Author: roovari

ತೆಕ್ಕಟ್ಟೆ : ಶ್ರೀ ಸಿದ್ಧಿವಿನಾಯಕ ಕ್ಯಾಶೂ ಇಂಡಸ್ಟ್ರೀಸ್ ಕೆದೂರು ಪ್ರಾಯೋಜನೆಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಯೋಜನೆಯಲ್ಲಿ ದಿನಾಂಕ 10 ಆಗಸ್ಟ್ 2024ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಕುಂದಗನ್ನಡ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಕುಂದಗನ್ನಡದ ಹಿರಿಯ ಸಾಹಿತಿ, ವಕೀಲ ಎ.ಎಸ್.ಎನ್. ಹೆಬ್ಬಾರ್ “ಕುಂದಗನ್ನಡದ ಸೊಗಡನ್ನು ದೇಶ ವಿದೇಶಗಳೂ ಕೊಂಡಾಡಿದೆ. ಸೆಕಿ ಗೆಮಿತ್, ಎದಿ ಹೊಯಿಲ್, ಹಾಸತ್ ಹೊದಿತ್ ಹೀಗೆ ಕುಂದಗನ್ನಡ ಸಹಸ್ರ ಸಹಸ್ರ ಶಬ್ದವು ಕುಂದಗನ್ನಡದಲ್ಲಿ ಹಾಸಿ ಹೋಗಿದೆ. ಆಷಾಡದಲ್ಲಿ ಕುಂದಾಪುರ ಕನ್ನಡ ದಿನವನ್ನಾಗಿ ನಿಗದಿಸಿ, ದೇಶ ವಿದೇಶದಲ್ಲಿ ಆಚರಿಸುವ ಹಾಗೆ ಸಂಘಟಕರನ್ನು ಹುರಿದುಂಬಿಸಿದವರು ವಸಂತ ಗಿಳಿಯಾರ್. ಇದಕ್ಕೆ ಕುಂದಗನ್ನಡ ಸಾಹಿತ್ಯವನ್ನು ಯಕ್ಷಗಾನದಲ್ಲಿ ಛಂದೋಬದ್ಧವಾಗಿ ಯಕ್ಷಗಾನ ಪ್ರಸಂಗವನ್ನು ರಚಿಸುವುದು ಸಾಧಾರಣ ವಿಷಯವಲ್ಲ. ಪ್ರಸಾದ್ ಮೊಗೆಬೆಟ್ಟು ಈ ಪ್ರಸಂಗವನ್ನು ರಚಿಸಿ ಕುಂದಗನ್ನಡದ ಜೊತೆಗೆ ಬೆರೆತು ಹೋದರು. ಅವರನ್ನು ಎಂದೂ ಕುಂದಗನ್ನಡದ ಅಭಿಮಾನಿಗಳು ಮರೆಯಲಾರರು” ಎಂದು ಹೇಳಿದರು. ಮುಖ್ಯ ಅತಿಥಿ ಜನ ಸೇವಾ ಟ್ರಸ್ಟಿನ ವಸಂತ್…

Read More

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆ ಕಾರ್ಯಕ್ರಮವು 12 ಆಗಸ್ಟ್ 2024ರ ಸೋಮವಾರದಂದು ಉಡುಪಿಯ ಅಜ್ಜರಕಾಡಿನ  ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಂಥಾಲಯ ಅಧಿಕಾರಿ ನಳಿನಿ ಜಿ. ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ. ಸಾ. ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಜಿಲ್ಲಾ ಕ. ಸಾ. ಪ. ಸಹಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ ಸದಸ್ಯರಾದ ವಸಂತ್, ಮನೆಯೇ ಗ್ರಂಥಾಲಯದ ಸಂಚಾಲಕರಾದ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಇತರರು ಉಪಸ್ಥಿತರಿದ್ದರು.

