Subscribe to Updates
Get the latest creative news from FooBar about art, design and business.
Author: roovari
ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ವೈಯುಕ್ತ “ನಿರಂಜನ ಬದುಕು – ಬರಹ ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ದಿನಾಂಕ 25 ಸೆಪ್ಟೆಂಬರ್ 2025 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಪ್ರಭು ಅವರು ಉದ್ಘಾಟಿಸಿ ನಾಹಿತ್ಯ ಕ್ಷೇತ್ರದ ಮೂಲಕ ಸುಳ್ಯವನ್ನು ಜಗತ್ತಿಗೆ ಪರಿಚಯಿಸಿದನ್ನು ಅವರ ಮನೆಯವರಿಗೂ ನಿರಂಜನರಿಗೂ ಇದ್ದ ನಂಟನ್ನು ನೆನಪಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ. ಮಾತನಾಡಿ “ಸಾಹಿತ್ಯ ದಿಗ್ಗಜ ನಿರಂಜನರು ಸುಳ್ಯದವರು ಎನ್ನುವುದು ಸುಳ್ಯದ ಹೆಮ್ಮೆ” ಎಂದು ಕೊಂಡಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರಾದ ಅಶೋಕ ಕುಮಾರ್ ಮೂಲೆಮಜಲು ಅವರು ನಿರಂಜನರ ಬದುಕು-ಬರಹ : ನೆನವು ವಿಷಯದ ಕುರಿತು ಮಾತನಾಡಿ “ಸಮಾಜದ ಕಟು…
ಬೆಂಗಳೂರು : ವಿಜಯನಗರ ಬಿಂಬದ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ 13ನೇ ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಂದ ಅಭ್ಯಾಸ ಮಾಲಿಕೆ -2ರಲ್ಲಿ ಖ್ಯಾತ ಬರಹಗಾರ್ತಿ ಶ್ರೀಮತಿ ವೈದೇಹಿ ಬರೆದ ‘ಶಕುಂತಲೆ’ ನಾಟಕ ಪ್ರದರ್ಶನವನ್ನು ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 4-00 ಹಾಗೂ 7-00 ಗಂಟೆಗೆ ಬೆಂಗಳೂರಿನ ವಿಜಯನಗರ ಬಿಂಬದ ಸರಳಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ಸುಷ್ಮಾ ಎಸ್.ವಿ. ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9845734967, 9844017881, 9845265967 ಮತ್ತು 9844152967 ಸಂಖ್ಯೆಯನ್ನು ಸಂಪರ್ಕಿಸಿರಿ.
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ನಾಲ್ಕನೆಯ ವರ್ಷದ ‘ಯಕ್ಷಗಾನ ಸಪ್ತೋತ್ಸವ -2025’ವನ್ನು ದಿನಾಂಕ 04ರಿಂದ 10 ಅಕ್ಟೋಬರ್ 2025ರಂದು ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ ಗಂಟೆ 5-15ಕ್ಕೆ ವಿದ್ವಾನ್ ಅಶೋಕ ಆಚಾರ್ ಮತ್ತು ತಂಡದವರಿಂದ ಭಕ್ತಿಗೀತೆ ಮತ್ತು ಸುಗಮ ಸಂಗೀತ ಪ್ರಸ್ತುತಗೊಳ್ಳಲಿದೆ. ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ಎಡನೀರು ಮಠಾದೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಜ್ಞಾತ ಕವಿ ವಿರಚಿತ ‘ಚಿತ್ರಾಕ್ಷಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಶ್ರೀಮತಿ ಸುಕನ್ಯ ಸೋಮಯಾಜಿ ಮತ್ತು ಬಳಗದವರಿಂದ ‘ಭಾವ ಗೀತೆ’ ಮತ್ತು ಕವಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವಿದ್ಯುನ್ಮತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 06 ಅಕ್ಟೋಬರ್ 2025ರಂದು ಪ್ರಾಚಾರ್ಯ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಯನ್ನು 2025ರ ಸೆಪ್ಟೆಂಬರ್ 30ರವರೆಗೆ ದಂಡದ ಶುಲ್ಕ ರೂ.50-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಸಾರ್ವಜನಿಕರ ಹಿತಾಸಕ್ತಿ ಮೇರೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ 15 ಅಕ್ಟೋಬರ್ 2025ರ ಅವಧಿಯನ್ನು ವಿಸ್ತರಿಸಲಾಗಿದ್ದು, ಪರೀಕ್ಷಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬಹುದು. