Subscribe to Updates
Get the latest creative news from FooBar about art, design and business.
Author: roovari
ನೃತ್ಯ ತರಗತಿಯಲ್ಲಿಯೇ, ತರಗತಿಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಸೀಮಿತ ಆಮಂತ್ರಿತ ಅಭ್ಯಾಗತರ ಸಮ್ಮುಖದಲ್ಲಿ ಕಳೆದ ಎಂಟು ತಿಂಗಳಿನಿಂದ ನಡೆಯುತ್ತಿದೆ ನಾದನೃತ್ಯ ತಿಂಗಳ ಸರಣಿ ಕಾರ್ಯಕ್ರಮ. ಭರತನಾಟ್ಯದ ಮೂಲಭೂತ ಹೆಜ್ಜೆಗಳನ್ನು ಮತ್ತು ಹತ್ತರಿಂದ – ಹದಿನೈದು ನೃತ್ಯಬಂಧಗಳನ್ನು ಕಲಿತ ಮಂಗಳೂರಿನ ನಾದನೃತ್ಯ ಕಲಾಸಂಸ್ಥೆಯ ವಿದ್ಯಾರ್ಥಿಗಳೇ ಈ ಕಾರ್ಯಕ್ರಮವನ್ನು ನಡೆಸಿ ಕೊಡುತ್ತಾರೆ. 2022-23ನೇ ಸಾಲಿನ ಜೂನಿಯರ್ ಹಾಗೂ ಸೀನಿಯರ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಶುಕೀ ರಾವ್, ಅಂಜಲಿ ಶೋನ್ಶಾ, ಶಿವಾನಿ ಭಟ್, ಹರುಷ ಡಿ. ಎಸ್, ವರ್ಣಿಕಾ ಆಚಾರ್ಯ, ಚೈತನ್ಯ ಆಳ್ವ, ಮಹಾಲಕ್ಷ್ಮೀ ಶೆಣೈ, ಚಿನ್ಮಯೀ ಕೋಟ್ಯಾನ್ ಹಾಗೂ ಮೇಧಾ ರಾವ್ ಈ ಒಂಭತ್ತು ಮಂದಿ ವಿದ್ಯಾರ್ಥಿಗಳು ಸರಣಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿರುತ್ತಾರೆ. ಭರತನಾಟ್ಯವೆಂಬ ನೃತ್ಯ ಪದ್ಧತಿಯನ್ನು ಅರಿತು ಪ್ರದರ್ಶಿಸುವುದರಲ್ಲಿ ಅಗತ್ಯವಿರುವ ಪರಿಪೂರ್ಣ ಕಲಿಕಾ-ವಿಧಾನವನ್ನು ರೂಪಿಸಿಕೊಂಡು ಈ ಸಂಸ್ಥೆ ಮುನ್ನಡೆಯುತ್ತಿದೆ. ಶಾಸ್ತ್ರ ಹಾಗೂ ಪ್ರಯೋಗಗಳ ಸಂಬಂಧವನ್ನು ಬರಿಯ ಪರೀಕ್ಷೆ ಎದುರಿಸಿ ಅಂಕಗಳಿಸುವ ಪ್ರಕ್ರಿಯೆಗಷ್ಟೇ ಸೀಮಿತಗೊಳಿಸದೆ ವಿದ್ಯಾರ್ಥಿಗಳ ಶಾರೀರಿಕ, ಬೌದ್ಧಿಕ, ಸಾಮಾಜಿಕ ಹಾಗೂ ಕಲಾತ್ಮಕ ಬೆಳವಣಿಗೆಗೆ…
ಬೆಂಗಳೂರು : ಖ್ಯಾತ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಇವರು ದಿನಾಂಕ 30-06-2024ರ ಭಾನುವಾರದಂದು ಬೆಂಗಳೂರಿನಲ್ಲಿ ನಿಧನರಾದರು. ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಇವರ ಪುತ್ರಿಯಾದ 46 ವರ್ಷದ ಹಂಸ ಮೊಯ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದು, ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ‘ಶೃಂಗಾರಂ’ನಲ್ಲಿ ನಟಿಸಿದ್ದರು ಮತ್ತು ಅಧ್ಯಾತ್ಮ, ಯೋಗ ಇತ್ಯಾದಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ದಿನಾಂಕ 29-6-2024ರಂದು ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿ “ಗ್ರಾಮ ಮಟ್ಟದ ಸಾಹಿತಿಗಳನ್ನು ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ ಚಟುವಟಿಕೆಗಳನ್ನು ಆಯೋಜನೆ ಮಾಡುವುದರ ಮೂಲಕ ಉತ್ತಮ ಪರಿಣಾಮ ಬೀರಲು ಗ್ರಾಮ ಸಾಹಿತ್ಯ ಸಂಭ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ” ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ವಹಿಸಿದ ಕೊಡಿಪ್ಪಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಕುಮಾರಿ ಶಮಿತ ಮಾತನಾಡಿ “ಇದೊಂದು ಶಾಲಾ ಮಕ್ಕಳಿಗೆ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯಕ್ರಮವಾಗಿದ್ದು, ನಮ್ಮಲ್ಲಿರುವ ಪ್ರತಿಭೆಗೆ ಗ್ರಾಮ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವ…
ಉಡುಪಿ : ಯಕ್ಷಗಾನ ಕಲಾರಂಗದ ನೂತನ ಐ.ವೈ.ಸಿ. ಸಭಾಂಗಣದಲ್ಲಿ ದಿನಾಂಕ 29-06-2024ರಂದು ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನ ಪರಿಚಯಿಸುವ ‘ದೊಡ್ಡ ಸಾಮಗರ ನಾಲ್ಮೊಗ’ ಕೃತಿ ಲೋಕಾರ್ಪಣೆಗೊಂಡಿತು. ಕೃತಿ ಲೋಕಾರ್ಪಣೆಗೊಳಿಸಿ ಅಶೀರ್ವಚನ ನೀಡಿದ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು “ಶಂಕರನಾರಾಯಣ ಸಾಮಗರು ಮಠದೊಂದಿಗೆ ನಿಕಟಸಂಪರ್ಕ ಹೊಂದಿದ್ದರು. ಅವರು ಕಲಾವಿದ, ವಿದ್ವಾಂಸ ಮಾತ್ರವಲ್ಲದೆ ಸಂಸ್ಕಾರದ ಪ್ರತೀಕವಾಗಿದ್ದರು. ಹಿರಿಯ ವ್ಯಕ್ತಿಯ ಸರಳತೆ ಯುವ ಕಲಾವಿದರಿಗೆ ಅದರ್ಶಪ್ರಾಯವಾಗಿದೆ. ಹಿರಿಯ ಕಲಾವಿದರ ಬಗೆಗಿನ ಪುಸ್ತಕಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುಗರಿಗೆ ಲಭಿಸಬೇಕು. ಇದರಿಂದ ಯುವ ಪೀಳಿಗೆಗೆ ಸಾಧಕರ ಪರಿಚಯವಾಗಲು ಸಾಧ್ಯವಿದೆ. ಯಕ್ಷಗಾನದ ಪರಂಪರೆಗೆ ಸೇವೆ ಸಲ್ಲಿಸಿ, ಮಹನೀಯರ ಮಾಹಿತಿ ಪಡೆಯಲು ಸಹಕಾರಿಯಾಗುತ್ತದೆ” ಎಂದು ಹೇಳಿದರು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಶಿ ಶುಭಾಶಂಸನೆಗೈದರು. ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಪುಸ್ತಕ ಪರಿಚಯಿಸಿದರು. ಮಾಜಿ ಸಚಿವ ಪ್ರಮೋದ್…
