Author: roovari

ಹತ್ತೊಂಬತ್ತನೇ ಶತಮಾನದ ಉತ್ತರಾರ್ಧದಲ್ಲಿ ಕನ್ನಡ ಮತ್ತು ಮಲಯಾಳಂ ಸಾಹಿತ್ಯವು ಮಹತ್ವದ ಬೆಳವಣಿಗೆಯನ್ನು ಕಂಡಿತು. ಸಂಸ್ಕೃತ, ಇಂಗ್ಲೀಷ್, ಬಂಗಾಳಿ ಭಾಷೆಗಳಿಂದ ಎರಡೂ ಭಾಷೆಗಳು ಅನುವಾದ, ರೂಪಾಂತರ, ಅನುಕರಣೆ, ಪುನರ್ ನಿರೂಪಣೆಗಳ ಮೂಲಕ ಅನೇಕ ಬಗೆಯ ಗದ್ಯ ರಚನೆಗಳನ್ನು ಪಡೆದವು. ಪುರಾಣ, ಇತಿಹಾಸ, ಜಾನಪದಗಳಿಂದ ವಸ್ತುಗಳನ್ನು ತೆಗೆದುಕೊಂಡು ಹೊಸ ಬಗೆಯ ಗದ್ಯ ಕಥನಗಳನ್ನು ರಚಿಸುವ ಪ್ರಯತ್ನಗಳಾದವು. ಒಂದು ನಿಟ್ಟಿನಲ್ಲಿ ಸಾಂಪ್ರದಾಯಿಕ ಭಾರತೀಯ ಕಥನ ಮಾದರಿಗಳಲ್ಲಿ ಸಮಕಾಲೀನ ಪಾತ್ರ, ವಿವರಗಳನ್ನು ಒಳಗೊಳ್ಳುವ ಪ್ರಯೋಗಗಳು ನಡೆದರೆ ಇನ್ನೊಂದು ನಿಟ್ಟಿನಲ್ಲಿ ಸ್ಥಳೀಯವೂ ದೇಶೀಯವೂ ಆದ ವಸ್ತು ವಿವರಗಳನ್ನು ಪಾಶ್ಚಾತ್ಯ ಮಾದರಿಯ ಗದ್ಯ ಬಂಧದಲ್ಲಿ ಕೂಡಿಸುವ ಪ್ರಯೋಗಗಳು ನಡೆದವು. ಈ ಮೂಲಕ ಕಾದಂಬರಿ ಪ್ರಕಾರವು ಭಾರತೀಯ ಸಾಹಿತ್ಯವನ್ನು ಪ್ರವೇಶಿಸಿತು. ಮರಾಠಿಯ ಮೊದಲ ಸಾಮಾಜಿಕ ಕಾದಂಬರಿ ‘ಯಮುನಾ ಪರ್ಯಟನ’ (1857) ಬಂಗಾಳಿಯ ‘ಅಲಾಲೇರ ಘರೇರ ದುಲಾರ’ (1858) ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲೂ ಕಾದಂಬರಿಗಳು ಪ್ರಕಟವಾಗತೊಡಗಿದವು. ಕನ್ನಡದಲ್ಲಿ ಗುಲ್ವಾಡಿ ವೆಂಕಟರಾಯರು, ಬೋಳಾರ ಬಾಬುರಾವ್, ಎಂ.ಎಸ್. ಪುಟ್ಟಣ್ಣ, ಗಳಗನಾಥ, ಬಿ. ವೆಂಕಟಾಚಾರ್ಯ ಮತ್ತು…

