Author: roovari

ಬದಿಯಡ್ಕ: ಶ್ರೀ ವಿಘ್ನೇಶ್ವರ ಯಕ್ಷಗಾನ ಕಲಾಸಂಘ ನೀರ್ಚಾಲು ಇವರ ನೇತೃತ್ವದಲ್ಲಿ ಅಗ್ರಮಾನ್ಯ ಕಲಾವಿದರ ಕೂಡುವಿಕೆಯ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು 25 ಆಗಸ್ಟ್ 2024ರಂದು ಅಪರಾಹ್ನ 2 ಗಂಟೆಗೆ ನೀರ್ಚಾಲು ಶಾಲಾ ಸಭಾಂಗಣದಲ್ಲಿ ಜರಗಲಿದೆ. ಕಾರ್ಯಕ್ರಮವನ್ನು ನೀರ್ಚಾಲು ಶಾಲಾ ಪ್ರಬಂಧಕ ಜಯದೇವ ಖಂಡಿಗೆ ಉದ್ಘಾಟಿಸಲಿದ್ದಾರೆ. ‘ಊರ್ವಶಿ ಶಾಪ’ ಹಾಗೂ ‘ಉತ್ತರನ ಪೌರುಷ’ ಪ್ರಸಂಗದ ತಾಳಮದ್ದಳೆ ನಡೆಯಲಿದ್ದು, ಭಾಗವತರಾಗಿ ಬಲಿಪ ಶಿವಶಂಕರ ಭಟ್ ಹಾಗೂ ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ ಮದ್ದಳೆಯಲ್ಲಿ ಗಣೇಶ್ ಭಟ್ ಬೆಳಾಲು, ಲಕ್ಷ್ಮೀಶ ಬೇಂತ್ರೋಡಿ ಜೊತೆಗೂಡಲಿದ್ದಾರೆ. ಅರ್ಥದಾರಿಗಳಾಗಿ ಸರ್ವ ಶ್ರೀ ಸುಣ್ಣಂಬಳ ವಿಶ್ವೇಶ್ವರ ಭಟ್, ಉಜಿರೆ ಅಶೋಕ ಭಟ್, ಪವನ್ ಕಿರಣೆರೆ, ಪಕಳಕುಂಜ ಶ್ಯಾಮ ಭಟ್, ವೈಕುಂಠ ಹೇರ್ಳೆ, ಬಾಲಕೃಷ್ಣ ಆಚಾರ್ಯ ನೀರ್ಚಾಲು ಪಾತ್ರನಿರ್ವಹಣೆ ಮಾಡಲಿದ್ದಾರೆ.

Read More

ಮೈಸೂರು : ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ದತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ / ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ / ಡಿಪ್ಲೊಮೋ ಪಡೆದವರಾಗಿರಬೇಕು. ರಂಗಭೂಮಿ ಅನುಭವ ಅಪೇಕ್ಷಣೀಯ, ಅರ್ಹತೆಯುಳ್ಳ 22ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದಿನಾಂಕ 28 ಆಗಸ್ಟ್ 2024ರ ಒಳಗೆ ತಲುಪುವಂತೆ ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಅರ್ಜಿ ಸಲ್ಲಿಸುವುದು. ಸಂದರ್ಶನದ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು. ನಮೂನೆಯನ್ನು ರಂಗಾಯಣದ ವೆಬ್‌ಸೈಟ್ rangayanamysore.karnataka.gov.in ನಿಂದ ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ…

