Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು: ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ. ಎಂ. ಶ್ರೀ. ಇವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’ ‘ಕನ್ನಡ ಕಾವ’ ‘ಕನ್ನಡ ಜಾಣ’ ಪರೀಕ್ಷೆಗಳು ಆರಂಭವಾದವು. 1948ರಲ್ಲಿ ‘ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು 1992ರಲ್ಲಿ ‘ಕನ್ನಡ ಪ್ರವೇಶ’ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು ನಿರಂತರವಾಗಿ ನಡೆದು ಕೊಂಡು ಬರುತ್ತಿವೆ. ಕನ್ನಡ ಸಾಹಿತ್ಯ ಪರಿಷತ್ತು 2024-25ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳು 2024ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದೆ. ಅರ್ಜಿಯನ್ನು ಸಲ್ಲಿಸಲು 31 -08-2024 ಕೊನೆಯ ದಿನಾಂಕವಾಗಿದ್ದು, 15-09-2024ರವರೆಗೆ ದಂಡದ ಶುಲ್ಕ ರೂಪಾಯಿ 50.00 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ…
ಬದಿಯಡ್ಕ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಸಹಯೋಗದಲ್ಲಿ ದಿನಾಂಕ 01-07-2024ರಂದು ಕನ್ನಡ ಪತ್ರಿಕಾ ದಿನಾಚರಣೆ ಜರಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಭಾಷಾ ತಜ್ಞ ನಿವೃತ್ತ ಪ್ರಾಂಶುಪಾಲ ಡಾ. ಬೇ.ಸೀ. ಗೋಪಾಲಕೃಷ್ಣ ಭಟ್ ಇವರು ಪತ್ರಿಕಾ ಸಂದೇಶವನ್ನು ನೀಡಿ “ವರದಿಗಾರರು ಆಳವಾದ ಭಾಷಾಜ್ಞಾನವನ್ನು ಹೊಂದಿರಬೇಕು. ಪತ್ರಿಕಾ ವರದಿಯಲ್ಲಿ ಜಾತಿ, ವರ್ಣ, ಪಕ್ಷ ಯಾವುದೂ ಗೊತ್ತಾಗಬಾರದು. ಯಾವುದೇ ಬಣದ ಪತ್ರಿಕೆಯೂ ಆಗಬಾರದು. ಪತ್ರಿಕೆಯನ್ನು ಓದಿದಾಗ ಕನ್ನಡದ ಸಮಗ್ರವಾದ ಚಿತ್ರಣ ಏನು, ಸಂಸ್ಕೃತಿ ಏನು, ಭಾವನೆ ಏನು ಎಂಬುದು ಅರ್ಥವಾಗುವಂತಿರಬೇಕು. ಪತ್ರಿಕೆಯ ಎಲ್ಲಾ ಪುಟಗಳಲ್ಲಿ ಒಂದನ್ನೂ ಬಿಡದೆ ಸಂಪೂರ್ಣವಾಗಿ ಓದಿ ಅರ್ಥಮಾಡಿ ವರದಿಗಳನ್ನು, ಕವನಗಳನ್ನು ಬರೆಯುವ ಅಭ್ಯಾಸವನ್ನು ರೂಢಿಸಿಕೊಂಡು ಅದನ್ನು ಪತ್ರಿಕೆಗಳಲ್ಲಿ ಪ್ರಕಟಿಸಬೇಕು” ಎಂದು ಶಾಲಾ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು. ಕೆ.