Author: roovari

ಕೋಟ : ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗಮಂಟಪದಲ್ಲಿ ಭಾನುವಾರ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ 15 ದಿನಗಳ ಕಾಲ ನಡೆದ ದಶಮಾನೋತ್ಸವದ ಯಕ್ಷಗಾನ ನೃತ್ಯ, ಅಭಿನಯ ತರಬೇತಿಯು ದಿನಾಂಕ 16-04-2023 ರಂದು ಉದ್ಘಾಟನೆಗೊಂಡು ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 30-04–2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಆಶೀರ್ವಾಚನಗೈಯುತ್ತಾ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು “ಜೀವನದಲ್ಲಿ ದುಡ್ಡು ಮಾಡುವ ಕಲೆಯನ್ನು ನಮ್ಮ ಶಿಕ್ಷಣ ಸಂಸ್ಥೆಗಳು ನೀಡುತ್ತಿವೆ. ನಮ್ಮ ಹಿಂದಿನ ಪರಂಪರೆಯ ಆಚಾರ ವಿಚಾರ, ನೀತಿ ನಿಯಮ, ಕಲೆ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಿಕೊಡುವತ್ತ ಶಿಕ್ಷಣ ಸಂಸ್ಥೆಗಳು ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ಯಕ್ಷಗಾನ ಕಲಾ ಕೇಂದ್ರದಂತಹ ಸಂಸ್ಥೆಗಳಿಗೆ ಎಲ್ಲರ ಪ್ರೋತ್ಸಾಹ ಅಗತ್ಯ” ಎಂದರು. ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದ‌ರ್ ಅಧ್ಯಕ್ಷತೆ ವಹಿಸಿದ್ದರು. ಪಾರಂಪಳ್ಳಿಯ ನಿವೃತ್ತ ಅಧ್ಯಾಪಕ ಶ್ರೀನಿವಾಸ ಸೋಮಯಾಜಿ, ಎಲ್.ಐ.ಸಿ. ನಿವೃತ್ತ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಯಕ್ಷಗುರು ಸದಾನಂದ ಐತಾಳ, ರಾಜಶೇಖರ ಹೆಬ್ಬಾರ್, ರಾಮಚಂದ್ರ…

Read More

ಮಂಗಳೂರು : ‘ಭರತಾಂಜಲಿ’ (ರಿ.) ಕೊಟ್ಟಾರ ಮಂಗಳೂರು ಇವರು ‘ವಿಪ್ರ ವೇದಿಕೆ’ ಕೋಡಿಕಲ್ (ರಿ) ಇದರ ಸಹಕಾರದಲ್ಲಿ ಪ್ರಸ್ತುತಪಡಿಸುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಕಾಸರಗೋಡು ಇವರಿಂದ ‘ನರಕಾಸುರ ವಧೆ’ – ‘ಗರುಡ ಗರ್ವಭಂಗ’ ಪ್ರಸಂಗದ ಯಕ್ಷಗಾನ ಬೊಂಬೆಯಾಟ ಪ್ರದರ್ಶನ ದಿನಾಂಕ 07.05.2023ನೇ ಆದಿತ್ಯವಾರ ಸಂಜೆ 5:30ಕ್ಕೆ ಬೆನಕ ಸಭಾಭವನ ಕೋಡಿಕಲ್ ನಲ್ಲಿ ನಡೆಯಲಿದೆ. ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ, ವಿದ್ವಾನ್ ಶ್ರೀಧರ್ ಹೊಳ್ಳ ಇವರ ಘನ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಇದರ ಮಹಿಳಾ ವಿಭಾಗದ ರಾಜ್ಯ ಸಹ ಸಂಚಾಲಕರಾದ ಶ್ರೀಮತಿ ಚೇತನಾ ಬಿ. ದತ್ತಾತ್ರೇಯ ಇವರು ಉದ್ಘಾಟನೆ ಮಾಡಲಿದ್ದಾರೆ. ವಿಪ್ರವೇದಿಕೆ ಕೋಡಿಕಲ್ ನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿದ್ಯಾರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಟ್ರಸ್ಟಿಗಳು ಭರತಾಂಜಲಿ (ರಿ.) ಕೊಟ್ಟಾರ ಮತ್ತು ವಿಪ್ರ ವೇದಿಕೆಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವರಿಗೂ ಆದರದ…