ಮಂಗಳೂರು : ಪಣಂಬೂರಿನ ಪಿ.ವಿ. ಐತಾಳ ಇವರ ಇಂಗ್ಲೀಷ್ ಯಕ್ಷಗಾನ ಬಳಗ ‘ಯಕ್ಷನಂದನ’ ಇದರ 43ನೇ ವರ್ಷಾಚರಣೆಯ ಪ್ರಯುಕ್ತ ಇಂಗ್ಲೀಷ್ ಯಕ್ಷಗಾನ ಪ್ರದರ್ಶನವು ದಿನಾಂಕ 02-07-2024ರಂದು ಸಂಜೆ ಗಂಟೆ 5-30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಯಕ್ಷಗಾನ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಇವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸುರತ್ಕಲ್ ಎನ್ಐಟಿಕೆ ಸ್ಪೂಡೆಂಟ್ ವೆಲ್ ಫೇರ್ ಡೀನ್ ಪ್ರೊ. ಎ. ಚಿತ್ತರಂಜನ್ ಹೆಗ್ಡೆ ಅಧ್ಯಕ್ಷತೆ ವಹಿಸುವರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾದೇಶಿಕ ಮುಖ್ಯಸ್ಥೆ ಶ್ರೀ ರಾಜಮಣಿ ಎ. ಇವರು ಅತಿಥಿಯಾಗಿ ಭಾಗವಹಿಸುವರು. ಪಿ.ವಿ. ಐತಾಳ ಅವರ ಸ್ಮರಣಾರ್ಥ ಶ್ರೀ ಪಿ.ವಿ. ಐತಾಳ ಮೆಮೋರಿಯಲ್ ವೆಂಕಟರತ್ನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುವ ವಿದ್ಯಾನಿಧಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಹಾಗೂ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಅನಘ ಐತಾಳ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಪಿ. ಸಂತೋಷ್ ಐತಾಳ ವಿರಚಿತ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ಜಂಟಿ ವಾರ್ಷಿಕೋತ್ಸವವು ಮುಂದಿನ ಡಿಸೆಂಬರ್ ತಿಂಗಳಲ್ಲಿ ‘ಆಂಜನೇಯ 56’ ಮತ್ತು ಮಹಿಳಾ ಯಕ್ಷಗಾನ ಸಂಘದ ‘ವಿಂಶತಿ’ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯು ಸಂಘದ ಅಧ್ಯಕ್ಷ ಶ್ರೀ ಭಾಸ್ಕರ ಬಾರ್ಯ ಇವರ ಪರ್ಲಡ್ಕ ಮನೆಯ ‘ಅಗಸ್ತ್ಯ’ ಸಭಾಭವನದಲ್ಲಿ ದಿನಾಂಕ 28-06-2024ರಂದು ನಡೆಯಿತು. ಸಭೆಯಲ್ಲಿ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಇಪ್ಪತ್ತು ಮನೆ ಮನೆ ತಾಳಮದ್ದಳೆಗಳು ಹಾಗೂ ಪಾಂಚಜನ್ಯ ಆಕಾಶವಾಣಿಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಶ್ರೀ ಶ್ರೀಧರ ರಾವ್ ಕುಂಬ್ಳೆ ಇವರು ನಿರ್ವಹಿಸಿದ ಪ್ರಮುಖ ಸ್ತ್ರೀ ಪಾತ್ರ ಹಾಗೂ ಪುರುಷ ಪಾತ್ರಗಳ ‘ಯುಗಳ ಸ೦ವಾದ’ ಕಾರ್ಯಕ್ರಮಗಳನ್ನು ನೀಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ವಿಶೇಷವಾಗಿ ಖ್ಯಾತ ಮಹಿಳಾ ಕಲಾವಿದೆಯೊಬ್ಬರನ್ನು ಸನ್ಮಾನಿಸುವುದೆಂದು ನಿರ್ಧರಿಸಲಾಯಿತು. ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಕಾರ್ಯದರ್ಶಿ ಆನಂದ್ ಸವಣೂರು, ಕೋಶಾಧಿಕಾರಿ ದುಗ್ಗಪ್ಪ ನಡುಗಲ್ಲು…