Read More

ಕಾಂತಾವರ : ಕನ್ನಡ ಸಂಘ ಕಾಂತಾವರ (ರಿ.) ಇದರ ವತಿಯಿಂದ ‘ಕಾಂತಾವರ ಉತ್ಸವ 2024’ವನ್ನು ದಿನಾಂಕ 01 ನವೆಂಬರ್ 2024ರಂದು 10-00 ಗಂಟೆಗೆ ಕಾಂತಾವರ ರಥಬೀದಿಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ದತ್ತಿ ನಿಧಿಗಳ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ನಾಡಿಗೆ ನಮಸ್ಕಾರ ಗ್ರಂಥ ಮಾಲೆಯ ನೂತನ ಹೊತ್ತಿಗೆಗಳ ಅನಾವರಣ ನಡೆಯಲಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರು ಉದ್ಘಾಟನೆ ಮಾಡಲಿದ್ದು, ಕ.ಸಾ.ಪ. ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಅಧ್ಯಕ್ಷತೆ ವಹಿಸಲಿದ್ದು, ಪ್ರಶಸ್ತಿ ಪ್ರದಾನ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಹಿರಿಯ ಸಾಹಿತಿ ಪ್ರೊ. ಪಿ.ಎನ್. ಮೂಡಿತ್ತಾಯ ಇವರು ಕೃತಿಗಳನ್ನು ಅನಾವರಣಗೊಳಿಸಲಿರುವರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾಟುಕವಿ ವಿರಚಿತ ಕರ್ನಾಟಕ ಭಾಗವತದ ‘ಮಹಾಬಲಿ’ ಇದರ ಗಮಕ ವಾಚನ ವ್ಯಾಖ್ಯಾನ ನಡೆಯಲಿದ್ದು, ಶ್ರೀ ಯಜ್ಞೇಶ ಆಚಾರ್ಯ ವಾಚನ ಮತ್ತು ಶ್ರೀ ಸರ್ಪಂಗಳ ಈಶ್ವರ ಭಟ್ ಇವರು ವ್ಯಾಖ್ಯಾನ…

Read More

ಬೆಂಗಳೂರು : ಸಂಸ್ಕಾರ ಭಾರತಿ ಬೆಂಗಳೂರು ಉತ್ತರ ಜಿಲ್ಲೆ ಕೆ.ಆರ್.ಪುರಂ ಘಟಕ ಇದರ ವತಿಯಿಂದ ಆದಿಕವಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಆನ್‌ಲೈನ್‌ನಲ್ಲಿ ಕವನ ಬರೆಯುವ ಸ್ಪರ್ಧೆಯನ್ನು ದಿನಾಂಕ 03 ನವೆಂಬರ್ 2024ರಂದು ಆಯೋಜಿಸುತ್ತಿದೆ. ಈ ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು, ಕನ್ನಡ, ಹಿಂದಿ, ಮಲಯಾಳಂ, ಬಂಗಾಳಿ, ಸಂಸ್ಕೃತ ಮತ್ತು ಇಂಗ್ಲೀಷ್‌ನಲ್ಲಿ ಸಲ್ಲಿಕೆಗಳನ್ನು ಸ್ವೀಕರಿಸಲಾಗಿದೆ. ದಿನಾಂಕ 31 ಅಕ್ಟೋಬರ್ 2024 ನೋಂದಾವಣೆ ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೆಳಗೆ ನೀಡಿರುವ ಗೂಗಲ್ ಫಾರ್ಮ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.

Read More

ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವಿಂಶತಿ ಕಾರ್ಯಕ್ರಮದ ಹತ್ತನೇ ಸರಣಿ ತಾಳಮದ್ದಳೆಯು ದಿನಾಂಕ 29 ಅಕ್ಟೋಬರ್ 2024ರಂದು ಬನ್ನೂರು ಭಾರತೀ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ‘ಪಾರ್ಥಸಾರಥ್ಯ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್ ಬಟ್ಯಮೂಲೆ, ನಿತೀಶ್ ಮನೊಳಿತ್ತಾಯ ಎಂಕಣ್ಣಮೂಲೆ, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಮತ್ತು ಪ್ರರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ (ಕಿಶೋರಿ ದುಗ್ಗಪ್ಪ ನಡುಗಲ್ಲು), ಕೌರವ (ಶುಭಾ ಜೆ.ಸಿ. ಅಡಿಗ), ಬಲರಾಮ (ಹರಿಣಾಕ್ಷಿ ಜೆ. ಶೆಟ್ಟಿ), ಅರ್ಜುನ (ಶಾರದಾ ಅರಸ್) ಸಹಕರಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ದೇವಳದ ಚಂದ್ರಶೇಖರ್ ಭಟ್ ಬಡೆಕ್ಕಿಲ ವಂದಿಸಿದರು. ದೇವಳದ ಆಡಳಿತ ಮಂಡಳಿ ಸದಸ್ಯರು ಸಹಕರಿಸಿದರು. ಶ್ರೀಮತಿ ಮತ್ತು ಶ್ರೀ ದುಗ್ಗಪ್ಪ ನಡುಗಲ್ಲು ಪ್ರಾಯೋಜಿಸಿದ್ದರು.