Read More

ಕಾಸರಗೋಡು : ತಪಸ್ಯ ಕಲಾ ಸಾಹಿತ್ಯ ವೇದಿಕೆ (ರಿ) ಕೇರಳ, ಶಂಪಾ ಪ್ರತಿಷ್ಠಾನ (ರಿ) ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಲೇಖಕರ ಸಂಘ ಕಾಸರಗೋಡು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಶ್ರೀ ಅಯ್ಯಪ್ಪ ಸೇವಾ ಸಮಿತಿ ಬಾಯಿಕಟ್ಟಿ ಇವರ ಸಹಯೋಗದಲ್ಲಿ ‘ಬೆಳೆಸಿರಿ’ ಎಂಬ ಮಕ್ಕಳಿಗಾಗಿ ಲಲಿತಕಲಾ ಮಿಲನ ಕಾರ್ಯಕ್ರಮವನ್ನು 07.05.2023 ಭಾನುವಾರ ಗಂಟೆ 9.00ರಿಂದ 5.00ರವರೆಗೆ ಬಾಯಿಕಟ್ಟೆಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಚಿತ್ರ ರಚನೆ, ವ್ಯಂಗ್ಯ ಚಿತ್ರ ಪ್ರದರ್ಶನ, ಕಾರ್ಟೂನು ಪ್ರಾತ್ಯಕ್ಷಿಕೆ, ಚಿತ್ರ ಕಲಾ ಪ್ರದರ್ಶನ, ರಸಪ್ರಶ್ನೆ, ನೃತ್ಯ, ಸಂವಾದ ಸ್ಪರ್ಧೆಗಳು, ವಾಯಲಿನ್ ವಾದನ, ಭಜನೆ, ಹಾಡುಗಳು, ಹೊಸ ಕೃತಿಗಳ ಬಿಡುಗಡೆ, ಹಾಡುವ ಮತ್ತು ಇತರ ಪ್ರತಿಭಾ ಪ್ರದರ್ಶನಕ್ಕೆ ಮುಕ್ತ ಅವಕಾಶವಿದೆ. ಕಾವ್ಯ ವಾಚನ, ಹಿರಿಯ ಕಲಾವಿದರೊಂದಿಗೆ ಸಂದರ್ಶನ, ಮಾರ್ಗದರ್ಶನ, ತಪಸ್ಯದ ಯುವ ಸದಸ್ಯರಿಂದ ಮನರಂಜನೆ ಹಾಗೂ ಡಾ. ಪ್ರಮೀಳಾ ಮಾಧವ್ ಅವರ ‘ಸ್ಪೂರ್ತಿ ಚೇತಸರು’ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ತಪಸ್ಯ (ಕೇರಳ) ಕಾಸರಗೋಡು ಇದರ…

