ ಮಾಡಲಿದ್ದಾರೆ. ಗುರುಕುಲ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿರುವರು.
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕಾಂಜವೇ ಸಾಂಸ್ಕೃತಿಕ ವೇದಿಕೆ ಬೆಳ್ತಂಗಡಿ, ವಿದ್ಯಾಪ್ರಕಾಶನ ಅತ್ತಾವರ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ಶೀನಾ ನಾಡೋಳಿಯವರ ‘ಬೊಳಂತ್ಯೆ-ಉರ್ಪೆಲ್’ (ತುಳು ಅಕಾಡೆಮಿ ಪ್ರಕಟಿತ), ‘ಧರ್ಮದೃಷ್ಟಿ’ ಮತ್ತು ‘ಫೀಸ್ ನನ್ನ ಫೀಸ್ ಕೊಡಿ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 12-07-2024ರಂದು ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಜಾನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಮಾತನಾಡಿ, “ಒಂದು ಕಾಲದಲ್ಲಿ ಅನುವಾದ ಸಾಹಿತ್ಯ ಎರಡನೇ ದರ್ಜೆಯ ಸಾಹಿತ್ಯ ಎಂಬ ಅಭಿಪ್ರಾಯ ಇತ್ತು. ಆದರೆ ಒಂದು ಸಾಹಿತ್ಯದ ಗ್ರಹಿಕೆಗೆ ಸೀಮಿತವಾಗಿ ಈ ಅಭಿಪ್ರಾಯವಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಲೇಖಕ ಶೀನಾ ಅವರು ಅನುವಾದಿಸಿರುವ ಆಂಗ್ಲ ಕವಿತೆಗಳು ತುಳುವಿನದ್ದೇ ಎಂಬಂತೆ ಇವೆ. ಅಷ್ಟರ ಮಟ್ಟಿಗೆ ತುಳುವಿನ ಸಂದರ್ಭಕ್ಕೆ ಒಗ್ಗಿಸಲು ಅವರು ಯಶಸ್ವಿಯಾಗಿದ್ದಾರೆ. ಇಂಗ್ಲೀಷ್ ಕಾವ್ಯವನ್ನು ತುಳುವಿಗೆ ಸಮರ್ಪಕವಾಗಿ ದಾಟಿಸಿರುವ ಅವರ ಕೃತಿಗಳಲ್ಲಿ ಸಂಸ್ಕೃತಿ ಅನುವಾದದ ಅತ್ಯುತ್ತಮ ಮಾದರಿಯನ್ನು ಕಾಣಬಹುದಾಗಿದೆ” ಎಂದರು. ತುಳು ಸಾಹಿತ್ಯ ಅಕಾಡೆಮಿ…
ಉಡುಪಿ : ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರು ಸಾಹಿತ್ಯದ ಕಾವ್ಯ , ಕತೆ, ನಾಟಕ, ವಿಮರ್ಶೆ, ಅಂಕಣ ಬರಹ, ಅನುವಾದ, ಸಂಶೋಧನೆ ಮಂತಾದ ಪ್ರಕಾರಗಳಲ್ಲಿ ಈಗಾಗಲೇ ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಕಾಯಕಾವ್ಯ’, ‘ಅವನು ಹೆಣ್ಣಾಗಬೇಕು’ ಹಾಗೂ ‘ನಕ್ಷತ್ರ ನಕ್ಕ ರಾತ್ರಿ’, ಮುಂತಾದ ಕವನ ಸಂಗ್ರಹಗಳು, ‘ತೊಗಲು ಗೊಂಬೆ’ ಕಾದಂಬರಿ, ‘ಇರವಿನ ಅರಿವು’ ಮತ್ತು ‘ಮೊಗ್ಗಿನ ಮಾತು’, ಮುಂತಾದವು ಇವರ ಕೆಲವು ಕೃತಿಗಳು. ಕನಕದಾಸರ ಕೀರ್ತನೆಗಳನ್ನು ಮತ್ತು ವಚನಗಳನ್ನು ತುಳುವಿಗೆ ಅನುವಾದ ಮಾಡಿರುವ ಇವರು ಕನಕನ ಕೃತಿಗಳನ್ನು ಆಧರಿಸಿ ನಾಟಕಗಳನ್ನು ಬರೆದಿದ್ದಾರೆ. ‘ರಾಮಧಾನ್ಯ ಚರಿತೆ’ಯನ್ನು ತುಳುವಿಗೆ ಅನುವಾದ ಮಾಡಿ ಮೂಲದೊಂದಿಗೆ ಪ್ರಕಟಿಸಿದ್ದಾರೆ .ಇದಕ್ಕಾಗಿ ಅವರಿಗೆ ಕರ್ನಾಟಕ ಸರ್ಕಾರವು ‘ಕನಕ ಯುವ ಪ್ರಶಸ್ತಿ’ಯನ್ನು ನೀಡಿದೆ. ಸಾಹಿತ್ಯ ಸಂಸ್ಕೃತಿಗೆ ಇವರು ಕೊಟ್ಟಿರುವ ಕೊಡುಗೆಯನ್ನು ಗಮನಿಸಿ ಸರ್ಕಾರವು…