ಯು.ಡಬ್ಲ್ಯು.ಜೆ. ಕಾಸರಗೋಡು ಜಿಲ್ಲಾ ಅಧ್ಯಕ್ಷ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ…
ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ 9 ಮಂದಿ ಕಲಾವಿದರ ತಂಡ ದಿನಾಂಕ 09-07-2024ರಿಂದ ಅಮೇರಿಕಾದಲ್ಲಿ 75 ದಿನಗಳ ಕಲಾ ಯಕ್ಷಗಾನ ಅಭಿಯಾನ ನಡೆಸಲಿದೆ. “ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೇರಿಕಾ ಪ್ರವಾಸ ಕೈಗೊಳ್ಳುತ್ತಿದೆ. ಇದರ ಆಯೋಜನೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯು.ಎಸ್.ಎ. ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯು.ಎಸ್.ಎ. ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮುಂತಾದ ಪ್ರಮುಖರು ಅಮೇರಿಕಾದ 20 ರಾಜ್ಯಗಳ ಮುಖ್ಯ ನಗರಗಳಲ್ಲಿ ನಮ್ಮ ಯಕ್ಷಗಾನ ತಂಡದ ಕಾರ್ಯಕ್ರಮಗಳನ್ನು ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಲ ಸತೀಶ್ ಶೆಟ್ಟಿ,…
ಪುತ್ತೂರು : ಭರತನಾಟ್ಯದಲ್ಲಿ ಪ್ರಮುಖವಾದ ನೃತ್ಯಬಂಧವಾದ ಪದವರ್ಣಗಳ ಮೂಲ ಆಶಯವನ್ನು ಜಾಗೃತಗೊಳಿಸಲು ಹಾಗೂ ಪದವರ್ಣವನ್ನು ವೀಕ್ಷಿಸಲು ಬೇಕಾಗುವ ತಾಳ್ಮೆಯನ್ನು ಹೆಚ್ಚಿಸಲು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯು ತನ್ನ ಸರಣಿ ಕಾರ್ಯಕ್ರಮ ‘ನೃತ್ಯಾಂತರಂಗ’ದಲ್ಲಿ ಈ ಹೊಸ ಯೋಜನೆಯೊಂದಿಗೆ ‘ವರ್ಣಿಕ’ ಎಂಬ ಶೀರ್ಷಿಕೆಯಡಿ ಎರಡು ಸರಣಿಗಳಲ್ಲಿ ಐದು ಪದವರ್ಣಗಳನ್ನು ಪ್ರಸ್ತುತಪಡಿಸಿತು. ದಿನಾಂಕ 09-06-2024ರಂದು ಪ್ರಸ್ತುತಗೊಂಡ ‘ವರ್ಣಿಕ- 2’ರಲ್ಲಿ ಮೊದಲಿಗೆ ಸಂಸ್ಥೆಯ ವಿದ್ಯಾರ್ಥಿಗಳಾದ ಕ್ಷಮಾ ರೈ, ಸಾನ್ವಿ ಆನಂದ್, ಜೀವಿಕ ಕಜೆ, ಕ್ಷಮಾ ಕೆ., ಅಪೇಕ್ಷಾ, ಧ್ರುವಿ, ಶ್ರಾವಣಿ, ಸಾನ್ವಿ ಡಿ. ಇವರಿಂದ ಪ್ರಾರ್ಥನೆ ನಡೆಯಿತು. ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತೇಜಸ್ವಿ ಅಂಬೆಗಲ್ಲು ನಿರೂಪಣೆ ಮತ್ತು ಗಿರೀಶ್ ಕುಮಾರ್ ಶಂಖನಾದ ಹಾಗೂ ಪ್ರೀತಿಕಲಾ ಓಂಕಾರ ನಾದ ಮಾಡಿದರು. ಅಭ್ಯಾಗತರಾದ ಡಾ. ನಿರೀಕ್ಷಾ ಶೆಟ್ಟಿ ದೀಪ ಬೆಳಗುವ ಮೂಲಕ ಉದ್ಘಾಟನೆಗೈದರು. ಕುಮಾರಿ ಮಾತಂಗಿ ಪಂಚಾಂಗ ಶ್ರವಣ ಮಾಡಿದರು. ಕುಮಾರಿ ನಿನಾದ ಎಂ.ಎನ್. ಕಲಾವಿದರನ್ನು ಹಾಗೂ ಕುಮಾರಿ ಮಂದಿರಾ ಕಜೆ ಅಭ್ಯಾಗತರನ್ನು ಪರಿಚಯಿಸಿದರು. ಮೊದಲ ವರ್ಣ ವಿದುಷಿ ಅಕ್ಷತಾ…
ಬಂಟ್ವಾಳ : ಫರಂಗಿಪೇಟೆ ಅರ್ಕುಳದ ಶ್ರೀ ರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಟ ಫೌಂಡೇಷನ್ ವತಿಯಿಂದ ಉಚಿತ ಯಕ್ಷಗಾನ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿನಾಂಕ 22-06-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಇವರು ಮಾತನಾಡಿ “ಯಕ್ಷಶಿಕ್ಷಣ ತರಗತಿಯಲ್ಲಿ ಏಕಾಗ್ರತೆಯನ್ನು ಸಾಧಿಸಬಹುದು. ಅದು ಮಕ್ಕಳ ಶಿಕ್ಷಣಕ್ಕೂ ಪೂರಕವಾಗಿ ಪರಿಣಮಿಸುತ್ತದೆ” ಎಂದು ಹೇಳಿದರು. ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳಬೀಡು ವಜ್ರನಾಭ ಶೆಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎ.ಕೆ. ಜಯರಾಮ ಶೇಕ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಯಕ್ಷ ತರಗತಿ ಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆಯವರ ಸಾಧನೆ ಗುರುತಿಸಿ ಸನ್ಮಾನಿಸಲಾಯಿತು. ಶಾಲಾ ಸಂಚಾಲಕ ಎ. ಗೋವಿಂದ ಶೆಣೈ, ಯಕ್ಷ ತರಗತಿ ಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ, ರೋಟರಿ ಸದಸ್ಯರಾದ ರಮೇಶ್ ಶೆಟ್ಟಿ ನಡಿಗುತ್ತು, ರಮೇಶ್ ತುಂಬೆ, ಜಯಶೀಲ…