Read More

ಉಡುಪಿ : ಯಕ್ಷ ಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥವಾಗಿ ನೀಡುವ ದತ್ತಿ ಪುರಸ್ಕಾರಕ್ಕೆ ಶ್ರೀ ದೇವದಾಸ್ ರಾವ್ ಕೂಡ್ಲಿಯವರು ಆಯ್ಕೆಯಾಗಿದ್ದು, ಈ ಪ್ರಶಸ್ತಿಯನ್ನು ದಿನಾಂಕ 05-05-2023ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ವಿತರಿಸಲಾಗುವುದು. ಈ ಕಾರ್ಯಕ್ರಮವು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ನಡೆಯಲಿದೆ. ನಾಗಪ್ಪಯ್ಯ ಕೂಡ್ಲಿ ಹಾಗೂ ಗಿರಿಜಮ್ಮ ದಂಪತಿಗಳ ಸುಪುತ್ರರಾದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಾರ್ಕೂರು ಮತ್ತು ಉಳ್ತೂರಿನಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಎನ್.ಜೆ.ಸಿ. ಬಾರ್ಕೂರು ಇಲ್ಲಿ ಪಡೆದಿರುತ್ತಾರೆ. ಯಕ್ಷಗಾನ ಶಿಕ್ಷಣವನ್ನು 1975-1976ರಲ್ಲಿ ಯಕ್ಷಗಾನ ಕೇಂದ್ರ ಉಡುಪಿ ಇಲ್ಲಿ ಪಡೆದಿರುತ್ತಾರೆ. ಶ್ರೀಯುತರು ಕಮಲಶಿಲೆ ಮೇಳ, ಮಾರಣಕಟ್ಟೆ ಮೇಳ, ಉಪ್ಪಿನಕುದ್ರು ಶ್ರೀ ಗಣೇಶ ಗೊಂಬೆಯಾಟ ತಂಡದಲ್ಲಿ ಹಲವು ವರ್ಷಗಳಿಂದ ಮದ್ದಲೆಗಾರನಾಗಿ ಸೇವೆ ಸಲ್ಲಿಸಿದ್ದಾರೆ. ಹೆಗ್ಗೋಡಿನ ನೀನಾಸಂ ತಿರುಗಾಟದಲ್ಲಿ 2 ವರ್ಷ ಅನುಭವ ಹೊಂದಿದ ಇವರು ಮೈಸೂರಿನ ರಂಗಾಯಣ ತಂಡದಲ್ಲಿ, ಶ್ರೀಮಯ ಯಕ್ಷಗಾನ ಕೇಂದ್ರ ಗುಣವಂತೆಯಲ್ಲಿ, ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಅಧ್ಯಾಪಕನಾಗಿ ಹಾಗೂ ಕೇಂದ್ರದ…

Read More

ಮಂಗಳೂರು : ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ಪಂಚಮ ವಾರ್ಷಿಕೋತ್ಸವದ ಅಂಗವಾಗಿ ಒಂದು ದಿನದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವವನ್ನು ಮೇ 7ರಂದು ಬೆಳಿಗ್ಗೆ 9.30ಕ್ಕೆ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಾದ ಧಾರವಾಡದ ಕುಮಾರ್ ಮರಡೂರ್ ಅವರಿಂದ ಹಿಂದುಸ್ತಾನಿ ಗಾಯನ ಕಛೇರಿ ನಡೆಯಲಿದೆ. ಪಂ. ಕೈವಲ್ಯ ಕುಮಾರ್ ಗುರವ್ ರ ಶಿಷ್ಯ ಯುವಕ ಕಲಾವಿದರಾದ ಔರಂಗಾಬಾದ್ ನ ವಿಶಾಲ್ ಭಗವಾನ್ ರಾವ್ ಮಹರಗುಡೆ, ಸಿದ್ಧಾಪುರದ ಮೇಧಾ ಭಟ್, ಪಂ. ಗಣಪತಿ ಭಟ್ ಹಾಸಣಗಿರವರ ಶಿಷ್ಯ ಅಮಿತ್ ಕುಮಾರ್ ಬೆಂಗ್ರೆ ಅವರೂ ಸಹ ಗಾಯನವನ್ನು ಪ್ರಸ್ತುತ ಪಡಿಸಲಿದ್ದಾರೆ. ಹಾರ್ಮೋನಿಯಂನಲ್ಲಿ ಶಶಿಕಿರಣ್ ಮಣಿಪಾಲ ಮತ್ತು ಪ್ರಸಾದ್‌ ಕಾಮತ್ ಮತ್ತು ತಬಲಾದಲ್ಲಿ ಧಾರವಾಡದ ಶ್ರೀಧರ್ ಮಾಂಡ್ರೆ, ವಿಘ್ನೇಶ್ ಕಾಮತ್ ಸಹಕರಿಸಲಿದ್ದಾರೆ. ಅಕಾಡೆಮಿಯ ವಿದ್ಯಾರ್ಥಿಗಳಿಂದ ಲಘು ಶಾಸ್ತ್ರೀಯ ಸಂಗೀತ ವೈವಿಧ್ಯ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ದೀಪ ಬೆಳಗಿಸುವರು. ಟ್ರಸ್ಟಿನ ಲೋಲಾಕ್ಷಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎ.ಜೆ.…