ಉಡುಪಿ : ಉಡುಪಿ ಡಿ. ವೈ. ಎಸ್ಪಿ.ಯಾದ ಡಿ. ಟಿ. ಪ್ರಭು ಇವರ ಪುತ್ರಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಪ್ರಿಯದರ್ಶಿನಿ ಪಿ. ವಿರಚಿತ `ಕೀಕಾ’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 12-07-2024ನೇ ಶುಕ್ರವಾರದಂದು ಉಡುಪಿಯ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ “ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು. ಈಚಿನ ದಿನಗಳಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಓದುವವರ ಸಂಖ್ಯೆ ವಿರಳವಾಗಿದೆ. ಆದ್ದರಿಂದ ಓದಿನ ಹವ್ಯಾಸ ಹೆಚ್ಚಿಸುವ ಕಾರ್ಯಕ್ರಮ ಆಯೋಜಿಸಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾದರೂ ಪ್ರಿಯದರ್ಶಿನಿ ಅವರು ಈ ಪುಸ್ತಕದಲ್ಲಿ ಪರಿಸರ, ಸ್ವಾತಂತ್ರ್ಯ ಹೋರಾಟ, ಹೆಚ್ಚಾಗಿ ರಾಣಾ ಪ್ರತಾಪಸಿಂಹ ಬಗೆಗೆ ಅನೇಕರಿಗೆ ಗೊತ್ತಿಲ್ಲದ ವಿಚಾರಗಳನ್ನು ದಾಖಲಿಸಿದ್ದಾರೆ. ಇದು ಶಿಕ್ಷಕ ಕೈಪಿಡಿಯಾಗಲು ಯೋಗ್ಯವಾಗಿದೆ.” ಎಂದರು. ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಹಾಸ್ಯ ಸಾಹಿತಿ ಶಾಂತರಾಜ ಐತಾಳ್ ಮಾತನಾಡಿ “ಮೊಬೈಲ್ ಯುಗದಲ್ಲಿ ಜನರಿಗೆ ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ.” ಎಂದು ವಿಷಾದಿಸಿದರು.…
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ತೀರ್ಥಹಳ್ಳಿಯ ಇಂದಿರಾ ನಗರದ ಸ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕಥೆ, ಕವನ ಹಾಗೂ ಪ್ರಬಂಧ ರಚನಾ ಕಮ್ಮಟವು ದಿನಾಂಕ 13-07-2024ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ. ಸಾ. ಪ. ಅಧ್ಯಕ್ಷ ಟಿ. ಕೆ. ರಮೇಶ್ ಶೆಟ್ಟಿ ಉದ್ಘಾಟಿಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆಯಾದ ರೇಣುಕಾ ಹೆಗ್ಡೆ, ಕ. ಸಾ. ಪ. ಕಾರ್ಯದರ್ಶಿ ಗಾಯತ್ರಿ ಶೇಷಗಿರಿ, ಮುಖ್ಯೋಪಾಧ್ಯಾಯನಿ ಕುಸುಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ ಹೆಗಡೆ ಮತ್ತು ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು. ನಿವೃತ್ತಿ ಶಿಕ್ಷಕಿ ಸುಧೀಷ್ಣ ಕುಮಾರಿ, ಗಾಯತ್ರಿ ಶೇಷಗಿರಿ, ಶಿಕ್ಷಕಿ ಸುರೇಖಾ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪರಿಣಾಮಕಾರಿಯಾಗಿ ಕಮ್ಮಟ ನಡೆಸಿಕೊಟ್ಟರು.
