Author: roovari

ಮಡಿಕೇರಿ : ಕೊಡವ ಕೂಟಾಳಿಯಡ ಕೂಟದ ಮಾಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆ 19 ಆಗಸ್ಟ್ 2024ರ ಸೋಮವಾರದಂದು ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾದ ಚಂಗುಲಂಡ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಉಪಾಧ್ಯಕ್ಷರಾಗಿ ಬೊಜ್ಜಂಗಡ ಚೆಂಗಪ್ಪ , ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಬೊಜ್ಜಂಗಡ ಭವ್ಯ ದೇವಯ್ಯ, ಸಲಹೆಗಾರರಾಗಿ ಶ್ರೀ ಚೊಟ್ಟಂಡ ಪ್ರಭು ಸೋಮಯ್ಯ ನಿರ್ದೇಶಕರಾಗಿ ಕಾಂಗಿರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಕಾಳಮಂಡ ರಾಬಿನ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ ಹಾಗೂ ಮಾಚಿಮಾಡ ಡಿಂಪಲ್ ವಾಸು ಇವರುಗಳು ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ್ರ ರಜನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಂಗಳೂರು : ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ಇದರ ವಾರ್ಷಿಕೋತ್ಸವದ ಅಂಗವಾಗಿ ಒಂದು ದಿನದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ ಕಾರ್ಯಕ್ರಮವು 25 ಆಗಸ್ಟ್ 2024ರಂದು ಮಂಗಳೂರಿನಲ್ಲಿರುವ ಉರ್ವಾಸ್ಟೋರಿನ ತುಳುಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಾದ ಮುಂಬೈನ ಪಂ. ರಾಮ್ ದೇಶಪಾಂಡೆ ಹಾಗೂ ಮೈಸೂರಿನ ವಿದುಷಿ ಶ್ರೀಮತಿ ದೇವಿ ಇವರಿಂದ ಹಿಂದುಸ್ತಾನಿ ಗಾಯನ ಕಚೇರಿ ನಡೆಯಲಿದೆ. ಇವರಿಗೆ ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಮತ್ತು ಪ್ರಸಾದ್ ಕಾಮತ್, ತಬಲಾದಲ್ಲಿ ಗೋವಾದ ಡಾ. ಉದಯ್ ಕುಲಕರ್ಣಿ ಮತ್ತು ರಾಜೇಶ್ ಶ್ರೀನಿವಾಸ್ ಭಾಗವತ್ ಸಹಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳಿಂದ ಲಘು ಶಾಸ್ತ್ರೀಯ ಸಂಗೀತ ವೈವಿಧ್ಯ ನಡೆಯಲಿದೆ. ಟ್ರಸ್ಟಿನ ಶ್ರೀಮತಿ ಲೋಲಾಕ್ಷಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು, ಪಂ. ರಾಮ್ ದೇಶಪಾಂಡೆ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಜಿ., ಎಂ. ಆರ್. ಪಿ. ಎಲ್. ಜನರಲ್ ಮ್ಯಾನೇಜರ್ ಮಂಜುನಾಥ…