Read More

ಸುರತ್ಕಲ್: ಗೋವಿಂದದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪುಸ್ತಕಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ದ್ವಿತೀಯ ಬಿ.ಎ. ವಿದ್ಯಾರ್ಥಿ ಎಲ್.ಕೆ. ಭೀಮರಾಜ್‌ರವರು, ಡಾ|| ಎಸ್. ನರೇಂದ್ರಕುಮಾರ್ ಬರೆದಿರುವ “ಮಹಾ ಮಾನವತಾವಾದಿ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್” ಪುಸ್ತಕದಲ್ಲಿ ಅಂಬೇಡ್ಕರ್‌ರವರ ಜೀವನ ಚರಿತ್ರೆಯನ್ನು ಪರಿಚಯಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ್‌ ಆಚಾರ್ಯ, ಉಪನ್ಯಾಸಕಿಯಾರಾದ ದಯಾ ಸುವರ್ಣ, ಕ್ಯಾ. ಸುಧಾಯು ಶೆಟ್ಟಿ, ಡಾ| ವಿಜಯಲಕ್ಷ್ಮಿ, ರಶ್ಮೀ, ಗ್ರಂಥಪಾಲಕಿ ಡಾ|| ಸುಜಾತ.ಬಿ, ಗ್ರಂಥಾಲಯ ಸಿಬ್ಬಂದಿ ಸುಮನ್ ಉಪಸ್ಥಿತರಿದ್ದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಶಿರಿನ್ ವಂದಿಸಿದರು. ಶಿಫ್ನಾಝ್ ಕಾರ್ಯಕ್ರಮವನ್ನು ನಿರೂಪಿಸಿದರು. ಪುಸ್ತಕ ಪರಿಚಯಿಸಿದ ಎಲ್.ಕೆ. ಭೀಮರಾಜ್‌ರವರಿಗೆ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಸ್ಮರಣಿಕೆ ನೀಡಿ ಗೌರವಿಸಿದರು.

Read More

ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ & ಕಲ್ಚರಲ್ ಹೆರಿಟೇಜ್ (ಇಂಟಾಕ್) ನ ಮಂಗಳೂರು ಅಧ್ಯಾಯ ಮತ್ತು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದೊಂದಿಗೆ ಮಧುಬನಿ ಕಲಾವಿದ ಶ್ರವಣ್ ಕುಮಾರ್ ಪಾಸ್ವಾನ್ ಅವರಿಂದ ಎರಡು ದಿನಗಳ ಮಧುಬನಿ ಕಲಾ ಕಾರ್ಯಾಗಾರ ಮತ್ತು ಪ್ರದರ್ಶನವನ್ನು ನಗರದ ಬಲ್ಲಾಲ್‌ಬಾಗ್‌ನ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಏಪ್ರಿಲ್ 25 ಮತ್ತು 26, 2023ರಂದು ಆಯೋಜಿಸಿತು. ಶ್ರವಣ್ ಕುಮಾರ್ ಪಾಸ್ವಾನ್ ಮಧುಬನಿ ಶೈಲಿಯ ನಿಪುಣ ಕಲಾವಿದ. ಅವರ ಸಂಬಂಧಿ ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಮಗಳು ಉಜಾಲಾ ಪಾಸ್ವಾನ್ ಅವರಿಗೆ ಸಹಾಯ ನೀಡಿದರು. ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗಾಗಿ ಏಪ್ರಿಲ್ 29 ರವರೆಗೆ ತೆರೆದಿತ್ತು. ಎಪ್ರಿಲ್ 25ರ ಮಂಗಳವಾರದಂದು ಬೆಳಗ್ಗೆ 11:00 ಗಂಟೆಗೆ ಬರಹಗಾರ್ತಿ ಹಾಗೂ ಮಾನವ ಸಂಪನ್ಮೂಲ ತರಬೇತುದಾರರಾದ ಭಾರತಿ ಶೇವ್‌ಗೂರ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಭಾರತಿ ಶೇವ್‌ಗೂರ ಅವರು ಬರಹಗಾರರಾಗಿ ತಮ್ಮ ದೃಷ್ಟಿಕೋನ ನೀಡಿದರು. ವಿವಿಧ ಕಲಾ ಶೈಲಿಗಳ ಬಗ್ಗೆ…

