Subscribe to Updates
Get the latest creative news from FooBar about art, design and business.
Author: roovari
ಮಂದಾರ್ತಿ : ಬ್ರಹ್ಮಾವರ ಹಂದಾಡಿಯ ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76 ವರ್ಷ) ದಿನಾಂಕ 04-07-2024ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲಾ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು. ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ. ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ…
ಬೆಂಗಳೂರು : ‘ನಮ್ದೆ ನಟನೆ’ ಸಾಂಸ್ಕೃತಿಕ ವೇದಿಕೆ ಪ್ರಸ್ತುತ ಪಡಿಸುವ ರಾಜೇಂದ್ರ ಕಾರಂತ್ ಇವರು ಬರೆದು ನಿರ್ದೇಶಿಸಿದ ಪ್ರಭಾವಶಾಲಿ ‘ಮರಣ ಮೃದಂಗ’ ನಾಟಕವು ದಿನಾಂಕ 07-07-2024ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಟೆಲಿಬುಕಿಂಗ್ : +91-9743190793 ಬಹಳಷ್ಟು ರಾಜಕಾರಣಿಗಳು ತಾವು ಜಿತೇಂದ್ರಿಯರು ಎಂದೇ ಭ್ರಮಿಸಿರುತ್ತಾರೆ, ಸಾವು ಬಾಗಿಲನ್ನು ತಟ್ಟುವ ತನಕ. ರಾಜ್ಯವನ್ನು ಹತ್ತು ವರ್ಷ ಆಳಿದ ನರಸಿಂಹರಾವ್ ಕೂಡ ಹಾಗೇ ಮೆರೆದಿರುತ್ತಾನೆ, ಕ್ಯಾನ್ಸರ್ ಬರುವ ತನಕ. ಅನಿವಾರ್ಯವಾಗಿ ತಾನು ನಿರಾಕರಿಸಿದ ಡಾಕ್ಟರ್ ಹತ್ತಿರವೇ ಚಿಕಿತ್ಸೆಗೆ ಬರಬೇಕಾಗುತ್ತದೆ. ಅಲ್ಲಿ ಸಾಮಾನ್ಯರ ನೋವು, ನಲಿವುಗಳು, ಸಾವಿನ ಅನುಭವ ಅವನನ್ನ ಮಾಗಿಸುತ್ತವೆ… ಅಧಿಕಾರ, ಹಣ ಸಂಪಾದನೆಗಿಂತ ಸೇವೆ ಸರ್ವ ಶ್ರೇಷ್ಠ ಸಾಧನೆ ಎಂಬ ಅರಿವಾಗುತ್ತದೆ. ಆದರೆ.. ಸಾವು ಯಾರನ್ನೂ ಬಿಡುವುದಿಲ್ಲ.
ಮಂಗಳೂರು : ಕಿಶೋರ ರಂಗ ಪಯಣ ಕಲಾಭಿ ಮಕ್ಕಳ ರಂಗಭೂಮಿ ಪ್ರಸ್ತುತ ಪಡಿಸುವ ಭುವನ್ ಮಣಿಪಾಲ ರಂಗರೂಪ ಮತ್ತು ನಿರ್ದೇಶನದಲ್ಲಿ ‘ಮೊಗ್ಲಿ’ ನಾಟಕವು ದಿನಾಂಕ 06-07-2024ರಂದು ಸಂಜೆ 7-00ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ (ಪರಿಗಣಿತ ವಿಶ್ವ ವಿದ್ಯಾನಿಲಯ) ಸಹೋದಯ ಹಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ವಚನ ಪಿತಾಮಹ ಫ.ಗು. ಹಳಕಟ್ಟಿಯವರ 144ನೆಯ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 02-07-2024ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಫ.ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು. ಹಳಕಟ್ಟಿಯವರು ಸಹಜವಾಗಿಯೇ ವಚನ ಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೂ ಮೊದಲು, ಕವಿ ಹಾಗೂ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ.ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ 42 ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆ. ಹಳಕಟ್ಟಿಯವರು ಬಸವಣ್ಣನವರ ವಚನಗಳನ್ನು ಇಂಗ್ಲೀಷಿಗೆ ಅನುವಾದಿಸಿ ‘ಇಂಡಿಯನ್ ಆಂಟಿಕ್ವರಿ’ಯಲ್ಲಿ ಪ್ರಕಟಗೊಳಿಸಿದರು. ಅಷ್ಟೇ ಅಲ್ಲ ವಚನಗಳ ಗಾಯನಕ್ಕೂ ವ್ಯವಸ್ಥೆ ಮಾಡಿಸಿದರಲ್ಲದೆ ಶ್ರೇಷ್ಠ ಸಂಗೀತಕಾರರನ್ನು ವಚನ ಗಾಯನ ರೆಕಾರ್ಡಿಂಗಿಗಾಗಿ ಮುಂಬಯಿಯವರೆಗೆ ಕಳುಹಿಸಿದರು. ಹೀಗೆ ವಚನ ಸಾಹಿತ್ಯದ…