Read More

ಪುತ್ತೂರು : ಕರ್ನಾಟಕ ಸಂಘ ಪುತ್ತೂರು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಬೊಳಂತಕೋಡಿ ಈಶ್ವರ ಭಟ್ಟರ ಸ್ಮರಣಾರ್ಥ ‘ಕನ್ನಡ ಕವಿಗೋಷ್ಠಿ’ಯನ್ನು ದಿನಾಂಕ 01 ನವೆಂಬರ್ 2024ರಂದು ಸಂಜೆ 3-45 ಗಂಟೆಗೆ ಪುತ್ತೂರಿನ ರಾಧಾಕೃಷ್ಣ ಮಂದಿರ ರಸ್ತೆ (ಬ್ಲಡ್ ಬ್ಯಾಂಕ್ ಬಳಿ) ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭಾ ಕಾರ್ಯಕ್ರಮದ ಹಿರಿತನ ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಾಹಿತಿ ಡಾ. ನರೇಂದ್ರ ರೈ ದೇರ್ಲರವರದ್ದು ಹಾಗೂ ಪ್ರೊಫೆಸರ್ ವಿ.ಬಿ. ಅರ್ತಿಕಜೆ, ಪ್ರೊಫೆಸರ್ ಹರಿನಾರಾಯಣ ಮಾಡಾವು, ಶ್ರೀ ಪರೀಕ್ಷಿತ ತೋಳ್ಪಾಡಿ, ಶ್ರೀ ಜಯಾನಂದ ಪೆರಾಜೆ, ಶ್ರೀ ಜನಾರ್ದನ ದುರ್ಗ, ಶ್ರೀ ಸಿ.ಶೇ. ಕಜೆಮಾರ್, ಶ್ರೀ ವಿಶ್ವನಾಥ ಕುಲಾಲ್, ಶ್ರೀಮತಿ ಕವಿತ ಅಡೂರು, ಡಾ. ಮೈತ್ರಿ ಭಟ್, ಶ್ರೀಮತಿ ಮಲ್ಲಿಕ ಜೆ. ರೈ, ಶ್ರೀಮತಿ ಶಾಂತ ಪುತ್ತೂರು ಮತ್ತು ಕುಮಾರಿ ಅಕ್ಷರ ಕೆ.ಟಿ. ಈ ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿ – ಕವಯತ್ರಿಯರು. ಕರ್ನಾಟಕ ಸಂಘ, ಪುತ್ತೂರು, ದ.ಕ. ಸಂಪರ್ಕ ದೂರವಾಣಿ…

Read More

ಉಡುಪಿ : ಸ್ವಾಮಿ ಶ್ರೀ ಬ್ರಹ್ಮಲಿಂಗೇಶ್ವರನ ತಾಣದಲ್ಲಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ (ರಿ.) ಇದರ 2ನೇ ವರ್ಷದ ‘ಜನ್ಸಾಲೆ ಯಕ್ಷ ಪರ್ವ 2024’ವನ್ನು ದಿನಾಂಕ 3 ನವೆಂಬರ್ 2024ರಂದು ಮಾರಣಕಟ್ಟೆ ಮೂಕಾಂಬಿಕಾ ಕಲಾ ಮಂಟಪದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯಕ್ಷ ರಾಘವ ಪ್ರಶಸ್ತಿ, ಕಲಾ ಗೌರವ, ವೈದ್ಯಕೀಯ ನೆರವು, ಗೃಹ ನಿರ್ಮಾಣಕ್ಕೆ ನೆರವು, ಪ್ರತೀಕ್ಷಾ ಪುರಸ್ಕಾರ, ಯಕ್ಷ ಪಂಚ ಸ್ವರ, ಯಕ್ಷಗಾನ ಪ್ರದರ್ಶನಗಳು ನಡೆಯಲಿದೆ. ಮಧ್ಯಾಹ್ನ 2-00 ಗಂಟೆಗೆ ಬಡಗು ತಿಟ್ಟಿನ ಭಾಗವತರಾದ ಶ್ರೀ ದಿನೇಶ್ ಶೆಟ್ಟಿ, ಶ್ರೀ ಸೃಜನ್ ಗಣೇಶ್ ಹೆಗಡೆ ಮತ್ತು ಶ್ರೀರಕ್ಷಾ ಹೆಗಡೆ ಹಾಗೂ ತೆಂಕು ತಿಟ್ಟಿನ ಭಾಗವತರಾದ ಶ್ರೀಮತಿ ಕಾವ್ಯಶ್ರೀ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ಇವರಿಂದ ಯಕ್ಷ ಪಂಚ ಸ್ವರ ಪ್ರಸ್ತುತಗೊಳ್ಳಲಿದ್ದು, ಇವರಿಗೆ ಶ್ರೀ ಎನ್.ಜೆ. ಹೆಗಡೆ, ಶ್ರೀ ಶಶಾಂಕ ಆಚಾರ್ಯ, ಶ್ರೀ ಚಂದ್ರಶೇಖರ ಆಚಾರ್ಯ, ಶ್ರೀ ಶ್ರೀಕಾಂತ್ ಶೆಟ್ಟಿ, ಶ್ರೀ ಶ್ರೀವತ್ಸ ಮತ್ತು ಶ್ರೀ ಪ್ರಶಾಂತ್ ಶೆಟ್ಟಿಯವರು ಸಹಕರಿಸಲಿದ್ದಾರೆ. ಸಂಜೆ 4-30…

