Subscribe to Updates
Get the latest creative news from FooBar about art, design and business.
Author: roovari
ಸುರತ್ಕಲ್: ಅಗರಿ ಪ್ರಶಸ್ತಿ ಪ್ರದಾನ, ಅಗರಿ ರಘುರಾಮ ಸನ್ಮಾನ ಹಾಗೂ ಅಗರಿ ಸಂಸ್ಮರಣೆ ಕಾರ್ಯಕ್ರಮವು 28 ಜುಲೈ 2024ರ ಭಾನುವಾರದಂದು ಹೊಸಬೆಟ್ಟು ಇಲ್ಲಿನ ನವಗಿರಿ ಸಭಾ ಭವನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಅಗರಿ ಪ್ರಶಸ್ತಿಯನ್ನು ಅಭಿಜ್ಞ ಯಕ್ಷಗಾನ ಭಾಗವತ ಪುತ್ತಿಗೆ ರಘುರಾಮ ‘ಹೊಳ್ಳ ಅವರಿಗೆ ಹಾಗೂ ಅಗರಿ ರಘುರಾಮ ಸನ್ಮಾನ ಪುರಸ್ಕಾರವನ್ನು ಉಡುಪಿಯ ಕಲೆ ಮತ್ತು ಸಮಾಜ ಸೇವಾ ಸಂಸ್ಥೆಯಾದ ‘ಯಕ್ಷಗಾನ ಕಲಾರಂಗ’ಕ್ಕೆ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಆಶೀರ್ವಚನ ನೀಡಿದ ಹರಿನಾರಾಯಣದಾಸ ಆಸ್ರಣ್ಣ “ಯಕ್ಷಗಾನ ರಂಗಕ್ಕೆ ಅಗರಿ ಶ್ರೀನಿವಾಸ ಭಾಗವತರು ಹಾಗೂ ರಘುರಾಮ ಭಾಗವತರು ನೀಡಿದ ಸೇವೆ ಸ್ಮರಣೀಯ, ಶ್ರೀ ದೇವೀ ಮಹಾತ್ಮೆ ಸಾವಿರಾರು ಸೇವೆಯನ್ನು ಕಂಡಿದೆ. ಕವಿಯಾಗಿ ಹಾಗೂ ನಿರ್ದೇಶಕರಾಗಿ ಯಕ್ಷಗಾನವನ್ನು ಬೆಳೆಸಿದ ಗರಿ ಇವರ ಅಗರಿ ಶೈಲಿ ಇಂದಿಗೂ ಉಳಿಸಿ ಕೊಂಡಿರುವುದು ಅವರ ಪ್ರಸಿದ್ದಿಗೆ ಸಾಕ್ಷಿಯಾಗಿದೆ. ಅವರ ಸವಿನೆನಪಿನಲ್ಲಿ ಪ್ರಶಸ್ತಿ ನೀಡುತ್ತಾ ಬರುತ್ತಿರುವುದು ಪ್ರಶಂಸನೀಯ.” ಎಂದರು ಪ್ರಶಸ್ತಿ ಸ್ವೀಕರಿಸಿದ ಪುತ್ತಿಗೆ ರಘುರಾಮ ಹೊಳ್ಳ ಮಾತನಾಡಿ “ಅಗರಿ ಪ್ರಶಸ್ತಿಯನ್ನು ನಾನು…
ಮಂಗಳೂರು: ಸ್ವರಾಲಯ ಸಾಧನಾ ಫೌಂಡೇಶನ್ ಹಾಗೂ ಕಲಾ ಶಾಲೆಯ 83ನೇ ಸ್ವರಾಲಯ ಸಾಧನಾ ಮಾಸಿಕ ಶಿಬಿರವು 28 ಜುಲೈ 2024ರಂದು ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾತನಾಡಿ “ಸಂಗೀತಕ್ಕೆ ಯಾವುದೇ ಭಾಷೆ ಇಲ್ಲ. ಆದರೆ ಪ್ರತಿಯೊಬ್ಬರ ಮನಸ್ಸಿಗೂ ರಿಲ್ಯಾಕ್ಸ್ ನೀಡುವ ಅದ್ಭುತ ಶಕ್ತಿ ಸಂಗೀತಕ್ಕಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸಂಗೀತ ಕೇಳುವ ಅಭ್ಯಾಸ ಬೆಳೆಸಿಕೊಳ್ಳಿ. ಸಣ್ಣ ವಯಸ್ಸಿನಲ್ಲಿ ನನಗೆ ಸಂಗೀತ ಕಲಿಯುವ ಉತ್ಸಾಹ ಇದ್ದರೂ ಮುಂದೆ ಅದಕ್ಕೆ ಪೂರಕ ವಾತಾವರಣ ಇರಲಿಲ್ಲ. ಈಗ ಸಂಗೀತ ಕಲಿಯುವ ಅವಕಾಶ ಇದ್ದರೂ ಅದಕ್ಕೆ ಪೂರಕವಾಗಿ ನಮ್ಮ ವಯಸ್ಸು ಇಲ್ಲ. ಹಾಗಾಗಿ ಎಲ್ಲ ಪಾಲಕರು ಮಕ್ಕಳನ್ನು ಸಣ್ಣ ವಯಸ್ಸಿನಲ್ಲೇ ಸಂಗೀತ, ನೃತ್ಯ ಮುಂತಾದ ಕಲೆಗಳ ಅಧ್ಯಯನಕ್ಕೆ ಕಳುಹಿಸಬೇಕು. ಮಕ್ಕಳಿಗೆ ಸ್ವಲ್ಪ ಕಷ್ಟ ಎನಿಸಿದರೂ ಮುಂದಕ್ಕೆ ಇದು ನಿಮ್ಮ ಜೀವನಕ್ಕೆ ಭದ್ರ ಬುನಾದಿ ಹಾಕಿಕೊಡಲಿದೆ”. ಎಂದು ಹೇಳಿದರು. “ಮಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮಗಳ ಉತ್ತೇಜನಕ್ಕೆ ನಿಮ್ಮ…
ಉಡುಪಿ : ಹಿರಿಯ ಲೇಖಕಿ ಡಾ. ಮಹೇಶ್ವರಿ ಯು. ಕಾಸರಗೋಡು ಅವರನ್ನು ಆಯ್ಕೆ ಸಮಿತಿಯು 2024ನೇ ಸಾಲಿನ ‘ಕೇಶವ ಪ್ರಶಸ್ತಿ’ಗೆ ಆಯ್ಕೆ ಮಾಡಿರುವುದಾಗಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿರುತ್ತಾರೆ. ಈ ಪ್ರಶಸ್ತಿಯನ್ನು 31 ಆಗಸ್ಟ್ 2024ರಂದು ಬೆಳಿಗ್ಗೆ 10-30 ಗಂಟೆಗೆ ನೂತನ ರವೀಂದ್ರ ಮಂಟಪದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಇಪ್ಪತ್ತೈದು ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಡಾ. ಮಹೇಶ್ವರಿ ಯು. ಇವರು ಗಂಗಾಧರ ಭಟ್ ಮತ್ತು ಸರಸ್ವತಿ ಅಮ್ಮ ದಂಪತಿಗಳ ಸುಪುತ್ರಿ. ಕಾಸರಗೋಡು ತಾಲೂಕಿನ ಬೇಳ ಗ್ರಾಮದ ಉಳ್ಳೋಡಿ ಇವರ ಹುಟ್ಟೂರು. ಇವರು ಎಂ.ಎ. ಕನ್ನಡ, ಎಂ.ಎ. ಇಂಗ್ಲಿಷ್, ಪಿಎಚ್.ಡಿ ಪದವಿಯನ್ನು ಹೊಂದಿದ್ದು, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ 2014ರಲ್ಲಿ ನಿವೃತ್ತರಾದರು. ನಿವೃತ್ತಿಯ ನಂತರ ಕಣ್ಣೂರು ವಿ.ವಿ.ಯ ಭಾರತೀಯ ಭಾಷಾ ಅಧ್ಯಯನಾಂಗದಲ್ಲಿ ಸಂಯೋಜಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಎಂ.ಫಿಲ್., ಪಿಎಚ್.ಡಿ ಮಾರ್ಗದರ್ಶಕರಾಗಿ ಅನುಭವ ಹೊಂದಿರುವ ಇವರ…
ವಿದ್ಯಾಗಿರಿ : ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ‘ಶಿಕ್ಷಣದಲ್ಲಿ ನಾಟಕ ಮತ್ತು ಕಲೆ’ಯ ಕುರಿತು ಕಾರ್ಯಾಗಾರವನ್ನು 31 ಆಗಸ್ಟ್ 2024ರಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ರಾಮ್ ಸುಳ್ಯ ಇವರು “ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ…