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2022ನೇ ಸಾಲಿನಲ್ಲಿ (ದಿನಾಂಕ 01-01-2022ರಿಂದ 31-12-2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ 01-01-2023ರಿಂದ 31-12-2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು ಹಾಗೂ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿಗೆ ದಿನಾಂಕ 20-07-2024ರ ಒಳಗಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಸುಳ್ಯ : ಸುಳ್ಯದ ರಂಗ ಮಯೂರಿ ಕಲಾಶಾಲೆಯ ವತಿಯಿಂದ ‘ಯಕ್ಷಗಾನದ ಒಂದು ಅವಲೋಕನ’ ಯಕ್ಷಗಾನ ಗೋಷ್ಠಿ ಮತ್ತು ತಾಳಮದ್ದಳೆ ಕಾರ್ಯಕ್ರಮವನ್ನು ದಿನಾಂಕ 06-07-2024ರಂದು ಅಪರಾಹ್ನ 2-00 ಗಂಟೆಗೆ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗ ಮಯೂರಿ ಕಲಾಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಯಕ್ಷಗಾನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳು ಮತ್ತು ಯಕ್ಷಗಾನ ಕಲಾವಿದರಾದ ಡಾ. ಪ್ರಭಾಕರ ಶಿಶಿಲ ವಹಿಸಿ, ‘ಯಕ್ಷಗಾನದ ಬೆಳವಣಿಗೆಯಲ್ಲಿ ಸಹಭಾಗಿತ್ವ’ ಎಂಬ ವಿಷಯದಲ್ಲಿ ವಿಚಾರ ಮಂಡಿಸಲಿದ್ದಾರೆ. ‘ಯಕ್ಷಗಾನವನ್ನು ತಲೆಮಾರಿಗೆ ವರ್ಗಾಯಿಸುವ ಸಾಧ್ಯತೆಗಳು’ ಎಂಬ ವಿಚಾರದ ಬಗ್ಗೆ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ವಿಚಾರ ಮಂಡಿಸಲಿದ್ದಾರೆ. ‘ಯಕ್ಷಗಾನ ಸಂಘಟನೆಯ ಸವಾಲುಗಳು ಮತ್ತು ಪರಿವಾರ’ ಎಂಬ ವಿಷಯದ ಬಗ್ಗೆ ಯಕ್ಷಗಾನ ಕಲಾವಿದರು ಹಾಗೂ ಸಂಘಟಕರಾದ ಶ್ರೀ ನಾರಾಯಣ ದೇಲಂಪಾಡಿ ವಿಚಾರ ಮಂಡಿಸಲಿದ್ದಾರೆ. ಕವಿ ಮೂಲಿಕೆ ರಾಮಕೃಷ್ಣಯ್ಯ ವಿರಚಿತ ‘ಭಕ್ತ ಸುಧನ್ವ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆಯನ್ನು ಖ್ಯಾತ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಶ್ರೀ ಸುಬ್ರಾಯ ಸಂಪಾಜೆ, ಚೆಂಡೆ ವಾದಕರಾಗಿ ಶ್ರೀ…