Read More

ಬೆಂಗಳೂರು : ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದ 75ನೇ ವಾರ್ಷಿಕ ಅಮೃತ ಮಹೋತ್ಸವ ಸಾಂಸ್ಕೃತಿಕ ಸಂಗೀತ ಸಂಭ್ರಮ ದಿನಾಂಕ 18-02-2023 ಶನಿವಾರ ಆರಂಭಗೊಂಡಿದ್ದು, ಈ ಸರಣಿಯ ಕೊನೆಯ ಕಾರ್ಯಕ್ರಮ “ಮಂಗಳ ಸಂಗೀತ ನೃತ್ಯ ಧಾರೆ’ಯು ಇದೇ ಬರುವ 07-05-2023ರಂದು ಮಲ್ಲತ್ತ ಹಳ್ಳಿಯ ಕಲಾಗ್ರಾಮ ಸಮುಚ್ಛಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಉಂಚ್ಛ ವೃತ್ತಿಯಿಂದ ಕಾರ್ಯಕ್ರಮ ಆರಂಭಗೊಂಡು ಮೊದಲ ಸಂಗೀತ ಕಛೇರಿಯನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಶ್ರೀ ಕೆ.ಎಸ್. ಮೋಹನ ಕುಮಾರ ನಡೆಸಿಕೊಡಲಿದ್ದು, ಸಂಗೀತ ನಿರ್ದೇಶಕ ವಿದ್ವಾನ್ ಶ್ರೀ ಎಂ. ಎಸ್. ತ್ಯಾಗರಾಜ ಸಹ ಗಾಯಕರಾಗಿ ಸಹಕರಿಸಲಿದ್ದಾರೆ. ನಂತರ ಶ್ರೀಮತಿ ಎಂ.ಎಸ್. ವಿದ್ಯಾಲಕ್ಷ್ಮಿ ಮತ್ತು ಕು. ಗೌರಿ ಮನೋಹರಿ ‘ವಾಗ್ಗೇಯ ನೃತ್ಯ ವೈಭವ’ ನಡೆಸಿ ಕೊಡಲಿದ್ದಾರೆ. ಇವರಿಗೆ ನಟುವಾಂಗದಲ್ಲಿ ಶ್ರೀಮತಿ ಹೇಮಲತ ಎಸ್.ಆರ್., ಹಾಡುಗಾರಿಕೆಯಲ್ಲಿ ಶ್ರೀ ರಘುರಾಮ್, ಮೃದಂಗದಲ್ಲಿ ಶ್ರೀ ವಿನಯ ನಾಗರಾಜನ್ ಹಾಗೂ ಕೊಳಲಿನಲ್ಲಿ ಶ್ರೀ ರಘುಸಿಂಹ ಇವರು ಸಹಕರಿಸಲಿದ್ದಾರೆ. ಗುರು ವಿದ್ವಾನ್ ಕೀರ್ತಿಶೇಷ ಶ್ರೀ ಕೆ. ಮಂಜಪ್ಪ…

Read More

ತುಳುನಾಡಿನಲ್ಲಿ ಕಂಡು ಬರುವ ಪ್ರದರ್ಶನ ಕಲೆಗಳಲ್ಲಿ ಕಂಗಿಲು ಕೂಡ ಒಂದು. ಕಂಗಿಲು ಕುಣಿತ ಮಾರಿ ಓಡಿಸುವ ಆಶಯವನ್ನು ಹೊಂದಿರುವ ಒಂದು ಜನಪದ ಕುಣಿತ. ಕರಾವಳಿ ಕರ್ನಾಟಕ ಭಾಗದಲ್ಲಿ ಈ ಕುಣಿತವನ್ನು ಒಂದು ನಿರ್ದಿಷ್ಟ ಜನಾಂಗದವರು ನಡೆಸುತ್ತಾರೆ. ಮುಖ್ಯವಾಗಿ ಮುಂಡಾಲ ಜನಾಂಗದವರು ಕಂಗಿಲು ಕುಣಿತವನ್ನು ಒಂದು ಆರಾಧನಾ ಪ್ರಕಾರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಈ ಕುಣಿತವನ್ನು ನಡೆಸುವ ಮುಖ್ಯ ಉದ್ದೇಶ ಸಸ್ಯ ಸಮೃದ್ಧಿ ಮತ್ತು ರೋಗ ನಿವಾರಣೆ. ತುಳುವಿನಲ್ಲಿ ಬರುವ ಮಾಯಿ ತಿಂಗಳ ಹುಣ್ಣಿಮೆಯ ಬೆಳದಿಂಗಳಲ್ಲಿ ಈ ಕುಣಿತವನ್ನು ನಡೆಸುವುದು ರೂಢಿ. ಈ ಆರಾಧನಾ ಪ್ರಕ್ರಿಯೆಯಲ್ಲಿ ಕುಣಿತ, ಹಾಡು, ಹಾಸ್ಯ, ವಾದ್ಯ ಪರಿಕರಗಳ ನುಡಿಸುವಿಕೆ, ಡೋಲು ನಾದಗಳ ಜೊತೆ ಕಾಣಿಕೆ ಒಪ್ಪಿಸುವ ಕ್ರಮಗಳು ನಡೆಯುತ್ತವೆ. ಕಂಗಿಲು ಕುಣಿತ ಅಥವಾ ಆರಾಧನಾ ಪದ್ಧತಿಯು ಮೂರು ಹಗಲು ಮೂರು ರಾತ್ರಿ ನಡೆಯುತ್ತದೆ. ಈ ಆರಾಧನಾ ಪರಂಪರೆಯನ್ನು ಉಳಿಸಿಕೊಂಡು ಹೋಗುವ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಗೊಡ್ಡ ಹಾಗೂ ಮುಂಡಾಲ ಜನಾಂಗದವರು ತಮ್ಮ ಮಾತೃ ಭಾಷೆಯಾದ…