Read More

ಮಂಗಳೂರು : ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆಯುತ್ತಿರುವ ಸರಣಿ ಕಾರ್ಯಕ್ರಮ ನೃತ್ಯಾಮೃತ -8 ‘ಪದ್ಮ ಪಲ್ಲವ’ ವೈವಿಧ್ಯಮಯ ಭರತನಾಟ್ಯ ಕಾರ್ಯಕ್ರಮವು ದಿನಾಂಕ 18 ಆಗಸ್ಟ್ 2024ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರು ಉದ್ಘಾಟಿಸಿ “ಭರತನಾಟ್ಯದಂತಹ ಶಾಸ್ತ್ರೀಯ ಕಲೆಗಳು ಉಳಿಯಬೇಕು ಮತ್ತು ಗುರುಪರಂಪರೆಯಲ್ಲಿ ಮುಂದುವರಿಯಬೇಕು. ಶಾಸ್ತ್ರೀಯ ಕಲೆಗಳು ಭಾರತೀಯ ಸಂಸ್ಕೃತಿಯ ಬೇರು. ಮುಂದಿನ ಜನಾಂಗಕ್ಕೆ ಭಾರತೀಯತೆಯ ವೈಶಿಷ್ಯಪೂರ್ಣ ವಿಚಾರಧಾರೆ ತಿಳಿಸುವಲ್ಲಿ ನಾಟ್ಯಾರಾಧನಾ ಕಲಾ ಕೇಂದ್ರದ ಮೂಲಕ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಸಾಧನೆ ಶ್ಲಾಘನೀಯ ಎಂದು ನುಡಿದರು. ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಶ್ರೀ ಶೇಖರ್ ಡಿ. ಶೆಟ್ಟಿಗಾರ್ ದುಬೈ ಇವರು ಯು.ಎ.ಇ.ಯಲ್ಲಿ ನಡೆಸುತ್ತಿರುವ ಶಿಸ್ತುಬದ್ಧ ಚೌಕಟ್ಟಿನಿಂದ ಕೂಡಿದ ತೆಂಕುತಿಟ್ಟು ಯಕ್ಷಗಾನದ ದಕ್ಷ ಗುರುತ್ವಕ್ಕೆ “ಯಕ್ಷಾಭಿವಂದನಾ ಪುರಸ್ಕಾರ” ನೀಡಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಧರ್ಮಸ್ಥಳದ ಮಾಜಿ ಜಮಾ ಉಗ್ರಾಣ ಅಧಿಕಾರಿಗಳಾದ ಶ್ರೀ ಭುಜಬಲಿ ಧರ್ಮಸ್ಥಳ, ದುಬೈ ಬ್ರಾಹ್ಮಣ…

Read More

ಬೆಂಗಳೂರು : ‘ಗುರುತು’ ಅನ್ನುವುದು ಕೆಲವರಿಗೆ ಹೆಮ್ಮೆಯಾದರೆ, ಕೆಲವರಿಗದು ಅಸಹ್ಯ, ಹಿಂಸೆ, ಜೀವನದ್ದುದ್ದಕ್ಕೂ ಹೊತ್ತು ತಿರುಗಬೇಕಾದ ಹೆಣಭಾರದ ಚಾಕರಿ. ಹಲವು ಬಾರಿ ‘ಉಳಿವಿಗಾಗಿ’ ಗುರುತುಗಳನ್ನು ಮುಚ್ಚಿಡುತ್ತಾ ಸಾಗುವುದೇ’ ಬದುಕು’ ಅನ್ನಿಸಿಕೊಂಡು ಹರಿಯುತ್ತಾ ಹಗುರಾಗುವುದು ಸಾಗದ ದಾರಿಯಾಗಿ ಕಂಡು ದಣಿವಾಗುತ್ತದೆ. ದಣಿವಾಗುತ್ತದೆ ಎಂಬ ಕಾರಣಕ್ಕೆ ಹಾರಾಡುವ ಬಯಕೆಯನ್ನು ಬಿಡುವಂತೆಯೂ ಇರುವುದಿಲ್ಲ. ಕತ್ತಲ ದಾರಿಯಲ್ಲಿ ಮಿಂಚುಹುಳುಗಳಿಗಾಗಿ ಜೀವ ಆತುಕೊಳ್ಳಬೇಕಾಗುತ್ತದೆ. ಆಗ ಕತ್ತಲೊಂದು ಸಂಭ್ರಮ ಬೆಳಕೊಂದು ಸಂಭ್ರಮ. ಹೀಗೆ ಗುರುತಿನ ಸುತ್ತ ಇರುವ ಹಲವು ಸಂಕೀರ್ಣ ವೀರೋಧಭಾಸಗಳನ್ನು ಎದುರುಗೊಳ್ಳುವ ಕಥನಗಳ ಗೊಂಚಲು’ ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’. ಇಲ್ಲಿ ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ‘Waiting for a Visa’ ಒಂದು ರೂಪಕವಾಗಿ ಕಂಡು ಅವರು ನಿಜಕ್ಕೂ ಪ್ರವೇಶ ಕೇಳುತ್ತಿರುವುದು ಎಲ್ಲಿಗೆ ? ಅನ್ನುವ ಪ್ರಶ್ನೆ ಮುಖ್ಯವಾಗುತ್ತದೆ. ಜಂಗಮ ಕಲೆಕ್ಟಿವ್ ಬೆಂಗಳೂರು ಪ್ರಸ್ತುತ ಪಡಿಸುವ ಈ ನಾಟಕದ ಪಠ್ಯ ಆಕರ : ಎನ್.ಕೆ. ಹನುಮಂತಯ್ಯ, ಚಂದ್ರಶೇಕರ್ ಕೆ., ರಚನೆ, ವಿನ್ಯಾಸ, ನಿರ್ದೇಶನ : ಲಕ್ಷ್ಮಣ್ ಕೆ.ಪಿ.…