Read More

ಮೈಸೂರು : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು, ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇದರ ಸಹಯೋಗದಲ್ಲಿ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ದಿನಾಂಕ 14 ಆಗಸ್ಟ್ 2024ರಂದು ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಜಿಲ್ಲಾಪತ್ರಕರ್ತರ ಭವನದಲ್ಲಿ ನಡೆಯಲಿದೆ. 2023ನೇ ಸಾಲಿನ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಯನ್ನು ಪುರಾತತ್ತ್ವ ಶಾಸ್ತ್ರಜ್ಞ ಪ್ರೊ. ಎ.ವಿ. ನರಸಿಂಹಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ ವಹಿಸಲಿದ್ದು, ಹಿರಿಯ ಲೇಖಕರು ಹಾಗೂ ವಿಮರ್ಶಕರಾದ ಶ್ರೀ ಬೆಳಗೋಡು ರಮೇಶ್ ಭಟ್ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿರುವರು. ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡೀಕೆರೆ ಗೋಪಾಲ್ ಮತ್ತು…

Read More

ಪೂರ್ಣ ಸಂಸ್ಕೃತಿ ಆಚಾರ ವಿಚಾರಗಳು ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಇಂದಿಗೂ ತಮ್ಮ ಪೂರ್ವಿಕರು ಆಚರಿಸಿಕೊಂಡು ಬಂದಂತಹ ಸಂಪ್ರದಾಯವನ್ನು ಜತನದಿಂದ ಕಾಪಿಟ್ಟು ಮುಂದುವರೆಸಿಕೊಂಡು ಹೋಗುತ್ತಿರುವುದಕ್ಕೆ ಕೊಡಗಿನ ಮೂಲನಿವಾಸಿ ಜನಾಂಗಗಳಲ್ಲಿ ಒಂದಾದ ನರಿಯಂದಡ ಗ್ರಾಮದಲ್ಲಿರುವ ಅರಮನೆಪಾಲೆ ಜನಾಂಗದವರು ಆಚರಿಸಿಕೊಂಡು ಬರುತ್ತಿರುವ ‘ಆಟಿ ಕಳಂಜ’ (ಕಕ್ಕತಜ್ಜಿ) ಆಚರಣೆಯೇ ಸಾಕ್ಷಿಯಾಗಿದೆ. ಮುಂಗಾರಿನ ಮಳೆಯ ಆಷಾಢ ತಿಂಗಳಿನಲ್ಲಿ ಕೊಡಗಿನಲ್ಲಿ ಆಟಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಆಟಿ (ಕಕ್ಕಡ) 18. ಮುಗಿದ ಬಳಿಕ ಆಚರಿಸುವ ಒಂದು ವೈಶಿಷ್ಟ್ಯಪೂರ್ಣ ಆಚರಣೆಯೇ ‘ಆಟಿ ಕಳಂಜ’ ಇದು ಕೊಡಗಿನ ಮೂಲ ನಿವಾಸಿ ಜನಾಂಗಗಳಲ್ಲಿ ಒಂದಾಗಿರುವ ಅರಮನೆ ಪಾಲೆ ಜನಾಂಗದವರು ಮಾತ್ರ ಆಚರಿಸಿಕೊಂಡು ಬರುತ್ತಿರುವುದು ಹಾಗೂ ಜಿಲ್ಲೆಯಲ್ಲಿ ಏಕೈಕ ಆಚರಣೆಯಾಗಿರುವುದು ವಿಶೇಷ! ಆಟಿ 18. ಆಚರಣೆ ಕಳೆದ ಬಳಿಕ ಆಟಿ ಕಳಂಜ ಎನ್ನುವ ವಿಶಿಷ್ಟ ಆಚರಣೆ ಪಾಲಿಸುತ್ತಾರೆ. ಲಯಬದ್ದ ವಾದ್ಯದ ಶಬ್ದಕ್ಕೆ ಪ್ರಾಸಬದ್ಧವಾಗಿ ಹಾಡು ಹೇಳುತ್ತಾ ಸಾಗುವ ತಂಡದಲ್ಲಿ ಅಜ್ಜಿ ವಿಶಿಷ್ಟ ವೇಷಭೂಷಣಗಳೊಂದಿಗೆ ನೆಕ್ಕಿ (ಗಾಳಿ) ಸೊಪ್ಪು ಎಂದು ಕರೆಯಲಾಗುವ ಒಂದು ಬಗೆಯ ಸೊಪ್ಪಿನ…