ಬೆಂಗಳೂರು: ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಈ ಬಾರಿ ಶಿಷ್ಯ ವೇತನಕ್ಕೆ ಅಭ್ಯರ್ಥಿಗಳನ್ನು ಭಿನ್ನ ರೀತಿಯಲ್ಲಿ ಆಯ್ಕೆ ಮಾಡಲಿದೆ. ಸಂಗೀತ, ನೃತ್ಯ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆಯಾಗಬಾರದು ಎಂಬ ಉದ್ದೇಶದಿಂದ ಈ ಬಾರಿ ಶಿಷ್ಯ ವೇತನಕ್ಕೆ ಅಭ್ಯರ್ಥಿಗಳು ತಾವಿರುವ ಸ್ಥಳದಲ್ಲೇ ವೀಡಿಯೋ ಚಿತ್ರೀಕರಣ ಮಾಡಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ ತಿಳಿಸಿದ್ದಾರೆ. ಕಳೆದ 2 ವರ್ಷಗಳಿಂದ ಅನೇಕ ಕಾರಣಗಳಿಂದಾಗಿ ಶಿಷ್ಯವೇತನ ನೀಡಿರಲಿಲ್ಲ. ಈಗ ಎರಡೂ ವರ್ಷದ್ದು ಸೇರಿಸಿ 200 ಮಂದಿಗೆ ತಲಾ 10 ಸಾವಿರ ರೂಪಾಯಿ ನೀಡಲಾಗುತ್ತಿದೆ. ಈ ಹಿಂದೆ 16 ರಿಂದ 24ರ ವಯೋಮಿತಿಯವರನ್ನು ಸಂದರ್ಶನ ಮಾಡಿ ಶಿಷ್ಯ ವೇತನಕ್ಕೆ ಆಯ್ಕೆ ಮಾಡಲಾಗುತ್ತಿತ್ತು. ಆದರೆ ದೂರದೂರುಗಳಿಂದ ಬರುವವರಿಗೆ ಬಸ್ ಪ್ರಯಾಣ, ತಂಗುವ ವ್ಯವಸ್ಥೆ ಸೇರಿದಂತೆ ಹಲವು ರೀತಿಯ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಕಾಡೆಮಿ ಈ ನಿರ್ಧಾರಕ್ಕೆ ಬಂದಿದೆ. ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ವಿಡಿಯೋ ಚಿತ್ರೀಕರಿಸಿ ಕಳುಹಿಸಿ ಕೊಟ್ಟ…
“ಇ ತಿ ಹ ಯ” ಎಂಬ ನಾಟಕದ ಎರಡು ಪ್ರದರ್ಶನಗಳನ್ನು 28 ಅಕ್ಟೋಬರ್ 2024 ಸರಳಾಂಗಣದಲ್ಲಿ ಏರ್ಪಡಿಸಿದ್ದರು. ಈ ನಾಟಕವನ್ನು ವಿಜಯನಗರ ಬಿಂಬ ರಂಗ ಶಿಕ್ಷಣ ಕೇಂದ್ರದ ಈ ಸಾಲಿನ ವಿದ್ಯಾರ್ಥಿಗಳು ತಮ್ಮ ಅಭ್ಯಾಸ ಮಾಲಿಕೆ ಅಡಿಯಲ್ಲಿ ನಾಟಕ ಪ್ರದರ್ಶಿಸಿದರು. ವಿಶೇಷವೆಂದರೆ ಕೆಲವು ವಿದ್ಯಾರ್ಥಿಗಳು ನಾಟಕದ ಪ್ರದರ್ಶನದಲ್ಲಿ ಭಾಗವಹಿಸಿದ್ದು ಮಿಕ್ಕ ವಿದ್ಯಾರ್ಥಿಗಳು ನೇಪಥ್ಯದಲ್ಲಿ ಕೆಲಸ ಮಾಡಿದರು. “ಐತಿಹ್ಯ ಮಾಲೆಯ ಕಥೆಗಳು” …ಇದು ಕೊಟ್ಟಾರತ್ತಿಲ್ ಶಂಕುಣ್ಣಿ ಬರೆದ ಮಲಯಾಳಂ ಕಥೆಗಳು. ಶ್ರೀ ಡಿ.ಆರ್. ನಾಗರಾಜ್ ನೆನಪಿನ ಅಕ್ಷರ ಚಿಂತನ ಎಂಬ ಅಡಿಯಲ್ಲಿ ಶ್ರೀ ಬಿ.ಆರ್. ವೆಂಕಟ್ರಮಣ ಐತಾಳ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಥಾ ಮಾಲಿಕೆಯಿಂದ ಆಯ್ದ ನಾಲ್ಕು ಕಥೆಗಳನ್ನು ಹೆಣೆದು ಕಥಾನಕ ರೂಪದಲ್ಲಿ ರಂಗದ ಮೇಲೆ ಪ್ರದರ್ಶಿಸಲಾಯಿತು. ಈ ಕಥೆಗಳಲ್ಲಿ ಕಾರಣಿಕ ಪುರುಷರು ಹೇಗೆ ಸಮಾಜದ ಹಿತ ಕಾಪಾಡಲು ಕಾರಣೀಭೂತರಾಗಿದ್ದರು ಎಂಬ ವಿಷಯವನ್ನು ಕಥೆಗಳ ಮೂಲಕ ಕಥೆಗಾರರು ಆ ಕಾಲಕ್ಕೆ ಅನುಗುಣವಾಗಿ ನಿರೂಪಿಸಿದ್ದಾರೆ. ಈ ಕಥೆಗಳಲ್ಲಿ ಬರುವ ಕಾರಣಿಕರು ವಿವಿಧ ಜಾತಿಯವರಾಗಿದ್ದರೂ, ಸಮಾಜದ…
ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಂಸ್ಥೆಯ ‘ಸಿನ್ಸ್ 1999 ಶ್ವೇತಯಾನ-48’ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಸಹಯೋಗದೊಂದಿಗೆ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ ಕಾರ್ಯಕ್ರಮವು 04 ಆಗಸ್ಟ್ 2024 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ‘ಸಿನ್ಸ್ 1999 ಶ್ವೇತಯಾನ’ದ ಉಪ ಕಾರ್ಯಾಧ್ಯಕ್ಷ ಕೊಮೆ ಗೋಪಾಲ ಪೂಜಾರಿ ಮಾತನಾಡಿ “ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಗತ್ತಿಗೆ ಬಹು ದೊಡ್ಡ ಕೊಡುಗೆ ಇತ್ತ ಬಿ. ಎಮ್. ರಾಮಕೃಷ್ಣ ಹತ್ವಾರ್ರ ಕಾಯ ಅಳಿದು ಕೀರ್ತಿ ಉಳಿದಿದೆ. ಅದೆಷ್ಟೋ ಶಾಲಾ ಕಾಲೇಜುಗಳ ಕೊಠಡಿಗಳು ಹತ್ವಾರರ ಹೆಸರಿನಲ್ಲಿ ಉಳಿದಿವೆ. ಸಾಂಸ್ಕೃತಿಕವಾಗಿ ತೆಕ್ಕಟ್ಟೆಯ ಬೆಟ್ಟಿನ ಮನೆಯಲ್ಲಿ ವರ್ಷಂಪ್ರತೀ ಪ್ರಸಿದ್ಧ ಕಲಾವಿದರನ್ನು ಜಮಾಯಿಸಿ, ಅದ್ದೂರಿಯ ತಾಳಮದ್ದಳೆ ಏರ್ಪಡುವಂತೆ ಮಾಡಿದ ಕಲಾ ಪ್ರೇಮಿಗಳು ಹತ್ವಾರರು. ಗತ ಕಾಲದಲ್ಲಿ ತೆಕ್ಕಟ್ಟೆಯಲ್ಲಿ ತಾಳಮದ್ದಳೆಯ ಸಂಘಟಕರಾಗಿ ಹೆಸರಾದ ಹತ್ವಾರರು ಜೀವಿತ ಕಾಲದಲ್ಲಿ ತೆಂಕು ಬಡಗಿನ ಅನೇಕ ಯಕ್ಷಗಾನವನ್ನು ಆ ಕಾಲದಲ್ಲಿ ಏರ್ಪಡಿಸಿ ಜನಾನುರಾಗಿಯಾಗಿದ್ದರು. ಇಂತಹ ಹತ್ವಾರರು ಸಮಾಜದ ಎಲ್ಲಾ ವಿಭಾಗದಲ್ಲೂ ತಮ್ಮ ಕೊಡುಗೆಯನ್ನಿತ್ತು…
ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಂಗಳೂರು ಘಟಕ ವತಿಯಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಯಾವುದೇ ಮಾನ್ಯತೆ ಪಡೆದ ಪ್ರೌಢಶಾಲೆ/ ಕಾಲೇಜ್/ವಿ.ವಿ.ಗಳ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು 11 ಆಗಸ್ಟ್ 2024ರಂದು ಶಾರದಾ ವಿದ್ಯಾಲಯ ಕೊಡಿಯಾಲಬೈಲು ಇಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು 8 ಆಗಸ್ಟ್ 2024 ಕೊನೆಯ ದಿನವಾಗಿದೆ. ‘ಶೈಕ್ಷಣಿಕ ಕ್ರಾಂತಿ ಹಾಗೂ ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ದೃಷ್ಟಿಕೋನ’ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಹಾಗೂ ‘ನಮ್ಮ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳ ಪ್ರಾಮುಖ್ಯ’ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪ್ರಬಂಧ ಸ್ಪರ್ಧೆಯು ಪ್ರೌಢಶಾಲಾ ವಿಭಾಗ 8, 9, 10 ತರಗತಿ ಹಾಗೂ ಕಾಲೇಜ್ ವಿಭಾಗ ಪಿ. ಯು. ಸಿ. ಹಾಗೂ ಪದವಿ.ವಿಭಾಗಗಳಲ್ಲಿ ನಡೆಯಲಿದ್ದು, ಭಾಷಣ ಸ್ಪರ್ಧೆಯು ಪ್ರೌಢಶಾಲೆ, ಕಾಲೇಜ್ ಮತ್ತು ಮುಕ್ತ ವಿಭಾಗ (18 ಮೇಲ್ಪಟ್ಟಯಾವುದೇ ವ್ಯಕ್ತಿಗಳು)ಗಳಲ್ಲಿ ನಡೆಯಲಿದೆ. ಮುಕ್ತ ವಿಭಾಗಕ್ಕೆ ಭಾಷಣದ 5…
ಮಂಗಳೂರು: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 26 ಆಗಸ್ಟ್ 2024 ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನವಾಗಿದೆ. 2023ನೇ ಸಾಲಿನ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯಾಧರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಈ ಮೇಲ್ಕಾಣಿ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯ ಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು. ವಿಳಾಸ – ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ,…
ನವದೆಹಲಿ : ಭರತನಾಟ್ಯ ಮತ್ತು ಕೂಚುಪುಡಿಯ ಹೆಸರಾಂತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಅವರು 03 ಆಗಸ್ಟ್ 2024ರ ಶನಿವಾರದಂದು ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಏಳು ತಿಂಗಳಿಂದ ತೀವ್ರ ನಿಗಾ ಘಟಕದಲ್ಲಿ (ಐ. ಸಿ. ಯು.) ಚಿಕಿತ್ಸೆ ಪಡೆಯುತ್ತಿದ್ದರು. ಯಾಮಿನಿ ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಸಂಸ್ಕೃತ ವಿದ್ವಾಂಸ ಎಂ. ಕೃಷ್ಣಮೂರ್ತಿ ಇವರ ಮಗಳಾದ ಯಾಮಿನಿ ಕೃಷ್ಣಮೂರ್ತಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ 1940ರ ಡಿಸೆಂಬರ್ 20ರಂದು ಜನಿಸಿದರು. ತನ್ನ ಐದನೇ ವಯಸ್ಸಿನಿಂದಲೇ ಭರತನಾಟ್ಯ ಕಲಿಕೆಯನ್ನು ಪ್ರಾರಂಬಿಸಿದ ಇವರಿಗೆ ‘ಪದ್ಮಶ್ರೀ’, ‘ಪದ್ಮಭೂಷಣ’, ’ಪದ್ಮ ವಿಭೂಷಣ’, ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ಗಳು ಸಂದಿವೆ.