Author: roovari

ಮಸ್ಕತ್ : ಬಿರುವ ಜವನೆರ್ ಮಸ್ಕತ್ ಇವರು ಒಮಾನ್ ಮಸ್ಕತ್ ನ ಧಾರ್ ಸೈಟ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಿದ ಪೂಜಾ ಸಹಿತ ‘ಶ್ರೀ ಶನೀಶ್ವರ ಮಹಾತ್ಮೆ- ವಿಕ್ರಮಾದಿತ್ಯ ವಿಜಯ’ ಯಕ್ಷಗಾನ ತಾಳಮದ್ದಳೆ ನೆರೆದ ಸಾವಿರಾರು ತುಳುವರನ್ನು ರಂಜಿಸಿತು. “ಪೂಜ್ಯ ಶಿರಡಿ ಸಾಯಿ ಬಾಬಾ, ಶ್ರೀ ನಿತ್ಯಾನಂದ ಗುರುಕೃಪೆಯಿಂದ ಬಿರುವ ಜವನೆರ್ ಮಸ್ಕತ್ ಸಂಯೋಜಿಸುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿವೆ” ಎಂದು ಸಂಘಟನೆಯ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಅವರು ದ್ವಿತೀಯ ಬಾರಿ ಮಸ್ಕತ್ ನಲ್ಲಿ ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ತಾಳಮದ್ದಳೆ ನಡೆಸಿಕೊಟ್ಟ ಶ್ರೀ ಶನೀಶ್ವರ ಭಕ್ತ ವೃಂದದ ಕಲಾವಿದರನ್ನು ಅಭಿನಂದಿಸಿದರು. 2018ರಲ್ಲಿಯೂ ಜನ ಮನ ರಂಜಿಸಿದ್ದ ಈ ತಂಡ ಈ ಬಾರಿ ಮಸ್ಕತ್ ನಲ್ಲಿ ಅಪೂರ್ವ ದಾಖಲೆ ಸೃಷ್ಟಿಸಿದೆ ಎಂದು ನುಡಿದರು. ಶಂಕರ್ ಉಪ್ಪೂರು, ಚಂದ್ರಕಾಂತ್ ಕೋಟ್ಯಾನ್, ಲೋಕೇಶ್ ಕುಂದರ್ ದಂಪತಿಗಳು ಸೇವಾ ಸಂಕಲ್ಪ ಮಾಡಿದರು. ವೃತ್ತಿ ಹಾಗೂ ಹವ್ಯಾಸಿ ಅನುಭವಿ ಕಲಾವಿದರ ಸಮಾಗಮದಲ್ಲಿ ನಡೆದ ಚಾರಿತ್ರಿಕ ಶನಿ ಪೂಜೆಯಲ್ಲಿ…