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25-೦೦ಗಳ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು – 560018 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ ಫೇಸ್ ಬುಕ್ : https://www.facebook.com/kasapaofficial, https://www.facebook.com/KannadaSahityaParishattu ಟ್ವಿಟರ್ :…
ಕೋಣಾಜೆ : ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ಎನ್.ಜಿ. ಪಾವಂಜೆ ಲಲಿತಕಲಾ ಪೀಠ ಇದರ ವತಿಯಿಂದ ಕರಾವಳಿ ಚಿತ್ರಕಲಾ ಚಾವಡಿ (ರಿ.) ಮಂಗಳೂರು ಇವರ ಸಹಕಾರದೊಂದಿಗೆ ‘ಕಲಾ ದರ್ಪಣ’ ಭಾವಚಿತ್ರ ರಚನೆ ಮತ್ತು ಸೃಜನಾತ್ಮಕ ಚಿತ್ರಕಲಾ ಶಿಬಿರವು ದಿನಾಂಕ 03 ಮತ್ತು 04 ಅಕ್ಟೋಬರ್ 2025ರಂದು ಮಂಗಳೂರು ವಿವಿಯ ವಿಜ್ಞಾನ ಸಂಕೀರ್ಣದ ಮುಂಭಾಗದ ಪರಿಸರದಲ್ಲಿ ನಡೆಯಲಿದೆ. ದಿನಾಂಕ 03 ಅಕ್ಟೋಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಇವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಉದ್ಯಮಿ ಪ್ರಶಾಂತ್ ಶೇಟ್, ಮಂಗಳೂರು ವಿ.ವಿ. ಕುಲಸಚಿವ ಕೆ. ರಾಜು ಮೊಗವೀರ ಇವರು ಭಾಗವಹಿಸಲಿದ್ದು, ಕರಾವಳಿ ಚಿತ್ರಕಲಾ ಚಾವಡಿಯ ಅಧ್ಯಕ್ಷರಾದ ಕೋಟಿ ಪ್ರಸಾದ್ ಆಳ್ವ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ದಿನಾಂಕ 04 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ‘ಕಲಾಸ್ವಾದನೆಯ ವಿಭಿನ್ನ ನೆಲೆಗಳು’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕನ್ನಡ ವಿಭಾಗದ ಸೆಮಿನಾರ್ ಹಾಲ್ನಲ್ಲಿ ನಡೆಯಲಿದ್ದು, ಹಿರಿಯ ಕಲಾವಿದ ಸಕು…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಇದರ ವತಿಯಿಂದ ಮಂಗಳೂರಿನ ಕ್ಯಾಥೋಲಿಕ್ ಹೌಸ್ ಇದರ ಛಾಯಾಚಿತ್ರ ದಾಖಲೆಯ ‘ಆಲ್ಬಮ್ ಆಫ್ ದಿ ಪೋರ್ಚಸ್’ ಪ್ರದರ್ಶನದ ಉದ್ಘಾಟನೆಯನ್ನು ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿ.ಎ.ಎಸ್.ಕೆ. ಮಂಗಳೂರು ಇದರ ಅಧ್ಯಕ್ಷರಾದ ರೊನಾಲ್ಡ್ ಗೋಮ್ಸ್ ಇವರ ಉಪಸ್ಥಿತಿಯಲ್ಲಿ ಈ ಪ್ರದರ್ಶನ ನಡೆಯಲಿದ್ದು, ದಿನಾಂಕ 11 26 ಅಕ್ಟೋಬರ್ 2025ರ ತನಕ ಬೆಳಗ್ಗೆ 11-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಪ್ರದರ್ಶನವು ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸುಭಾಸ್ ಬಸು 87623 68048 ಮತ್ತು ಶರ್ವಾಣಿ ಭಟ್ 88677 05207 ಇವರನ್ನು ಸಂಪರ್ಕಿಸಿರಿ.
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ನಡೆಯುವ ತಿಂಗೊಳ್ದ ಗೇನದ ಕೂಟ -2 ಗಾಂಧಿ ಜಯಂತಿ ನೆನೆಪಿನಲ್ಲಿ ‘ತುಳುನಾಡ್ ಡ್ ಲೋಕಮಾನ್ಯೆರ್’ ಕಜ್ಜಕೊಟ್ಯ ಬೊಕ್ಕ ಪಾತೆರಕತೆ ಲೇಸ್ ಕಾರ್ಯಕ್ರಮವನ್ನು ದಿನಾಂಕ 04 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘ (ರಿ.) ಇದರ ಅಧ್ಯಕ್ಷರಾದ ಎಂ. ಸುಂದರ ಬೆಳುವಾಯಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋಷ್ಠಿ 1ರಲ್ಲಿ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಸುದೇವ ಬೆಳ್ಳೆ ಇವರು ಮತ್ತು ಗೋಷ್ಠಿ 2ರಲ್ಲಿ ಅಧ್ಯಾಪಕರಾದ ಅರವಿಂದ ಚೊಕ್ಕಾಡಿ ಇವರು ವಿಷಯ ಮಂಡನೆ ಮಾಡಲಿದ್ದಾರೆ.