Read More

ಮಂಜೇಶ್ವರ : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಶಂಪಾ ಪ್ರತಿಷ್ಠಾನ ಬೆಂಗಳೂರು, ವಿಕಾಸ ಮೀಯಪದವು ಇವರ ಸಂಯುಕ್ತಾಶ್ರಯದಲ್ಲಿ ಮೀಯಪದವು ಶ್ರೀ ವಿದ್ಯಾವರ್ಧಕ ಪ್ರೌಢ ಶಾಲೆಯ ನಾರಾಯಣೀಯಂ ರಂಗಮಂದಿರದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ಡಾ. ನಾ. ಮೊಗಸಾಲೆ ಪೌರಾಭಿನಂದನೆ ಹಾಗೂ ಸಾಹಿತ್ಯ ಸಮೀಕ್ಷೆ’ ಕಾರ್ಯಕ್ರಮವನ್ನು ದಿನಾಂಕ 10-08-2024ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ವಿಠಲ ಶೆಟ್ಟಿ ಬೇಲಾಡಿ ಇವರು ಮಾತನಾಡಿ “ಕಾಸರಗೋಡಿನ ಕೋಳ್ಯೂರಿನಲ್ಲಿ ಜನಿಸಿ ಕುಗ್ರಾಮದಂತಿದ್ದ ಕಾಂತಾವರದಲ್ಲಿ ನೆಲಸಿ, ಕಾಂತಾವರ ಕನ್ನಡ ಸಂಘ, ಅಲ್ಲಮ ಪ್ರಭು ಪೀಠ ಸ್ಥಾಪಿಸಿ, ಆರು ದಶಕಗಳ ಕಾಲ ವೈದ್ಯಕೀಯ, ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ಅಮೋಘ ಸೇವೆ ಸಲ್ಲಿಸಿ ಕಾಂತಾವರದ ಕೀರ್ತಿಯನ್ನು ಕನ್ನಡ ನಾಡಿನಾದ್ಯಂತ ಪಸರಿಸಿದವರು ಡಾ. ನಾ. ಮೊಗಸಾಲೆ. 25 ಕಾದಂಬರಿಗಳು, 15 ಕವನಸಂಕಲನಗಳು, 6 ಕಥಾಸಂಕಲನಗಳು ಸೇರಿದಂತೆ ಐವತ್ತಕ್ಕೂ ಅಧಿಕ ಮಹತ್ವಪೂರ್ಣ…

Read More

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಗಳವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದಿನಾಂಕ 14 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ದೂರದರ್ಶನ ಕಲಾವಿದೆ ವಿದುಷಿ ಅಯನಾ ಪೆರ್ಲ ಇವರ ಶಾಸ್ತ್ರೀಯ ಭರತನಾಟ್ಯ ಕಾರ್ಯಕ್ರಮವನ್ನು ಎಡನೀರು ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ದೆಹಲಿ, ಚೆನ್ನೈ, ಕೊಲ್ಕೊತ್ತಾ, ಹೈದರಾಬಾದ್, ಬೆಂಗಳೂರು ಮುಂತಾದೆಡೆಗಳಲ್ಲಿ ಹಲವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ವಿದುಷಿ ಅಯನಾ ಪೆರ್ಲ ಸ್ವತಃ ನೃತ್ಯ ಸಂಯೋಜಕಿಯೂ ಆಗಿದ್ದಾರೆ.