Read More

ಮೂರುಕಜೆ : ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮಗಳ ದ್ವಿತೀಯ ಸಮಾರಂಭದ ಉದ್ಘಾಟನೆಯು ದಿನಾಂಕ 09 ಆಗಸ್ಟ್ 2024ರಂದು ಮೂರುಕಜೆಯ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿಟ್ಲ ಪಡ್ನೂರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆ ಶ್ರೀಮತಿ ರೇಶ್ಮ ಶಂಕರಿ ಬಲಿಪಗುಳಿ ಇವರು ಮಾತನಾಡಿ “ಗಮಕ ಕಲೆ ಕನ್ನಡ ಸಂಸ್ಕೃತಿಯ ದ್ಯೋತಕ. ಅದು ಅತ್ಯಂತ ಪ್ರಾಚೀನವಾದುದು. ಭಾರತೀಯ ಸಂಸ್ಕೃತಿಯನ್ನು ಜನರಿಗೆ ಯಥಾವತ್ತಾಗಿ ಪರಿಚಯಿಸುವುದಕ್ಕೆ ಇದು ಬಹಳ ಉತ್ತಮವಾದ ಮಾಧ್ಯಮ. ಗಮಕ ಕಲಾಪರಿಷತ್ತು ಮತ್ತು ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ವಕಾಲದಲ್ಲಿ ವಿಶೇಷವಾಗಿ ರಾಮಾಯಣದ ಪುಣ್ಯಕಥೆಯನ್ನು ಪ್ರಚಾರಗೊಳಿಸಿ ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿರುವುದು ಸ್ತುತ್ಯರ್ಹವಾಗಿದೆ” ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಟಿ. ಶಂಕರನಾರಾಯಣ ಭಟ್ಟರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಕುಲದ ಅಧಿಕಾರಿಗಳಾದ ಶ್ರೀ ಜಗನ್ನಾಥ್ ಅವರು “ಭಾರತೀಯ ಸಂಸ್ಕೃತಿಯನ್ನು ಸಾರುವ ಮಹಾಕಾವ್ಯಗಳನ್ನು ಸಾಧ್ಯವಿದ್ದಷ್ಟೂ ಪ್ರಚಾರಗೊಳಿಸಬೇಕು” ಎಂದು…

Read More

ಬೆಂಗಳೂರು : ಶ್ರೀ ಗಣೇಶ ನೃತ್ಯಾಲಯ (ರಿ.) ನೃತ್ಯ ಮತ್ತು ಸಂಗೀತ ಶಾಲೆಯ ವತಿಯಿಂದ ಕರಾವಳಿಯ ಯುವ ನೃತ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರಿಂದ ಎರಡು ದಿನಗಳ ಕಾರ್ಯಾಗಾರವನ್ನು ದಿನಾಂಕ 24-08-2024 ಮತ್ತು 25-08-2024ರಂದು ಬೆಂಗಳೂರಿನ ಎಸ್.ಜಿ.ಎನ್. ಅರಿಶಿನಕುಂಟೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ನಡೆಯಲಿರುವ ‘ನೃತ್ಯೋಲ್ಲಾಸ’ ತಿಂಗಳ ಕಾರ್ಯಕ್ರಮದಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಹಾಗೂ ಶ್ರೀ ಗಣೇಶ ನೃತ್ಯಾಲಯದ ಶ್ರೀಮತಿ ಭಾವನಾ ಗಣೇಶ ಮತ್ತು ಎಂ.ಡಿ. ಗಣೇಶ್ ಇವರ ಶಿಷ್ಯ ವೃಂದದವರಿಂದ ಸಮೂಹ ನೃತ್ಯ ಪ್ರದರ್ಶನ ನಡೆಯಲಿದೆ. ಸಂಸ್ಕೃತ ವಿದ್ವಾನ್ ಶ್ರೀ ಶಂಕರ್ ಭಟ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಬಂಟ್ವಾಳ: ಸಿದ್ಧಕಟ್ಟೆಯ ‘ಶ್ರೀ ಕ್ಷೇತ್ರ ಪೂಂಜ ಯಕ್ಷಮಿತ್ರರು’ ಸಂಘಟನೆ ವತಿಯಿಂದ 7ನೇ ವರ್ಷದ ಯಕ್ಷಗಾನ ತಾಳಮದ್ದಳೆ ಕೂಟ ಹಾಗೂ ‘ಸಿದ್ಧಕಟ್ಟೆ ಪ್ರಶಸ್ತಿ’ ಪ್ರದಾನ ಸಮಾರಂಭವು 18 ಆಗಸ್ಟ್ 2024ರ ಭಾನುವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲೊರೆಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಶ ಶೆಟ್ಟಿ ಮಾತನಾಡಿ “ಸಿದ್ದಕಟ್ಟೆ ಎಂಬ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಹಲವು ಮಂದಿ ಯಕ್ಷಗಾನ ಕಲಾವಿದರು ಹುಟ್ಟೂರಿನ ಹೆಸರನ್ನು ಹತ್ತೂರಿನಲ್ಲಿ ಪಸರಿಸಿದ್ದಾರೆ.” ಎಂದರು. ಇದೇ ಸಂದರ್ಭದಲ್ಲಿ ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಎನ್. ಸೀತಾರಾಮ ರೈ ಪೆರಿಂಜೆ ಅವರಿಗೆ ‘ಸಿದ್ಧಕಟ್ಟೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಶಿವಯ್ಯ ಎಸ್‌. ಎಲ್. ಹಾಗೂ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿದರು.ಸಂಯೋಜಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಪ್ರಮುಖರಾದ ರಾಘವೇಂದ್ರ ಭಟ್, ರತ್ನಾಕರ ಶೆಟ್ಟಿ ಭಾಗವಹಿಸಿದ್ದರು. ಉಪನ್ಯಾಸಕ ಯೋಗೀಶ ಕೈರೋಡಿ ಸ್ವಾಗತಿಸಿ, ಉಮೇಶ್ ಶೆಟ್ಟಿ ಪಾಲ್ಯ ಕಾರ್ಯಕ್ರಮ ನಿರೂಪಿಸಿ, ಗಣೇಶ ಶೆಟ್ಟಿ…