Read More

ಮಡಿಕೇರಿ : ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ವತಿಯಿಂದ ದಿನಾಂಕ 30-04-2023ರಂದು ನಡೆದ ‘ವಸಂತ ವಿಹಾರ’ ಬೇಸಿಗೆ ಶಿಬಿರದ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ “ಜಿಲ್ಲೆಯಲ್ಲಿ ಬೇಕಾದಷ್ಟು ಬೇಸಿಗೆ ಶಿಬಿರಗಳು ನಡೆಯುತ್ತಿವೆ. ನೃತ್ಯ ಕಲಿಕೆ, ಚಿತ್ರಕಲಾ ಕಲಿಕೆ, ಕರಾಟೆ, ಈಜು, ಕ್ರೀಡೆ ಇವೆಲ್ಲವನ್ನೂ ಒಳಗೊಂಡಂತಹ ಬೇಸಿಗೆ ಶಿಬಿರಗಳು ಎಲ್ಲೆಡೆ ಆಗುತ್ತಿದ್ದರೂ ಮಕ್ಕಳಿಗೆ ಜೀವನದ ಮೌಲ್ಯ ಶಿಕ್ಷಣ ತರಬೇತಿ ಯೋಗಾಸನ, ಪ್ರಾಣಾಯಾಮ, ಏಕಾಗ್ರತೆಯನ್ನು ಬೆಳೆಸಿಕೊಳ್ಳುವ ವಿಧಾನ, ವ್ಯಕ್ತಿತ್ವ ವಿಕಸನ, ಆಟ, ಪ್ರವಾಸ, ಕ್ರೀಡೆ ಇವೆಲ್ಲವನ್ನು ಒಳಗೊಂಡಂತಹ ಮತ್ತು ವಿದ್ಯಾರ್ಥಿಗಳಿಗೆ ಮುಂದಿನ ಜೀವನಕ್ಕೆ ಹೆಚ್ಚು ಪ್ರಯೋಜನವಾಗುವಂತಹ ವಿಚಾರವನ್ನು ಒಳಗೊಂಡ ವಸಂತ ವಿಹಾರ ಶಿಬಿರವು ನಿಜಕ್ಕೂ ಪ್ರಶಂಸನಾರ್ಹ. ಆಶ್ರಮವು ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಜಿಲ್ಲೆಯಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಮತ್ತು ಕೋವಿಡ್ ದುಸ್ಥಿತಿಯ ಸಂದರ್ಭದಲ್ಲಿ ಜನಸ್ನೇಹಿಯಾಗಿ ಲಕ್ಷಾಂತರ ರೂಪಾಯಿಗಳ ಅಹಾರ, ಬಟ್ಟೆ ಬರೆಗಳನ್ನು ನೀಡಿ ಮಾನವೀಯತೆ ಮೆರೆದಿದೆ” ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ…

Read More