Read More

ಮಂಗಳೂರು : ಅಮೆರಿಕಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ದಿನಾಂಕ 30 ಆಗಸ್ಟ್ 2024, 31 ಆಗಸ್ಟ್ 2024 ಮತ್ತು 1 ಸೆಪ್ಟೆಂಬರ್ 2024ರಂದು 12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ. ರಿಚ್ಮಂಡ್ ಕನ್ನಡ ಸಂಘ ಮತ್ತು ವಾಷಿಂಗ್ಟನ್ ಡಿಸಿ ಪ್ರದೇಶದ ಕಾವೇರಿ ಕನ್ನಡ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ‘ಥಟ್ ಅಂತ ಹೇಳಿ!’ ರಸಪ್ರಶ್ನೆ ಕಾರ್ಯಕ್ರಮ ಪ್ರಮುಖ ಆಕರ್ಷಣೆಯಾಗಲಿದೆ. ದೂರದರ್ಶನ ಚಂದನ ವಾಹಿನಿಯಲ್ಲಿ ನಿರಂತರ ಪ್ರಸಾರವಾಗುತ್ತ ದಾಖಲೆ ನಿರ್ಮಿಸಿರುವ ಅತ್ಯಂತ ಜನಪ್ರಿಯ ಕಾರ್ಯಕ್ರಮದ ನಿರ್ವಾಹಕ ಡಾ. ನಾ. ಸೋಮೇಶ್ವರ ಅವರನ್ನು ಅಕ್ಕ ಸಮ್ಮೇಳನದ ವಿಶೇಷ ಅತಿಥಿಯಾಗಿ ಆಹ್ವಾನಿಸಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಡಾ. ನಾ. ಸೋಮೇಶ್ವರ ಇವರಿಂದ ಆಶಯ ಭಾಷಣ ಇರಲಿದೆ. ಸಮ್ಮೇಳನಾರ್ಥಿಗಳಿಗಾಗಿ ‘ಥಟ್ ಅಂತ ಹೇಳಿ !’ ಕ್ವಿಜ್‌ನ ಪ್ರವೇಶದ ಸುತ್ತು ಸಮ್ಮೇಳನ ನಡೆಯುವ ಸ್ಥಳದಲ್ಲೇ ಲಿಖಿತ ಪರೀಕ್ಷೆಯ ಮೂಲಕ ನಡೆಯುತ್ತದೆ. ಅದರಲ್ಲಿ ಆಯ್ಕೆಯಾಗಿ ಬರುವ ಎಂಟು ಮಂದಿಯನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ, ಟಿವಿಯಲ್ಲಿ…

Read More

ಕೋಟೇಶ್ವರ : ಶ್ರೀ ರಾಮ ಸೇವಾ ಸಂಘ ಇವರ ಸಹಕಾರದೊಂದಿಗೆ ‘ರಾಮಾಂಜನೇಯ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆಯು ದಿನಾಂಕ 18 ಆಗಸ್ಟ್ 2024ರಂದು ಮಧ್ಯಾಹ್ನ ಗಂಟೆ 2-30ರಿಂದ ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ದ್ವಂದ್ವ ಭಾಗವತಿಕೆಯಲ್ಲಿ ಶ್ರೀ ಪ್ರಸನ್ನ ಭಟ್ ಬಾಳ್ಕಲ್ ಮತ್ತು ಶ್ರೀ ಲಂಬೋದರ ಹೆಗಡೆ, ಮದ್ದಳೆಯಲ್ಲಿ ಶ್ರೀ ಶಶಾಂಕ ಆಚಾರ್ ಹಾಗೂ ಚೆಂಡೆಯಲ್ಲಿ ಶ್ರೀ ಸಚಿನ್ ಆಚಾರ್ ಕುಂಭಾಶಿ ಮತ್ತು ಮುಮ್ಮೇಳದಲ್ಲಿ ವಿದ್ಯಾವಾಚಸ್ಪತಿ ಉಮಾಕಾಂತ್ ಭಟ್ ಶಿರಸಿ, ವಿದ್ವಾನ್ ಗಣಪತಿ ಭಟ್ ಸಂಕದಗುಂಡಿ, ಪ್ರೊ. ಪವನ್ ಕಿರಣಕೆರೆ ಹಾಗೂ ಶ್ರೀ ಸುನೀಲ್ ಹೊಲಾಡು ಇವರುಗಳು ಸಹಕರಿಸಲಿರುವರು.