ಮಂಗಳೂರು : ಕೊಲ್ಯ ಸೋಮೇಶ್ವರದ ನಾಟ್ಯನಿಕೇತನದ ನಾಟ್ಯ ಸಭಾಗೃಹದಲ್ಲಿ ಮೋಹನ ಕುಮಾರ್ ಅವರಿಗೆ 90 ತುಂಬಿದ ಸಂಭ್ರಮದ ಪ್ರಯುಕ್ತ ‘ನಾಟ್ಯ ಮೋಹನ ನವತ್ಯುತ್ಸವ’ ನೃತ್ಯ ಸರಣಿ 6ರ ಕಾರ್ಯಕ್ರಮವು ದಿನಾಂಕ 29-06-2024ರಂದು ಪ್ರಸ್ತುತಗೊಂಡಿತು. ಈ ಕಾರ್ಯಕ್ರಮದಲ್ಲಿ ನಾಟ್ಯಾಲಯ ಉರ್ವದ ನಿರ್ದೇಶಕಿ ಕರ್ನಾಟಕ ಕಲಾಶ್ರೀ ಕಮಲ ಭಟ್ ಇವರು ಮಾತನಾಡಿ “ಕಲಾ ತಪಸ್ವಿ ನಾಟ್ಯಾಚಾರ್ಯ ಮೋಹನ್ ಕುಮಾರ್ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೃತ್ಯ ಕಲೆಯನ್ನು ಶ್ರೀಮಂತಗೊಳಿಸಿ, ಇಂದು ಸಾಮಾನ್ಯರು ನೃತ್ಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಳ್ಳುವಂತೆ ಮಾಡಿ ಅಸಂಖ್ಯಾತ ಶಿಷ್ಯ ವರ್ಗವನ್ನು ಮತ್ತು ನೃತ್ಯ ಗುರುಗಳನ್ನು ನೃತ್ಯ ಕ್ಷೇತ್ರಕ್ಕೆ ನೀಡಿದ ಮಹಾನ್ ಕಲಾವಿದರು” ಎಂದು ನುಡಿದರು. ಭರತಾಂಜಲಿಯ ನೃತ್ಯ ಗುರುಗಳಾದ ವಿದ್ವಾನ್ ಶ್ರೀಧರ ಹೊಳ್ಳ ಮತ್ತು ವಿದುಷಿ ಪ್ರತಿಮಾ ಶ್ರೀಧರ್ ನೃತ್ಯ ಕಾರ್ಯಕ್ರಮ ನೀಡಿದರು. ಪ್ರತಿಮಾರವರು ತನ್ನ ಅಮೋಘ ಅಭಿನಯದಿಂದ ವಾಗ್ಗೇಯಕಾರರಾದ ಮೈಸೂರು ವಾಸುದೇವಾಚಾರ್ಯರ ಬ್ರೋಚೆವಾರೆ ವರುರಾ ಕೃತಿಯು ತುಂಬಿದ ಪ್ರೇಕ್ಷಕರ ಮನತಟ್ಟಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗುರುಗಳಾದ ಮೋಹನ್ ಕುಮಾರ್ ಶುಭ ಹಾರೈಸಿ,…
ಕರ್ನಾಟಕದವರಾಗಿ ಅಮೇರಿಕದಲ್ಲಿ ನೆಲೆಸಿರುವ ಶ್ರೀ ಯೋಗೇಶ್ವರ್ ಮತ್ತು ಶ್ರೀಮತಿ ಪ್ರಜ್ಞಾ ಅವರ ಮೂವರು ಮಕ್ಕಳಲ್ಲಿ ಹಿರಿಯವನೇ 15ರ ಹರೆಯದ ಮಾಸ್ಟರ್ ಅಕುಲ್ ಗೊಂಚಿಗಾರ್. ಅಮೇರಿಕಾದಲ್ಲಿ ಹುಟ್ಟಿ ಬೆಳೆದ ಈ ಬಾಲಕನಿಗೆ ತಂದೆ ತಾಯಂದಿರ ಪ್ರಯತ್ನದಿಂದ ಕರ್ನಾಟಕ ಸಂಗೀತದ ಬಗ್ಗೆ ಒಲಮೆ ಹುಟ್ಟಿಕೊಂಡಿತು. ಬಳಿಕ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಅವರ ಸಂಗೀತ ಪಾಠ ಆತನಲ್ಲಿ ಸಂಗೀತದ ಬಗ್ಗೆ ಹೆಚ್ಚು ಆಕರ್ಷಣೆಯನ್ನು ಉಂಟು ಮಾಡಿರಬೇಕು. ಬೆಂಗಳೂರಿನ ಜಯನಗರದ ವಿವೇಕ ಸಭಾಂಗಣದಲ್ಲಿ ಅಕುಲ್ ಬಂಧುಗಳೇ ಹೆಚ್ಚಾಗಿ ಇದ್ದ ಉತ್ತಮ ಸಂಖ್ಯೆಯ ಶ್ರೋತೃಗಳ ಸಮ್ಮುಖದಲ್ಲಿ ದಿನಾಂಕ 29-06- 2024ರಂದು ನಿಗದಿತ ಸಮಯಕ್ಕಿಂತ ಸ್ವಲ್ಪ ತಡವಾಗಿ ಸಂಜೆ ಗಂಟೆ 7-00ಕ್ಕೆ ವಿದ್ವಾನ್ ಕೇಶವ ಮೋಹನ್ ಕುಮಾರ್, ವಿದ್ವಾನ್ ಆನೂರು ವಿನೋದ್ ಶ್ಯಾಮ್ ಮತ್ತು ವಿದ್ವಾನ್ ರಘುನಂದನ್ ಬಿ.