Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಯಕ್ಷ ಸಂಜೀವಿನಿ ಟ್ರಸ್ಟ್ (ರಿ.) ಜಾಲಹಳ್ಳಿ ಬೆಂಗಳೂರು ಇವರಿಂದ ಪೌರಾಣಿಕ ಯಕ್ಷಗಾನ ಕಥಾ ಪ್ರಸಂಗ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನವನ್ನು ದಿನಾಂಕ 17 ಮೇ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರು ಆರ್.ಟಿ. ನಗರದ ಶ್ರೀ ವಿನಾಯಕ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಮ್ಮೇಳದಲ್ಲಿ ಭಾಗವತರು – ಶ್ರೀ ಸುಬ್ರಾಯ ಹೆಬ್ಬಾರ್, ಮದ್ದಳೆ – ಶ್ರೀ ಸಂಪತ್ ಆಚಾರ್ಯ, ಚೆಂಡೆ – ಶ್ರೀ ಮನೋಜ್ ಆಚಾರ್ಯ ಹಾಗೂ ಮುಮ್ಮೇಳದಲ್ಲಿ ಬಾಲ ಗೋಪಾಲ – ಗಾನವಿ ಡಿ., ಬಾಲ ಗೋಪಾಲ/ಕುಬೇರ – ಐಸಿರಿ ಯು., ಸುದರ್ಶನ – ಪ್ರಶ್ಚಿಲ್ ಪಿ., ವಿಷ್ಣು – ಬಿ.ಕೆ. ವಿನುತಾ, ಲಕ್ಷ್ಮೀ – ಅನನ್ಯ ಕಿಣಿ, ದೇವೇಂದ್ರ – ವಿದ್ಯಾ ನಾಯ್ಕ್, ಅಗ್ನಿ – ದಿವ್ಯಾ ಎಂ.ಎನ್., ವರುಣ – ದಿಪ್ತಿ ಎಂ.ಎನ್., ಶತ್ರುಪ್ರಸೂದನನ ಮಂತ್ರಿ – ಶಶಿಕಲಾ ದಯಾನಂದ್, ಕುಶ – ಅಮೃತ್ ಎಂ. ಆಚಾಯ, ಲವ – ಕೌಸ್ತುಭ್ ಜಿ.…
ಕಟೀಲು : ತುಳು ವರ್ಲ್ಡ್ ಫೌಂಡೇಷನ್ ಇದರ ವತಿಯಿಂದ ತುಳುವೆರೆ ಆಯನೊ ಕೂಟ ಕುಡ್ಲ ಮತ್ತು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪದವಿ ಕಾಲೇಜು ಕಟೀಲು ಇವರ ಸಹಯೋಗದಲ್ಲಿ ದಿನಾಂಕ 24 ಮೇ 2025ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಡಿಗ್ರಿ ಕಾಲೇಜಿನಲ್ಲಿ ಬೆಳಗ್ಗೆ 10-00 ಗಂಟೆಯಿಂದ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ ನಡೆಯಲಿದೆ. ಜಗತ್ತಿನ ಅತ್ಯಂತ ಪ್ರಾಚೀನ ಯುದ್ಧಕಲೆ ಎಂದು ಖ್ಯಾತಿ ಪಡೆದ ‘ಕಳರಿ’ ಪೈಟ್ ತುಳುನಾಡಿನಿಂದಲೇ ಉದ್ಭವವಾಗಿದೆ ಎಂಬುದು ಹೆಮ್ಮೆಯ ವಿಷಯ. ಹಿಂದೆ ದಕ್ಷಿಣ ಕನ್ನಡ, ಕಣ್ಣೂರು, ವಯನಾಡು ಮತ್ತು ಕೊಝೀಕೋಡ್ ಭಾಗಗಳನ್ನೊಳಗೊಂಡ ಭಾಗವನ್ನು ತುಳುನಾಡು ಎಂದು ಕರೆಯಲಾಗುತ್ತಿತ್ತು. ಈ ಪ್ರದೇಶವು ಯುದ್ಧಕಲೆ ಅಭ್ಯಾಸದ ಪ್ರಬಲ ಕೇಂದ್ರವಾಗಿತ್ತು. ಕೇರಳದಲ್ಲೂ ಇದನ್ನು ‘ತುಳುನಾಡನ್ ಕಳರಿ’ ಎಂದೇ ಕರೆಯುತ್ತಾರೆ. ಪುರಾವೆಗಳ ಪ್ರಕಾರ, ಹಲವಾರು ರಾಜರು ಹಾಗೂ ಸೇನಾ ನಾಯಕರು ತುಳುನಾಡಿಗೆ ಬಂದು ಕಲರಿ ಪೈಟ್ ಕಲಿತಿದ್ದರು. ಕೋಟಿ ಚೆನ್ನಯರು ಗರಡಿಗಳ ಮೂಲಕ ಈ ಕಲೆಯ ಉಳಿವಿಗೆ ಶ್ರಮಿಸಿದರು. ಅವರ…