Read More

ಕಿನ್ನಿಗೋಳಿ: ಹಿರಿಯ ಪತ್ರಕರ್ತ, ಜಾನಪದ ಸಂಶೋಧಕ ಕೆ. ಎಲ್. ಕುಂಡಂತಾಯ ಇವರು ‘ಅನಂತ ಪ್ರಕಾಶ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ. ನಾಗಾರಾಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇಗುಲಗಳ ಬಗ್ಗೆ ಸಂಶೋಧನ ವಿಶೇಷ ಬರಹಗಳನ್ನು ಪ್ರಕಟಿಸಿದ್ದಾರೆ. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದ್ದಾರೆ. ಯಕ್ಷಗಾನ ಹಾಗೂ ಜಾನಪದ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವ ಇವರು ಸುಮಾರು 40ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂಪಾಯಿ 10,000 ನಗದನ್ನು ಒಳಗೊಂಡಿದೆ. 1 ಸೆಪ್ಟೆಂಬರ್ 2024ರ ರವಿವಾರ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನಂತ ಪ್ರಕಾಶನ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

Read More

ಸುಳ್ಯ: ರಂಗಮಯೂರಿ ಕಲಾಶಾಲೆ (ರಿ.) ಸುಳ್ಯ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯ ಸಂಭ್ರಮ ಹಾಗೂ ಸಂಗೀತ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ಚಿಂತನ ಸುಬ್ರಮಣ್ಯ ಇವರು ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿ ಇವತ್ತಿನ ಕಾಲಮಾನಕ್ಕೆ ಮಕ್ಕಳಿಗೆ ಕಲೆ ಮತ್ತು ಸಾಹಿತ್ಯದ ಅಗತ್ಯತೆಯ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಇವರಿಂದ ವಯೊಲಿನ್ ವಾದನ, ರಂಗಮಯೂರಿ ಕಲಾಶಾಲೆಯ ಸುಗಮ ಸಂಗೀತ ವಿದ್ಯಾರ್ಥಿಗಳಿಂದ ಸಂಗೀತ ವೈಭವ, ಪುತ್ತೂರಿನ ಶಿಕ್ಷಕಿ ಸುಮನಾ ರಾವ್ ಇವರ ತರಬೇತಿ ಹಾಗೂ ನಿರ್ದೇಶನದಲ್ಲಿ ಮೂಡಿ ಬಂತು. ಹಿಮ್ಮೇಳನದಲ್ಲಿ ಶುಭಕರ್ ಬೆಟ್ಟಂಪಾಡಿ ಹಾಗೂ ಬಾಲಕೃಷ್ಣ ಮೇನಾಲ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಉತ್ತಮ ಕನ್ನಡ ಸಾಧಕ ಪ್ರಶಸ್ತಿ ಪುರಸ್ಕೃತರು, ಸುಳ್ಯದ ಕೆ.ವಿ.ಜಿ. ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲಿನ ಕನ್ನಡ ಶಿಕ್ಷಕಿ ಭವ್ಯ ಎ., ಸುಳ್ಯ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