Read More

ಬೆಂಗಳೂರು : ಸಮರಸ ಫೌಂಡೇಷನ್ ಫಾರ್ ಆರ್ಟ್ಸ್ ಪ್ರಸ್ತುತ ಪಡಿಸುವ ‘ಶ್ರಾವಣ ಸಮ್ಮೇಳನ 2024’ ಹಾಡು ಹೆಜ್ಜೆಗಳ ಸಂಭ್ರಮಾಚರಣೆಯು ದಿನಾಂಕ 25 ಆಗಸ್ಟ್ 2024ರಂದು ಮಧ್ಯಾಹ್ನ 3-00 ಗಂಟೆಗೆ ಬೆಂಗಳೂರಿನ ಗೋವಿಂದರಾಜ ನಗರದ ಜ್ಞಾನಸೌಧ ಸಭಾಂಗಣದಲ್ಲಿ ನಡೆಯಲಿದೆ. ಯಶಸ್ವಿನಿ ವಶಿಷ್ಟ, ವಂಶಿಕ ಅಂಜನಿ ಕಶ್ಯಪ ಮತ್ತು ಮೇಘನಾ ಕುಲಕರ್ಣಿ ಜೋಶಿ ಇವರುಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕು ಘಟಕದ ವತಿಯಿಂದ ದಿನಾಂಕ 22 ಆಗಸ್ಟ್ 2024ರಂದು ‘ಗಮಕ ವಾಚನ- ವ್ಯಾಖ್ಯಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀಯುತ ಭಾಸ್ಕರ ಬಾರ್ಯರ ಸ್ವಗೃಹ, ಪುತ್ತೂರಿನ ಶಿವಪೇಟೆಯ ‘ಅಗಸ್ತ್ಯ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಭಾರತ ಇದರಿಂದ ‘ಕರ್ಣ – ಕುಂತಿ ಸಂವಾದ’ ಎಂಬ ಕಥಾ ಭಾಗವನ್ನು ಆಯ್ದುಕೊಳ್ಳಲಾಯಿತು. ಅಂಬಿಕಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ಸತೀಶ್ ಇರ್ದೆ ಇವರು ಗಮಕ ವಾಚನಗೈದರು. ನಿವೃತ್ತ ಅಧ್ಯಾಪಕರಾದ ಶ್ರೀಯುತ ಭಾಸ್ಕರ ಶೆಟ್ಟಿ ಸಾಲ್ಮರ ಇವರು ಗಮಕ ವ್ಯಾಖ್ಯಾನಗೈದರು. ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮವು ನೆರೆದ ಕಲಾಪ್ರಿಯರ ಮನಸ್ಸನ್ನು ಗೆದ್ದಿತು. ಗೌರವಾಧ್ಯಕ್ಷರಾದ ಭಾಸ್ಕರ ಬಾರ್ಯರು ಸರ್ವರನ್ನು ಸ್ವಾಗತಿಸಿ, ಅಧ್ಯಕ್ಷರಾದ ನಿವೃತ್ತ ಪ್ರಾಂಶುಪಾಲ ಪ್ರೊ. ವೇದವ್ಯಾಸ ರಾಮಕುಂಜ ಧನ್ಯವಾದ ಸಮರ್ಪಿಸಿದರು. ಕಿರುಕಾಣಿಕೆ ನೀಡಿ, ಶಾಲು ಹೊದಿಸಿ ಕಲಾವಿದರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಶಂಕರಿ ಶರ್ಮ, ಸದಸ್ಯರಾದ ಪ್ರೇಮಾ ನೂರಿತ್ತಾಯ, ಮಹಾಲಿಂಗ ಭಟ್, ಜಯಂತಿ ಹೆಬ್ಬಾರ್, ಜಯಲಕ್ಷ್ಮಿ…

Read More

ಬೆಂಗಳೂರು : ಬಾರ್ಕೂರಿನ ಡಾ. ದೀಪಕ್ ಶೆಟ್ಟಿ ಇವರು ‘ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗಳ ಮೌಲ್ಯೀಕರಣ’ ಎಂಬ ವಿಷಯದಲ್ಲಿ ಮಹಾಪ್ರಬಂಧ ಮಂಡಿಸಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ಪದವಿಗೆ ಭಾಜನರಾಗಿದ್ದಾರೆ‌. ಇವರಿಗೆ ದಿನಾಂಕ 24 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ವಿಜಯನಗರದ ಬಂಟರ ಸಂಘದಲ್ಲಿ ‘ಸಾಲುದೀಪ’ ಅಭಿನಂದನಾ ನುಡಿ ಬೆಳಕು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮದ ಬಳಿಕ ಬಡಗುತಿಟ್ಟಿನ ಗಜಗಟ್ಟಿ ಭಾಗವತರಿಂದ ಗಾನ ವೈಭವ ನಂತರ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಟೊಯೋಟಾದಲ್ಲಿ ವೃತ್ತಿಯಲ್ಲಿರುವ ದೀಪಣ್ಣ ಅದರಲ್ಲೆ ಸಿಕ್ಕ ಸಣ್ಣ ಬಿಡುವಿನಲ್ಲೆ ದೊಡ್ಡ ಸಾಧನೆ ಮಾಡಿದವರು. ದೀಪಣ್ಣ ನಮಗೆಲ್ಲ ಒಂದು ಶಕ್ತಿ. ಕರಾವಳಿಯ ಎಲ್ಲಾ ಸಂಘ, ಸಂಸ್ಥೆಗಳ ಕಾರ್ಯಕ್ರಮಗಳ ಪ್ರೋತ್ಸಾಹಕರು. ಯಾರಿಗೇ ಸಂಕಷ್ಟವೆಂದಾಗಲೂ ಸಹಾಯ ಮಾಡುವವರು. ಕಲೆ ಮತ್ತು ಕಲಾವಿದರ ಬಗೆಗೆ ಗೌರವದಿಂದ ತೆರೆಮರೆಯಲ್ಲಿ ನೆರವಾದವರು.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ನಗರ ಜಿಲ್ಲೆ ಮತ್ತು ರಂಗಮಂಡಲ ಬೆಂಗಳೂರು ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ದ್ವಿತೀಯ ಕವಿಗೋಷ್ಠಿ ಜನರೆಡೆಗೆ ಕಾವ್ಯ ಯಾನದ ಪಯಣ ಧಾರವಾಡದ ಕಡೆಗೆ ದಿನಾಂಕ 24 ಆಗಸ್ಟ್ 2024ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಹಿಳಾ ವಿಶ್ರಾಂತಿ ಗೃಹದಲ್ಲಿ ನಡೆಯಲಿದೆ. ಖ್ಯಾತ ಕವಿಗಳು, ಸಂಸ್ಕೃತಿ ಚಿಂತಕರು, ಗುರುಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಹಾಗೂ ಖ್ಯಾತ ಕವಿಗಳಾದ ಡಾ. ಎಚ್.ಎಲ್. ಪುಷ್ಪ ಹಾಗೂ ಕವಿಮಿತ್ರರು ಹಾಗೂ ಗಾಯಕರು ಬೆಂಗಳೂರಿನ ಕಾರ್ಯಕ್ರಮವನ್ನು ಚಂದಗೊಳಿಸಲಿದ್ದು, ಕವಿತಾ ವಾಚನ ಮತ್ತು ಗೀತ ಗಾಯನ ಪ್ರಸ್ತುತಗೊಳ್ಳಲಿದೆ. ಡಾ. ಬಸವರಾಜ ಸಾದರ ಹಾಗೂ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಇವರ ಸಾರಥ್ಯದಲ್ಲಿ ರಾಜಧಾನಿ ಬೆಂಗಳೂರಿನಿಂದ ಧಾರವಾಡದತ್ತ ‘ಕಾವ್ಯ ದೀವಟಿಗೆ’ಯ ಪಯಣ ಸಾಗಲಿದೆ. ರಂಗಮಂಡಲ ಬೆಂಗಳೂರು, ರಂಗ ಪರಿಸರ ಮತ್ತು ಚೇತನ ಫೌಂಡೇಷನ್ ಆಯೋಜಿಸಿರುವ ಪ್ರತಿ ಜಿಲ್ಲೆ ಹಾಗೂ ಹೊರನಾಡ ಕನ್ನಡ ಪ್ರದೇಶಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ತಿಂಗಳ 3ನೇ ಭಾನುವಾರ…