ಮಂಗಳೂರು : ಕೊಂಕಣಿ ರಂಗಭೂಮಿಗೆ ಮಹತ್ತರ ಕೊಡುಗೆ ನೀಡಿ, ಹೊಸ ಎತ್ತರಕ್ಕೊಯ್ದ ಮಾಂಡ್ ಸೊಭಾಣ್ ಪ್ರವರ್ತಿತ ಕಲಾಕುಲ್ ನಾಟಕ ರೆಪರ್ಟರಿಗೆ, ನಾಟಕ ಕಲಿಯುವ ಆಸಕ್ತಿ ಇರುವ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ. 15ರಿಂದ 35 ವರ್ಷದೊಳಗಿನ 20 ಜನರಿಗೆ ಅವಕಾಶವಿದ್ದು ಒಂದು ವರ್ಷದ ಸಮಗ್ರ ರಂಗಭೂಮಿ ತರಬೇತಿಯೊಡನೆ ಡಿಪ್ಲೋಮಾ ಪದವಿ ನೀಡಲಾಗುವುದು. ಮಾಸಿಕ ರೂ.2,500/ ಕಲಿಕಾ ಭತ್ತೆ (stipend) ಹಾಗೂ ಪ್ರದರ್ಶನಗಳಿಗೆ ಹೆಚ್ಚುವರಿ ಭತ್ತೆ ನೀಡಲಾಗುವುದು. ದೇಶ ವಿದೇಶಗಳಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶವಿದ್ದು, ಸಿನೆಮಾ ಕ್ಷೇತ್ರದ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಲಾಗುವುದು. ಈ ತರಬೇತಿಯು 01 ಜುಲಾಯಿ 2025ರಿಂದ ಆರಂಭಗೊಂಡು 30 ಜೂನ್ 2026ರವರೆಗೆ, ಸೋಮವಾರದಿಂದ ಶುಕ್ರವಾರ ಪ್ರತಿದಿನ ಸಂಜೆ 6-00ರಿಂದ 8-30 ಗಂಟೆ ತನಕ ನಡೆಯಲಿದೆ. ಕಲಾಕುಲ್ 2008ರಲ್ಲಿ ಸ್ಥಾಪನೆಗೊಂಡಿದ್ದು, ಇದುವರೆಗೆ 14 ತಂಡಗಳಲ್ಲಿ 100ಕ್ಕೂ ಮಿಕ್ಕಿ ಕಲಾವಿದರಿಗೆ ರಂಗ ತರಬೇತಿ ನೀಡಲಾಗಿದೆ. ಆಧುನಿಕ ರಂಗಭೂಮಿಗೆ 60 ನಾಟಕಗಳನ್ನು ನೀಡಿದ್ದು, ಭಾರತ ಮತ್ತು ಗಲ್ಫ್ ದೇಶಗಳಲ್ಲಿ 250ಕ್ಕೂ ಮಿಕ್ಕಿ ಪ್ರದರ್ಶನಗಳು ನಡೆದಿವೆ.…
ಹಾಸನ : ಹಾಸನದ ಮಾಣಿಕ್ಯ ಪ್ರಕಾಶನ (ರಿ.) ಸಂಸ್ಥೆಯು 2015ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ 80ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ ಮಾಡಿ ಕನ್ನಡ ಸಾರಸ್ವತ ಲೋಕಕ್ಕೆ ನೀಡುವುದರ ಜೊತೆಗೆ ದಾನಿಗಳ ಸಹಕಾರದಲ್ಲಿ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸುತ್ತಿದೆ. ಈ ನಿಟ್ಟಿನಲ್ಲಿ 2025ರ ದತ್ತಿ ಪುರಸ್ಕಾರಗಳಿಗೆ 2024ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಕೃತಿಗಳನ್ನು ಈ ಕೆಳಕಂಡ ದತ್ತಿ ಪ್ರಶಸ್ತಿಗಳಿಗೆ ಆಹ್ವಾನಿಸಲಾಗಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ. ಆಸಕ್ತ ಲೇಖಕರು ಸಂಬಂಧಪಟ್ಟ ದತ್ತಿಗಳಿಗೆ ನಿಗದಿತ ಪ್ರಕಾರದ ಮೂರು ಕೃತಿಗಳನ್ನು ಹಾಗೂ ಸ್ವವಿವರಗಳೊಂದಿಗೆ ದಿನಾಂಕ 05 ಜೂನ್ 2025ರೊಳಗೆ ಪ್ರಕಾಶಕರು, ಮಾಣಿಕ್ಯ ಪ್ರಕಾಶನ, #40, ಸಾಹಿತ್ಯ ಸೌಧ, ಮುಖ್ಯರಸ್ತೆ, ಕೆಂಪೇಗೌಡ ಲೇಔಟ್, ಹಾಸನಾಂಬ ನಗರ ಎದುರು, ಸಾಲಗಾಮೆ ರಸ್ತೆ, ಹಾಸನ – 573219, ಮೊ-9739878197 ತಲುಪುವಂತೆ ಕಳುಹಿಸಿಕೊಡಲು ತಿಳಿಸಿದೆ.…