ಸುರತ್ಕಲ್ : ಯಕ್ಷ ಅಭಿಮಾನಿ ಬಳಗ ಟ್ರಸ್ಟ್ (ರಿ), ಸುರತ್ಕಲ್ ಇದರ ದಶಮ ಸಂಭ್ರಮ ಕಾರ್ಯಕ್ರಮವು ದಿನಾಂಕ 04 ಅಕ್ಟೋಬರ್ 2025ರಂದು ಸುರತ್ಕಲ್ ಇಲ್ಲಿನ ವಿದ್ಯಾದಾಯಿನಿ ಪ್ರೌಢ ಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ. ನಾವು ಸಮಾನ ಮನಸ್ಕರು ಸೇರಿ 2016 ರಲ್ಲಿ ಸ್ಥಾಪಿಸಿದ “ಯಕ್ಷ ಅಭಿಮಾನಿ ಬಳಗ, ಸುರತ್ಕಲ್” ಎಂಬ ಯಕ್ಷಗಾನ ಪ್ರೇಮಿಗಳ ಸಂಘಟನೆಯ ಸದಸ್ಯರು. ಈ ಸಂಘಟನೆಯು ಹೃದಯದಿಂದ ಯಕ್ಷಗಾನವನ್ನು ಆಸ್ವಾದಿಸುವ, ಕಲೆಯ ಗೌರವವನ್ನು ಉಳಿಸಿ ಬೆಳೆಸುವ ದೃಷ್ಟಿಕೊನದಿಂದ ಸ್ಥಾಪಿತವಾಗಿದೆ. ಕಲೆಯ ಬೆಳವಣಿಗೆ ಹಾಗೂ ಸಂಸ್ಕೃತಿಯನ್ನು ಸಾರಲು ಪ್ರಾಮಾಣಿಕ ಪ್ರಾಯತ್ನಗಳನ್ನು ಮಾಡುತ್ತಿರುವ ನಮ್ಮ ಸಂಘಟನೆಯು ಕಳೆದ ಒಂದು ದಶಕದ ಕಾಲದಲ್ಲಿ ಹಲವಾರು ಯಶಸ್ವಿ ಯಕ್ಷಗಾನ ಕಾರ್ಯಕ್ರಮಗಳನ್ನುಹಮ್ಮಿಕೊಂಡಿದೆ. ಕಾರ್ಯಕ್ರಮಗಳ ಇತಿಹಾಸ: 2016ರಲ್ಲಿ “ಶ್ರೀ ದೇವಿ ಮಹಾತ್ಮೆ” ಎಂಬ ಯಕ್ಷಗಾನ ಪ್ರದರ್ಶನದೊಂದಿಗೆ ಸಂಘಟನೆಯ ಮೊದಲ ಹೆಜ್ಜೆ ಇಡಲಾಯಿತು. ಈ ಪ್ರದರ್ಶನವು ಜನಮನ ಗೆದ್ದು, ಯಕ್ಷಗಾನದ ಲೋಕದಲ್ಲಿ ನಮ್ಮ ಹೆಜ್ಜೆ ಗೆ ಘನತೆ ನೀಡಿತು. ಈ ಕಾರ್ಯಕ್ರಮದಲ್ಲಿ ಶ್ರೀ ಬಲಿಪ ನಾರಾಯಣ ಭಾಗವತರು,…
ಮಡಿಕೇರಿ : ಮಡಿಕೇರಿಯ ಹೊಸ ಬಡಾವಣೆಯ ಅಶೋಕ ಭವನದಲ್ಲಿ ಮೊಣ್ಣಂಡ ಶೋಭಾ ಸುಬ್ಬಯ್ಯನವರ ಪ್ರಾಯೋಜಕತ್ವದಲ್ಲಿ ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ವತಿಯಿಂದ ದಿನಾಂಕ 28 ಸೆಪ್ಟೆಂಬರ್ 2025ರಂದು ‘ಕಾವ್ಯ ಕಮ್ಮಟ’ ನಡೆಯಿತು. ಹಿರಿಯ ಕವಯಿತ್ರಿ ಮೊಣ್ಣಂಡ ಶೋಭಾ ಸುಬ್ಬಯ್ಯಬವರು ಅಧ್ಯಕ್ಷತೆ ವಹಿಸಿದ್ದರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಬಳಗದ ಸಂಸ್ಥಾಪಕರಾದ ವೈಲೇಶ ಪಿ.ಎಸ್. ಕೊಡಗು ಉದ್ಘಾಟನೆ ಮಾಡಿದರು. ಕನ್ನಡ ಸಿರಿ ಬಳಗದ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರು ಆದ ಬಿ.