ಮೈಸೂರು : ‘ನಟನ’ ರಂಗಶಾಲೆಯು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಸುಬ್ಬಣ್ಣ ಸ್ಮರಣೆ 2024’ ಕಾರ್ಯಕ್ರಮವನ್ನು ದಿನಾಂಕ 06-07-2024ರಿಂದ ಪ್ರತಿ ದಿನ ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರದ ‘ನಟನ ರಂಗಶಾಲೆ’ಯಲ್ಲಿ ಆಯೋಜಿಸಲಾಗಿದೆ. ದಿನಾಂಕ 06-07-2024ರಂದು ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ಮತ್ತು ನಿರ್ದೇಶನದಲ್ಲಿ ‘ಕನ್ನಡ ಕಾವ್ಯ ಕಣಜ’ ಹಾಗೂ ಮೈಸೂರಿನ ವಿನೋಬಾ ರಸ್ತೆಯ ಹೊಟೇಲ್ ಸದರ್ನ್ ಸ್ಟಾರ್ ಇಲ್ಲಿ ಸಂಜೆ 4-30 ಗಂಟೆಗೆ ಮೈಸೂರು ಸಾಹಿತ್ಯ ಸಂಭ್ರಮ 2024 ನಡೆಯಲಿದೆ. ದಿನಾಂಕ 07-07-2024ರಂದು ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ಮತ್ತು ನಿರ್ದೇಶನದಲ್ಲಿ ‘ಕನ್ನಡ ಕಾವ್ಯ ಕಣಜ’ ಪ್ರಸ್ತುತಗೊಳ್ಳಲಿದೆ. ದಿನಾಂಕ 13-07-2024ರಂದು ಮಂಜುನಾಥ ಎಲ್. ಬಡಿಗೇರ ಇವರ ನಿರ್ದೇಶನದಲ್ಲಿ ಎಸ್.ಕೆ. ಇವೆಂಟ್ ಸಹಯೋಗದಲ್ಲಿ ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ‘ಕರ್ಣ ಅರ್ಜುನರ ಕಾಳಗ’ ಮೂಡಲಪಾಯ ಯಕ್ಷಗಾನ ಪ್ರಸಂಗದ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 14-07-2024ರಂದು ನಟನ ರಂಗಮಂದಿರ ಲೋಕಾರ್ಪಣೆಯಾಗಿ ಒಂಭತ್ತು…
ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ಸಾಹಿತ್ಯ ಸಾಂಗತ್ಯ -9 ಕಾರ್ಯಕ್ರಮವು ದಿನಾಂಕ 01-07-2024ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯದ ಪ್ರಮುಖ ವ್ಯಕ್ತಿತ್ವಗಳಲ್ಲಿ ಒಬ್ಬರಾದ ಕಾದಂಬರಿಕಾರ, ಕವಿ, ಪತ್ರಕರ್ತ ಹಾಗೂ ಚಲನಚಿತ್ರ ಬರಹಗಾರರಾದ ಜೋಗಿ ನಾಮಾಂಕಿತ ಶ್ರೀ ಗಿರೀಶ್ ರಾವ್ ಹತ್ವಾರ್, ಖ್ಯಾತ ಬರಹಗಾರರಾದ ಶ್ರೀ ಗೋಪಾಲಕೃಷ್ಣ ಕುಂಟಿನಿ, ಖ್ಯಾತ ಲೇಖಕರಾದ ರಾಜಶೇಖರ ಹಳೆಮನೆ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್., ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಪ್ರಖ್ಯಾತ ಲೇಖಕರೂ ಆಗಿರುವ ಅನುಬೆಳ್ಳೆ ನಾಮಾಂಕಿತ ರಾಘವೇಂದ್ರ ಬಿ. ರಾವ್ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಕೆ.ಎಸ್. ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರು ಮತ್ತು ಪ್ರಮುಖ ಬರಹಗಾರರಾಗಿರುವ ಮಹೇಶ್ ಕೆ.ಎನ್. ಪುತ್ತೂರು ಇವರುಗಳು ಭಾಗವಹಿಸಿದ್ದರು. ಸಾಹಿತ್ಯದ ಕುರಿತಾಗಿ ‘ಸಾಹಿತ್ಯ ಸ್ಪಂದನ’ ಎಂಬ ಹೆಸರಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೋಧಕ ಮತ್ತು…
ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಅರ್ಪಿಸುವ ಶ್ರೀಮತಿ ವೀಣಾ ಟಿ. ಶೆಟ್ಟಿಯವರಿಂದ ಲೇಖನಗಳ ಸಂಗ್ರಹ ‘ಗೋಡೆಯ ಮೇಲಿನ ಚಿತ್ತಾರ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 08-07-2024ರಂದು ಸಂಜೆ 5-00 ಗಂಟೆಗೆ ಕೆನರಾ ಪದವಿ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ರಂಗಸಂಗಾತಿಯ ಅಧ್ಯಕ್ಷರಾದ ಶ್ರೀ ಗೋಪಾಲ ಕೃಷ್ಣ ಶೆಟ್ಟಿ ಇವರು ವಹಿಸಲಿದ್ದು, ಖ್ಯಾತ ಬರಹಗಾರರು ಮತ್ತು ಅನುವಾದಕರಾದ ಡಾ. ಪಾರ್ವತಿ ಜಿ. ಐತಾಳ್ ಇವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ. ಖ್ಯಾತ ಚಿಂತಕರು ಮತ್ತು ವಾಗ್ಮಿಗಳಾದ ಡಾ. ಅರುಣ್ ಉಳ್ಳಾಲ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ಖ್ಯಾತ ಬರಹಗಾರರು ಮತ್ತು ರಂಗಕರ್ಮಿ ಶ್ರೀ ಶಶಿರಾಜ್ ರಾವ್ ಕಾವೂರು ಇವರು ಕಾರ್ಯಕ್ರಮ ನಿರ್ವಹಿಸಲಿರುವರು.