ಮೂಡಬಿದ್ರಿ : ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ‘ಸಿರಿಪರ್ಬ – 2025’ ತುಳು ಸಾಂಸ್ಕೃತಿಕ ಉತ್ಸವವು ದಿನಾಂಕ 06 ಮೇ 2025ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ “ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ, ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ” ಎಂದು ಹೇಳಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಿರಿಪರ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ‘ತುಳು ಸಾಂಸ್ಕೃತಿಕ ವೈಭವ’ ಅಂತರ್ಕಾಲೇಜು ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಿದ ಕರ್ನಾಟಕ…
ಬೆಂಗಳೂರು : ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ಬೆಂಗಳೂರು ರಂಗವೈಭವ 2025 ಪ್ರಯುಕ್ತ ನಡೆಯುವ ‘ಕರುನಾಡ ಕಾಯಕ ಯೋಗಿ ಸದ್ಭಾವನ ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 09 ಮೇ 2025ರಂದು ನಗರಬಾವಿ ಮಲ್ಲತಳ್ಳಿ ಕಲಾಗ್ರಾಮ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಲಿದೆ. ಗೀತ ರಚನೆಗಾರರು ಹಾಗೂ ಸಂಗೀತ ಸಂಯೋಜಕರು, ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್ ಪ್ರಶಸ್ತಿ ಪ್ರಧಾನ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹದಳ ಹಾಗೂ ವಿಶ್ವಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಪ್ರವೀಣ್ ಹಿರೇಮಠ ಇವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ಮಂಜುನಾಥ್ ಮಟ್ಟು ಹೆಸರಾಂತ ಚಲನಚಿತ್ರ ತಾರೆ ಡಾ. ಭವ್ಯ ಇವರುಗಳು ಭಾಗವಹಿಸುವರು.
ಶಿವಮೊಗ್ಗ : ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ (ಸಂಸ್ಕೃತಿ ಸಚಿವಾಲಯ ಭಾರತ ಸರಕಾರ) ಮತ್ತು ಸೌರಭ ಸಾಂಸ್ಕೃತಿಕ ಸಂಸ್ಥೆ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ‘ಯುವ ಸಾಹಿತಿ’ ಕಾರ್ಯಕ್ರಮವನ್ನು ಶಿವಮೊಗ್ಗದ ಮಥುರಾ ಪ್ಯಾರಾ ಡೈಸ್ ಹೋಟೆಲಿನ ಸಭಾಂಗಣದಲ್ಲಿ ದಿನಾಂಕ 10 ಮೇ 2025, ಶನಿವಾರ ಸಂಜೆ ಗಂಟೆ 5-30ಕ್ಕೆ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚನ್ನಪ್ಪ ಅಂಗಡಿ ಇವರು ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಹಿರಿಯ ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಅಧ್ಯಕ್ಷತೆ ವಹಿಸಲಿರುವರು. ಯುವ ಸಾಹಿತಿಗಳಾದ ಶಂಕರ್ ಸಿಹಿಮೊಗ್ಗೆ, ಸೂರ್ಯಕೀರ್ತಿ ಮತ್ತು ಸಂಘಮಿತ್ರೆ ನಾಗರಘಟ್ಟ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರವೇಶ ಉಚಿತವಾಗಿದ್ದು, ಎಲ್ಲಾ ಸಾಹಿತ್ಯ ಆಸಕ್ತರು ಭಾಗವಹಿಸಬಹುದು.