ಎಸ್.ರಂತಹ ಅನುಭವೀ ಪಕ್ಕವಾಕ್ಯದೊಂದಿಗೆ ಸಂಗೀತ ಕಚೇರಿ ಪ್ರಾರಂಭವಾಯಿತು. ತೋಡಿ ರಾಗ – ಆದಿತಾಳ ವರ್ಣ, ಖರಹರಪ್ರಿಯ ರಾಗದ ತ್ಯಾಗರಾಜರ ಪಕ್ಕಲ ನಿಲಬಡಿ ಕೃತಿ, ಹಂಸಧ್ವನಿ ರಾಗದ ವಿದ್ವಾನ್ ಸಾಯಿ ನರಸಿಂಹನ್…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ದಿನಾಂಕ 29-06-2024ರಂದು ಬನ್ನೂರು ಭಾರತೀನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಆಶ್ರಯದಲ್ಲಿ ‘ಕರ್ಣಾವಸಾನ’ ಎಂಬ ಪ್ರಸಂಗದ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಯಾಣ ಶಂಕರನಾರಾಯಣ ಭಟ್, ಪರೀಕ್ಷಿತ್ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ (ಪಕಳಕುಂಜ ಶ್ಯಾಮ್ ಭಟ್ ಮತ್ತು ಗುಂಡ್ಯಡ್ಕ ಈಶ್ವರ ಭಟ್), ಅರ್ಜುನ (ಸುಬ್ಬಪ್ಪ ಕೈಕಂಬ ಮತ್ತು ಮಾಂಬಾಡಿ ವೇಣುಗೋಪಾಲ ಭಟ್), ಶ್ರೀ ಕೃಷ್ಣ (ಕು೦ಬ್ಳೆ ಶ್ರೀಧರ್ ರಾವ್ ಮತ್ತು ಭಾಸ್ಕರ್ ಬಾರ್ಯ), ಶಲ್ಯ (ಗುಡ್ಡಪ್ಪ ಬಲ್ಯ), ವೃದ್ಧ ವಿಪ್ರ (ದುಗ್ಗಪ್ಪ ಎನ್.), ಅಶ್ವಸೇನ (ಬಡೆಕ್ಕಿಲ ಚಂದ್ರಶೇಖರ್ ಭಟ್) ಸಹಕರಿಸಿದರು. ಬೋನಂತಾಯ ಶಿವಶಂಕರ ಭಟ್ ಪ್ರಾಯೋಜಿಸಿದ್ದರು.
ತೆಕ್ಕಟ್ಟೆ: : ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ-29’ನೇ ಕಾರ್ಯಕ್ರಮ ದಿನಾಂಕ 29-06-2024ರಂದು ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಲ್ಯಾಣ ಮಂದಿರದ ಮ್ಯಾನೇಜರ್ ದೀಪಕ್ ಇವರನ್ನು ಅಭಿನಂದಿಸಿದ ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್ ಮಾತನಾಡಿ “ಸಾಂಸ್ಕೃತಿಕ ಚಿಂತನೆಯಿಂದ ಸಮಾಜದ ನ್ಯೂನತೆಗಳ ಸಮತೋಲನ ಸಾಧ್ಯ. ಕಲೆಯನ್ನು, ಕಲಾವಿದರನ್ನು, ಕಲಾ ಸಂಸ್ಥೆಗಳನ್ನು ಗೌರವಿಸುವುದು ಸಮಾಜದ ಎಲ್ಲಾ ಗೌರವಾನ್ವಿತರ ಕರ್ತವ್ಯ. ಈ ನಿಟ್ಟಿನಲ್ಲಿ ಯಶಸ್ವೀ ಕಲಾವೃಂದದ 25 ನೇ ಸಂಭ್ರಮಾಚರಣೆಯಲ್ಲಿ ಸಂಸ್ಥೆಗೆ ಹೊಸ ತಲೆಮಾರಿನ ಅರ್ಥದಾರಿಗಳ ಪರಿಶೋಧ, ಅರ್ಥಾಂಕುರಕ್ಕೆ ಅವಕಾಶ ನೀಡಿ, ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದ ಮಾಲಕ ನಿತ್ಯಾನಂದ ಗಾಣಿಗ ಸಾಂಸ್ಕೃತಿಕ ಕಳಕಳಿಯಿಂದ ಸಂಸ್ಥೆಯನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಿರುವುದು ನಿಜಕ್ಕೂ ಶ್ಲಾಘನೀಯ.” ಎಂದು ಅಭಿಪ್ರಾಯಪಟ್ಟರು. ಉದ್ಯಮಿ ಗೋಪಾಲ ಪೂಜಾರಿ ಬಾಳೆಹಿತ್ಲು, ಕಲಾವಿದ ಹರೀಶ್ ಕಾವಡಿ, ಪ್ರಶಾಂತ್ ಆಚಾರ್ ಕೆಳಕಳಿ, ರಾಘವೇಂದ್ರ ಮಣೂರು ಉಪಸ್ಥಿತರಿದ್ದ ಈ ಕಾರ್ಯಕ್ರಮದ ನಿರ್ವಾಹಣೆಯನ್ನು ಹೆರಿಯ ಮಾಸ್ಟರ್ ಮಾಡಿದರು. ಬಳಿಕ ಅರ್ಥಾಂಕುರ-9…
ಮಂಗಳೂರು : ಜರ್ನಿ ಥೇಟರ್ ಮಂಗಳೂರು ಹಾಗೂ ಮಾಂಡ್ ಸೊಭಾಣ್ ಇದರ ಸಹಯೋಗದಲ್ಲಿ ಆಯೋಜಿಸಿದ ಮೂರು ದಿನಗಳ ಬೆಳಕಿನ ವಿನ್ಯಾಸ ಕರ್ಯಾಗಾರ `ಕ್ರಾಸ್ ಫೇಡ್’ ಇದರ ಸಮಾರೋಪ ಸಮಾರಂಭ ದಿನಾಂಕ 27-06-2024ರಂದು ಮಂಗಳೂರಿನ ಶಕ್ತಿನಗರದ ಕಾಲಾಂಗಣ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ತುಳು ರಂಗ ಹಾಗೂ ಸಿನೆಮಾ ನಿರ್ದೇಶಕ ಮತ್ತು ನಟರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ “ಒಂಬತ್ತು ಗಂಟೆಗೆ ನಾಟಕವಾದರೆ ನಮಗೆ ವೇದಿಕೆ ದೊರೆಯುತ್ತಿದ್ದುದು ಎಂಟು ಮುಕ್ಕಾಲಿಗೆ. ಬೇಗ ಶುರು ಮಾಡಿ ಎಂಬ ಒತ್ತಾಯ ಬೇರೆ. ಆಗ ಬೆಳಕಿನ ವಿನ್ಯಾಸದ ಬಗ್ಗೆ ಚಿಂತಿಸಲು ಪುರುಸೊತ್ತಾದರೂ ಎಲ್ಲಿ? ನಮಗೆ ಗೊತ್ತಿದ್ದದ್ದು ಎರಡೇ ಲೈಟು. ಕೋಪ ಬಂದರೆ ಕೆಂಪು, ಮತ್ತೊಂದು ನೀಲಿ. ಏಕೆಂದರೆ ನಮ್ಮ ಕಾಲದ ತುಳು ಕಲಾವಿದರಿಗೆ ಇಂತಹ ರಂಗ ಶಿಕ್ಷಣ ದೊರೆತಿರಲಿಲ್ಲ. ನಾವು ಮೂರು ಗಂಟೆ ಪ್ರೇಕ್ಷಕರನ್ನು ನಗಿಸುವ ಬಗ್ಗೆ, ನೂರಾರು ಪ್ರದರ್ಶನ ಮಾಡುವ ಬಗ್ಗೆ ಹಾಗೂ ಅದರಿಂದ ನಮ್ಮ…