ಉಡುಪಿ : ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು (ರಿ.), ಉಡುಪಿ ಇದರ ವತಿಯಿಂದ ಡಾ. ನಿ. ಮುರಾರಿ ಬಲ್ಲಾಳ್ ಮತ್ತು ಪ್ರೊ. ಕೆ.ಎಸ್. ಕೆದ್ಲಾಯ ನೆನಪಿನ ‘ಮುರಾರಿ-ಕೆದ್ಲಾಯ ರಂಗೋತ್ಸವ’ವನ್ನು ದಿನಾಂಕ 19-07-2024ರಿಂದ 21-07-2024ರಂದು ಪ್ರತಿದಿನ ಗಂಟೆ 6-30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವು ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ದಿನಾಂಕ 19-07-2024ರಂದು ಮಂಗಳೂರಿನ ಹಿರಿಯ ರಂಗಕರ್ಮಿ ಶ್ರೀ ಪ್ರಭಾಕರ ಕಾಪಿಕಾಡ್ ಇವರು ಉದ್ಘಾಟಿಸಲಿದ್ದು, ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ದಿನಾಂಕ 19-07-2024ರಂದು ರೋಹಿತ್ ಎಸ್. ಬೈಕಾಡಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಣಿಪಾಲದ ಸಂಗಮ ಕಲಾವಿದೆರ್ ಇವರು ಅಭಿನಯಿಸುವ ನಾಟಕ ‘ಮೃತ್ಯುಂಜಯ’, ದಿನಾಂಕ 20-07-2024ರಂದು ಅರುಣ್ ಲಾಲ್ ಕೇರಳ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಗಳೂರಿನ ಅಸ್ತಿತ್ವ (ರಿ.) ತಂಡದವರು ಅಭಿನಯಿಸುವ ನಾಟಕ ‘ಮತ್ತಾಯ’ ಮತ್ತು ದಿನಾಂಕ 21-07-2024ರಂದು ಸಂತೋಷ್ ನಾಯಕ್ ಪಟ್ಲ…
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಯೋಗದಲ್ಲಿ ದಿನಾಂಕ 17-07-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಮಂಗಳೂರಿನ ಲಾಲ್ಬಾಗ್ ಬಳಿಯ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್ನಲ್ಲಿ ‘ಸೋನೆ ಮಳೆ- ಹಸಿರು ಇಳೆ’ ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ಕವಿಗೋಷ್ಠಿಯ ಸಂಯೋಜಕ ಡಾ. ಸುರೇಶ್ ನೆಗಳಗುಳಿ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ಅ.ಭಾ.ಸಾ.ಪ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ತಿಳಿಸಿದ್ದಾರೆ.
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು, ಪುತ್ತೂರು ಇದರ ವಿಂಶತಿ ಸಂಭ್ರಮದ ಸರಣಿ ತಾಳಮದ್ದಳೆಯ ಎರಡನೇಯ ಕೂಟವು ದಿನಾಂಕ 12-07-2024ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣದಲ್ಲಿ ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಸ್ಯಮಂತಕ ಮಣಿ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೇನೇರಂಕಿ ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್, ಮೋಹನ್ ಶರವೂರು, ಅಚ್ಚುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ, ಶುಭಾ ಜೆ.ಸಿ.ಅಡಿಗ (ಶ್ರೀ ಕೃಷ್ಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಜಾಂಬವ), ಹರಿಣಾಕ್ಷಿ ಜೆ. ಶೆಟ್ಟಿ (ಬಲರಾಮ) ಮನೋರಮ ಜಿ. ಭಟ್ (ನಾರದ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ, ಶಿವನಾಥ ರೈ ಮೇಗಿನಗುತ್ತು ವಂದಿಸಿದರು. ದೇವಳದ ಅರ್ಚಕ ಶ್ರೀರಾಮ ಕಲ್ಲೂರಾಯ ಪ್ರಾಯೋಜಿಸಿದರು. ದುಗ್ಗಪ್ಪ ನಡುಗಲ್ಲು, ತಾರಾನಾಥ ಸವಣೂರು ಸಹಕರಿಸಿದರು. ಶ್ರೀ ದೇವಳದ…