ಕಾಸರಗೋಡು : ವೀಣಾವಾದಿನಿ ಪ್ರಸ್ತುತ ಪಡಿಸುವ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರವನ್ನು ದಿನಾಂಕ 09ರಿಂದ 11 ಮೇ 2025ರವರೆಗೆ ಪ್ರತಿದಿನ 9-30ರಿಂದ 4-00 ಗಂಟೆಗೆ ತನಕ ಬಳ್ಳಪದವು ನಾರಾಯಣೀಯಂ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ. ಯೋಗೀಶ ಶರ್ಮ ಬಳ್ಳಪದವು ಇವರಿಂದ ಕರ್ನಾಟಕ ಹಾಡುಗಾರಿಕೆ, ಚೇರ್ತಲ ಜಿ. ಕೃಷ್ಣಕುಮಾರ್ ಮತ್ತು ಕಲ್ಲೇಕುಲಂಗರ ಉಣ್ಣಿಕೃಷ್ಣನ್ ಇವರಿಂದ ಮೃದಂಗಂ, ಕುಮಾರಿ ರೆತ್ನಾಶ್ರೀ ಅಯ್ಯರ್ ಇವರಿಂದ ತಬಲಾ ಮತ್ತು ತಿರುವಿಜ್ ವಿಜು ಎಸ್. ಆನಂದ್, ಪ್ರಭಾಕರ ಕುಂಜಾರು ಮತ್ತು ಕುಮಾರಿ ಧನಶ್ರೀ ಶಬರಾಯ ಇವರಿಂದ ಕರ್ಣಾಟಿಕ್ ವಯೋಲಿನ್ ಬಗ್ಗೆ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.
ಕುಂದಾಪುರ : ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಕುಂದಾಪ್ರ ಕನ್ನಡ ಪರಿಷತ್ತು ಉಡುಪಿ ಜಿಲ್ಲೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾಂಬ 2025’ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನವು ದಿನಾಂಕ 04 ಮೇ 2025ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ “ಕುಂದಾಪ್ರ ಕನ್ನಡದ ನಿಜವಾದ ಸೊಗಡು ಕಾಣ ಸಿಗುವುದು ಗ್ರಾಮಾಂತರ ಭಾಗದಲ್ಲಿ, ಗ್ರಾಮೀಣ ಭಾಗದ ನಟ್ಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ. ಅವೆಲ್ಲದರ ದಾಖಲೀಕರಣ ಅಗತ್ಯ. ಭಾಷಿ ಬೆಳ್ಸಕರೆ ಮೊದಲ್ ಮಕ್ಕಳಿಗ್…
ಬೆಂಗಳೂರು : ಕನ್ನಡ ನಾಡಿನ ಹಿರಿಯ ಸಾಹಿತಿ, ವಿಮರ್ಶಕರು, ಕವಿ ಚಿಂತಕರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿದ್ದ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ಇವರು ವಯೋಸಹಜ ಅನಾರೋಗ್ಯದಿಂದಾಗಿ ದಿನಾಂಕ 06 ಏಪ್ರಿಲ್ 2025ರಂದು ರಾತ್ರಿ ನಿಧನರಾಗಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ 1931ರಲ್ಲಿ ಜನಿಸಿದ ಸಿದ್ದಲಿಂಗಯ್ಯರವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದರು. ಇದೇ ವಿಶ್ವವಿದ್ಯಾಲಯದಿಂದ 1961ರಲ್ಲಿ ಸ್ನಾತಕೋತ್ತರ ಪದವೀಧರರಾಗಿ ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಉದ್ಯೋಗ ಆರಂಭಿಸಿದ್ದರು. ಮುಂದೆ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಸಾಂಸ್ಕೃತಿಕ ಜಗತ್ತಿಗೆ ಕವಿ ಜಿ.ಎಸ್. ಸಿದ್ದಲಿಂಗಯ್ಯರ ಕೊಡುಗೆ ಗಮನಾರ್ಹವಾದದ್ದು. 1989ರಿಂದ 1992ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಅಧ್ಯಕ್ಷರಾಗಿ ಅವರು ಕೈಗೊಂಡ ಕೆಲಸಗಳು ಕನ್ನಡ ಸಾಹಿತ್ಯ ಪರಿಷತ್ತನ್ನು ಸದೃಢವಾಗಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದವು. ಸಾಹಿತ್ಯ ಪರಿಷತ್ತಿಗೆ ಒಂದು ನಿರ್ದಿಷ್ಟ ಧ್ವಜವನ್ನು ರೂಪಿಸುವಲ್ಲಿ ಅವರ ಪಾತ್ರ ಮಹತ್ವದ್ದು.…