Read More

ಉಡುಪಿ : ದಿನಾಂಕ 13-05-2023ರಂದು ಸಂಜೆ ಮಿತ್ರಮಂಡಳಿ ಕೋಟ ವತಿಯಿಂದ ಪ್ರೊ. ಉಪೇಂದ್ರ ಸೋಮಯಾಜಿಯವರ ಮನೆಯಂಗಳದಲ್ಲಿ ಶ್ರೀಲೋಲ ಸೋಮಯಾಜಿಯವರ ಧಾರವಾಡದ ರಾಘವೇಂದ್ರ ಪಾಟೀಲ ಕಥಾಸಪ್ರಶಸ್ತಿ-2022 ವಿಜೇತ ಕೃತಿ ‘ನ ಪ್ರಮದಿತವ್ಯಮ್’ ಲೋಕಾರ್ಪಣೆಗೊಂಡಿತು. ವಿಜ್ಞಾನಿ ನಾಡೋಜ ಶ್ರೀ ಕೆ.ಪಿ.ರಾಯರು ಕೃತಿ ಬಿಡುಗಡೆ ಮಾಡಿದರು. ಡಾ. ಅನಿಲ ಕುಮಾರ್ ಶೆಟ್ಟಿಯವರು ಪುಸ್ತಕ ಪರಿಚಯ ಮಾಡುತ್ತಾ “ಬಾಲ್ಯದಲ್ಲಿ ಪರಿಸರದಿಂದ ಗಾಢವಾದ ಅನುಭವಗಳಿಗೆ ಸಮಕಾಲೀನ ಸಂದರ್ಭಗಳು ಅನುಕೂಲಕರವಾಗಿ ಮೇಳೈಸಿದಾಗ ಪರಿಣಾಮಕಾರಿಯಾದ ಕತೆಗಳು ಹುಟ್ಟುತ್ತವೆ ಎಂಬುದಕ್ಕೆ ಈ ಕೃತಿ ಸಾಕ್ಷಿ” ಎಂದರು. ಇದೇ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಪುಸ್ತಕ ಪ್ರಕಾಶಕ ಮೈಸೂರಿನ ಸಂಸ್ಕೃತಿ ಸುಬ್ರಹ್ಮಣ್ಯರನ್ನು ಗೌರವಿಸಲಾಯಿತು. ಧಾರವಾಡದ ರಾಘವೇಂದ್ರ ಪಾಟೀಲ ಕಥಾ ಸ್ಪರ್ಧೆಯ ಪ್ರಥಮ ಬಹುಮಾನಿತ ಕೃತಿ ‘ನ ಪ್ರಮದಿತವ್ಯಮ್’ ಕಥಾಸಂಕಲನದಲ್ಲಿಯ ಸಂಗೀತ ಸಂಬಂಧಿ ಕತೆಯೊಂದು ತನ್ನ ಪದುಮನಾಭನ ಧ್ಯಾನದಲ್ಲಿಯ ಒಂದು ಪ್ರಸಂಗಕ್ಕೆ ಸಂವಾದಿಯಾಗಿದೆ ಎಂದು ಕೃತಿ ಬಿಡುಗಡೆ ಮಾಡಿದ ನಾಡೋಜ ಕೆ.ಪಿ.ರಾಯರು ಸ್ಮರಿಸಿಕೊಂಡರು. ಸಾಹಿತಿ ಚಿತ್ರಪಾಡಿ ಪ್ರೊ. ಉಪೇಂದ್ರ ಸೋಮಯಾಜಿಯವರ ಮನೆಯಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ…

Read More

ಪುತ್ತೂರು; ಪುತ್ತೂರು ತಾಲೂಕು ಸವಣೂರು‌ ಸಮೀಪದ ಇಡ್ಯಾಡಿ ಶ್ರೀಮತಿ ಮತ್ತು ಶ್ರೀ ಯೋಗೀಶ್ ರವರು ನೂತನವಾಗಿ ನಿರ್ಮಿಸಿದ‌ ‘ಮಧು ಶ್ರೀ’ ನಿಲಯದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಇದರ ವತಿಯಿಂದ ದಿನಾಂಕ‌ 29.05.2023ರಂದು ‘ಶರಘಾತ’ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಆನಂದ ಸವಣೂರು, ತಾರಾನಾಥ ಸವಣೂರು, ಬಾಲಕೃಷ್ಣ ಬೊಮ್ಮಾರು, ಅಚ್ಯುತ ಪಾಂಗಣ್ಣಾಯ ಕೋಡಿಬೈಲು‌ ಸಹಕರಿಸಿದರು. ಮುಮ್ಮೇಳದಲ್ಲಿ‌ ಶ್ರೀ ರಾಮ (ಕಿಶೋರಿ ದುಗ್ಗಪ್ಪ ನಡುಗಲ್ಲು‌), ವಾಲಿ (ಶುಭಾ ಜೆ.ಸಿ. ಅಡಿಗ) ಸುಗ್ರೀವ (ಹರಿಣಾಕ್ಷೀ ಜೆ. ಶೆಟ್ಟಿ) ಸಹಕರಿಸಿದರು. ಆನಂದ ಸವಣೂರು ಸ್ವಾಗತಿಸಿ, ಯೋಗೀಶ್ ಇಡ್ಯಾಡಿ ವಂದಿಸಿದರು.

Read More

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಮಹಿಳೆಯರ ಕನ್ನಡದ ಶ್ರೇಷ್ಠ ಕೃತಿಗಳಿಗೆ 2022 ನೇ ಸಾಲಿನ “ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ”ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ. ಮೂರು ಅತ್ಯುತ್ತಮ ಕೃತಿಗಳನ್ನು ಆಯ್ಕೆಮಾಡಿ, ಪ್ರತಿಯೊಂದು ಕೃತಿಗೂ ರೂ. 15,000(ಹದಿನೈದು ಸಾವಿರ)ವನ್ನು ಬಹುಮಾನ ನೀಡಿ ಗೌರವಿಸಲಾಗುವುದು. ನಿಯಮಗಳು 1. ಈ ಬಹುಮಾನಕ್ಕೆ ಮಸ್ತಕಗಳನ್ನು ಲೇಖಕಿಯರು ಮಾತ್ರ ಕಳುಹಿಸಬೇಕು. 2. ಕನ್ನಡ ಕೃತಿಗಳಿಗೆ ಮಾತ್ರ ಬಹುಮಾನ ಇರುವುದು. 3. ಅನುವಾದ ಕೃತಿಗಳಿಗೆ ಅವಕಾಶ ಇರುವುದಿಲ್ಲ. 4. ಬಹುಮಾನಕ್ಕೆ ಕಳುಹಿಸುವ ಕೃತಿಯು 01.01.2022 ರಿಂದ 31.12.2022 ರ ಒಳಗೆ ಪ್ರಕಟವಾದದ್ದಾಗಿರಬೇಕು. 5. ಪ್ರತಿಯೊಂದು ಕೃತಿಯ 9 ಪ್ರತಿಗಳನ್ನು ಕಳುಹಿಸಬೇಕು. 6. ಒಬ್ಬರು ಒಂದಕ್ಕಿಂತ ಹೆಚ್ಚು ಕೃತಿಗಳನ್ನುಕಳುಹಿಸಬಹುದಾದರೂ ಅವರ ಒಂದು ಕೃತಿಗೆ ಮಾತ್ರ ಬಹುಮಾನ ಕೊಡಲಾಗುವುದು. 7. ಲೇಖಕಿಯರು ತಮ್ಮ ಪರಿಚಯವನ್ನು ಸಂಕ್ಷಿಪ್ತವಾಗಿ ಸ್ವಹಸ್ತಾಕ್ಷರದಲ್ಲಿ ಬರೆದು, ಭಾವಚಿತ್ರದೊಂದಿಗೆ ಸಂಪರ್ಕ ಸಂಖ್ಯೆ ಸಮೇತ ಕಳುಹಿಸಬೇಕು. 8. ಪ್ರಕಾಶಕರು ಪುಸ್ತಕಗಳನ್ನು ಸಲ್ಲಿಸಿದರೂ, ಬಹುಮಾನ ಬಂದಲ್ಲಿ ಅದನ್ನು ಲೇಖಕಿಯರಿಗೇ ನೀಡಲಾಗುವುದು. 9.…

Read More

ಉಡುಪಿ: ಕೋಟೇಶ್ವರ ಎನ್.ಆರ್.ಎ.ಎಂ.ಎಚ್ ಪ್ರಕಾಶನ ಮತ್ತು ’ಸ್ಥಿತಿಗತಿ’ ತ್ರೈಮಾಸಿಕ ಪತ್ರಿಕೆ ಆಶ್ರಯದಲ್ಲಿ ದಿ.ಪಾಂಡೇಶ್ವರ ಸೂರ್ಯನಾರಾಯಣ ಚಡಗ ನೆನಪಿನಲ್ಲಿ ನೀಡುವ ಕಾದಂಬರಿ ಪ್ರಶಸ್ತಿಗೆ 2022ರಲ್ಲಿ ಪ್ರಕಟವಾದ ಕಾದಂಬರಿಗಳನ್ನು ಲೇಖಕ ಅಥವಾ ಪ್ರಕಾಶಕರಿಂದ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಕೃತಿಯ ಮೂರು ಪ್ರತಿಗಳನ್ನು ಸ್ಪರ್ಧೆ ಸಂಚಾಲಕ ಪ್ರೊ. ಉಪೇಂದ್ರ ಸೋಮಯಾಜಿ, ‘ಶ್ರೀ’ ಚಿತ್ರಪಾಡಿ, ಅಂಚೆ: ಸಾಲಿಗ್ರಾಮ, ಉಡುಪಿ ಜಿಲ್ಲೆ-575225 (ಸಂಪರ್ಕ ಸಂಖ್ಯೆ :9740842722) ಅವರಿಗೆ ಆಗಸ್ಟ್ 30ರೊಳಗೆ ತಲುಪುವಂತೆ ಕಳಿಸಿಕೊಡಬೇಕು ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಡಾ.ಭಾಸ್ಕರ ಆಚಾರ್ಯ ತಿಳಿಸಿದ್ದಾರೆ.