ಬಂಟ್ವಾಳ : ಭರತನಾಟ್ಯ, ಜಾನಪದ ಗಾಯನ, ರಂಗಭೂಮಿ, ಮೇಕಪ್, ಗೋಡೆ ವರ್ಣಚಿತ್ರಗಳಲ್ಲಿ ಬಹುಮುಖ ಪ್ರತಿಭೆಯಾಗಿರುವ ತ್ರಿಶಾ ಶೆಟ್ಟಿ ಕೊಟ್ಟಿಂಜ ಅವರು ಸಾಗರದ ನೀನಾಸಂ ರಂಗಶಿಕ್ಷಣ ಕೇಂದ್ರದ 2004-25 ಸಾಲಿನ ತರಬೇತಿಗೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಛಾಯಾಗ್ರಾಹಕರಾಗಿರುವ ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಚಂಚಲಾ ಶೆಟ್ಟಿಯವರ ಏಕೈಕ ಪುತ್ರಿಯಾದ ತ್ರಿಶಾ ಶೆಟ್ಟಿ ದ.ಕ. ಜಿಲ್ಲೆಯಿಂದ ನೀನಾಸಂ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿರುವ ಏಕೈಕ ಪ್ರತಿಭೆಯಾಗಿದ್ದಾರೆ. ಆರಂಭಿಕ ಶಾಲಾ ಶಿಕ್ಷಣವನ್ನು ಬಂಟ್ವಾಳದ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಪೂರೈಸಿರುವ ತ್ರಿಶಾ ಪ್ರಸ್ತುತ ಪದವಿ ಶಿಕ್ಷಣವನ್ನು ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ (ಸ್ವಾಯತ್ತ) ಪಡೆಯುತ್ತಿದ್ದಾರೆ. ಬಾಲ್ಯದಿಂದಲೇ ಭರತನಾಟ್ಯ, ಸಂಗೀತ ಹೀಗೆ ಕಲಾ ಸರಸ್ವತಿಯನ್ನು ಆರಾಧಿಸಿಕೊಂಡು ಬಂದಿರುವ ತ್ರಿಶಾ ಭರತನಾಟ್ಯ, ಜಾನಪದ ಮತ್ತು ಭಾರತೀಯ ಸಮಕಾಲೀನ ನೃತ್ಯಗಾರ್ತಿ ಮಾತ್ರವಲ್ಲ, ಶ್ರೀಮಂತ ಕಲಾ ಪ್ರಕಾರವಾದ ಯಕ್ಷಗಾನದ ತರಬೇತಿಯನ್ನು ಪಡೆದಿದ್ದಾರೆ. ಕರ್ನಾಟಕದಾದ್ಯಂತ ರಾಷ್ಟ್ರೀಯ ರಂಗೋತ್ಸವಗಳಲ್ಲಿ ಪ್ರದರ್ಶನ ನೀಡಿರುವ ತ್ರಿಶಾ ರಂಗಾಯಣ ಮೈಸೂರು, ರಂಗಶಂಕರ ಬೆಂಗಳೂರು, ಶಂಕರನಾಗ್ ಉತ್ಸವ, ವಿದ್ಯಾವರ್ಧಕ ಸಂಘ…
ಮುಡಿಪು : ಇತ್ತೀಚೆಗೆ ಅಗಲಿದ ಕನ್ನಡ ಸಾಹಿತ್ಯ ಮತ್ತು ಸಂಶೋಧನ ಕ್ಷೇತ್ರದ ಮಹನೀಯರಾದ ಡಾ. ಕಮಲಾ ಹಂಪನಾ, ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಹಾಗೂ ಸಂಘಟಕ ರಮಾನಾಥ ಕೋಟೆಕಾರ್ ಇವರಿಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ವಿವಿಯ ಕನ್ನಡ ವಿಭಾಗದಲ್ಲಿ ದಿನಾಂಕ 03-07-2024ರಂದು ನಡೆದ ಸಮಾಲೋಚನಾ ಸಭೆಯಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ಪ್ರಸ್ತುತ ವರ್ಷದ ಕಾರ್ಯಚಟುವಟಿಕೆಗಳ ರೂಪುರೇಷೆಯನ್ನು ಸಿದ್ಧಗೊಳಿಸಲಾಯಿತು. ಪರಿಷತ್ತಿನ ವತಿಯಿಂದ ಕರಾವಳಿಯ ಲೇಖಕರ ಕುರಿತ ಸರಣಿ ಕಾರ್ಯಕ್ರಮವನ್ನು ಶಾಲೆಗಳಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಲ್ಲದೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಹಾಗೂ ಪರಿಷತ್ತಿನ ಸದಸ್ಯತ್ವ ಅಭಿಯಾನವನ್ನು ನಡೆಸಲು ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಇವರು ವಹಿಸಿದ್ದರು. ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಎಡ್ವರ್ಡ್ ಲೋಬೋ, ಕೋಶಾಧ್ಯಕ್ಷರಾದ ಲ.ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಸಂಘಟನಾ ಕಾರ್ಯದರ್ಶಿಗಳಾದ ತ್ಯಾಗಂ ಹರೇಕಳ, ರಾಧಾಕೃಷ್ಣ ರಾವ್,…
ಕಾಸರಗೋಡು : ಭಾರತೀಯ ಸಂಸ್ಕೃತಿ ಮತ್ತು ಕಲೆಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾಸರಗೋಡು ಚಿನ್ಮಯ ವಿದ್ಯಾಲಯದಲ್ಲಿ ಒಡಿಸ್ಸಾ ಶೈಲಿಯ ‘ಗೋಟಿಪುವ’ ಎಂಬ ಶಾಸ್ತ್ರೀಯ ನೃತ್ಯ ಕಲಾ ರೂಪವು ದಿನಾಂಕ 03-07-2024ರಂದು ಪ್ರದರ್ಶನಗೊಂಡಿತು. ಈ ಕಲಾ ರೂಪವನ್ನು ಗಂಡಸರು ಸ್ತ್ರೀ ವೇಷಧಾರಿಯಾಗಿ ಪ್ರದರ್ಶಿಸುವುದು ಇದರ ವಿಶೇಷತೆಯಾಗಿದೆ. 16ನೇ ಶತಮಾನದಿಂದಲೇ ಒಡಿಸ್ಸಾದಲ್ಲಿ ಪ್ರಚಲಿತವಾಗಿರುವ ಈ ಕಲಾ ಪ್ರದರ್ಶನವನ್ನು ಸ್ಪಿಕ್ ಮೆಕೆಯ ಸಹಯೋಗದಲ್ಲಿ ಆಯೋಜಿಸಲಾಯಿತು. ನಕ್ಷತ್ರ ಗುರುಕುಲ ಭುವನೇಶ್ವರ ಇಲ್ಲಿಯ ಕಲಾಗಾರರು ಶಾಸ್ತ್ರೀಯ ಕಲಾ ನೃತ್ಯ ಪ್ರದರ್ಶನವನ್ನು ನಡೆಸಿಕೊಟ್ಟರು. ಶ್ರೀ ಉಣ್ಣಿ ವಾರಿಯರ್ ಇದರ ನೇತೃತ್ವವನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಕೇರಳ ಚಿನ್ಮಯ ಮಿಷನಿನ ಮುಖ್ಯಸ್ಥರು ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷರಾದ ಸ್ವಾಮಿ ವಿವಿಕ್ತ ನಂದ ಸರಸ್ವತಿ, ಬ್ರಹ್ಮಚಾರಿಣಿ ದಿಶಾ ಚೈತನ್ಯ, ಪ್ರಾಂಶುಪಾಲರಾದ ಸುನಿಲ್ ಕುಮಾರ್ ಕೆ.ಸಿ., ಉಪ ಪ್ರಾಂಶುಪಾಲ ಪ್ರಶಾಂತ ಬಿ., ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಎಸ್.ಆರ್., ಚಿನ್ಮಯ ಮಿಷನ್ ನ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಯ ಅಡಿಗ ಕಾರ್ಯಕ್ರಮವನ್ನು ನಿರೂಪಿಸಿದರು.