ಎಸ್. ಲೋಕೇಶ್ ಸಾಗರ್ರವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಖ್ಯಾತ ಕವಿಗಳಾದ ಡಾ. ಜಯಪ್ಪ ಹೊನ್ನಾಳಿ ಮೈಸೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಗಿರೀಶ್ ಎಸ್. ಕಿಗ್ಗಾಲು, ಪುಷ್ಪ ಡಿ.ಹೆಚ್. ಮಡಿಕೇರಿ. ಲೋಕೇಶ್ ಹೆಚ್.ಡಿ. ವಿರಾಜಪೇಟೆ, ಪುಷ್ಪ ಶಿವರಾಂ ರೈ, ಹೇಮಂತ್ ಪಾರೇರಾ, ಶಶಿಕಲಾ ಗಿರೀಶ್ ಕಿಗ್ಗಾಲು, ಶೋಭಾ ರಕ್ಷಿತ್ ಮಡಿಕೇರಿ, ವಿಜಯಶ್ರೀ ಅನಿಲ್ ಕೆದಿಲಾಯ ಕುಶಾಲನಗರ, ವಿನಯಾ ರಾಜಶೇಖರ್, ಲಲಿತಾ ಎಂ.ಕೆ., ಶರ್ಮಿಳಾ ರಮೇಶ್…
ಉಡುಪಿ : ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ.) ಇದರ ವತಿಯಿಂದ ‘ವಿದ್ಯಾದಶಮಿ ಸಂಗೀತೋತ್ಸವ -2025’ವನ್ನು ದಿನಾಂಕ 02 ಅಕ್ಟೋಬರ್ 2025ರಂದು ಬೆಳಿಗ್ಗೆ 7-40 ಗಂಟೆಯಿಂದ ಕುಕ್ಕುದಕಟ್ಟೆಯಲ್ಲಿರುವ ಸರಿಗಮ ಭಾರತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 7-40 ಗಂಟೆಗೆ ಮಣಿಪಾಲದ ಹಿಂದುಸ್ತಾನಿ ಗಾಯಕ ಪಂಡಿತ್ ರವಿಕಿರಣ್ ಇವರ ಹಿಂದುಸ್ತಾನಿ ಗಾಯನ. 9-00 ಗಂಟೆಗೆ ವಿದುಷಿ ಸುರೇಖಾ ಭಟ್ ಇವರ ಕರ್ನಾಟಕ ಸಂಗೀತ ಹಾಡುಗಾರಿಕೆಗೆ ಪ್ರಮಥ್ ಭಾಗವತ್ ಇವರು ವಯೊಲಿನ್ ಮತ್ತು ಡಾ. ಬಾಲಚಂದ್ರ ಆಚಾರ್ ಮೃದಂಗ ಸಹಕಾರ ನೀಡಲಿದ್ದಾರೆ. 10-00 ಗಂಟೆಗೆ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಪಿಳ್ಳಾರಿ ಗೀತೆಗಳು, ಬೆಳಗ್ಗ 10-20ಕ್ಕೆ ಕಾರ್ಯಕ್ರಮದ ಉದ್ಘಾಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಹರಿಕೃಷ್ಣ ಪುನರೂರು, ಪ್ರದೀಪ್ ಕಲ್ಕೂರ, ಮಂಜುನಾಥ ಉಪಾಧ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭದಲ್ಲಿ ಬಹುಮುಖ ಪ್ರತಿಭೆಗಳಾದ ಶಿಲ್ಪಾ ಜೋಶಿ, ಮಾನಸಿ ಸುಧೀರ್ ಇವರನ್ನು ಗೌರವಿಸಿ ಸನ್ಮಾನಿಸಲಾಗುವುದು. ಗಂಟೆ 11-45ರಿಂದ ತನ್ಮಯಿ ಉಪ್ಪಂಗಳ ಇವರ ಸಂಗೀತ ಕಛೇರಿಗೆ…