Read More

ಬದಿಯಡ್ಕ : ಕರ್ನಾಟಕ ಗಮಕ ಕಲಾ ಪರಿಷತ್ತು ಮತ್ತು ಸಿರಿಗನ್ನಡ ವೇದಿಕೆಗಳ ಕೇರಳ ಗಡಿನಾಡು ಘಟಕಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 19 ಆಗಸ್ಟ್ 2024ರಂದು ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದ ಸಭಾಂಗಣದಲ್ಲಿ ‘ಗಮಕ ಶ್ರಾವಣ’ ಸಮಾರಂಭವು ಜರಗಿತು. ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಶ್ರೀ ಟಿ‌. ಶಂಕರನಾರಾಯಣ ಭಟ್ಟರು ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಆಡಳಿತಾಧಿಕಾರಿ ಶ್ರೀ ಜಯಪ್ರಕಾಶ್ ಪಜಿಲ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ಅನಂತಕೃಷ್ಣ ಚಡಗ ಅವರು ಭಾಗವಹಿಸಿ ಗಮಕ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಯುವಜನರ ಜವಾಬ್ದಾರಿಯನ್ನು ನೆನಪಿಸಿದರು. ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಶ್ರೀ ವಿ‌.ಬಿ. ಕುಳಮರ್ವ ಅವರು ಪ್ರಾಸ್ತಾವಿಕ ಭಾಷಣದಲ್ಲಿ ಗಮಕ ಕಲೆಯ ಪ್ರಾಚೀನತೆಯನ್ನು ತಿಳಿಸುತ್ತಾ ಅದು ಬೆಳೆದು ಬಂದ ಬಗೆಯನ್ನು ಸೋದಾಹರಣವಾಗಿ ವಿವರಿಸಿದರು. ಗಡಿನಾಡು ಕಾಸರಗೋಡಿನಲ್ಲಿ ಗಮಕ ಕಲಾ ಪರಿಷತ್ತು ಮಾಡಿದ ಸಾಧನೆಯನ್ನು ಕುರಿತು ಮಾತನಾಡುತ್ತಾ ಆದಿ ಗಮಕಿಗಳಾದ ಕುಶ-ಲವರ ಜನ್ಮ ಮಾಸಾಚರಣೆಯ ಅಂಗವಾಗಿ ತಾವು…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 26-08-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಮಹತಿ ಎಚ್. ಪಾವನನ್ಕರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಮಂಗಳೂರಿನಲ್ಲಿ ವಾಸವಾಗಿರುವ ಹರೀಶ್ ಪಾವನನ್ಕರ್ ಮತ್ತು ಮಾಲಿನಿ ಪಾವನನ್ಕರ್ ದಂಪತಿಗಳ ಸುಪುತ್ರಿ ವಿದುಷಿ ಮಹತಿ ಎಚ್. ಪಾವನನ್ಕರ್. ತನ್ನ 7ನೇ ವಯಸ್ಸಿನಿಂದ ಭರತನಾಟ್ಯ ಶಿಕ್ಷಣವನ್ನು ಗುರು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರಲ್ಲಿ ಪ್ರಾರಂಭಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸಿದ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಸ್ತ್ರೀಯ ಸಂಗೀತದ ಜೂನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣಲಾಗಿರುವ ಇವರು ಅನೇಕ ನೃತ್ಯ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದಿರುತ್ತಾರೆ. ದಿನಾಂಕ 12 ಮೇ 2024ರಂದು ಮಂಗಳೂರಿನ ಪುರಭವನದಲ್ಲಿ ಇವರ…

Read More