‘ಶಂಕಣ್ಣ ಭಟ್ಟರಿಗೆ ವಹಿವಾಟು ನೂರು/ಮನೆಯಿಂದ ಹೊರಟರೆ ಭಾರೀ ಕಾರ್ಬಾರು/ ಮಾತಿಗೆ ನಿಂತರೆ ಹೋದೀತು ಬೇಜಾರು/ ಮನೆಯಲ್ಲಿ ನೋಡಿದರೆ ಹೆಂಡತಿಯೇ ಜೋರು’, ಎಂದು ಹಾಸ್ಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ಟರು ವೇದಿಕೆಯೇರಿ ಹೇಳುವಾಗ ಇಡೀ ಸಭೆಯೇ ನಗೆಗಡಲಲ್ಲಿ ತೇಲುತ್ತದೆ. ಕರತಾಡನ ಮೇರೆ ಮೀರುತ್ತದೆ. ಕೇವಲ ಹಾಸ್ಯಕ್ಕೆ ಸೀಮಿತವಾಗದೆ ಚುಟುಕು ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಅನೇಕ ರಚನೆಗಳೂ ಅವರ ಬತ್ತಳಿಕೆಯಲ್ಲಿದ್ದವು. ತಮ್ಮ ಪಾಡಿಗೆ ಸದ್ದಿಲ್ಲದೆ, ಇಳಿವಯಸ್ಸಿನಲ್ಲೂ ಮಕ್ಕಳ ಸಾಹಿತ್ಯ ಹಾಗೂ ಹಾಸ್ಯ ಸಾಹಿತ್ಯದ ಮೂಲಕ, ಅನಾರೋಗ್ಯವನ್ನೂ ಲೆಕ್ಕಿಸದೆ ಕ್ರಿಯಾಶೀಲರಾಗಿದ್ದ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ಟರು ನಮ್ಮೆಲ್ಲರನ್ನೂ ನಗಿಸುತ್ತಲೇ ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ 21-06-2024ರಂದು ತಮ್ಮ ಸಾರ್ಥಕ ಬದುಕಿಗೆ ವಿದಾಯ ಹೇಳಿದರು. ಇದು ಅವರ ಆದರ್ಶದ ಬದುಕಿಗೊಂದು ಗೌರವದ ನುಡಿನಮನ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ಗ್ರಾಮ ಪಂಚಾಯಿತಿನ ಕೊಟ್ಯಾಡಿ ಸಮೀಪದ ಕಕ್ಕೆಪ್ಪಾಡಿಯ ಶಂಕರನಾರಾಯಣ ಭಟ್ಟರು ಸಣ್ಣ ಪ್ರಮಾಣದ ಕೃಷಿಕರು, ಖ್ಯಾತ ಪಶು ನಾಟಿವೈದ್ಯರು, ಯಕ್ಷಗಾನ ಕಲಾವಿದರು, ಜನಮನ ಗೆದ್ದ ಹಾಸ್ಯ ಸಾಹಿತಿಯಾಗಿದ್ದವರು.…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 01-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀಮತಿ ಅನ್ನಪೂರ್ಣ ರಿತೇಶ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅನ್ನಪೂರ್ಣ ರಿತೇಶ್ ಇವರು ಶ್ರೀ ಚಂದ್ರಶೇಖರ ಶೆಟ್ಟಿ ಮತ್ತು ಶ್ರೀಮತಿ ಮಾಲತಿ ಶೆಟ್ಟಿ ದಂಪತಿಗಳ ಸುಪುತ್ರಿ. ಕೊಟ್ಟಾರದ ಭರತಾಂಜಲಿ ಸಂಸ್ಥೆಯ ಗುರುದಂಪತಿಗಳಾದ ವಿದುಷಿ ಪ್ರತಿಮಾ ಶ್ರೀಧರ್ ಹಾಗೂ ಶ್ರೀಧರ್ ಹೊಳ್ಳ ಭರತನಾಟ್ಯದ ಅಭ್ಯಾಸವನ್ನು ಪ್ರಾರಂಭಿಸಿದರು. ಮುಲ್ಕಿಯ ವಿಜಯ ಕಾಲೇಜಿನಲ್ಲಿ ಬಿ.ಬಿ.ಎಂ. ಪದವಿ ಮತ್ತು ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯನ್ನು ಪೂರೈಸಿ, ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಭರತನಾಟ್ಯದ ಎಂ.ಎ. ಪದವಿಯನ್ನು ಪ್ರಥಮ ಶ್ರೇಣಿಯೊಂದಿಗೆ ಪಡೆದಿರುವ ಇವರು ಕರ್ನಾಟಕ ಸಂಗೀತ ಅಕಾಡೆಮಿಯು ಕೊಡುವಂತಹ ಶಿಷ್ಯ ವೇತನವನ್ನು ಪಡೆದಿರುತ್ತಾರೆ. ಶಿವಪ್ರಣಾಮ್ ನೃತ್ಯ ಶಾಲೆ…