Read More

ಮೈಸೂರು: ನಟನ ರಂಗಶಾಲೆಯಲ್ಲಿ ರಂಗಭೂಮಿ ‘ಡಿಪ್ಲೊಮಾ 2023-24’ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿಯ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಜೂನ್ 11 ರಂದು ನಡೆಯಲಿದೆ. ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ. ತನ್ನ ಚಟುವಟಿಕೆಯ ಭಾಗವಾಗಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಮಾನ್ಯತೆಯಡಿಯಲ್ಲಿ 16ರಿಂದ 30ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, 2023-24ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ ದಿನಾಂಕ 11-06-2023 ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ 5.30ರಿಂದ 9ರ ವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ,…

Read More

ಮಂಜೇಶ್ವರ:  ಬಾಕುಡ ಸಮಾಜ ಕೇಂದ್ರ ಸಮಿತಿಯ ನೇತೃತ್ವದಲ್ಲಿ ರಂಗ ಚೇತನ ಕಾಸರಗೋಡು ಇದರ ಸಹಬಾಗಿತ್ವದಲ್ಲಿ GWLPS ಮಂಜೇಶ್ವರ ಶಾಲೆಯಲ್ಲಿ ಮೇ 12 ಮತ್ತು 13 ರಂದು  ದ್ವಿದಿನ ಸಹವಾಸ ಶಿಬಿರ ಜರಗಿತು. ಬಾಕುಡ ಸಮುದಾಯದ ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳು ದೀಪ ಪ್ರಜ್ವಲನೆಯನ್ನು ಮಾಡುವುದರೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮ ದ ಉದ್ಘಾಟನೆಯನ್ನು ಹಿರಿಯ ಸಾಮಾಜಿಕ ಮುಂದಾಳು ವಿಜಯ್ LIC ಅಂಬ್ಲಮೊಗರು ಸತ್ಯದ ಬೊಲ್ಪು ಫೋಟೋವನ್ನು ಅನಾವರಣ ಗೊಳಿಸಿ ಶಿಬಿರ ನಿರ್ದೇಶಕರಾದ ಅಶೋಕ್ ಕೊಡ್ಲಮೊಗರು ರವರಿಗೆ ಹಸ್ತಾಂತರಿಸುವುದರೊಂದಿಗೆ ಶಿಬಿರಕ್ಕೆ ಚಾಲನೆ ನೀಡಿದರು. ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಜಯ್  ಪಂಡಿತ್ ಮಂಗಲ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷ್ಣವೇಣಿ ಟೀಚರ್,ಸದಾಶಿವ ಬಾಲಮಿತ್ರ ,ದೈವದ ಪಾತ್ರಿಗಳಾದ ಬಾಸ್ಕರನ್ ಪಚ್ಲಂಪಾರೆ,ಅಡ್ವಕೇಟ್ ಭರತ್ ರಾಜ್ ಅಟ್ಟೆಗೋಳಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಏಕಾನಂದ ಮಂಗಳೂರು, ಚಂದ್ರಶೇಖರ ಅಂಗಡಿಪದವು,ವಿಠಲ ನಾರಾಯಣ ಬಂಬ್ರಾಣ ಮೊದಲಾದವರು ಉಪಸ್ಥಿತರಿದ್ದರು.ಮಹಿಳಾ ಸಮಿತಿಯ ಅಧ್ಯಕ್ಷರಾದ ಸುಮಂಗಳ ಪೊಸೋಟ್ ಮತ್ತು ಸುಮಿತ್ರಾ ಬ0ಬ್ರಾಣ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು, ಶ್ರೀ ಧಮಸ್ಥಳ ಮಂಜುನಾಥೇಶ್ವರ ತುಳುಪೀಠ, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ಮತ್ತು ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಇವರ ಸಹಯೋಗದೊಂದಿಗೆ “ಗೇನದ ಗೆಜ್ಜೆ – ನೂದನೆ ಪಜ್ಜೆ’ ಹಾಗೂ ‘ತ್ರಿಂಶತಿ ತಿರುಳು’ ಮತ್ತು ‘ಅಪ್ಪೆ ಅಂಜನೆ’ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ :01-06-2023ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಮ್ ಇಲ್ಲಿಯ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಮಂಗಳೂರು ವಿ.ವಿ.ಯ ಗೌರವಾನ್ವಿತ ಕುಲಪತಿಯಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಇವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರಿನ ವಿ.ವಿ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀದೇವಿ ಎಲ್., ವಂಡಾರಿನ ಎನ್.ವೈ.ಟಿ.ಯ ಸ್ಥಾಪಕ್ಷಾಧ್ಯಕ್ಷರಾದ ಶ್ರೀ ಗೋವಿಂದ ವಂಡಾರು, ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇದರ ವ್ಯವಸ್ಥಾಪಕರಾದ…

Read More

‘ಮಾತಾ’ ನಾಟಕವು ಮೇ 17ರಂದು ಬೆಂಗಳೂರಿನಲ್ಲಿ ಚೊಚ್ಚಲ ಪ್ರದರ್ಶನವನ್ನು ಕಂಡಿದ್ದು, ಮೇ 21ರಂದು 4ನೇ ಪ್ರಯೋಗವು ನೆರವೇರಿದೆ. ‘ಮಾತಾ’ ನಾಟಕದ ಬಗ್ಗೆ : ಕನ್ನಡ ರಂಗಭೂಮಿಯ ಚರಿತ್ರೆಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತ ಮಹಿಳೆಯರ ಕುರಿತಾದ ನಾಟಕಗಳು ಬೆರಳೆಣಿಕೆಯಷ್ಟು ಮಾತ್ರ. ಅದರಲ್ಲೂ, ಜೋಗತಿ ಸಂಪ್ರದಾಯ ಮತ್ತು ಜೋಗತಿ ಕಲೆಯನ್ನು ಕುರಿತಾದ ನಾಟಕದ ಹಿನ್ನೆಲೆಯಲ್ಲಿ ಹೇಳುವುದೇ ಆದರೆ ಕನ್ನಡದ ಮಟ್ಟಿಗೆ ‘ಮಾತಾ’ ಅಗ್ರ ಸ್ಥಾನದಲ್ಲಿ ನಿಲ್ಲುತ್ತದೆ. ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿಯವರ ಜೀವನವನ್ನು ಆಧರಿಸಿದ ನಾಟಕವಾದರೂ ಗಂಡಿನ ಒಳಗಿರುವ ಹೆಣ್ತನ, ಜನಪದ ಕಲಾಸಕ್ತಿ, ರಂಗಭೂಮಿಯ ವಾತಾವರಣ, ಕೌಟುಂಬಿಕ ಸಾಮಾಜಿಕ ಹಿನ್ನಲೆ, ಸೃಜನಶೀಲತೆ ಮತ್ತು ಸಾಧನೆ ಹೀಗೆ ಮುಂತಾದ ನೆಲೆಗಳಲ್ಲಿ ಮಾತಾ ನಾಟಕ ಅನಾವರಣಗೊಳ್ಳುತ್ತದೆ. ಜೋಗತಿ ಹಾಗೂ ಎಲ್ಲವ್ವನ ಪರಂಪರೆ ನಾಟಕದ ಜೀವಾಳವಾಗಿದೆ. ಅಷ್ಟೆ ಅಲ್ಲದೇ ಮನುಷ್ಯನನ್ನು ಮನುಷ್ಯನೇ ಅತ್ಯಂತ ಹೀನವಾಗಿ ನೋಡುವ ಮನಸ್ಥಿತಿಯನ್ನು ಕನ್ನಡಿ ಹಿಡಿದಂತೆ ಮನುಷ್ಯನಿಗೇ ಅರ್ಥ ಮಾಡಿಸುತ್ತದೆ. ಅರುಣ್ ಜೋಳದ ಕೂಡ್ಲಿಗಿ ಅವರು ಮಂಜಮ್ಮ ಜೋಗತಿಯವರ ಆತ್ಮ ಕಥನ ‘ನಡುವೆ ಸುಳಿವ ಹೆಣ್ಣು’…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಕುರ್ನಾಡು ಸಹಯೋಗದೊಂದಿಗೆ ದಿನಾಂಕ 25-05-2023ರಂದು ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಕವನ ಸ್ಪರ್ಧೆ ಕಾರ್ಯಕ್ರಮ’ವು ಸೂರಜ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕೀರ್ತನ ಎಂ — ಪ್ರಥಮ ಪಾತಿಮಾತುಲ್ ಆಶಿಕಾ – ದ್ವಿತೀಯ ಪಾತಿಮಾತುಲ್ ಅಪೀಪಾ — ತೃತೀಯ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಬಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ಇವರ ಅಧ್ಯಕ್ಷತೆಯಲ್ಲಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ 2021 ಇದರ ದತ್ತಿ ಕೊಡುಗೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಸುಮಾರು 35 ಮಂದಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗಿದೆ. ಸ್ಪರ್ಧೆಯಲ್ಲಿ ಪ್ರಥಮ,…

Read More