Read More

ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಅಧ್ಯಾಯ ಮತ್ತು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದೊಂದಿಗೆ ‘ಕರ್ನಾಟಕದ ಸಂಗೀತ ಪರಂಪರೆ’ ಸರಣಿಯಲ್ಲಿ 6ನೇ ‘ಬೈಠಕ್’, ದಿನಾಂಕ 10 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ನಗರದ ಬಲ್ಲಾಲ್‌ ಬಾಗ್‌ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಆಯೋಜಿಸಲಾಯಿತು. ಈ ಪಾರಂಪರಿಕ ಮನೆಯ ನಿಕಟ ಸೆಟ್ಟಿಂಗ್ ಶಾಸ್ತ್ರೀಯ ಸಂಗೀತದ ಅನುಭವಕ್ಕಾಗಿ ಪರಿಪೂರ್ಣ ವಾತಾವರಣವನ್ನು ಒದಗಿಸಿತು. ‘ಸಂಗೀತ ಸಂಜೆ’ ಹಿಂದೂಸ್ತಾನಿ ಶಾಸ್ತ್ರೀಯ ಕೊಳಲು ಕಲಾವಿದ ಕಿರಣ್ ಚಂದ್ರಶೇಖರ ಹೆಗಡೆ ಅವರ ನೇತೃತ್ವದಲ್ಲಿ ನಡೆಯಿತು. ತಬಲಾದಲ್ಲಿ ಭರವಿ ದೇರಾಜೆ ಮತ್ತು ತಾನ್ಪುರಾದಲ್ಲಿ ನಿಹಾರಿಕಾ ದೇರಾಜೆ ಸಹಕಲಾವಿದರಾಗಿ ಸಹಕರಿಸಿದರು. ಬೈಠಕ್ ವಿಲಂಬಿತ್ ಏಕತಾಲ್‌ನಲ್ಲಿ ಸಂಯೋಜನೆಗಳನ್ನೊಳಗೊಂಡ ಮಧುರವಾದ ರಾಗ್ ಯಮನ್ ನೊಂದಿಗೆ ಪ್ರಾರಂಭವಾಯಿತು. ನಂತರ ಮಧ್ಯಾಲಯ ಏಕತಾಲ್ ಮತ್ತು ದ್ರುತ್ ತೀನ್‌ತಾಲ್‌ನಲ್ಲಿ ಅಂತ್ಯಗೊಂಡಿತು. ಇದರ ನಂತರ ರಾಗ್ ಸುರ್ ಮಲ್ಹಾರ್ ನ ನಿರೂಪಣೆ ನಡೆಯಿತು. ಪ್ರೇಕ್ಷಕರ ಕೋರಿಕೆಯ ಮೇರೆಗೆ, ಕಲಾವಿದರು…

Read More

ಉಡುಪಿ : ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ದಿನಾಂಕ 10 ಆಗಸ್ಟ್ 2024ರಂದು ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರ್ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ಹರೀಶ್ಚಂದ್ರ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಮನೋಹರ್ ಶೆಟ್ಟಿ ತೊನ್ಸೆ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಹೆಚ್.ಪಿ. ಆಯ್ಕೆಗೊಂಡರು. ಸಂಸ್ಥೆಯ ಮಹಾಪೋಷಕರಾಗಿ ಸಿ.ಎಸ್.…

Read More