Read More

ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ ಆರಾಧನಾ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಯಕ್ಷದೇಗುಲ ತಂಡ ಪ್ರಸ್ತುತಪಡಿಸಿದ ‘ಸುದರ್ಶನ ಗರ್ವಭಂಗ’ ಯಕ್ಷಗಾನ ಪ್ರದರ್ಶನವು 20 ಆಗಸ್ಟ್ 2024ರಂದು ನಡೆಯಿತು. ಕಲಾವಿದರಾಗಿ ಹಿಮ್ಮೇಳದಲ್ಲಿ ಯಕ್ಷ ಗುರುಗಳಾದ ಲಂಬೋದರ ಹೆಗಡೆ, ಚಂಡೆಯಲ್ಲಿ ಶ್ರೀನಿವಾಸ ಪ್ರಭು, ಮದ್ದಲೆಯಲ್ಲಿ ಸಂಪತ್ ಕುಮಾರ್ ಹಾಗೂ ಮುಮ್ಮೇಳದಲ್ಲಿ ಹಿರಿಯ ಕಲಾವಿದರಾದ ಬಾಲಕೃಷ್ಣ ಭಟ್, ಕಡಬಾಳ ಉದಯ ಹೆಗಡೆ, ತಮ್ಮಣ್ಣ ಗಾಂವ್ಕರ್, ಸ್ಪೂರ್ತಿ ಭಟ್, ರಾಮಕೃಷ್ಣ ಭಟ್, ಉದಯ ಭೋವಿ, ಶ್ರೀ ವಿದ್ಯಾ, ಶ್ರೀವತ್ಸ ಮತ್ತು ಪ್ರಕಾಶ್ ಉಳ್ಳೂರ ಇವರು ಭಾಗವಹಿಸಿದರು. ಕಾರ್ಯಕ್ರಮವು ಯಕ್ಷಗುರು ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ ನಡೆಯಿತು. ಬೆಂಗಳೂರಿನಲ್ಲಿ ಕಳೆದ 44 ವರ್ಷದಿಂದ ಕೆ. ಮೋಹನ್ ನಿರ್ದೇಶನ ಮತ್ತು ಪ್ರಿಯಾಂಕ ಕೆ. ಮೋಹನ್ ನೃತ್ಯ ಸಂಯೋಜನೆಯಲ್ಲಿ ಯಕ್ಷದೇಗುಲ ತಂಡವು ಸಾಂಪ್ರದಾಯಿಕ ಯಕ್ಷಗಾನ, ನಾಟಕಗಳು ಹಾಗೆಯೇ ನವೀನ ಮತ್ತು ಪ್ರಾಯೋಗಿಕ ನಿರ್ಮಾಣಗಳನ್ನು ಪ್ರದರ್ಶಿಸುವ ಏಕೈಕ ತಂಡವಾಗಿದೆ. ಈವರೆಗೆ 5000ಕ್ಕೂ ಹೆಚ್ಚು ಪ್ರದರ್ಶನವನ್ನು ದೇಶ,…

