Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಶ್ರೀ ಕಟೀಲು ಮೇಳದಲ್ಲಿ 35 ವರ್ಷಗಳಿಂದ ಕಲಾ ಸೇವೆಗೈಯುತ್ತಿರುವ ಬಣ್ಣದ ವೇಷಧಾರಿ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ‘ಕದ್ರಿ ವಿಷ್ಣು ಪ್ರಶಸ್ತಿ -2024’ನೀಡಿ ಗೌರವಿಸಲಿದೆ. ದಿನಾಂಕ 26 ನವಂಬರ್ 2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿಯಲ್ಲಿ ಶ್ರೀ ಕಟೀಲು ಮೇಳದ ಸೇವೆ ಆಟದಂದು ‘ಕದ್ರಿ ವಿಷ್ಣು ಪ್ರಶಸ್ತಿ-2024’ ಪ್ರದಾನ ಸಮಾರಂಭ ನಡೆಯಲಿದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಕಟೀಲು ಮೇಳಗಳಲ್ಲಿ ಒಟ್ಟು ಐದೂವರೆ ದಶಕಗಳಿಂದ ತೆಂಕುತಿಟ್ಟಿನ ಪರಂಪರೆಯ ಬಣ್ಣದ ವೇಷಧಾರಿಯಾಗಿ ಯಕ್ಷಕಲಾ ಯಾನವನ್ನು ಮುನ್ನಡೆಸುತ್ತಿರುವ ನಗ್ರಿ ಮಹಾಬಲ ರೈ ಇವರು ಕಟೀಲು ಮೇಳದಲ್ಲಿ ನಿರಂತರ 34 ತಿರುಗಾಟವನ್ನು ಪೂರೈಸಿದ್ದಾರೆ. ಶ್ರೀದೇವಿ ಮಹಾತ್ಮೆಯ ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಕದ್ರಿ ವಿಷ್ಣು ಇವರು ಇಚ್ಚಂಪಾಡಿ, ಕೂಡ್ಲು ಕೊರಕೋಡು, ಅಡೂರು, ಕುಂಡಾವು, ಕದ್ರಿ, ಧರ್ಮಸ್ಥಳ ಹಾಗೂ ಕಟೀಲು ಮೇಳಗಳಲ್ಲಿ ತೆಂಕುತಿಟ್ಟಿನ ರಾಜಕಿರೀಟ ವೇಷದಲ್ಲಿ ಅಪೂರ್ವ ಸಾಧನೆಗೈದಿದ್ದರು. ಅರ್ಜುನ, ಋತುಪರ್ಣ, ಇಂದ್ರಜಿತು, ಹಿರಣ್ಯಾಕ್ಷ ಮೊದಲಾದ ಪಾತ್ರಗಳಲ್ಲಿ ಮೆರೆದಿದ್ದ ಈ ಮೇರು…
ಬಂಟ್ವಾಳ : ಶಂಭೂರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 19 ನವೆಂಬರ್ 2024ರಂದು ಜರಗಲಿರುವ ಬಂಟ್ವಾಳ ತಾಲೂಕಿನ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿ ಮಕ್ಕಳ ಸಾಹಿತ್ಯಾದಿ ಕಲೆಗಳಲ್ಲಿ ತೊಡಗಿಸಿಕೊಂಡಿರುವ ಶಾಲೆಗೆ ನೀಡಲಾಗುವ ‘ಸಾಹಿತ್ಯ ತಾರೆ ಪ್ರಶಸ್ತಿ’ಗೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಓಜಾಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಶಾಲೆಯು ಸಾಹಿತ್ಯಾದಿ ಚಟುವಟಿಕೆಗಳನ್ನು ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುತ್ತಿರುವುದನ್ನು ಗಮನಿಸಿ ಈ ಪ್ರಶಸ್ತಿಗೆ ಓಜಾಲ ಶಾಲೆಯ ಆಯ್ಕೆಯಾಗಿರುತ್ತದೆ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಘೋಷಣೆ ಮಾಡಿದ್ದಾರೆ. ದಾಖಲಾತಿ ಕುಸಿದು ಹದಿನೇಳು ಮಕ್ಕಳನ್ನು ಹೊಂದಿ ಮುಚ್ಚುವ ಸ್ಥಿತಿಗಿಳಿದಿದ್ದ ಓಜಾಲ ಶಾಲೆಯು ಇಂದು 131 ವಿದ್ಯಾರ್ಥಿಗಳಿಂದ ತುಂಬಿ ಕಂಗೊಳಿಸುತ್ತಿದೆ. ಕುಗ್ರಾಮವಾದರೂ ಶಾಲಾ ಶಿಕ್ಷಕರಲ್ಲದೆ, ಹೊರ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಮಕ್ಕಳಿಗೆ ಕಲೆ ಮತ್ತು ಸಾಹಿತ್ಯ ರಚನೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿಭಾ ದರ್ಪಣದ ಮೂಲಕ ಮಕ್ಕಳ…