Read More

ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ಮಂಗಳೂರು ವಿ. ವಿ.ಇಲ್ಲಿನ  ಎಸ್.  ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಅಂಬಲಪಾಡಿ ವ್ಯಾಸ ಬಲ್ಲಾಳ ಜಾನಕಿ ದತ್ತಿ ನಿಧಿ, ಸೇಡಿಯಾಪು ಕೃಷ್ಣಭಟ್ಟರ ಬಗ್ಗೆ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 29 ಅಕ್ಟೋಬರ್ 2024ರ ಮಂಗಳವಾರದಂದು ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕಾಸರಗೋಡು ಕೇಂದ್ರೀಯ ವಿ. ವಿ. ಯ ಸಹಾಯಕ ಪ್ರಾಧ್ಯಾಪಕ  ಡಾ. ಪ್ರವೀಣ ಪದ್ಯಾಣ ಮಾತನಾಡಿ ಸೇಡಿಯಾಪು ಅವರು ಕವಿಯಾಗಿ, ಸಾಹಿತಿಯಾಗಿ, ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದರು. ಪ್ರಗತಿಪರ ಚಿಂತಕರಾಗಿದ್ದ ಅವರದ್ದು ವಸ್ತುನಿಷ್ಠವಾಗಿ ಆಲೋಚನೆ ಮಾಡುವ ವ್ಯಕ್ತಿತ್ವ. ಪ್ರಗತಿಯು ಹೇಗಿರಬೇಕೆಂದರೆ ಸಾತ್ವಿಕತೆ, ಒಗ್ಗೂಡಿಸುವ ಮೂಲಕ ಆಗಬೇಕು ಎಂದು ನಂಬಿದ್ದ  ಅವರದ್ದು ತಾತ್ವಿಕ ಸಮೃದ್ಧಿಯ ಬರವಣಿಗೆಯಾಗಿತ್ತು. ಸಾಹಿತ್ಯವು ಇಡೀ ಸಮಾಜವನ್ನು ಕಟ್ಟುವ ಮತ್ತು ಸಂಸ್ಕೃತಿಯ ಹಿರಿಮೆಯನ್ನು ಬೆಳಗಿಸುವಂತಿರಬೇಕು ಎಂದಿದ್ದ ಅವರು ಅಕ್ಷರ, ವರ್ಣಗಳ ಬಗ್ಗೆ ಹಾಗೂ ಭಾಷಾ ವಿಚಾರಗಳ ಬಗ್ಗೆಯೂ…

Read More

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 1 ನವಂಬರ್ 2024ರಂ ಶುಕ್ರವಾರದಂದು ಸಂಜೆ ಘಂಟೆ 5.00 ರಿಂದ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ. ಸಭಾ ಕಾರ್ಯಕ್ರಮ ಸಂಜೆ ಘಂಟೆ 7.00 ರಿಂದ ನಡೆಯಲಿದ್ದು, ಕಾರ್ಯಕ್ರಮವನ್ನು ಮುಂಬೈ ಇಲ್ಲಿನ ವಿ. ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ಎಂ. ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ…

Read More

ಡಾ. ಸುರೇಶ ನೆಗಳಗುಳಿಯವರು ಬಂಟ್ವಾಳ ತಾಲೂಕಿನ ಆಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ಜನಿಸಿದವರು. ಇವರ ತಂದೆ ಶ್ರೀ ತಿಮ್ಮಣ್ಣ ಭಟ್ಟ ಮತ್ತು ತಾಯಿ ಶ್ರೀಮತಿ ಸಾವಿತ್ರಿಯವರ ಕೊನೆಯ ಪುತ್ರ. 1980ರಿಂದ 1988 ತನಕ ವೈದ್ಯಕೀಯ ಸೇವೆ 1988-1997 ಕೊಪ್ಪ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಾಧಿಕಾರಿಯಾಗಿ, ಪ್ರಾಧ್ಯಾಪಕರಾಗಿ ಪ್ರಾಂಶುಪಾಲರಾಗಿ ದುಡಿದವರು. ಬಳಿಕ 1997-2012-ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ವೈದ್ಯಾಧಿಕಾರಿಯಾಗಿ, ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ನಂತರ 2012-2017 ತನಕ ಕೇರಳ ಶೋರನೂರು ಪಿ.ಎನ್.ಎನ್.ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಾಧಿಕಾರಿಯಾಗಿ, ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ 2017ರಿಂದ ಇಂದಿನ ತನಕ ಮಣಿಪಾಲದ ಎಂ.ಐ.ಎ.ಎಮ್.ಎಸ್. ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಡುವೆ 2012ರಿಂದ ಈ ತನಕ ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ಮೂಲವ್ಯಾಧಿ ಶಸ್ತ್ರಚಿಕಿತ್ಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ. ಕರುನಾಡಿನ ಸಾಹಿತ್ಯ ಲೋಕಕ್ಕೆ ಇವರು :- ‘ತುಷಾರ ಬಿಂದು’ ಎಂಬ ತುಷಾರ ಮಾಸಪತ್ರಿಕೆಯ ಚಿತ್ರಕವನ ವಿಭಾಗದಲ್ಲಿ ವಿಜೇತವಾದ ತಮ್ಮ ಕವನಗಳ ಸಂಕಲನ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಎಂಬ ಆಪ್ತ ಕಾರ್ಯಕ್ರಮ ನಗರದ ಶಾರದಾ ವಿದ್ಯಾಲಯದಲ್ಲಿ ದಿನಾಂಕ 29 ಅಕ್ಟೋಬರ್ 2024ರಂದು ಜರುಗಿತು. ಘಟಕದ ಸದಸ್ಯ, ಕನ್ನಡ ತುಳು ಸಾಹಿತಿ, ಪೊಳಲಿ ಶೀನಪ್ಪ ಹೆಗ್ಡೆ ಪ್ರಶಸ್ತಿ ಪುರಸ್ಕೃತ ಬೆನೆಟ್ ಜಿ. ಅಮ್ಮನ್ನ ಮತ್ತು ಘಟಕದ ಗೌರವ ಕಾರ್ಯದರ್ಶಿ, ಕ.ಸಾ.ಪ. ಕೇಂದ್ರ ಮಾರ್ಗದರ್ಶಿ ಸಮಿತಿಯ ಪದಾಧಿಕಾರಿ ಅಲ್ಲದೆ ಇದೀಗ ಕನ್ನಡ ಸಾಹಿತ್ಯ ಪರಿಷತ್ತಿನ ವಿದೇಶೀ ರಾಯಭಾರಿಯಾಗಿ ನಿಯೋಜಿತರಾಗಿರುವ ಡಾ. ಮುರಲೀಮೋಹನ್ ಚೂಂತಾರು ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಸಮ್ಮಾನಿಸಲಾಯಿತು. ಚೂಂತಾರು ಅವರ, ಕ.ಸಾ.ಪ. ಅಧ್ಯಕ್ಷ ನಾಡೋಜ ಮಹೇಶ್ ಜೋಶಿಯವರೊಂದಿಗಿನ ವಿದೇಶ ಪ್ರವಾಸ, ಅಲ್ಲಿನ ಕನ್ನಡ ಸಂಘಗಳಿಗೆ ಭೇಟಿ ಮತ್ತು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಇಂಚರ ತಂಡದ ಗಾಯಕಿಯರಾದ ರತ್ನಾವತಿ ಜೆ. ಬೈಕಾಡಿ , ಗೀತಾ ಮಲ್ಯ, ಜಯಲಕ್ಷ್ಮೀ ಬಾಲಕೃಷ್ಣ, ಜಯಶ್ರೀ, ಉಮಾ ಫಾಲಾಕ್ಷಪ್ಪ ಸಮೂಹ ಗಾಯನದಲ್ಲಿ ಮತ್ತು…

Read More