Read More

ಪುತ್ತೂರು : ನ್ಯಾಯವಾದಿ, ಬರಹಗಾರ ಭಾಸ್ಕರ ಕೋಡಿಂಬಾಳ ಇವರು ಬರೆದ ‘ಕಣ್ಣಿಗೆ ಕಾಣದ್ದು.. ಮನಸ್ಸನ್ನು ಕಾಡಿದ್ದು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 19 ಆಗಸ್ಟ್ 2024ರಂದು ಪುತ್ತೂರು ನ್ಯಾಯಾಲಯದ ಸಂಕೀರ್ಣ, ಪರಾಶರ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಪಿ. ಕೃಷ್ಣ ಭಟ್ ಅವರು ಕೃತಿ ಲೋಕಾರ್ಪಣೆ ಮಾಡಿ, “ಈ ಕೃತಿಯಲ್ಲಿ ಹಿಂದಿನ ಕಾಲದ ದಕ್ಷಿಣ ಕನ್ನಡ ಜಿಲ್ಲೆಯ ವಾಸ್ತವ ಚಿತ್ರಣವನ್ನು ಕಾಣಬಹುದು. ನಮ್ಮ ನಮ್ಮ ಆಸ್ತಿಕತೆ, ಸಾಮಾಜಿಕ ಸಾಮರಸ್ಯ, ನೆಗೆಟಿವ್ ಇಲ್ಲದ ಭಾಂದವ್ಯಗಳನ್ನು ಅಚ್ಚೊತ್ತಿರುವ ಕೃತಿ ಇದಾಗಿದೆ. ಇಂದಿನ ದಿನಗಳಲ್ಲಿ ನಾವು ಮಾಡಿದ ಕೆಲವೊಂದು ಪಾಪಗಳನ್ನು ಕಳೆಯಲೆಂದೇ ದೇವಸ್ಥಾನಕ್ಕೆ ಹೋಗುವ ಚಿಂತನೆ, ಹಿಂದಿನ ಕಾಲದ ನಿಸ್ವಾರ್ಥತೆಯ ಆಸ್ತಿಕ ಭಾವದ ನಡುವೆ ಅಜಗಜಾಂತರ ವ್ಯತ್ಯಾಸ ಓದುಗರ ಮನಸ್ಸಿಗೆ ಕಾಡುತ್ತದೆ. ಇಂದು ವಕೀಲರು ಸಾಹಿತ್ಯ, ಸಂಗೀತದಿಂದ ‘ಹೊರತಾದ’ ಬದುಕು ಕಟ್ಟಿಕೊಳ್ಳುವುದು ಕಷ್ಟಸಾಧ್ಯ. ಅವರೊಳಗೊಂದು ಕವಿ ಹೃದಯ ಕಾಣಿಸಿಕೊಂಡಾಗ ಈ ವ್ಯವಸ್ಥೆಯ ರೂಪಕಗಳು ಹುಟ್ಟಿಕೊಳ್ಳುತ್ತವೆ. ಹಾಗಾಗಿ ಬದುಕಿನ ಅರ್ಥ ವಿಶಾಲತೆಯನ್ನು ಪಡೆದುಕೊಳ್ಳುತ್ತದೆ.…

Read More

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಆಶ್ರಯದಲ್ಲಿ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್‌ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-30 ಗಂಟೆಗೆ ಮಂಗಳೂರು ನಗರದ ಫಾದರ್‌ ಎಲ್‌ಎಫ್‌. ರಸ್ಕಿನ್ಹಾ ಹಾಲ್, ಎಲ್‌.ಸಿ.ಆರ್‌.ಐ. ಬ್ಲಾಕ್, ಸೇಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪೂರ್ವಾಧದಲ್ಲಿ ಯುವ ಗಾಯಕ ಧಾರವಾಡದ ಶ್ರೀ ಸುಜಯೇಂದ್ರ ಕುಲಕರ್ಣಿ ಇವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಉತ್ತರಾರ್ಧದಲ್ಲಿ ರಾಷ್ಟ್ರ ಮಟ್ಟದ ಖ್ಯಾತಿಯ ಸಂತೂರ್‌ ಕಲಾವಿದ ಮುಂಬೈನ ಪಂಡಿತ್ ಸತ್ಯೇಂದ್ರ ಸಿಂಗ್ ಸೋಲಂಕಿ ಇವರಿಂದ ಸಂತೂರ್‌ ಕಾರ್ಯಕ್ರಮ ನಡೆಯಲಿದೆ. ತಬ್ಲಾದಲ್ಲಿ ಬೋಪಾಲ್‌ನ ಶ್ರೀ ರಾಮೇಂದ್ರ ಸಿಂಗ್ ಸೋಲಂಕಿ, ಹಾರ್ಮೋನಿಯಂನಲ್ಲಿ ಬೆಂಗಳೂರಿನ ಶ್ರೀ ತೇಜಸ್‌ ಕಾಟೋಟಿ ಇವರು ಸಾಥ್ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತರೆಲ್ಲರಿಗೂ ಮುಕ್ತ ಪ್ರವೇಶಾವಕಾಶವಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ಶ್ರೀ ನರೇಂದ್ರ ಎಲ್.…

Read More