ಮಡಿಕೇರಿ : ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06 ನವೆಂಬರ್ 2024ರಂದು ಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಬೋಡಂಗಡ ಅಯ್ಯಪ್ಪ ಇವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ಕನ್ನಡ ಸಾಹಿತ್ಯದ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡುತ್ತಿದೆ ಇದು ಶ್ಲಾಘನೀಯ ವಿಚಾರ. ಕೊಡಗಿನ ಗಡಿಭಾಗವಾದ ಶ್ರೀಮಂಗಲ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳ ಅವಶ್ಯಕತೆ ತುಂಬಾ ಇದ್ದು, ಗಡಿ ಪ್ರದೇಶದ ಎಲ್ಲಾ ಶಾಲೆಗಳಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡುತ್ತಾ “ಸಾಹಿತ್ಯ…
ಬೆಂಗಳೂರು : ಎಂ.ಇ.ಎಸ್. ಕಲಾವೇದಿ ಇದರ ವತಿಯಿಂದ ‘ನಾಟಕೋತ್ಸವ 2024’ವನ್ನು ದಿನಾಂಕ 08 ನವೆಂಬರ್ 2024ರಿಂದ 10 ನವೆಂಬರ್ 2024ರವರೆಗೆ ಬೆಂಗಳೂರಿನ ಮಲ್ಲೇಶ್ವರಂ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ಆಯೋಜಿಸಲಾಗಿದೆ. ದಿನಾಂಕ 08 ನವೆಂಬರ್ 2024ರಂದು ಸಂಜೆ 6-00 ಗಂಟೆಗೆ ಈ ನಾಟಕೋತ್ಸವವನ್ನು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಇವರು ಉದ್ಘಾಟನೆ ಮಾಡಲಿರುವರು. ಬಳಿಕ ಹುಲಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ರಂಗಸಮೂಹ ಮಂಚಿಕೇರಿ (ರಿ.) ಅಭಿನಯಿಸುವ ಕನ್ನಡ ಸಾಮಾಜಿಕ ನಾಟಕ ‘ಕಾಲಚಕ್ರ’ ಪ್ರದರ್ಶನಗೊಳ್ಳಲಿದೆ. ದಿನಾಂಕ 09 ನವೆಂಬರ್ 2024ರಂದು ಸಂಜೆ 6-30 ಗಂಟೆಗೆ ಶರತ್ ಪರ್ವತವಾಣಿ ಇವರ ರಚನೆ ಮತ್ತು ನಿರ್ದೇಶನದಲ್ಲಿ ಕಲಾ ಗಂಗೋತ್ರಿ – ಯುವಶ್ರೀ ಅಭಿನಯಿಸುವ ‘ಒಂದು ವಿಲಯ ಕಥೆ’ ಕನ್ನಡ ನಾಟಕ ಮತ್ತು ದಿನಾಂಕ 10 ನವೆಂಬರ್ 2024ರಂದು ಪ್ರೊ. ಟಿ.ಆರ್. ಶೇಷಾದ್ರಿ ಅಯ್ಯಂಗಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶೃಂಗೇರಿಯ ನಾಟ್ಯಭಾರತೀ ತಂಡದವರು ಭಾಸ ಮಹಾ ಕವಿ ವಿರಚಿತ ಎಂ.ಕೆ. ಸುರೇಶ್ ಬಾಬು ಇವರ ನಿರ್ದೇಶನದಲ್ಲಿ…
ಬಂಟ್ವಾಳ : ದೀಪಿಕಾ ಪ್ರೌಢ ಶಾಲೆ ಮೊಡಂಕಾಪುವಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ಇಲಾಖೆ ಬೆಂಗಳೂರು ಇದರ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 05 ನವೆಂಬರ್ 2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್.ಜಿ. ಇವರು ಮಾತನಾಡಿ “ಶಿಕ್ಷಕರು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು. ಉತ್ತಮ ಹವ್ಯಾಸ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬೇಕು” ಎಂದು ಹೇಳಿದರು ಮೊಡಂಕಾಪು ಚರ್ಚ್ ಫಾ. ಮೆಲ್ವಿನ್ ಲೋಬೋ ಶುಭ ಹಾರೈಸಿದರು. ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿ ವಿದ್ಯಾ ಮಾನ್ಯ, ಸಹಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಮುಖ್ಯ ಗುರುಗಳ ಸಂಘದ ಅಧ್ಯಕ್ಷೆ ಪ್ರೇಮಾ, ಜಿ.ಪಿ.ಟಿ. ಸಂಘದ ಕಾರ್ಯದರ್ಶಿ ರಾಜೇಶ್, ಸರಕಾರಿ ಪ್ರೌಢ ಶಾಲೆ ಪೊಳಲಿಯ ಸುಮನ ವೇದಿಕೆಯಲ್ಲಿದ್ದರು. ನಿವೃತ್ತ ಶಿಕ್ಷಕರಾದ ಮಹಾಬಲೇಶ್ವರ ಹೆಬ್ಬಾರ್, ಜಯಾನಂದ ಪೆರಾಜೆ,…
ಉಡುಪಿ : ನೃತ್ಯನಿಕೇತನ ಕೊಡವೂರು ಆಯೋಜನೆ ಮಾಡಿದ ದೀಪಾವಳಿಯ ಪ್ರಯುಕ್ತ ಎರಡು ದಿವಸಗಳ ನೃತ್ಯನಿಕೇತನ ಕೊಡವೂರಿನ ಕುಟುಂಬ ಮಿಲನ ಕಾರ್ಯಕ್ರಮ ‘ನೃತ್ಯ ದೀಪೋತ್ಸವ’ವು ದಿನಾಂಕ 02 ನವೆಂಬರ್ 2024ರಂದು ಬಹಳ ಅದ್ಧೂರಿಯಾಗಿ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಆರಂಭಗೊಂಡಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟಿನ ಮುರಳೀಧರ ಉಪಾಧ್ಯಾಯ ಹಿರಿಯಡ್ಕ, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾರಂತ್ ಉಮೇಶ್ ಭಟ್ ಮರ್ಣೆ, ಮಣಿಪಾಲ ಮೀಡಿಯಾ ನೆಟ್ವರ್ಕ್ ನ ಉಪಾಧ್ಯಕ್ಷರಾದ ರಾಮಚಂದ್ರ ಮಿಜಾರ್ ಹೆಚ್.ಪಿ.ಆರ್. ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹರಿಪ್ರಸಾದ್ ರೈ, ಮಂಜುನಾಥ ಭಟ್, ಗಿರೀಶ್ ಬಾಯರಿ ಅತಿಥಿಗಳಾಗಿ ಭಾಗವಹಿಸಿದರು. ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ನಂತರ ಸಂಸ್ಥೆಯ ನೂರ ಐವತ್ತಕ್ಕೂ ಅಧಿಕ ಕಲಾವಿದರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಶಿಲ್ಪಾ ಜೋಶಿಯವರು ಕಾರ್ಯಕ್ರಮ ನಿರೂಪಿಸಿ, ವಿದ್ವಾನ್ ಸುಧೀರ್ ರಾವ್ ಕೊಡವೂರು…
ಬೆಂಗಳೂರು : ವಿಶ್ವಮಾನವ ಸಂಗೀತ ಯಾನ (ರಿ.) ಇದರ ವತಿಯಿಂದ 12ನೇ ವಾರ್ಷಿಕೋತ್ಸವದ ಪ್ರಯುಕ್ತ ‘ವಚನ ಸುಧೆ’ ಎಂ. ಖಾಸೀಮ್ ಮಲ್ಲಿಗೆಮಡುವು ಇವರ ರಂಗಸಂಯೋಜನೆಯ ವಚನಗಳ ಗಾಯನ ಕಾರ್ಯಕ್ರಮವನ್ನು ದಿನಾಂಕ 09 ನವೆಂಬರ್ 2024ರಂದು ಮಧ್ಯಾಹ್ನ 3-00 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಶ್ರಾಂತ ಕುಲಪತಿಗಳಾದ ಶಾಸ್ತ್ರ ಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಇವರ ಅಧ್ಯಕ್ಷತೆಯಲ್ಲಿ ಮಾನ್ಯ ಶಾಸಕರಾದ ಶ್ರೀ ಎಲ್.ಎ. ರವಿಸುಬ್ರಮಣ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿಶ್ವಮಾನವ ಸಂಗೀತ ಯಾನ ಸಂಸ್ಥೆಯ ಸರ್ವ ವಿದ್ಯಾರ್ಥಿ ಬಳಗದವರು ವಚನ ಗಾಯನ ಪ್ರಸ್ತುತ ಪಡಿಸಲಿದ್ದು, ಶ್ರೀ ಶಿವಶಂಕರ್ ತಬಲ, ಶ್ರೀ ರಾಜ ನಾಯಕ್ ಕೀ ಬೋರ್ಡ್ ಮತ್ತು ಶ್ರೀ ಸರವಣ ರಿದಂನಲ್ಲಿ ಸಹಕರಿಸಲಿದ್ದಾರೆ.
ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಮುಕ್ಕದಲ್ಲಿ ದಿನಾಂಕ 05 ನವೆಂಬರ್ 2024ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಅಗರಿ ಸಂಸ್ಮರಣಾ ವೇದಿಕೆ ಅಧ್ಯಕ್ಷರು ಹಾಗೂ ಅಗರಿ ಎಂಟರ್ಪ್ರೈಸಸ್ ಮಾಲೀಕರಾದ ಶ್ರೀ ಅಗರಿ ರಾಘವೇಂದ್ರ ರಾವ್ ಮಾತನಾಡಿ “ಕಲಿಯುವ ಅವಕಾಶ ಇರುವುದು ವಿದ್ಯಾರ್ಥಿಗಳಿಗೆ ಮಾತ್ರ. ಆ ಕಾರ್ಯ ಕಾಲೇಜಿನಲ್ಲಿ ಸಾಧ್ಯ. ಇಂದು ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿರುವುದು ತುಂಬಾ ಸಂತಸವಾಗುತ್ತಿದೆ. ಪುಸ್ತಕಗಳನ್ನು ಓದುವ ಮಕ್ಕಳಲ್ಲಿ ಉತ್ತಮ ಮೌಲ್ಯವನ್ನು ಬೆಳೆಸುವ ಕಾರ್ಯ ಈ ಕಾಲೇಜಿನಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ” ಎಂದು ಶ್ಲಾಘಸಿದರು. ಇನ್ನೊರ್ವ ಅತಿಥಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶ್ರೀ ಶ್ರೀನಾಥ್ ಎಂ.ಪಿ. ಮಾತನಾಡಿ, “ಪ್ರಪಂಚದ ಎಲ್ಲೆಲ್ಲಿ ಕನ್ನಡಿಗರಿದ್ದೆವೋ ಅಲ್ಲೆಲ್ಲಾ ಜಾತ್ರೆಯ ಸ್ವರೂಪದಲ್ಲಿ ನಾವು ರಾಜ್ಯೋತ್ಸವ ಆಚರಿಸುತ್ತೇವೆ. ಮಾತೃ ಭಾಷೆ ಬೇರೆಬೇರೆಯಾಗಿದ್ದರೂ ನಾವೆಲ್ಲರೂ ಕನ್ನಡಿಗರು ಎಂಬ ನಮ್ಮೆಲರಲ್ಲೂ ಇದೆ” ಎಂದು ಸಂತಸ ವ್ಯಕ್ತಪಡಿಸಿದರು. “ಇಂದಿನ ವಿದ್ಯಾರ್ಥಿಗಳು ಮುಂದಿನ ಸಾಹಿತಿಗಳು…
ಧಾರವಾಡ : ಪಂಡಿತ್ ವಸಂತ ಕನಕಾಪುರ್ ಧಾರವಾಡ ಇವರ ಸ್ಮರಣಾರ್ಥ ನಾಡಿನಾದ್ಯಂತ ಇರುವ ಅವರ ಶಿಷ್ಯವೃಂದ ಹಾಗೂ ಅಭಿಮಾನಿ ಬಳಗವು ‘ಸಂಗೀತ ಕಾರ್ಯಕ್ರಮ’ವನ್ನು ದಿನಾಂಕ 17 ನವೆಂಬರ್ 2024ರ ಭಾನುವಾರ ಸಂಜೆ 5-30 ಗಂಟೆಗೆ ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಆಯೋಜಿಸಿದೆ. ಈ ಸಂದರ್ಭದಲ್ಲಿ ವಸಂತ ಕನಕಾಪುರ್ ಇವರ ಪತ್ನಿ, ಗುರುಮಾತೆ ಬನೂತಾಯಿ ಕನಕಾಪುರ್ ಇವರಿಗೆ ಗೌರವಾರ್ಪಣೆ ಸನ್ಮಾನವನ್ನು ಶಿಷ್ಯ ವೃಂದ ನಡೆಸಿಕೊಡಲಿದೆ. ಪಂಡಿತ್ ವಸಂತ ಕನಕಾಪುರ್ ಇವರು ನಾಡು ಕಂಡು ಶ್ರೇಷ್ಠ ಹಾರ್ಮೋನಿಯಂ ಕಲಾವಿದರಾಗಿದ್ದಾರೆ. ದೇಶದ ಸಂಗೀತ ದಿಗ್ಗಜರಿಗೆ ಹಾರ್ಮೋನಿಯಂ ಸಾಥ್ ನೀಡಿದ್ದು ಮಾತ್ರವಲ್ಲದೆ, ಸೋಲೋ ವಾದಕರಾಗಿ ದೇಶ ವಿದೇಶಗಳ ಪ್ರಮುಖ ಸಂಗೀತ ವೇದಿಕೆಗಳಲ್ಲಿ ನುಡಿಸಿದ್ದಾರೆ. ಮಾತ್ರವಲ್ಲದೆ ನಾಡಿನಾದ್ಯಂತ ಶಿಷ್ಯರನ್ನು ಹೊಂದಿದ್ದಾರೆ. ಅಂತಹ ನಾಡಿನಾದ್ಯಂತ ಇರುವ ಶಿಷ್ಯರು ಪಂಡಿತ್ ವಸಂತ ಕನಕಾಪುರ್ ಸ್ಮರಣಾರ್ಥ ಸಂಗೀತ ಕಾರ್ಯಕ್ರಮದ ಮೂಲಕ ಸಂಸ್ಮರಣೆಯನ್ನು ಆಯೋಜಿಸಿದ್ದಾರೆ. ಈ ಸಂಗೀತ ಸಂಜೆಯ ಪ್ರಾರಂಭದಲ್ಲಿ ಬೆಂಗಳೂರಿನ ಖ್ಯಾತ ಗಾಯಕಿ ವಿದುಷಿ ಪೂರ್ಣಿಮಾ ಕುಲಕರ್ಣಿ ಗಾಯನ ಹಾಗೂ ನಮ್ಮ ದೇಶದ…
ಮಂಗಳೂರು : ರಾಜ್ಯೋತ್ಸವ ಆಚರಣಾ ಸಮಿತಿ, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಆಯೋಜಕತ್ವದಲ್ಲಿ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭವು ದಿನಾಂಕ 01 ನವೆಂಬರ್ 2024ರಂದು ಜರಗಿತು. ಖ್ಯಾತ ವೈದ್ಯರು ಹಾಗೂ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಶಾಂತಾರಾಮ ಶೆಟ್ಟಿ ರಾಜ್ಯೋತ್ಸವ ಸಂದೇಶ ನೀಡಿದರು. ಮೇಯರ್ ಮನೋಜ್ ಕುಮಾರ್ ಕನ್ನಡ ಧ್ವಜಾರೋಹಣಗೈಯ್ದರು. ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ದೀಪ ಪ್ರಜ್ವಲನೆಗೈದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಾಟ್ಯಾಲಯ ಉರ್ವ ಇದರ ನಿರ್ದೇಶಕಿ ನಾಟ್ಯ ವಿದುಷಿ ಕಮಲಾ ಭಟ್ ಇವರಿಗೆ ‘ರಾಜ್ಯೋತ್ಸವ ಗೌರವ ಪ್ರಶಸ್ತಿ’ಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಇವರು…